ಮಂಡ್ಯ: ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರು ಮುಖ್ಯಮಂತ್ರಿ ಆಗಿದ್ದಾಗ ಜನತಾ ದರ್ಶನ ಅತ್ಯದ್ಭುತವಾಗಿ ಯಶಸ್ವಿಯಾಗಿತ್ತು. ಜನರ ಸಮಸ್ಯೆ ಆಲಿಸುವ ಮೂಲಕವೇ ಮನೆ ಮಾತಾಗಿದ್ದರು. ಇದೀಗ ಮತ್ತೆ ಅದೇ ಹಾದಿಯಲ್ಲಿ ಸಾಗಲು ಮುಂದಾಗಿದ್ದಾರೆ. ಕೇಂದ್ರದ ಉಕ್ಕು ಹಾಗೂ ಬೃಹತ್ ಕೈಗಾರಿಕಾ ಸಚಿವರಾದ ಬಳಿಕ ಮಂಡ್ಯಕ್ಕೆ ಎರಡನೇ ಬಾರಿಗೆ ಆಗಮಿಸಿದ್ದ ಹೆಚ್ಡಿಕೆ, ಇಡೀ ದಿನ ಜನತಾ ದರ್ಶನ ನಡೆಸಿದರು.
ಮಂಡ್ಯದ (Mandya) ಅಂಬೇಡ್ಕರ್ ಭವನದಲ್ಲಿ ನಡೆದ ಜನತಾ ದರ್ಶನಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಭಾಗಿಯಾಗಿದ್ದರು. ಪ್ರಾರಂಭದಲ್ಲೇ ವಿಶೇಷಚೇತನರ ಬಳಿಗೆ ತೆರಳಿ ಅರ್ಜಿಗಳನ್ನ ಸ್ವೀಕರಿಸಿದರು. ಕೇಂದ್ರ ಸಚಿವರು ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಯಾವೊಬ್ಬ ಅಧಿಕಾರಿಗಳು ಕೂಡ ಬಂದಿರಲಿಲ್ಲ. ಇದು ಸಚಿವರ ಆಕ್ರೋಶಕ್ಕೆ ಕಾರಣವಾಯ್ತು. ರಾಜ್ಯ ಸರ್ಕಾರ ಹೊಸದಾಗಿ ಸುತ್ತೋಲೆ ಹೊರಡಿಸಿ ಅಧಿಕಾರಿಗಳು ಹೋಗದಂತೆ ತಡೆದಿದ್ದಾರೆ. ಇದು ನನ್ನ ಮನೆಯ ಕಾರ್ಯಕ್ರಮವಲ್ಲ. ಸರ್ಕಾರ ಸಣ್ಣತನ ತೋರುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮ ಗೋಲ್ಮಾಲ್ ತನಿಖೆ ಮತ್ತೆ ಚುರುಕು – ನಾಗೇಂದ್ರ, ದದ್ದಲ್ಗೆ ಎಸ್ಐಟಿ ನೋಟಿಸ್
ಜನತಾ ದರ್ಶನಕ್ಕೆ ಸಾವಿರಾರು ಜನರು ಪಾಲ್ಗೊಂಡಿದ್ದರು. ಒಮ್ಮೆಲೆ ಅಹವಾಲು ಸಲ್ಲಿಸಲು ಮುಗಿಬಿದ್ದಿದ್ದರಿಂದ ಕೆಲಕಾಲ ನೂಕುನುಗ್ಗಲು ಉಂಟಾಯಿತು. ಜನರನ್ನ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು. ಬಳಿಕ ವೇದಿಕೆ ಮೇಲೆ ಕುಳಿತು ಎಲ್ಲರ ಸಮಸ್ಯೆಗಳನ್ನ ಖುದ್ದು ಕುಮಾರಸ್ವಾಮಿ ಕೇಳಿದರು. ಊಟಕ್ಕೂ ಬ್ರೇಕ್ ಕೊಡದೇ ಜನರ ಸಮಸ್ಯೆ ಆಲಿಸುತ್ತಿದ್ದ ಕುಮಾರಸ್ವಾಮಿ, ಸಂಜೆ 4 ಗಂಟೆಗೆ ಅರ್ಜಿ ಸ್ವೀಕರಿಸುತ್ತಲೇ ಚಿತ್ರಾನ್ನ, ಮೊಸರನ್ನ ಸೇವಿಸಿದರು. ಜೆಡಿಎಸ್ ಶಾಸಕ ಮಂಜು, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ ಸೇರಿದಂತೆ ಹಲವು ಜೆಡಿಎಸ್ ಮುಖಂಡರು ಸಾಥ್ ನೀಡಿದರು.
ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನಿನ್ನೆ ದಿನ ನಡೆಸಿದ ಜನತಾ ದರ್ಶನವನ್ನು ಜನಸ್ಪಂದನಾ (Janaspandana) ಎಂದಿದ್ದಾರೆ. ಸಿಎಂ ಅವರ ಜನ ಸ್ಪಂದನವನ್ನು ಅಭಿನಂದಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.
ಕೊಡಗಿನ (Kodagu) ಮಡಿಕೇರಿ (Madikeri) ತಾಲೂಕಿನ ಹಾಕತ್ತೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ಬರಲು ಹೇಳಿ ನಾಡಿನ ಜನತೆಯ ಸಮಸ್ಯೆ ಆಲಿಸಿದ್ದಾರೆ. ಈಗಲಾದರೂ ಇವರಿಗೆ ರಾಜ್ಯದ ಜನತೆಯ ಗ್ರೌಂಡ್ ರಿಯಾಲಿಟಿ ಅರ್ಥವಾಗಿದೆ ಎಂದುಕೊಂಡಿದ್ದೇನೆ. ವಿವಿಧ ಸಮಸ್ಯೆಗಳು ಜನಸ್ಪಂದನದಲ್ಲಿ ಅರ್ಥವಾಗಿರಬಹುದು. ಒಬ್ಬ ಸಿಎಂ ಜನಸ್ಪಂದನೆ ಮಾಡುವುದನ್ನು ನಾನು ಅಭಿನಂದಿಸುತ್ತೇನೆ. ಈ ವಿಷಯದಲ್ಲಿ ನಾನು ಎಲ್ಲವನ್ನು ಟೀಕಿಸುವುದಿಲ್ಲ ಎಂದಿದ್ದಾರೆ.
ಮುಂದಿನ 3 ತಿಂಗಳಲ್ಲಿ ಮತ್ತೆ ಜನಸ್ಪಂದನಾ ಮಾಡುತ್ತೇನೆ ಎಂದಿದ್ದಾರೆ. ಅಧಿಕಾರಿಗಳಿಗೆ 3 ತಿಂಗಳ ಗಡುವು ನೀಡಿದ್ದಾರೆ. ಈಗ ಅವರಿಗೆ ಅರ್ಥ ಆಗಿರಬಹುದು. ಅಧಿಕಾರಿಗಳು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು. ನಾನು ಜನತಾ ದರ್ಶನ ಮಾಡಿದಾಗ ಬೆಳಗ್ಗೆ 9 ರಿಂದ ರಾತ್ರಿ 1 ಗಂಟೆವರೆಗೆ ಮಾಡಿದ್ದೆ. ಅಂದು ಇದ್ದ ಸಮಸ್ಯೆಗಳು ಈಗಲೂ ಮುಂದುವರಿದಿವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಕೇಸ್ ವಾಪಸ್; ಹೈಕೋರ್ಟ್ ಮೆಟ್ಟಿಲೇರಿದ ಯತ್ನಾಳ್
ಬಿಜೆಪಿ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದ ಆರ್ ಅಶೋಕ್ ಅವರು ಕೂಡ ಮಾಡಿದ್ದರು. ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಅಂತ ಮಾಡಿದ್ದರು. ತಿಂಗಳಿಗೆ ಒಂದು ಗ್ರಾಮಕ್ಕೆ ಅವರು ಭೇಟಿ ನೀಡಿದ್ದರು. ಈಗ ಸಿಎಂ ಅವರು ಜನಸ್ಪಂದನಾ ಮಾಡಿದ್ದಾರೆ. ಅವರಿಗೆ ಮನವರಿಕೆ ಆಗಿರುವ ಕಷ್ಟಗಳನ್ನು ಸಿಎಂ ಆದಷ್ಟು ಬಗೆಹರಿಸಲಿ. ಆಗ ಅವು ಅರ್ಥಪೂರ್ಣ ಆಗುತ್ತವೆ ಎಂದು ಹೆಚ್ಡಿಕೆ ಹೇಳಿದರು. ಇದನ್ನೂ ಓದಿ: ಯಾರೇ ನಿಂತರೂ 2 ಲಕ್ಷ ಮತಗಳ ಅಂತರದಿಂದ ಗೆಲ್ತೀನಿ: ಪ್ರತಾಪ್ ಸಿಂಹ
ಬೆಂಗಳೂರು: ಜನ ಸ್ಪಂದನ ಹೆಸರಿನಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ದಿನವಿಡೀ ನಡೆಸಿದ ಜನತಾ ದರ್ಶನಕ್ಕೆ (Janata Darshan) ಭರ್ಜರಿ ಪ್ರತಿಕ್ರಿಯೆ ಸಿಕ್ಕಿದೆ. ಸಿಎಂ ಬಳಿಕ ತಮ್ಮ ದೂರು ದುಮ್ಮಾನ, ಕಷ್ಟ ಕೋಟಲೆಗಳನ್ನು ಹೇಳಿಕೊಳ್ಳಲು ಇಡೀ ದಿನ ಸಿಎಂ ಗೃಹಕಚೇರಿ ಕೃಷ್ಣಾ ಬಳಿ ಸಾವಿರಾರು ಮಂದಿ ಬಂದಿದ್ದರು.
ಊಟಕ್ಕೂ ಮನೆಯೊಳಗೆ ಹೋಗದ ಸಿಎಂ ಸಿದ್ದರಾಮಯ್ಯ, ಅಲ್ಲೇ ಕುಳಿತು 10 ನಿಮಿಷದಲ್ಲಿ ಊಟ ಮುಗಿಸಿ ಜನರ ಕಷ್ಟಗಳಿಗೆ ದನಿಯಾಗುವ ಕೆಲಸ ಮಾಡಿದರು. ಸಮಸ್ಯೆ ಕೇಳಿದ್ದಕ್ಕೆ ಹಿರಿಯ ವ್ಯಕ್ತಿಯೊಬ್ಬರು ಸಿಎಂ ತಲೆಯನ್ನು ಪ್ರೀತಿಯಿಂದ ನೇವರಿಸಿದರು.
ಬೆಳಗ್ಗೆ 10:30ರಿಂದ ಸಂಜೆ 5 ಗಂಟೆವರೆಗೂ 3500ಕ್ಕೂ ಹೆಚ್ಚು ಅರ್ಜಿಗಳನ್ನು ಸಿಎಂ ಸ್ವೀಕರಿಸಿದ್ದು, ಗಂಭೀರ ಅನಾರೋಗ್ಯ, ವರ್ಗಾವಣೆಯಂತಹ 65 ಸಮಸ್ಯೆಗಳಿಗೆ ಸಿಎಂ ಸ್ಥಳದಲ್ಲೇ ಪರಿಹಾರ ನೀಡಿದರು. ಕೆಲ ಅರ್ಜಿಗಳ ಪರಿಶೀಲನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. ಇದನ್ನೂ ಓದಿ: ದೃಷ್ಟಿ ಸಮಸ್ಯೆಯಿದ್ದರೂ ದೇಶಕ್ಕಾಗಿ ಕ್ರಿಕೆಟ್ ಆಡುವ ಯುವತಿಗೆ ಬೇಕಿದೆ ಸಹಾಯ
ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಅತ್ತಿತ್ತ ಕದಲದಂತೆ, ಜನರ ಸಮಸ್ಯೆಗಳನ್ನು ಇತ್ಯರ್ಥ ಮಾಡುವುದಕ್ಕೆ ಬಿಟ್ಟಿದ್ದರು. ಜನತಾದರ್ಶನಕ್ಕೆ ಚಿತ್ರವಿಚಿತ್ರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬಂದಿದ್ದ ಕೆಲವರು ಸಿಎಂ ಗಮನ ಸೆಳೆಯಲು ಯತ್ನಿಸಿದರು.
ದೂರು ಸ್ವೀಕರಿಸಲು 20 ಕೌಂಟರ್ ತೆರೆಯಲಾಗಿತ್ತು. ಹಿರಿಯ ನಾಗರೀಕರು, ವಿಶೇಷ ಚೇತನರಿಗೆ ಪ್ರತ್ಯೇಕ ಕೌಂಟರ್ ತೆರೆಯಲಾಗಿತ್ತು. ದೂರದೂರುಗಳಿಂದ ಬಂದಿದ್ದವರಿಗೆ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿಧನ
ಆನ್ಲೈನ್ ಮೂಲಕವೂ ಸಿಎಂಗೆ ದೂರು ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. 1902ಕ್ಕೆ ಕರೆ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೂರು ತಿಂಗಳಿಗೊಮ್ಮೆ ಜನಸ್ಪಂದನ ನಡೆಸುವುದಾಗಿ ಸಿಎಂ ಘೋಷಿಸಿದ್ದಾರೆ.
ಯಾವೆಲ್ಲ ದೂರು ಬಂದಿತ್ತು? ಗೃಹಲಕ್ಷ್ಮಿ ಯೋಜನೆ ತಾಂತ್ರಿಕ ತೊಂದರೆ ಬಗೆಹರಿಸಿ
ಗೃಹಲಕ್ಷ್ಮಿ ಯೋಜನೆ (Gruhalakshmi Scheme) ಅರ್ಜಿ ತೆಗೆದುಕೊಳ್ಳುತ್ತಿಲ್ಲ. ಎಲ್ಲಾ ಕೆವೈಸಿ ಅಪ್ಡೇಟ್ ಮಾಡಿ ದಾಖಲೆ ಸಲ್ಲಿಸಿದರೂ ಅರ್ಜಿ ಸ್ವೀಕಾರದಲ್ಲಿ ತಾಂತ್ರಿಕ ಸಮಸ್ಯೆ ಬಗ್ಗೆ ಹಲವರಿಂದ ದೂರು ನೀಡಿದರು. ಈ ಸಮಸ್ಯೆಯನ್ನು ಬೇಗ ಬಗೆಹರಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ಸಕಾಲ ಸಿಬ್ಬಂದಿಗೆ ವೇತನ ರಿಲೀಸ್ ಮಾಡಿಸಿ ಮಹಿಳೆ ಕಣ್ಣೀರು
2011 ರಲ್ಲಿ ನಿಯೋಜನೆಗೊಂಡ ಸಕಾಲ ಸಿಬ್ಬಂದಿಗೆ ಕಳೆದ ಒಂದು ವರ್ಷದಿಂದ ವೇತನ ನೀಡುತ್ತಿಲ್ಲ ಎಂದು ಮಹಿಳೆಯೊಬ್ಬರು ಕಣ್ಣೀರು ಹಾಕಿದರು. ಬೆಂಗಳೂರು ಉತ್ತರ, ದಕ್ಷಿಣ ತಾಲೂಕು ಕಚೇರಿಗಳ ಸಕಾಲ ಸಿಬ್ಬಂದಿಗೆ ಬಾಕಿ ವೇತನ ಬಿಡುಗಡೆಗೆ ಸಿಎಂ ಸೂಚಿಸಿದರು.
ವಿಕ್ಟೋರಿಯಾ ಅವ್ಯವಸ್ಥೆ ಸರಿ ಮಾಡಿಸಿ
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆಯಿಂದ ಕೂಡಿದೆ ಎಂದ ಅಜ್ಜಿಯೊಬ್ಬರು ದೂರು ನೀಡಿದರು. ಚಳಿ ಜ್ವರದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಈ ವೇಳೆ ಅಲ್ಲಿರುವ ಸಿಬ್ಬಂದಿ ನಿರ್ಲಕ್ಷ ತೋರಿದ್ದಾರೆ ಎಂದು ಅಳಲು ತೋಡಿಕೊಂಡರು.
ಪಹಣಿ ಸಮಸ್ಯೆ.. ವಿಜಯನಗರ ಡಿಸಿಗೆ ಕ್ಲಾಸ್
ವಿಜಯನಗರ ಡಿಸಿಗೆ ತರಾಟೆಗೆ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಪಹಣಿ ವಿಚಾರಕ್ಕೆ ನನ್ನ ಬಳಿ ಬರಬೇಕಾ? ಇದನ್ನೆಲ್ಲ ನೀವೇ ಪರಿಹಾರ ಮಾಡಲು ಆಗುದಿಲ್ಲವೇ? ಎಂದು ಪ್ರಶ್ನಿಸಿ ವಿಡಿಯೋ ಕಾನ್ಫರೆನ್ಸ್ ಕ್ಲಾಸ್ ತೆಗೆದುಕೊಂಡರು.
ವಿಜಯೇಂದ್ರ, ಪ್ರೀತಂ ವಿರುದ್ಧ ದೂರು
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (Vijayendra) ಹಾಸನ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಮಹೇಂದ್ರ ಎಂಬವರು ದೂರು ನೀಡಿದರು. ಅನಾಥ ಮಕ್ಕಳಿಗಾಗಿ ಕೊಟ್ಟಿದ್ದ ಭೂಮಿ ಸಮಸ್ಯೆಯಾಗಿದೆ. ಸರ್ಕಾರಿ ಉದ್ಯೋಗಿಯಾದ ತನ್ನ ಪತ್ನಿಗೂ ಪ್ರೀತಂಗೌಡ ಕಿರುಕುಳ ಕೊಡ್ತಿದ್ದಾರೆ ಎಂದು ಅಳಲು ತೋಡಿಕೊಂಡರು. ತನಿಖೆ ಮಾಡಿಸುವುದಾಗಿ ಸಿಎಂ ಭರವಸೆ ನೀಡಿದರು.
ರಾಕೇಶ್ ಸಿದ್ದರಾಮಯ್ಯ ಟ್ರಸ್ಟ್ಗೆ 22 ಗುಂಟೆ ಜಮೀನು
ಗದಗದಲ್ಲಿ ಪುತ್ರನ ಹೆಸರಿನ ಟ್ರಸ್ಟ್ಗೆ ಸಿಎಂ ನಿವೇಶನ ಮಂಜೂರು ಮಾಡಿಸಿದ್ದರು. ಆದರೆ ಸಚಿವ ಹೆಚ್ಕೆ ಪಾಟೀಲ್ ಈ ಜಮೀನನ್ನು ಬೇರೆ ಉದ್ದೇಶಕ್ಕೆ ಹಸ್ತಾಂತರಿಸಲು ಸೂಚಿಸಿದ್ದಾರೆ. ಹೀಗಾಗಿ ಟ್ರಸ್ಟ್ ಮುಖ್ಯಸ್ಥ ರಾಮಕೃಷ್ಣ ರೊಳ್ಳಿ ಸಿಎಂ ಬಳಿ ದೂರಿತ್ತರು. ಕೂಡಲೇ ಗದಗ ಡಿಸಿಗೆ ಕರೆ ಮಾಡಿದ ಸಿಎಂ, ಆ 22 ಗಂಟೆ ನಿವೇಶನವನ್ನು ರಾಕೇಶ್ ಸಿದ್ದರಾಮಯ್ಯ (Rakesh Siddaramaiah) ಟ್ರಸ್ಟ್ಗೆ ಕೊಡಬೇಕು ಎಂದು ನಿರ್ದೇಶನ ನೀಡಿದರು.
ರಾಹುಲ್ ಗಾಂಧಿ ಭೇಟಿ ಮಾಡಿಸಿ
ಅಥಣಿಯ ಅಶೋಕ್ ಎಂಬವರು ಊರಿನಲ್ಲಿ ಇಂದಿರಾಗಾಂಧಿ ಪ್ರತಿಮೆ ಮಾಡಿದ್ದೇನೆ. ಅದನ್ನು ತೋರಿಸಲು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿ ಮಾಡಿಸಿ ಎಂದು ಬೇಡಿಕೆಯಿಟ್ಟರು. ಇದಕ್ಕೆ ಹೌದಾ ಎಂದ ಸಿಎಂ ಅವರಿಗೆ ಹೇಳ್ತೀನಿ ಹೋಗು ಎಂದು ಹೇಳಿ ಕಳುಹಿಸಿಕೊಟ್ಟರು.
ಚಾಮರಾಜನಗರ: ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನಡೆಸಿದ ಜನತಾ ದರ್ಶನ (Janatha Darshana) ಸಭೆ ಹೈ ಡ್ರಾಮಾವೊಂದಕ್ಕೆ ಸಾಕ್ಷಿಯಾಯ್ತು.
ನಗರದ ಜಿಲ್ಲಾಧಿಕಾರಿ ಕಚೇರಿಯ ಜೆ.ಹೆಚ್ ಪಟೇಲ್ ಸಭಾಂಗಣದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದಿದ್ದ ವ್ಯಕ್ತಿ ಡ್ರಾಮಾ ಮಾಡಿದ್ದಾನೆ. ನಗರದಲ್ಲಿ ರಸ್ತೆ ಅಗಲೀಕರಣ ವೇಳೆಯ ಜಿಲ್ಲಾಡಳಿತ ಸ್ವಾಧೀನಪಡಿಸಿಕೊಂಡಿದ್ದ ನಿವೇಶನಕ್ಕೆ ಇನ್ನೂ ಪರಿಹಾರ ನೀಡಿಲ್ಲ ಎಂದು ವ್ಯಕ್ತಿಯೊಬ್ಬರು ದೂರು ನೀಡಿದರು. ಅಲ್ಲದೆ ನನಗೆ 40 ವರ್ಷ ಆದರೂ ಮದುವೆ ಆಗಿಲ್ಲ. ಸರ್ಕಾರದಿಂದ ಬೇರೆ ನಿವೇಶನವೂ ಸಿಕ್ಕಿಲ್ಲ ಎಂದು ಸಚಿವರ ಮುಂದೆ ಅಳಲು ತೋಡಿಕೊಂಡರು.
ಬೆಂಗಳೂರು: ರಾಜ್ಯದ ಇತಿಹಾದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಜನತಾ ದರ್ಶನಕ್ಕೆ (Janata Darshan) ನಾಡು ಇಂದು ಸಾಕ್ಷಿಯಾಗಲಿದೆ.
ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ.
ಮುಖ್ಯಮಂತ್ರಿಗಳ ಸೂಚನೆ ಏನು?
ಆಡಳಿತಕ್ಕೆ ಚುರುಕು ಮುಟ್ಟಿಸಿ, ಸರ್ಕಾರಿ ಯಂತ್ರಾಂಗವನ್ನು ಕ್ರಿಯಾಶೀಲಗೊಳಿಸುವ ಪ್ರಯತ್ನವಾಗಿ ನಡೆಸಿದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಹತ್ತು ದಿನಗಳ ಹಿಂದೆ ಒಂದು ಸೂಚನೆ ನೀಡಿದ್ದರು. ಜಾತಿ ಪ್ರಮಾಣಪತ್ರ, ಖಾತೆ ಬದಲಾವಣೆ, ಟ್ರಾನ್ಸ್ ಫಾರ್ಮರ್ ರಿಪೇರಿ, ವಿದ್ಯುತ್ ಕಂಬ ಅಳವಡಿಕೆಯಂತಹ ಸಣ್ಣ ಪುಟ್ಟ ಕೆಲಸಗಳಿಗೂ ಜನ ನನ್ನ ಬಳಿಗೆ ಬರುತ್ತಿದ್ದಾರೆ. ನಾನು ಜಿಲ್ಲೆಗಳಿಗೆ ಭೇಟಿ ನೀಡಿದಾಗ ಜನರು ಇಷ್ಟು ಸಣ್ಣ ಪುಟ್ಟ ಕೆಲಸಗಳಿಗೂ ನನ್ನನ್ನು ಹುಡುಕಿಕೊಂಡು ಬರುವಂತಾಗಿದೆ ಎಂದರೆ ನೀವುಗಳಿದ್ದೂ ಏನು ಪ್ರಯೋಜನ ಎಂದು ಸಭೆಯಲ್ಲಿ ಪ್ರಶ್ನಿಸಿದ್ದರು. ಬಳಿಕ ಪ್ರತಿ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲೂ ಜನತಾ ದರ್ಶನ ನಡೆಸಬೇಕು ಎನ್ನುವ ಸೂಚನೆಯನ್ನೂ ನೀಡಿದ್ದರು.
ಸ್ವರೂಪ ಏನು?
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಜನತಾ ದರ್ಶನ ನಡೆಸುತ್ತಾರೆ. ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿರುತ್ತಾರೆ. ಇವರೆಲ್ಲರ ನಡುವೆ ಸಮನ್ವಯ ಸಾಧಿಸಿ ಜನತಾ ದರ್ಶನ ಅರ್ಥಪೂರ್ಣವಾಗಿ ಮತ್ತು ಫಲಪ್ರದವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಹಿರಿಯ ಐಎಎಸ್ ಅಧಿಕಾರಿಗಳ ಮೇಲೆ ಇರುತ್ತದೆ.
ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ ಬಗ್ಗೆ ಸಾರ್ವಜನಿಕರಿಗೆ ಈಗಾಗಲೇ ತಿಳಿವಳಿಕೆ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಜನತಾ ದರ್ಶನ ಆರಂಭವಾಗಬೇಕು ಎನ್ನುವ ಸೂಚನೆ ಸರ್ಕಾರದ ಕಡೆಯಿಂದ ಹೋಗಿದೆ. ಇಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು. ಈ ಅಹವಾಲುಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಒದಗಿಸುವುದು ಪ್ರಥಮ ಆಧ್ಯತೆಯಾಗಿರುತ್ತದೆ. ತಾಂತ್ರಿಕ ಕಾರಣಗಳಿಂದ ಇದು ಸಾಧ್ಯವಾಗದಿದ್ದರೆ ಸಾರ್ವಜನಿಕರ ಅಹವಾಲುಗಳು ಸ್ಥಳದಲ್ಲೇ ದಾಖಲಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ವರ್ಗಾವಣೆಗೊಳ್ಳುತ್ತವೆ. ಎಲ್ಲದಕ್ಕೂ ಕಾಲ ಮಿತಿಯಲ್ಲಿ ಪರಿಹಾರ ಒದಗಿಸುವ ಮತ್ತು ಸಾರ್ವಜನಿಕರು ನೀಡಿದ ಅಹವಾಲಿನ ಸ್ಥಿತಿಗತಿಯನ್ನು ಅರ್ಜಿದಾರರಿಗೆ ಮನವರಿಕೆ ಮಾಡಿಸುವ ಜವಾಬ್ದಾರಿ ಕೂಡ ಜಿಲ್ಲಾಡಳಿತದ ಮೇಲೆ ಇರುತ್ತದೆ.
ಸಾರ್ವಜನಿಕರ ಅಹವಾಲು ಎಲ್ಲಿ ದಾಖಲಾಗುತ್ತವೆ?
ಜನತಾ ದರ್ಶನದಲ್ಲಿ ಸಲ್ಲಿಕೆಯಾಗುವ ಸಾರ್ವಜನಿಕರ ಅಹವಾಲುಗಳು ಈಗಾಗಲೇ ಚಾಲ್ತಿಯಲ್ಲಿರುವ “ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್-ಇಂಟೆಗ್ರೇಟೆಡ್ ಪಬ್ಲಿಕ್ ಗ್ರಿವಿಯೆನ್ಸ್ ರಿಡ್ರೆಸಲ್ ಸಿಸ್ಟಂ) ತಂತ್ರಾಂಶದಲ್ಲಿ ದಾಖಲಾಗುತ್ತದೆ ಮತ್ತು ಇಲ್ಲಿಂದಲೇ ಸಂಬಂಧಪಟ್ಟ ಇಲಾಖೆಯ ಟೇಬಲ್ಲಿಗೆ ಅರ್ಜಿಗಳ ವಿಲೇವಾರಿಯೂ ನಡೆಯುತ್ತದೆ. ಬಳಿಕ ಕಾಳಜಿ ವಹಿಸಿ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎನ್ನುವ ಸೂಚನೆ ಈಗಾಗಲೇ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ರವಾನೆಯಾಗಿದೆ.
ತಾಲ್ಲೂಕು ಮಟ್ಟದ ಜನತಾ ದರ್ಶನ
ನಾಳೆ ಇಡಿ ರಾಜ್ಯಾದ್ಯಂತ ಜಿಲ್ಲಾ ಮಟ್ಟದ ಜನತಾ ದರ್ಶನ ಸಭೆ ನಡೆದ ಬೆನ್ನಲ್ಲೇ ಪ್ರತಿ ಹದಿನೈದು ದಿನಗಳಿಗೆ ಒಮ್ಮೆ ಜಿಲ್ಲಾಧಿಕಾರಿಗಳು ಒಂದು ತಾಲ್ಲೂಕನ್ನು ಆರಿಸಿಕೊಂಡು ತಾಲ್ಲೂಕು ಮಟ್ಟದ ಜನತಾ ದರ್ಶನ ಸಭೆ ನಡೆಸಬೇಕು ಎನ್ನುವ ಆದೇಶವನ್ನೂ ಈಗಾಗಲೇ ಮುಖ್ಯಮಂತ್ರಿಗಳ ಸೂಚನೆಯಂತೆ, ಅಪರ ಮುಖ್ಯ ಕಾರ್ಯದರ್ಶಿ ಆಗಿರುವ ರಜನೀಶ್ ಗೋಯಲ್ ಅವರು ಹೊರಡಿಸಿದ್ದಾರೆ.
ಪರಿಣಾಮ
ಸಾರ್ವಜನಿಕರು ಪದೇ ಪದೇ ಸಣ್ಣ ಪುಟ್ಟ ಕೆಲಸಗಳಿಗೂ ಸರ್ಕಾರಿ ಕಚೇರಿಗಳಿಗೆ, ಶಾಸಕರ, ಜಿಲ್ಲಾ ಮಂತ್ರಿಗಳ, ಮುಖ್ಯಮಂತ್ರಿಗಳ ಬಳಿಗೆ ಅಲೆಯುವುದು ತಪ್ಪುತ್ತದೆ. ಅರ್ಜಿದಾರರ ದೂರು ಸತ್ಯವಾಗಿದ್ದು, ಯಾವುದೇ ದುರುದ್ದೇಶದಿಂದ ಕೂಡಿರದಿದ್ದರೆ ಅಂತಹ ಅರ್ಜಿಗಳಿಗೆ ಸೂಕ್ತ ಪರಿಹಾರ ಒದಗಿಸದಿದ್ದರೆ ಸಂಬಂಧಪಟ್ಟ ಅಧಿಕಾರಿಯನ್ನು ಇದಕ್ಕೆ ಹೊಣೆಗಾರರನ್ನಾಗಿಸಿ ಸರ್ಕಾರ ಕ್ರಮ ಜರುಗಿಸಲಿದೆ. ಹೀಗೆ ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯಾದ್ಯಂತ ಏಕ ಕಾಲಕ್ಕೆ ಒಂದೇ ದಿನ ಜನತಾ ದರ್ಶನ ದಾಖಲಾಗುತ್ತಿದೆ.
ಬೀದರ್: ಇಂದು ಜಿಲ್ಲೆಯ ಬಸವಕಲ್ಯಾಣದ ಉಜಳಂಬ ಗ್ರಾಮಕ್ಕೆ ಆಗಮಿಸಿ ಜನತಾ ದರ್ಶನ ನಡೆಸಲಿದ್ದಾರೆ. ಈ ಬಾರಿ ಮುಖ್ಯಮಂತ್ರಿಗಳು ವಾಸ್ತವ್ಯ ಮಾಡುತ್ತಿರುವ 3ನೇ ಗ್ರಾಮ ಇದಾಗಿದೆ. ಕರೇಗುಡ್ಡ ಗ್ರಾಮದಂತೆ ಇಲ್ಲಿಯೂ ತರಾತುರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ. ರಸ್ತೆ, ಚರಂಡಿಗಳನ್ನು ಮಾಡಿ ಝಗಮಗಿಸುವಂತೆ ಮಾಡಲಾಗಿದೆ. ಆದರೆ ಇವುಗಳ ಗುಣಮಟ್ಟ ಮಾತ್ರ ಕಳಪೆಯಾಗಿದ್ದು, ಒಂದೇ ಒಂದು ಮಳೆ ಬಂದರೆ ಎಲ್ಲಾ ಕೊಚ್ಚಿಕೊಂಡು ಹೋಗುವಂತಿದೆ.
ಉಜಳಂಬ ಗ್ರಾಮದಲ್ಲಿ ವಿದ್ಯುತ್ ಕೈ ಕೊಡುತ್ತಿತ್ತು. ಸಿಎಂ ಆಗಮನ ಎಚ್ಚೆತ್ತ ಅಧಿಕಾರಿಗಳು ಕಂಬ, ವೈರ್ ಎಲ್ಲಾ ಚೇಂಜ್ ಮಾಡಿ ವಿದ್ಯುತ್ ಸಮಸ್ಯೆ ಆಗದಂತೆ ಮಾಡಿದ್ದಾರೆ. ಗ್ರಾಮದ ಶಾಲೆಗೆ ಅವಸರದಲ್ಲಿ ಸುಣ್ಣ ಬಣ್ಣ ಬಳಿದು ಕಂಗೊಳಿಸುವಂತೆ ಮಾಡಲಾಗಿದೆ. ಜೊತೆಗೆ ಸಿಎಂ ವಾಸ್ತವ್ಯಕ್ಕಾಗಿ ಸಕಲ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಲೆ ಮುಂಭಾಗ ಜನತಾ ದರ್ಶನಕ್ಕೆ ವೇದಿಕೆ ಸಿದ್ಧಪಡಿಸಲಾಗಿದೆ. ಜೊತೆಗೆ ಅಹವಾಲು ಸ್ವೀಕರಿಸಲು ತಡವಾಗಬಾರದು ಅನ್ನೋ ಕಾರಣಕ್ಕೆ ವೇದಿಕೆ ಕಾರ್ಯಕ್ರಮಕ್ಕೆ ಕೊಕ್ ನೀಡಲಾಗಿದೆ.
ಒಟ್ಟಿನಲ್ಲಿ ಸಿಎಂ ಆಗಮನದ ಹಿನ್ನೆಲೆಯಲ್ಲಿ ಉಜಳಂಬ ಗ್ರಾಮ ಅಲಂಕಾರಗಳಿಂದ ಸಿದ್ಧಗೊಂಡಿದೆ. ಈಗಾಗಲೇ ಮುಖ್ಯಮಂತ್ರಿಗಳು ರಾಯಚೂರಿನ ಕರೇಗುಡ್ಡದ ಗ್ರಾಮದಿಂದ ಉಜಳಂಬದತ್ತ ಪ್ರಯಾಣ ಬೆಳೆಸಿದ್ದು, ಬೆಳಗ್ಗೆ 10.30ಕ್ಕೆ ತಲುಪಲಿದ್ದಾರೆ.
ರಾಮನಗರ: ಸಿಎಂ ತಮ್ಮ ಸ್ವಕ್ಷೇತ್ರ ಬೊಂಬೆನಗರಿ ಚನ್ನಪಟ್ಟಣಕ್ಕೆ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಪ್ರವಾಸವನ್ನ ಹಮ್ಮಿಕೊಂಡಿದ್ದಾರೆ.
ಸಿಎಂ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಸ್ವಕ್ಷೇತ್ರದತ್ತ ಮುಖ ಮಾಡಿಲ್ಲ ಎಂದು ಸಾರ್ವಜನಿಕರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ತಾಲೂಕು ಆಡಳಿತ ಯಾವುದೇ ರೀತಿಯಲ್ಲೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕೆಲಸ ಕಾರ್ಯಗಳಿಗೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು 17 ಹಾಗೂ ಮಂಗಳವಾರ ಚನ್ನಪಟ್ಟಣದ ಜಿಲ್ಲಾ ಪಂಚಾಯ್ತಿವಾರು ಜನತಾದರ್ಶನ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಆಗಮಿಸಲಿದ್ದಾರೆ.
ಚನ್ನಪಟ್ಟಣ ತಾಲೂಕಿನ ಅಕ್ಕೂರು ಜಿಲ್ಲಾ ಪಂಚಾಯ್ತಿನಲ್ಲಿ ಬೆಳಗ್ಗೆ 10 ಗಂಟೆಗೆ, ಕೋಡಂಬಳ್ಳಿ ಜಿಲ್ಲಾ ಪಂಚಾಯ್ತಿನಲ್ಲಿ ಮಧ್ಯಾಹ್ನ 1 ಗಂಟೆಗೆ ಹಾಗೂ ಅಕ್ಕೂರು ಜಿಲ್ಲಾ ಪಂಚಾಯ್ತಿನಲ್ಲಿ 4 ಗಂಟೆಗೆ ಜನತಾದರ್ಶನ ಕಾರ್ಯಕ್ರಮ ಹಾಗೂ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ.
ಮಂಗಳವಾರ ಬೆಳಗ್ಗೆ 9 ಗಂಟೆಗೆ ಬೇವೂರು, ಮಧ್ಯಾಹ್ನ 2 ಗಂಟೆಗೆ ಮಳೂರು ಹಾಗೂ ಸಾಯಂಕಾಲ ಚನ್ನಪಟ್ಟಣ ಟೌನ್ನಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೆಳಗಾವಿ: ನಗರದ ಸುವರ್ಣ ಸೌಧದಲ್ಲಿ ಇಂದು ಸಿಎಂ ಪ್ರಥಮ ಜನತಾ ದರ್ಶನ ನಡೆಸಲಾಗುತ್ತಿದ್ದು, ಜಿಲ್ಲಾಡಳಿತ ಸಿಬ್ಬಂದಿ ಭಾಗವಹಿಸುತ್ತಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳು ಪ್ರಥಮ ಬಾರಿ ಜನತಾ ದರ್ಶನ ಮಾಡಲಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿಗಳ ವಿಶೇಷ ವಾಹನ ತಯಾರಾಗಿದ್ದು, ಜಿಲ್ಲೆಯ ಜಿಲ್ಲಾಡಳಿತ ಸಿಬ್ಬಂದಿಗಳೆಲ್ಲಾ ಜನತಾ ದರ್ಶನಕ್ಕೆ ತೆರಳಲು ಸಿದ್ದರಾಗಿದ್ದಾರೆ. ಅಷ್ಟೇ ಅಲ್ಲದೇ ಜನತಾ ದರ್ಶನವನ್ನು ಯಾವ ರೀತಿ ಮಾಡಬೇಕು ಎಂದು ಈಗಾಗಲೇ ತರಬೇತಿಯನ್ನು ನೀಡಿದ್ದಾರೆ.
ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. 50ಕ್ಕೂ ಹೆಚ್ಚು ಸಿಬ್ಬಂದಿ, ಅಧಿಕಾರಿಗಳು ಜನತಾ ದರ್ಶನ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ. ಶುಕ್ರವಾರ ಜಿಲ್ಲೆಯ ಪುರಸಭೆಯಲ್ಲಿ ಯಾವ ರೀತಿಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾಡಲಿದ್ದಾರೆ ಹಾಗೂ ಸಮಸ್ಯೆಗಳನ್ನು ಯಾವ ರೀತಿ ಕೇಳಬೇಕು ಎಂಬುದನ್ನು ಅಧಿಕಾರಿಗಳೊಂದಿಗೆ ಚರ್ಚಿಸುವ ಮೂಲಕ ಎಲ್ಲಾ ಪೂರ್ವಸಿದ್ಧತೆಗಳನ್ನು ಕೈಗೊಂಡಿದ್ದಾರೆ.
ಬೆಂಗಳೂರು: ಸಿಎಂ ಎಚ್.ಡಿ ಕುಮಾರಸ್ವಾಮಿ ಶನಿವಾರ ಮಧ್ಯರಾತ್ರಿವರೆಗೂ ಜನರ ದೂರು ದುಮ್ಮಾನಗಳಿಗೆ ಕಿವಿಯಾದರು. ಅಂಗವಿಕಲರು, ವೃದ್ಧರು, ಮಹಿಳೆಯರು, ಮಕ್ಕಳು, ಅಂಧರು, ಬಾಣಂತಿಯರು ಹೀಗೆ ನೂರಾರು ದುಃಖಿತರ ಕಣ್ಣೀರ ಕಥೆಗಳಿಗೆ ಮುಖ್ಯಮಂತ್ರಿ ಗೃಹ ಚೇರಿ ಕೃಷ್ಣಾ ಸಾಕ್ಷಿಯಾಯಿತು.
ನಿನ್ನೆ ಮಧ್ಯಾಹ್ನ 12.15ಕ್ಕೆ ಆರಂಭವಾದ ಸಿಎಂ ಕುಮಾರಸ್ವಾಮಿ ಅವರ ಜನತಾದರ್ಶನ ತಡರಾತ್ರಿ 11.30ರವರೆಗೂ ನಡೀತು. ಕರುಳು ಕಿತ್ತು ಬರುವಂತಹ ನೋವುಗಳ ಮಹಾಪೂರದಲ್ಲಿ ಜನತಾದರ್ಶನ ಮಿಂದು ಹೋಯಿತು. ನಿನ್ನೆ ಸುಮಾರು 1600 ಕ್ಕೂ ಹೆಚ್ಚು ಅರ್ಜಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಖುದ್ದು ಮಾತನಾಡಿ, ಪರಿಹಾರ ಒದಗಿಸಲು ನಿರ್ದೇಶನ ನೀಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲಿ ಹಾಜರಿದ್ದು ಮುಖ್ಯಮಂತ್ರಿಗಳ ನಿರ್ದೇಶನದಂತೆ ಸಾರ್ವಜನಿಕರ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡರು. 12 ಗಂಟೆಗಳ ನಂತರ ಸಿಎಂ ಕುಮಾರಸ್ವಾಮಿ ಮಾತನಾಡಿದ್ರು. ನಗರದಲ್ಲಿದ್ದಾಗ ಶನಿವಾರದಂದು ಜನರ ಸಮಸ್ಯೆ ವಿಚಾರಿಸುತ್ತೇನೆ. ಇವತ್ತು ಅನೇಕ ಸಮಸ್ಯೆ ಕುಂದು ಕೊರತೆ ಹೇಳಿಕೊಂಡಿದ್ದಾರೆ. ಸ್ಥಳದಲ್ಲೇ ಶೇಕಡಾ 50-60 ರಷ್ಟು ಸಮಸ್ಯೆ ನಿವಾರಿಸಿದ್ದೇನೆ. ಈ ಸಮಸ್ಯೆಗಳು ಮತ್ತೆ ಬಂದ್ರೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ರು.
ಬೆಂಗಳೂರು: ಜನತಾ ದರ್ಶನದಲ್ಲಿ ಕೆಲಸಕ್ಕಾಗಿ ಮನವಿ ಸಲ್ಲಿಸಿದ್ದ 250 ಜನರಿಗೆ ಮೊದಲ ಹಂತದಲ್ಲಿ ಉದ್ಯೋಗವನ್ನ ಸರ್ಕಾರ ನೀಡಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಕುಮಾರಸ್ವಾಮಿ ಫಲಾನುಭವಿಗೆ ಕೆಲಸದ ಆದೇಶ ಪತ್ರ ನೀಡಿದ್ದಾರೆ. ಬಳಿಕ ಮಾತಾನಾಡಿದ ಸಿಎಂ ಕುಮಾರಸ್ವಾಮಿ, ಇನ್ನು ಮುಂದೆ ಪ್ರತಿ ಜಿಲ್ಲೆಯಲ್ಲಿ ವಾರದಲ್ಲಿ ಒಂದು ದಿನ ಜಿಲ್ಲಾಧಿಕಾರಿಗಳು ಜನರ ಸಮಸ್ಯೆ ಆಲಿಸಿ, ಪರಿಹಾರ ಮಾಡಬೇಕು. ಅವರಿಂದ ಸಮಸ್ಯೆ ಪರಿಹಾರವಾಗದೇ ಇದ್ದರೆ ನನ್ನ ಬಳಿ ಕಳುಹಿಸಬೇಕು. ಯಾವುದೇ ಅಧಿಕಾರಿ ಜನರ ಸಮಸ್ಯೆ ಆಲಿಸದೇ ಇದ್ದರೆ ವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳೋದಾಗಿ ಸಿಎಂ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಅಧಿಕಾರಿಗಳು ತಿಂಗಳಿಗೆ ಒಂದು ದಿನ ಜಿಲ್ಲೆಯಲ್ಲಿ ಇದ್ದು, ಸಮಸ್ಯೆಗಳನ್ನ ಪಟ್ಟಿ ಮಾಡಿ ನನಗೆ ವರದಿ ನೀಡಬೇಕು ಅಂತ ಸಿಎಂ ಆದೇಶ ನೀಡಿದ್ದಾರೆ. ಜೊತೆಗೆ ಜಿಲ್ಲಾಧಿಕಾರಿಗಳ ಕೆಲಸದ ಬಗ್ಗೆ ಮಾಹಿತಿ ಪಡೆಯಲು ವಿಡಿಯೋ ಕಾನ್ಪರೆನ್ಸ್ ಮಾಡೋದಾಗಿ ಸಿಎಂ ಹೇಳಿದ್ದಾರೆ. ಇವತ್ತೇ ಈ ಸಂಬಂಧ ಸುತ್ತೋಲೆ ಹೊರಡಿಸೋದಾಗಿ ಹೇಳಿದ ಸಿಎಂ ಜನ ಸಾಮಾನ್ಯರಿಗೆ ಅಧಿಕಾರಿಗಳು ಸುಲಭವಾಗಿ ಸಿಗೋದಕ್ಕಾಗಿ ಹಲವು ಸುಧಾರಣಾ ಕ್ರಮ ಜಾರಿಗೆ ತರೋದಾಗಿ ತಿಳಿಸಿದ್ದಾರೆ.