Tag: ಜಡ್ಜ್

  • ಕೊಲೆಗಾರರಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌

    ಕೊಲೆಗಾರರಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿದ ಕೋರ್ಟ್‌

    ತುಮಕೂರು: ಕೊಲೆ (Murder) ಪ್ರಕರಣವೊಂದರಲ್ಲಿ ಇಬ್ಬರಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ರೂ. ದಂಡ (Fine) ವಿಧಿಸಿ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ (Judge) ಯಾದವ ಕರಕೇರ ಅವರು ತೀರ್ಪು ನೀಡಿದ್ದಾರೆ.

    ಪಾವಗಡ ತಾಲೂಕಿನ ನೇರಳೆಕುಂಟೆ ಗ್ರಾಮದ ರಾಮಾಂಜಿ ಬಿನ್ ರಾಮಪ್ಪ(40), ಸುಬ್ಬಮ್ಮ ಬಿನ್ ರಾಮಪ್ಪ (58) ಜೀವಾವಧಿ ಶಿಕ್ಷೆಗೊಳಗಾದವರು ಹಾಗೂ ಅಂಜಿನಪ್ಪ ಮೃತ ದುರ್ದೈವಿ. ಅಂಜಿನಪ್ಪ, ರಾಮಂಜಿ, ಸುಬ್ಬಮ್ಮ ಅವರು ಗ್ರಾಮದ ಮೂಗಪ್ಪ ಎಂಬವರ ಮೊಮ್ಮಕ್ಕಳಾಗಿದ್ದರು. 2019ರ ಫೆ.17ರಂದು ರಾತ್ರಿ 9 ಗಂಟೆಗೆ ತಾತಾ ಮೂಗಪ್ಪನ ತಿಥಿ ಕಾರ್ಯವನ್ನು ಅಂಜಿನಪ್ಪ ನಡೆಸಿ ಬಂದಿದ್ದ. ಆದರೆ ಉಳಿದ ಇಬ್ಬರು ಮೊಮ್ಮಕ್ಕಳು ನಾವೇ ತಾತ ಮೂಗಪ್ಪನ ತಿಥಿ ಕಾರ್ಯಗಳನ್ನು ಮಾಡಿದ್ದೇವೆ ಎಂದು ಅಂಜಿನಪ್ಪನೊಂದಿಗೆ ಜಗಳ ತೆಗೆದಿದ್ದಾರೆ.

    ಇದೇ ಜಗಳ ಮಿತಿ ಮೀರಿದ್ದು, ರಮಂಜಿ, ಸುಬ್ಬಮ್ಮ ಸೇರಿ ಮನೆಯ ಪಕ್ಕದಲ್ಲಿದ್ದ ಕೂಳೆ ಹೊಡೆದಿರುವ ಕಟ್ಟಿಗೆಯಿಂದ ಅಂಜಿನಪ್ಪನ ಹಣೆ ಮತ್ತು ಬಲಕಿವಿಯ ಬಳಿಗೆ ಜೋರಾಗಿ ಹೊಡೆದಿದ್ದಾರೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅಂಜಿನಪ್ಪ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ. ಪ್ರಕರಣದ ಬಗ್ಗೆ ಅಂದಿನ ತನಿಖಾಧಿಕಾರಿ ಸಿಪಿಐ ವೆಂಕಟೇಶ್ ಅಂತಿಮ ವರದಿಯನ್ನು ಸಲ್ಲಿಸಿದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಎಂದರೆ ಯಾರು, ಏನು ಎನ್ನುವುದನ್ನು ಭಾರತ್ ಜೋಡೋ ತೋರಿಸಿಕೊಟ್ಟಿದೆ: ಸಿದ್ದರಾಮಯ್ಯ

    ಕೊಲೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಮೇಲ್ಕಂಡಂತೆ ತೀರ್ಪು ನೀಡಿದ್ದು, ದಂಡದ ಹಣದಲ್ಲಿ ದೂರುದಾರರಾದ ರಾಮಾಂಜಿಗೆ 75 ಸಾವಿರ ರೂ.ಗಳನ್ನು ಪರಿಹಾರವಾಗಿ ನೀಡಲು ಆದೇಶಿಸಿದರು. ಸರ್ಕಾರದ ಪರವಾಗಿ ಅಭಿಯೋಜಕ ಬಿ.ಎಂ. ನಿರಂಜನಮೂರ್ತಿ ವಾದ ಮಂಡಿಸಿದ್ದರು. ಇದನ್ನೂ ಓದಿ: ಸ್ತ್ರೀ ನಿಂದನೆ, ಶೋಷಣೆ ಬಿಜೆಪಿಯವರ ಹುಟ್ಟುಗುಣ- ಗುಂಡೂರಾವ್ ಟೀಕೆ

    Live Tv
    [brid partner=56869869 player=32851 video=960834 autoplay=true]

  • ಎಸಿಬಿ ಕಾರ್ಯವೈಖರಿಗೆ ಹೈಕೋರ್ಟ್ ಜಡ್ಜ್ ಕ್ಲಾಸ್- ಬಿ ರಿಪೋರ್ಟ್ ಅಪೂರ್ಣ ಮಾಹಿತಿಗೆ ತರಾಟೆ

    ಎಸಿಬಿ ಕಾರ್ಯವೈಖರಿಗೆ ಹೈಕೋರ್ಟ್ ಜಡ್ಜ್ ಕ್ಲಾಸ್- ಬಿ ರಿಪೋರ್ಟ್ ಅಪೂರ್ಣ ಮಾಹಿತಿಗೆ ತರಾಟೆ

    ಬೆಂಗಳೂರು: ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವೈಖರಿ ವಿರುದ್ಧ ಹೈಕೋರ್ಟ್ ನ್ಯಾಯಮೂರ್ತಿ ಹೆಚ್‍ಪಿ ಸಂದೇಶ್ ಇವತ್ತು ಕೂಡ ಚಾಟಿ ಬೀಸಿದ್ದಾರೆ. ಇದುವರೆಗೂ ಎಸಿಬಿ ಹಾಕಿರುವ ಬಿ ರಿಪೋರ್ಟ್‍ಗಳ ಬಗ್ಗೆ ಸಹಿಯಿಲ್ಲದ ಅಪೂರ್ಣ ಮಾಹಿತಿ ನೀಡಿದ ಎಸಿಬಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಮೊದಲು 99 ಬಿ-ರಿಪೋರ್ಟ್‍ಗಳ ಮಾಹಿತಿ ನೀಡಿದ್ದ ಎಸಿಬಿ ಪರ ವಕೀಲರು ನಂತ್ರ ಅದನ್ನು 105ಕ್ಕೆ ಏರಿಸಿದ್ರು. ಆಗ ಸರಿಯಾಗಿ ಮಾಹಿತಿಯನ್ನು ಕೊಡ್ತಾ ಇಲ್ಲ. ನಾನು ಪದೇ ಪದೇ ಎಸಿಬಿಗೆ ಹೇಳ್ಬೇಕಾ…? ನನಗೆ ಎಲ್ಲಾ ಗೊತ್ತಿದೆ. ನೀವು ಇದರಲ್ಲಿ ಆಟ ಆಡ್ತಾ ಇದ್ದೀರಾ..? 2022ರ ಬಿ ರಿಪೋರ್ಟ್ ಎಲ್ಲಿ..? ನಾನು ಗರಂ ಆದ್ಮೇಲೆ ಮಂಜುನಾಥ್ ಮನೆ ಮೇಲೆ ರೇಡ್ ಮಾಡಿದ್ದೀರಿ..? ಮನೆಯಲ್ಲಿ ಏನು ಸಿಕ್ಕಿಲ್ಲವಂತಲ್ವಾ? ಅಷ್ಟಕ್ಕೂ ಡಿಸಿ ಮಂಜುನಾಥ್ ತಮ್ಮ ಚೇಂಬರ್‍ಗೆ ಹೇಗೆ ಖಾಸಗಿ ವ್ಯಕ್ತಿ ಬಿಟ್ಟುಕೊಂಡ್ರು.

    ಪರ್ಸನಲ್ ಅಸಿಸ್ಟೆಂಟ್ ಮಹೇಶ್ ಮೂಲಕ ಡೀಲ್ ಮಾಡಿದ್ದಾರೆ. ಮಹೇಶ್ ನೇಮಕಾತಿ ಆದೇಶ ಎಲ್ಲಿದೆ ತೋರಿಸಿ. ಹಣ ಮಾಡುವ ಸಲುವಾಗಿಯೇ ಅವರನ್ನು ಸೇರಿಸಿಕೊಂಡಿದ್ದಾರೆ. ಸಾಕ್ಷ್ಯ ಸಿಕ್ಕಿದ ಬಳಿಕ ಅರೆಸ್ಟ್ ಮಾಡ್ಬೇಕು ಅಲ್ವಾ? ನಾವು ಹೇಳುವ ತನಕ ಏನ್ ಮಾಡ್ತಾ ಇದ್ರಿ..? ನೀವು ಅರೆಸ್ಟ್ ಮಾಡದೇ ಇದ್ದದ್ದಕ್ಕೆ ನಮಗೆ ಕೋಪ ಬಂತು ಎಂದಿದ್ದಾರೆ. ಇದನ್ನೂ ಓದಿ: ಭ್ರಷ್ಟಾಚಾರ ಸಾಬೀತು – ಸರ್ಕಾರಿ ಸೇವೆಯಿಂದ PDO ವಜಾ

    ನನಗೆ ನಿಮ್ಮ ಎಡಿಜಿಪಿ ಬಗ್ಗೆ ವೈಯಕ್ತಿಕ ದ್ವೇಷ ಏನು ಇಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಎಫ್‍ಐಆರ್ ರದ್ದು ಕೋರಿ ಐಎಎಸ್ ಮಂಜುನಾಥ್ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ್ದಾರೆ. ಜುಲೈ 11ಕ್ಕೆ ವಿಚಾರಣೆ ಮುಂದೂಡಿದ್ದಾರೆ. ಇದೇ ವೇಳೆ ಪಿಎಸ್‍ಐ ಹಗರಣದ ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದ್ದಾರೆ. ಇನ್ನು ತಮ್ಮನ್ನು ಟೀಕೆ ಮಾಡದಂತೆ ನಿರ್ಭಂದ ಕೋರಿ ಎಸಿಬಿ ಎಡಿಜಿಪಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸರ್ವಿಸ್ ರೆಕಾರ್ಡ್ ಕೇಳಿರುವ ಹೈಕೋರ್ಟ್ ಆದೇಶ ರದ್ದುಪಡಿಸಬೇಕು ಎಂದು ರಿಟ್ ಅರ್ಜಿ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಜ್ಜಿ ಕುಳಿತ ಆಟೋ ರಿಕ್ಷಾದ ಬಳಿ ಬಂದು ಪ್ರಕರಣ ಇತ್ಯರ್ಥಗೊಳಿಸಿದ ಜಡ್ಜ್

    ಅಜ್ಜಿ ಕುಳಿತ ಆಟೋ ರಿಕ್ಷಾದ ಬಳಿ ಬಂದು ಪ್ರಕರಣ ಇತ್ಯರ್ಥಗೊಳಿಸಿದ ಜಡ್ಜ್

    ಉಡುಪಿ: ಕುಂದಾಪುರ, ಉಡುಪಿ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಿ ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು, ಈ ವೇಳೆ ರಿಕ್ಷಾದಲ್ಲೇ ಕುಳಿತ್ತಿದ್ದ 81 ವರ್ಷದ ವೃದ್ಧೆಯ ಪ್ರಕರಣವನ್ನು ನ್ಯಾಯಾಧೀಶರು ಆಟೋ ರಿಕ್ಷಾದ ಬಳಿ ತೆರಳಿ ಅಲ್ಲಿಯೇ ಇತ್ಯರ್ಥಗೊಳಿಸಿದ ಪ್ರಸಂಗವೂ ನಡೆಯಿತು.

    ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ, 2011ರ ಅಸಲು ದಾವೆ ಪ್ರಕರಣದಲ್ಲಿ ಲೋಕ ಅದಾಲತ್‍ನಲ್ಲಿ ಭಾಗಿಯಾಗಲು ಆಟೋ ರಿಕ್ಷಾದಲ್ಲಿ ಬಂದ ವೃದ್ಧೆ ದೇವಕಿ ಶೆಡ್ತಿ (81) ತಮ್ಮ ಮಗಳಾದ ಜಯಂತಿಯವರಿಗೆ ಜಿ.ಪಿ.ಎ. ಕೊಟ್ಟಿದ್ದರು. ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೇ ಆಟೋದಲ್ಲಿ ಕುಳಿತ್ತಿದ್ದರು. ಆ ಸಂದರ್ಭದಲ್ಲಿ 4ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೀತು ಆರ್.ಎಸ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್., ಸಂಧಾನಕಾರರಾದ ನ್ಯಾಯವಾದಿ ಮಿತೇಶ್ ಶೆಟ್ಟಿ ಹಾಗೂ ಉಭಯ ಕಕ್ಷಿದಾರರ ನ್ಯಾಯವಾದಿಗಳು ದೇವಕಿ ಶೆಡ್ತಿರವರ ಬಳಿ ಬಂದು ಜಿ.ಪಿ.ಎ. ನೀಡಿದರು. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಹಡಗು ಮುಳುಗಡೆ – ತೈಲ ಸೋರಿಕೆ ಆತಂಕದಲ್ಲಿ ದ.ಕ ಜಿಲ್ಲಾಡಳಿತ ಅಲರ್ಟ್

    ಪ್ರಕರಣ ಬಗ್ಗೆ ಸಂಪೂರ್ಣ ಪರಿಶೀಲಿಸಿ ಅನಂತರ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಂಬಯಿಯಲ್ಲಿದ್ದ ನಾಲ್ಕು ಜನ ಕಕ್ಷಿದಾರು ಭಾಗಿಯಾದ ಆನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು. ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು ಇದರಲ್ಲಿ ರಾಜಿಯಾಗಬಲ್ಲ ಅಪರಾಧ ಪ್ರಕರಣ -26, ಚೆಕ್ ಅಮಾನ್ಯ ಪ್ರಕರಣ-225 ಇತ್ಯರ್ಥ ಮಾಡಲಾಯ್ತು. ಇದನ್ನೂ ಓದಿ: ನಾವು ದಲಿತರೆಂದು ಮನೆಯ ಒಳಗೆ ಸೇರಿಸಲ್ಲ – ತಹಶೀಲ್ದಾರ್ ಮುಂದೆಯೇ ಆಶಾ ಕಾರ್ಯಕರ್ತೆ ಕಣ್ಣೀರು

    ಬ್ಯಾಂಕ್/ಹಣ ವಸೂಲಾತಿ ಪ್ರಕರಣ-19, ಎಂ.ವಿ.ಸಿ. ಪ್ರಕರಣ-185, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ-1, ಎಂ.ಎಂಆರ್.ಡಿ. ಆಕ್ಟ್ ಪ್ರಕರಣ-16, ವೈವಾಹಿಕ ಪ್ರಕರಣ-3 ಇತ್ಯರ್ಥ ಮಾಡಲಾಯ್ತು. ಸಿವಿಲ್ ಪ್ರಕರಣ-170, ಇತರ ಕ್ರಿಮಿನಲ್ ಪ್ರಕರಣ- 2,049 ಹಾಗೂ ವ್ಯಾಜ್ಯ ಪೂರ್ವ ದಾವೆ-28,079 ಹೀಗೆ ವಿವಿಧ ಪ್ರಕರಣಗಳನ್ನು ರಾಜಿ ಮುಖಾಂತರ ಇತ್ಯರ್ಥಪಡಿಸಿ 20,50,13,358 ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

    Live Tv

  • ಮೋಹಿನಿಯಾಟ್ಟಂ ನೃತ್ಯಕ್ಕೆ ಅರ್ಧದಲ್ಲೇ ತಡೆ – ಕೇರಳ ಜಡ್ಜ್‌ ಪಾಷಾ ವಿರುದ್ಧ ಖ್ಯಾತ ಕಲಾವಿದೆ ಆಕ್ರೋಶ

    ಮೋಹಿನಿಯಾಟ್ಟಂ ನೃತ್ಯಕ್ಕೆ ಅರ್ಧದಲ್ಲೇ ತಡೆ – ಕೇರಳ ಜಡ್ಜ್‌ ಪಾಷಾ ವಿರುದ್ಧ ಖ್ಯಾತ ಕಲಾವಿದೆ ಆಕ್ರೋಶ

    ತಿರುವನಂತಪುರ : ಖ್ಯಾತ ಮೋಹಿನಿಯಾಟ್ಟಂ ಕಲಾವಿದೆ ಡಾ.ನೀನಾ ಪ್ರಸಾದ್ ಅವರ ಪ್ರದರ್ಶನವನ್ನು ಅರ್ಧಕ್ಕೆ ನಿಲ್ಲಿಸುವ ಮೂಲಕ ಕೇರಳ ಪಾಲಕ್ಕಾಡ್ ಜಿಲ್ಲಾ ನ್ಯಾಯಾಧೀಶ ಕಲಂ ಪಾಷಾ ವಿವಾದ ಸೃಷ್ಟಿಸಿದ್ದಾರೆ.

    ಪಾಲಕ್ಕಾಡ್‌ ಸರ್ಕಾರಿ ಶಾಲೆಯೊಂದರಲ್ಲಿ ಡಾ.ನೀನಾ ಪ್ರಸಾದ್ ಅವರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಶನಿವಾರ ರಾತ್ರಿ 8.30ರ ವೇಳೆಗೆ ಕಾಯಕ್ರಮ ಆರಂಭಗೊಂಡಿತ್ತು.

    ಕಾರ್ಯಕ್ರಮ ಆರಂಭವಾದ ಕೆಲ ಹೊತ್ತಿನಲ್ಲಿಯೇ ಅಲ್ಲಿಗೆ ಬಂದ ಕಮಲ್ ಪಾಷಾ, ಧ್ವನಿವರ್ಧಕದ ಶಬ್ದದಿಂದ ನಿದ್ದೆ ಮಾಡಲು ಆಗುತ್ತಿಲ್ಲ ಎನ್ನುವ ಕಾರಣ ನೀಡಿ ಸಂಘಟಕರಿಗೆ ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ.

    ಸರ್ಕಾರಿ ಮೋಯನ್ ಪ್ರಾಥಮಿಕ ಶಾಲೆಯ ಬಳಿಯಲ್ಲಿಯೇ ಕಾಲಂ ಪಾಷಾ ವಾಸವಿದ್ದು, ಜಡ್ಜ್‌ ಆದೇಶದ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕೃಷ್ಣ ಮತ್ತು ಅರ್ಜುನನ ನಡುವಿನ ಸಂಬಂಧ ಬಿಂಬಿಸುವ ʼಸಖ್ಯಂ’ ಶೀರ್ಷಿಕೆಯ ಒಂದು ಗಂಟೆಯ ಪ್ರದರ್ಶನವನ್ನು ಮಧ್ಯದಲ್ಲಿ ನಿಲ್ಲಿಸಿದ್ದಾರೆ. ಕಾರ್ಯಕ್ರಮ ನಿಲ್ಲಿಸಿ ಅವಮಾನ ಮಾಡಿದ್ದಕ್ಕೆ ಹಿರಿಯ ಕಲಾವಿದೆ ನೀನಾ ಪ್ರಸಾದ್‌ ಮತ್ತು ತಂಡದವರು ವೇದಿಕೆಯ ಮೇಲೆ ಕಣ್ಣೀರಿಟ್ಟು ಕೆಳಗಡೆ ಇಳಿದಿದ್ದಾರೆ. ಇದನ್ನೂ ಓದಿ: ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ: ಬಿಜೆಪಿಗೆ ಮಮತಾ ತಿರುಗೇಟು

    ಕಾರ್ಯಕ್ರಮವನ್ನು ಅರ್ಧಕ್ಕೆ ನಿಲ್ಲಿಸಿದ್ದಕ್ಕೆ ನೀನಾ ಪ್ರಸಾದ್ ಫೇಸ್ ಬುಕ್‌ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಈ ನೃತ್ಯ ಪ್ರದರ್ಶನಕ್ಕೆ ಗಂಟೆಗಟ್ಟಲೇ ತಯಾರಿ ನಡೆಸಿ ಪಾಲಕ್ಕಾಡ್‌ಗೆ ಬಂದಿದ್ದೆವು. ಇದು ನನ್ನ ನೃತ್ಯ ವೃತ್ತಿಜೀವನದ ಕಹಿ ಅನುಭವವಾಗಿದೆ. ಇದು ನ್ಯಾಯಾಂಗ ಅಧಿಕಾರಿಯೊಬ್ಬರ ಉದ್ಧಟತನ ಎಂದು ಸಿಟ್ಟನ್ನು ಪ್ರದರ್ಶಿಸಿದ್ದಾರೆ. ನೀನಾ ಪ್ರಸಾದ್ ಅವರನ್ನು ಬೆಂಬಲಿಸಿದ ಪುರೋಗಮನ ಕಲಾ ಸಾಹಿತ್ಯ ಸಂಘ, ನ್ಯಾಯಾಧೀಶರು ಸಾಂಸ್ಕೃತಿಕ ಅಸಹಿಷ್ಣುತೆ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿದೆ. ಇದನ್ನೂ ಓದಿ: ಬಾಲಿವುಡ್ ನಲ್ಲಿ ‘ಸ್ವಾತಂತ್ರ್ಯ ವೀರ ಸಾವರ್ಕರ್’ ಸಿನಿಮಾ


    ಕೇಂದ್ರ ವಿದೇಶಾಂಗ ವ್ಯವಹಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ವಿ ಮುರುಳೀಧರನ್‌ ಪ್ರತಿಕ್ರಿಯಿಸಿ, ಪಿಣರಾಯಿ ವಿಜಯನ್ ಅವಧಿಯಲ್ಲಿ ಕೇರಳ ತಾಲಿಬಾನೀಕರಣವಾಗುತ್ತಿದೆ ಎನ್ನುವುದಕ್ಕೆ ಸಿಕ್ಕಿದ ಮತ್ತೊಂದು ಉದಾಹರಣೆಯಿದು. ಕಮ್ಯುನಿಸ್ಟ್ ಆಳ್ವಿಕೆಯಲ್ಲಿ ಕಲೆಗೆ ಸ್ವಾತಂತ್ರ್ಯವಿಲ್ಲ. ನೀನಾ ಪ್ರಸಾದ್ ಅವರ ಮೋಹಿನಿಯಾಟ್ಟಂ ಪ್ರದರ್ಶನವನ್ನು ಏಕಾಏಕಿ ನಿಲ್ಲಿಸಿರುವುದು ಕೇರಳಕ್ಕೆ ಮಾಡಿದ ಅವಮಾನ ಎಂದು ಕಿಡಿಕಾರಿದ್ದಾರೆ.

    ಕಳೆದ ವರ್ಷ ಕಲಂ ಪಾಷಾ ಪತ್ನಿಗೆ ತ್ರಿವಳಿ ತಲಾಖ್‌ ನೀಡಿ ಸುದ್ದಿಯಾಗಿದ್ದರು. ತ್ರಿವಳಿ ತಲಾಖ್ ನೀಡಿದ್ದನ್ನು ಪ್ರಶ್ನಿಸಿ ಪತ್ನಿ ಕೇರಳ ಹೈಕೋರ್ಟ್‌ ಮೊರೆ ಹೋಗಿ ಪಾಷಾ ವಿರುದ್ಧ ಕೇಸ್‌ ದಾಖಲಿಸುವಂತೆ ಮನವಿ ಮಾಡಿದ್ದರು. ತಮ್ಮ ಅರ್ಜಿಯಲ್ಲಿ ಪತ್ನಿ, ಪಾಷಾ ಅವರು 2018ರ ಮಾರ್ಚ್‌ 1 ರಂದು ಪತ್ರದ ಮೂಲಕ ತ್ರಿವಳಿ ತಲಾಖ್‌ ನೀಡಿದ್ದಾರೆ ಆರೋಪಿಸಿದ್ದರು. ತ್ರಿವಳಿ ತಲಾಖ್‌ ಒಪ್ಪದ್ದಕ್ಕೆ ಪತಿ ಮತ್ತು ಅವರ ಸಹೋದರ ಬೆದರಿಕೆ ಹಾಕಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಪಾಷಾ ಅವರ ಸಹೋದರ ಕೇಮಲ್‌ ಪಾಷಾ ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾಗಿದ್ದಾರೆ.

  • ಕಾಮಿಡಿ ಶೋಗಾಗಿ ಕಿರುತೆರೆಗೆ ಬಂದ ಶ್ರುತಿ ಹರಿಹರನ್

    ಕಾಮಿಡಿ ಶೋಗಾಗಿ ಕಿರುತೆರೆಗೆ ಬಂದ ಶ್ರುತಿ ಹರಿಹರನ್

    ಮೀಟೂ ಪ್ರಕರಣದ ನಂತರ ಕೆಲ ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ನಟಿ ಶ್ರುತಿ ಹರಿಹರನ್, ಇದೀಗ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಪರಮ್ ವಾ ಸ್ಪಾಟ್ ಲೈನ್ ‍ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ, ಅರ್ಜುನ್ ಲೂವಿಸ್ ನಿರ್ದೇಶನದ ಸ್ಟ್ರಾಬರಿ ಚಿತ್ರಕ್ಕೆ ಇವರೇ ನಾಯಕಿ. ಈಗಾಗಲೇ ‘ಸಾಲುಗಾರ’ ಹೆಸರಿನ ಸಿನಿಮಾದ ಶೂಟಿಂಗ್ ಅನ್ನು ಕಂಪ್ಲೀಟ್ ಮಾಡಿದ್ದಾರೆ. ಧನಂಜಯ್ ಮುಖ್ಯ ಭೂಮಿಕೆಯ ‘ಹೆಡ್ ಬುಷ್’ ಚಿತ್ರದಲ್ಲೂ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಕಿರುತೆರೆಗೂ ಕಾಲಿಟ್ಟಿದ್ದಾರೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಶ್ರುತಿ ಹರಿಹರನ್ ಕಿರುತೆರೆಗೆ ಕಾಲಿಡುತ್ತಿರುವುದು ಹೊಸದೇನೂ ಅಲ್ಲ. ಆದರೆ, ಈ ಬಾರಿ ಆಯ್ಕೆ ಮಾಡಿಕೊಂಡಿರುವ ವೇದಿಕೆ ಮಾತ್ರ ಹೊಸದು. ಶ್ರುತಿ ಸಿನಿಮಾ ರಂಗಕ್ಕೂ ಬರುವ ಮುನ್ನ ನೃತ್ಯ ಕಲಾವಿದೆ. ಈ ವೃತ್ತಿಯೇ ಅವರನ್ನು ‘ಲೂಸಿಯಾ’ ಚಿತ್ರಕ್ಕೆ ಆಯ್ಕೆ ಆಗುವಂತೆ ಮಾಡಿತ್ತು. ಆನಂತರ ಅವರು ಸ್ಟಾರ್ ನಟಿಯಾಗಿ ಬೆಳೆದರು. ಹಾಗಾಗಿ ಅವರನ್ನು ಖಾಸಗಿ ಮನರಂಜನಾ ವಾಹಿನಿಯೊಂದು ಡಾನ್ಸ್ ರಿಯಾಲಿಟಿ ಶೋ ಜಡ್ಜ್ ಆಗಿ ಆಯ್ಕೆ ಮಾಡಿಕೊಂಡಿತ್ತು. ಈ ಬಾರಿ ಅದೇ ವಾಹಿನಿಯೇ ಕಾಮಿಡಿ ಶೋಗೆ ತೀರ್ಪುಗಾರರಾಗಿ ಶ್ರುತಿ ಹೋಗಿದ್ದಾರೆ.

    ಈಗಾಗಲೇ ವಾಹಿನಿಯು ಪ್ರೊಮೋ ಬಿಡುಗಡೆ ಮಾಡಿದ್ದು, ಶ್ರುತಿ ಅವರ ಜತೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಕಾಮಿಡಿ ಕಲಾವಿದ ಕುರಿ ಪ್ರತಾಪ್ ತೀರ್ಪುಗಾರರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಈ ಕಾಮಿಡಿ ಕಾರ್ಯಕ್ರಮಕ್ಕೆ ಶಿವರಾಜ್ ಕೆ.ಆರ್ ಪೇಟೆ ಅವರ ನಿರೂಪಣೆ ಇರಲಿದೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರಕಾಶ್ ರೈ ಮಾಡಿದ ಟ್ವೀಟ್ ಗೆ ಜಗ್ಗಾಟ ಶುರು

    ಮುಖ್ಯಮಂತ್ರಿ ಚಂದ್ರ ಎಲ್ಲ ರೀತಿಯ ಪಾತ್ರವನ್ನೂ ಮಾಡಿದವರು. ಕಾಮಿಡಿ ಶೋಗಳಲ್ಲೂ ತೀರ್ಪುಗಾರರಾದವರು. ಕುರಿ ಪ್ರತಾಪ್ ಮಜಾ ಟಾಕೀಸ್ ಮೂಲಕ ಫೇಮಸ್ ಮತ್ತು ಕಾಮಿಡಿ ಕಲಾವಿದರು. ಆದರೆ, ಶ್ರುತಿ ಅವರು ಈ ಕಾರ್ಯಕ್ರಮದಲ್ಲಿ ಹೇಗೆ ಇರಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು.

  • 2 ಟ್ವೀಟ್‌ ಮಾಡಿ ಅಪರಾಧಿಯಾದ ಪ್ರಶಾಂತ್‌ ಭೂಷಣ್‌ – ಶಿಕ್ಷೆ ಏನಿರಬಹುದು?

    2 ಟ್ವೀಟ್‌ ಮಾಡಿ ಅಪರಾಧಿಯಾದ ಪ್ರಶಾಂತ್‌ ಭೂಷಣ್‌ – ಶಿಕ್ಷೆ ಏನಿರಬಹುದು?

    ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್‌ ಭೂಷಣ್‌ ಅಪರಾಧಿ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡಿದೆ.

    ನ್ಯಾ. ಅರುಣ್‌ ಮಿಶ್ರಾ, ಬಿ.ಆರ್.ಗವಾಯಿ ಮತ್ತು ಕೃಷ್ಣ ಮುರಾರಿ ಅವರಿದ್ದ ನ್ಯಾಯಪೀಠವು ‘ನ್ಯಾಯಾಂಗ ನಿಂದನೆ ಕಾಯ್ದೆ’ ಅನ್ವಯ ತೀರ್ಪು ನೀಡಿದ್ದು, ಶಿಕ್ಷೆಯ ಪ್ರಮಾಣವನ್ನು ಆಗಸ್ಟ್ 20ಕ್ಕೆ ಪ್ರಕಟಿಸುವುದಾಗಿ ತಿಳಿಸಿದೆ.

    ಪ್ರಶಾಂತ್ ಭೂಷಣ್ ಅವರಿಗೆ ಈ ಕಾಯ್ದೆಯ ಅಡಿ ಗರಿಷ್ಟ 6 ತಿಂಗಳು ಜೈಲು ಶಿಕ್ಷೆ ಅಥವಾ 2 ಸಾವಿರ ರೂಪಾಯಿ ದಂಡ ಅಥವಾ ಜೈಲುವಾಸ ಮತ್ತು ದಂಡ ಎರಡನ್ನೂ ವಿಧಿಸಲು ಅವಕಾಶವಿದೆ.

    ಜೂನ್‌ 27 ಹಾಗೂ 29ರಂದು ಭೂಷಣ್‌ ಎರಡು ಟ್ವೀಟ್‌ಗಳನ್ನು ಮಾಡಿದ್ದರು. ಈ ಟ್ವೀಟ್‌ಗಳ ಬಗ್ಗೆ ಭಾರೀ ಚರ್ಚೆ/ ಟೀಕೆ ವ್ಯಕ್ತವಾದ ಬಳಿಕ ಟ್ವಿಟ್ಟರ್‌ ಈ ಎರಡು ಟ್ವೀಟ್‌ಗಳನ್ನು ತೆಗೆದು ಹಾಕಿತ್ತು.

    ಈ ಬಗ್ಗೆ ಗ್ವಾಲಿಯರ್ ಮೂಲದ ವಕೀಲರೊಬ್ಬರು ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿದ್ದರು. ಬಳಿಕ ಸುಪ್ರೀಂ ಕೋರ್ಟ್‌ ನಿಮ್ಮ ವಿರುದ್ಧ ನಾವು ಯಾಕೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬಾರದು ಎಂದು ಪ್ರಶ್ನಿಸಿ ನೋಟಿಸ್‌ ಜಾರಿ ಮಾಡಿತ್ತು.

    ಶೋಕಾಸ್‌ ನೋಟಿಸ್‌ಗೆ ಅಫಿಡವಿಟ್‌ ಸಲ್ಲಿಸಿದ್ದ ಪ್ರಶಾಂತ್ ಭೂಷಣ್, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಬಗ್ಗೆ ನಿಂದನೆ ಮಾಡಿ ಟ್ವೀಟ್‌ ಮಾಡಿದ್ದು ತಪ್ಪು. ಅವರು ಬೈಕ್‌ನಲ್ಲಿ ತೆರಳುತ್ತಿರಲಿಲ್ಲ. ನಿಂತಿದ್ದ ಬೈಕ್ ಮೇಲೆ ಹೆಲ್ಮೆಟ್ ಧರಿಸದ್ದೇ ಕುಳಿತ್ತಿದ್ದನ್ನು ಗಮನಿಸುವಲ್ಲಿ ನಾನು ವಿಫಲನಾಗಿದ್ದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

    ಟ್ವೀಟ್ ಗಳ ಬಗ್ಗೆ ಪ್ರಶಾಂತ್ ಭೂಷಣ್ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಕಳೆದ ಜುಲೈ 22ರಂದು ತಮ್ಮ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ವಿಚಾರಣೆ ಏಕೆ ನಡೆಸಬಾರದು ಎಂದು ಕೇಳಿ ಶೋಕಾಸ್ ನೋಟಿಸ್‌ ನೀಡಿತ್ತು.

    ಟ್ವೀಟ್‌ನಲ್ಲಿ ಏನಿತ್ತು?
    ಮೊದಲ ಟ್ವೀಟ್ – ಭಾರತದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರದೇ ಕಳೆದ 6 ವರ್ಷದಲ್ಲಿ ಪ್ರಜಾಪ್ರಭುತ್ವವನ್ನು ಯಾವ ರೀತಿ ನಾಶ ಮಾಡಲಾಗಿದೆ ಎಂಬುದನ್ನು ಇತಿಹಾಸಕಾರರು ಹಿಂದಿರುಗಿ ನೋಡಿದರೆ, ಈ ನಾಶದಲ್ಲಿ ಸುಪ್ರೀಂ ಕೋರ್ಟ್‌ ಪಾತ್ರವನ್ನು ನೋಡಬಹುದು. ಅದರಲ್ಲೂ ವಿಶೇಷವಾಗಿ ಕಳೆದ 4 ಜಡ್ಜ್‌ಗಳ ಪಾತ್ರವನ್ನು ಸ್ಪಷ್ಟವಾಗಿ ಗಮನಿಸಬಹುದು.

    ಎರಡನೇ ಟ್ವೀಟ್‌: ನಾಗ್ಪುರದಲ್ಲಿ ರಾಜಭವನದಲ್ಲಿ ಬಿಜೆಪಿ ನಾಯಕನಿಗೆ ಸೇರಿದ 50 ಲಕ್ಷದ ಬೈಕ್‌ನಲ್ಲಿ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎಸ್ಎ ಬೊಬ್ಡೆ ಮಾಸ್ಕ್ ಮತ್ತು ಹೆಲ್ಮೆಟ್ ಧರಿಸದೆ ಸವಾರಿ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಕ್ಕೆ ಕೊರೊನಾ ಲಾಕ್‌ಡೌನ್‌ ಎಂದು ರಜೆ ಹಾಕಿ ದೇಶದ ನಾಗರಿಕರ ಮೂಲಭೂತ ಹಕ್ಕಾದ ನ್ಯಾಯ ಸಿಗದ ಸಮಯದಲ್ಲಿ ಬೈಕ್‌ ಸವಾರಿ ಮಾಡಿದ್ದಾರೆ.

    ಈ ಎರಡು ಟ್ವೀಟ್‌ ಅಲ್ಲದೇ 2009ರಲ್ಲಿ ತೆಹಲ್ಕಾ ಮ್ಯಾಗಜಿನ್‌ಗೆ ಹಿಂದಿನ ಮುಖ್ಯ ನ್ಯಾಯಮೂರ್ತಿಗಳು ಭ್ರಷ್ಟರಾಗಿದ್ದರು ಎಂದು ಸಂದರ್ಶನ ನೀಡಿದ್ದ ಪ್ರಶಾಂತ್ ಭೂಷಣ್ ಹೇಳಿಕೆ ಸಂಬಂಧ ಸುಪ್ರೀಂ ಕೋರ್ಟ್ ಅವರ ವಿರುದ್ಧ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಕೇಸ್‌ ದಾಖಲಿಸಿತ್ತು.

  • ಕುಕ್ಕೆಯಲ್ಲಿ ದಾಂಧಲೆ: ಚೈತ್ರಾಗೆ ಜಡ್ಜ್ ತಪರಾಕಿ

    ಕುಕ್ಕೆಯಲ್ಲಿ ದಾಂಧಲೆ: ಚೈತ್ರಾಗೆ ಜಡ್ಜ್ ತಪರಾಕಿ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಚೈತ್ರಾಳಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದ್ದಾರೆ.

    ಎರಡು ದಿನದ ಹಿಂದೆ ಚೈತ್ರಾ ಕುಂದಾಪುರ ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಚೈತ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಮಂಗಳೂರಿನ ಸಬ್ ಜೈಲಿನ ಸೂಪರಿಂಟೆಂಡೆಂಟ್ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಕೋರ್ಟ್ ಗೆ ಹೇಳಿಕೆ ನೀಡಿದ್ದರು.

    ಇಂದಿನ ವಿಚಾರಣೆ ವೇಳೆ ಆದೇಶವಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೇ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದಕ್ಕೆ ಜಡ್ಜ್ ಚೈತ್ರಳಿಗೆ ತಪರಾಕಿ ಹಾಕಿದ್ದಾರೆ. ನ್ಯಾಯಾಲಯಕ್ಕೆ ಅವಮಾನ ಮಾಡಿದ್ದಕ್ಕೆ ಜಡ್ಜ್ ಚೈತ್ರಾಳಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಚೈತ್ರಾ ನ್ಯಾಯಾಂಗ ಬಂಧನದ ಅವಧಿ ನವೆಂಬರ್ 19ರವರೆಗೆ ಮುಂದುವರಿಯಲಿದೆ.

    ಏನಿದು ಪ್ರಕರಣ?
    ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಸುಬ್ರಹ್ಮಣ್ಯ ಮಠ ಮತ್ತು ದೇವಸ್ಥಾನದ ಸಂಘರ್ಷ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.

    ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.

    ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿತ್ತು. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿತ್ತು. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

    ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದರು. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿತ್ತು. ಈ ಪ್ರಕರಣ ಸಂಬಂಧ ಪೊಲೀಸರು ಚೈತ್ರಾಳನ್ನು ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗುರುಗ್ರಾಮ ಶೂಟೌಟ್ ಕೇಸ್ – ನಾಲ್ಕು ದಿನಗಳಿಂದ ನಿದ್ದೆ ಇಲ್ಲದೇ ಜಡ್ಜ್ ಪತ್ನಿಯನ್ನು ಕೊಂದೇಬಿಟ್ಟ!

    ಗುರುಗ್ರಾಮ ಶೂಟೌಟ್ ಕೇಸ್ – ನಾಲ್ಕು ದಿನಗಳಿಂದ ನಿದ್ದೆ ಇಲ್ಲದೇ ಜಡ್ಜ್ ಪತ್ನಿಯನ್ನು ಕೊಂದೇಬಿಟ್ಟ!

    ಗುರುಗ್ರಾಮ: ನ್ಯಾಯಾಧೀಶರ ಪತ್ನಿಯನ್ನು ಗುಂಡಿಟ್ಟು ಕೊಲೆ ಮಾಡಿದ ಆರೋಪಿ ಹೆಡ್ ಕಾನ್ಸ್‌ಸ್ಟೇಬಲ್ ಮಹಿಪಾಲ್ ಕೌಟುಂಬಿಕ ಸಮಸ್ಯೆಯಿಂದ ನರಳುತ್ತಿದ್ದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

    ಆರೋಪಿ ಮಹಿಪಾಲ್ ಹರ್ಯಾಣದ ಗಾಯಕಿ ಕವಯಿತ್ರಿಯೊಬ್ಬರನ್ನು ಮದುವೆಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ನಿದ್ರೆಯಿಲ್ಲದೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಆರೋಪಿ ಗುರು ಮತ್ತು ಗುರುಮಾತೆ ಪ್ರಭಾವಕ್ಕೆ ಒಳಗಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    2016ರಿಂದ ಮಹಿಪಾಲ್ ಭದ್ರತಾ ಸಿಬ್ಬಂದಿಯಾಗಿ ನಿಯೋಜನೆಗೊಂಡಿದ್ದು, ಇದೂವರೆಗೂ ಆತನ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ. ಅಷ್ಟೇ ಅಲ್ಲದೇ ಮಹಿಪಾಲ್ ಜಡ್ಜ್ ಬಗ್ಗೆ ಯಾವುದೇ ದೂರು ನೀಡಿಲ್ಲ. ಹೀಗಾಗಿ ಮಹಿಪಾಲ್ ಈ ಕೃತ್ಯ ಎಸಗಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನು ಓದಿ:  ನಡುರಸ್ತೆಯಲ್ಲಿ ಜಡ್ಜ್ ಪತ್ನಿ, ಮಗನನ್ನು ಗುಂಡಿಕ್ಕಿ ಫೋನ್ ಮಾಡಿ ತಿಳಿಸಿದ!

    ಆರೋಪಿಯನ್ನು ಕೆಲಸದಿಂದ ವಜಾಮಾಡಲಾಗಿದ್ದು ಪೊಲೀಸರು 4 ದಿನಗಳ ಕಾಲ ಆತನನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕಾಗಿ ವಿಶೇಷ ತನಿಖಾ ತಂಡವನ್ನು ಹರ್ಯಾಣ ಪೊಲೀಸ್ ರಚಿಸಿದೆ.

    ವಿಲಕ್ಷಣ ಪೋಸ್ಟ್ ಹಾಕಿದ್ದ:
    ಶೂಟ್ ನಡೆಸುವ ಮುನ್ನ ದಿನವಾದ ಶುಕ್ರವಾರ ಮಹಿಪಾಲ್ ಫೇಸ್‍ಬುಕ್ ನಲ್ಲಿ ವಿಲಕ್ಷಣ ಪೋಸ್ಟ್ ಒಂದನ್ನು ಪ್ರಕಟಿಸಿದ್ದ. ನೀಲಿ ಪೆನ್ನಿನಲ್ಲಿ ‘ಪ್ಯಾಸ್ಟರ್ ರಾಬಿನ್’ ಎಂದು ಬರೆದು ಫೋಟೋ ಅಪ್ಲೋಡ್ ಮಾಡಿದ್ದ. ಈಗ ಪೊಲೀಸರು ಈ ನಿಟ್ಟಿನಲ್ಲೂ ತನಿಖೆ ಮುಂದುವರಿಸಿದ್ದಾರೆ.

    ಬಾಲ್ಯದಲ್ಲೇ ಪೋಷಕರನ್ನು ಕಳೆದುಕೊಂಡಿದ್ದ ಮಹಿಪಾಲ್ ಚಿಕ್ಕಪ್ಪನ ಆಶ್ರಯದಲ್ಲಿ ಬೆಳೆದಿದ್ದ. 2007ರಲ್ಲಿ ಪೊಲೀಸ್ ಉದ್ಯೋಗಕ್ಕೆ ಸೇರಿದ್ದ ಈತ 2008ರಲ್ಲಿ ಮೀನಾ ಅವರನ್ನು ಮದುವೆಯಾಗಿದ್ದ. ಈ ದಂಪತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

    ಮಹಿಪಾಲ್ ಗುರು ಇಂದ್ರಜೀತ್ ಸಿಂಗ್ ಎಂದು ಶಂಕೆ ವ್ಯಕ್ತವಾಗಿದ್ದು, 2015ರ ಆಗಸ್ಟ್ ನಲ್ಲಿ ಮತಾಂತರ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಹೋಟೆಲ್ ಮೇಲೆ ದಾಳಿ ನಡೆಸಿ ಇಂದ್ರಜೀತ್ ಸಿಂಗ್ ಸೇರಿದಂತೆ 8 ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಮಹಿಪಾಲ್ ಸಿಂಗ್ ಮಧ್ಯಸ್ಥಿಕೆಯ ಬಳಿಕ ಎಲ್ಲರನ್ನೂ ಬಿಡುಗಡೆ ಮಾಡಲಾಗಿತ್ತು ಎನ್ನುವ ವಿಚಾರ ತಿಳಿದುಬಂದಿದೆ.

    ಆರೋಗ್ಯ ಪರೀಕ್ಷೆಯ ವೇಳೆ ಆತನಿಗೆ ಯಾವುದೇ ಸಮಸ್ಯೆ ಇಲ್ಲ ಎನ್ನುವ ಫಲಿತಾಂಶ ಬಂದಿದ್ದು, ಯಾವುದೋ ಒತ್ತಡಕ್ಕೆ ಒಳಗಾಗಿ ಈ ಕೃತ್ಯ ಎಸಗಿರಬಹುದು ಎನ್ನುವ ಶಂಕೆ ಈಗ ವ್ಯಕ್ತವಾಗಿದೆ.

    ಗುರುಗ್ರಾಮದಲ್ಲಿ ಶನಿವಾರ ಮಹಿಪಾಲ್ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಕೃಷ್ಣ ಕಾಂತ್ ಅವರ ಪತ್ನಿ ರಿತು ಮತ್ತು ಮಗ ಧ್ರುವ್ ಮೇಲೆ ಗುಂಡಿನ ದಾಳಿ ನಡೆಸಿದ್ದ. ಮಾರುಕಟ್ಟೆಯಲ್ಲಿ ಶಾಪಿಂಗ್ ಮಾಡುತ್ತಿದ್ದ ವೇಳೆ ಈ ಕೃತ್ಯ ಎಸಗಿದ್ದ. ಕೃತ್ಯದ ಬಳಿಕ ನ್ಯಾಯಾಧೀಶರಿಗೆ ಫೋನ್ ಕರೆ ಮಾಡಿ ಮಾಹಿತಿ ನೀಡಿದ್ದ. ರಿತು ಮತ್ತು ಧ್ರುವ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಿತು ಮೃತಪಟ್ಟಿದ್ದಾರೆ. ಧ್ರುವ್ ಪರಿಸ್ಥಿತಿ ಗಂಭೀರವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿಶ್ವಮಟ್ಟದಲ್ಲಿ ಭಾರತಕ್ಕೆ ದೊಡ್ಡ ಜಯ: ಐಸಿಜೆಗೆ ದಲ್ವೀರ್ ಭಂಡಾರಿ ಪುನರಾಯ್ಕೆ

    ವಿಶ್ವಮಟ್ಟದಲ್ಲಿ ಭಾರತಕ್ಕೆ ದೊಡ್ಡ ಜಯ: ಐಸಿಜೆಗೆ ದಲ್ವೀರ್ ಭಂಡಾರಿ ಪುನರಾಯ್ಕೆ

    ನ್ಯೂಯಾರ್ಕ್: ಹೇಗ್‍ನಲ್ಲಿರುವ ಅಂತರ ರಾಷ್ಟ್ರೀಯ ನ್ಯಾಯಾಲಯ(ಐಸಿಜೆ) ನ್ಯಾಯಾಧೀಶರಾಗಿ ದಲ್ವೀರ್ ಭಂಡಾರಿ ಪುನರಾಯ್ಕೆ ಆಗುವ ಮೂಲಕ ಭಾರತಕ್ಕೆ ವಿಶ್ವ ಮಟ್ಟದಲ್ಲಿ ದೊಡ್ಡ ಜಯ ಸಿಕ್ಕಿದೆ. ಕೊನೆ ಕ್ಷಣದಲ್ಲಿ ಬ್ರಿಟನ್ ಅಭ್ಯರ್ಥಿ ಕ್ರಿಸ್ಟೋಫರ್ ಗ್ರೀನ್ ವುಡ್ ನಾಮಪತ್ರ ಹಿಂತೆಗೆದುಕೊಂಡ ಕಾರಣ ಭಂಡಾರಿ ಸುಲಭವಾಗಿ ಗೆದ್ದುಕೊಂಡಿದ್ದಾರೆ.

    ನ್ಯೂಯಾರ್ಕ್‍ನಲ್ಲಿರುವ ವಿಶ್ವಸಂಸ್ಥೆ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ಭಂಡಾರಿ ಅವರಿಗೆ ಸಾಮಾನ್ಯ ಸಭೆಯಲ್ಲಿ 193 ಮತಗಳ ಪೈಕಿ 183 ಮತಗಳು ಬಿದ್ದಿದ್ದರೆ, ಭದ್ರತಾ ಮಂಡಳಿಯಲ್ಲಿ ಎಲ್ಲ 15 ಮತಗಳೂ ಭಂಡಾರಿ ಪರ ಚಲಾವಣೆಯಾಗಿವೆ.

    ಐಸಿಜೆಯಲ್ಲಿ ತೆರವಾಗಿದ್ದ 5 ಸ್ಥಾನಗಳಿಗೆ ಈ ಹಿಂದೆ 4 ನ್ಯಾಯಮೂರ್ತಿಗಳ ಆಯ್ಕೆ ನಡೆದಿದ್ದು, ಬಾಕಿ ಇದ್ದ ಒಂದು ಸ್ಥಾನಕ್ಕಾಗಿ ದಲ್ವೀರ್ ಭಂಡಾರಿ ಹಾಗೂ ಬ್ರಿಟನ್‍ನ ಕ್ರಿಸ್ಟೋಫರ್ ಗ್ರೀನ್‍ವುಡ್ ಕಣದಲ್ಲಿದ್ದರು. ಈಗ ದಲ್ವೀರ್ ಭಂಡಾರಿ ಆಯ್ಕೆಯಾಗುವ ಮೂಲಕ 1945ರಲ್ಲಿ ಅಸ್ತಿತ್ವಕ್ಕೆ ಬಂದ ಐಸಿಜೆಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬ್ರಿಟನ್ ನ್ಯಾಯಾಧೀಶರಿಗೆ ಸ್ಥಾನವಿಲ್ಲದಾಗಿದೆ.

    ಸಾಮಾನ್ಯ ಸಭೆ ಹಾಗೂ ಭದ್ರತಾ ಮಂಡಳಿಗಳೆರಡರಲ್ಲೂ ಬಹುಮತ ಗಿಟ್ಟಿಸಿದ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎನ್ನುವ ನಿಯಮದ ಐಸಿಜೆಯಲ್ಲಿದೆ. ಹೀಗಾಗಿ ಸಾಮಾನ್ಯ ಸಭೆಯಲ್ಲಿ 97 ಹಾಗೂ ಭದ್ರತಾ ಮಂಡಳಿಯಲ್ಲಿ 8 ಮತ ಗಳಿಸಿದವರಷ್ಟೇ ಐಸಿಜೆಗೆ ಆಯ್ಕೆಯಾಗುತ್ತಾರೆ. ಆದರೆ ಈ ಹಿಂದೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಸಭೆಯಲ್ಲಿ ಭಂಡಾರಿ ಅವರಿಗೆ ಹೆಚ್ಚಿನ ಮತ ಬಿದ್ದಿದ್ದರೆ, ಭದ್ರತಾ ಮಂಡಳಿಯಲ್ಲಿ ಕ್ರಿಸ್ಟೋಫರ್ ಗ್ರೀನ್‍ವುಡ್ ಅವರಿಗೆ ಹೆಚ್ಚಿನ ಮತಗಳು ಬಿದ್ದ ಕಾರಣ ಆಯ್ಕೆ ಕಗ್ಗಂಟಾಗಿತ್ತು. ಭಂಡಾರಿ ಹಾಗೂ ಗ್ರೀನ್‍ವುಡ್ ತಲಾ ಒಂದರಲ್ಲಿ ಮಾತ್ರ ಬಹುಮತ ಪಡೆದಿರುವುದರಿಂದ 12ನೇ ಸುತ್ತಿನ ಮತದಾನಕ್ಕಾಗಿ ವಿಶ್ವಸಂಸ್ಥೆಯ ಮುಖ್ಯ ಕಚೇರಿಯಲ್ಲಿ ಸೋಮವಾರ ಸಾಮಾನ್ಯ ಸಭೆ ಮತ್ತು ಭದ್ರತಾ ಮಂಡಳಿಯ ಸಭೆ ಕರೆಯಲಾಗಿತ್ತು.

    ಐಸಿಜೆಯ 15 ಸದಸ್ಯರ ಪೀಠದ 5 ಮಂದಿ ಜಡ್ಜ್ ಗಳು 9 ವರ್ಷಗಳ ಕಾಲ ನ್ಯಾಯಾಧೀಶರಾಗಿ ಮುಂದುವರಿಯಲು ಅವಕಾಶವಿದೆ. ಈ ರೀತಿ ಜಡ್ಜ್ ಆಗಿ ಮುಂದುವರೆಯಬೇಕಾದರೆ ಚುನಾವಣೆ ಸ್ಪರ್ಧಿಸಿ ಆಯ್ಕೆಯಾಗಬೇಕಾಗುತ್ತದೆ. ಮೂರು ವರ್ಷಕ್ಕೊಮ್ಮೆ ವಿಶ್ವಸಂಸ್ಥೆ ಚುನಾವಣೆ ನಡೆಸಿ ನ್ಯಾಯಾಧೀಶರನ್ನು ಆಯ್ಕೆ ಮಾಡುತ್ತದೆ.

    ದಲ್ವೀರ್ ಭಂಡಾರಿ ಯಾರು?
    1947 ಅಕ್ಟೋಬರ್ 1 ರಂದು ರಾಜಸ್ಥಾನದಲ್ಲಿ ಜನಿಸಿದ್ದ ದಲ್ವೀರ್ ಭಂಡಾರಿ ಈ ಹಿಂದೆ ದೆಹಲಿ ಹೈಕೋರ್ಟ್, ಬಾಂಬೆ ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು. 2005 ಅಕ್ಟೋಬರ್ 28 ರಿಂದ 2012 ಏಪ್ರಿಲ್ 27ರವರೆಗೆ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನಿವೃತ್ತರಾದ ಬಳಿಕ 2012 ಏಪ್ರಿಲ್ ನಲ್ಲಿ ಐಸಿಜೆಗೆ ಆಯ್ಕೆಯಾಗಿದ್ದರು.

    ಮೋದಿ ಅಭಿನಂದನೆ:
    ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ದಲ್ವೀರ್ ಭಂಡಾರಿ ಅವರನ್ನು ಅಭಿನಂದಿಸಿದ್ದಾರೆ. ಅಷ್ಟೇ ಅಲ್ಲದೇ ಚುನಾವಣೆಯಲ್ಲಿ ವಿಜಯಿ ಆಗಲು ಶ್ರಮಪಟ್ಟ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಎಲ್ಲ ರಾಜತಾಂತ್ರಿಕ ತಂಡವನ್ನು ಅಭಿನಂದಿಸಿದ್ದಾರೆ. ಜೊತೆಗೆ ಭಾರತದ ನ್ಯಾಯಾಧೀಶರಾಗಿ ಆಯ್ಕೆ ಆಗಲು ಸಹಕಾರ ನೀಡಿದ್ದಕ್ಕೆ ಸಾಮಾನ್ಯ ಸಭೆ ಮತ್ತು ಭದ್ರತಾ ಮಂಡಳಿಯಲ್ಲಿರುವ ಎಲ್ಲ ದೇಶಗಳಿಗೆ ಧನ್ಯವಾದ ತಿಳಿಸಿದ್ದಾರೆ.

    ಸುಷ್ಮಾ ಸ್ವರಾಜ್ ವಂದೇ ಮಾತರಂ ಎಂದು ಬರೆದು ತಮ್ಮ ಸಂತಸವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: ನೀವು ನಮ್ಮ ಪ್ರಧಾನಿ ಆಗಿದ್ರೆ ಚೆನ್ನಾಗಿರ್ತಿತ್ತು: ಸುಷ್ಮಾ ಸ್ವರಾಜ್‍ಗೆ ಪಾಕ್ ಮಹಿಳೆ ಟ್ವೀಟ್