Tag: ಜಡೇಜಾ

  • ಒಂದೇ ಕೈಯಲ್ಲಿ ಜಡೇಜಾ ಕ್ಯಾಚ್‌ – 10 ವರ್ಷದ ಹಿಂದೆ ʼಸರ್‌ ಜಡೇಜಾʼ ಎಂದಿದ್ದ ಧೋನಿ ಟ್ವೀಟ್‌ ವೈರಲ್‌

    ಒಂದೇ ಕೈಯಲ್ಲಿ ಜಡೇಜಾ ಕ್ಯಾಚ್‌ – 10 ವರ್ಷದ ಹಿಂದೆ ʼಸರ್‌ ಜಡೇಜಾʼ ಎಂದಿದ್ದ ಧೋನಿ ಟ್ವೀಟ್‌ ವೈರಲ್‌

    ಚೆನ್ನೈ: ಚೆನ್ನೈ ಸೂಪರ್‌ ಕಿಂಗ್ಸ್‌ (CSK) ತಂಡದ ನಾಯಕ ಮಹೇಂದ್ರ ಸಿಂಗ್‌ ಧೋನಿ (MS Dhoni) ಅವರು 10 ವರ್ಷದ ಹಿಂದೆ ಆಲ್‌ರೌಂಡರ್‌ ಆಟಗಾರ ಜಡೇಜಾ (Jadeja) ಅವರನ್ನು ಹೊಗಳಿ ಮಾಡಿದ ಟ್ವೀಟ್‌ (Tweet) ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

    ಶನಿವಾರ ನಡೆದ ಪಂದ್ಯದಲ್ಲಿ ಜಡೇಜಾ ಮುಂಬೈ (Mumbai Indians) ತಂಡದ ಬ್ಯಾಟ್ಸ್‌ಮನ್‌ ಕ್ಯಾಮರೂನ್‌ ಗ್ರೀನ್‌ ಅವರನ್ನು ಕ್ಯಾಚ್‌ ಹಿಡಿದು ಔಟ್‌ ಮಾಡಿದ್ದರು.

    ಜಡೇಜಾ ಎಸೆದ ಇನ್ನಿಂಗ್ಸ್‌ನ 9ನೇ ಓವರ್‌ನ ಎರಡನೇ ಎಸೆತವನ್ನು ಬಲವಾಗಿ ಬೌಲರ್‌ ತಲೆಯ ಮೇಲೆ ಬೌಂಡರಿ ಹೊಡೆಯಲು ಗ್ರೀನ್‌ ಯತ್ನಿಸಿದರು.  ಈ ಚೆಂಡಿನಿಂದ ತಪ್ಪಿಸಿಕೊಳ್ಳಲು ಅಂಪೈರ್‌ ಕೆಳಗಡೆ ಬಾಗಿದ್ದರು. ಆದರೆ ಚೆಂಡನ್ನು ಜಡೇಜಾ ಒಂದೇ ಕೈಯಲ್ಲಿ ಹಿಡಿದು ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು. ಇದನ್ನೂ ಓದಿ: IPL 2023: ವೇಗದ ಅರ್ಧಶತಕ ಸಿಡಿಸಿ ಧೂಳೆಬ್ಬಿಸಿದ ರಹಾನೆ

    ತಮ್ಮದೇ ಬೌಲಿಂಗ್‌ನಲ್ಲಿ ಅಸಾಧ್ಯವಾದ ಕ್ಯಾಚ್‌ ಅನ್ನು ಜಡೇಜಾ ಹಿಡಿದ ಬೆನ್ನಲ್ಲೇ ಧೋನಿ ಹಳೇಯ ಟ್ವೀಟ್‌ ವೈರಲ್‌ ಆಗಿದೆ.

    “ಸರ್‌ ಜಡೇಜಾ ಕ್ಯಾಚ್ ತೆಗೆದುಕೊಳ್ಳಲು ಓಡುವುದಿಲ್ಲ. ಆದರೆ ಚೆಂಡು ಅವರನ್ನೇ ಹುಡುಕುತ್ತದೆ ಮತ್ತು ಅವರ ಕೈಗೆ ಬೀಳುತ್ತದೆ” ಎಂದು ಧೋನಿ 2013ರ ಏಪ್ರಿಲ್‌ 9 ರಂದು ಟ್ವೀಟ್‌ ಮಾಡಿದ್ದರು.

    ಮೊದಲು ಬ್ಯಾಟ್‌ ಮಾಡಿದ ಮುಂಬೈ 8 ವಿಕೆಟ್‌ ನಷ್ಟಕ್ಕೆ 157ರನ್‌ ಗಳಿಸಿತ್ತು. ಚೆನ್ನೈ ಅಜಿಂಕ್ಯಾ ರೆಹಾನೆ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 18.1 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 159 ರನ್‌ ಹೊಡೆದು 7 ವಿಕೆಟ್‌ಗಳ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಜಡೇಜಾ 20 ರನ್‌ ನೀಡಿ 3 ವಿಕೆಟ್‌ ಪಡೆದಿದ್ದರು.

  • ಸಿಎಸ್‌ಕೆ ನಾಯಕತ್ವ ಮರಳಿ ಪಡೆಯುತ್ತಿದ್ದಂತೆ ಧೋನಿ ಅಭಿಮಾನಿಗಳಿಂದ ಮೀಮ್ಸ್ ಸುರಿಮಳೆ

    ಸಿಎಸ್‌ಕೆ ನಾಯಕತ್ವ ಮರಳಿ ಪಡೆಯುತ್ತಿದ್ದಂತೆ ಧೋನಿ ಅಭಿಮಾನಿಗಳಿಂದ ಮೀಮ್ಸ್ ಸುರಿಮಳೆ

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉಸಿರು ಯಾರು ಎಂದು ಕೇಳಿದರೆ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ ನಿಸ್ಸಂಶಯವಾಗಿ ಧೋನಿ ಹೆಸರನ್ನೇ ಹೇಳುತ್ತಾರೆ. ಆದರೆ 2022ರ ಐಪಿಎಲ್ ಆರಂಭಕ್ಕೂ ಮೊದಲು ಎಂಎಸ್ ಧೋನಿ ಸಿಎಸ್‌ಕೆ ನಾಯಕತ್ವವನ್ನು ತೊರೆದು, ಅಭಿಮಾನಿಗಳಿಗೆ ಭಾರೀ ಆಘಾತ ನೀಡಿದ್ದರು.

    ಧೋನಿ ಬಳಿಕ ಸಿಎಸ್‌ಕೆ ನಾಯಕತ್ವವನ್ನು ವಹಿಸಿಕೊಂಡಿದ್ದ ರವೀಂದ್ರ ಜಡೇಜಾ ಶನಿವಾರ ತಮ್ಮ ಸ್ಥಾನವನ್ನು ಧೋನಿಗೆ ಮರಳಿ ನೀಡುತ್ತಿರುವುದರ ಬಗ್ಗೆ ಘೋಷಿಸಿದ್ದಾರೆ. ಈ ವಿಚಾರಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಹುಚ್ಚೆದ್ದಿರುವ ಧೋನಿ ಅಭಿಮಾನಿಗಳು ಮೀಮ್ಸ್ ಸುರಿಮಳೆಯನ್ನೇ ಹರಿಸಿದ್ದಾರೆ. ಇದನ್ನೂ ಓದಿ: ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

    ಕಳೆದ ಬಾರಿ ಐಪಿಎಲ್ ಚಾಂಪಿಯನ್ ಆಗಿದ್ದ ಸಿಎಸ್‌ಕೆ ತಂಡ, ಈ ಬಾರಿ ಆಡಿದ 8 ಪಂದ್ಯಗಳಲ್ಲಿ 6 ಪಂದ್ಯಗಳನ್ನು ಸೋತಿದೆ. ಈ ಹಿನ್ನೆಲೆಯಲ್ಲಿ ಜಡೇಜಾ ತಮ್ಮ ಆಟದ ಮೇಲೆ ಕೆಂದ್ರೀಕರಿಸುವ ಸಲುವಾಗಿ ಸಿಎಸ್‌ಕೆ ನಾಯಕತ್ವವನ್ನು ಧೋನಿಗೆ ವಾಪಾಸ್ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನಕ್ಕೆ ಸೋಲಿನ ಶಾಕ್ – ಕಡೆಗೂ ಗೆದ್ದು ಬೀಗಿದ ಮುಂಬೈ

    ಈ ಬಾರಿಯ ಐಪಿಎಲ್ ಮ್ಯಾಚ್‌ನಲ್ಲಿ ಸಿಎಸ್‌ಕೆ ತಂಡ ಕೇವಲ 2 ಪಂದ್ಯಗಳನ್ನು ಗೆದ್ದಿದೆ. 15ನೇ ಆವೃತ್ತಿ ಐಪಿಎಲ್ ಪ್ರಾರಂಭದಲ್ಲಿ ಸತತ 4 ಪಂದ್ಯಗಳನ್ನು ಸೋತ ಬಳಿಕ 5ನೇ ಪಂದ್ಯದಲ್ಲಿ ಸಿಎಸ್‌ಕೆ ಮೊದಲ ಬಾರಿ ಗೆಲುವು ಸಾಧಿಸಿತು. ಆ ಬಳಿಕ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದ ಸಿಎಸ್‌ಕೆ ನಂತರ ಮತ್ತೆ ಸೋಲಿನತ್ತ ಮುಖ ಮಾಡಿದೆ. ಇದೀಗ ಜಡೇಜಾ ಬದಲು ಧೋನಿ ನಾಯಕತ್ವ ನಿರ್ವಹಿಸಲು ಮುಂದಾಗಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

  • ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

    ಚೆನ್ನೈ ನಾಯಕತ್ವ ತೊರೆದ ರವೀಂದ್ರ ಜಡೇಜಾ – ಧೋನಿಗೆ ಮತ್ತೆ ಪಟ್ಟ

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾ ತೊರೆದಿದ್ದಾರೆ. ಆ ಬಳಿಕ ಇದೀಗ ಮಹೇಂದ್ರ ಸಿಂಗ್ ಧೋನಿಗೆ ಮತ್ತೆ ನಾಯಕತ್ವದ ಪಟ್ಟ ಕಟ್ಟಲಾಗಿದೆ.

    15ನೇ ಆವೃತ್ತಿ ಐಪಿಎಲ್ ಆರಂಭಕ್ಕೂ ಮುನ್ನ ಧೋನಿ, ಆಲ್‍ರೌಂಡರ್ ಜಡೇಜಾಗೆ ನಾಯಕತ್ವ ವಹಿಸಿದ್ದರು. ಆದರೆ ಜಡೇಜಾ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹೀನಾಯ ಪ್ರದರ್ಶನ ತೋರಿ ಅಂಕಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ. ಈ ಬಗ್ಗೆ ಸಿಎಸ್‍ಕೆ ತಮ್ಮ ಅಧಿಕೃತ ಟ್ವಟ್ಟರ್ ಖಾತೆಯಲ್ಲಿ ತಿಳಿಸಿದ್ದು, ಚೆನ್ನೈ ಸೂಪರ್ ಕಿಂಗ್ಸ್‌ನ  ನಾಯಕತ್ವವನ್ನು ರವೀಂದ್ರ ಜಡೆಜಾ ತೊರೆದಿದ್ದು, ಎಂ.ಎಸ್. ಧೋನಿ ಅವರು ನೂತನವಾಗಿ ನಾಯಕರಾಗಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಚೇತನ್ ಸಕಾರಿಯಾ ‘ಡ್ರ್ಯಾಗನ್ ಬಾಲ್ Z’ ಸಂಭ್ರಮಾಚರಣೆ ಹಿಂದಿದೆ ಭಾವನಾತ್ಮಕ ಸಂಬಂಧ

    CSK

    ಚೆನ್ನೈ ತಂಡ 15ನೇ ಆವೃತ್ತಿ ಐಪಿಎಲ್‍ನಲ್ಲಿ ಒಟ್ಟು 8 ಪಂದ್ಯಗಳನ್ನು ಆಡಿದ್ದು, 2 ಜಯ ಮತ್ತು 6 ಸೋಲು ಕಂಡು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈಗಾಗಲೇ ಬಹುತೇಕ ಪ್ಲೆ ಆಫ್ ಅವಕಾಶ ಕಳೆದುಕೊಂಡಿರುವ ಚೆನ್ನೈ ಇನ್ನುಳಿದ ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೇಲೆರುವ  ಪ್ರಯತ್ನದಲ್ಲಿದೆ. ಇದನ್ನೂ ಓದಿ: ಗುಜರಾತ್‌ ಟೈಟನ್ಸ್‌ಗೆ ರೋಚಕ ಜಯ – ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ

  • ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ

    ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ

    ಮುಂಬೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ 187 ರನ್‌ಗಳಿಸಿದ ಕಿಂಗ್ಸ್ ಪಂಜಾಬ್ ತಂಡವು ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ ಅವರ ಅಬ್ಬರ ಆಟದಿಂದ 11 ರನ್‌ಗಳ ಗೆಲುವು ದಾಖಲಿಸಿದೆ.

    ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲ ಬ್ಯಾಟಿಂಗ್ ಅವಕಾಶ ಪಡೆದ ಪಂಜಾಬ್ ಕಿಂಗ್ಸ್, 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 187 ರನ್‌ಗಳ ಮೊತ್ತಗಳಿಸಿತು. 187 ರನ್‌ಗಳ ಗುರಿ ಬೆನ್ನತ್ತಿದ ಚೆನ್ನೈ ತಂಡವು 20 ಓವರ್‌ಗಳಲ್ಲಿ 176 ರನ್‌ಗಳನ್ನು ಗಳಿಸಲಷ್ಟೇ ಸಾಧ್ಯವಾಯಿತು. ಇದನ್ನೂ ಓದಿ: ವಿಕೆಟ್ ನೀಡಿದ ಪೋಲಾರ್ಡ್‍ಗೆ ಮುತ್ತು ಕೊಟ್ಟು ಸಂಭ್ರಮಿಸಿದ ಕೃನಾಲ್ ಪಾಂಡ್ಯ

    Dhavan

    ಚೆನ್ನೈ ಮೊದಲ 6 ಎಸೆತಗಳಲ್ಲಿ 10 ರನ್‌ಗಳನ್ನು ಗಳಿಸಿತು. ನಂತರದಲ್ಲಿ ರಾಬಿನ್ ಉತ್ತಪ್ಪ. ಶಿವಂ ದುಬೆ ಬಹುಬೇಗನೇ ನಿರ್ಗಮಿಸಿದರು. ಆದರೆ 2ನೇ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್‌ ಆಗಿ ಕ್ರೀಸ್‌ಗಿಳಿದ ಅಂಬಟಿ ರಾಯುಡು 78ರನ್ (39 ಎಸೆತ, 7 ಬೌಂಡರಿ, 6 ಸಿಕ್ಸರ್) ಗಳನ್ನು ಚಚ್ಚುವ ಮೂಲಕ ಪಂಜಾಬ್ ಬೌಲರ್‌ಗಳ ಬೆವರಳಿಸಿದ್ದರು. ಇದರಿಂದಾಗಿ ಚೆನ್ನೈ ತಂಡಕ್ಕೆ ಗೆಲುವಿನ ಕನಸು ಚಿಗುರಿತ್ತು. ಇದನ್ನೂ ಓದಿ: 3.10 ಕೋಟಿ ರೂಪಾಯಿಯ ಐಷಾರಾಮಿ ಕಾರು ಖರೀದಿಸಿದ ಹಿಟ್ ಮ್ಯಾನ್

    RAYUDU CSK.png IPl

    ರಾಯುಡು ಆಟಕ್ಕೆ ಬ್ರೇಕ್ ಹಾಕುವಲ್ಲಿ ರಬಾಡಾ ಯಶಸ್ವಿಯಾದರು. 39ನೇ ಎಸೆತದಲ್ಲಿ ತಮ್ಮ ವಿಕೆಟ್ ಒಪ್ಪಿಸಿ ಹೊರನಡೆದರು. 5ನೇ ಕ್ರಮಾಂಕದಲ್ಲಿ ಬಂದ ಮಹೇಂದ್ರ ಸಿಂಗ್ ಧೋನಿ ಅವರು ಬಿರುಸಿನ ಆಟವನ್ನೇ ಆಡಿದರು. ಕೊನೆಯ 7ನೇ ಎಸೆತದಲ್ಲಿ ಸಿಂಗಲ್ ತೆಗೆದುಕೊಂಡ ಧೋನಿ ಕೊನೆಯ ಓವರ್‌ನಲ್ಲಿ ತಮ್ಮಲ್ಲೇ ಸ್ಟ್ರೈಕ್‌ ಉಳಿಸಿಕೊಂಡರು. 6 ಎತೆಗಳಿಗೆ 28 ರನ್‌ಗಳಷ್ಟೇ ಬೇಕಿತ್ತು. ಮೊದಲ ಬಾಲ್‌ಗೆ ಸಿಕ್ಸರ್ ಬಾರಿಸಿದರು. ಆದರೆ, 2ನೇ ಎಸೆತ ಬೌನ್ಸ್ ಆದ ಹಿನ್ನೆಲೆ ಮತ್ತೊಂದು ಸಿಕ್ಸ್ ಹೊಡೆಯುವ ಪ್ರಯತ್ನವೂ ಕೈತಪ್ಪಿತು. 3ನೇ ಎಸೆತವೂ ವಿಫಲವಾಯಿತು. ನಾಲ್ಕನೆ ಎಸೆತದಲ್ಲಿ ಸಿಕ್ಸ್ ಎತ್ತುವ ಪ್ರಯತ್ನದಲ್ಲಿದ್ದ ಧೋನಿ ಕ್ಯಾಚ್ ನೀಡಿ ನಿರ್ಗಮಿಸಿದರು. ಚೆನ್ನೈ ಅನಿವಾರ್ಯವಾಗಿ ಸೋಲಿನ ಹೊಣೆ ಹೊರಬೇಕಾಯಿತು. ಋತುರಾಜ್ ಗಾಯಕ್ವಾಡ್ 30(27), ರಾಬಿನ್ ಉತ್ತಪ್ಪ 1 (7), ಮಿಚೆಲ್ ಸ್ಯಾಟ್ನರ್ 9 (15), ಶಿವಂ ದುಬೆ 8 (7) ರನ್‌ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ ಡ್ವೇನ್ ಬ್ರಾವೋ(2/42) ಹಾಗೂ ಮಹೀಶ್ ತೀಕ್ಷಣ(1/32) ವಿಕೆಟ್ ಪಡೆದರು.

    CSK

    ಟಾಸ್ ಸೋತು ಬ್ಯಾಂಟಿಂಗ್ ಇಳಿದ ಪಂಜಾಬ್ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್(88) ಹಾಗೂ ಬನುಕಾ ರಾಜಪಕ್ಸ(42) ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ 187 ರನ್‌ಗಳ ಪೈಪೋಟಿಯ ಮೊತ್ತ ಕಲೆಹಾಕಿತು.

    ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ ಪರ ನಾಯಕ ಮಯಾಂಕ್ ಅಗರ್ವಾಲ್(18) ಬಹುಬೇಗನೆ ನಿರ್ಗಮಿಸಿದರು. ಆದರೆ 2ನೇ ಜೊತೆಯಾದ ಶಿಖರ್ ಧವನ್ 88 ರನ್(59 ಬಾಲ್, 9 ಬೌಂಡರಿ, 2 ಸಿಕ್ಸ್) ಐಪಿಎಲ್‌ನಲ್ಲಿ ಮತ್ತೊಂದು ಅರ್ಧಶತಕ ಬಾರಿಸಿ ಅಬ್ಬರಿಸಿದರು. ಇವರಿಗೆ ಸಾಥ್ ನೀಡಿದ ಬನುಕಾ ರಾಜಪಕ್ಸ 42 ರನ್(32 ಬಾಲ್, 2 ಬೌಂಡರಿ, 2 ಸಿಕ್ಸ್) ಬ್ಯಾಟಿಂಗ್ ಪ್ರದರ್ಶಿಸಿದರು. ಸಿಎಸ್‌ಕೆ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಈ ಜೋಡಿ 2ನೇ ವಿಕೆಟ್‌ಗೆ 110(71) ರನ್‌ಗಳ ಜೊತೆಯಾಟದ ಮೂಲಕ ತಂಡಕ್ಕೆ ಚೇತರಿಕೆ ನೀಡಿದರು.

    panjab

    ರಾಜಪಕ್ಸ ವಿಕೆಟ್ ಪತನದ ನಂತರ ಬಂದ ಲಿಯಮ್ ಲಿವಿಂಗ್‌ಸ್ಟೋನ್ 19 ರನ್ (7 ಬಾಲ್, 1 ಬೌಂಡರಿ, 2 ಸಿಕ್ಸ್) ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಅಲ್ಲದೇ ಧವನ್ ಹಾಗೂ ಲಿವಿಂಗ್‌ಸ್ಟೋನ್ 3ನೇ ವಿಕೆಟ್‌ಗೆ 27(11 ಎಸೆತ) ಜೊತೆಯಾಟದ ಕಾಣಿಕೆ ನೀಡಿದರು. ನಂತರ ಬಂದ ಇಂಗ್ಲೆಂಡ್ ಟೀಂನ ಆರಂಭಿಕ ಆಟಗಾರ ಜಾನಿ ಬ್ರೈಸ್ಟೋ 3 ಎಸೆತಗಳಲ್ಲಿ ಕೇವಲ 6 ರನ್‌ಗಳನ್ನು ಗಳಿಸಿ ರನೌಟ್‌ನಲ್ಲಿ ತಮ್ಮ ವಿಕೆಟ್ ಒಪ್ಪಿಸಿ ನಡೆದರು. ಬೌಲಿಂಗ್‌ನಲ್ಲಿ ಕಾಗಿಸೋ ರಬಾಡಾ ಹಾಗೂ ರಿಶಿ ಧವನ್ ತಲಾ 2 ವಿಕೆಟ್‌ಗಳನ್ನು ಪಡೆದುಕೊಳ್ಳುವ ಮೂಲಕ ತಂಡದ ಗೆಲುವಿಗೆ ನೆರವಾದರು.

    IPL 2022 PBKS VS CSK

    ರನ್ ಏರಿಕೆಯಾಗಿದ್ದು ಹೇಗೆ?
    74 ಎಸೆತಗಳಲ್ಲಿ 50 ರನ್
    75 ಎಸೆತಗಳಲ್ಲಿ 100 ರನ್
    108 ಎಸೆತಗಳಲ್ಲಿ 150 ರನ್
    120 ಎಸೆತಗಳಲ್ಲಿ 187 ರಬ್

  • ಪಾರ್ಟಿ ಮೂಡ್‌ನಲ್ಲಿ ಸಿಎಸ್‌ಕೆ ಅಂಡ್ ಟೀಂ – ಸಾಂಪ್ರದಾಯಿಕ ಉಡುಗೆಯ ಸಂಭ್ರಮ

    ಪಾರ್ಟಿ ಮೂಡ್‌ನಲ್ಲಿ ಸಿಎಸ್‌ಕೆ ಅಂಡ್ ಟೀಂ – ಸಾಂಪ್ರದಾಯಿಕ ಉಡುಗೆಯ ಸಂಭ್ರಮ

    ಮುಂಬೈ: ಐಪಿಎಲ್ ಬ್ಯೂಸಿ ಶೆಡ್ಯೂಲ್ ನಡುವೆಯು ಚೆನ್ನೈ ಸೂಪರ್‌ಕಿಂಗ್ಸ್ (CSK) ತಂಡವು ಫ್ರೀವೆಡ್ಡಿಂಗ್ ಪಾರ್ಟಿಯೊಂದರಲ್ಲಿ ಕಾಣಿಸಿಕೊಂಡಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ

    CSK TEAM SPIRIT (2)

    ನ್ಯೂಜಿಲೆಂಡ್ ಹಾಗೂ ಚೆನ್ನೈಸೂಪರ್‌ಕಿಂಗ್ಸ್ ತಂಡದ ಕ್ರಿಕೆಟಿಗ ಡಿವೈನ್ ಕಾನ್ವೇ ಹಾಗೂ ಕಿಮ್ ವಾಟ್ಸನ್ ಅವರ ಫ್ರೀವೆಡ್ಡಿಂಗ್ (ವಿವಾಹಪೂರ್ವ) ಕಾರ್ಯಕ್ರಮದಲ್ಲಿ ಕಾಣಿಸಿಕೊಂಡ ಸಿಎಸ್‌ಕೆ ಅಂಡ್ ಟೀಂ ಸಾಂಪ್ರದಾಯಿಕ ಉಡುಗೆಗಳನ್ನು ಧರಿಸಿ ಸಂಭ್ರಮಿಸಿದ್ದಾರೆ. ಭಾರತೀಯ ಸಂಪ್ರದಾಯಿಕ ಶೈಲಿಯ ಉಡುಗೆಗಳನ್ನೇ ಧರಿಸಿದ್ದ ಪ್ರಮುಖ ಕ್ರಿಕೆಟಿಗರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದು, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

    ಮಹೇಂದ್ರಸಿಂಗ್ ಧೋನಿ, ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಿವಂ ದುಬೆ, ಮೊಯಿನ್ ಅಲಿ, ಕೋಚ್ ಸ್ಟೀಫನ್ ಫ್ಲೆಮಿಂಗ್, ಋತುರಾಜ್ ಗಾಯಕ್ವಾಡ್ ಸೇರಿದಂತೆ ಹಲವರು ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

    15ನೇ ಆವೃತ್ತಿಯಲ್ಲಿ 1 ಕೋಟಿ ರೂ.ಗೆ ಖರೀದಿಯಾಗಿ ಚೆನ್ನೈ ತಂಡದ ಮೂಲಕ ಐಪಿಎಲ್ ಪ್ರವೇಶಿಸಿದ ಕಾನ್ವೇ ಕೋಲ್ಕತ್ತಾ ನೈಟ್‌ರೈಡರ್ಸ್ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ 3 ರನ್‌ಗಳಿಸಿ ನಿರ್ಗಮಿಸಿದ್ದರು. ಅದಾದ ಬಳಿಕ ಯಾವುದೇ ಮ್ಯಾಚ್‌ನಲ್ಲೂ ಅವರು ಆಟವಾಡಲಿಲ್ಲ. ಇದೀಗ ತಮ್ಮ ವಿವಾಹ ಮುಗಿದಿದ್ದು, ನಾಳೆ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಆರಂಭಿಕ ಆಟಗಾರನಾಗಿ ಸಿಎಸ್‌ಕೆ ತಂಡದಿಂದ ಕಣಕ್ಕಿಳಿಯಲಿದ್ದಾರೆ.

  • ಜಡೇಜಾ ಬುಲೆಟ್ ಥ್ರೋಗೆ ಸ್ಮಿತ್ ರನೌಟ್ – ಮತ್ತೆ ಮಿಂಚಿದ ಗಿಲ್

    ಜಡೇಜಾ ಬುಲೆಟ್ ಥ್ರೋಗೆ ಸ್ಮಿತ್ ರನೌಟ್ – ಮತ್ತೆ ಮಿಂಚಿದ ಗಿಲ್

    ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವೆ ಸಿಡ್ನಿಯಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್‌ 2ನೇ ದಿನವಾದ ಇಂದು ರವೀಂದ್ರ ಜಡೇಜಾ ಬುಲೆಟ್ ಥ್ರೋ ಮಾಡುವ ಮೂಲಕ ಶತಕದ ಆಟವಾಡಿ ಮುನ್ನುಗುತ್ತಿದ್ದ ಸ್ಟೀವನ್ ಸ್ಮಿತ್ ಅವರನ್ನು ರನೌಟ್ ಮಾಡಿದ್ದಾರೆ. ಈ ವೇಗವಾದ ರನೌಟ್‍ನಿಂದಾಗಿ ತಾನೂ ವಿಶ್ವದ ಅತ್ಯುತ್ತಮ ಫೀಲ್ಡರ್ ಎಂಬುದನ್ನು ಜಡೇಜಾ ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

    ಸಿಡ್ನಿ ಕ್ರಿಕೆಟ್ ಅಂಗಳದಲ್ಲಿ ಮೊದಲ ದಿನದ ಮಳೆಯ ನಡುವೆ ಉತ್ತಮ ಮೊತ್ತ ಕಲೆಹಾಕಿದ್ದ ಆಸೀಸ್ ದಿನದಂತ್ಯಕ್ಕೆ 166 ರನ್ ಮಾಡಿ 2 ವಿಕೆಟ್ ಕಳೆದುಕೊಂಡಿತ್ತು. ಅಲ್ಲಿಂದ 2 ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ಲಬುಶೇನ್, ಮತ್ತು ಸ್ಟೀವನ್ ಸ್ಮಿತ್ ಅವರ ಉತ್ತಮ ಜೊತೆಯಾಟದಿಂದಾಗಿ 338 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಆಲೌಟ್ ಆಗಿದೆ. ನಿನ್ನೆಯ 166 ರನ್‍ಗೆ ಇಂದು 172ರನ್ ಸೇರಿಸಿ ಆಸ್ಟ್ರೇಲಿಯಾ ಆಲೌಟ್ ಆಯ್ತು.

    ಮೊದಲ ದಿನದಾಟದಲ್ಲಿ 67 ರನ್‍ಗಳಿಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದ ಮಾರ್ನಸ್ ಲಬುಶೇನ್ 91 ರನ್(196 ಎಸೆತ, 11 ಬೌಂಡರಿ) ಹೊಡೆದು ಶತಕ ವಂಚಿತರಾದರೂ ಇನ್ನೂ 31 ರನ್ ಮಾಡಿ ಲಬುಶೇನ್‍ಗೆ ಜೊತೆಯಾಗಿದ್ದ ಸ್ಮಿತ್ 2ನೇ ದಿನ ಶತಕ ಸಿಡಿಸಿದರು.

    ಆಸ್ಟ್ರೇಲಿಯಾದ ರನ್ ಹೆಚ್ಚಿಸಲು ಬ್ಯಾಟ್ ಬಿಸುತ್ತಿದ್ದ ಸ್ಮಿತ್ 130 ರನ್(226 ಎಸೆತ, 16 ಬೌಂಡರಿ) ಗಳಿಸಿ ಆಟವಾಡುತ್ತಿದ್ದರು. 105ನೇ ಓವರ್ ಎಸೆಯಲು ದಾಳಿಗಿಳಿದ ಬುಮ್ರಾರ 4ನೇ ಎಸೆತವನ್ನು ಆಫ್ ಸೈಡ್‍ನತ್ತ ಹೊಡೆಯಲು ಮುಂದಾದ ಸ್ಮಿತ್ ಬ್ಯಾಟ್‍ಗೆ ಇನ್ ಸೈಡ್ ಎಡ್ಜ್ ಆದ ಚೆಂಡು ಸ್ವೇರ್ ಲೆಗ್‍ನತ್ತ ಹೋಗಿ ಜಡೇಜಾ ಅವರ ಕೈ ಸೇರಿತ್ತು. ಆದರೂ ಎರಡು ರನ್ ಕದಿಯುವ ಸಾಹಸಕ್ಕಿಳಿದ ಸ್ಮಿತ್, ಜಡೇಜಾ ಅವರ ಅತ್ಯುತ್ತಮ ಕ್ಷೇತ್ರ ರಕ್ಷಣೆಗೆ ದಂಡ ತೆರಬೇಕಾಯಿತು. ಇದರೊಂದಿಗೆ ಸ್ಮಿತ್ ಅವರ ಭರ್ಜರಿ ಇನ್ನಿಂಗ್ಸ್ ಕೊನೆಗೊಂಡಿತು.

    ಭಾರತದ ಪರ ಫೀಲ್ಡಂಗ್ ಜೊತೆಗೆ ಬೌಲಿಂಗ್‍ನಲ್ಲಿ ಮಿಂಚಿದ ರವೀಂದ್ರ ಜಡೇಜಾ 4 ವಿಕೆಟ್ ಕಿತ್ತರೆ, ಬುಮ್ರಾ ಮತ್ತು ಸೈನಿ ತಲಾ ಎರಡು ವಿಕೆಟ್ ಪಡೆದರು, ಸಿರಾಜ್ ಒಂದು ವಿಕೆಟ್ ಕಿತ್ತರು.

    ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ಮೊದಲ ವಿಕೆಟ್‍ಗೆ 70 ರನ್ ಪೇರಿಸಿತ್ತು ಉತ್ತಮವಾಗಿ ಆಡುತ್ತಿದ್ದ ರೋಹಿತ್ ಶರ್ಮಾ 26 ರನ್‍ಗಳಿಸಿ ಔಟಾಗಿ ನಿರಾಸೆ ಮೂಡಿಸಿದರೆ ಇನ್ನೂರ್ವ ಯುವ ಆರಂಭಿಕ ಆಟಗಾರ ಶುಭಮನ್ ಗಿಲ್ ತಮ್ಮ ಮೊದಲ ಅರ್ಧಶತಕ ಸಿಡಿಸಿ ಪ್ಯಾಟ್ ಕಮಿನ್ಸ್‍ಗೆ ವಿಕೆಟ್ ಒಪ್ಪಿಸಿದರು. ಎರಡನೇ ದಿನದಾಟದ ಅಂತ್ಯದ ವೇಳೆ ಭಾರತ 96 ರನ್ ಮಾಡಿ 2 ವಿಕೆಟ್ ಕಳೆದುಕೊಂಡಿದೆ 9 ರನ್ ಮಾಡಿರುವ ಪೂಜಾರ ಮತ್ತು 5 ರನ್ ಗಳಿಸಿ ರಹಾನೆ ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

    https://twitter.com/Naveen99688812/status/1347392326637809667

     

  • ಜಡೇಜಾ ಬದಲು ಚಹಲ್‌ ಆಟ – ಚರ್ಚೆಗೆ ಗ್ರಾಸವಾದ ಟೀಂ ಇಂಡಿಯಾ ನಡೆ

    ಜಡೇಜಾ ಬದಲು ಚಹಲ್‌ ಆಟ – ಚರ್ಚೆಗೆ ಗ್ರಾಸವಾದ ಟೀಂ ಇಂಡಿಯಾ ನಡೆ

    – ವಿರೋಧ ವ್ಯಕ್ತಪಡಿಸಿದ ಆಸೀಸ್‌ ಕೋಚ್‌
    – ಗಾಯಗೊಂಡಿದ್ದರೂ 9 ರನ್‌ ಸೇರಿಸಿದ್ದ ಜಡೇಜಾ

    ಕ್ಯಾನ್ಪೆರಾ: ಆಸ್ಟ್ರೇಲಿಯಾ ವಿರುದ್ಧ ನಡೆದ ಮೊದಲ ಪಂದ್ಯದಲ್ಲಿ ಜಡೇಜಾ ಅವರ ಬದಲಿಗೆ ಸ್ಪಿನ್ನರ್‌ ಯಜುವೇಂದ್ರ ಚಹಲ್‌ ಅವರನ್ನು ಆಡುವ 11ರ ಬಳಗದಲ್ಲಿ ಆಡಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ.

    ಮಿಚೆಲ್‌ ಸ್ಟಾರ್ಕ್‌ ಎಸೆದ ಇನ್ನಿಂಗ್ಸ್‌ನ ಕೊನೆಯ ಓವರಿನ ಎರಡನೇ ಎಸೆತ ಬೌನ್ಸರ್‌ ಆಗಿತ್ತು. ಈ ಎಸೆತ ಜಡೇಜಾ ಹೆಲ್ಮೆಟ್‌ಗೆ ಬಡಿದು ಬ್ಯಾಕ್‌ವರ್ಡ್‌ ಪಾಯಿಂಟ್‌ಗೆ ಹೋಯಿತು. ಜಡೇಜಾ ಈ ಎಸೆತದಲ್ಲಿ ಒಂದು ರನ್‌ ಓಡಿದರೂ ಅಂಗಣಕ್ಕೆ ವೈದ್ಯಾಧಿಕಾರಿ ಬಂದು ಕನ್ಕಷನ್‌ ಪರೀಕ್ಷೆ ನಡೆಸಿರಲಿಲ್ಲ.

    ನಂತರದ ಎಸೆತದಲ್ಲಿ ವಾಷಿಂಗ್ಟನ್‌ ಸುಂದರ್‌ ಔಟಾದ ಕಾರಣ ಮತ್ತೆ ಜಡೇಜಾ ಸ್ಟ್ರೈಕ್‌ಗೆ ಬಂದರು. 4 ಮತ್ತು 5ನೇ ಎಸೆತವನ್ನು ಬೌಂಡರಿಗೆ ಅಟ್ಟಿದ ಜಡೇಜಾ ಕೊನೆಯ ಎಸೆತದಲ್ಲಿ 1 ರನ್‌ ತೆಗೆಯುವ ಮೂಲಕ ತಂಡದ ಮೊತ್ತವನ್ನು 160ಕ್ಕೆ ತಂದು ನಿಲ್ಲಿಸಿದರು.

    ಇನ್ನಿಂಗ್ಸ್‌ ಬ್ರೇಕ್‌ ಸಂದರ್ಭದಲ್ಲಿ ಭಾರತ ತಂಡ ಜಡೇಜಾ ಅವರಿಗೆ ಗಂಭೀರವಾದ ಗಾಯವಾದ ಕಾರಣ ಅವರ ಬದಲು ಯಜುವೇಂದ್ರ ಚಹಲ್‌ ಅವರನ್ನು ಆಡಿಸಲು ತೀರ್ಮಾನ ತೆಗೆದುಕೊಳ್ಳಲಾಯಿತು.

    ಟೀಮ್‌ ಇಂಡಿಯಾ ಕನ್ಕಷನ್‌ ಸಬ್‌ ತೆಗೆದುಕೊಳ್ಳುತ್ತಿರುವುದಾಗಿ ಮ್ಯಾಚ್‌ ರೆಫ್ರಿ ಡೇವಿಡ್‌ ಬೂನ್‌ ಗಮನಕ್ಕೆ ತಂದಿದೆ. ಆಸ್ಟ್ರೇಲಿಯಾ ತಂಡದ ನಾಯಕ ಆರೊನ್‌ ಫಿಂಚ್ ಮತ್ತು ಮುಖ್ಯ ಕೋಚ್‌ ಜಸ್ಟಿನ್‌ ಲ್ಯಾಂಗರ್‌ಗೆ ತಿಳಿಸಿದಾಗ ಲ್ಯಾಂಗರ್‌ ಅಸಮಾಧಾನಗೊಂಡಿದ್ದಾರೆ. ಅಷ್ಟೇ ಅಲ್ಲದೇ ಡೇವಿಡ್‌ ಬೂನ್‌ ಎದುರು ವಾದಕ್ಕಿಳಿದ ಲ್ಯಾಂಗರ್‌ ಇದು ಸರಿಯಾದ ನಿರ್ಧಾರ ಅಲ್ಲ ಎಂಬ ಪ್ರತಿಕ್ರಿಯೆ ನೀಡಿದ್ದಾರೆ. ಆದರೆ ಐಸಿಸಿ ನಿಯಮಗಳನ್ನು ಪಾಲನೆ ಮಾಡಬೇಕಾದ ಕಾರಣ ರೆಫ್ರಿ ಡೇವಿನ್‌ ಬೂನ್‌ ಬದಲಿ ಆಟಗಾರನನ್ನು ಆಡಿಸಲು ಒಪ್ಪಿಗೆ ನೀಡಿದರು.  ಇದನ್ನೂ ಓದಿ: ಮೊದಲ ಪಂದ್ಯದಲ್ಲೇ ನಟರಾಜನ್ ಸೂಪರ್ ಬೌಲಿಂಗ್ – ಟೀಂ ಇಂಡಿಯಾಗೆ 11 ರನ್‍ಗಳ ರೋಚಕ ಜಯ

    ಚರ್ಚೆ ಏನು?
    ರವೀಂದ್ರ ಜಡೇಜಾ ಆಲ್‌ರೌಂಡರ್‌ ಆಟಗಾರನಾಗಿದ್ದು ಗಾಯಗೊಂಡ ಅವರ ಬದಲು ಚಹಲ್‌ ಅವರನ್ನು ಆಡಿಸಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಈಗ ಎದ್ದಿದೆ. ಅಷ್ಟೇ ಅಲ್ಲದೇ ಜಡೇಜಾ ಗಂಭೀರವಾಗಿ ಗಾಯಗೊಂಡಿದ್ದರೆ ಅರ್ಧದಲ್ಲೇ ಕ್ರೀಡಾಂಗಣವನ್ನು ತೊರೆಯಬೇಕಿತ್ತು. ಆದರೆ ನಂತರ 9 ರನ್‌ ಹೊಡೆದಿದ್ದಾರೆ. ಹೀಗಿರುವಾಗ ಗಾಯದ ಬಗ್ಗೆಯೇ ಅನುಮಾನ ಎದ್ದಿದೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

    ಈ ಹಿಂದೆ ಜಡೇಜಾ ಅವರನ್ನು ಟೀಕೆ ಮಾಡಿ ಸುದ್ದಿಯಾಗಿದ್ದ ವೀಕ್ಷಕ ವಿವರಣೆಗಾರ ಸಂಜಯ್‌ ಮಾಂಜ್ರೇಕರ್‌, ಈ ಪಂದ್ಯದ ವೇಳೆ ಭಾರತ ತಂಡ ಕನ್ಕಷನ್‌ ಸಬ್‌ಸ್ಟಿಟ್ಯೂಟ್‌ ನಿಯಮದ ದುರ್ಬಳಕೆ ಮಾಡಿಕೊಂಡಿರುವ ಸಾಧ್ಯತೆಯೂ ಇದೆ ಎಂದು ಹೇಳಿ ಬಿಸಿ  ಚರ್ಚೆಗೆ ತುಪ್ಪ ಸುರಿದರು. ಅಷ್ಟೇ ಅಲ್ಲದೇ ಐಸಿಸಿ ಈ ನಿಯಮದ ದುರ್ಬಳಕೆ ಆಗದಂತೆ ಎಚ್ಚರ ವಹಿಸುವ ಅಗತ್ಯವಿದೆ ಎಂದರು.

    ಈ ಸಂದರ್ಭದಲ್ಲಿ ಕಾಮೆಂಟೇಟರ್‌ ಹರ್ಷ ಭೋಗ್ಲೆ, ಕೆಲ ಪ್ರಕರಣಗಳಲ್ಲಿ ಬ್ಯಾಟ್ಸ್‌ಮನ್‌ಗಳಿಗೆ ತಡವಾಗಿ ಕನ್ಕಷನ್‌ ಗುಣಲಕ್ಷಣ ಕಾಣಿಸಿಕೊಳ್ಳುವ ಸಾಧ್ಯತೆ ಇರುತ್ತದೆ. ಇದಕ್ಕೆ ಕಳೆದ ವರ್ಷ ಬಾಂಗ್ಲಾದೇಶ ಮತ್ತು ಭಾರತ ನಡುವಿನ ಟೆಸ್ಟ್‌ ಪಂದ್ಯದಲ್ಲಿ ಬಾಂಗ್ಲಾ ತಂಡ ಇದೇ ರೀತಿ ತಡವಾಗಿ ಕನ್ಕಷನ್‌ ಸಬ್‌ ತೆಗೆದುಕೊಂಡ ಉದಾಹರಣೆ ಇದೆ ಎಂದು ಹೇಳಿ ಟೀಂ ಇಂಡಿಯಾ ನಡೆಯನ್ನು ಸಮರ್ಥಿಸಿಕೊಂಡರು.

    ಐಸಿಸಿ ನಿಯಮ ಏನು?
    ಬ್ಯಾಟಿಂಗ್‌ ವೇಳೆ ಚೆಂಡು ಬ್ಯಾಟ್ಸ್‌ಮನ್‌ನ ಹೆಲ್ಮೆಟ್‌ಗೆ ಬಡಿದರೆ ಆವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಂತರ ಬದಲಿ ಆಟಗಾರನನ್ನು ಆಡಿಸಬಹದು ಎಂದು ಐಸಿಸಿ 2019ರ ಜುಲೈನಲ್ಲಿ ನಿಯಮವನ್ನು ತಂದಿತ್ತು. ಈ ರೀತಿ ಆಡುವ 11ರ ಬಳಗಕ್ಕೆ ಬದಲಿ ಆಟಗಾರನಾಗಿ ಸೇರುವ ಆಟಗಾರನಿಗೆ ಬ್ಯಾಟಿಂಗ್ ಮತ್ತು ಬೌಲಿಂಗ್‌ ಮಾಡುವ ಅವಕಾಶವನ್ನು ನೀಡಲಾಗುತ್ತದೆ.

    ಈ ಪಂದ್ಯದಲ್ಲಿ ಜಡೇಜಾ ಔಟಾಗದೇ 44 ರನ್‌(23 ಎಸೆತ, 5 ಬೌಂಡರಿ, 1 ಸಿಕ್ಸರ್‌) ಹೊಡೆದರೆ ಚಹಲ್‌ 4 ಓವರ್‌ ಎಸೆದು 25 ರನ್‌ ನೀಡಿ 3 ವಿಕೆಟ್‌ ಕಿತ್ತು ಪಂದ್ಯಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾದರು.

     

  • ಕೊನೆಯ 52 ಎಸೆತದಲ್ಲಿ 100 ರನ್‌ – ಪಾಂಡ್ಯ, ಜಡೇಜಾ ಸ್ಫೋಟಕ ಆಟ, 303 ರನ್‌ ಟಾರ್ಗೆಟ್‌

    ಕೊನೆಯ 52 ಎಸೆತದಲ್ಲಿ 100 ರನ್‌ – ಪಾಂಡ್ಯ, ಜಡೇಜಾ ಸ್ಫೋಟಕ ಆಟ, 303 ರನ್‌ ಟಾರ್ಗೆಟ್‌

    ಕ್ಯಾನ್ಬೆರಾ: ಮಧ್ಯದಲ್ಲಿ ದಿಢೀರ್‌ ಕುಸಿತ ಕಂಡರೂ ಹಾರ್ದಿಕ್‌ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಅವರ ಶತಕದ ಜೊತೆಯಾಟದಿಂದ ಭಾರತ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾಗೆ 303 ರನ್‌ಗಳ ಗುರಿಯನ್ನು ನೀಡಿದೆ.

    ಟಾಸ್‌ ಗೆದ್ದು ಬ್ಯಾಟಿಂಗ್‌ ಆರಂಭಿಸಿದ ಭಾರತ 26 ರನ್‌ ಗಳಿಸಿದ್ದಾಗ 16 ರನ್‌ ಹೊಡೆದಿದ್ದ ಶಿಖರ್‌ ಧವನ್‌ ವಿಕೆಟ್‌ ಕಳೆದುಕೊಂಡಿತ್ತು. ನಂತರ ಶುಭಮನ್‌ ಗಿಲ್‌ 33 ರನ್‌ ಹೊಡೆದು ಔಟಾದರು.

    22.3 ಓವರ್‌ಗೆ 2 ವಿಕೆಟ್‌ ಕಳೆದುಕೊಂಡು 114 ರನ್‌ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಭಾರತ ನಂತರ 38 ರನ್‌ ಗಳಿಸುವಷ್ಟರಲ್ಲಿ ಅಮೂಲ್ಯವಾದ ಮೂರು ವಿಕೆಟ್‌ ಕಳೆದುಕೊಂಡಿತು.ಕೊಹ್ಲಿ 63 ರನ್‌( 78 ಎಸೆತ, 5 ಬೌಂಡರಿ), ಶ್ರೇಯಸ್‌ ಅಯ್ಯರ್‌ 19 ರನ್‌, ಕೆಎಲ್‌ ರಾಹುಲ್‌ 5 ರನ್‌ ಗಳಿಸಿ ಔಟಾದರು.

    32ನೇ ಓವರ್‌ಗೆ 152 ರನ್‌ ಆಗಿದ್ದಾಗ ಕೊಹ್ಲಿ ಔಟಾದರು. ನಂತರ ಬಂದ ಜಡೇಜಾ ಜೊತೆ ಪಾಂಡ್ಯ ಸೇರಿ ರನ್‌ ಸೇರಿಸತೊಡಗಿದರು. ಇಬ್ಬರು ಮುರಿಯದ 6ನೇ ವಿಕೆಟ್‌ಗೆ 108 ಎಸೆತಗಳಲ್ಲಿ 150 ರನ್‌ ಜೊತೆಯಾಟವಾಡಿ ತಂಡದ ಮೊತ್ತವನ್ನು 300ರ ಗಡಿ ದಾಟಿಸಿದರು.

    ಪಾಂಡ್ಯ 55 ಎಸೆತಗಳಲ್ಲಿ ಅರ್ಧಶತಕ ಹೊಡೆದರೆ ಅಂತಿಮವಾಗಿ ಔಟಾಗದೇ 92 ರನ್‌(76 ಎಸೆತ, 7 ಬೌಂಡರಿ, 1 ಸಿಕ್ಸರ್‌) ಚಚ್ಚಿದರು. ಸಾಥ್‌ ನೀಡಿದ್ದ ಜಡೇಜಾ ಔಟಾಗದೇ 66 ರನ್‌(50 ಎಸೆತ, 5 ಬೌಂಡರಿ, 3 ಸಿಕ್ಸರ್‌) ಹೊಡೆದರು. ಕೊನೆಯ 52 ಎಸೆತದಲ್ಲಿ ಈ ಜೋಡಿ 100 ರನ್‌ ಹೊಡೆದ ಪರಿಣಾಮ ಟೀಂ ಇಂಡಿಯಾ 5 ವಿಕೆಟ್‌ ನಷ್ಟಕ್ಕೆ 302 ರನ್‌ ಗಳಿಸಿತು. ಆಸ್ಟ್ರೇಲಿಯಾ ಇತರೇ ರೂಪದಲ್ಲಿ 8 ರನ್‌ ನೀಡಿತ್ತು.

    ರನ್‌ ಏರಿದ್ದು ಹೇಗೆ?
    50 ರನ್‌ – 62 ಎಸೆತ
    100 ರನ್‌ – 20 ಎಸೆತ
    150 ರನ್‌ -191 ಎಸೆತ
    200 ರನ್‌ – 250 ಎಸೆತ
    250 ರನ್‌ – 282 ಎಸೆತ
    300 ರನ್‌ – 299 ಎಸೆತ

  • ಕೊನೆಯಲ್ಲಿ ಬೌಂಡರಿ , ಸಿಕ್ಸರ್‌ ಸುರಿಮಳೆಗೈದ ಜಡೇಜಾ – ಲಾಸ್ಟ್‌ ಬಾಲಿನಲ್ಲಿ ಚೆನ್ನೈಗೆ ರೋಚಕ ಜಯ

    ಕೊನೆಯಲ್ಲಿ ಬೌಂಡರಿ , ಸಿಕ್ಸರ್‌ ಸುರಿಮಳೆಗೈದ ಜಡೇಜಾ – ಲಾಸ್ಟ್‌ ಬಾಲಿನಲ್ಲಿ ಚೆನ್ನೈಗೆ ರೋಚಕ ಜಯ

    ದುಬೈ: ಆಲ್‌ರೌಂಡರ್‌ ರವೀಂದ್ರ ಜಡೇಜಾ ಅವರ ಸ್ಫೋಟಕ ಆಟದಿಂದ ಕೋಲ್ಕತ್ತಾ ನೈಟ್‌ ರೈಡರ್ಸ್‌ ವಿರುದ್ಧ ಚೆನ್ನೈ ಸೂಪರ್‌ ಕಿಂಗ್ಸ್‌ 5 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ.

    ಗೆಲ್ಲಲು 173 ರನ್‌ಗಳ ಸವಾಲನ್ನು ಪಡೆದ ಚೆನ್ನೈ ಅಂತಿಮವಾಗಿ 20 ಓವರ್‌ಗಳಲ್ಲಿ 178 ರನ್‌ ಹೊಡೆಯಿತು. ಈ ಪಂದ್ಯವನ್ನು ಕೋಲ್ಕತ್ತಾ ಸೋತಿರುವ ಕಾರಣ ಪ್ಲೇ ಆಫ್‌ ಹಾದಿ ಕಠಿಣವಾಗಿದ್ದು ಉಳಿದ ತಂಡಗಳ ಫಲಿತಾಂಶದ ಮೇಲೆ ನಿರ್ಧಾರವಾಗಲಿದೆ.

    ಚೆನ್ನೈ ಗೆದ್ದಿದ್ದು ಹೇಗೆ?
    17. 2 ಓವರ್‌ ಆದಾಗ ಉತ್ತಮವಾಗಿ ಆಡುತ್ತಿದ್ದ ಋತುರಾಜ್‌ ಗಾಯಕ್‌ವಾಡ್‌ 72 ರನ್‌(53 ಎಸೆತ, 6 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರು. ಈ ವೇಳೆ ಕ್ರೀಸಿಗೆ ಬಂದ ಜಡೇಜಾ ಮೇಲೆ ದೊಡ್ಡ ಸವಾಲಿತ್ತು. ಕೊನೆಯ 12 ಎಸೆತಕ್ಕೆ 30 ರನ್‌ ಬೇಕಿತ್ತು. ಫರ್ಗ್ಯೂಸನ್‌ ಎಸೆದ 19ನೇ ಓವರ್‌ನಲ್ಲಿ ಜಡೇಜಾ ಎರಡು ಬೌಂಡರಿ, 1 ಸಿಕ್ಸರ್‌ ಹೊಡೆದರು. ಈ ಓವರಿನಲ್ಲಿ 20 ರನ್‌ ಬಂತು.

    ಕೊನೆಯ ಓವರ್‌ ಎಸೆಯಲು ಬಂದಿದ್ದು ನಾಗರಕೋಟಿ. ಮೊದಲ ಬಾಲಿನಲ್ಲಿ ಯಾವುದೇ ರನ್‌ ಬರಲಿಲ್ಲ. ಎರಡನೇ ಎಸೆತದಲ್ಲಿ 2 ರನ್‌ ಬಂದರೆ ಮೂರನೇ ಎಸೆತದಲ್ಲಿ ಕರ್ರನ್‌ ಒಂದು ರನ್‌ ತೆಗೆದು ಜಡೇಜಾಗೆ ಸ್ಟ್ರೈಕ್‌ ನೀಡಿದರು. 4ನೇ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲ. ಹೀಗಾಗಿ ಕೊನೆಯ 2 ಎಸೆತದಲ್ಲಿ 7 ರನ್‌ ಬೇಕಿತ್ತು. 5ನೇ ಎಸೆತದಲ್ಲಿ ಸಿಕ್ಸ್‌ ಬಂತು ಪಂದ್ಯ ಟೈ ಆಯಿತು. ಕೊನೆಯ ಎಸೆತವನ್ನೂ ಜಡೇಜಾ ಸಿಕ್ಸರ್‌ಗೆ ಅಟ್ಟಿ ಜಯವನ್ನು ತಂದಿಟ್ಟರು.

    11 ಎಸೆತದಲ್ಲಿ 3 ಸಿಕ್ಸರ್‌, 2 ಬೌಂಡರಿಯೊದಿಗೆ ಜಡೇಜಾ 31 ರನ್‌ ಹೊಡೆದರು. ಸ್ಯಾಮ್‌ ಕರ್ರನ್‌ 13 ರನ್‌ ಹೊಡೆದರು. ಅಂಬಾಟಿ ರಾಯಡು 38 ರನ್‌(20 ಎಸೆತ, 5 ಬೌಂಡರಿ, 1 ಸಿಕ್ಸರ್‌) ಹೊಡೆದು ಔಟಾದರೆ ಧೋನಿ 1 ರನ್‌ ಹೊಡೆದು ಪೆವಿಲಿಯನ್‌ ಸೇರಿದರು. ಫರ್ಗ್ಯೂಸನ್‌ 4 ಓವರ್‌ ಎಸೆದು 54 ರನ್‌ ನೀಡಿ ದುಬಾರಿಯಾದರು.

    ಕೋಲ್ಕತ್ತಾ ಪರ ನಿತೀಶ್‌ ರಾಣಾ 87 ರನ್‌(61 ಎಸೆತ, 10 ಬೌಂಡರಿ, 4 ಸಿಕ್ಸರ್)‌ ಹೊಡೆದರೆ ಶುಭಮನ್‌ ಗಿಲ್‌ 26 ರನ್‌ ಹೊಡೆದು ಔಟಾದರು. ಅಂತಿಮವಾಗಿ ಕೋಲ್ಕತ್ತಾ 20 ಓವರ್‌ಗಳಿಗೆ 5 ವಿಕೆಟ್‌ ಕಳೆದುಕೊಂಡು 172 ರನ್‌ ಹೊಡೆಯಿತು.

  • ಜಡೇಜಾ ರಾಕೆಟ್ ಥ್ರೋ, ಸ್ಟನ್ ಆದ ನೀಶಮ್ – ವಿಡಿಯೋ ನೋಡಿ

    ಜಡೇಜಾ ರಾಕೆಟ್ ಥ್ರೋ, ಸ್ಟನ್ ಆದ ನೀಶಮ್ – ವಿಡಿಯೋ ನೋಡಿ

    ಆಕ್ಲೆಂಡ್: ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

    175 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡಿಗೆ ಜಡೇಜಾ ಫೀಲ್ಡಿಂಗ್ ಮೂಲಕ ಶಾಕ್ ನೀಡಿದ್ದರು. ನವದೀಪ್ ಸೈನಿ ಎಸೆದ 35ನೇ ಓವರಿನ ಎರಡನೇ ಎಸೆತದಲ್ಲಿ ರಾಸ್ ಟೇಲರ್ ಒಂಟಿ ರನ್ ಪಡೆಯಲು ಯತ್ನಿಸಿದರು. ಬ್ಯಾಕ್‍ವರ್ಡ್ ಪಾಯಿಂಟ್ ನತ್ತ ಬರುತ್ತಿದ್ದಂತೆ ಅಲ್ಲಿಂದ ಜಡೇಜಾ ಎಡಗೈಯಲ್ಲಿ ಬಾಲ್ ಹಿಡಿದು ನೇರವಾಗಿ ಸ್ಟ್ರೈಕ್ ನಲ್ಲಿದ್ದ ವಿಕೆಟಿಗೆ ಥ್ರೋ ಮಾಡಿದರು.

    ನೀಶಮ್ ವೇಗವಾಗಿ ಓಡಿದ್ದರೂ ಕ್ರೀಸ್ ತಲುಪವ ಮುನ್ನವೇ ಬಾಲ್ ವಿಕೆಟಿಗೆ ಬಡಿದಿತ್ತು. ಬಾಲ್ ವಿಕೆಟಿಗೆ ಬಿದ್ದಿದ್ದನ್ನು ಕಂಡು ಜಡೇಜಾ ಅಲ್ಲೇ ಹಾರಿ ಸಂಭ್ರಮಿಸಿದರು. ಮೂರನೇ ಅಂಪೈರ್ ಸ್ಕ್ರೀನಿನಲ್ಲಿ ಔಟ್ ಎಂದು ತೀರ್ಪು ನೀಡುತ್ತಿದ್ದಂತೆ ಭಾರತೀಯ ಆಟಗಾರರು ಸಂಭ್ರಮಿಸಿ ಜಡೇಜಾ ಅವರನ್ನು ಅಭಿನಂದಿಸಿದರು. 3 ರನ್ ಗಳಿಸಿದ ನೀಶಮ್ ಸಪ್ಪೆ ಮುಖವನ್ನು ಹಾಕಿಕೊಂಡು ಪೆವಿಲಿಯನ್ ಕಡೆ ಹೆಜ್ಜೆ ಹಾಕಿದರು. ಇದನ್ನೂ ಓದಿ: ಮಿಂಚಿನ ವೇಗದಲ್ಲಿ ಡೈವ್ ಮಾಡಿ ವಿಕೆಟಿಗೆ ಥ್ರೋ – ವಿರಾಟ್ ರನೌಟ್‍ಗೆ ನೆಟ್ಟಿಗರು ಫಿದಾ

    ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ನ್ಯೂಜಿಲೆಂಡ್ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 273 ರನ್ ಗಳಿಸಿದೆ. ಮಾರ್ಟಿನ್ ಗಪ್ಟಿಲ್ 79 ರನ್(79 ಎಸೆತ, 8 ಬೌಂಡರಿ, 3 ಸಿಕ್ಸರ್), ಹೆನ್ರಿ ನಿಕೋಲಸ್ 41 ರನ್(59 ಎಸೆತ, 5 ಬೌಂಡರಿ), ರಾಸ್ ಟೇಲರ್ ಔಟಾಗದೇ 73 ರನ್(74 ಎಸೆತ, 6 ಬೌಂಡರಿ, 2 ಸಿಕ್ಸರ್) ಹೊಡೆದರೆ ಕೊನೆಯಲ್ಲಿ ಬೌಲರ್ ಕೈಲ್ ಜಾಮಿಸನ್ ಔಟಾಗದೇ 25 ರನ್(24 ಎಸೆತ, 1 ಬೌಂಡರಿ, 2 ಸಿಕ್ಸರ್) ಹೊಡೆದ ಪರಿಣಾಮ ನ್ಯೂಜಿಲೆಂಡ್ ಉತ್ತಮ ಮೊತ್ತ ಪೇರಿಸಿತು. ಚಹಲ್ 3 ವಿಕೆಟ್ ಪಡೆದರೆ ಶಾರ್ದೂಲ್ ಠಾಕೂರ್ 2 ವಿಕೆಟ್ ಪಡೆದರು.

    274 ರನ್ ಗಳ ಗುರಿಯನ್ನು ಪಡೆದ ಭಾರತ 96 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿದೆ. ಪೃಥ್ವಿ ಶಾ 24, ನ್, ಮಯಾಂಕ್ ಅಗರ್ವಾಲ್ 3, ವಿರಾಟ್ ಕೊಹ್ಲಿ 15, ಕೆಎಲ್ ರಾಹುಲ್ 4, ಜಾಧವ್ 9,  ಶ್ರೇಯಸ್ ಅಯ್ಯರ್ 52 ಗಳಿಸಿ ಔಟಾಗಿದ್ದಾರೆ.  ಜಡೇಜಾ 12 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. 27.4 ಓವರ್ ನಷ್ಟಕ್ಕೆ ಭಾರತ 6 ವಿಕೆಟ್ ಕಳೆದುಕೊಂಡು 129 ರನ್ ಗಳಿಸಿದೆ.

    https://twitter.com/saffron_sword3/status/1226009034479697920