Tag: ಜನಸಂಖ್ಯೆ ನಿಯಂತ್ರಣ

  • ಮಹಿಳೆಯರು ಅವಿದ್ಯಾವಂತರು, ಅವ್ರಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜ್ಞಾನ ಕಡಿಮೆ – ನಿತೀಶ್ ಕುಮಾರ್

    ಮಹಿಳೆಯರು ಅವಿದ್ಯಾವಂತರು, ಅವ್ರಿಗೆ ಜನಸಂಖ್ಯಾ ನಿಯಂತ್ರಣದ ಬಗ್ಗೆ ಜ್ಞಾನ ಕಡಿಮೆ – ನಿತೀಶ್ ಕುಮಾರ್

    ಪಾಟ್ನಾ: ಬಿಹಾರ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಜನಸಂಖ್ಯೆ ನಿಯಂತ್ರಣದ (Population Control) ಬಗ್ಗೆ ನೀಡಿರುವ ಅಭಿಪ್ರಾಯದಿಂದ ರಾಜಕೀಯ ಕೋಲಾಹಲ ಸೃಷ್ಟಿಯಾಗಿದೆ.

    ನಿತೀಶ್ ಕುಮಾರ್ ತಮ್ಮ ಹೇಳಿಕೆಯಲ್ಲಿ ಮಹಿಳೆಯರನ್ನು (Women) ಅವಹೇಳನ ಮಾಡಿದ್ದಾರೆಂದು ಪ್ರತಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಂಡಿವೆ. ಇದನ್ನೂ ಓದಿ: ಪ್ರತಿ ತಿಂಗಳು 6 ಸಾವಿರ ಪಿಂಚಣಿ ಕೊಡಿ – ಸರ್ಕಾರಕ್ಕೆ ಬೋಳುತಲೆ ಪುರುಷರ ಸಂಘ ಮನವಿ

    ಬಿಹಾರದ ವೈಶಾಲಿಯಲ್ಲಿ ನಡೆಯುತ್ತಿರುವ `ಸಮಾಧಾನ ಯಾತ್ರೆ’ಯನ್ನುದ್ದೇಶಿಸಿ ಮಾತನಾಡಿದ ನಿತೀಶ್ ಕುಮಾರ್, ಜನಸಂಖ್ಯಾ ನಿಯಂತ್ರಣಕ್ಕೆ (Population Control) ಪುರುಷರು ಹೆಚ್ಚಿನ ಒಲವು ತೋರಬೇಕು. ಮಹಿಳೆಯರು ಅವಿದ್ಯಾವಂತರಾಗಿದ್ದು (UnEducated), ಜನಸಂಖ್ಯೆ ನಿಯಂತ್ರಣದ ಕುರಿತು ಅವರಿಗೆ ಜ್ಞಾನ ಕಡಿಮೆ. ಹೀಗಾಗಿ ಪುರುಷರು ತಮ್ಮನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವ ಮೂಲಕ, ಜನಸಂಖ್ಯೆ ಹೆಚ್ಚಾಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಪಾದಿಸಿದ್ದಾರೆ.

    ಸಾಂದರ್ಭಿಕ ಚಿತ್ರ

    ಮಹಿಳೆಯರು ಶಿಕ್ಷಿತರಾಗಿದ್ದರೆ ತಾವು ಗರ್ಭಿಣಿಯಾಗದಂತೆ (Pregnant) ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದು ತಿಳಿದಿರುತ್ತಿತ್ತು. ಆದ್ರೆ ಮಹಿಳೆಯರು ಸರಿಯಾಗಿ ಶಿಕ್ಷಣ ಪಡೆಯದ ಕಾರಣ, ಜನಸಂಖ್ಯೆ ನಿಯಂತ್ರಿಸಲು ಅವರಿಂದ ಆಗುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದರಲ್ಲಿ ವಿಷ ಇದ್ರೆ? – UP ಪೊಲೀಸರು ನೀಡಿದ ಚಹಾವನ್ನು ನಿರಾಕರಿಸಿದ ಅಖಿಲೇಶ್ ಯಾದವ್

    ಇದಕ್ಕೆ ಪ್ರತಿಪಕ್ಷ ಬಿಜೆಪಿ (BJP) ಕಿಡಿ ಕಾರಿದೆ. ಸಿಎಂ ಹೇಳಿಕೆ ಬಿಹಾರದ ಪ್ರತಿಷ್ಟೆಗೆ ಕಳಂಕ ತಂದಿದೆ ಎಂದು ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಹುದ್ದೆಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶ ತಂದಿರುವ ಕ್ರಮ ಸ್ವಾಗತಿಸುತ್ತೇನೆ: ಈಶ್ವರಪ್ಪ

    ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶ ತಂದಿರುವ ಕ್ರಮ ಸ್ವಾಗತಿಸುತ್ತೇನೆ: ಈಶ್ವರಪ್ಪ

    – ರಾಜ್ಯದಲ್ಲಿ ಜಾರಿಗೆ ತರುವ ಬಗ್ಗೆ ಸಿಎಂ ಜೊತೆ ಚರ್ಚಿಸುತ್ತೇವೆ

    ಶಿವಮೊಗ್ಗ: ಜನಸಂಖ್ಯೆ ನಿಯಂತ್ರಣಕ್ಕೆ ಉತ್ತರಪ್ರದೇಶದಲ್ಲಿ ಜಾರಿಗೆ ತರಲು ಹೊರಟಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ:  ಗಾಳಿಯ ಗುಣಮಟ್ಟ ಹೆಚ್ಚಿಸಲು 6 ವಾಹನ ಖರೀದಿಗೆ ಮುಂದಾದ ಬಿಬಿಎಂಪಿ

    ಶಿವಮೊಗ್ಗದಲ್ಲಿ ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಣದ ಸಲುವಾಗಿ ಕುಟುಂಬಕ್ಕೆ ಇಬ್ಬರೇ ಮಕ್ಕಳು ಎಂಬ ನಿಯಮ ತಂದಿದ್ದಾರೆ. ದೇಶದಲ್ಲಿ ಸಹ ಜನಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನಸಂಖ್ಯೆ ಕಡಿಮೆ ಮಾಡಲು ಕೇಂದ್ರ ಸರಕಾರ ಸಹ ಬಹಳ ಪ್ರಯತ್ನ ನಡೆಸುತ್ತಿದೆ ಆದರೂ ಜನಸಂಖ್ಯೆ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆ, ಸರ್ಕಾರಿ ಕೆಲಸ, ಸಬ್ಸಿಡಿಗೆ ಅನರ್ಹ – ಯುಪಿ ಮಸೂದೆ

    ಉತ್ತರಪ್ರದೇಶ ಒಂದು ಪ್ರಯತ್ನ ನಡೆಸಿದೆ. ಆ ಪ್ರಯತ್ನ ಹೇಗೆ ಫಲಪ್ರದವಾಗುತ್ತದೆ ಎಂಬುದನ್ನು ನೋಡುತ್ತೇವೆ. ಆ ಅನುಭವದ ಮೇಲೆ ರಾಜ್ಯದಲ್ಲಿ ಏನು ಮಾಡಬೇಕು ಎಂಬ ಬಗ್ಗೆ ಮುಖ್ಯಮಂತ್ರಿ ಅವರ ಜೊತೆ ಚರ್ಚೆ ನಡೆಸಿ ರಾಜ್ಯದಲ್ಲೂ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
    ಇದನ್ನೂ ಓದಿ:  ಕೆಂಪೇಗೌಡರ ಪುತ್ಥಳಿ ಕಾರ್ಯ- ನಿರ್ಮಲಾನಂದನಾಥ ಸ್ವಾಮೀಜಿ ಭೇಟಿ, ಪರಿಶೀಲನೆ

    2ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಚುನಾವಣೆಗಳಲ್ಲಿ ಸ್ಪರ್ಧಿಸುವುದು, ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕುವುದು, ಸರ್ಕಾರಿ ಉದ್ಯೋಗದಲ್ಲಿದ್ದರೆ ಮುಂಬಡ್ತಿ ಸೇರಿದಂತೆ ಸಬ್ಸಿಡಿಗೂ ಅನರ್ಹರಾಗುತ್ತಾರೆ ಎಂಬ ಅಂಶ ಈ ಮಸೂದೆಯಲ್ಲಿದೆ. ಇದೇ ರೀತಿ ಎರಡು ಅಥವಾ ಒಂದು ಮಗುವನ್ನು ಹೊಂದಿದ್ದರೆ ಅವರಿಗೆ ಭರಪೂರ ಸೌಲಭ್ಯವನ್ನು ಈ ಕಾನೂನಿನ ಅಡಿಯಲ್ಲಿ ನೀಡಲಾಗುತ್ತದೆ. ಇಂತಹ ಮಹತ್ವದ ಮಸೂದೆಯನ್ನು ಯುಪಿ ಸರ್ಕಾರ ಸಿದ್ಧಪಡಿಸಿದೆ. ಇಂತಹದ್ದೊಂದು ಹೊಸ ಮಸೂದೆಯನ್ನು ಉತ್ತರ ಪ್ರದೇಶ ಸರ್ಕಾರ ಜಾರಿಗೊಳಿಸುವ ಕುರಿತು ಪ್ರಸ್ತಾವನೆ ಮುಂದಿಟ್ಟಿದೆ. ಉತ್ತರ ಪ್ರದೇಶದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕರಡು ಪ್ರತಿಯನ್ನು ಸಿದ್ಧಪಡಿಸಿದ್ದು, ನ್ಯಾಷನಲ್ ಫ್ಯಾಮಿಲಿ ಹೆಲ್ತ್ ಸರ್ವೇ-4ರ ಅಂಕಿ ಅಂಶಗಳನ್ನು ಆಧರಿಸಿ ಜನಸಂಖ್ಯೆ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದೆ.

  • ಕ್ವಾರಂಟೈನ್ ಕೇಂದ್ರಗಳಲ್ಲಿ ಉಚಿತ ಕಾಂಡೋಮ್ ವಿತರಣೆ

    ಕ್ವಾರಂಟೈನ್ ಕೇಂದ್ರಗಳಲ್ಲಿ ಉಚಿತ ಕಾಂಡೋಮ್ ವಿತರಣೆ

    ಪಾಟ್ನಾ: 14 ದಿನಗಳ ಕ್ವಾರಂಟೈನ್ ಸಮಯವನ್ನು ಪೂರ್ಣಗೊಳಿಸಿ ಮನೆಗಳಿಗೆ ಹಿಂದಿರುಗುತ್ತಿದ್ದ ಪ್ರವಾಸಿ ಕಾರ್ಮಿಕರಿಗೆ ಬಿಹಾರ ಸರ್ಕಾರ ಕಾಂಡೋಮ್, ಗರ್ಭನಿರೋಧಕ, ಪ್ರೆಗ್ರನ್ಸಿ ಕಿಟ್‍ಗಳನ್ನು ಉಚಿತವಾಗಿ ವಿತರಣೆ ಮಾಡಿದೆ.

    ಕುಟುಂಬ ನಿಯಂತ್ರಣ ಕಾರ್ಯಕ್ರಮದ ಭಾಗವಾಗಿ ಬಿಹಾರ ಸರ್ಕಾರ ಈ ಕಾರ್ಯವನ್ನು ಮಾಡುತ್ತಿದೆ. ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಬಿಹಾರದಲ್ಲಿ ಕುಟುಂಬ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಸರ್ಕಾರ ಹೊಸ ಯೋಜನೆ ಜಾರಿ ಮಾಡಿದೆ. ಅಲ್ಲದೇ ಕೋವಿಡ್-19ಗೂ ಸರ್ಕಾರದ ಹೊಸ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನು ಓದಿ: ಜಾಗತಿಕ ಕೊರತೆ – ಕಾಂಡೋಮ್ ಕಾರ್ಖಾನೆಯ ನೌಕರರನ್ನು ‘ಅಗತ್ಯ ಸೇವೆ’ ಪಟ್ಟಿಗೆ ಸೇರ್ಪಡೆ

    ಲಾಕ್‍ಡೌನ್ ಕಾರಣದಿಂದ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ಕಾರ್ಮಿಕರು ಲಾಕ್‍ಡೌನ್ ನಿಯಮಗಳಲ್ಲಿ ಸಡಿಲಿಕೆ ಲಭಿಸಿದ ಕಾರಣ ತಮ್ಮ ಸ್ವ-ಸ್ಥಳಗಳಿಗೆ ವಾಪಸ್ ಆಗುತ್ತಿದ್ದಾರೆ. ಈ ರೀತಿ ವಾಪಸ್ ಆಗುತ್ತಿರುವ ಕಾರ್ಮಿಕರಿಗೆ 14 ದಿನಗಳ ಅವಧಿಯ ಹೋಂ ಕ್ವಾರಂಟೈನ್‍ಗೆ ಸೂಚನೆ ನೀಡಿ ಸರ್ಕಾರ ಮನೆಗಳಿಗೆ ಕಳುಹಿಸುತ್ತಿದೆ. ಈ ವೇಳೆ ಅಧಿಕಾರಿಗಳು ಕಾರ್ಮಿಕರಿಗೆ ಕಾಂಡೋಮ್ ನೀಡಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ಅರೋಗ್ಯ ಅಧಿಕಾರಿಗಳಾಗಿ ಜನಸಂಖ್ಯೆ ನಿಯಂತ್ರಣ ನಮ್ಮ ಕರ್ತವ್ಯ ಎಂದು ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನು ಓದಿ: ಕೊರೊನಾ ಎಫೆಕ್ಟ್- ಕಳೆದೊಂದು ವಾರದಿಂದ ಕಾಂಡೋಮ್ ಖರೀದಿ ಹೆಚ್ಚಳ

    ಕೇವಲ ಕ್ವಾರಂಟೈನ್ ಕೇಂದ್ರಗಳು ಮಾತ್ರವಲ್ಲದೇ ಗೋಪಾಲ್‍ಗಂಜ್, ಸಮಸ್ತಿಪುರ, ಚಂಪಾರನ್, ಸರನ್ ಜಿಲ್ಲೆಗಳಲ್ಲಿ ಆಶಾ ಕಾರ್ಯಕರ್ತರ ಮೂಲಕ ಮನೆ ಮನೆಗೆ ಕಾಂಡೋಮ್ ತಲುಪಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಲಾಕ್‍ಡೌನ್ ಕಾರಣದಿಂದ ಬಿಹಾರ ರಾಜ್ಯವೊಂದರಲ್ಲೇ ಸುಮಾರು 8 ಲಕ್ಷ ಪ್ರವಾಸಿ ಕಾರ್ಮಿಕರು ಸ್ವ-ಸ್ಥಳಗಳಿಗೆ ವಾಪಸ್ ಆಗಿದ್ದಾರೆ. ಸುಮಾರು 5.26 ಲಕ್ಷ ಮಂದಿಗೆ ಸಾಂಸ್ಥಿಕ ಕಾರಂಟೈನ್ ಮಾಡಲಾಗಿದೆ. ಜೂನ್ 15 ಬಳಿಕ ಕಾರಂಟೈನ್ ಕೇಂದ್ರಗಳನ್ನು ಮುಚ್ಚಿ ಆ ಬಳಿಕ ಎಲ್ಲರಿಗೂ ಹೋಂ ಕ್ವಾರಂಟೈನ್ ಮಾಡಲು ಬಿಹಾರ ಸರ್ಕಾರ ನಿರ್ಧರಿಸಿದೆ.

    ಕೊರೊನಾ ಸೋಂಕಿನ ಕಾರಣದಿಂದ ಬಿಹಾರದಲ್ಲಿ ಇದುವರೆಗೂ 23 ಮಂದಿ ಸಾವನ್ನಪ್ಪಿದ್ದು, ಸೋಂಕಿತರ ಸಂಖ್ಯೆ 3,945ಕ್ಕೇರಿದೆ. ಇದನ್ನು ಓದಿ: ಕಾಂಡೋಮ್ ವಿನ್ಯಾಸಿತ ಬಟ್ಟೆ ಧರಿಸಿದ ಚಿರಂಜೀವಿ ಸೊಸೆ- ಸುಸ್ಥಿರತೆ ಪಾಠ