Tag: ಚೇಸಿಂಗ್

  • ಬಾಂಗ್ಲಾ ವಿರುದ್ಧ ಗೆದ್ದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ದಾಖಲೆ ಬರೆದ ಭಾರತ

    ಬಾಂಗ್ಲಾ ವಿರುದ್ಧ ಗೆದ್ದು ಆಸ್ಟ್ರೇಲಿಯಾವನ್ನು ಹಿಂದಿಕ್ಕಿ ದಾಖಲೆ ಬರೆದ ಭಾರತ

    ನವದೆಹಲಿ: ಗುರುವಾರ ಬಾಂಗ್ಲಾದೇಶದ ವಿರುದ್ಧ ನಡೆದ ಎರಡನೇ ಟಿ-20 ಗೆಲ್ಲುವ ಮೂಲಕ ಭಾರತ ಚುಟುಕು ಪಂದ್ಯಗಳ ಚೇಸಿಂಗ್‍ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿದೆ.

    ಬಾಂಗ್ಲಾ ವಿರುದ್ಧ ಭಾನುವಾರ ನಡೆದ ಮೊದಲ ಟಿ-20 ಪಂದ್ಯದಲ್ಲಿ ಸೋತಿದ್ದ ಭಾರತ, ಗುರುವಾರ ರಾಜ್‍ಕೋಟ್‍ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಸೇಡು ತೀರಿಸಿಕೊಂಡಿತ್ತು. ಬಾಂಗ್ಲಾ ನೀಡಿದ 154 ರನ್‍ಗಳ ಸಾಧಾರಣ ಮೊತ್ತ ಬೆನ್ನತ್ತಿದ ಭಾರತ ನಾಯಕ ರೋಹಿತ್ ಶರ್ಮಾ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 15.4 ಓವರ್ ಗಳಲ್ಲೇ 154 ರನ್ ಹೊಡೆದು ಜಯಗಳಿಸಿತು.

    ಬಾಂಗ್ಲಾ ವಿರುದ್ಧ ಪಂದ್ಯದಲ್ಲಿ ಎಂಟು ವಿಕೆಟ್‍ಗಳ ಜಯ ಸಾಧಿಸಿದ ಭಾರತ, ಟಿ-20 ಚೇಸಿಂಗ್‍ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಹಿಂದಿಕ್ಕಿ ಹೊಸ ದಾಖಲೆಯನ್ನು ಬರೆದಿದೆ. ಟಿ-20 ಯಲ್ಲಿ ಒಟ್ಟು 69 ಬಾರಿ ಚೇಸಿಂಗ್ ಮಾಡಿರುವ ಆಸಿಸ್ ಅದರಲ್ಲಿ 40 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಆದರೆ 61 ಪಂದ್ಯಗಳಲ್ಲಿ ಚೇಸಿಂಗ್ ಮಾಡಿರುವ ಭಾರತ ಅದರಲ್ಲಿ 41 ಪಂದ್ಯಗಳನ್ನು ಗೆದ್ದು ಹೊಸ ದಾಖಲೆಯನ್ನು ನಿರ್ಮಾಣ ಮಾಡಿದೆ. ಈ ಎರಡು ತಂಡಗಳನ್ನು ಬಿಟ್ಟರೆ ಒಟ್ಟು 67 ಚೇಸಿಂಗ್ ನಲ್ಲಿ ಪಾಕಿಸ್ತಾನ 36 ರಲ್ಲಿ ಗೆಲವು ಸಾಧಿಸಿ ಮೂರನೇ ಸ್ಥಾನ ಪಡೆದಿದೆ.

    ಎರಡನೇ ಪಂದ್ಯದಲ್ಲಿ ಬಾಂಗ್ಲಾ ನೀಡಿದ 154 ರನ್ ಗಳ ಗುರಿಯನ್ನು ಬೆನ್ನಟ್ಟಿದ ಭಾರತ 15.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 154 ರನ್ ಹೊಡೆದು ಜಯಗಳಿಸಿತು. ತನ್ನ 100 ನೇ ಪಂದ್ಯವನ್ನು ಸ್ಮರಣೀಯವಾಗಿಸಿದ ರೋಹಿತ್ ಶರ್ಮಾ ತಾನು ಹಿಟ್ ಮ್ಯಾನ್ ಎನ್ನುವುದನ್ನು ಮತ್ತೊಮ್ಮೆ ತೋರಿಸಿದರು. 23 ಎಸೆತಗಳಲ್ಲಿ ಅರ್ಧ ಶತಕ ಹೊಡೆತ ರೋಹಿತ್ 85 ರನ್ (43 ಎಸೆತ, 6 ಬೌಂಡರಿ, 6 ಸಿಕ್ಸರ್) ಹೊಡೆದು ಶತಕದಿಂದ ವಂಚಿತರಾದರು. ತನ್ನ ಅತ್ಯುತ್ತಮ ಆಟಕ್ಕಾಗಿ ರೋಹಿತ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

    ರೋಹಿತ್ ಬ್ಯಾಟಿಂಗ್ ಆರ್ಭಟ ಹೇಗಿತ್ತು ಅಂದರೆ 5.2 ಓವರ್ ಗಳಲ್ಲಿ 50 ರನ್ ಬಂದರೆ, 9.2 ಓವರ್ ಗಳಲ್ಲಿ ಭಾರತ 100 ರನ್ ಗಳಿಸಿತು. ನಾಯಕನಿಗೆ ಉತ್ತಮ ಸಾಥ್ ನೀಡಿದ ಶಿಖರ್ ಧವನ್ 31 ರನ್ (27 ಎಸೆತ, 4 ಬೌಂಡರಿ) ಹೊಡೆದರು. ಇವರಿಬ್ಬರು ಮೊದಲ ವಿಕೆಟಿಗೆ 11.5 ಓವರ್ ಗಳಲ್ಲಿ 118 ರನ್ ಜೊತೆಯಾಟವಾಡಿ ಭಾರತದ ಗೆಲುವಿಗೆ ಭದ್ರ ಬುನಾದಿ ಹಾಕಿದರು. ಕೊನೆಯಲ್ಲಿ ಕೆ.ಎಲ್. ರಾಹುಲ್ ಔಟಾಗದೇ 8 ರನ್, ಶ್ರೇಯಸ್ ಅಯ್ಯರ್ ಔಟಾಗದೇ 24 ರನ್ (13 ಎಸೆತ, 3 ಬೌಂಡರಿ,1 ಸಿಕ್ಸರ್) ಹೊಡೆದರು. ಕೊನೆಯ ಟಿ 20 ಪಂದ್ಯ ಭಾನುವಾರ ನಾಗ್ಪುರದಲ್ಲಿ ನಡೆಯಲಿದೆ.

  • ಕುಡುಕ ಲಾರಿ ಚಾಲಕನ ಅವಾಂತರ – ಡ್ರೈವರ್ ನನ್ನ ಚೇಸ್ ಮಾಡಿ ಹೊಡೆದ ಸ್ಥಳೀಯರು

    ಕುಡುಕ ಲಾರಿ ಚಾಲಕನ ಅವಾಂತರ – ಡ್ರೈವರ್ ನನ್ನ ಚೇಸ್ ಮಾಡಿ ಹೊಡೆದ ಸ್ಥಳೀಯರು

    ಮೈಸೂರು: ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸುತ್ತಾ ರದ್ಧಾಂತ ಸೃಷ್ಟಿಸಿದ ಲಾರಿ ಚಾಲಕನನ್ನು ಗ್ರಾಮಸ್ಥರು ಚೇಸಿಂಗ್ ಮಾಡಿ ಹಿಡಿದು ಗೂಸಾ ನೀಡಿರುವ ಘಟನೆ ಮೈಸೂರಿನ ನಂಜನಗೂಡು ರಸ್ತೆಯಲ್ಲಿ ನಡೆದಿದೆ.

    ರಾಜಸ್ಥಾನ ಮೂಲದ ಲಾರಿ ಚಾಲಕ ಹಾಗೂ ಕ್ಲೀನರ್ ಈ ಅವಾಂತರ ಮಾಡಿದ್ದಾರೆ. ಮೈಸೂರಿನ ನಂಜನಗೂಡು ರಸ್ತೆಯಲ್ಲಿ ದಾರಿಯುದ್ದಕ್ಕೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ರಾದ್ಧಾಂತ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ.

    ಇವರನ್ನು ನಂಜನಗೂಡು ರಸ್ತೆಯಲ್ಲಿನ ಕಡಕೊಳ ಗ್ರಾಮದ ಟಿವಿಎಸ್ ಕಾರ್ಖಾನೆ ಬಳಿ ಹಿಡಿಯಲಾಗಿದೆ. ಸಿಕ್ಕಿಬಿದ್ದ ಡ್ರೈವರ್ ಮತ್ತು ಕ್ಲೀನರ್ ಗೆ ಸಾರ್ವಜನಿಕರು ಸಖತ್ ಗೂಸಾ ನೀಡಿದ್ದಾರೆ. ಪಾನಮತ್ತರಾಗಿದ್ದ ಇಬ್ಬರನ್ನ ಪೊಲೀಸರ ವಶಕ್ಕೆ ನೀಡಲಾಗಿದೆ.

    ಸುಮಾರು 10 ಕಿ.ಮೀ ವರೆಗೂ ಅಡ್ಡಾದಿಡ್ಡಿ ಲಾರಿ ಓಡಿಸಿದ ಚಾಲಕ, ಅಡ್ಡ ಬಂದ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದಿದ್ದಾನೆ. ಲಾರಿ ಅಡ್ಡಗಟ್ಟಲು ಯತ್ನಿಸಿದವರ ಮೇಲೆ ಕೂಡ ದರ್ಪ ತೋರಿದ್ದಾನೆ.

    https://www.youtube.com/watch?v=5Rr6V-OQ7aM