Tag: ಜನಸೇನಾ ಪಕ್ಷ

  • ಅಖಾಡಕ್ಕೆ ಇಳಿಯಲು ಪವನ್ ಕಲ್ಯಾಣ್ ಚುನಾವಣಾ ರಥ ರೆಡಿ

    ಅಖಾಡಕ್ಕೆ ಇಳಿಯಲು ಪವನ್ ಕಲ್ಯಾಣ್ ಚುನಾವಣಾ ರಥ ರೆಡಿ

    ಟಾಲಿವುಡ್‌ನ (Tollywood) ಪವರ್ ಸ್ಟಾರ್ ಪವನ್ ಕಲ್ಯಾಣ ಸಿನಿಮಾ ಮಾತ್ರವಲ್ಲ, ರಾಜಕೀಯ ರಂಗದಲ್ಲೂ ಬ್ಯುಸಿಯಾಗಿದ್ದಾರೆ. ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ (Pawan Kalyan) ಈಗ ತಮ್ಮ ಚುನಾವಣಾ ರಥವನ್ನ ಪರಿಚಯಿಸಿದ್ದಾರೆ. ಅಖಾಡದಲ್ಲಿ ಅಬ್ಬರಿಸಲು ನಟ ಪವನ್ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

    ಸೌತ್‌ನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಪವನ್ ಕಲ್ಯಾಣ್ ಈಗಾಗಲೇ ರಾಜಕೀಯದತ್ತ (Politics) ಮುಖ ಮಾಡಿದ್ದಾರೆ. ತಮ್ಮದೇ ಜನಸೇನಾ ಪಕ್ಷವನ್ನ (Janasena Party) ಕಟ್ಟಿ ಮುಂಬರುವ ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ತಮ್ಮ ಶಕ್ತಿ ಪ್ರದರ್ಶಿಸಲು ಪವನ್ ಕಲ್ಯಾಣ್ ರೆಡಿಯಾಗಿದ್ದಾರೆ. ಅದಕ್ಕಾಗಿ ಚುನಾವಣೆ ಪ್ರಚಾರ ಕಾರ್ಯಕ್ಕೆ `ವಾರಾಹಿ’ (Varahi) ಎಂಬ ರಥವನ್ನು ಕೂಡ ನಟ ಪರಿಚಯಿಸಿದ್ದಾರೆ. ಇದನ್ನೂ ಓದಿ: ರಶ್ಮಿಕಾ ಕನ್ನಡದ ಹುಡುಗಿ, ಬ್ಯಾನ್ ಯಾಕೆ ಮಾಡಬೇಕು: ಧನಂಜಯ್

    ಈಗಾಗಲೇ ಒಪ್ಪಿಕೊಂಡಿರುವ ಸಿನಿಮಾಗಳನ್ನು ಪೂರ್ಣಗೊಳಿಸಿ, ಚುನಾವಣೆ ಕಡೆ ಗಮನ ಕೊಡಲಿದ್ದಾರೆ. ಸದ್ಯ `ವರಾಹಿ’ ರಥದ ಕುರಿತು ಚುನಾವಣೆಗೆ ರೆಡಿ ಎಂಬ ಅರ್ಥದಲ್ಲಿ ಫೋಟೋ ಮತ್ತು ವೀಡಿಯೋವನ್ನ ಪವನ್ ಶೇರ್ ಮಾಡಿದ್ದಾರೆ. ಪ್ರತಿ ಮನೆ ಮನಗಳಿಗೂ ತಲುಪಿ, ಪ್ರಚಾರ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ.

    ಇನ್ನೂ ಪಾಚಿ ಹಸಿರು ಬಣ್ಣದ `ವರಾಹಿ’ ರಥ ರೆಡಿಯಾಗಿದೆ. ಗಾಡಿ ಒಳಗೆ ಮೀಟಿಂಗ್ ರೂಮ್ ಇದೆ. ವರಾಹಿ ಒಳಗೆ ಎಲ್ಲಾ ಬಗೆಯ ಸೌಲಭ್ಯವಿದೆ. ತಮ್ಮ ಚುನಾವಣಾ(Election) ಪ್ರಚಾರಕ್ಕೆ ಸಹಾಯವಾಗುವ ಎಲ್ಲಾ ಸೌಲಭ್ಯವನ್ನ ವರಾಹಿ ಹೊಂದಿದೆ. ಇನ್ನೂ ವಿಧಾನಸಭೆ ಎಲೆಕ್ಷನ್‌ನಲ್ಲಿ ಪವನ್ ಕಲ್ಯಾಣ್ ಜನರ ಮನ ಗೆದ್ದು ಬರುತ್ತಾರಾ ಎಮಬುದನ್ನ ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಡೇರ್ ಡೆವಿಲ್ ಸ್ಟಂಟ್ ಮಾಡಿದ ನಟ ಪವನ್ – ಕೇಸ್ ದಾಖಲಿಸಿದ ಪೊಲೀಸರು

    ಡೇರ್ ಡೆವಿಲ್ ಸ್ಟಂಟ್ ಮಾಡಿದ ನಟ ಪವನ್ – ಕೇಸ್ ದಾಖಲಿಸಿದ ಪೊಲೀಸರು

    ಹೈದರಾಬಾದ್: ಕಾರಿನ ರೂಫ್‌ನಲ್ಲಿ ಡೇರ್ ಡೆವಿಲ್ ಸ್ಟಂಟ್ (Car dare Devil Stunt) ಮಾಡಿದ್ದ ನಟ ಪವನ್ ಕಲ್ಯಾಣ್ ವಿರುದ್ಧ ಪೊಲೀಸರು ಕೇಸ್ (Police Case) ದಾಖಲಿಸಿದ್ದಾರೆ. ಅತಿವೇಗದ ಕಾರು ಚಾಲನೆ ಮತ್ತು ಇತರರ ಜೀವ ಹಾಗೂ ವೈಯಕ್ತಿಕ ಸುರಕ್ಷತೆಗೆ ಅಪಾಯ ತಂದೊಡ್ಡಿದ್ದ ಆರೋಪದ ಮೇಲೆ ಪವನ್ ಕಲ್ಯಾಣ್ (Pawan Kalyan) ವಿರುದ್ಧ ಎಫ್‌ಐಆರ್ (FIR) ದಾಖಲಿಸಲಾಗಿದೆ.

    ಕಳೆದ ವಾರ ಪವನ್ ಕಲ್ಯಾಣ್ ವೇಗವಾಗಿ ಚಲಿಸುತ್ತಿದ್ದ ಕಾರಿನ ರೂಫ್ ಮೇಲೆ ಕುಳಿತಿದ್ದರು. ಅದೇ ಕಾರಿನಲ್ಲಿ ಅಕ್ಕಪಕ್ಕ ಐದಾರು ಜನ ಡೋರ್ ಹಿಡಿದು ನಿಂತಿದ್ದರು. ಈ ವೀಡಿಯೋ ಜಾಲತಾಣದಲ್ಲಿ (Social Media) ವೈರಲ್ ಆಗಿತ್ತು. ಇದನ್ನೂ ಓದಿ: ಡ್ಯಾನ್ಸ್ ಮಾಡ್ಬೇಕು ಸಾಂಗ್ ಹಾಕಿ ಅಂದಿದ್ದೆ ತಪ್ಪಾ? – ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು

    ಈ ವೇಳೆ ಬೈಕ್ ಸವಾರನೊಬ್ಬ ನಿಯಂತ್ರಣತಪ್ಪಿ ಬಿದ್ದಿದ್ದಾನೆ ಎಂದು ದೂರುದಾರ ಪಿ.ಶಿವಕುಮಾರ್ ಎಂಬವರು ದೂರು ನೀಡಿದ್ದಾರೆ. ಡೇರ್ ಡೆವಿಲ್ ಸ್ಟಂಟ್‌ನಲ್ಲಿ ಭಾಗಿಯಾಗಿದ್ದ ಪವನ್ ಕಲ್ಯಾಣ್ ಮತ್ತು ಇತರರ ವಿರುದ್ಧ ಪೊಲೀಸ್ ಕ್ರಮಕ್ಕೆ ಅವರು ಒತ್ತಾಯಿಸಿದ್ದಾರೆ. ಶಿವಕುಮಾರ್ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ಇದನ್ನೂ ಓದಿ: ‘ಬಿಗ್ ಬಾಸ್’ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ: ಅಚ್ಚರಿಯ ಮತ್ತೊಂದು ಹೆಸರು

    ಪವನ್ ಕಲ್ಯಾಣ್ ಅವರು ಕಾರಿನ ರೂಫ್‌ನಲ್ಲಿ ಕುಳಿತಿದ್ದರೂ ಚಾಲಕ ಅದನ್ನು ಲೆಕ್ಕಿಸಿದೇ ಮಿತಿ ಮೀರಿದ ವೇಗದಲ್ಲಿ ಚಲಿಸುತ್ತಿದ್ದ. ಅಲ್ಲದೇ ಇತರ ಬೆಂಗಾವಲು ವಾಹನಗಳೂ ಇದೇ ವೇಗದಲ್ಲಿ ಅವರನ್ನು ಹಿಂಬಾಲಿಸಿದ್ದವು.

    ಜನಸೇನಾ ಪಕ್ಷದ (Jana Sena Party) ಅಧ್ಯಕ್ಷರಾಗಿರುವ ಪವನ್ ಕಲ್ಯಾಣ್ ಕಳೆದ ವಾರ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಇಪ್ಪಟ್ಟಂ ಗ್ರಾಮಕ್ಕೆ ಭೇಟಿ ನೀಡಿದ್ದರು. ಅಲ್ಲಿ ರಸ್ತೆ ಅಗಲೀಕರಣ ಮಾಡುವುದಕ್ಕಾಗಿ ಮನೆಗಳನ್ನು ಕೆಡವಲಾಗಿದೆ ಎಂಬ ಅರೋಪ ಕೇಳಿ ಬಂದಿದ್ದರಿಂದ ಸ್ಥಳೀಯರನ್ನು ಭೇಟಿ ಮಾಡಲು ತೆರಳಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

    ಕೊರೊನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

    ಹೈದರಾಬಾದ್: ಜನಸೇನಾ ಪಕ್ಷದ ಮುಖ್ಯಸ್ಥ, ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

    ಕೊರೊನಾ ವೈರಸ್ ದೇಶಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಪವನ್ ಕಲ್ಯಾಣ್ ಸಹಾಯಕ್ಕೆ ಮುಂದಾಗಿದ್ದಾರೆ. ಅವರು ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿ ಒಟ್ಟು 2 ಕೋಟಿ ರೂ. ದೇಣಿಗೆ ನೀಡಲಿದ್ದಾರೆ. ಇದನ್ನೂ ಓದಿ: ಕೊರೊನಾ ಪರಿಹಾರ ನಿಧಿಗೆ ತನ್ನ 6 ತಿಂಗ್ಳ ಸಂಬಳ ನೀಡಿದ ಭಾರತದ ಕುಸ್ತಿಪಟು

    ಈ ಕುರಿತು ಟ್ವೀಟ್ ಮಾಡಿವ ಪವನ್ ಕಲ್ಯಾಣ್, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ತಲಾ 50 ಲಕ್ಷ ರೂ.ನಂತೆ 1 ಕೋಟಿ ರೂ. ದೇಣಿಗೆ ನೀಡುತ್ತೇನೆ. ಅಷ್ಟೇ ಅಲ್ಲದೆ ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದು ಕೋಟಿ ನೀಡಲು ನಿರ್ಧರಿಸಿರುವೆ ಎಂದು ತಿಳಿಸಿದ್ದಾರೆ

    ಇನ್ನೊಂದೆಡೆ ಪವನ್ ಕಲ್ಯಾಣ್ ಅವರು ಕೇಂದ್ರ ಸರ್ಕಾರದ ಸಂದೇಶ ಮತ್ತು ಸಲಹೆಯನ್ನು ಸ್ವಾಗತಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇನೆ. ಜನಸೇನಾ ಪಕ್ಷದ ಮುಖ್ಯಸ್ಥರು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆ ಪ್ರಧಾನಿ ಮೋದಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರರ ಸೇವೆಗಳನ್ನು ಪವನ್ ಕಲ್ಯಾಣ್ ಶ್ಲಾಘಿಸಿದ್ದಾರೆ.

    ಪವನ್ ಕಲ್ಯಾಣ್ ಅವರು ಸಿನಿಮಾ ಕ್ಷೇತ್ರಕ್ಕೆ ಪುನರಾಗಮನ ಮಾಡಿದ್ದು, ಮುಂಬರುವ ಅವರ ‘ವಕೀಲ್ ಸಾಬ್’ ಚಿತ್ರವನ್ನು ವೇಣು ಶ್ರೀರಾಮ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಂಜಲಿ ಮತ್ತು ನಿವೇತಾ ಥಾಮಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.