Tag: ಜನತೆ

  • ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    ರಕ್ತಪಾತ ತಡೆಗಾಗಿ ದೇಶ ತೊರೆದೆ- ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಘನಿ

    ಕಾಬೂಲ್: ತಾಲಿಬಾನಿಗಳು ಕಾಬೂಲ್ ನಗರ ಮತ್ತು ರಾಷ್ಟ್ರಪತಿ ಭವನ ವಶಕ್ಕೆ ಪಡೆದ ನಂತರ ಅಧ್ಯಕ್ಷ ಅಶ್ರಫ್ ಘನಿ ದೇಶ ತೊರೆದ ಬಳಿಕ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅಫ್ಘಾನಿಸ್ತಾನದ ಜನರಿಗೆ ಅಶ್ರಫ್ ಘನಿ ಸಂದೇಶ ರವಾನಿಸಿದ್ದು, ನಿಮ್ಮೆಲ್ಲರ ಹಿತ ಮತ್ತು ರಕ್ತಪಾತ ನಿಲ್ಲಿಸಲು ದೇಶದಿಂದ ಹೊರ ಬಂದಿದ್ದೇನೆ ಎಂದು ಹೇಳಿದ್ದಾರೆ.

    ನನ್ನ ಪ್ರೀತಿಯ ದೇಶವಾಸಿಗಳೇ,
    ನನಗೆ ಕಠಿಣ ಸವಾಲು ಎದುರಾಗಿತ್ತು. ತಾಲಿಬಾನಿಗಳನ್ನು ಎದುರಿಸಲು ನಿಂತಿದ್ದೆ. ಅವರೆಲ್ಲರೂ ಶಸ್ತ್ರಸಜ್ಜಿ ತರಾಗಿ ರಾಷ್ಟ್ರಪತಿ ಭವನ ಪ್ರವೇಶಿಸಲು ಸಿದ್ಧರಾಗಿದ್ದರು. ನಾನು ಅಫ್ಘಾನಿಸ್ತಾನದಿಂದ ದೂರ ಹೋಗಬೇಕೆಂಬುವುದು ಅವರ ಡಿಮ್ಯಾಂಡ್ ಆಗಿತ್ತು. ಕಳೆದ 20 ವರ್ಷಗಳಿಂದ ದೇಶದ ಜನರ ರಕ್ಷಣೆಯಲ್ಲಿ ತೊಡಗಿಕೊಂಡಿದ್ದೇನೆ. ಒಂದು ವೇಳೆ ಅವರ ಡಿಮ್ಯಾಂಡ್ ಒಪ್ಪದಿದ್ರೆ ಯುದ್ಧವೇ ನಡೆಯತ್ತಿತ್ತು. ಈ ಯುದ್ಧದಲ್ಲಿ ನೂರಾರು ಜನ ಪೊಲೀಸರು ಹುತಾತ್ಮರಾಗುತ್ತಿದ್ದರು. ರಕ್ತ ಹರಿಸೋದು ನನಗೆ ಇಷ್ಟವಿರಲಿಲ್ಲ. ಅವರ ಬೇಡಿಕೆಯಂತೆ ಆಧಿಕಾರ ಹಸ್ತಾಂತರಿಸಿ ದೇಶ ತೊರೆದೆ. ಇಲ್ಲವಾದಲ್ಲಿ 60 ಲಕ್ಷ ಜನಸಂಖ್ಯೆಯುಳ್ಳು ಈ ನಗರ ದೊಡ್ಡ ದುರಂತಕ್ಕೆ ಸಾಕ್ಷಿಯಾಗುತ್ತಿತ್ತು.

    ತಮ್ಮ ರಸ್ತೆಗೆ ಅಡ್ಡಲಾಗಿರುವ ನನ್ನನ್ನು ತೆಗೆದುಹಾಕಲು ತಾಲಿಬಾಲಿನಿಗಳು ನಿರ್ಧರಿಸಿದ್ದರು. ಇದಕ್ಕಾಗಿ ಕಾಬೂಲ್ ಮತ್ತು ಕಾಬೂಲ್ ಜನತೆಯ ಮೇಲೆ ದಾಳಿಯ ಕುರಿತು ಪ್ಲಾನ್ ಮಾಡಿಕೊಂಡಿದ್ದರು. ಹಾಗಾಗಿ ಇದೆಲ್ಲವನ್ನು ತಡೆಯಲು ನನ್ನ ಮುಂದಿದ ದಾರಿ ಇದು ಒಂದೇ ಆಗಿತ್ತು. ಬಂದೂಕು, ಬಾಂಬ್ ಗಳಿಂದ ತಾಲಿಬಾನಿಗಳು ಯುದ್ಧ ಗೆದ್ದಿರಬಹುದು. ಈಗ ದೇಶ ಮತ್ತು ಅಲ್ಲಿಯ ಜನತೆಯ ಮಾನ ಹಾಗೂ ಪ್ರಾಣವನ್ನು ರಕ್ಷಿಸುವ ಜವಾಬ್ದಾರಿ ಅವರ ಮೇಲಿದೆ.

    ದೇಶವನ್ನು ತಮ್ಮ ವಶಕ್ಕೆ ಪಡೆದಿರುವ ತಾಲಿಬಾನಿಗಳು ಅಲ್ಲಿಯ ಜನರ ಮನಸ್ಸು ಗೆದ್ದಿಲ್ಲ. ಕೇವಲ ಶಕ್ತಿಪ್ರದರ್ಶನ ತೋರಿದವರನ್ನು ಜನರು ಒಪ್ಪಿಕೊಳ್ಳಲು ಅನ್ನೋ ಉದಾಹರಣೆಗಳು ನಮ್ಮ ಮುಂದಿವೆ. ಸದ್ಯ ತಾಲಿಬಾನಿಗಳ ಮುಂದೆ ಸವಾಲುಗಳಿದ್ದು, ಅಲ್ಲಿಯ ಜನರನ್ನು ರಕ್ಷಣೆ ಮಾಡ್ತಾರೋ ಅಥವಾ ಮತ್ತೆ ಸಾಮ್ರಾಜ್ಯ ವಿಸ್ತರಣೆಯತ್ತ ಹೋಗ್ತಾರಾ ಅನ್ನೋದನ್ನು ಕಾದು ನೋಡಬೇಕಿದೆ.

    ಹಲವು ಜನ ಆತಂಕದಲ್ಲಿದ್ದು, ಮನೆಯಿಂದ ಹೊರ ಬರಲಾರದ ಸ್ಥಿತಿಯಲ್ಲಿದ್ದಾರೆ. ದೇಶದ ಜನತೆಗೆ ತಾಲಿಬಾನಿಗಳ ನಂಬಿಕೆ ಇಲ್ಲ. ದೇಶದ ಮಹಿಳೆ, ಮಕ್ಕಳು, ಪುರುಷರು, ವೃದ್ಧರು ಸೇರಿದಂತೆ ಎಲ್ಲ ರನ್ನೂ ಒಗ್ಗೂಡಿಸಿಕೊಂಡು ತಾಲಿಬಾನಿಗಳು ಮುಂದೆ ಹೆಜ್ಜೆ ಇರಿಸಬೇಕಿದೆ. ನಾನು ನಿಮ್ಮ ಸೇವೆಯಲ್ಲಿರುತ್ತೇನೆ. ಅಫ್ಘಾನಿಸ್ತಾನ ಜಿಂದಾಬಾದ್.

    ವಿಮಾನ ಹತ್ತಲು ನೂಕು ನುಗ್ಗಲು:
    ತಾಲಿಬಾನ್ ಉಗ್ರರು ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬೆನ್ನಲ್ಲೇ ಜನರ ದೇಶ ತೊರೆಯಲು ಆರಂಭಿಸಿದ್ದಾರೆ. ಉಗ್ರರಿಗೆ ಎಷ್ಟು ಭಯಗೊಂಡಿದ್ದಾರೆ ಎಂದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಒಂದು ವಿಮಾನಕ್ಕೆ ಹತ್ತಲು ನೂರಾರು ಜನ ಮುಗಿಬಿದ್ದಿದ್ದಾರೆ. ವಿಮಾನ ನಿಲ್ದಾಣಗಳಲ್ಲಿ ವಿಮಾನ ಹತ್ತಲು ನಿಯಮಗಳು ಇರುತ್ತದೆ. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ವಿಮಾನ ಹತ್ತಲು ಅನುಮತಿ ನೀಡಲಾಗುತ್ತದೆ. ಆದರೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಸ್ ಹತ್ತಲು ಪ್ರಯಾಣಿಕರು ಹೇಗೆ ಮುಗಿ ಬೀಳುತ್ತಾರೋ ಆ ರೀತಿಯಾಗಿ ಒಂದು ಏಣಿ ಮೂಲಕ ವಿಮಾನ ಹತ್ತಲು ಪ್ರಯತ್ನಿಸಿದ್ದಾರೆ.

    ಈ ನಾಲ್ವರಲ್ಲಿ ಯಾರು ಅಂತಿಮ?:
    ತಾಲಿಬಾನಿಗಳು ಹೇಳುವಂತೆ ಈಗಾಗಲೇ ಅಲ್ಲಿಯ ಪೊಲೀಸರು ಶರಣಾಗಿದ್ದು, ಶಸ್ತ್ರಾಸ್ತ್ರಗಳನ್ನು ಹಸ್ತಾಂತರಿಸುತ್ತಿದ್ದಾರೆ. ಈ ನಡುವೆ ಅಫ್ಘಾನಿಸ್ತಾನದ ಮುಂದಿನ ಅಧ್ಯಕ್ಷ ಅಥವಾ ರಾಷ್ಟ್ರಪತಿ ಯಾರು ಅನ್ನೋ ಚರ್ಚೆಗಳು ಮುನ್ನಲೆಗೆ ಬಂದಿದ್ದು, ಮುಲ್ಲಾ ಬರಾದರ್ ಹೆಸರು ಕೇಳಿ ಬರುತ್ತಿದೆ. ಸದ್ಯ ಈ ಮುಲ್ಲಾ ಬರದಾರ್ ಕತಾರ್ ನಲ್ಲಿದ್ದಾನೆ. ಕತಾರ್ ನಲ್ಲಿರುವ ತಾಲಿಬಾನ್ ಕಚೇರಿಯ ರಾಜಕೀಯ ಮುಖ್ಯಸ್ಥನಾಗಿರೋದರಿಂದ, ಮುಲ್ಲಾ ಬರಾದರ್ ಹೆಸರು ಸ್ಪರ್ಧೆಯಲ್ಲಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಂಘಟನೆಯ ಸಹ ಸ್ಥಾಪಕನಾಗಿದ್ದಾನೆ. ಇದನ್ನೂ ಓದಿ: ಅಫ್ಘಾನಿಸ್ತಾನ ತೊರೆದ ಅಧ್ಯಕ್ಷ ಅಶ್ರಫ್ ಘನಿ, ಉಪಾಧ್ಯಕ್ಷ ಸಾಲೇಹ

    ಮುಲ್ಲಾ ಬರಾದರ್ ಹೆಸರಿನ ಜೊತೆ ಹೆಬತುಲ್ಲಾಹ ಅಖುಂದಜಾದ್, ಸಿರಾಜುದ್ದೀನ್ ಹಕ್ಕನಿ ಮತ್ತು ಮುಲ್ಲಾ ಯಾಕೂಬ್ ಸಹ ಗದ್ದುಗೆಯ ಸ್ಪರ್ಧೆಯಲ್ಲಿದ್ದಾರೆ. ಹೆಬತುಲ್ಲಾಹ ತಾಲಿಬಾನಿಗಳ ಸುಪ್ರೀಂ ನಾಯಕನಾದ್ರೆ, ಸಿರಾಜುದ್ದೀನ್ ಎರಡನೇ ಸ್ಥಾನದಲ್ಲಿರುವ ಲೀಡರ್. ಈತ ಹಕ್ಕಾನಿ ನೆಟ್‍ವರ್ಕ್ ಸಂಚಾಲಕನಾಗಿದ್ದು, ಹಲವು ಸಂಘಟನೆಗಳ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ. ಇನ್ನೂ ಮುಲ್ಲಾ ಯಾಕೂಬ್ ತಾಲಿಬಾನ್ ಸ್ಥಾಪಕರಲ್ಲೊಬ್ಬರಾದ ಮುಲ್ಲಾ ಉಮರ್ ಪುತ್ರನಾಗಿದ್ದಾನೆ. ತಾಲಿಬಾನ್ ದ ಜಂಗಜೂ ಯುನಿಟಿ ಈತನ ಕೈ ವಶದಲ್ಲಿದೆ. ಇದನ್ನೂ ಓದಿ: ತಾಲಿಬಾನಿಗಳ ಅಟ್ಟಹಾಸ, ನರಕವಾದ ಅಫ್ಘಾನಿಸ್ತಾನ- ರಾಜ್ಯಪಾಲ, ಸರ್ಕಾರಿ ಅಧಿಕಾರಿಗಳು ಶರಣಾಗತಿ

  • ಸ್ವಯಂಕೃತ ಅಪರಾಧದಿಂದ ‘ಕಾವೇರಿ’ ಕೋಪಕ್ಕೆ ತುತ್ತಾದರಾ ಕೊಡಗಿನ ಜನ?

    ಸ್ವಯಂಕೃತ ಅಪರಾಧದಿಂದ ‘ಕಾವೇರಿ’ ಕೋಪಕ್ಕೆ ತುತ್ತಾದರಾ ಕೊಡಗಿನ ಜನ?

    ಮಡಿಕೇರಿ: ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಭಕ್ತರು ನಾಡಿನೆಲ್ಲೆಡೆ ಇದ್ದಾರೆ. ತಲಕಾವೇರಿಯಲ್ಲಿ ಹುಟ್ಟಿ ನಾಡಿನುದ್ದಕ್ಕೂ ಜೀವಕಳೆ ತುಂಬುವ ಜೀವನದಿ. ಆದರೆ ಕೊಡಗಿನ ಜನರಿಗೆ ಮಾತ್ರ ಕಣ್ಣೀರು ತರಿಸುತ್ತಿದ್ದಾಳೆ. ಕಾವೇರಿ ನದಿ ಹೀಗೆ ತನ್ನೊಡಲ ಜನರಿಗೆ ಸಂಕಷ್ಟ ತಂದಿಟ್ಟಿರುವುದಕ್ಕೆ ಜನರ ಸ್ವಯಂಕೃತ ಅಪರಾಧವೇ ಕಾರಣ ಎಂದು ತಲಕಾವೇರಿ ಮೂಲಸ್ವರೂಪ ರಕ್ಷಣಾ ಸಮಿತಿ ಆರೋಪ ಮಾಡಿದೆ.

    2005 ರಲ್ಲಿ ತಲಕಾವೇರಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಹಲವು ಕಾಮಗಾರಿಗಳನ್ನು ಮಾಡಲಾಯಿತು. ಇದರ ಪರಿಣಾಮ ಬ್ರಹ್ಮಗಿರಿ ಬೆಟ್ಟದಲ್ಲಿ ಹುಟ್ಟಿ ಬ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗುತ್ತಿದ್ದಳು. ಆದರೆ ಅಭಿವೃದ್ಧಿ ಹೆಸರಿನಲ್ಲಿ ಬ್ರಹ್ಮಕುಂಡಿಕೆ ಮತ್ತು ತೀರ್ಥಕೊಳಗಳಿಗೆ ಕಲ್ಲು ಮತ್ತು ಸಿಮೆಂಟ್ ನಿಂದ ಕಾಮಗಾರಿ ಮಾಡಲಾಯಿತು. ಇದರಿಂದಾಗಿ ಕಾವೇರಿ ಜಲಮೂಲವೇ ಬದಲಾಯಿತು. ಇದರಿಂದಾಗಿ ಇಡೀ ಬೆಟ್ಟವೇ ಕುಸಿದು ಇಂತಹ ಘನಘೋರ ಸ್ಥಿತಿ ನಿರ್ಮಾಣವಾಗಿದೆ ಎಂದು ಸಮಿತಿ ಮುಖಂಡರು ಗಂಭೀರ ಆರೋಪ ಮಾಡುತ್ತಿದ್ದಾರೆ.

    ತಲಕಾವೇರಿಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ ಮಾಡಿದ ಕಾಮಗಾರಿಯಿಂದ ಜಲಮೂಲ ದಿಕ್ಕು ಬದಲಾಯಿಸಿ, ಕುಸಿದಿರುವ ಗಜಗಿರಿ ಬೆಟ್ಟದ ಕಡೆಗೆ ಭೂಮಿಯೊಳಗೆ ಹರಿಯಲು ಆರಂಭಿಸಿತ್ತು. ಈ ಕುರಿತು ಅಷ್ಟಮಂಗಲ ಪ್ರಶ್ನೆಯಲ್ಲೂ ಗೊತ್ತಾಗಿತ್ತು. ಬಳಿಕ ಭೂಗರ್ಭಶಾಸ್ತ್ರಜ್ಞರು ಕೂಡ ಸ್ಪಷ್ಟಪಡಿಸಿದ್ದರು. ಗಜಗಿರಿ ಬೆಟ್ಟದ ಕಡೆಗೆ ಹರಿಯುತ್ತಿದ್ದ ಜಲಮೂಲ ಕಳೆದ ಒಂದು ವರ್ಷದಿಂದ ಅರ್ಚಕ ನಾರಾಯಣ ಆಚಾರ್ ಅವರ ಮನೆ ಬಳಿ ಬರಲು ಆರಂಭಿಸಿತ್ತು. ಆಗಲೇ ಅಷ್ಟಮಂಗಲ ಪ್ರಶ್ನೆ ಸಂದರ್ಭ ಇಲ್ಲಿ ಜಲಗಂಡಾಂತರ ಇದೆ ಎಂದು ಗೊತ್ತಾಗಿತ್ತು. ತಕ್ಷಣವೇ ತಮ್ಮ ಮನೆಯನ್ನು ಖಾಲಿ ಮಾಡುವಂತೆ ಅರ್ಚಕರಿಗೆ ಹಲವು ಬಾರಿ ಹೇಳಿದ್ದೆವು ಎಂದು ಸಮಿತಿ ಸದಸ್ಯರು ತಿಳಿಸಿದ್ದಾರೆ.

    ಈಗ ಗಜಗಿರಿ ಬೆಟ್ಟ ಕುಸಿದಿರುವ ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಹರಿಯುತ್ತಿರುವ ಜಲವೇ ಅದೆಲ್ಲವನ್ನೂ ಸ್ಪಷ್ಟಪಡಿಸುತ್ತದೆ ಎನ್ನುತ್ತಾರೆ ಮೂಲ ಸ್ವರೂಪ ರಕ್ಷಣಾ ವೇದಿಕೆ ಮುಖಂಡ ಸೋಮಣ್ಣ.

  • ಗೋಲಿಬಾರ್, ಬಾಂಬ್ ಪ್ರಕರಣ ನಿಭಾಯಿಸಿದ್ದ ಮಂಗಳೂರು ಕಮಿಷನರ್ ಹರ್ಷಾ ವರ್ಗ

    ಗೋಲಿಬಾರ್, ಬಾಂಬ್ ಪ್ರಕರಣ ನಿಭಾಯಿಸಿದ್ದ ಮಂಗಳೂರು ಕಮಿಷನರ್ ಹರ್ಷಾ ವರ್ಗ

    – ತುಳುವಿನಲ್ಲೇ ಜನತೆಗೆ ಭಾವನಾತ್ಮಕ ವಿದಾಯ ಹೇಳಿದ ಡಾ.ಪಿ.ಎಸ್.ಹರ್ಷಾ

    ಮಂಗಳೂರು: ನಗರ ಪೊಲೀಸ್ ಆಯುಕ್ತರಾಗಿದ್ದ, ಇದೀಗ ವಾರ್ತಾ ಇಲಾಖೆಯ ಆಯುಕ್ತರಾಗಿ ಬೆಂಗಳೂರಿಗೆ ವರ್ಗಾವಣೆಯಾದ ಡಾ.ಪಿ.ಎಸ್.ಹರ್ಷ ಅವರು ಮಂಗಳೂರಿನ ಜನತೆಯ ಜೊತೆಗೆ ಬಹಳಷ್ಟು ಒಡನಾಟ ಹೊಂದಿದ್ದರು. ಹೀಗಾಗಿ ತಾನು ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿರುವ ಮಂಗಳೂರಿನ ಜನತೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಹುಸಂಖ್ಯಾತರ ಮಾತೃ ಭಾಷೆಯಾದ ತುಳುವಿನಲ್ಲಿ ಪ್ರೀತಿ ಪೂರ್ವಕವಾಗಿ ವಿದಾಯ ಪತ್ರ ಬರೆದಿದ್ದಾರೆ.

    ಮಂಗಳೂರು ಸಿಟಿ ಪೊಲೀಸ್ ಫೇಸ್ಬುಕ್ ಪೇಜ್‍ನಲ್ಲಿ ಪತ್ರ ಬರೆದಿರುವ ಅವರು, ಇಡೀ ಪತ್ರವನ್ನು ತುಳು ಭಾಷೆಯಲ್ಲಿಯೇ ಬರೆದು ಕೃತಜ್ಞತೆ ಸಲ್ಲಿಸಿದ್ದಾರೆ. ಕುಡ್ಲದ ಎನ್ನ ಮೋಕೆದ ಜನಕುಲೇ(ಮಂಗಳೂರಿನ ನನ್ನ ಪ್ರೀತಿಯ ಜನರೇ) ಎಂದು ಆರಂಭಿಸಿ, ಅಧಿಕಾರಿದ ಅವಧಿಯಲ್ಲಿ ನಡೆದ ಎಲ್ಲ ಘಟನೆಗಳನ್ನು ತುಳುವಿನಲ್ಲೇ ವಿವರಿಸಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತುಳು ಭಾಷೆಯಲ್ಲೆ ಹೇಳಿರುವುದು ವಿಶೇಷವಾಗಿದೆ.

    https://www.facebook.com/MangaluruCityPolice/photos/a.1924100667625353/3082831651752243

    ಮಂಗಳೂರಿನಲ್ಲಿ ಮೈ ಬೀಟ್ ಮೈ ಪ್ರೈಡ್ ಎನ್ನುವ ಹೊಸ ಯೋಜನೆಯ ಮೂಲಕ ನೇರವಾಗಿ ಜನರ ಬಳಿಯೇ ಪೊಲೀಸರು ಸಮಸ್ಯೆಗಳನ್ನು ಆಲಿಸುವ, ಮಾಹಿತಿ ಸಂಗ್ರಹಿಸುವ ಕೆಲಸ ಮಾಡಿದ್ದ ಹರ್ಷಾ ಅವರು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದರು. ಮಾತ್ರವಲ್ಲದೆ ಇತ್ತೀಚೆಗೆ ನಡೆದ ಎನ್‍ಆರ್‍ಸಿ ಹೋರಾಟ, ಗೋಲಿಬಾರ್, ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ್ದ ಅಧಿಕಾರಿ ಎಂಬ ಮೆಚ್ಚುಗೆಗೆ ಪಾತ್ರರಾಗಿದ್ದರು.

  • ಅಕ್ರಮ ತಡೆಗೆ ಬರಲಿದೆ ಒಂದೇ ದೇಶ ಒಂದೇ ರೇಷನ್ ಕಾರ್ಡ್

    ನವದೆಹಲಿ: ಬಡವರಿಗೆ ಕಡಿಮೆ ದರದಲ್ಲಿ ಆಹಾರಧಾನ್ಯವನ್ನು ದೇಶದ ಎಲ್ಲಾ ಕಡೆ ಪೂರೈಸುವ ನಿಟ್ಟಿನಲ್ಲಿ “ಒಂದು ದೇಶ, ಒಂದು ರೇಷನ್ ಕಾರ್ಡ್” ಜಾರಿಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

    ಕೇಂದ್ರ ಆಹಾರ ಸಚಿವ ರಾಮ್‍ವಿಲಾಸ್ ಪಾಸ್ವಾನ್ ಅಧ್ಯಕ್ಷತೆಯಲ್ಲಿ ರಾಜ್ಯ ಆಹಾರ ಕಾರ್ಯದರ್ಶಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ದೇಶದ ಬಡ ಜನರು ಉದ್ಯೋಗ ಅಥವಾ ಇತರ ಕಾರಣಕ್ಕೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ವಲಸೆ ಹೋದಾಗ ಆಹಾರಕ್ಕೆ ಸಮಸ್ಯೆ ಆಗದೇ ಇರಲು ಈ ಬದಲಾವಣೆ ಮಾಡಲಾಗಿದೆ.

    ಈ ಯೋಜನೆಯಿಂದ ಒಬ್ಬ ವ್ಯಕ್ತಿ ಅಥವಾ ಕುಟುಂಬ ವಿವಿಧ ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ರೇಶನ್ ಕಾರ್ಡ್‍ಗಳನ್ನು ಹೊಂದಿದ್ದರೆ ತಡೆಯಬಹುದು. ಈ ನಿಯಮದಿಂದ ಸರ್ಕಾರದ ಬೊಕ್ಕಸಕ್ಕೂ ಉಳಿತಾಯವಾಗುತ್ತದೆ. ಅಷ್ಟೇ ಅಲ್ಲದೇ ಪಿಡಿಎಸ್ ಹೆಸರಿನಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ತಡೆಗಟ್ಟಲು ನೆರವಾಗಲಿದೆ.

    ಸಚಿವ ರಾಮ್‍ವಿಲಾಸ್ ಪಾಸ್ವಾನ್ ಮಾತನಾಡಿ, ಇದರಿಂದ ವಲಸೆ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅವರಿಗೆ ಪೂರ್ಣ ಆಹಾರ ಭದ್ರತೆ ದೊರೆಯಲಿದೆ. ಈ ರೀತಿಯ ಕಾರ್ಮಿಕರು ಯಾವುದೇ ನಿರ್ಧಿಷ್ಟ ಪಡಿತರ ಅಂಗಡಿಯಿಂದ ಆಹಾರ ಧಾನ್ಯಗಳನ್ನು ಖರೀದಿಸಬೇಕಾಗಿಲ್ಲ. ಬದಲಾಗಿ ತಮಗೆ ಸಮೀಪದ ಯಾವುದೇ ಪಡಿತರ ಅಂಗಡಿಯಿಂದಲೂ ಖರೀದಿಸಬಹುದಾಗಿದೆ. ಇದರ ಜೊತೆಗೆ ಭ್ರಷ್ಟಾಚಾರಕ್ಕೂ ಕಡಿವಾಣ ಬೀಳಲಿದೆ ಎಂದು ತಿಳಿಸಿದರು.

    ಈ ಯೋಜನೆಯನ್ನು ಜಾರಿ ಮಾಡಲು ಕೇಂದ್ರ ಆಹಾರ ಸಚಿವಾಲಯ ದೇಶದ ಎಲ್ಲ ರೇಷನ್ ಕಾರ್ಡ್‍ಗಳನ್ನು ಒಂದೇ ವ್ಯವಸ್ಥೆಯಡಿಗೆ ತರಲಿದೆ. ಕೇಂದ್ರ ಸರ್ಕಾರ ಇದಕ್ಕಾಗಿ ಇಂಟಿಗ್ರೇಡೆಸ್ ಮ್ಯಾನೇಜ್‍ಮೆಂಟ್ ಆಫ್ ಪಬ್ಲಿಕ್ ಡಿಸ್ಟ್ರಿಬ್ಯೂಷನ್ ಸಿಸ್ಟಂ (ಐಎಂಪಿಡಿಎಸ್) ಮೂಲಕ ಆನ್‍ಲೈನ್ ಡೇಟಾಬೇಸ್ ಮಾಡಲು ಸಿದ್ಧತೆ ನಡೆಸಿದೆ.

    ಕರ್ನಾಟಕ, ಕೇರಳ, ಆಂಧ್ರ ಪ್ರದೇಶ, ಗುಜರಾತ್, ಹರ್ಯಾಣ, ಜಾರ್ಖಂಡ್, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ ಮತ್ತು ತ್ರಿಪುರಾದಲ್ಲಿ ಈಗಾಗಲೇ ಐಎಂಪಿಡಿಎಸ್ ಜಾರಿಯಲ್ಲಿದೆ. ಈ ರಾಜ್ಯಗಳ ಫಲಾನುಭವಿಗಳು ತಮ್ಮ ಜಿಲ್ಲೆಯ ಯಾವುದೇ ಪಡಿತರ ಅಂಗಡಿಗಳಿಂದ ಆಹಾರ ಧಾನ್ಯ ಖರೀದಿಸಬಹುದಾಗಿದೆ.

  • ಮಳೆಗಾಗಿ ಉಡುಪಿಯಲ್ಲಿ ಬ್ಯಾಂಡ್, ವಾದ್ಯ, ತಾಳ ಮೇಳಗಳೊಂದಿಗೆ ಕಪ್ಪೆ ಮದುವೆ – ವಿಡಿಯೋ ನೋಡಿ

    ಮಳೆಗಾಗಿ ಉಡುಪಿಯಲ್ಲಿ ಬ್ಯಾಂಡ್, ವಾದ್ಯ, ತಾಳ ಮೇಳಗಳೊಂದಿಗೆ ಕಪ್ಪೆ ಮದುವೆ – ವಿಡಿಯೋ ನೋಡಿ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ ಹಿಂದೆಂದೂ ಕಂಡರಿಯದ ಕುಡಿಯುವ ನೀರಿನ ಬರ ಬಂದಿದೆ. ಮಳೆರಾಯನಿಗೆ ಕಾದ ಜನ ಸುಸ್ತಾಗಿದ್ದಾರೆ. ಈ ಕಾರಣದಿಂದ ಮಳೆಗಾಗಿ ಉಡುಪಿಯಲ್ಲಿ ಕಪ್ಪೆ ಮದುವೆ ಮಾಡಿಸಿದ್ದಾರೆ.

    ಜಿಲ್ಲೆಯಲ್ಲಿ ಮಳೆಬಾರದ ಹಿನ್ನಲೆಯಲ್ಲಿ ಕುಡಿಯುವ ನೀರಿಗೂ ಅಭಾವ ಹೆಚ್ಚಾಗಿದೆ. ಮಳೆ ಬರಲಿ ಎಂದು ಪೂಜೆ-ಪುನಸ್ಕಾರ ಮಾಡಿದ್ದಾರೆ. ಯಾವುದಕ್ಕೂ ವರುಣದೇವ ಜಗ್ಗದ ಕಾರಣ ಇವತ್ತು ಕಪ್ಪೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.

    ಇಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿ ಮತ್ತು ಪಂಚರತ್ನ ಟ್ರಸ್ಟ್ ಆಯೋಜಿಸಿದ್ದ ಮಂಡೂಕ ಕಲ್ಯಾಣೋತ್ಸವದಲ್ಲಿ ವರ್ಷಾ ಹೆಸರಿನ ವಧು ಕಪ್ಪೆ, ಹಾಗೂ ವರುಣ ಹೆಸರಿನ ವರ ಕಪ್ಪೆಯ ವಿವಾಹ ನಡೆಯಿತು. ಇದಕ್ಕೂ ಮೊದಲು ಕಪ್ಪೆಗಳ ದಿಬ್ಬಣವನ್ನು ಬ್ಯಾಂಡ್, ವಾದ್ಯ, ತಾಳ ಮೇಳದ ನಡುವೆ ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಮಾಡಿಸಲಾಯಿತು.

    ನಂತರ ಪ್ರತಿಷ್ಠಿತ ಕಿದಿಯೂರ್ ಹೊಟೇಲ್ ಆವರಣದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ ಶಾಸ್ತ್ರ ನೆರವೇರಿತು. ಗಂಡು ಹೆಣ್ಣಿನ ಕಡೆಯವರು ಸೇರಿ ಅರಸಿನದ ಕೊಂಬು ಮಾಂಗಲ್ಯ ಕಟ್ಟಿ, ಹಾರ ಬದಲಾಯಿಸಿ ಮಂಡೂಕಗಳಿಗೆ ಕಲ್ಯಾಣ ಭಾಗ್ಯ ಕರುಣಿಸಿದರು. ಮದುವೆಯ ನಂತರ ಮಣಿಪಾಲದ ಮಣ್ಣಪಳ್ಳ ಹಳ್ಳಕ್ಕೆ ಎರಡೂ ಕಪ್ಪೆಗಳನ್ನು ಮಧುಚಂದ್ರಕ್ಕೆ ಬಿಡಲಾಗಿದೆ.

    2018ರಲ್ಲೂ ಬರದ ಸ್ಥಿತಿ ಉಂಟಾದಾಗ ಕಪ್ಪೆ ಮದುವೆ ಮಾಡಲಾಗಿತ್ತು. ಕಾಕತಾಳಿಯವೋ ಎಂಬಂತೆ ಅಂದು ಧಾರಾಕಾರ ಮಳೆ ಸುರಿದಿತ್ತು.

  • ಶವದಂತೆ ಮೋಟಾರ್ ಪಂಪ್ ಮಲಗಿಸಿ ಕೋಲಾರ ಜನತೆಯಿಂದ ಪ್ರತಿಭಟನೆ

    ಶವದಂತೆ ಮೋಟಾರ್ ಪಂಪ್ ಮಲಗಿಸಿ ಕೋಲಾರ ಜನತೆಯಿಂದ ಪ್ರತಿಭಟನೆ

    ಕೋಲಾರ: ನಗರಸಭೆ ಮುಂದೆ ಮೋಟಾರ್ ಪಂಪ್ ಅನ್ನು ಶವದ ಹಾಗೆ ಮಲಗಿಸಿ ಕೋಲಾರದ ಜನ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

    ಕೋಲಾರ ವಾರ್ಡ್ ನಂ.17 ರ ಶಹೀಂ ಷಾ ಬಡಾವಣೆಯಲ್ಲಿರುವ ಮೋಟಾರ್ ಪಂಪ್ ಹಾಳಾಗಿದ್ದು, 15 ದಿನಗಳಿಂದ ನೀರು ಬರುತ್ತಿರಲಿಲ್ಲ. ಕೆಟ್ಟು ಹೋಗಿರುವ ಪಂಪ್ ಸರಿ ಪಡಿಸುವಂತೆ ನಗರಸಭೆಗೆ ದೂರು ನೀಡಿದರು ಏನೂ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ಅಲ್ಲಿನ ಜನರು ಮೋಟಾರ್ ಪಂಪ್ ಮೇಲೆ ಬಿಳಿ ಬಟ್ಟೆ ಮುಚ್ಚಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಮಾಡುವ ಮೂಲಕ ನಗರಸಭೆ ಮುಂಭಾಗ ಪ್ರತಿಭಟನೆ ಮಾಡಿದ್ದಾರೆ.

    2 ಗಂಟೆಗಳ ಕಾಲ ಈ ಪ್ರತಿಭಟನೆ ನಡೆದ ಬಳಿಕ ಸ್ಥಳಕ್ಕೆ ನಗರಸಭೆ ಎಂಜಿನಿಯರ್ ಪೂಜಾರಪ್ಪ ಆಗಮಿಸಿದರು. ಈ ವೇಳೆ ಪ್ರತಿಭಟನಾ ನಿರತ ಜನ ಅವರನ್ನು ತರಾಟೆಗೆ ತೆಗೆದುಕೊಂಡರು. ನಂತರ ಪೂಜಾರಪ್ಪ ಜನರಿಗೆ ಪಂಪ್ ಸರಿಪಡಿಸಿ ಕೊಡುವುದಾಗಿ ಭರವಸೆ ನೀಡಿದರು.

  • ಬಸವರಾಜು ಕ್ಷೇತ್ರಕ್ಕೆ ಹೇಮಾವತಿ ನೀರು ತಂದು ತೋರಿಸಲಿ- ಸಚಿವ ಶ್ರೀನಿವಾಸ್ ಸವಾಲ್

    ಬಸವರಾಜು ಕ್ಷೇತ್ರಕ್ಕೆ ಹೇಮಾವತಿ ನೀರು ತಂದು ತೋರಿಸಲಿ- ಸಚಿವ ಶ್ರೀನಿವಾಸ್ ಸವಾಲ್

    ತುಮಕೂರು: ಮಾಜಿ ಪ್ರಧಾನಿ ದೇವೇಗೌಡರನ್ನು ಹೀನಾಯವಾಗಿ ತುಮಕೂರು ಕ್ಷೇತ್ರದಲ್ಲಿ ಸೋಲಿಸಿದ ಬಿಜೆಪಿ ನಾಯಕ ಬಸವರಾಜು ಅವರು ಹೇಮಾವತಿ ನೀರನ್ನು ಜಿಲ್ಲೆಗೆ ಬಿಟ್ಟು ತೋರಿಸಲಿ ಎಂದು ಸಚಿವ ಶ್ರೀನಿವಾಸ್ ಸವಾಲ್ ಹಾಕಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀನಿವಾಸ್ ಅವರು, ಬಸವರಾಜು ಗೆದ್ದರೂ ಅಂತ ಹೇಮಾವತಿ ಸರಾಗವಾಗಿ ಹರಿಯತ್ತಾ? ಎಲ್ಲಾದರೂ ಹರಿಯೋಕೆ ಸಾಧ್ಯ ಇದೆಯಾ? ದೇವೇಗೌಡರು ಗೆದ್ದಿದ್ದರೆ ಅವರಿಗೆ ಕಮಿಟ್‍ಮೆಂಟ್ ಆದರೂ ಇತ್ತು. ಹಾಗಾಗಿ ನೀರು ಬೀಡೋರು. ಈಗ ಬಸವರಾಜು ಹೇಮಾವತಿ ನೀರು ಹರಿಸಲಿ, ಎಲ್ಲಿಂದ ತರುತ್ತಾರೋ ತರಲಿ. ಜನ ಹೇಮಾವತಿ ನೀರು ತರುತ್ತಾರೆ ಎಂದು ಬಸವರಾಜು ಅವರಿಗೆ ವೋಟ್ ಹಾಕಿದ್ದಾರೆ. ಈಗ ಅವರು ಜಿಲ್ಲೆಗೆ ನೀರು ತಂದು ತೋರಿಸಲಿ ಎಂದು ವಾಗ್ದಾಳಿ ನಡೆಸಿದರು.

    ಈ ಬಾರಿಯ ಚುನಾವಣೆಯಲ್ಲಿ ಹೇಮಾವತಿ ನೀರಿನ ವಿಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿ ಬಿಜೆಪಿ ಬಳಸಿತ್ತು. ಆದರೆ ಈಗ ಮತ್ತೆ ಅದೇ ಹೇಮಾವತಿ ವಿಚಾರವನ್ನು ಜೆಡಿಎಸ್ ಬಳಸಿಕೊಂದು ಬಿಜೆಪಿ ನಾಯಕರು ಮೇಲೆ ಕಿಡಿಕಾರುತ್ತಿದ್ದಾರೆ. ಜೊತೆಗೆ ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ಫೇಸ್‍ಬುಕ್‍ನಲ್ಲಿ ಹೇಮಾವತಿ ನೀರನ್ನು ಹಾಸನದಿಂದ ತುಮಕೂರಿಗೆ ಬಿಡಬೇಡಿ. ಅಲ್ಲಿನ ಜನ ಬಸವರಾಜು ಅವರನ್ನ ಗೆಲ್ಲಿಸಿದ್ದಾರಲ್ಲ. ತಾಖತ್ ಇದ್ದರೇ ಒಂದು ಹನಿ ನೀರು ಹಾಸನದಿಂದ ತುಮಕೂರಿಗೆ ಬಿಡಿಸಲಿ ನೋಡೋಣ ಎಂದು ಪೋಸ್ಟ್ ಗಳನ್ನು ಹಾಕಿ ಆಕ್ರೋಶ ಹೊರಹಾಕಿದ್ದಾರೆ.

    ದೇವೇಗೌಡರ ಕುಟುಂಬ ತುಮಕೂರು ಜಿಲ್ಲೆಯ ಮೇಲೆ ಸೋಲಿನ ಸೇಡು ತೀರಿಸಿಕೊಳ್ಳಲಿದೆಯಾ? ಹೇಮಾವತಿ ನೀರಿಗೆ ಮತ್ತೆ ಬ್ರೇಕ್ ಹಾಕಿ ಸೇಡು ತೀರಿಸಿಕೊಳ್ಳುತ್ತಿದ್ದಾರಾ ದೊಡ್ಡಗೌಡರು? ಎಂಬ ಪ್ರಶ್ನೆ ಈಗ ಹುಟ್ಟುಕೊಂಡಿದೆ. ತುಮಕೂರಿನಲ್ಲಿ ದೇವೇಗೌಡರು ಬಿಜೆಪಿ ವಿರುದ್ಧ ಸೋಲನ್ನು ಕಂಡ ಬಳಿಕ ಜೆಡಿಎಸ್ ನಾಯಕರ ಹೇಳಿಕೆಗಳು ಈ ಪ್ರಶ್ನೆಯನ್ನು ಹುಟ್ಟುಹಾಕಿದೆ.

    ಹೇಮಾವತಿ ನೀರಿನ ವಿಚಾರದಲ್ಲಿ ಜೆಡಿಎಸ್ ನಾಯಕರು ಮತ್ತೆ ಟ್ರಬಲ್ ಸೃಷ್ಟಿಯಾಗುವ ಸುಳಿವು ನೀಡುತ್ತಿದ್ದು, ಮತ್ತೆ ತುಮಕೂರು ಜಿಲ್ಲೆಗೆ ಗೌಡರ ಕುಟುಂಬದಿಂದ ಕಂಟಕ ಕಾದಿದೆ ಎನ್ನುವ ಮಾತುಗಳು ಕೇಳಿಬರುತ್ತಿದೆ.