Tag: ಚೇತೇಶ್ವರ ಪೂಜಾರ

  • Retirement | ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

    Retirement | ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ ಪೂಜಾರ ಗುಡ್‌ಬೈ

    ಮುಂಬೈ: ಟೆಸ್ಟ್‌ ಪರಿಣತ ಬ್ಯಾಟರ್‌ ಚೇತೇಶ್ವರ ಪೂಜಾರ (Cheteshwar Pujara) ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ಇಂದು ನಿವೃತ್ತಿ ಘೋಷಿಸಿದ್ದಾರೆ. ಈ ವರ್ಷ ರೋಹಿತ್‌ ಶರ್ಮಾ (ಟೆಸ್ಟ್‌), ವಿರಾಟ್‌ ಕೊಹ್ಲಿ (ಟೆಸ್ಟ್‌), ರವಿಚಂದ್ರನ್‌ ಅಶ್ವಿನ್‌ (ಎಲ್ಲಾ ಮಾದರಿ) ಬಳಿಕ ಈಗ ಪೂಜಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ (Cricket) ನಿವೃತ್ತಿ ಘೋಷಿಸಿದ್ದಾರೆ.

    ಈ ಕುರಿತು ತಮ್ಮ ಇನ್‌ಸ್ಟಾ ಖಾತೆಯಲ್ಲಿ ಭಾವುಕ ಸಂದೇಶವೊಂದನ್ನೂ ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ಜೆರ್ಸಿಯನ್ನ ಧರಿಸಿ ರಾಷ್ಟ್ರಗೀತೆ ಹಾಡುವುದು, ಪ್ರತಿ ಬಾರಿ ಮೈದಾನಕ್ಕಿಳಿದಾಗ ನನ್ನ ಅತ್ಯುತ್ತಮ ಪ್ರಯತ್ನ ಮಾಡುವುದು ಇದೆಲ್ಲವೂ ಪದಗಳಲ್ಲಿ ವರ್ಣಿಸಲು ಅಸಾಧ್ಯ. ಆದ್ರೆ ಎಲ್ಲ ಒಳ್ಳೇ ವಿಷಯಗಳೂ ಎಂದಾದರೂ ಕೊನೆಗೊಳ್ಳಬೇಕಲ್ಲವೇ? ಅದೇ ರೀತಿ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ, ಎಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು ಅಂತ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಟೆಸ್ಟ್‌ ಕ್ಯಾಪ್ಟನ್‌ ಗಿಲ್‌ಗೆ ಅನಾರೋಗ್ಯ – ಏಷ್ಯಾಕಪ್‌ ಟೂರ್ನಿಗೆ ಅಯ್ಯರ್‌ಗೆ ಸಿಗುತ್ತಾ ಚಾನ್ಸ್‌?

    ರಾಜ್‌ಕೋಟ್‌ನಲ್ಲಿ ಜನಿಸಿದ 37 ವರ್ಷದ ಪೂಜಾರ 2010ರಲ್ಲಿ ಟೀಂ ಇಂಡಿಯಾಕ್ಕೆ ಪದಾರ್ಪಣೆ ಮಾಡಿದರು. ಟೀಂ ಇಂಡಿಯಾದಲ್ಲಿ ಅತಿಹೆಚ್ಚು ರನ್‌ ಗಳಿಸಿದ 8ನೇ ಟೆಸ್ಟ್‌ ಬ್ಯಾಟರ್‌ ಎನಿಸಿಕೊಂಡಿದ್ದರು. ಇದುವರೆಗೆ 103 ಟೆಸ್ಟ್‌, 5 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸರಣಿ ಆಡಲ್ಲ: ಸಚಿವ ಮನ್ಸುಖ್ ಮಾಂಡವಿಯಾ

    ಟೀಂ ಇಂಡಿಯಾ ಪರ 103 ಟೆಸ್ಟ್‌ ಪಂದ್ಯಗಳಲ್ಲಿ 43.60 ಸರಾಸರಿಯಲ್ಲಿ 7,195 ರನ್‌ ಗಳಿಸಿದ್ದಾರೆ. ಇದರಲ್ಲಿ 19 ಶತಕಗಳು ಮತ್ತು 35 ಅರ್ಧಶತಕಗಳು ಸೇರಿವೆ. ತವರಿನಲ್ಲಿ ನಡೆದ ಒಟ್ಟು ಟೆಸ್ಟ್‌ನಲ್ಲಿ 3,839 ರನ್ ಗಳಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಂತ ವಿಶ್ವಾಸಾರ್ಹ ಬ್ಯಾಟರ್‌ ಆಗಿದ್ದ ಪೂಜಾರ, ಸ್ವದೇಶಿ ಮತ್ತು ವಿದೇಶಗಳಲ್ಲಿ ನಡೆದ ಟೆಸ್ಟ್‌ ಪಂದ್ಯಗಳ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದ್ರೆ ಕಳೆದ ವರ್ಷಗಳಲ್ಲಿ ಸಂಪೂರ್ಣವಾಗಿ ಫಾರ್ಮ್‌ ಕಳೆದುಕೊಂಡಿದ್ದರು. ಇದು ಅವರನ್ನು ನಿವೃತ್ತಿಯ ಕಡೆಗೆ ಸೆಳೆದಿರಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ನವೆಂಬರ್‌ನಲ್ಲಿ ಕೇರಳಕ್ಕೆ ಭೇಟಿ ನೀಡಲಿದ್ದಾರೆ ಅರ್ಜೆಂಟಿನಾದ ಫುಟ್‌ಬಾಲ್ ಆಟಗಾರ ಮೆಸ್ಸಿ

  • ಅರ್ಜುನ ಪ್ರಶಸ್ತಿ ಸಿಕ್ಕಿದ್ದು 2017ರಲ್ಲಿ ಕೈ ಸೇರಿದ್ದು 2022ರಲ್ಲಿ – 5 ವರ್ಷಗಳ ಬಳಿಕ ಪೂಜಾರ ಪ್ರಶಸ್ತಿ ಸ್ವೀಕಾರ

    ಅರ್ಜುನ ಪ್ರಶಸ್ತಿ ಸಿಕ್ಕಿದ್ದು 2017ರಲ್ಲಿ ಕೈ ಸೇರಿದ್ದು 2022ರಲ್ಲಿ – 5 ವರ್ಷಗಳ ಬಳಿಕ ಪೂಜಾರ ಪ್ರಶಸ್ತಿ ಸ್ವೀಕಾರ

    ಮುಂಬೈ: ಟೀಂ ಇಂಡಿಯಾದ (Team India) ಕ್ರಿಕೆಟರ್‌ ಚೇತೇಶ್ವರ ಪೂಜಾರಗೆ (Cheteshwar Pujara) 2017ರಲ್ಲಿ ಅರ್ಜುನ ಪ್ರಶಸ್ತಿ (Arjuna Award) ಸಿಕ್ಕಿತ್ತು. ಆ ಪ್ರಶಸ್ತಿ 5 ವರ್ಷಗಳ ಬಳಿಕ ಇದೀಗ ಪೂಜಾರ ಕೈ ಸೇರಿದೆ.

    2017ರಲ್ಲಿ ಪೂಜಾರ ಅರ್ಜುನ ಪ್ರಶಸ್ತಿ ಸ್ವೀಕಾರ ಸಮಾರಂಭಕ್ಕೆ ಹೋಗಿರಲಿಲ್ಲ. ಆ ಬಳಿಕ ಇದೀಗ 5 ವರ್ಷಗಳ ಬಳಿಕ ಅರ್ಜುನ ಪ್ರಶಸ್ತಿಯನ್ನು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌ರಿಂದ ಪೂಜಾರ ಸ್ವೀಕರಿಸಿದ್ದಾರೆ. ಇದನ್ನೂ ಓದಿ: 11 ಬೌಂಡರಿ, 7 ಸಿಕ್ಸ್ – ಶತಕ ಸಿಡಿಸಿದ ದಾಖಲೆವೀರ ಸೂರ್ಯ

    ಈ ಬಗ್ಗೆ ಟ್ವೀಟ್ ಮಾಡಿರುವ ಪೂಜಾರ, ನಾನು 2017ರಲ್ಲಿ ಅರ್ಜುನ ಪ್ರಶಸ್ತಿ ಬಂದಾಗ ಸ್ವೀಕರಿಸಿರಲಿಲ್ಲ. ಕ್ರಿಕೆಟ್ ನಡುವೆ ಬಿಡುವಿಲ್ಲದ ಕಾರಣ ಹಾಗೆ ಉಳಿದುಕೊಂಡಿತ್ತು. ಇದೀಗ ಕೇಂದ್ರ ಕ್ರೀಡಾ ಸಚಿವರಾದ ಅನುರಾಗ್ ಠಾಕೂರ್‌ರಿಂದ ಪ್ರಶಸ್ತಿ ಪಡೆದುಕೊಂಡಿದ್ದೇನೆ. ಬಿಸಿಸಿಐ (BCCI) ಮತ್ತು ಸಚಿವರಿಗೆ ಧನ್ಯವಾದ ಎಂದಿದ್ದಾರೆ. ಇದನ್ನೂ ಓದಿ: ಕಾಲ್ಚೆಂಡು ಹಬ್ಬ ಬಲು ದುಬಾರಿ – ಫಿಫಾ ಟಿಕೆಟ್ ದರ ಕೇಳಿದ್ರೆ ದಂಗಾಗ್ತಿರಿ!

    ಪೂಜಾರ ಸದ್ಯ ಸೌರಾಷ್ಟ್ರ ಪರ ವಿಜಯ್ ಹಜಾರೆ ದೇಸಿ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಮುಂದಿನ ತಿಂಗಳು ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿ ಆಡಲು ಭಾರತ-ಎ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ಲಂಡನ್: ಟೀಂ ಇಂಡಿಯಾದ ಟೆಸ್ಟ್ ಸ್ಪೆಷಲಿಷ್ಟ್‌ ಖ್ಯಾತಿಯ ಚೇತೇಶ್ವರ ಪೂಜಾರ ಇದೀಗ ರಾಯಲ್ ಲಂಡನ್ ಏಕದಿನ ಪಂದ್ಯ ಒಂದರಲ್ಲಿ ಒಂದೇ ಓವರ್‌ನಲ್ಲಿ ಬರೋಬ್ಬರಿ 22 ರನ್ ಚಚ್ಚಿ ಸ್ಫೋಟಕ ಆಟದ ಮೂಲಕ ಸುದ್ದಿಯಾಗಿದ್ದಾರೆ.

    ಈ ಹಿಂದೆ ಕೌಂಟಿ ಕ್ರಿಕೆಟ್‍ನಲ್ಲಿ ಬ್ಯಾಕ್ ಟು ಬ್ಯಾಕ್ ಸೆಂಚುರಿ ಸಿಡಿಸಿ ಮಿಂಚಿದ್ದ ಪೂಜಾರ ಇದೀಗ ರಾಯಲ್ ಲಂಡನ್ ಏಕದಿನ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಎದುರಾಳಿ ತಂಡಕ್ಕೆ ಕಂಟಕವಾಗಿದ್ದಾರೆ. ಸಸೆಕ್ಸ್ ಪರ ಆಡಿದ ಪೂಜಾರ 107 ರನ್ (79 ಎಸೆತ, 7 ಬೌಂಡರಿ, 2 ಸಿಕ್ಸ್) ಶತಕ ಸಿಡಿಸಿ ಮೆರೆದಾಡಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ ಕ್ಯಾಪ್ಟನ್, ಕೋಚ್ ಪದೇ ಪದೇ ಬದಲಾವಣೆ – ಬಿಸಿಸಿಐಗೆ ನೆಟ್ಟಿಗರಿಂದ ಫುಲ್ ಕ್ಲಾಸ್

     

    ವಾರ್ವಿಕ್‍ಶೈರ್ ವಿರುದ್ಧ ಪಂದ್ಯದ 45ನೇ ಓವರ್‌ನಲ್ಲಿ ಪೂಜಾರ ಉಗ್ರರೂಪ ತಾಳಿದ್ದರು. ಲಿಯಾಮ್ ನಾರ್ವೆಲ್ ಎಸೆದ 45ನೇ ಓವರ್‌ನಲ್ಲಿ ಕ್ರಮವಾಗಿ 4,2,4,2,6,4 ಸೇರಿ ಒಟ್ಟು 22 ರನ್ ಬಾರಿಸಿ ಮಿಂಚಿದರು. ಇದನ್ನೂ ಓದಿ: ಮತ್ತೊಮ್ಮೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದ ದಾದಾ – ಭಾರತ ಮಹಾರಾಜರ ರಾಜನಾದ ಗಂಗೂಲಿ

    ಪಂದ್ಯದಲ್ಲಿ ವಾರ್ವಿಕ್‍ಶೈರ್ 7 ವಿಕೆಟ್ ನಷ್ಟಕ್ಕೆ 306 ರನ್ ಬಾರಿಸಿ ಸಸೆಕ್ಸ್ ತಂಡಕ್ಕೆ 307 ರನ್ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ಸಸೆಕ್ಸ್ ಪಂದ್ಯವನ್ನು ಗೆಲ್ಲಲು ವಿಫಲವಾಯಿತು.

    Live Tv
    [brid partner=56869869 player=32851 video=960834 autoplay=true]

  • ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಕೌಂಟಿ ಕ್ರಿಕೆಟ್‍ನಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    ಲಂಡನ್: ಇಂಗ್ಲೆಂಡ್‍ನಲ್ಲಿ ನಡೆಯುತ್ತಿರುವ ಕೌಂಟಿ ಕ್ರಿಕೆಟ್‍ನಲ್ಲಿ ಆಡುತ್ತಿರುವ ಟೀಂ ಇಂಡಿಯಾ ಆಟಗಾರರಾದ ಚೇತೇಶ್ವರ ಪೂಜಾರ, ವಾಷಿಂಗ್ಟನ್ ಸುಂದರ್ ಮತ್ತು ನವದೀಪ್ ಸೈನಿ ಭರ್ಜರಿ ಪ್ರದರ್ಶನ ನೀಡಿ ಗಮನಸೆಳೆದಿದ್ದಾರೆ.

    ಟೀಂ ಇಂಡಿಯಾ ಟೆಸ್ಟ್ ತಂಡದ ಖಾಯಂ ಸದಸ್ಯ ಪೂಜಾರ ಇದೀಗ ಸಸೆಕ್ಸ್ ತಂಡದ ನಾಯಕರಾಗಿದ್ದು, ಮಿಡೆಕ್ಸ್ ವಿರುದ್ಧದ ಪಂದ್ಯದಲ್ಲಿ ಪೂಜಾರ 231 ರನ್ (403 ಎಸೆತ, 21 ಬೌಂಡರಿ, 3 ಸಿಕ್ಸ್) ಬಾರಿಸಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ.  ಇದನ್ನೂ ಓದಿ: ದಕ್ಷಿಣ ಆಫ್ರಿಕಾ ಟಿ20 ಕ್ರಿಕೆಟ್ ಲೀಗ್‍ನಲ್ಲಿ ಫ್ರಾಂಚೈಸಿ ಖರೀದಿಸಿದ ರಿಲಯನ್ಸ್ ಇಂಡಸ್ಟ್ರೀಸ್

    ಇತ್ತ ಟೀಂ ಇಂಡಿಯಾದಿಂದ ಹೊರಗುಳಿದಿರುವ ಆಲ್‍ರೌಂಡರ್ ವಾಷಿಂಗ್ಟನ್ ಸುಂದರ್ ಕೌಂಟಿ ಕ್ರಿಕೆಟ್‍ನಲ್ಲಿ ನಾರ್ಥಾಂಪ್ಟನ್‍ಶೈರ್ ತಂಡದ ಪರ ಆಡುತ್ತಿದ್ದು, ಲಂಕಾಶೈರ್ ವಿರುದ್ಧದ ಪಂದ್ಯದಲ್ಲಿ 22 ಓವರ್ ಎಸೆದು 1 ಮೇಡನ್ ಓವರ್ ಸಹಿತ 5 ವಿಕೆಟ್ ಕಿತ್ತು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಕರಾವಳಿಯ ಉಸೇನ್ ಬೋಲ್ಟ್ ಖ್ಯಾತಿಯ ಕಂಬಳ

    ಕೆಂಟ್ ತಂಡದ ಪರ ಆಡುತ್ತಿರುವ ಇನ್ನೋರ್ವ ಟೀಂ ಇಂಡಿಯಾ ವೇಗಿ ನವದೀಪ್ ಸೈನಿ ವಾರ್ವಿಕ್‍ಷೈರ್ ವಿರುದ್ಧದ ಪಂದ್ಯದಲ್ಲಿ 18 ಓವರ್ ಎಸೆದು 4 ಮೇಡನ್ ಓವರ್ ಸಹಿತ 5 ವಿಕೆಟ್ ಪಡೆದಿದ್ದಾರೆ.

    ಈ ಮೂವರು ಆಟಗಾರರು ಕೂಡ ಮತ್ತೆ ಟೀಂ ಇಂಡಿಯಾ ಪರ ಕಂಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ. ಪೂಜಾರ ಟೆಸ್ಟ್ ತಂಡಕ್ಕೆ ಮಾತ್ರ ಸೀಮಿತವಾದರೆ, ಸೈನಿ ಮತ್ತು ಸುಂದರ್ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಪಡೆಯಲು ಪರದಾಡುತ್ತಿದ್ದಾರೆ. ಆಗೊಮ್ಮೆ ಈಗೊಮ್ಮೆ ತಂಡಕ್ಕೆ ಎಂಟ್ರಿಕೊಟ್ಟು ಹೊರ ಹೋಗುತ್ತಿದ್ದಾರೆ. ಮುಂದಿನ ಟಿ20 ವಿಶ್ವಕಪ್‍ಗೂ ಮುನ್ನ ತಂಡದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಇವರಿಬ್ಬರು ಮೈದಾನದಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟೆಸ್ಟ್ ಸರಣಿ ಸೋಲಿಗೆ ಕಾರಣವಾಯಿತೇ ಪೂಜಾರ, ರಹಾನೆ ಬ್ಯಾಟಿಂಗ್ ವೈಫಲ್ಯ?

    ಟೆಸ್ಟ್ ಸರಣಿ ಸೋಲಿಗೆ ಕಾರಣವಾಯಿತೇ ಪೂಜಾರ, ರಹಾನೆ ಬ್ಯಾಟಿಂಗ್ ವೈಫಲ್ಯ?

    ಜೋಹನ್ಸ್‌ಬಗ್‌: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿರುವ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು 2-1 ಅಂತರದಿಂದ ಸೋತಿದೆ. ಸರಣಿ ಸೋಲಲು ಇಬ್ಬರು ಬ್ಯಾಟ್ಸ್‌ಮ್ಯಾನ್‌ಗಳ ಬ್ಯಾಟಿಂಗ್ ವೈಫಲ್ಯ ಪ್ರಮುಖ ಕಾರಣವೆಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ಕೇಳಿಬರುತ್ತಿದೆ.

    ಹೌದು ಟೀಂ ಇಂಡಿಯಾದಲ್ಲಿ ರಾಹುಲ್ ದ್ರಾವಿಡ್ ಮತ್ತು ವಿ.ವಿ.ಎಸ್ ಲಕ್ಷ್ಮಣ್ ಬಳಿಕ ಟೆಸ್ಟ್ ಸ್ಪೆಷಲಿಷ್ಟ್‌ಗಳೆಂದು ತಂಡದಲ್ಲಿ ಖಾಯಂ ಸ್ಥಾನ ಪಡೆದಿದ್ದ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯಾ ರಹಾನೆ ಕಳೆದ ಕೆಲ ಸರಣಿಗಳಲ್ಲಿ ತಮ್ಮ ಮೇಲಿಟ್ಟಿರುವ ವಿಶ್ವಾಸವನ್ನು ಸುಳ್ಳಾಗಿಸಿದ್ದಾರೆ. ಇದೀಗ ಇವರಿಬ್ಬರ ಬ್ಯಾಟಿಂಗ್ ವೈಫಲ್ಯ ದಕ್ಷಿಣ ಆಫ್ರಿಕಾ ಸರಣಿಯಲ್ಲೂ ಮುಂದುವರಿದಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಪೂಜಾರ ಮತ್ತು ರಹಾನೆ ತಲಾ ಒಂದೊಂದು ಅರ್ಧಶತಕ ಸಿಡಿಸಿದನ್ನು ಬಿಟ್ಟರೆ ಇವರ ಬ್ಯಾಟ್‍ನಿಂದ ರನ್ ಹರಿದು ಬಂದಿಲ್ಲ. ಮಧ್ಯಮಕ್ರಮಾಂಕದಲ್ಲಿ ತಂಡದ ಆಧಾರ ಸ್ತಂಭವಾಗಬೇಕಿದ್ದ ಈ ಇಬ್ಬರೂ ಬ್ಯಾಟ್ಸ್‌ಮ್ಯಾನ್‌ಗಳು ಕೂಡ ಕೈ ಕೊಟ್ಟರು ಹಾಗಾಗಿ ಟೀಂ ಇಂಡಿಯಾ ಸರಣಿ ಸೋತಿದೆ. ಮುಂದಿನ ಸರಣಿಗೆ ಪೂಜಾರ ಮತ್ತು ರಹಾನೆಗೆ ಕೊಕ್ ನೀಡಿ ಯುವ ಆಟಗಾರರಿಗೆ ಅವಕಾಶ ಕಲ್ಪಿಸಿಕೊಡಿ ಎಂಬ ಕೂಗು ಜೋರಾಗಿದೆ. ಇದನ್ನೂ ಓದಿ: 3ನೇ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ಸೋಲು – ಸರಣಿ ವಶಪಡಿಸಿಕೊಂಡ ಆಫ್ರಿಕಾ

    ಸರಣಿಯ ಮೂರು ಪಂದ್ಯಗಳ 6 ಇನ್ನಿಂಗ್ಸ್‌ನಲ್ಲಿ ಪೂಜಾರ, ಕ್ರಮವಾಗಿ 0, 16, 3, 53, 43, 9 ರನ್ ಸೇರಿ ಒಟ್ಟು 124 ರನ್ ಸಿಡಿಸಿದರೆ, ರಹಾನೆ ಕೊಡುಗೆ 48, 20, 0, 58, 9, 1 ರನ್ ಸೇರಿ ಒಟ್ಟು 136 ರನ್ ಬಾರಿಸಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದಾರೆ. ತಂಡ ಆರಂಭಿಕ ಆಘಾತ ಎದುರಿಸಿದಾಗ ಕ್ರಿಸ್‍ನಲ್ಲಿ ನಿಂತು ಬ್ಯಾಟಿಂಗ್ ಮುಂದುವರಿಸಿ ತಂಡಕ್ಕೆ ಬಲ ತುಂಬಬೇಕಾಗಿದ್ದ ಇಬ್ಬರೂ ಕೂಡ ಆಫ್ರಿಕಾ ನೆಲದಲ್ಲಿ ಎಡವಿದ್ದಾರೆ. ಈಗಾಗಲೇ ಸಾಕಷ್ಟು ಅವಕಾಶಗಳನ್ನು ಟೀಂ ಇಂಡಿಯಾದಲ್ಲಿ ಪೂಜಾರ ಮತ್ತು ರಹಾನೆಗೆ ಕಲ್ಪಿಸಿಕೊಡಲಾಗಿದೆ. ಹಾಗಾಗಿ ಮುಂದಿನ ಸರಣಿಯಲ್ಲಿ ಬೆಂಚ್ ಕಾಯುತ್ತಿರುವ ಶ್ರೇಯಸ್ ಅಯ್ಯರ್, ಶುಭಮನ್ ಗಿಲ್ ಅವರಂತ ಪ್ರತಿಭವಂತ ಆಟಗಾರರಿಗೆ ಅವಕಾಶ ಕೊಡಿ ಎಂಬ ಅಭಿಪ್ರಾಯ ಹೆಚ್ಚಿದೆ. ಇದನ್ನೂ ಓದಿ: ಶಾಕಿಂಗ್‌ ಡಿಆರ್‌ಎಸ್‌ ವಿಡಿಯೋಗೆ ಕೊಹ್ಲಿ ಕಿಡಿ – ರಿವ್ಯೂ ಸಕ್ಸಸ್‌ ಎಂದು ವಾಹಿನಿಯಿಂದ ಸಮರ್ಥನೆ

    ಟೆಸ್ಟ್ ಸರಣಿಯನ್ನು ಗೆಲುವಿನ ಮೂಲಕ ಆರಂಭಿಸಿದ ಟೀಂ ಇಂಡಿಯಾ ಆ ಬಳಿಕ ಸತತ 2 ಪಂದ್ಯವನ್ನು ಸೋತು ಸರಣಿ ಕೈಚೆಲ್ಲಿದೆ. ಇದೀಗ ಏಕದಿನ ಸರಣಿಗೆ ಸಜ್ಜಾಗುತ್ತಿದ್ದು ಮೊದಲ ಪಂದ್ಯ ಜನವರಿ 19 ರಂದು ಆರಂಭವಾಗುತ್ತಿದೆ. ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ನೀಡಿ ಸರಣಿ ಗೆಲ್ಲಲಿ ಅನ್ನೋದು ಅಭಿಮಾನಿಗಳ ಹಾರೈಕೆಯಾಗಿದೆ. ಇದನ್ನೂ ಓದಿ: ನೊವಾಕ್ ಜೊಕೊವಿಕ್ ವೀಸಾ 2ನೇ ಬಾರಿ ರದ್ದು – 3 ವರ್ಷ ಆಸ್ಟ್ರೇಲಿಯಾಗೆ ಪ್ರವೇಶವಿಲ್ಲ

  • ಪೂಜಾರಾ ವಿರುದ್ಧ ಅವಾಚ್ಯ ಪದ ಪ್ರಯೋಗಿಸಿದ ರೋಹಿತ್ ಶರ್ಮಾ: ವಿಡಿಯೋ ವೈರಲ್

    ಪೂಜಾರಾ ವಿರುದ್ಧ ಅವಾಚ್ಯ ಪದ ಪ್ರಯೋಗಿಸಿದ ರೋಹಿತ್ ಶರ್ಮಾ: ವಿಡಿಯೋ ವೈರಲ್

    ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದ ವೇಳೆ ಟೀಂ ಇಂಡಿಯಾ ಆಟಗಾರ ರೋಹಿತ್ ಶರ್ಮಾ, ಸಹ ಆಟಗಾರ ಚೇತೇಶ್ವರ ಪೂಜಾರ ವಿರುದ್ಧ ಅವಾಚ್ಯ ಪದ ಪ್ರಯೋಗ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಂದ್ಯದಲ್ಲಿ ಟೀಂ ಇಂಡಿಯಾ 2ನೇ ಇನ್ನಿಂಗ್ಸ್ ನ 4ನೇ ದಿನದಾಟದ 26ನೇ ಓವರಿನಲ್ಲಿ ಈ ಘಟನೆ ನಡೆದಿದೆ. ಬೌಲರ್ ಪೀಡ್ ಎಸೆದ ಬಾಲನ್ನು ರೋಹಿತ್ ಶರ್ಮಾ ಕವರ್ ಪಾಯಿಂಟ್ ನತ್ತ ತಳ್ಳಿ ಒಂದು ರನ್ ಓಡಲು ಮುಂದಾದರು. ಈ ವೇಳೆ ನಾನ್ ಸ್ಟ್ರೈಕ್ ನಲ್ಲಿದ್ದ ಪೂಜಾರ ರನ್ ಓಡಲು ಮುಂದಾಗಿ ನಂತರ ತಮ್ಮ ನಿರ್ಧಾರದಿಂದ ಹಿಂದಕ್ಕೆ ಸರಿದರು. ಅಸಮಾಧಾನಗೊಂಡ ರೋಹಿತ್ ಶರ್ಮಾ ಮರಳಿ ಕ್ರೀಸ್ ನತ್ತ ಓಡಿದರು. ಒಂದು ರನ್ ಪಡೆಯಲು ಸಾಧ್ಯವಿದ್ದರೂ ಓಡದ್ದಕ್ಕೆ ರೋಹಿತ್ ಶರ್ಮಾ ಪೂಜಾರ ಅವರನ್ನು ಅವಾಚ್ಯ ಪದಗಳಿಂದ ನಿಂದಿಸಿದರು.

    ಅವಾಚ್ಯ ಪದ ಬಳಕೆ ಮಾಡಿರುವುದು ಸ್ಟಂಪ್ ಮೈಕ್‍ನಲ್ಲಿ ದಾಖಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಟ್ವಿಟ್ಟಗರು ರೋಹಿತ್‍ರನ್ನು ಟ್ರೋಲ್ ಮಾಡುತ್ತಿದ್ದಾರೆ.

    ಗೆಲುವಿಗೆ 9 ವಿಕೆಟ್ ಬಾಕಿ: ಇತ್ತ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ 147 ಎಸೆತಗಳಲ್ಲಿ 6 ಸಿಕ್ಸರ್, 10 ಬೌಂಡರಿಗಳ ನೆರವಿನಿಂದ 127 ರನ್ ಗಳಿಸಿ ನಿರ್ಗಮಿಸಿದರು. ಪೂಜಾರ 81 ರನ್, ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದ ಜಡೇಜಾ 40 ರನ್, ಕೊಹ್ಲಿ 31 ರನ್, ರಹಾನೆ 27 ರನ್ ಗಳ ನೆರವಿನಿಂದ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 323 ರನ್ ಗಳಿಸಿದ್ದ ಸಂದರ್ಭದಲ್ಲಿ 2ನೇ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

    ಗೆಲ್ಲಲು 395 ರನ್ ಗುರಿ ಪಡೆದ 2ನೇ ಇನ್ನಿಂಗ್ಸ್ ಆರಂಭಿಸಿದ ದಕ್ಷಿಣ ಅಫ್ರಿಕಾ 4ನೇ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 11 ರನ್ ಗಳಿಸಿತು. ತಂಡದ ಪರ ಜಡೇಜಾ 2ನೇ ಇನ್ನಿಂಗ್ಸ್ ನಲ್ಲಿ ಎದುರಾಳಿಯ ಮೊದಲ ವಿಕೆಟ್ ಪಡೆದು ಅಘಾತ ನೀಡಿದರು.

    ಸಂಕ್ಷೀಪ್ತ ಸ್ಕೋರ್:
    ಟೀಂ ಇಂಡಿಯಾ: ಮೊದಲ ಇನ್ನಿಂಗ್ಸ್ 502/7 ಡಿಕ್ಲೇರ್
    2ನೇ ಇನ್ನಿಂಗ್ಸ್ 323/4 ಡಿಕ್ಲೇರ್

    ದಕ್ಷಿಣ ಆಫ್ರಿಕಾ: 431 ಅಲೌಟ್
    2ನೇ ಇನ್ನಿಂಗ್ಸ್ 11/1

  • ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

    ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

    ಮುಂಬೈ: ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ.

    ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು ಬಹುಮಾನ ಪಡೆಯಲಿದ್ದಾರೆ. ಪ್ರಮುಖವಾಗಿ ಆಡುವ 11ರ ಬಳಗದಲ್ಲಿ ಇದ್ದ ಪ್ರತಿ ಆಟಗಾರರು ಪ್ರತಿ ಪಂದ್ಯಕ್ಕೆ 15 ಲಕ್ಷ ರೂ. ಹಾಗೂ ಮೀಸಲು ಆಟಗಾರರು ಪ್ರತಿ ಪಂದ್ಯಕ್ಕೆ 7.5 ಲಕ್ಷ ರೂ. ಮತ್ತು ಕೋಚ್ ಗಳಿಗೆ 25 ಲಕ್ಷ ರೂ. ಪಡೆಯಲಿದ್ದಾರೆ. ಉಳಿದಂತೆ ತಂಡದ ಸಹಾಯಕ ಸಿಬ್ಬಂದಿ ಅವರ ವೇತನಕ್ಕೆ ಸಮಾನವಾಗಿ ಬಹುಮಾನ ಪಡೆಯಲಿದ್ದಾರೆ.

    ಇದರಂತೆ ಸರಣಿಯಲ್ಲಿ ಎಲ್ಲಾ 4 ಪಂದ್ಯಗಳನ್ನಾಡಿದ ಆಟಗಾರರು ತಲಾ 60 ಲಕ್ಷ ರೂ. ಬಹುಮಾನವಾಗಿ ಪಡೆಯಲಿದ್ದಾರೆ. ಅಲ್ಲದೇ ಟೆಸ್ಟ್ ಸರಣಿಯ ಗೆಲುವಿನಲ್ಲಿ ಟೀಂ ಇಂಡಿಯಾ ಪರ ಪ್ರಮುಖ ಪಾತ್ರವಹಿಸಿದ್ದ ಚೇತೇಶ್ವರ ಪೂಜಾರ ಅವರಿಗೂ ಭರ್ಜರಿ ಗಿಫ್ಟ್ ನೀಡುವ ಸಾಧ್ಯತೆ ಇದ್ದು, ಬಿಸಿಸಿಐ ವಾರ್ಷಿಕ ಒಪ್ಪಂದದಲ್ಲಿ ‘ಎ’ ಗ್ರೇಡ್ ಪಟ್ಟಿಯಲ್ಲಿರುವ ಪೂಜಾರನ್ನು ‘ಎ ಪ್ಲಸ್’ ಪಟ್ಟಿಗೆ ಉನ್ನತಿ ನೀಡಲು ಪ್ರಸ್ತಾಪ ಇದೆ ಎನ್ನಲಾಗಿದೆ. ಪ್ರತಿ ವರ್ಷ ಎ ಗ್ರೇಡ್ ಆಟಗಾರರು 5 ಕೋಟಿ ರೂ. ಪಡೆದರೆ, ಎ ಪ್ಲಸ್ ಆಟಗಾರರು ವಾರ್ಷಿಕ 7 ಕೋಟಿ ರೂ. ಸಂಭಾವನೆ ಪಡೆಯುತ್ತಾರೆ. 2018ರಲ್ಲಿ ಮೊದಲ ಬಾರಿಗೆ ಬಿಸಿಸಿಐ ತನ್ನ ಒಪ್ಪಂದ ಪಟ್ಟಿಯಲ್ಲಿ ಎ ಪ್ಲಸ್ ಶ್ರೇಣಿಯನ್ನು ನೀಡಿತ್ತು.

    1947-78ರಲ್ಲಿ ಮೊದಲ ಬಾರಿಗೆ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಆಡಿದ್ದಟೀಂ ಇಂಡಿಯಾ ಇದೂವರೆಗೂ 12 ಸರಣಿಗಳನ್ನು ಆಡಿತ್ತು. ಆದರೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

    15 ವರ್ಷಗಳ ಹಿಂದಿನ `ದಿ ವಾಲ್’ ದ್ರಾವಿಡ್ ದಾಖಲೆ ಮುರಿದ ಪೂಜಾರ

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ 193 ರನ್ ಸಿಡಿಸಿ ಅತ್ಯುತ್ತಮ ಪ್ರದರ್ಶನ ನೀಡಿದ ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಆಸೀಸ್ ಸರಣಿಯಲ್ಲಿ ಒಟ್ಟು 1,258 ಎಸೆತಗಳನ್ನು ಎದುರಿಸುವ ಮೂಲಕ ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ್ದಾರೆ.

    ಟೀಂ ಇಂಡಿಯಾ ಪರ ಆಸೀಸ್ ನೆಲದಲ್ಲಿ ಅತಿ ಹೆಚ್ಚು ಎಸೆತಗಳನ್ನು ಎದುರಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪೂಜಾರ ಪಾತ್ರರಾಗಿದ್ದು, 2003-04 ರ ಆಸೀಸ್ ಸರಣಿಯೊಂದರಲ್ಲಿ 1,203 ಎಸೆತಗಳನ್ನು ಎದುರಿಸಿದ್ದ ರಾಹುಲ್ ದಾಖಲೆಯನ್ನು ಮುರಿದಿದ್ದಾರೆ. ಪಂದ್ಯದಲ್ಲಿ 130 ರನ್ ಗಳಿಂದ 2ನೇ ದಿನದಾಟ ಆರಂಭಿಸಿದ ಪೂಜಾರ 282 ಎಸೆತಗಳಲ್ಲಿ (18 ಬೌಂಡರಿ) 150 ರನ್ ಪೂರ್ಣಗೊಳಿಸಿದರು. ಅಂತಿಮವಾಗಿ 373 ಎಸೆತಗಳನ್ನು ಎದುರಿಸಿ 22 ಬೌಂಡರಿಗಳ ಸಹಾಯದಿಂದ 193 ರನ್ ಸಿಡಿಸಿ ದ್ವಿಶತಕ ಸಿಡಿಸುವ ಹಂತದಲ್ಲಿ ನಾಥನ್ ಲಯನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು.

    ಟೀಂ ಇಂಡಿಯಾ ಒನ್ ಡೌನ್ ಬ್ಯಾಟ್ಸ್ ಮನ್ ಆಗಿರುವ ಪೂಜಾರ 1,702 ನಿಮಿಷ ಅಂದರೆ 28 ಗಂಟೆ, 22 ನಿಮಿಷಗಳ ಕಾಲ ಬ್ಯಾಟಿಂಗ್ ನಡೆಸಿದ್ದಾರೆ. ಅಲ್ಲದೇ ಪಂದ್ಯದ 2ನೇ ಇನ್ನಿಂಗ್ಸ್ ನಲ್ಲಿ ಪೂಜಾರ ಬ್ಯಾಟಿಂಗ್ ನಡೆಸಿದರೆ ಈ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಲಿದೆ. 32 ವರ್ಷದ ಪೂಜಾರ ಸದ್ಯ 15 ವರ್ಷಗಳ ಹಿಂದಿನ ರಾಹುಲ್ ದ್ರಾವಿಡ್‍ಯನ್ನು ಮುರಿದಿದ್ದು, ಈ ಪಟ್ಟಿಯಲ್ಲಿ 2014-15ರ ಟೂರ್ನಿಯಲ್ಲಿ 1,093 ಎಸೆತಗಳನ್ನು ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿದ್ದಾರೆ. 1977-78 ರ ಟೂರ್ನಿಯಲ್ಲಿ 1,032 ಎಸೆತಗಳನ್ನು ಎದುರಿಸಿದ ಸುನಿಲ್ ಗವಾಸ್ಕರ್ ನಂತರದ ಸ್ಥಾನವನ್ನು ಪಡೆದಿದ್ದಾರೆ.

    ಸರಣಿಯಲ್ಲಿ ಪೂಜಾರ 3 ಶತಕಗಳನ್ನು ಸಿಡಿಸಿದ್ದು, ಈ ಮೂಲಕ ಟೀಂ ಇಂಡಿಯಾ ಪರ ಆಸೀಸ್ ವಿರುದ್ಧ 500 ಪ್ಲಸ್ ರನ್ ಗಳಿಸಿದ 3ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಈ ಹಿಂದೆ ರಾಹುಲ್ ದ್ರಾವಿಡ್ ಮತ್ತು ಕೊಹ್ಲಿ ಮಾತ್ರ 500 ಪ್ಲಸ್ ರನ್ ಸಿಡಿಸಿದ ಸಾಧನೆ ಮಾಡಿದ್ದಾರೆ. ಅಲ್ಲದೇ ತಂಡದ ಇತರೇ ಆಟಗಾರರೊಂದಿಗೆ ಉತ್ತಮ ಬ್ಯಾಟಿಂಗ್ ನಡೆಸಿದ್ದು, ಅಗರ್ವಾಲ್, ಕೊಹ್ಲಿ, ವಿಹಾರಿ, ಪಂತ್‍ರೊಂದಿಗೆ ಕ್ರಮವಾಗಿ 116, 54, 101, 89 ರನ್ ಜೊತೆಯಾತ ನೀಡಿ ಟೀಂ ಇಂಡಿಯಾ ಬೃಹತ್ ಮೊತ್ತ ಗಳಿಸಲು ಕಾರಣರಾಗಿದ್ದಾರೆ. ನಾಥನ್ ಲಯನ್ ಬೌಲಿಂಗ್‍ನಲ್ಲಿ ಪೂಜಾರ ಔಟ್ ಆಗುತ್ತಿದ್ದಂತೆ ಕ್ರೀಡಾಂಗಣದಲ್ಲಿ ನೆರೆದಿದ್ದ ಎಲ್ಲಾ ಅಭಿಮಾನಿಗಳು ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಿನಗಿನ್ನು ಬೋರ್ ಆಗಿಲ್ವಾ? ಪೂಜಾರ ಬ್ಯಾಟಿಂಗ್‍ ಕಂಡು ಲಯನ್ ಪ್ರಶ್ನಿಸಿದ್ದು ಹೀಗೆ!

    ನಿನಗಿನ್ನು ಬೋರ್ ಆಗಿಲ್ವಾ? ಪೂಜಾರ ಬ್ಯಾಟಿಂಗ್‍ ಕಂಡು ಲಯನ್ ಪ್ರಶ್ನಿಸಿದ್ದು ಹೀಗೆ!

    ಸಿಡ್ನಿ: ಟೀಂ ಇಂಡಿಯಾ ಅನುಭವಿ ಆಟಗಾರ ಚೇತೇಶ್ವರ ಪೂಜಾರ ಮಹತ್ವ ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ತಂಡಕ್ಕೆ ಆಸರೆಯಾಗಿದ್ದು, ಆದರೆ ಪೂಜಾರನ್ನು ಔಟ್ ಮಾಡಲು ಆಸೀಸ್ ಬೌಲರ್ ಗಳು ಪರದಾಟ ನಡೆಸಿದ್ದಾರೆ. ಈ ನಡುವೆ ಆಸೀಸ್ ಬೌಲರ್ ನಾಥನ್ ಲಯನ್ ಕೂಡ ನೇರ ಪೂಜಾರ ಬಳಿ ತೆರಳಿ ನಿನಗೆ ಇನ್ನು ಬೋರ್ ಆಗಿಲ್ವಾ ಎಂದು ಪ್ರಶ್ನೆ ಮಾಡಿದ್ದಾರೆ.

    ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಲಯನ್ ಬೌಲಿಂಗ್ ಮಾಡುವ ಸಂದರ್ಭದಲ್ಲಿ ಘಟನೆ ನಡೆದಿದ್ದು, ಮಾಧ್ಯಮವೊಂದು ಈ ಸಂಭಾಷಣೆಯನ್ನು ವರದಿ ಮಾಡಿದೆ. ನಾನ್ ಸ್ಟ್ರೈಕ್ ನಲ್ಲಿದ್ದ ಪೂಜಾರ ಶತಕ ಸಿಡಿಸಿದ ಸಂಭ್ರಮದಲ್ಲಿದ್ದರು. ಆ ವೇಳೆ ನಾಥನ್ ಲಯನ್ ಪ್ರಶ್ನೆ ಮಾಡಿದ್ದು, ಇದನ್ನು ಕೇಳಿಸಿಕೊಂಡ ಪೂಜಾರ ನಸು ನಕ್ಕು ಸುಮ್ಮನಾಗಿದ್ದಾರೆ.

    114 ಇನ್ನಿಂಗ್ಸ್ ಗಳಲ್ಲಿ ವೃತ್ತಿ ಜೀವನದ 18ನೇ ಶತಕ ಪೂರೈಸಿದ ಪೂಜಾರ ಟೀಂ ಇಂಡಿಯಾ ಪರ ವಿವಿಎಸ್ ಲಕ್ಷ್ಮಣ್ ಹಾಗೂ ದಿಲೀಪ್ ವೆಂಗ್‍ಸರ್ಕಾರ್ ದಾಖಲೆಯನ್ನು ಮುರಿದರು. ಅಲ್ಲದೇ ತಂಡದ ಪರ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದರು. ವಿವಿಎಸ್ ಲಕ್ಷ್ಮಣ್, ದಿಲೀಪ್ ವೆಂಗ್‍ಸರ್ಕಾರ್ ತಲಾ 17 ಶತಕ ಸಿಡಿಸಿದ್ದಾರೆ. ಆಸೀಸ್ ಟೂರ್ನಿಯಲ್ಲಿ ಪೂಜಾರ ಅವರ 3ನೇ ಶತಕ ಇದಾಗಿದೆ.

    1 ಸಾವಿರ ಎಸೆತ: ಪೂಜಾರ ಕೇವಲ ರನ್ ಗಳಿಸುವುದರಲ್ಲಿ ಮಾತ್ರವಲ್ಲದೇ 1 ಸಾವಿರಕ್ಕೂ ಹೆಚ್ಚು ಎಸೆತಗಳನ್ನು ಆಸೀಸ್ ನೆಲದ ಟೆಸ್ಟ್ ಪಂದ್ಯದ ಸರಣಿಯಲ್ಲಿ ಎದುರಿಸಿದ ಸಾಧನೆ ಮಾಡಿದ್ದಾರೆ. ಈ ಮೂಲಕ ದಿ ಗ್ರೇಟ್ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್, ಸುನಿಲ್ ಗವಾಸ್ಕರ್, ವಿರಾಟ್ ಕೊಹ್ಲಿ, ವಿಜಯ್ ಹಜಾರೆ ಅವರ ಸಾಲಿಗೆ ಸೇರಿದರು.

    ಆಸೀಸ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿದ್ದ ಪೂಜಾರ, 3ನೇ ಟೆಸ್ಟ್ ಮೊದಲ ದಿನ ಮತ್ತೆ ಶತಕ ಸಿಡಿಸಿದ್ದರು. ಆದರೆ 2ನೇ ಇನ್ನಿಂಗ್ಸ್ ನಲ್ಲಿ ಶೂನ್ಯ ಸುತ್ತಿ ನಿರಾಸೆ ಮೂಡಿಸಿದ್ದರು. ಸದ್ಯ ಅಂತಿಮ ಟೆಸ್ಟ್ ಪಂದ್ಯದಲ್ಲಿ 130 ರನ್ ಗಳಿಸಿರುವ ಪೂಜಾರ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡು ಆಸೀಸ್ ಬೌಲರ್ ಗಳಿಗೆ ತಲೆ ನೋವಾಗಿ ಪರಿಣಾಮಿಸಿದ್ದಾರೆ.

    https://twitter.com/narangmrinal/status/1080709940405096448?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶತಕ ಸಿಡಿಸಿ ವಿವಿಎಸ್ ಲಕ್ಷ್ಮಣ್, ವೆಂಗ್‍ಸರ್ಕಾರ್ ಹಿಂದಿಕ್ಕಿದ ಪೂಜಾರ

    ಶತಕ ಸಿಡಿಸಿ ವಿವಿಎಸ್ ಲಕ್ಷ್ಮಣ್, ವೆಂಗ್‍ಸರ್ಕಾರ್ ಹಿಂದಿಕ್ಕಿದ ಪೂಜಾರ

    ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದ ಮೊದಲ ದಿನದಲ್ಲಿ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದ್ದು, ಅನುಭವಿ ಆಟಗಾರ ಚೇತೇಶ್ವರ ಪೂಜಾರ ಅಜೇಯ ಶತಕ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಅರ್ಧಶತಕದಿಂದಾಗಿ ದಿನದಾಟದಂತ್ಯಕ್ಕೆ 90 ಓವರ್ ಗಳಲ್ಲಿ 4 ವಿಕೆಟ್ ವಿಕೆಟ್ ನಷ್ಟಕ್ಕೆ 303 ರನ್ ಪೇರಿಸಿದೆ.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಟೀಂ ಇಂಡಿಯಾದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಇಬ್ಬರು ಕನ್ನಡಿಗರು, ಆಪ್ತ ಗೆಳೆಯರಾದ ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್ ಇನ್ನಿಂಗ್ಸ್ ಆರಂಭಿಸಿರುವ ಅವಕಾಶ ಪಡೆದಿಕೊಂಡರು. ಆದರೆ ಕೆಎಲ್ ರಾಹುಲ್ ತಮ್ಮ ಕಳಪೆ ಫಾರ್ಮ್ ಮುಂದುವರಿಸಿ 9 ರನ್ ಗಳಿಸಿ ಪೆವಿಲಿಯನ್ ಸೇರಿದರು.

    ಬಳಿಕ ಒಂದಾದ ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ ಜೋಡಿ 2ನೇ ವಿಕೆಟ್‍ಗೆ 116 ರನ್‍ಗಳ ಮಹತ್ವದ ಜೊತೆಯಾಟ ನೀಡಿ ತಂಡಕ್ಕೆ ಉತ್ತಮ ಆರಂಭ ನೀಡಿತು. ತಾಳ್ಮೆಯ ಆಟವಾಡಿದ ಅಗರ್ವಾಲ್ ಎರಡನೇ ಪಂದ್ಯದಲ್ಲೂ ಅರ್ಧ ಶತಕ ಪೂರೈಸಿದ ಸಾಧನೆ ಮಾಡಿದರು. 112 ಎಸೆತಗಳನ್ನು ಎದುರಿಸಿ 7 ಬೌಂಡರಿ, 2 ಸಿಕ್ಸರ್ ಗಳ ನೆರವಿನಿಂದ 77 ರನ್ ಸಿಡಿಸಿ ಔಟಾದರು.

    ಈ ಹಂತದಲ್ಲಿ ಕಣಕ್ಕೆ ಇಳಿದ ನಾಯಕ ಕೊಹ್ಲಿ 23 ರನ್, ಬಳಿಕ ಬಂದ ರಹಾನೆ 18 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಮತ್ತೊಂದು ಬದಿಯಲ್ಲಿ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರಿಸಿದ ಚೇತೇಶ್ವರ ಪೂಜಾರ 250 ಎಸೆತಗಳಲ್ಲಿ 130 ರನ್ ಗಳಿಸಿ 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇತ್ತ ಪೂಜಾರ ಅವರಿಗೆ ಸಾಥ್ ನೀಡಿರುವ ಯುವ ಆಟಗಾರ ಹನುಮ ವಿಹಾರಿ 39 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ ಟೀಂ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 90 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 303 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದೆ.

    114 ಇನ್ನಿಂಗ್ಸ್ ಗಳಲ್ಲಿ ವೃತ್ತಿ ಜೀವನದ 18ನೇ ಶತಕ ಪೂರೈಸಿದ ಪೂಜಾರ ವಿವಿಎಸ್ ಲಕ್ಷ್ಮಣ್ ಹಾಗೂ ದಿಲೀಪ್ ವೆಂಗ್‍ಸರ್ಕಾರ್ ದಾಖಲೆಯನ್ನು ಮುರಿದರು. ಅಲ್ಲದೇ ಟೀಂ ಇಂಡಿಯಾ ಪರ ಅತಿ ಹೆಚ್ಚು ಶತಕಗಳನ್ನು ಸಿಡಿಸಿದ ಪಟ್ಟಿಯಲ್ಲಿ 7ನೇ ಸ್ಥಾನ ಪಡೆದರು. ವಿವಿಎಸ್ ಲಕ್ಷ್ಮಣ್, ದಿಲೀಪ್ ವೆಂಗ್‍ಸರ್ಕಾರ್ ತಲಾ 17 ಶತಕ ಸಿಡಿಸಿದ್ದಾರೆ. ಆಸೀಸ್ ಟೂರ್ನಿಯಲ್ಲಿ ಪೂಜಾರ ಅವರ 3ನೇ ಶತಕ ಇದಾಗಿದೆ.

    ಸಚಿನ್ ತೆಂಡೂಲ್ಕರ್ ಅವರ ಗುರು, ಕೋಚ್ ರಮಾಕಾಂತ್ ಅಚ್ರೇಕರ್ ವಿಧಿವಶರಾದ ಹಿನ್ನಲೆಯಲ್ಲಿ ಅವರ ಗೌರವಾರ್ಥವಾಗಿ ಟೀಂ ಇಂಡಿಯಾ ಆಟಗಾರರು ಸಿಡ್ನಿ ಟೆಸ್ಟ್ ಪಂದ್ಯದಲ್ಲಿ ಕಪ್ಪು ಪಟ್ಟಿ ಧರಿಸಿ ಕಣಕ್ಕೆ ಇಳಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv