Tag: ಚೇತನ್ ಸಿಂಗ್ ಜೌರಮಜ್ರಾ

  • ಆರೋಗ್ಯ ಸಚಿವರಿಂದ ಛೀಮಾರಿ – ಪಂಜಾಬ್ ಮಾಜಿ ಸಿಎಂ ಅತ್ತಿಗೆ ರಾಜೀನಾಮೆ

    ಆರೋಗ್ಯ ಸಚಿವರಿಂದ ಛೀಮಾರಿ – ಪಂಜಾಬ್ ಮಾಜಿ ಸಿಎಂ ಅತ್ತಿಗೆ ರಾಜೀನಾಮೆ

    ಚಂಡೀಗಢ: ಪಂಜಾಬ್‍ನ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ಇತ್ತೀಚೆಗೆ ರಾಜ್ಯದ ಹಿರಿಯ ಆರೋಗ್ಯ ಅಧಿಕಾರಿಯನ್ನು ಕ್ಯಾಮೆರಾ ಎದುರೇ ಸಾರ್ವಜನಿಕವಾಗಿ ಅವಮಾನಿಸಿದ್ದಾರೆ ಎಂದು ಟೀಕಿಸಿದ ಬೆನ್ನಲ್ಲೆ ಮತ್ತೊಂದು ಅಹಿತಕರ ಘಟನೆ ನಡೆದಿದೆ.

    ಬಾಬಾ ಫರೀದ್ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ರಾಜ್ ಬಹದ್ದೂರ್ ಅವರು ಜೌರಾಮಜ್ರಾ ಅವರಿಂದ ಅವಮಾನಕ್ಕೊಳಗಾಗಿ ರಾಜೀನಾಮೆ ನೀಡಿದ ಕೆಲವು ದಿನಗಳ ನಂತರ, ರಾಜ್ಯದ ಮಾಜಿ ಸಿಎಂ ಚರಂಜಿತ್ ಸಿಂಗ್ ಚನ್ನಿ ಅವರ ಸೊಸೆ ಡಾ.ಮಣಿಂದರ್ ಕೌರ್ ಅವರು ಸಹ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎಂಬ ಸುದ್ದಿ ಬಂದಿದೆ. ಇದನ್ನೂ ಓದಿ:  ಕೊಯಿನಾಡು ಬಳಿ ರಸ್ತೆಯಲ್ಲಿ ಬಿರುಕು : ಮಡಿಕೇರಿ – ಮಂಗಳೂರು ಸಂಪರ್ಕ ಕಡಿತ ಸಾಧ್ಯತೆ 

    ಅಸಲಿ ಕಾರಣವೇನು?
    ಕೌರ್ ಅವರು ಚನ್ನಿ ಅವರ ಸಹೋದರ ಡಾ.ಮನೋಹರ್ ಸಿಂಗ್ ಅವರ ಪತ್ನಿಯಾಗಿದ್ದಾರೆ. ಅವರು ಇತ್ತೀಚಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಸ್ಸಿ ಪಠಾನಾದಿಂದ ಸ್ವತಂತ್ರವಾಗಿ ಸ್ಪರ್ಧಿಸಿ ವಿಫಲರಾಗಿದ್ದರು. ಜೌರಮಜ್ರಾ ಅವರು ಆಸ್ಪತ್ರೆ ಭೇಟಿ ನೀಡಿದ ನಂತರ ವರ್ಗಾವಣೆ ಪಟ್ಟಿ ಹೊರಬಿದ್ದಿದೆ. ಈ ಪಟ್ಟಿಯಲ್ಲಿ ಕೌರ್ ಅವರ ಹೆಸರು ಇರುವುದೇ ಅವರು ಕೆಲಸ ತೊರೆಯಲು ಕಾರಣ ಎಂದು ಮೂಲಗಳು ಹೇಳುತ್ತಿವೆ. ಇದನ್ನೂ ಓದಿ: ಗಲೀಜಾದ ಹಾಸಿಗೆಯಲ್ಲಿ ಮಲಗಲು ಹೇಳಿದ ಸಚಿವ – ಅವಮಾನದಿಂದ ರಾಜೀನಾಮೆ ಕೊಟ್ಟ ಉಪಕುಲಪತಿ

    ಕೌರ್ ವಿರುದ್ಧ ವಾಗ್ದಾಳಿ
    ಕೌರ್ ಹಿರಿಯ ವೈದ್ಯಕೀಯ ಅಧಿಕಾರಿಯಾಗಿ ನೇಮಕಗೊಂಡಿದ್ದ ಖರಾರ್ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಜೌರಮಜ್ರಾ ಅವರು ಕಾರ್ಯನಿರ್ವಹಿಸದ ಫ್ಯಾನ್ ಮತ್ತು ಆಸ್ಪತ್ರೆಯಲ್ಲಿ ಶುಚಿತ್ವದ ಕೊರತೆಗಾಗಿ ಕೌರ್ ವಿರುದ್ಧ ಸಾರ್ವಜನಿಕವಾಗಿಯೇ ವಾಗ್ದಾಳಿ ನಡೆಸಿದ್ದಾರೆ. ಈ ಹಿನ್ನೆಲೆ ಕೌರ್ ಅವರು ರಾಜೀನಾಮೆಯನ್ನು ನೀಡಲು ನಿರ್ಧರಿಸಿದ್ದಾರೆ. ಇದನ್ನೂ ಓದಿ:  ಮಿಡ್-ಡೇ ಮೀಲ್ ಯೋಜನೆಯಿಂದ 11 ಕೋಟಿ ರೂ. ವಸೂಲಿ – ಪ್ರಾಂಶುಪಾಲರ ವಿರುದ್ಧ ಆರೋಪ 

    Bhagwant Mann

    ಡಾ.ರಾಜ್ ಬಹದ್ದೂರ್ ಅವರ ಬಳಿ ಪಂಜಾಬ್ ಸಿಎಂ ಭಗವಂತ್ ಮಾನ್ ಕ್ಷಮೆಯಾಚಿಸಿ ಮತ್ತೆ ಅಧಿಕಾರ ಸ್ವೀಕರಿಸಲು ತಿಳಿಸಿದ್ದಾರೆ. ಆದರೆ ಅವರು ನಿರಾಕರಿಸಿದ್ದರು. ಮಾನ್ ಬಹದ್ದೂರ್ ಅವರಲ್ಲಿ ಕ್ಷಮೆಯಾಚಿಸಿದರೂ ಸಹ, ಆಮ್ ಆದ್ಮಿ ಪಕ್ಷದ ವಕ್ತಾರರು ಆರೋಗ್ಯ ಸಚಿವರನ್ನು ಅವರ ‘ಸಾಮಾನ್ಯ ತಪಾಸಣೆ’ಗೆ ಬೆಂಬಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗಲೀಜಾದ ಹಾಸಿಗೆಯಲ್ಲಿ ಮಲಗಲು ಹೇಳಿದ ಸಚಿವ – ಅವಮಾನದಿಂದ ರಾಜೀನಾಮೆ ಕೊಟ್ಟ ಉಪಕುಲಪತಿ

    ಗಲೀಜಾದ ಹಾಸಿಗೆಯಲ್ಲಿ ಮಲಗಲು ಹೇಳಿದ ಸಚಿವ – ಅವಮಾನದಿಂದ ರಾಜೀನಾಮೆ ಕೊಟ್ಟ ಉಪಕುಲಪತಿ

    ಚಂಡೀಗಢ: ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ಹಾಗೂ ಪ್ರಸಿದ್ಧ ಆರೋಗ್ಯ ತಜ್ಞರೂ ಆಗಿರುವ ಡಾ.ರಾಜ್ ಬಹದ್ದೂರ್ ಅವರನ್ನು ಪಂಜಾಬ್‌ ಆರೋಗ್ಯ ಸಚಿವ ಚೇತನ್ ಸಿಂಗ್ ಜೌರಮಜ್ರಾ ಅವರು ಗಲೀಜಾದ ಹಾಸಿಗೆ ಮೇಲೆ ಮಲಗುವಂತೆ ಸೂಚಿಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆ ಸಾರ್ವಜನಿಕವಾಗಿ ನನಗೆ ಅವಮಾನವಾಗಿದೆ ಎಂದು ರಾಜ್ ಬಹದ್ದೂರ್ ರಾಜೀನಾಮೆ ನೀಡಿದ್ದಾರೆ.

    ವೈದ್ಯಕೀಯ ಕಾಲೇಜಿನ ಆಸ್ಪತ್ರೆಯ ವಾರ್ಡ್‍ಗಳಲ್ಲಿ ಶುಚಿತ್ವದ ಬಗ್ಗೆ ದೂರುಗಳು ಬಂದ ನಂತರ, ಚೇತನ್ ಸಿಂಗ್ ಜೌರಮಜ್ರಾ ಅವರು ಮಾಧ್ಯಮಗಳು ಮತ್ತು ಕ್ಯಾಮೆರಾಮೆನ್‍ಗಳೊಂದಿಗೆ ಸರ್ಕಾರಿ ಆಸ್ಪತ್ರೆಗೆ ಪ್ರವೇಶಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರು ರಾಜ್ ಬಹದ್ದೂರ್ ಅವರಿಗೆ ರೋಗಿಯೊಬ್ಬರ ಗಲೀಜಾದ ಹಾಸಿಗೆಯ ಮೇಲೆ ಮಲಗಲು ಹೇಳಿದ್ದಾರೆ. ಇದನ್ನೂ ಓದಿ: ಗುಜರಾತಿಗಳು, ರಾಜಸ್ಥಾನಿಗಳು ಇಲ್ಲದೇ ಮಹಾರಾಷ್ಟ್ರಕ್ಕೆ ಹಣವಿಲ್ಲ: ವಿವಾದಕ್ಕೆ ಸಿಲುಕಿದ ರಾಜ್ಯಪಾಲರ ಹೇಳಿಕೆ

    ರಾಜ್ ಬಹದ್ದೂರ್ ಅವರು ಸ್ವಲ್ಪ ಸಮಯ ಹಾಸಿಗೆ ಮೇಲೆ ಮಲಗಿಕೊಂಡಿದ್ದಾರೆ. ಈ ವೇಳೆ ಹಲವು ಜನರು ಸ್ಥಳದಲ್ಲಿ ಇದ್ದರು. ಅಲ್ಲದೇ ವೀಡಿಯೋವನ್ನು ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಲಾಗಿದೆ. ಈ ವೀಡಿಯೋವನ್ನು ವಿರೋಧಪಕ್ಷಗಳು ಹಂಚಿಕೊಂಡಿದ್ದು, ಆರೋಗ್ಯ ಸಚಿವರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದೆ.

    ಅವಮಾನಿತರಾದ ರಾಜ್ ಬಹದ್ದೂರ್ ಅವರು ಒಂದು ದಿನದ ನಂತರ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಇಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಸ್ನೇಹಿತರೊಂದಿಗೆ ಪತ್ನಿಯನ್ನೇ ಗ್ಯಾಂಗ್‌ರೇಪ್‌ಗೈದ

    Live Tv
    [brid partner=56869869 player=32851 video=960834 autoplay=true]