Tag: ಚೈತ್ರಾ ಆಚಾರ್

  • ರಾಜ್‌ ಬಿ ಶೆಟ್ಟಿ ಜೊತೆ ಕೈಜೋಡಿಸಿದ ನಟಿ- ‘ರೂಪಾಂತರ’ ಚಿತ್ರದಲ್ಲಿ ಚೈತ್ರಾ

    ರಾಜ್‌ ಬಿ ಶೆಟ್ಟಿ ಜೊತೆ ಕೈಜೋಡಿಸಿದ ನಟಿ- ‘ರೂಪಾಂತರ’ ಚಿತ್ರದಲ್ಲಿ ಚೈತ್ರಾ

    ಚಿಟಿ ಚಿಟಿ ಜಿನುಗುವ ಮಳೆಯಲ್ಲಿ ಹಾಡೊಂದನ್ನು ಕೇಳುವುದು ಯಾರಿಗೆ ತಾನೆ ಇಷ್ಟವಿಲ್ಲ. ಇದನ್ನು ಚೆನ್ನಾಗಿ ಅರಿತಂತಿದೆ ‘ರೂಪಾಂತರ’ ಚಿತ್ರತಂಡ. ಹೌದು ‘ಒಂದು ಮೊಟ್ಟೆಯ ಕಥೆ’ಯ ಮೂಲಕ ಚಿತ್ರರಂಗಕ್ಕೆ ಬಂದು ಜನರ ಮೆಚ್ಚುಗೆ ಗಳಿಸಿದ ಅದೇ ಚಿತ್ರತಂಡ ‘ರೂಪಾಂತರ’ (Roopantara Film) ಎನ್ನುವ ಸಿನಿಮಾ ಮಾಡಿ ಬಿಡುಗಡೆಗೆ ಸಿದ್ಧವಾಗಿದ್ದು, ಅದರ ‘ಕಿತ್ತಾಳೆ’ ಎನ್ನುವ ಹಾಡನ್ನು ಬಿಡುಗಡೆಗೊಳಿಸುವ ಮೂಲಕ ಸಿನಿರಸಿಕರ, ಸಂಗೀತ ಆಸ್ವಾದಕರ ಮನವನ್ನು ತಣಿಸಿದೆ.

    ‘ಒಂದು ಮೊಟ್ಟೆಯ ಕಥೆ’ಯ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಾಜ್ ಬಿ ಶೆಟ್ಟಿ ಮತ್ತು ಮಿಧುನ್ ಮುಕುಂದನ್ ಯಶಸ್ವಿ ಜೋಡಿಯಾಗಿ ಅನೇಕ ಹಿಟ್ ಹಾಡುಗಳನ್ನು ಕೊಡುತ್ತಾ ಬಂದಿದ್ದು, ಈಗ ‘ರೂಪಾಂತರ’ ಚಿತ್ರದ ಕಿತ್ತಾಳೆ ಹಾಡನ್ನು ಬಿಡುಗಡೆಗೊಳಿಸುವ ಮೂಲಕ ಮತ್ತೊಮ್ಮೆ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಈ ಹಿಂದೆ ಅನೇಕ ಚಿತ್ರಗಳಿಗೆ ರಾಜ್ ಸಾಹಿತ್ಯ ಬರೆದು ಮಿಧುನ್ ಸಂಗೀತ ನೀಡಿದ್ದರು. ಈ ಹಾಡು ಇಬ್ಬರಿಗೂ ಚಿತ್ರರಂಗದಲ್ಲಿ ಹೊಸ ಗುರುತನ್ನು ನೀಡಲಿದೆ. ಮಿಧುನ್ ಅವರ ಸಂಗೀತಕ್ಕೆ ರಾಜ್ ಅವರ ರಸಭರಿತ ಸಾಹಿತ್ಯ ಸಿಹಿಯಾದ ಕಿತ್ತಾಳೆ ಹಣ್ಣನ್ನು ಸವಿದಂತ ಅನುಭವವನ್ನು ನೀಡುತ್ತಿದೆ ಎಂದು ಅನೇಕ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಗರುಡ ಗಮನ ವೃಷಭ ವಾಹನ, ಮಾದೇವ ಖ್ಯಾತಿಯ ಗಾಯಕಿ ಚೈತ್ರ ಜೆ ಆಚಾರ್ (Chaithra J Achar) ಅವರು ಈ ಹಾಡಿಗೆ ಧ್ವನಿ ನೀಡಿದ್ದು ಇನ್ನೊಂದು ಹೈಲೈಟ್.

    ಮೊನ್ನೆಯಷ್ಟೆ ಫಸ್ಟ್ ಲುಕ್ ಪೋಸ್ಟರ್‌ನ ಮೂಲಕ ಗಮನ ಸೆಳೆದ ಮಿಥಿಲೇಶ್ ಎಡವಲತ್ ಅವರ ಚೊಚ್ಚಲ ಚಿತ್ರ ಇದಾಗಿದ್ದು, ಕನ್ನಡ ಚಿತ್ರರಂಗದಲ್ಲೊಂದು ಹೊಸ ಅಲೆಯನ್ನು ಸೃಷ್ಟಿ ಮಾಡುವ ಎಲ್ಲಾ ಲಕ್ಷಣ ಕಾಣಿಸುತ್ತಿದೆ. ರಾಜ್ ಬಿ ಶೆಟ್ಟಿಯವರು (Raj B Shetty) ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಅಲ್ಲದೆ, ಸಂಭಾಷಣೆಯನ್ನು ಬರೆದಿದ್ದಾರೆ. ಜೊತೆಗೆ ತಮ್ಮ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲ್ಮ್‌ ಮೂಲಕ ತೆರೆಗೂ ತರುತ್ತಿದ್ದಾರೆ. ‘ಒಂದು ಮೊಟ್ಟೆಯ ಕಥೆ’ಯ ನಿರ್ಮಾಪಕರಾದ ಸುಹಾನ್ ಪ್ರಸಾದ್ ಈ ಚಿತ್ರದ ನಿರ್ಮಾಣವನ್ನು ಮಾಡಿದ್ದಾರೆ. ಪ್ರವೀಣ್ ಶ್ರೀಯಾನ್ ಛಾಯಗ್ರಹಣ, ಮಿಧುನ್ ಮುಕುಂದನ್ ಸಂಗೀತವನ್ನೂ ನೀಡುವ ಮೂಲಕ ಈ ಜೋಡಿ ಮತ್ತೊಮ್ಮೆ ಪ್ರೇಕ್ಷಕರನ್ನು ರಂಚಿಸಲು ಹೊರಟಿದೆ.

    ಉಳಿದಂತೆ ಸೋಮಶೇಖರ್ ಬೋಲೇಗಾಂವ್, ಲೇಖಾ ನಾಯ್ಡು, ಹನುಮ್ಮಕ್ಕ, ಭರತ್ ಜಿ.ಬಿ, ಅಂಜನ್ ಭಾರಧ್ವಾಜ್ ಮತ್ತಿರರ ತಾರಗಣ ಚಿತ್ರಕ್ಕಿದೆ. ಸಂಕಲನ ಭುವನೇಶ್ ಮಣಿವಣ್ಣನ್, ನಿರ್ಮಾಣ ವಿನ್ಯಾಸ ಪ್ರವೀಣ್ ಮತ್ತು ಅರ್ಷದ್ ನಾಕ್ಕೋತ್ ಅವರದ್ದಾಗಿದೆ. ಇದನ್ನೂ ಓದಿ:‘ಕಲ್ಕಿ 2898 ಎಡಿ’ ಚಿತ್ರ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಪ್ರಭಾಸ್ ಫ್ಯಾನ್ಸ್

    ಹಾಡು ಲೈಟರ್ ಬುದ್ಧ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ನಲ್ಲಿ ಲಭ್ಯವಿದ್ದು, ಈ ಹೊಸ ಪ್ರಯತ್ನವನ್ನು ಕನ್ನಡಿಗರು ಸ್ವಾಗತಿಸುತ್ತಾರೆ ಎಂಬುದು ಸಂಸ್ಥೆಯ ಕಾರ್ಯಕಾರಿ ನಿರ್ದೇಶಕರಾದ ಬಾಲಕೃಷ್ಣ ಅರ್ವಾಂಕರ್ ಅವರ ಅಭಿಪ್ರಾಯ.

  • ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆ ಕದ್ದ ಚೈತ್ರಾ ಆಚಾರ್

    ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆ ಕದ್ದ ಚೈತ್ರಾ ಆಚಾರ್

    ಸ್ಯಾಂಡಲ್‌ವುಡ್ ನಟಿ ಚೈತ್ರಾ ಆಚಾರ್ (Chaithra Achar) ಮಾದಕ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ಸೆಕ್ಸಿ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸದ್ಯ ‘ಟೋಬಿ’ (Toby) ನಟಿಯ ಸ್ಟೈಲೀಶ್ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ. ಇದನ್ನೂ ಓದಿ:ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ

    ದಿನದಿಂದ ದಿನಕ್ಕೆ ನಟಿ ಮತ್ತಷ್ಟು ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸುವ ಮೂಲಕ ಕೆಲವರ ಕೆಂಗಣ್ಣಿಗೆ ಗುರಿಯಾದ್ರೆ, ಇತ್ತ ಪಡ್ಡೆಹುಡುಗರ ಕನಸಿನ ಕಣ್ಮಣಿಯಾಗಿ ಗಟ್ಟಿ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

    ಇದೀಗ ವೈಟ್ ಮತ್ತು ಪಿಂಕ್ ಬಣ್ಣದ ಗೌನ್ ಧರಿಸಿ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಹಂಚಿಕೊಂಡಿರುವ ಕೆಲ ಫೋಟೋಗಳು ಬ್ಯಾಕ್‌ಲೆಸ್ ಆಗಿದೆ. ವಿವಿಧ ಭಂಗಿಯಲ್ಲಿ ಮಾದಕ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

    ‘ಟೋಬಿ’ ನಟಿ ಚೈತ್ರಾ ಅದ್ಭುತ ಕಲಾವಿದೆ ಎಂಬುದನ್ನು ಇತ್ತೀಚಿನ ಸಿನಿಮಾಗಳಲ್ಲಿ ಪ್ರೂವ್ ಮಾಡಿದ್ದಾರೆ. ಇದೀಗ ತಮಿಳಿನಿಂದಲೂ (Tamil Films) ನಟಿಗೆ ಬುಲಾವ್ ಸಿಕ್ಕಿದೆ.

    ‘ಸಪ್ತಸಾಗರದಾಚೆ ಎಲ್ಲೋ’, ಟೋಬಿ ಸಿನಿಮಾದಲ್ಲಿ ನಟಿಸಿದ ಮೇಲೆ ಚೈತ್ರಾ ಆಚಾರ್‌ಗೆ ಬೇಡಿಕೆ ಜಾಸ್ತಿಯಾಗಿದೆ. ರಕ್ಷಿತ್‌ ಶೆಟ್ಟಿ ಮತ್ತು ರಾಜ್‌ ಬಿ ಶೆಟ್ಟಿಗೆ ನಾಯಕಿಯಾಗಿ ಅದ್ಭುತವಾಗಿ ನಟಿಸಿದರು. ಇದನ್ನೂ ಓದಿ:ಮತ್ತೆ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ‘ಸೀತಾರಾಮಂ’ ಜೋಡಿ

    ಸದ್ಯ ಚೈತ್ರಾ ಆಚಾರ್ ಕೈಯಲ್ಲಿ ಹ್ಯಾಪಿ ಬರ್ತ್‌ಡೇ ಟು ಮಿ, ಸೇರಿದಂತೆ ಕನ್ನಡ ಮತ್ತು ತಮಿಳು ಸಿನಿಮಾಗಳಿವೆ. ಮಲಯಾಳಂ, ತೆಲುಗಿನಲ್ಲಿಯೂ ಹೊಸ ಸಿನಿಮಾ ಕೇಳ್ತಿದ್ದಾರೆ.

  • ತಮಿಳಿನಲ್ಲಿ ಬಿಗ್‌ ಚಾನ್ಸ್‌ ಗಿಟ್ಟಿಸಿಕೊಂಡ ಕನ್ನಡದ ಆಲಿಯಾ ಭಟ್

    ತಮಿಳಿನಲ್ಲಿ ಬಿಗ್‌ ಚಾನ್ಸ್‌ ಗಿಟ್ಟಿಸಿಕೊಂಡ ಕನ್ನಡದ ಆಲಿಯಾ ಭಟ್

    ನ್ನಡದ ಆಲಿಯಾ ಭಟ್ (Alia Bhatt) ಎಂದೇ ಕರೆಯಲಾಗುವ ‘ಟೋಬಿ’ (Toby)  ನಟಿ ಚೈತ್ರಾ ಆಚಾರ್ (Chaithra Achar) ಇದೀಗ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಕನ್ನಡದ ಜೊತೆ ತಮಿಳಿನಲ್ಲಿಯೂ ನಟಿಸುವ ಅವಕಾಶವನ್ನು ಚೈತ್ರಾ ಗಿಟ್ಟಿಸಿಕೊಂಡಿದ್ದಾರೆ.

    ರಾಜ್ ಬಿ ಶೆಟ್ಟಿ ಜೊತೆ ‘ಟೋಬಿ’, ರಕ್ಷಿತ್ ಶೆಟ್ಟಿ ಜೊತೆ ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾ ರಿಲೀಸ್ ಬಳಿಕ ಚೈತ್ರಾ ಅಭಿನಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಅವರಿಗೆ ಉತ್ತಮ ಅವಕಾಶಗಳು ಅರಸಿ ಬರುತ್ತಿವೆ. ತಮಿಳಿನಲ್ಲಿ 2 ಸಿನಿಮಾಗಳನ್ನು ಚೈತ್ರಾ ಒಪ್ಪಿಕೊಂಡಿದ್ದಾರೆ. ಸಿನಿಮಾ ಕೆಲಸ ಕೂಡ ನಡೆಯುತ್ತಿದೆ. ಇದನ್ನೂ ಓದಿ:ಪವನ್‌ ಕಲ್ಯಾಣ್‌ ಜೊತೆಗಿನ ಫೋಟೋ ಶೇರ್‌ ಮಾಡಿ ಸಂಭ್ರಮಿಸಿದ ರಾಮ್‌ ಚರಣ್‌ ಪತ್ನಿ

    ಯಾವ ಪ್ರಾಜೆಕ್ಟ್? ಯಾರಿಗೆ ನಾಯಕಿಯಾಗಿ ತಮಿಳಿಗೆ (Tamil Films) ಕಾಲಿಡುತ್ತಿದ್ದಾರೆ ಎಂಬುದು ರಿವೀಲ್ ಆಗಿಲ್ಲ. ನಿರ್ಮಾಣ ಸಂಸ್ಥೆ ಅಧಿಕೃತವಾಗಿ ತಿಳಿಸುವವರೆಗೂ ಕಾಯಬೇಕಿದೆ. ಇದನ್ನೂ ಓದಿ:ಡಿವೋರ್ಸ್‌ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

    ಈಗಾಗಲೇ ಕನ್ನಡದ ಸಿನಿಮಾಗಳಿಂದ ರಮ್ಯಾ, ರಶ್ಮಿಕಾ ಮಂದಣ್ಣ, ರುಕ್ಮಿಣಿ ವಸಂತ್‌, ಆಶಿಕಾ ರಂಗನಾಥ್‌ ಬಳಿಕ ಚೈತ್ರಾ ಕೂಡ ತಮಿಳಿನಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಕಾಲಿವುಡ್‌ನಲ್ಲಿ ಗೆಲ್ತಾರಾ ನಟಿ ಎಂದು ಕಾದುನೋಡಬೇಕಿದೆ.

    ಇನ್ನೂ ಕನ್ನಡದ ಹ್ಯಾಪಿ ಬರ್ತ್‌ಡೇ ಟು ಮಿ, ಉತ್ತರಕಾಂಡ ಸೇರಿದಂತೆ ಹಲವು ಸಿನಿಮಾಗಳು ಚೈತ್ರಾ ಕೈಯಲ್ಲಿವೆ.

  • ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ ಚೈತ್ರಾ ಆಚಾರ್ ನಟನೆಯ ಸಿನಿಮಾ

    ನೇರವಾಗಿ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ ಚೈತ್ರಾ ಆಚಾರ್ ನಟನೆಯ ಸಿನಿಮಾ

    ‘ಟೋಬಿ’, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ಮೂಲಕ ಮನಗೆದ್ದ ನಟಿ ಚೈತ್ರಾ ಆಚಾರ್ (Chaithra Achar) ನಟನೆಯ ಹೊಸ ಸಿನಿಮಾವೊಂದು ನೇರವಾಗಿ ಒಟಿಟಿ ಫ್ಲಾರ್ಟ್ ಫಾರಂನಲ್ಲಿ ರಿಲೀಸ್ ಆಗುತ್ತಿದೆ. ಡಿಫರೆಂಟ್ ಅವತಾರದಲ್ಲಿ ಬೋಲ್ಡ್ ಬೆಡಗಿ ಚೈತ್ರಾ ಕಾಣಿಸಿಕೊಳ್ತಿದ್ದಾರೆ. ಒಟಿಟಿಯಲ್ಲಿ ಡೇಟ್ ಕೂಡ ಫಿಕ್ಸ್ ಆಗಿದೆ. ಇದನ್ನೂ ಓದಿ:ಬ್ರೇಕಪ್ ಬಳಿಕ ಜೀವನ ಹೇಗಿದೆ ಎಂದು ಹಾಡಿದ ಶ್ರುತಿ ಹಾಸನ್

    ‘ಹ್ಯಾಪಿ ಬರ್ತ್‌ಡೇ ಟು ಮಿ’ (Happy Birthday To Me) ಎಂಬ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಟೋಬಿ ನಟಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಸ್ಕೂಲ್ ಹುಡುಗಿಯಂತೆ ಕಾಣಿಸಿಕೊಂಡಿದ್ದಾರೆ. ಚೈತ್ರಾ ಪಾತ್ರದ ಸುತ್ತ ಹಲವು ಪಾತ್ರಗಳಿವೆ. ಅದು ಪೋಸ್ಟರ್‌ನಲ್ಲಿ ಹೈಲೆಟ್ ಆಗಿದೆ. ಇದೇ ಜೂನ್ 28ರಂದು ಒಟಿಟಿಯಲ್ಲಿ ಸಿನಿಮಾ ಬಿಡುಗಡೆಯಾಗಲಿದೆ.

     

    View this post on Instagram

     

    A post shared by Chaithra J Achar (@chaithra.j.achar)


    ಅಂದಹಾಗೆ, ಈ ಸಿನಿಮಾದಲ್ಲಿ ಸಿದ್ದು ಮೂಲಿಮನಿ, ಅರ್ಚನಾ ಕೊಟ್ಟಿಗೆ, ರಚನಾ ರೈ, ಗೋಪಾಲ ದೇಶಪಾಂಡೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದನ್ನೂ ಓದಿ:ಪ್ರಿನ್ಸ್ ಫ್ಯಾನ್ಸ್‌ಗೆ ಸಿಹಿಸುದ್ದಿ- ರಾಜಮೌಳಿ ಜೊತೆಗಿನ ಮಹೇಶ್ ಬಾಬು ಚಿತ್ರಕ್ಕೆ ಮುಹೂರ್ತ ಫಿಕ್ಸ್

    ಇನ್ನೂ ಕನ್ನಡದ ಸಿನಿಮಾ ಜೊತೆಗೆ ತಮಿಳಿನಲ್ಲಿ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ನಿರ್ಮಾಣ ಸಂಸ್ಥೆಯ ಅಧಿಕೃತ ಘೋಷಣೆಗೆ ನಟಿ ಕಾಯ್ತಿದ್ದಾರೆ.

  • ಮತದಾನ ಮಾಡಿದ ಸ್ಯಾಂಡಲ್‌ವುಡ್ ನಟಿಮಣಿಯರು

    ಮತದಾನ ಮಾಡಿದ ಸ್ಯಾಂಡಲ್‌ವುಡ್ ನಟಿಮಣಿಯರು

    ಲೋಕಸಭಾ ಚುನಾವಣೆಯ ಮತದಾನ (Lok Sabha Elections 202) ಪ್ರಕ್ರಿಯೆಯಲ್ಲಿ ಸ್ಯಾಂಡಲ್‌ವುಡ್ ನಾಯಕಿಯರು (Sandalwood Actress) ಭಾಗಿಯಾಗಿ ವೋಟ್ ಮಾಡಿದ್ದಾರೆ. ತಪ್ಪದೇ ವೋಟ್ ಮಾಡಿ ಎಂದು ಮತದಾರರಿಗೆ ಸಂದೇಶ ಕೂಡ ನೀಡಿದ್ದಾರೆ.

    ‘ಕಾಂತಾರ’ (Kantara) ನಟಿ ಸಪ್ತಮಿ ಗೌಡ (Sapthami Gowda) ಮತದಾನ ಮಾಡಿ ಎಂದು ಮತದಾರರಿಗೆ ಕರೆ ನೀಡಿದ್ದಾರೆ. ಜೆಪಿ ನಗರದಲ್ಲಿ ನಟಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಕುಟುಂಬ ಸಮೇತ ಬಂದು ಮತದಾನ ಮಾಡಿದ ಡಾಲಿ ಧನಂಜಯ್

    ‘ಟೋಬಿ’ ನಟಿ ಚೈತ್ರಾ ಆಚಾರ್ (Chaithra Achar) ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ವೋಟ್ ಮಾಡಿದ್ದಾರೆ. ನಾನು ಮತದಾನ ಮಾಡಿದೆ. ನೀವು ಮಾಡಿದ್ರಾ? ಎಂದು ನಟಿ ಸಾಮಾಜಿಕ ಜಾಲತಾಣದಲ್ಲಿ ಕೇಳಿದ್ದಾರೆ.

    ಹಿರಿಯ ನಟಿ ಭಾರತಿ ವಿಷ್ಣುವರ್ಧನ್ (Bharathi Vishnuvardhan) ಜಯನಗರದಲ್ಲಿ ಮತದಾನ ಮಾಡುವ ಮೂಲಕ ಮತದಾರರಿಗೆ ತಪ್ಪದೇ ವೋಟ್ ಮಾಡಿ ಎಂದು ಕರೆ ನೀಡಿದ್ದಾರೆ. ಮತದಾನ ನಮ್ಮೆಲ್ಲರ ಹಕ್ಕು. ಮತದಾನ ಮಾಡುವುದರಿಂದ ತಪ್ಪಿಸಿಕೊಳ್ಳಬೇಡಿ. ಯೋಚಿಸಿ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ. ಮತಕ್ಕೆ ತುಂಬಾ ಬೆಲೆ ಇದೆ. ಅದನ್ನು ವ್ಯರ್ಥ ಮಾಡಬೇಡಿ ಎಂದು ನಟಿ ಮನವಿ ಮಾಡಿದ್ದಾರೆ.

    ನಟಿ ಕಾರುಣ್ಯ ರಾಮ್ (Actress Karunya Ram) ಮತದಾನ ಮಾಡಿ ಬಂದಿದ್ದಾರೆ. ವೋಟರ್ ಐಡಿ ತೋರಿಸಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ.

    ಪಂಚರಂಗಿ ನಟಿ ನಿಧಿ ಸುಬ್ಬಯ್ಯ ತಮ್ಮ ಕುಟುಂಬದ ಜೊತೆ ಮತದಾನ ಮಾಡಿ ಕ್ಯಾಮೆರಾಗೆ ಮುದ್ದಾಗಿ ನಗು ಬೀರಿದ್ದಾರೆ. ತುಪ್ಪದ ಬೆಡಗಿ ರಾಗಿಣಿ ಯಲಹಂಕದ ಜುಡಿಷಿಯಲ್‌ ಲೇಔಟ್‌ನಲ್ಲಿ ಮತದಾನ ಮಾಡಿದ್ದಾರೆ. ಇದನ್ನೂ ಓದಿ:ಮದುವೆ ಗೌನ್‍ ಕತ್ತರಿಸಿದ ನಟಿ ಸಮಂತಾ

    ‘ಬಿಗ್ ಬಾಸ್’ (Bigg Boss Kannada) ಬೆಡಗಿ ನಮ್ರತಾ ಗೌಡ (Namratha Gowda) ತಮ್ಮ ಕುಟುಂಬದ ಜೊತೆ ಆಗಮಿಸಿ ಬಸವೇಶ್ವರ ನಗರದ ವಾಣಿ ಪಬ್ಲಿಕ್ ಸ್ಕೂಲ್‌ನಲ್ಲಿ ಮತದಾನ ಮಾಡಿದ್ದು, ಅಭಿಮಾನಿಗಳಿಗೆ ಎಲ್ಲರೂ ವೋಟ್ ಮಾಡುವಂತೆ ಮನವಿ ಮಾಡಿದ್ದಾರೆ.

    ನಟಿ ಕಮ್ ನಿರೂಪಕಿ ಶ್ವೇತಾ ಚಂಗಪ್ಪ, ಶ್ವೇತಾ ಶ್ರೀವಾಸ್ತವ್, ರಾಧಿಕಾ ಚೇತನ್, ತೇಜಸ್ವಿನಿ ಶರ್ಮಾ ವೋಟ್ ಮಾಡಿದ್ದು, ಅಭಿಮಾನಿಗಳಿಗೆ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.

  • ‘ಉತ್ತರಕಾಂಡ’ ಚಿತ್ರದಲ್ಲಿ ಲಚ್ಚಿ ಪಾತ್ರ ಬಣ್ಣಿಸಿದ ಚೈತ್ರಾ ಆಚಾರ್

    ‘ಉತ್ತರಕಾಂಡ’ ಚಿತ್ರದಲ್ಲಿ ಲಚ್ಚಿ ಪಾತ್ರ ಬಣ್ಣಿಸಿದ ಚೈತ್ರಾ ಆಚಾರ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar), ಡಾಲಿ ನಟನೆಯ ‘ಉತ್ತರಕಾಂಡ’ ಸಿನಿಮಾದಲ್ಲಿ ‘ಟೋಬಿ’ (Toby Film) ನಟಿ ಎಂಟ್ರಿ ಕೊಟ್ಟಿದ್ದಾರೆ. ‘ಲಚ್ಚಿ’ ಪಾತ್ರಕ್ಕೆ ಚೈತ್ರಾ ಆಚಾರ್ (Chaithra Achar) ಬಣ್ಣ ಹಚ್ಚಲಿದ್ದಾರೆ. ಹಾಗಾದ್ರೆ ಚಿತ್ರದಲ್ಲಿ ಚೈತ್ರಾ ಪಾತ್ರ ಹೇಗಿದೆ? ಎಂಬುದನ್ನು ನಟಿ ಪಬ್ಲಿಕ್ ಟಿವಿ ಡಿಜಿಟಲ್‌ಗೆ ನಟಿ ವಿವರಿಸಿದ್ದಾರೆ.

    ಉತ್ತರ ಕರ್ನಾಟಕದ ಬಿಜಾಪುರದಲ್ಲಿ ವಾಸಿಸುತ್ತಿರುವ ಹೆಣ್ಣು ಮಗಳು. ನಾನು ಇದುವರೆಗೂ ಮಾಡಿರುವ ಪಾತ್ರಕ್ಕಿಂತ ಇದು ವಿಭಿನ್ನವಾಗಿದೆ. ನೈಜತೆಗೆ ಲಚ್ಚಿ ಪಾತ್ರ ಹತ್ತಿರವಿದೆ. ಜೀವನದಲ್ಲಿ ತುಂಬಾ ಆಸೆ ಇರುವಂತಹ ಹುಡುಗಿ, ಹೀಗೆ ಬದುಕಬೇಕೆಂದು ಆಸೆಗಳಿರುತ್ತದೆ. ತುಂಬಾ ಸೆನ್ಸಿಟಿವ್ ಆಗಿರುವ ಪಾತ್ರ ಇದಾಗಿದ್ದು, ಅದ್ಭುತವಾಗಿದೆ ಎಂದಿದ್ದಾರೆ ಚೈತ್ರಾ ಆಚಾರ್. ಇದನ್ನೂ ಓದಿ:ಶ್ರೀಲೀಲಾ ಕೈಬಿಟ್ಟ ಚಿತ್ರಕ್ಕೆ ರಾಶಿ ಖನ್ನಾ ಎಂಟ್ರಿ

    ಮದುವೆಯಾಗಿರುವ ಯಂಗ್ ಹುಡುಗಿಯ ಪಾತ್ರವಾಗಿದ್ದು, ಚಿತ್ರತಂಡದ ಜೊತೆ ಕೈಜೋಡಿಸಿರುವುದಕ್ಕೆ ಖುಷಿಯಿದೆ ಎಂದಿದ್ದಾರೆ. ತಮ್ಮ ಪಾತ್ರಕ್ಕಾಗಿ ಸಕಲ ತಯಾರಿ ಮಾಡಿಕೊಂಡಿರುವುದಾಗಿ ನಟಿ ತಿಳಿಸಿದ್ದಾರೆ. ಇದನ್ನೂ ಓದಿ:ಮಾಲಿವುಡ್ ನಟ ಮೋಹನ್‌ಲಾಲ್‌ರನ್ನು ಭೇಟಿಯಾದ ರಿಷಬ್ ಶೆಟ್ಟಿ

    ಚೈತ್ರ ಆಚಾರ್ ‘ಉತ್ತರಕಾಂಡ’ (Uttarakanda Film) ತಾರಾಬಳಗಕ್ಕೆ ಸೇರ್ಪಡೆ ಆಗಿದ್ದು, ಈಗಾಲೇ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ‘ಉತ್ತರಕಾಂಡ’ ಒಂದು ಆ್ಯಕ್ಷನ್ ಡ್ರಾಮಾ ಚಿತ್ರವಾಗಿದ್ದು, ಈ ಚಿತ್ರವನ್ನು ರೋಹಿತ್ ಪದಕಿ ನಿರ್ದೇಶಿಸಲಿದ್ದಾರೆ. ಕಾರ್ತಿಕ್ ಗೌಡ- ಯೋಗಿ ಜಿ.ರಾಜ್ ಕೆಆರ್‌ಜಿ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಿದ್ದಾರೆ.

    ಅಂದಹಾಗೆ, ಟೋಬಿ, ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ, ಗಿಲ್ಕಿ, ಆ ದೃಶ್ಯ, ತಲೆದಂಡ, ಬ್ಲಿಂಕ್ ಸಿನಿಮಾಗಳ ಮೂಲಕ ಚೈತ್ರಾ ಆಚಾರ್ ಮನಗೆದ್ದಿದ್ದಾರೆ. ಗಾಯನದ ಮೂಲಕ ಕೂಡ ಸೈ ಎನಿಸಿಕೊಂಡಿದ್ದಾರೆ. ಉತ್ತರಕಾಂಡ ಚಿತ್ರದ ಅಪ್‌ಡೇಟ್ ಕೇಳಿ ಅಭಿಮಾನಿಗಳು ಸಿನಿಮಾಗಾಗಿ ಎದುರು ನೋಡ್ತಿದ್ದಾರೆ.

  • ಕಿಶನ್, ಚೈತ್ರಾ ಆಚಾರ್ ಶೃಂಗಾರ ದೃಶ್ಯ ಕಾವ್ಯ

    ಕಿಶನ್, ಚೈತ್ರಾ ಆಚಾರ್ ಶೃಂಗಾರ ದೃಶ್ಯ ಕಾವ್ಯ

    ಸ್ಯಾಂಡಲ್‌ವುಡ್ ‘ಟೋಬಿ’ ಸುಂದರಿ ಚೈತ್ರಾ ಆಚಾರ್ (Chaithra Achar) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಮೋಡಿ ಮಾಡುತ್ತಲೇ ಇರುತ್ತಾರೆ. ಇದೀಗ ಚೈತ್ರಾ ಆಚಾರ್, ಅಂತಃಪುರದ ರಾಣಿಯಾಗಿ ಕಂಗೊಳಿಸಿದಲ್ಲದೇ ಹೀರೋ ಕಿಶನ್ ಬಿಳಗಲಿ (Kishen Bilagali) ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಇಬ್ಬರ ಡ್ಯುಯೇಟ್‌ ಸಾಂಗ್‌ ವೈರಲ್‌ ಆಗಿದೆ.

    ಟೋಬಿ ನಟಿ ಆಗಾಗ ಹೊಸ ಪರಿಕಲ್ಪನೆಯ ಫೋಟೋಶೂಟ್ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಾರೆ. ಮತ್ತೆ ಗಾಯಕಿಯಾಗಿಯೂ ಗುರುತಿಸಿಕೊಂಡಿರುವ ಚೈತ್ರಾ, ಇದೀಗ ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಚೈತ್ರಾ ಬ್ಯೂಟಿಗೆ ಮತ್ತು ಡ್ಯಾನ್ಸ್‌ಗೆ ಡ್ಯಾನ್ಸರ್ ಕಿಶನ್ ಪಾಗಲ್ ಆಗಿದ್ದಾರೆ.‌ ಇದನ್ನೂ ಓದಿ:ಮೃಣಾಲ್ ಬ್ಯೂಟಿ ಬಗ್ಗೆ ಬಣ್ಣಿಸಿದ ವಿಜಯ್ ದೇವರಕೊಂಡ

    ರಣ್‌ಬೀರ್ ಕಪೂರ್ (Ranbir Kapoor), ತೃಪ್ತಿ ದಿಮ್ರಿ (Tripti Dimri) ನಟನೆಯ ‘ಅನಿಮಲ್’ (Animal) ಚಿತ್ರದ ಹಾಡಿಗೆ ರೊಮ್ಯಾಂಟಿಕ್ ಇಬ್ಬರೂ ಡ್ಯಾನ್ಸ್ ಮಾಡಿದ್ದಾರೆ. ಶೃಂಗಾರದ ಹಲವು ಸ್ಟೇಪ್ಸ್ ಹಾಕುವ ಮೂಲಕ ಈ ಜೋಡಿ ನೋಡುಗರ ಗಮನ ಸೆಳೆದಿದೆ. ಬಿಳಿ ಬಣ್ಣದ ಉಡುಗೆಯಲ್ಲಿ ಇಬ್ಬರೂ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಆಕರ್ಷಕವಾಗಿ ಹೆಜ್ಜೆ ಹಾಕುವ ಮೂಲಕ ಕಿಶನ್ ಮತ್ತು ಚೈತ್ರಾ ಸೈ ಎನಿಸಿಕೊಂಡಿದ್ದಾರೆ.

    ಈ ವಿಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಪಡೆದುಕೊಂಡಿದೆ. ಇಬ್ಬರ ಜೋಡಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ರಿಯಲ್ ಹಾಡನ್ನೇ ಮೀರಿಸುವಂತಿದೆ ಎಂದು ಫ್ಯಾನ್ಸ್ ಹಾಡಿ ಹೊಗಳಿದ್ದಾರೆ.

    ನಟಿ ಚೈತ್ರಾ ಆಚಾರ್ ಇತ್ತೀಚೆಗೆ ನಟಿಸಿದ ‘ಟೋಬಿ’ (Toby Film) ಸಿನಿಮಾ ಮತ್ತು ‘ಸಪ್ತಸಾಗರದಾಚೆ ಎಲ್ಲೋ ಸೈಡ್ ಬಿ’ ಎಲ್ಲರ ಗಮನ ಸೆಳೆದಿತ್ತು. ಕನ್ನಡದ ಹಲವು ಸಿನಿಮಾಗಳಲ್ಲಿ ರಕ್ಷಿತ್ ಶೆಟ್ಟಿ ನಾಯಕಿ ಬ್ಯುಸಿಯಾಗಿದ್ದಾರೆ.

  • ಚೈತ್ರಾ ಆಚಾರ್ ಗೆ  ಬೆಸ್ಟ್ ಗಿಫ್ಟ್ ಅಂದರೆ ರುಕ್ಮಿಣಿ ವಸಂತ್

    ಚೈತ್ರಾ ಆಚಾರ್ ಗೆ ಬೆಸ್ಟ್ ಗಿಫ್ಟ್ ಅಂದರೆ ರುಕ್ಮಿಣಿ ವಸಂತ್

    ಪ್ತ ಸಾಗರದಾಚೆ ಎಲ್ಲೋ  ಸಿನಿಮಾದಲ್ಲಿ ಒಟ್ಟಾಗಿ ನಟಿಸಿದವರು ಚೈತ್ರಾ ಆಚಾರ್ (Chaitra Achar) ಮತ್ತು ರುಕ್ಮಿಣಿ ವಸಂತ್ (Rukmini Vasant). ಈ ಜೋಡಿಯು ಚಿತ್ರದಲ್ಲಿ ಸಖತ್ ಮೋಡಿ ಮಾಡಿತ್ತು. ಅಲ್ಲಿಂದ ಈ ಜೋಡಿ ಸದಾ ಜೊತೆಯಾಗಿಯೇ ಇರುತ್ತದೆ. ಒಬ್ಬರಿಗೊಬ್ಬರ ಸಿನಿಮಾಗಳನ್ನು ಪ್ರಮೋಟ್ ಮಾಡ್ತಾ, ಇತರರ ಚಿತ್ರಗಳಿಗೂ ಪ್ರೋತ್ಸಾಹ ನೀಡುತ್ತಾ ತಮ್ಮ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಮೊನ್ನೆಯಷ್ಟೇ ರುಕ್ಮಿಣಿ ವಸಂತ್ ಜೊತೆಗಿರುವ ಫೋಟೋವೊಂದನ್ನು ಚೈತ್ರಾ ಆಚಾರ್ ಪೋಸ್ಟ್ ಮಾಡಿ, ನನ್ನ ಜೀವನದಲ್ಲಿ ಸಿಕ್ಕಿ ಬೆಸ್ಟ್ ಗಿಫ್ಟ್ ಅಂದರೆ ಅದು ರುಕ್ಮಿಣಿ ವಸಂತ್ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ರುಕ್ಮಿಣಿ ಅವರಿಗೆ ತಮ್ಮ ಜೀವನದಲ್ಲಿ ಯಾವ ರೀತಿಯ ಮಹತ್ವವನ್ನು ನೀಡಲಾಗಿದೆ ಎನ್ನುವುದನ್ನು ಸಾರಿದ್ದಾರೆ.

    ಚೈತ್ರಾ ಆಚಾರ್ ಅವರು ಹೊಸ ಹೊಸ ಪಾತ್ರಗಳಿಗೆ ಕಾದು ಕೂತಿದ್ದರೆ, ರುಕ್ಮಿಣಿ ವಸಂತ್ ಈಗಾಗಲೇ ರಾಜ್ಯದ ಗಡಿದಾಟಿ ಬೇರೆ ಚಿತ್ರರಂಗಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈಗಾಗಲೇ ತಮಿಳು ಸಿನಿಮಾವೊಂದರ ಶೂಟಿಂಗ್ ನಲ್ಲೂ ಅವರು ಭಾಗಿಯಾಗಿದ್ದಾರೆ.

  • ಗಣರಾಜ್ಯೋತ್ಸವ ದಿನದಂದು ನಟ ದೀಕ್ಷಿತ್ ಶೆಟ್ಟಿ ಸಂಕಲ್ಪ

    ಗಣರಾಜ್ಯೋತ್ಸವ ದಿನದಂದು ನಟ ದೀಕ್ಷಿತ್ ಶೆಟ್ಟಿ ಸಂಕಲ್ಪ

    ದೀಕ್ಷಿತ್ ಶೆಟ್ಟಿ (Dixit Shetty) ಹಾಗೂ ಚೈತ್ರ ಆಚಾರ್‍ (Chaitra Achar) ಮುಖ್ಯಭೂಮಿಯಲ್ಲಿ ನಟಿಸಿರುವ ‘ಬ್ಲಿಂಕ್’ (Blink) ಚಿತ್ರತಂಡ, ಚಿತ್ರೀಕರಣದ ದಿನದಿಂದಲೂ ತಮ್ಮ ವಿನೂತನ ಪ್ರಚಾರ ತಂತ್ರಗಳಿಂದ ಚಂದನವನದಲ್ಲಿ ಗಮನ ಸೆಳೆದಿದೆ. ತಮ್ಮ ಚಿತ್ರವನ್ನು ಜನರಿಗೆ ಮುಟ್ಟಿಸುವಲ್ಲಿ ಗೆಲ್ಲಲೇಬೇಕು ಎಂದು ಶಪಥ ಮಾಡಿರುವ ಈ ತಂಡ ಯಾವುದೇ ಮುಚ್ಚು ಮರೆ ಇಲ್ಲದೆ , ನೂತನ ಚಿತ್ರಗಳನ್ನು ಕಟ್ಟುವಲ್ಲಿ , ಜನರಿಗೆ ತಲುಪಿಸುವಲ್ಲಿ ಇರುವ ಸಮಸ್ಯೆಗಳನ್ನು ತಿಳಿಸಲು ವಿನೂತನ ಪ್ರಯೋಗ ಮಾಡಿದ್ದು ‘ಜನರಿಂದಲೇ ಸಿನಿಮಾ, ಜನರೇ ಸಿನಿಮಾ’ ಎಂಬಾ ವಿಶಿಷ್ಟ ಸಾಲುಗಳು ಜನರ ಮನಸ್ಸನ್ನು ಗೆಲ್ಲುತ್ತಿವೆ. ಚಿತ್ರಮಂದಿರದಿಂದ ದೂರ ಉಳಿದಿರುವ ಜನರಿಗೆ, ಮತ್ತೆ ಚಿತ್ರಮಂದಿರದ ಆ ಮಾಂತ್ರಿಕ ಜಗತ್ತಿನ ವಿಶೇಷತೆಯನ್ನು ಮನಮುಟ್ಟುವಂತೆ ನಿರೂಪಿಸಿದ್ದಾರೆ.

    ಈಗಾಗಲೇ ತಮ್ಮ ಹೊಸತನದಿಂದ ಜನರ ಗಮನಸೆಳೆದಿರುವ ಬ್ಲಿಂಕ್ ತಂಡವು ಮಾರ್ಚ್ ನಲ್ಲಿ ಚಿತ್ರಮಂದಿರದೊಳಗೆ ಪ್ರವೇಶಿಸಲು ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಜನನಿ ಪಿಕ್ಚರ್ಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರವು ಸೈಫೈ ಪ್ರಕಾರದ ಚಿತ್ರವಾಗಿದ್ದು ಪ್ರೇಕ್ಷಕರನ್ನು ಸೆಳಿದಿಟ್ಟುಕೊಳ್ಳುವುದು ಖಂಡಿತವೆಂದು ನಿರ್ಮಾಪಕ ರವಿಚಂದ್ರ ಎ ಜೆ ಹೇಳುತ್ತಾರೆ .

    ತಮ್ಮ ಚೊಚ್ಚಲ ನಿರ್ದೇಶನದಲ್ಲೇ ಚಿತ್ರದ ಟೀಸರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸನ್ನು ಗೆದ್ದಿರುವ ನಿರ್ದೇಶಕ ಶ್ರೀನಿಧಿ ಬೆಂಗಳೂರುರವರು, ಇದೊಂದು ಕಾಲ್ಪನಿಕ ಕಥೆಯಾಗಿದ್ದು ..ಕನ್ನಡ ಚಿತ್ರರಂಗದಲ್ಲಿ ಈ ಪ್ರಕಾರದ ಚಿತ್ರಗಳು ತೀರಾ ಕಡಿಮೆ ತೆರೆಕಂಡಿದ್ದು  ಈ ಚಿತ್ರವು ನೋಡುಗರಲ್ಲಿ ಹೊಸತನ ಮೂಡಿಸುತ್ತದೆ ಎಂದು ನಿರ್ದೇಶಕ ಶ್ರೀನಿಧಿ ಬೆಂಗಳೂರು ಹೇಳುತ್ತಾರೆ ದಿಯಾ, ದಸರಾ ಖ್ಯಾತಿಯ ನಟ ದೀಕ್ಷಿತ್ ಶೆಟ್ಟಿಯವರು ನಾಯಕ ನಟನ ಜವಬ್ದಾರಿಯನ್ನು ಹೊತ್ತಿದ್ದಾರೆ.. ಹಾಗೂ ಹೊಸ ದಿನಚರಿ ಖ್ಯಾತಿಯ ಮಂದಾರ ಬಟ್ಟಲಹಳ್ಳಿ ನಾಯಕಿನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

     

    ಇತ್ತೀಚಿಗೆ ತೆರೆಕಂಡ ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ 2 ಚಿತ್ರದ ಸುರಭಿ ಪಾತ್ರಧಾರಿ ಚೈತ್ರ ಜೆ ಆಚಾರ್ ಬ್ಲಿಂಕ್ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ ಹಾಗೂ ವಜ್ರಧೀರ್ ಜೈನ್, ಗೋಪಾಲಕೃಷ್ಣ ದೇಶಪಾಂಡೆ, ಕಿರಣ್ ನಾಯ್ಕ್, ಮುರುಳಿ ಶೃಂಗೇರಿ, ಸುರೇಶ್ ಅನಗಹಳ್ಳಿ ಸೇರಿದಂತೆ ಇನ್ನು ದೊಡ್ಡ ತಾರಬಳಗವಿದೆ. ಈ ಚಿತ್ರಕ್ಕೆ ಪ್ರಸನ್ನ ಕುಮಾರ್ ಎಂ ಎಸ್ ರವರ ಸಂಗೀತ ನಿರ್ದೇಶನವಿದ್ದು , ಅವಿನಾಶ ಶಾಸ್ರ್ತಿ ಅವರ ಕ್ಯಾಮೆರಾ ಕೈ ಚಳಕವಿದೆ.

  • ಬೋಲ್ಡ್ ಆದ ‘ಟೋಬಿ’ ಸುಂದರಿ- ಕನ್ನಡದ ಆಲಿಯಾ ಭಟ್ ಎಂದ ಫ್ಯಾನ್ಸ್

    ಬೋಲ್ಡ್ ಆದ ‘ಟೋಬಿ’ ಸುಂದರಿ- ಕನ್ನಡದ ಆಲಿಯಾ ಭಟ್ ಎಂದ ಫ್ಯಾನ್ಸ್

    ಸ್ಯಾಂಡಲ್‌ವುಡ್ ನಟಿ ಚೈತ್ರಾ ಆಚಾರ್ (Chaithra Achar) ಮತ್ತೆ ಹೊಸ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ಬೋಲ್ಡ್ ಆಗಿ ‘ಟೋಬಿ’ (Toby) ಸುಂದರಿ ಫೋಟೋಶೂಟ್ ಮಾಡಿಸಿದ್ದಾರೆ. ನಟಿಯ ನ್ಯೂ ಲುಕ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ.

    ಬಿಳಿ ಬಣ್ಣದ ಶರ್ಟ್‌- ಲೈಟ್ ಕಲರ್ ಸ್ಕರ್ಟ್ ಧರಿಸಿದ್ದಾರೆ ಚೈತ್ರಾ. ಮಾದಕ ನೋಟ ಬೀರುವ ಮೂಲಕ ಸಖತ್ ಬೋಲ್ಡ್ & ಬ್ಯೂಟಿಫುಲ್ ಆಗಿ ಚೈತ್ರಾ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಚೈತ್ರಾ ಫೋಟೋ ನೋಡ್ತಿದ್ದಂತೆ ಬಾಲಿವುಡ್ ನಟಿ ಆಲಿಯಾ ಭಟ್‌ಗೆ ಹೋಲಿಸಿ ಹೊಗಳಿದ್ದಾರೆ ಫ್ಯಾನ್ಸ್. ಕನ್ನಡದ ಆಲಿಯಾ ಭಟ್ ಎಂದು ಮೆಚ್ಚುಗೆ ಸೂಚಿಸಿದ್ದಾರೆ.

    ಇತ್ತೀಚೆಗೆ ಫೋಟೋಶೂಟ್‌ವೊಂದಕ್ಕೆ ನೆಗೆಟಿವ್ ಕಾಮೆಂಟ್ ಮತ್ತು ಟ್ರೋಲ್ ಆಗಿತ್ತು. ಅದಕ್ಕೆ ಖಡಕ್ ಆಗಿ ಚೈತ್ರಾ ರಿಯಾಕ್ಟ್ ಮಾಡಿದ್ದರು. ದೇವರ ಹಾಡು ಹಾಡ್ತಾರೆ ಆದರೆ ಹಾಕುವ ಬಟ್ಟೆ ಈ ತರಹ ಎಂದು ಕಾಮೆಂಟ್ ಮಾಡುವವರಿಗೆ ನಟಿ ತಕ್ಕ ಉತ್ತರ ನೀಡಿದ್ದರು.

    ಬೇರೇ ಮನೆ ಹೆಣ್ಣು ಮಗಳ ಮರ್ಯಾದೆ ತೆಗೆಯಬೇಕು ಎಂದು ಪಣ ತೊಟ್ಟವರಿಗೆ ಏನು ಹೇಳೋದು ಅಂತಾ ನಟಿ ಗರಂ ಆಗಿದ್ದರು. ನನಗೆ ಯಾವ ವಿಚಾರ ತಪ್ಪು ಅಥವಾ ಸರಿ. ಎಲ್ಲಿ ಯಾವ ತರಹ ಇರಬೇಕು ಅನ್ನೋದು ಚೆನ್ನಾಗಿ ಗೊತ್ತು. ನಾನು ಬೆಳೆದು ಹಾದಿಯಲ್ಲಿ ನನ್ನ ಪೋಷಕರು ಮತ್ತು ಶಿಕ್ಷಕರು ನನಗೆ ಕಲಿಸಿ ಕೊಟ್ಟಿದ್ದಾರೆ ಎಂದು ನಟಿ ಪ್ರತಿಯುತ್ತರ ನೀಡಿದ್ದರು.

     

    View this post on Instagram

     

    A post shared by Chaithra J Achar (@chaithra.j.achar)

    ನನ್ನ ಸಿನಿಮಾಗಳ ಮೂಲಕ ಜನಕ್ಕೆ ರೀಚ್ ಆಗುತ್ತೀದ್ದಿನಿ. ನಾನು ಏನೋ ಕೆಲಸ ಮಾಡಿದಾಗ ಒಳ್ಳೆತನದಿಂದ ಹಾರೈಸೋದು ತುಂಬಾ ಕಮ್ಮಿ. ಅವರನ್ನ ಕೆಳಗೆ ಇಳಿಸುವಂತಹ ಮನಸ್ಥಿತಿ ಇರೋರು. ಯಾವುದೇ ರೀತಿಯ ಪೋಸ್ಟ್ ಇದ್ದರು ಕೆಟ್ಟ ಕಾಮೆಂಟ್‌ಗಳನ್ನೇ ಮಾಡುತ್ತಾರೆ ಅಂತಹವರಿಗೆ ಏನು ಹೇಳೋದು ಎಂದು ಅಸಮಾಧಾನ ಹೊರಹಾಕಿದ್ದರು. ಇದನ್ನೂ ಓದಿ:ಸೆಲೆಬ್ರೇಶನ್ ಮೂಡ್‌ನಲ್ಲಿ ಸಿಂಹಪ್ರಿಯಾ ಜೋಡಿ- ಫ್ಯಾನ್ಸ್‌ಗೆ ಲವ್ಲಿ ವಿಶ್ಸ್

    2023ರಲ್ಲಿ ‘ಟೋಬಿ’ ಮತ್ತು ‘ಸಪ್ತಸಾಗರದಾಚೆ ಎಲ್ಲೋ’ ಪಾರ್ಟ್ 2 ಈ ಚಿತ್ರಗಳು ಚೈತ್ರಾ ಆಚಾರ್ ಕೆರಿಯರ್‌ಗೆ ಬಿಗ್ ಬ್ರೇಕ್ ನೀಡಿದೆ. ಇದೀಗ ದೀಕ್ಷಿತ್ ಶೆಟ್ಟಿ ಜೊತೆಗಿನ ‘ಬ್ಲಿಂಕ್’ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳು ಚೈತ್ರಾ ಕೈಯಲ್ಲಿದೆ.