Tag: ಜಟ್ಕಾ ಕಟ್

  • ಮಸೀದಿಗಳ ಧ್ವನಿವರ್ಧಕ ನಿಷೇಧ ಚರ್ಚೆ – 1990ರಲ್ಲೇ ಕೊಡಗು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ವಿಎಚ್‍ಪಿ ಮುಖಂಡ

    ಮಸೀದಿಗಳ ಧ್ವನಿವರ್ಧಕ ನಿಷೇಧ ಚರ್ಚೆ – 1990ರಲ್ಲೇ ಕೊಡಗು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ ವಿಎಚ್‍ಪಿ ಮುಖಂಡ

    ಮಡಿಕೇರಿ: ರಾಜ್ಯದಲ್ಲಿ ಹಿಜಬ್, ಮುಸ್ಲಿಂ ವರ್ತಕರಿಗೆ ನಿರ್ಬಂಧ, ಹಲಾಲ್ ಕಟ್ – ಜಟ್ಕಾ ಕಟ್ ವಿವಾದದ ಬಳಿಕ ಇದೀಗ ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧದ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ಧ್ವನಿವರ್ಧಕ ನಿಷೇಧ ಈ ಹಿಂದಿನಿಂದಲೇ ಜಾರಿಯಲ್ಲಿತ್ತು. 1990ರಲ್ಲೇ ಕೊಡಗು ಜಿಲ್ಲಾಡಳಿತಕ್ಕೆ ವಿಎಚ್‍ಪಿ ಮುಖಂಡರೊಬ್ಬರು ಮನವಿ ಸಲ್ಲಿಸಿದ್ದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿರುವ ವಿಎಚ್‍ಪಿ ಮುಖಂಡ ಸೋಮೇಶ್, ಈ ಹಿಂದೆ ಕೊಡಗಿನ ಪಾಲೂರು ದೇವಾಲಯದಲ್ಲಿ ನಡೆದ ಹಿಂದೂ, ಮುಸ್ಲಿಂ ಗಲಭೆಯ ಬಳಿಕ 1990ರಲ್ಲೇ ಅಂದಿನ ಜಿಲ್ಲಾಧಿಕಾರಿಗಳಿಗೆ ಮಸೀದಿಗಳಲ್ಲಿ ಇರುವ ಧ್ವನಿವರ್ಧಕ ನಿಷೇಧ ಮಾಡುವಂತೆ ಮನವಿ ಮಾಡಲಾಗಿತ್ತು ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಸೀದಿಗಳಲ್ಲಿ ಧ್ವನಿವರ್ಧಕ ನಿಷೇಧ: ವಕ್ಫ್ ಮಂಡಳಿಯ ಸುತ್ತೋಲೆಯಲ್ಲಿ ಏನಿದೆ? ಸುಪ್ರೀಂ ಕೋರ್ಟ್ ಹೇಳಿದ್ದೇನು?

    1964ರಲ್ಲಿಯೇ ಸರ್ವೋಚ್ಚ ನ್ಯಾಯಾಲಯ ಆದೇಶ ಹೊರಡಿಸಿದೆ. ಅನುಮತಿ ರಹಿತ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹೀಗಿದ್ದರೂ ಇಷ್ಟು ವರ್ಷ ರಾಜಕೀಯ ತುಷ್ಟೀಕರಣದೊಂದಿಗೆ ಕಾನೂನು ಉಲ್ಲಂಘನೆ ಆಗುತ್ತದೆ. ಇದು ಹೊಸ ಬೆಳವಣಿಗೆ ಅಲ್ಲ. ಬಹು ವರ್ಷಗಳ ಹಿಂದೂಗಳ ಧ್ವನಿ ಆಗಿದೆ. ಪೊಲೀಸರು ಮತ್ತು ಸ್ಥಳೀಯ ಆಡಳಿತ ಒತ್ತಡದಿಂದ ದಿಟ್ಟ ಹೆಜ್ಜೆ ಇರಿಸಿಲ್ಲ. ಅದು ಮುಸ್ಲಿಂ ಸಮುದಾಯದ ಮುಖಂಡರು ಗೊತ್ತಿದ್ದರೂ ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಅಲ್ಲಾಹು ಅಕ್ಬರ್ ಎಂದು ಕೂಗುತ್ತ ಗೋರಖ್‍ನಾಥ ದೇವಾಲಯ ಪ್ರವೇಶಿಸಲು ಯತ್ನಿಸಿದ್ದ ಯುವಕ ಬಂಧನ

    ಕಾನೂನು ತನ್ನದೇ ರೀತಿಯಲ್ಲಿ ಕೆಲಸ ಮಾಡಬೇಕಿದೆ. 1964ರಲ್ಲಿಯೇ ಸರ್ವೋಚ್ಚ ನ್ಯಾಯಾಲಯ ಆದೇಶದಲ್ಲೇ ಸ್ಪಷ್ಟವಾಗಿ ಇದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೂ ಧ್ವನಿವರ್ಧಕ ಬಳಸುವಂತೆ ಇಲ್ಲ. ಧ್ವನಿವರ್ಧಕ ಬಳಕೆಯಾದರೆ ಮನೆಯಲ್ಲಿ ಇರುವ ಮಕ್ಕಳು, ವಯಸ್ಸಾದ ವೃದ್ಧರಿಗೂ ಸಮಸ್ಯೆ ಅಗುತ್ತದೆ ಎಂದು ಸಾಕಷ್ಟು ಜನರು ಹೇಳಿದ್ರು. ಇದೀಗಾ ಬಹುಶಃ ಕಾಲ ಕೂಡಿ ಬಂದಿದೆ. ಅದಷ್ಟು ಬೇಗ ಸಾರ್ವತ್ರಿಕವಾಗಿ ಸರ್ಕಾರ ದಿಟ್ಟತನದಿಂದ ಧ್ವನಿವರ್ಧಕ ನಿಷೇಧವನ್ನು ಜಾರಿಗೆ ತರಬೇಕು ಇದರಿಂದ ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಹಲಾಲ್ ದಂಗಲ್ ಇದು ಅಂತ್ಯವಲ್ಲ ಆರಂಭ

    ಹಲಾಲ್ ದಂಗಲ್ ಇದು ಅಂತ್ಯವಲ್ಲ ಆರಂಭ

    ಬೆಂಗಳೂರು: ಹಲಾಲ್ ಬಾಯ್ಕಾಟ್‍ಗೆ ಭರ್ಜರಿ ಪ್ರತಿಕ್ರಿಯೆ ದೊರೆತಿದ್ದು, ಈ ಹಿನ್ನೆಲೆಯಲ್ಲಿ ಹಲಾಲ್ ದಂಗಲ್‍ನ್ನು ಒಂದು ದಿನಗಷ್ಟೇ ಸಿಮೀತವಾಗಿಸದೇ ಇದನ್ನು ದೊಡ್ಡ ಮಟ್ಟದಲ್ಲಿ ಆರಂಭ ಮಾಡಲು ಹಿಂದೂ ಸಂಘಟನೆಗಳು ಈಗ ಸಜ್ಜಾಗಿದೆ.

    ಯಗಾದಿ ಮರು ದಿನವಾದ ಹೊಸತೊಡಕು ವೇಳೆ ಗ್ರಾಹಕರು ಹಿಂದೂ ಅಂಗಡಿಗಳ ಮುಂದೆ ಸಾಲು ಸಾಲು ನಿಂತಿದ್ದರು. ಜಟ್ಕಾ ಕಟ್ ಖರೀದಿಗಾಗಿಯೇ ಬೇರೆ ಜಾಗಗಳಿಂದ ಬಂದಿದ್ದರು. ಭಾನುವಾರ ಒಂದೇ ದಿನಕ್ಕೆ ಜಟ್ಕಾ ಕಟ್ ಅಂಗಡಿಗಳಲ್ಲಿ ಲಕ್ಷಾಂತರ ರೂ. ಮೌಲ್ಯದ ವ್ಯಾಪಾರವಾಗಿತ್ತು. ಇದರಿಂದಾಗಿ ಹಿಂದೂಪರ ಸಂಘಟನೆಗಳು ಫುಲ್ ಉತ್ಸಾಹದಲ್ಲಿದ್ದಾರೆ.

    ರಾಜ್ಯಾದ್ಯಂತ ಜಟ್ಕಾ ಕಟ್‍ಗೆ ಜನರು ಬಾರಿ ಬೆಂಬಲ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಪರ ಸಂಘಟನೆಗಳು ರಾಜ್ಯದ ಪ್ರತಿ ಜಿಲ್ಲೆ, ತಾಲೂಕು, ವಾರ್ಡ್ ಮಟ್ಟದಲ್ಲಿ ಜಟ್ಕಾ ಕಟ್ ಓಪನ್‍ಗೆ ಸಿದ್ಧತೆ ನಡೆಸಿವೆ. ಅಷ್ಟೇ ಅಲ್ಲದೇ ರಾಜ್ಯ ರಾಜಧಾನಿ ಬೆಂಗಳೂರಿನ 198 ವಾರ್ಡ್‍ಗಳಲ್ಲೂ ಜಟ್ಕಾ ಕಟ್ ಅಂಗಡಿ ತೆರೆಯಲು ಮುಂದಾಗಿವೆ. ಇದನ್ನೂ ಓದಿ: ನಾನು ಮಾಡಿರುವ ಕೆಲಸಕ್ಕೆ ನಿಮಗೆ ಪ್ರೀತಿ ಬಂದ್ರೆ ಓಟ್ ಹಾಕಿ ಕೂಲಿ ಕೊಡಿ: ಪ್ರೀತಂಗೌಡ

    ಸದ್ಯಕ್ಕೆ ಬಿಬಿಎಂಪಿ ತಾತ್ಕಾಲಿಕ ಜಟ್ಕಾ ಕಟ್ ಶಾಪ್‍ಗಳನ್ನು ತೆರೆಯಲು ಅನುಮತಿ ನೀಡಿರಲಿಲ್ಲ. ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಅನುಮತಿ ಪಡೆದು ಜಟ್ಕಾ ಕಟ್‍ಗಳ ಓಪನ್ ಮಾಡಲು ಹಿಂದೂಪರ ಸಂಘಟನೆಗಳು ಚಿಂತನೆ ನಡೆಸಿವೆ. ಈಗಾಗಲೇ ಆಸಕ್ತ ಯುವಕರಿಗೆ ಜಟ್ಕಾ ಕಟ್ ಟ್ರೈನಿಂಗ್ ನೀಡಲಾಗುತ್ತಿದೆ.

    ಇನ್ಮುಂದೆ ಪ್ರತಿ ಭಾನುವಾರ ಪ್ರತಿಹಬ್ಬಕ್ಕೂ ಹಲಾಲ್ ಬಾಯ್ಕಾಟ್ ಅಭಿಯಾನ ಮಾಡಲು ಪ್ಲ್ಯಾನ್ ನಡೆಸಿವೆ. ಅಷ್ಟೇ ಅಲ್ಲದೇ, ಸಭೆ, ಸಮಾರಂಭ ಬಾಡೂಟಕ್ಕೆ ಜಟ್ಕಾ ಕಟ್ ಬಳಸುವಂತೆ ಜಾಗೃತಿ ಮೂಡಿಲು ಹಿಂದೂ ಸಂಘಟನೆಗಳು ತಯಾರಿ ನಡೆಸುತ್ತಿವೆ. ಹಿಂದೂಗಳು, ಹಿಂದೂ ವ್ಯಕ್ತಿಗಳಿಂದಲೇ ಮಾಂಸ ಖರೀದಿ ಮಾಡುವಂತೆ ಮನವಿಯನ್ನು ಮಾಡಲಾಗುತ್ತದೆ. ಇದನ್ನೂ ಓದಿ: ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    NONVEG

    ಹಿಜಬ್‍ಗೆ ಆಗ್ರಹಿಸಿ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಕ್ಕೆ ಅಂಗಡಿಗಳನ್ನು ಬಂದ್ ಮಾಡಿದ್ದ ಮುಸ್ಲಿಂ ವ್ಯಾಪಾರಿಗಳಿಗೆ ಆರ್ಥಿಕ ಹೊಡೆತ ನೀಡಲು ಆರಂಭಗೊಂಡ ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗುತ್ತಾ ಎನ್ನವುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ. ಜಟ್ಕಾ ಕಟ್ ಮೂಲಕ ದೊಡ್ಡದಾಗಿ ಮುಸ್ಲಿಂ ವ್ಯಾಪಾರಿಗಳಿಗೆ ಠಕ್ಕರ್ ನೀಡಲು ಹಿಂದೂ ಸಂಘಟನೆಗಳು ಸಕಲ ಸಿದ್ಧತೆ ನಡೆಸುತ್ತಿವೆ.

  • ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಮುಂದಾದ ಹಿಂದೂ ಸಂಘಟನೆಗಳು

    ಬೆಂಗಳೂರು: ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿರುವ ಹಿನ್ನೆಲೆ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಹಿಂದೂಪರ ಸಂಘಟನೆಗಳು ಸಜ್ಜಾಗಿದೆ.

    ಹಿಂದೂಪರ ಸಂಘಟನೆಗಳು ಯುಗಾದಿ ಹೊಸತೊಡುಕು ವೇಳೆ ಹಲಾಲ್ ಕಟ್ ಮಾಂಸವನ್ನು ಬಿಟ್ಟು, ಹಿಂದೂಗಳು ಜಟ್ಕಾ ಕಟ್ ಮಾಂಸವನ್ನು ಖರೀದಿಸಿ ಸೇವೆಸಬೇಕು ಎಂದು ಅಭಿಯಾನ ನಡೆಸಿದ್ದರು. ಅದರಂತೆ ಬುಧವಾರ ಹಲಾಲ್ ಕಟ್ ಮಾಂಸಕ್ಕಿಂತಲೂ ಜಟ್ಕಾ ಕಟ್ ಮಾಂಸವನ್ನು ಜನ ಹೆಚ್ಚಾಗಿ ಖರೀದಿಸಿದ್ದು, ಜಟ್ಕಾ ಕಟ್ ಅಭಿಯಾನ ಯಶಸ್ವಿಯಾಗಿದೆ.

    ಇದರ ಬೆನ್ನಲ್ಲೇ ಇದೀಗ ಮಸೀದಿ ಸೌಂಡ್ ಬ್ಯಾನ್ ಅಭಿಯಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಕಾನೂನಾತ್ಮಕವಾಗಿ ಹೋರಾಡಿ ಮಸೀದಿ ಸೌಂಡ್ ಬ್ಯಾನ್ ಮಾಡಲು ಮುಂದಾಗಿದ್ದಾರೆ. ಈ ಕುರಿತಂತೆ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲು ಹಿಂದೂ ಪರ ಸಂಘಟನೆ ತಯಾರಿ ನಡೆಸಿದೆ. ಇದನ್ನೂ ಓದಿ: ಮಸೀದಿಗಳ ಧ್ವನಿವರ್ಧಕಗಳನ್ನು ತೆಗೆಸಿ: ರಾಜ್ ಠಾಕ್ರೆ

    ಎಂಎನ್‍ಎಸ್ ಹೋರಾಟ
    ಮಸೀದಿಗಳ ಮುಂದೆ ಧ್ವನಿ ವರ್ಧಕಗಳನ್ನು ತೆಗೆಸದಿದ್ದರೆ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದು ಮಹಾರಾಷ್ಟ್ರದ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಶನಿವಾರ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಭಾನುವಾರ ಮುಂಬೈನ ಘಾಟ್‍ಕೋಪರ್‍ನಲ್ಲಿರುವ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಚೇರಿಯಲ್ಲಿ ಧ್ವನಿವರ್ಧಕದಿಂದ ಹನುಮಾನ್ ಚಾಲೀಸ್ ನುಡಿಸಲಾಗಿದೆ.

    ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಠಾಕ್ರೆ ಧ್ವನಿವರ್ಧಕಗಳನ್ನು ಬಳಸುವ ಮಸೀದಿಗಳಿಗೆ ಎಚ್ಚರಿಕೆ ನೀಡುತ್ತೇನೆ. ಧ್ವನಿವರ್ಧಕಗಳನ್ನು ತೆಗೆದು ಹಾಕಿ. ಇಲ್ಲದಿದ್ದರೆ ಮಸೀದಿಯ ಮುಂದೆ ಧ್ವನಿವರ್ಧಕಗಳನ್ನು ಹಾಕಿ ಹನುಮಾನ್ ಚಾಲೀಸ್ ನುಡಿಸುತ್ತೇವೆ ಎಂದಿದ್ದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾ ಕಟ್ ಎಂದರೇನು?

    ನಾನು ಪ್ರಾರ್ಥನೆ ಮಾಡುವುದಕ್ಕೆ ವಿರೋಧಿಸುವುದಿಲ್ಲ. ನೀವು ನಿಮ್ಮ ಮನೆಯಲ್ಲೇ ಪ್ರಾರ್ಥನೆ ಮಾಡಬಹುದು. ಆದರೆ ಮಸೀದಿಗಳಲ್ಲಿ ಧ್ವನಿವರ್ಧಕಗಳಿಂದ ಸಾರ್ವಜನಿಕರಿಗೆ, ಮಕ್ಕಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಮಸೀದಿಯ ಧ್ವನಿವರ್ಧಕಗಳನ್ನು ತೆಗೆದುಹಾಕುವ ಬಗ್ಗೆ ಸರ್ಕಾರ ನಿರ್ಧರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದರು.

  • ಹಿಂದೂ ಧರ್ಮದ ವಿರುದ್ಧ ಒಂದು ಧರ್ಮ ಪ್ರಾರಂಭವಾಗಿದ್ದು, ಅದಕ್ಕೆ ಸಿದ್ದು, ಡಿಕೆಶಿ, ಹೆಚ್‍ಡಿಕೆ ನಾಯಕರು: ಪ್ರಶಾಂತ್ ಸಂಬರಗಿ

    ಹಿಂದೂ ಧರ್ಮದ ವಿರುದ್ಧ ಒಂದು ಧರ್ಮ ಪ್ರಾರಂಭವಾಗಿದ್ದು, ಅದಕ್ಕೆ ಸಿದ್ದು, ಡಿಕೆಶಿ, ಹೆಚ್‍ಡಿಕೆ ನಾಯಕರು: ಪ್ರಶಾಂತ್ ಸಂಬರಗಿ

    ಬೆಂಗಳೂರು: ಹಿಂದೂ ಧರ್ಮದ ವಿರುದ್ಧ ಒಂದು ಧರ್ಮ ಪ್ರಾರಂಭವಾಗಿದೆ. ಅದಕ್ಕೆ ಮಾಜಿ ಸಿಎಂಗಳಾದ ಸಿದ್ದರಾಮಯ್ಯ, ಕುಮಾರಸ್ವಾಮಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಾಯಕರಾಗಿದ್ದಾರೆ ಎಂದು ಕಿಡಿಕಾರಿದರು.

    ಬೆಂಗಳೂರಿನಲ್ಲಿ ನಡೆಯುತ್ತಿರುವ ಹಲಾಲ್ ಮತು ಜಟ್ಕಾ ವಿಚಾದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಭಾರತದಲ್ಲಿ ಆಹಾರ ಸಂಸ್ಕøತಿ ಮೊದಲು ಇದ್ದಿದ್ದು ಜಟ್ಕಾ ಕಟ್. ಮಾಂಸವನ್ನು ಕತ್ತರಿಸಿ ಮಾಂಸವನ್ನು ತಿನ್ನುವುದು. ಈ ಬಗ್ಗೆ ಕ್ಷತ್ರೀಯರು ಯುದ್ಧದ ಕಾಲದಲ್ಲಿ ಮಹಾಭಾರತ, ರಾಮಾಯಣದಲ್ಲಿಯೂ ಉಲ್ಲೇಖವಾಗಿದೆ. ಅನೇಕ ರಾಜ-ಮಹಾರಾಜರೂ ಸಹ ಈ ರೀತಿಯ ಬೇಟೆಯಾಡುತ್ತಿದ್ದರು ಎಂದು ವಿವರಿಸಿದರು. ಇದನ್ನೂ ಓದಿ: ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ನಾನು ಕುಮಾರಸ್ವಾಮಿ ಅವರಿಗೆ ಚಾಲೆಂಜ್ ಮಾಡುತ್ತೇನೆ. ಅವರು ಕಾಲಭೈರವೇಶ್ವರನ ಮೇಲೆ ಹಣೆ ಮಾಡಿ ಅವರು ಎಲ್ಲಿಂದ ಆಹಾರ ತಂದಿದ್ದಾರೆ ಎಂದು ಹೇಳಲಿ ಎಂದು ಸವಾಲನ್ನು ಹಾಕಿದ್ದಾರೆ. ವೋಟ್ ಬ್ಯಾಂಕ್ ರಾಜಕೀಯಕ್ಕೂಸ್ಕರ ಅವರು ಹಲಾಲ್ ತೆಗೆದುಕೊಂಡು ಬಂದಿದ್ದಾರೆ. ಈ ಮೂಲಕ ಅವರು ತಮಗೆ ಬರುತ್ತಿದ್ದ 10% ವೋಟ್‍ನಲ್ಲಿ 40% ಅಗುತ್ತೆ ಎಂದು ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.

    ಈಗ ನಮ್ಮ ದೇಶದಲ್ಲಿ ಹೊಸದೊಂದು ಧರ್ಮ ಪ್ರಾರಂಭವಾಗಿದೆ. ಅದೇ ಆಂಟಿ ಹಿಂದೂ ಧರ್ಮ. ಹಿಂದೂ ಧರ್ಮದ ವಿರುದ್ಧ ಒಂದು ಧರ್ಮ ಪ್ರಾರಂಭವಾಗಿದೆ. ಅದರ ನಾಯಕರು ಕುಮಾರಸ್ಟಾಮಿ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ. ಅದಕ್ಕೆ ಅವರ ವಿರುದ್ಧ ನಮ್ಮ ಧಿಕ್ಕಾರವಿದೆ ಎಂದು ಆಕ್ರೋಶ ಹೊರಹಾಕಿದರು.

    ಹಲಾಲ್ ಕಟ್ ಪದ್ಧತಿಯನ್ನು ಮರುಭೂಮಿಯಿಂದ ಬಂದ ಅನ್ಯಧರ್ಮದ ಜನರು ನಮ್ಮ ಮೇಲೆ ಏರಿದ್ದಾರೆ. ಅನೇಕ ಹಿಂದೂಗಳು ಮಾಂಸದಂಗಡಿಯನ್ನು ನಡೆಸುತ್ತಿದ್ದು, ಅನೇಕ ಮುಸ್ಲಿಮರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದಾರೆ. ಅವರು ಟೋಪಿ ಹಾಕಿಕೊಂಡೆ ಹಲಾಲ್ ಮಿಟ್ ರೆಡಿ ಮಾಡುತ್ತಾರೆ. ಅದಕ್ಕೆ ಅವರಿಗೆ ದುಡ್ಡನ್ನು ಕೊಡಲಾಗುತ್ತೆ. ಅಂತಹವರನ್ನು ನಾನು ತುಂಬಾ ನೋಡಿದ್ದೇನೆ ಎಂದು ವಿರೋಧ ವ್ಯಕ್ತಪಡಿಸಿದರು.

    ಹಿಂದೂಗಳೇ ಕುರಿಗಳನ್ನು ಬೆಳೆಸಿ ಅವನೇ ಮಾಂಸವನ್ನು ಮಾರಬೇಕು. ಅವನೇ 360 ಡಿಗ್ರಿಯಲ್ಲಿ ಎಲ್ಲ ಕೆಲಸವನ್ನು ಮಾಡಬೇಕು. ನನ್ನ ಹಿಂದೂ ಅಣ್ಣತಮ್ಮದರಿಗೆ ಈ ಮೂಲಕ ಉದ್ಯೋಗ ಸಂಪೂರ್ಣ ಸಿಗಬೇಕು. ಇದು ಯಾವ ಜಾತಿ-ಧರ್ಮದ ವಿರುದ್ಧವಲ್ಲ. ರಾಜಕೀಯದ ಗಿಮಿಕ್ ಇಲ್ಲದೇ ನಮ್ಮ ಹಿಂದೂ ಧರ್ಮದ ಹಕ್ಕನ್ನ, ಹಿಂದೂ ಯುವಕರ ಹಕ್ಕನ್ನ ಯಾರು ಕಿತ್ತುಕೊಂಡಿದ್ದಾರೆ ಅವರ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ಪ್ರತಿಯೊಂದು ವ್ಯವಹಾರವನ್ನು ನಾವೇ ಹಿಟ್ಟುಕೊಳ್ಳಬೇಕು ಎಂಬ ಮುಸ್ಲಿಮರ ಹೇಳಿಕೆ ವಿರುದ್ಧ ನಾವು ಹೋರಾಟ ಮಾಡುತ್ತಿದ್ದೇವೆ. ಹಲವು ವರ್ಷಗಳ ಹೋರಾಟ ಇಂದು ಬಯಲಿಗೆ ಬಂದಿದೆ. ಹಲಾಲ್ ಮತ್ತು ಜಟ್ಕಾ ಕಟ್ ಬಗ್ಗೆ ಈಗ ವಿಶ್ವವೇ ಮಾತನಾಡುತ್ತಿದೆ ಎಂದರು.

    ಜಟ್ಕಾ ಎಂಬುದು ಹಿಂದೂ ಧರ್ಮ ಮಾಡುವ ಪದ್ಧತಿ, ಹಲಾಲ್ ಮುಸ್ಲಿಮರು ಮಾಡುವ ಪದ್ಧತಿ ಎಂಬುದು ಈಗ ಜನರಿಗೆ ತಿಳಿದುಬಂದಿದೆ. ಈ ಅಭಿಯಾನ ಹಿಂದೂಗಳು ಮಾಡುವ ಬೀಗರೂಟ ಮತ್ತು ಪ್ರತಿ ಭಾನುವಾರ ಹಿಂದೂ ಮಾಡುವ ಮಾಂಸಡೂಟಕ್ಕೆ ನಮ್ಮ ಸಾಂಪ್ರದಾಯದ ಜಟ್ಕಾ ಕಟ್ ಪದ್ದತಿಯನ್ನು ಸಂಪೂರ್ಣವಾಗಿ ಅಳವಾಡಿಸಿಕೊಳ್ಳುವವರಿಗೂ ಈ ಅಭಿಯಾನ ಮುಂದುವರಿಯುತ್ತೆ ಎಂದು ತಿಳಿಸಿದರು.

    ಇದು ಶಾಶ್ವತವಾದ ಅಭಿಮಾನವಾಗಿದೆ. ನಾವು ಈಗ ಮಗುವಾಗಿದ್ದು, ಮುಂದೆ ಓಡುತ್ತೇವೆ. ಗೌಡ, ಒಕ್ಕಲಿಗ, ಕುಮಾರ್ ಎಂದು ಕ್ಷತ್ರೀಯರ ಹೆಸರನ್ನು ಇಟ್ಟುಕೊಂಡು ಹಲಾಲ್ ಮಾಡುವುದನ್ನು ನಿಲ್ಲಿಸಬೇಕು. ಹಿಂದೂ ಮಾಂಸದಂಗಡಿಯಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಮರು ಟೋಪಿ ಹಾಕಿಕೊಂಡು ಪ್ರಾಣಿಗಳನ್ನು ಕಟ್ ಮಾಡಿ ‘ಅಲ್ಲಾ’ ಹೆಸರು ಹೇಳಿ ಅವರ ದೇವರಿಗೆ ಅರ್ಪಣೆ ಮಾಡುತ್ತಿರುತ್ತಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಈ ಪದ್ದತಿಯನ್ನು ತಡೆಯಲು ನಾವು ಹಿಂದೂ ಯುವಕರನ್ನು ಕೆಲಸಕ್ಕೆ ತೆಗೆದುಕೊಳ್ಳಿ ಎಂದು ಹಿಂದೂ ಸಂಘಗಳ ಬಳಿಗೆ ಹೋಗಿ ಮನವಿ ಮಾಡುತ್ತೇವೆ. ಇಲ್ಲವಾದರೆ ಗ್ರಾಹಕರಿಗೆ ಜಟ್ಕಾ ಮತ್ತು ಹಲಾಲ್ ಎಂದು ಎರಡು ಆಯ್ಕೆಗಳನ್ನು ಕೊಡಿ. ನಾವು ಯಾವುದೇ ಜಾತಿ, ಧರ್ಮದ ವಿರುದ್ಧ ಮಾಡುತ್ತಿರುವ ಹೋರಾಟವಲ್ಲ. ಇದು ಗ್ರಾಹಕರ ಹಕ್ಕಿನ ವಿರುದ್ಧ ಮಾಡುತ್ತಿರುವ ಹೋರಾಟವಾಗಿದೆ ಎಂದರು.

  • ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ: ಈಶ್ವರಪ್ಪ

    ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ: ಈಶ್ವರಪ್ಪ

    ಉಡುಪಿ: ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ, ಅವರವರು ಅವರವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

    ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ದೇಶದಲ್ಲೇ ಪ್ರಪ್ರಥಮ ಅತಿದೊಡ್ಡ ಘನ ತ್ಯಾಜ್ಯ ಸಂಸ್ಕರಣ ಘಟಕ ಉದ್ಘಾಟನೆ ಮಾಡಿ, ಮಾಧ್ಯಮಗಳ ಜೊತೆ ಮಾತನಾಡಿ, ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ. ನಾವು ಯಾರೂ ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ. ಹಲಾಲ್ ವಿಷಯದಲ್ಲಿ ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

    ಹಲಾಲ್, ಜಟ್ಕಾ ಇಂಥದ್ದನ್ನೆಲ್ಲ ಕೆಲವು ವ್ಯಕ್ತಿಗಳು, ಪಕ್ಷಗಳು ಸೃಷ್ಟಿ ಮಾಡಿದ್ದಾರೆ. ಕೆಲ ವ್ಯಕ್ತಿಗಳು ಆಡುತ್ತಿರುವ ಆಟ ಇದು. ಕರ್ನಾಟಕದಲ್ಲಿ ಜನ ಅನುಭವಿಸುತ್ತಿದ್ದಾರೆ. ಯಾರು ಯಾವುದನ್ನು ಪೂಜೆ ಮಾಡುತ್ತಾರೋ ಅದನ್ನು ಮಾಡಿಕೊಳ್ಳಬೇಕು. ಅವರವರು ಅವರ ಪದ್ಧತಿಯನ್ನು ಮುಂದುವರಿಸಿಕೊಂಡು ಹೋಗಲಿ ಎಂದು ಹೇಳಿದರು. ಇದನ್ನೂ ಓದಿ: ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ಈ ತರಹದ ವಿಚಾರದಲ್ಲಿ ನಾನು ರಾಜಕಾರಣ ಮಾಡಲು ಇಷ್ಟಪಡಲ್ಲ. ಚುನಾವಣೆ ಬಂದಾಗ ಒಬ್ಬರಿಗೊಬ್ಬರು ಬಹಿರಂಗವಾಗಿ ತೊಡೆತಟ್ಟೋಣ. ಚುನಾವಣೆ ಬಂದಾಗ ನಾನೇನು ಮಾಡಿದ್ದೇನೆ, ನೀವ್ ಏನ್ ಮಾಡಿದ್ದೀರಿ ಎಂದು ಜನ ಮುಂದೆ ಇಡೋಣ ಎಂದು ಹೇಳಿದರು.

    ಯುಗಾದಿ ದಿನ ನಾನು ಮಾಂಸ ತಿನ್ನಲ್ಲ. ಭಾನುವಾರ ನನ್ನ ಮನೆದೇವರು. ಅವತ್ತು ಕೂಡ ಮಾಂಸ ತಿನ್ನಲ್ಲ. ಸೋಮವಾರ ಮಾಂಸ ತಿನ್ನುವ ಅಭ್ಯಾಸ ಇಲ್ಲ. ಆದ್ರೆ ಮಂಗಳವಾರ ಮಾಂಸ ಬಿಡುವುದೇ ಇಲ್ಲ ಅಂತ ಹಾಸ್ಯಚಟಾಕಿ ಹಾರಿಸಿದರು. ಇದನ್ನೂ ಓದಿ: ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

  • ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ಹಲಾಲ್ ಕಟ್ ಮಾಂಸ ಖರೀದಿ ಉತ್ತೇಜಿಸಲು ಅಭಿಯಾನ: ದೇವನೂರ ಮಹಾದೇವ ನೇತೃತ್ವ

    ಮೈಸೂರು: ಹೊಸತೊಡಕು ಹಿನ್ನೆಲೆಯಲ್ಲಿ ಮಾಂಸ ಖರೀದಿ ಜೋರಾಗಿ ನಡೆಯುತ್ತಿದೆ. ಈ ನಡುವೆ ಮುಸ್ಲಿಂ ಬಾಂಧವರ ನಡುವೆ ಸಾಮರಸ್ಯ ಸಾರಿ, ಹಲಾಲ್ ಕಟ್ ಮಾಂಸ ಖರೀದಿಗೆ ಉತ್ತೇಜನ ನೀಡಲು ಪ್ರಗತಿಪರರು ವಿಶೇಷ ಅಭಿಯಾನವನ್ನೇ ಆರಂಭಿಸಿದ್ದಾರೆ. ಮಾಂಸದ ಅಂಗಡಿಗಳಲ್ಲೂ ಬೇವು-ಬೆಲ್ಲ ಹಂಚಿ ಸಂಭ್ರಮಿಸುತ್ತಿದ್ದಾರೆ.

    ಮೈಸೂರಿನಲ್ಲಿ ಸಕಲೆಂಟು ಜಾತಿ ಸಹಬಾಳ್ವೆ ಸಂಘ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ದಲಿತ ಸಂಘರ್ಷ ಸಮಿತಿ ಸೇರಿದಂತೆ ಪ್ರತಿಪರ ಸಂಘಟನೆಗಳಿಂದ ಮೈಸೂರಿನ ಉದಯಗಿರಿ ರಸ್ತೆಯಲ್ಲಿರುವ ಮುಸ್ಲಿಂ ಅಂಗಡಿಯಲ್ಲಿ ಶಾಂತಿ ಸೌಹಾರ್ದತೆ, ಸಹಬಾಳ್ವೆಯ ಸಂದೇಶ ಸಾರುವ ಕಾರಣಕ್ಕಾಗಿ ಮಾಂಸ ಖರೀದಿಸುವ ಅಭಿಯಾನವೂ ನಡೆದಿದೆ. ಇದನ್ನೂ ಓದಿ: ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    DEVANURA MAHADEVA

    ಸಾಹಿತಿ ದೇವನೂರ ಮಹಾದೇವ, ಸಮಾಜವಾದಿ ಪ.ಮಲ್ಲೇಶ್, ಬಡಗಲಪುರ ನಾಗೇಂದ್ರ, ಗುರುಪ್ರಸಾದ್ ಕೆರಗೋಡು, ಆಲಗೂಡು ಶಿವಕುಮಾರ್, ಶಂಭುಲಿಂಗಸ್ವಾಮಿ, ಪಿ.ಮರಂಕಯ್ಯ, ಬಸವರಾಜು, ಕಲ್ಲಹಳ್ಳಿ ಕುಮಾರ ಅವರು ಅಜೀಜ್ ಸೇಠ್ ಮುಖ್ಯ ರಸ್ತೆಯಲ್ಲಿನ ಸೈಯ್ಯದ್ ರಿಜ್ವಾನ್ ಅವರ ಕರ್ನಾಟಕ ಮಟನ್ ಅಂಡ್ ಚಿಕನ್ ಸ್ಟಾಲ್‌ನಲ್ಲಿ ಸಾಮೂಹಿಕವಾಗಿ ಹಲಾಲ್ ಕಟ್ ಮಾಂಸವನ್ನು ಖರೀದಿಸಿದ್ದಾರೆ.

  • ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಜಟ್ಕಾ ಕಟ್ ಮಟನ್ ಅಂಗಡಿಗಳ ಮುಂದೆ ಕೇಸರಿ ಧ್ವಜ

    ಬೆಂಗಳೂರು(ಆನೇಕಲ್): ಹೊಸತೊಡುಕು ಹಿನ್ನೆಲೆ, ನೇಕಲ್ ಪಟ್ಟಣದಲ್ಲಿ ಮಾಂಸ ಖರೀದಿ ಭರಾಟೆ ಭರ್ಜರಿಯಾಗಿದೆ. ಜಟ್ಕಾ ಕಟ್ ಅಂಗಡಿಗಳ ಮುಂದೆ ಕೇಸರಿ ಧ್ವಜ ಕಟ್ಟಿ ವ್ಯಾಪಾರಸ್ಥರು ಮಾರಾಟ ಮಾಡುತ್ತಿದ್ದಾರೆ.

    ಜಟ್ಕಾ ಕಟ್ ಅಂಗಡಿಗಳ ಮುಂದೆ ಕೇಸರಿ ಧ್ವಜ ಕಟ್ಟಿ ಬನ್ನೇರುಘಟ್ಟದಲ್ಲಿ ಭರ್ಜರಿ ಮಾಂಸ ಮಾರಾಟ ಮಾಡುತ್ತಿದ್ದಾರೆ. ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿಬಂದಿತ್ತು. ಪಂಚಾಯಿತಿಯಿಂದ ನೋಟಿಸ್ ನೀಡಿ 650 ರೂ.ಗೆ ಮಾರಾಟ ಮಾಡುವಂತೆ ಸೂಚನೆ ನೀಡಲಾಗಿತ್ತು. ಆದರೆ ಬನ್ನೇರುಘಟ್ಟದಲ್ಲಿ 800 ರೂ.ಗೆ ಮಟನ್ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಇದೆಲ್ಲದರ ನಡುವೆ ಕೇಸರಿ ಧ್ವಜ ಅಂಗಡಿಗಳ ಮುಂದೆ ರಾರಾಜಿಸುತ್ತಿದೆ.

    ಹೊಸಕೋಟೆ ಮತ್ತು ಆನೇಕಲ್ ಪಟ್ಟಣದ ಹೊಸೂರು ರಸ್ತೆಯಲ್ಲಿರುವ ಮಾಂಸದ ಮಾರುಕಟ್ಟೆಯಲ್ಲಿ ಬೆಳಗ್ಗೆಯಿಂದ ಮಾಂಸ ಖರೀದಿಗೆ ಜನ ಮುಗಿ ಬಿದ್ದಿದ್ದಾರೆ. ಹಬ್ಬದ ಬಾಡೂಟಕ್ಕೆ ಚಿಕನ್, ಮಟನ್ ಖರೀದಿಗೆ ಈ ಬಾರಿ ಆನೇಕಲ್‌ ಮತ್ತು ಹೊಸಕೋಟೆ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಾಂಸದ ಅಂಗಡಿಗಳನ್ನು ತೆರೆಯಲಾಗಿದೆ.

  • ಬೆಣ್ಣೆನಗರಿಯಲ್ಲಿ ನಾನ್ ವೆಜ್ ಸ್ಟಾಲ್‍ಗಳು ಖಾಲಿ ಖಾಲಿ.. ಏಕೆ ಗೊತ್ತಾ?

    ಬೆಣ್ಣೆನಗರಿಯಲ್ಲಿ ನಾನ್ ವೆಜ್ ಸ್ಟಾಲ್‍ಗಳು ಖಾಲಿ ಖಾಲಿ.. ಏಕೆ ಗೊತ್ತಾ?

    ದಾವಣಗೆರೆ:  ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ಮಾಂಸ ಮಾರಾಟ ಸ್ಥಳಗಳು ಗಿಜಿಗುಡುತ್ತವೆ. ಆದರೆ ಬೆಣ್ಣೆನಗರಿ ದಾವಣಗೆರೆಯಲ್ಲಿ ಮಾತ್ರ ಮಟನ್, ಚಿಕನ್ ಮಾರುಕಟ್ಟೆಗಳು ಸಂಪೂರ್ಣ ಖಾಲಿ ಖಾಲಿಯಾಗಿವೆ.

    ಬೆಳಗ್ಗೆ 8 ಗಂಟೆಯಾದರೂ ಜನರು ಮಟನ್, ಚಿಕನ್ ಖರೀದಿಗೆ ಆಗಮಿಸಿಲ್ಲ. ನಿನ್ನೆ ಚಂದ್ರ ದರ್ಶನವಾಗಿದ್ದರೆ ಇಂದು ನಾನ್ ವೆಜ್ ಮಾಡುತ್ತಿದ್ದರು. ಆದರೆ ಚಂದ್ರ ದರ್ಶನವಾಗದ ಹಿನ್ನೆಲೆ ಇಂದು ಕೂಡ ಸಿಹಿ ಮಾಡಿ ಇಂದು ಚಂದ್ರ ದರ್ಶನವಾದರೆ ನಾಳೆ ನಾನ್ ವೆಜ್ ಮಾಡುತ್ತಾರೆ.

    ಈ ಬಗ್ಗೆ ಇಲ್ಲಿನ ಮಟನ್ ವ್ಯಾಪಾರಸ್ಥರು ಮಾತನಾಡಿ, ಜಟ್ಕಾ ಕಟ್, ಹಲಾಲ್ ವಿವಾದ ಇಲ್ಲಿ ಇಲ್ಲ. ಮುಂದೆ ಹೇಗೆ ಬರುತ್ತೋ ನೋಡಿಕೊಂಡು ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಇಲ್ಲಿಯವರೆಗೂ ಯಾವುದೇ ಆ ರೀತಿಯ ವಿವಾದ ಇಲ್ಲಿಗೆ ಬಂದಿಲ್ಲ. ಎಲ್ಲರೂ ಕೂಡ ಸೌಹಾರ್ದಯುತವಾಗಿ ವ್ಯಾಪಾರ ವಹಿವಾಟು ನಡೆಸುತ್ತಿದ್ದೇವೆ ಎಂದರು. ಇದನ್ನೂ ಓದಿ: ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಚಿಕನ್ ಸ್ಟಾಲ್‍ಗಳು ಕೂಡ ಸಂಪೂರ್ಣ ಖಾಲಿ ಖಾಲಿಯಾಗಿವೆ. ಕೆಲ ಚಿಕನ್ ಅಂಗಡಿಗಳನ್ನು ಮುಚ್ಚಿದ್ದಾರೆ. ಪ್ರತಿವರ್ಷ ಕಾಲಿಡಲು ಕೂಡ ಜಾಗ ಇರುತ್ತಿರಲಿಲ್ಲ. ಆದರೆ ಈ ಬಾರಿ ಖಾಲಿ ಖಾಲಿಯಾಗಿದೆ. ನಾಳೆ ಏನಾದರೂ ವ್ಯಾಪಾರ ವಹಿವಾಟು ಆಗಬಹುದೆಂಬ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: 13ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

  • ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಹಲಾಲ್ ಕಟ್, ಜಟ್ಕಾಕಟ್ ಫೈಟ್ ನಡುವೆಯೇ ಹೊಸ ತೊಡಕಿಗೆ ಮಾಂಸ ಖರೀದಿ ಜೋರು

    ಬೆಂಗಳೂರು: ಯುಗಾದಿ ಹಬ್ಬದ ಹೊಸ ತೊಡಕಿನ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಾಂಸ ಮಾರಾಟ ಜೋರಾಗಿದೆ. ಮಾಂಸದ ಮಳಿಗೆಗಳಲ್ಲಿ ಜನರ ದಂಡೇ ನೆರೆದಿದೆ. ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿವಾದದ ಮಧ್ಯೆಯೇ ಈ ಬಾರಿ ಮಾಂಸ ಮಾರಾಟ ಭರ್ಜರಿಯಾಗಿ ಸಾಗಿದೆ.

    ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಧ್ಯರಾತ್ರಿಯಿಂದಲೇ ಮಾಂಸ ಮಾರಾಟ ಅಂಗಡಿಗಳಲ್ಲಿ ಸಿದ್ಧತೆ ನಡೆದಿತ್ತು. ಬೆಳಗ್ಗೆ ಮಾಂಸದಂಗಡಿಗಳತ್ತ ಜನರ ದಂಡು ಬರಲಾರಂಭಿಸಿತು. ಸರತಿ ಸಾಲಿನಲ್ಲಿ ನಿಂತು ಮಾಂಸ ಖರೀದಿಗೆ ಮುಗಿಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ಇದನ್ನೂ ಓದಿ: ಬೀದಿಬದಿ ಮಾಂಸಾಹಾರ ಮಾರಾಟಕ್ಕೆ ನಿರ್ಬಂಧ: ಗುಜರಾತ್‌ ಸಿಎಂ ಸಮರ್ಥನೆ 

    NONVEG

    ಬೆಂಗಳೂರಿನ ಯಶವಂತ ಮಾರುಕಟ್ಟೆ, ಮೈಸೂರಿನ ಪಾಪಣ್ಣ ಮಟನ್ ಸ್ಟಾಲ್, ಕೆ.ಜಿ.ಕೊಪ್ಪಲಿನಲ್ಲಿ ಗುಡ್ಡೆ ಮಾಂಸ ಖರೀದಿ, ತುಮಕೂರಿನ ಹಿಂದೂ ಮೀಟ್ ಮಾರ್ಟ್ ಸೇರಿದಂತೆ ವಿವಿಧ ಜಿಲ್ಲೆಯ ಪ್ರಮುಖ ಮಾರುಕಟ್ಟೆಗಳಲ್ಲಿ ಮಾಂಸ ಖರೀದಿಗೆ ಜನ ಮುಗಿಬಿದ್ದಿದ್ದಾರೆ. ಕೆಲ ಮಳಿಗೆಗಳಲ್ಲಿ ಹಲಾಲ್ ಕಟ್, ಜಟ್ಕಾ ಕಟ್ ಎಂಬ ಬೋರ್ಡ್‍ಗಳನ್ನೂ ಹಾಕಿದ್ದು, ಜಟ್ಕಾಕಟ್‍ಗೆ ಬೇಡಿಕೆ ಹೆಚ್ಚಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದಲೂ ನಿರಾಶೆಗೊಂಡಿದ್ದ ವ್ಯಾಪಾರಿಗಳ ಮೊಗದಲ್ಲೂ ಹರುಷ ತುಂಬಿದೆ. ಬರುವ ಗ್ರಾಹಕರಿಗೆ ಸಂತಸದಿಂದಲೇ ಮಾಂಸ ನೀಡಿ ಗಲ್ಲಾ ಪೆಟ್ಟಿಗೆ ತುಂಬಿಸಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಹನುಮ ಹುಟ್ಟಿದ ದಿನ ಗೊತ್ತಾ, ಸುಮ್ನೆ ತಿನ್ಲಾ- ಮಾಂಸಾಹಾರ ಭೋಜನ ಸವಿದ ಸಿದ್ದು

    NONVEG

    ದಾವಣಗೆರೆಯಲ್ಲಿ ವ್ಯಾಪಾರಿಗಳಿಗೆ ನಿರಾಶೆ
    ಯುಗಾದಿ ಹಬ್ಬದಂದು ಚಂದ್ರದರ್ಶನವಾಗದ ಹಿನ್ನಲೆಯಲ್ಲಿ ದಾವಣೆಗೆರೆ ಜಿಲ್ಲೆಯ ಜನರು ಚಿಕನ್, ಮಟನ್ ಖರೀದಿಗೆ ನಿರುತ್ಸಾಹ ತೋರಿದ್ದಾರೆ. ಪ್ರತಿ ವರ್ಷ ಹೊಸ ತೊಡಕಿನ ಸಂದರ್ಭದಲ್ಲಿ ಕಾಲಿಡಲು ಜಾಗವಿಲ್ಲದ ಸ್ಥಿತಿ ನಿರ್ಮಾಣವಾಗಿರುತ್ತಿತ್ತು. ಆದರೆ, ಇಂದು ಭಾನುವಾರವಾದರೂ ಮಾರುಕಟ್ಟೆ ಖಾಲಿ-ಖಾಲಿ ಹೊಡೆಯುತ್ತಿದೆ. ಇದರಿಂದ ಅಲಾಲ್ ಕಟ್, ಜಟ್ಕಾ ಕಟ್ ವಿವಾದ ಇಲ್ಲದಂತಾಗಿದೆ. ಚಂದ್ರದರ್ಶನವಾಗಿದ್ದರೆ ವ್ಯಾಪಾರ ಜಾತ್ರೆಯಂತಿರುತ್ತಿತ್ತು. ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಾಂಸ ಖರೀದಿಗೆ ಜನ ಹಿಂದೇಟು ಹಾಕಿದ್ದಾರೆ. ಮುಂದೆ ಎಲ್ಲರೂ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಅದೇ ರೀತಿ ನಾವು ವ್ಯಾಪಾರ ಮಾಡುತ್ತೇವೆ. ಎಲ್ಲರೂ ಸಾಮರಸ್ಯದಿಂದ ಹಳೇ ಪದ್ದತಿಯಲ್ಲೇ ವ್ಯಾಪಾರ ವಹಿವಾಟು ನಡೆಸುತ್ತೇವೆ ಎನ್ನುತ್ತಾರೆ ಇಲ್ಲಿನ ವ್ಯಾಪಾರಸ್ಥರು.

     

  • ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಹೊರಡಿಸಿಲ್ಲ: ಪ್ರಭು ಚವ್ಹಾಣ್

    ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಹೊರಡಿಸಿಲ್ಲ: ಪ್ರಭು ಚವ್ಹಾಣ್

    ಬೀದರ್: ಹಲಾಲ್ ಕಟ್ ಹಾಗೂ ಜಟ್ಕಾ ಕಟ್ ವಿಚಾರದ ನಡುವೆ ಪಶು ಸಂಗೋಪನಾ ಇಲಾಖೆ ಸ್ಟನ್ನಿಂಗ್ ಕಡ್ಡಾಯ ಮಾಡಿದ ಆದೇಶವನ್ನು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಳ್ಳಿ ಹಾಕಿದ್ದಾರೆ.

    ಸ್ಟನ್ನಿಂಗ್ ಕಡ್ಡಾಯ ಆದೇಶದ ಕುರಿತಾಗಿ ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸಚಿವರು, ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ನಮ್ಮ ಇಲಾಖೆ ಉಪನಿರ್ದೇಶಕರು (ಡಿಡಿ) ಹಲಾಲ್ ಮಾಡಬಾರದು‌, ಸ್ಟನ್ನಿಂಗ್ ಮಾಡಬೇಕು ಎಂದು ಪತ್ರ ಬರೆದಿದ್ದಾರೆ. 2001 ಕಾಯ್ದೆ ಪ್ರಕಾರ ಹಲಾಲ್ ಮಾಡಬಾರದು, ಸ್ಟನ್ನಿಂಗ್ ಮಾಡಬೇಕು ಎಂದು ಇದೆ ಎಂದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಪ್ರಾಣಿಗಳ ವಧೆಗೆ ಸ್ಟನ್ನಿಂಗ್ ಕಡ್ಡಾಯ

    ನಾನು ಈ ಬಗ್ಗೆ ಸಮಗ್ರವಾದ ಮಾಹಿತಿ ಪಡೆದು ನಮ್ಮ ಇಲಾಖೆಯ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ಏನು ಮಾಡಬೇಕು ಎಂದು ನಿರ್ಧಾರ ಮಾಡುತ್ತೇನೆ. ಪಶು ಸಂಗೋಪನಾ ಇಲಾಖೆಯಿಂದ ಸ್ಟನ್ನಿಂಗ್ ಕಡ್ಡಾಯ ಆದೇಶ ಮಾಡಿಲ್ಲ. ಡಿಡಿ ಪತ್ರ ಬರೆದಿದ್ದಾರೆ ಅಷ್ಟೇ ಎಂದು‌ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.

    ಸ್ಟನ್ನಿಂಗ್  ಎಂದರೇನು? ಎಷ್ಟು ವಿಧ?:
    `ಸ್ಟನ್ನಿಂಗ್’ ಅಂದ್ರೆ ಪ್ರಾಣಿವಧೆಗೆ ಮೊದಲು ಪ್ರಜ್ಞೆ ತಪ್ಪಿಸುವುದು. ಪ್ರಜ್ಞೆ ತಪ್ಪಿಸುವುದರಿಂದ ಪ್ರಾಣಿಗೆ ಹೆಚ್ಚು ಹಿಂಸೆಯಾಗುವುದಿಲ್ಲ. ಹಾಗಾಗಿ ಇನ್ಮುಂದೆ ಪ್ರಾಣಿವಧೆಗೂ ಮುನ್ನ ಸ್ಟನ್ನಿಂಗ್ ಕಡ್ಡಾಯಗೊಳಿಸಲಾಗಿದ್ದು, ಸ್ಟನ್ನಿಂಗ್ ಇಲ್ಲದಿದ್ದರೆ ಹೊಸ ಅಂಗಡಿಗಳಿಗೆ ಅನುಮತಿ ಇಲ್ಲ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿತ್ತು.

    ಸ್ಟನ್ನಿಂಗ್ ಪ್ರಾಣಿವಧೆಯಲ್ಲಿ ಎರಡು ವಿಧಾನಗಳಿದ್ದು, ಪ್ರಜ್ಞೆ ತಪ್ಪಿಸಿ ಪ್ರಾಣಿಗಳ ವಧೆ ಮಾಡುವುದು ಮೊದಲನೇ ವಿಧಾನ. ಮೊದಲನೇ ವಿಧಾನದ ಮೂಲಕ ಪ್ರಾಣಿಯ ತಲೆಗೆ ಬಲವಾಗಿ ಹೊಡೆಯುವುದು. ತಲೆಗೆ ಬಲವಾಗಿ ಹೊಡೆದ್ರೆ ಪ್ರಜ್ಞೆ ತಪ್ಪಲಿದೆ ಅಥವಾ ತಲೆಗೆ ಹೊಡೆದಾಗ ಮೆದುಳು ನಿಷ್ಕ್ರಿಯವಾಗಲಿದೆ. ಈ ವೇಳೆ ರಕ್ತ ಸೋರಿಕೆ ಆಗದಂತೆ ಪ್ರಾಣಿಗಳ ವಧೆ ಮಾಡುವುದಾಗಿದೆ. ಈ ಮೂಲಕ ಪ್ರಾಣಿವಧೆ ಪರಿಣತರಾದವರು ಮಾತ್ರ ಮಾಡಬಹುದುದಾಗಿದೆ. ಇದನ್ನೂ ಓದಿ: RSS, ಬಿಜೆಪಿಯವರಿಗೆ ಯಾರೂ ಹೆದರಬೇಡಿ, ಕಾಂಗ್ರೆಸ್ ನಿಮ್ಮೊಂದಿಗಿದೆ: ಡಿಕೆಶಿ

    ಎಲೆಕ್ಟ್ರಿಕ್ ಶಾಕ್ ಕೊಟ್ಟು ಪ್ರಾಣಿಗಳ ವಧೆ ಮಾಡುವುದು ಎರಡನೇ ವಿಧಾನ. ಪ್ರಾಣಿಗಳ ತಲೆಗೆ ಹೊಡೆಯುವ ಬದಲು ಎಲೆಕ್ಟ್ರಿಕ್ ಶಾಕ್ ಕೊಟ್ಟು ಪ್ರಜ್ಞೆ ತಪ್ಪಿಸುವುದು. ಈ ಮೂಲಕ ಪ್ರಾಣಿಗಳು ಹಿಂಸೆ ಅನುಭವಿಸೋ ಬದಲು ಮೂರ್ಛೆ ತಪ್ಪಿಸುವುದಾಗಿದೆ.