Tag: ಜನಾರ್ದನ ಪೂಜಾರಿ

  • ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

    ಮಸೀದಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ.. ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ: ಜನಾರ್ದನ ಪೂಜಾರಿ ಪ್ರಶ್ನೆ

    – ಧರ್ಮಸ್ಥಳ ಹೆಸರು ಹಾಳಾಗೋದಕ್ಕೆ ಪೂಜಾರಿ ಬಿಡಲ್ಲ ಎಂದು ಪ್ರತಿಜ್ಞೆ

    ಮಂಗಳೂರು: ಮಸೀದಿ, ಚರ್ಚ್‌ಗಳಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಮಾಜಿ ಸಂಸದ ಜನಾರ್ದನ ಪೂಜಾರಿ (Janardhana Poojary) ಪ್ರಶ್ನಿಸಿದರು.

    ಧರ್ಮಸ್ಥಳ (Dharmasthala) ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣ ಕುರಿತು ಉಳ್ಳಾಲ ಸಮೀಪದ ತೊಕ್ಕೊಟ್ಟು ಮುದ್ದುಕೃಷ್ಣ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಹೆಸರು ಹಾಳು ಮಾಡಲಾಗುತ್ತಿದೆ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ಧರ್ಮಸ್ಥಳದ ಧರ್ಮಾಧಿಕಾರಿಗಳು ಸರ್ಕಾರ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ: ಶಿವಗಂಗಾ ಬಸವರಾಜ್

    ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಜೊತೆ ನಾವಿದ್ದೇವೆ. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಜೊತೆ ಇಡೀ ಜಗತ್ತು ನಿಲ್ಲುತ್ತದೆ. ಇಡಿ ಕುದ್ರೋಳಿ ದೇವಸ್ಥಾನ ನಿಮ್ಮೊಂದಿಗಿದೆ ಹೆದರಬೇಡಿ. ಎಸ್‌ಐಟಿ ಧರ್ಮಸ್ಥಳದಲ್ಲಿ ಎಷ್ಟು ಅಗೆದರೂ ಏನು ಸಿಗೋದಿಲ್ಲ. ಮಸೀದಿಯಲ್ಲಿ, ಚರ್ಚ್‌ನಲ್ಲಿ ಶವ ಹೂತಿಡಲಿಲ್ವಾ? ಕೇವಲ ಧರ್ಮಸ್ಥಳದಲ್ಲಿ ಮಾತ್ರಾನಾ ಎಂದು ಪ್ರಶ್ನೆ ಮಾಡಿದರು.

    ಮನುಷ್ಯ ಸತ್ತ ಕೂಡಲೇ ಅವನನ್ನ ದೇವಸ್ಥಾನದ ವಠಾರದಲ್ಲಿ ಹೂತು ಹಾಕೋದು ಒಂದು ಪದ್ಧತಿ. ಧರ್ಮಸ್ಥಳದಂತಹ ದೇವಸ್ಥಾನವನ್ನ ನಡೆಸೋದು ಎಷ್ಟು ಕಷ್ಟ ಇದೆ ಎಂದು ನನಗೆ ಗೊತ್ತು. ವೀರೇಂದ್ರ ಹೆಗ್ಗಡೆಯವರೇ ನಿಮ್ಮ ಜೊತೆ ನಾನಿದ್ದೇನೆ. ಧರ್ಮಸ್ಥಳದ ವಠಾರವನ್ನ ಎಸ್‌ಐಟಿಯವರು ಅಗೆಯುತ್ತಿದ್ದಾರೆ. ಶವಗಳನ್ನ ಹೂತ್ತಿದ್ದಾರೆ ಎನ್ನುವ ಆರೋಪದಲ್ಲಿ ಶವಗಳನ್ನ ಹುಡುಕುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಧರ್ಮಸ್ಥಳ ಗುಂಪು ಘರ್ಷಣೆ – 6 ಆರೋಪಿಗಳು ಅರೆಸ್ಟ್‌

    ಧರ್ಮಸ್ಥಳ ಕೇವಲ ಜೈನರಿಗೆ ಸೇರಿದ ಸ್ಥಳವಲ್ಲ. ಧರ್ಮಸ್ಥಳವನ್ನ ಹಾಳು ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕುದ್ರೋಳಿ ದೇವಸ್ಥಾನದಲ್ಲಿ ಮಾತ್ರ ಭಕ್ತನಲ್ಲ, ನಾನು ಧರ್ಮಸ್ಥಳದ ಭಕ್ತ. ಎಸ್‌ಐಟಿಯವರು ಹುಡುಕಿದ್ರೂ ಏನು ಸಿಗುತ್ತಿಲ್ಲ. ಮುಖ್ಯಮಂತ್ರಿಯವರೇ ಏನು ಮಾಡುತ್ತಿದ್ದೀರಿ ನೀವು. ಧರ್ಮಸ್ಥಳದ ಹೆಸರು ಹಾಳಾಗುತ್ತಿದೆ. ಅದಕ್ಕೆ ಬಿಡೋದಿಲ್ಲ ಎಂದು ತಿಳಿಸಿದರು.

    ಧರ್ಮಸ್ಥಳದ ಹೆಸರು ಹಾಳು ಮಾಡೋದಕ್ಕೆ ಪೂಜಾರಿ ಬಿಡೋದಿಲ್ಲ. ಪ್ರಧಾನಿ ಮೋದಿಯವರು ಇಂದು ಕರ್ನಾಟಕಕ್ಕೆ ಬಂದಿದ್ದಾರೆ. ಮೋದಿಯವರೇ ನಿಮಗೆ ಧೈರ್ಯವಿದ್ದರೆ, ತಾಕತ್ತಿದ್ದರೆ ಧರ್ಮಸ್ಥಳಕ್ಕೆ ಹೋಗಿ ಭಾಷಣ ಮಾಡಿ ಎಂದು ಟಾಂಗ್‌ ಕೊಟ್ಟರು.

  • ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

    ಜನಾರ್ದನ ಪೂಜಾರಿ ಪ್ರಭಾವ ಬಳಸಿ ಟಿಕೆಟ್‍ಗಾಗಿ ಭಾರೀ ಕಸರತ್ತು

    ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ (Janardhan Poojary) ಪ್ರಭಾವ ಬಳಸಿ ಈ ಬಾರಿಯ ಚುನಾವಣಾ ಟಿಕೆಟ್‍ಗಾಗಿ ಭಾರೀ ಕಸರತ್ತು ನಡೆಯುತ್ತಿದೆ.

    ಹೌದು. ಹಿರಿಯ ಕಾಂಗ್ರೆಸ್ ನಾಯಕನ ಮೂಲಕ ಟಿಕೆಟ್ ಪಡೆಯಲು ಒತ್ತಡ ತಂತ್ರ ಹೆಣೆಯಲಾಗುತ್ತಿದೆ. ಜನಾರ್ದನ ಪೂಜಾರಿಯಿಂದ ಡಿ.ಕೆ ಶಿವಕುಮಾರ್ (DK Shivakumar) ಗೆ ಕರೆ ಮಾಡಿಸಿ ಟಿಕೆಟ್ ಕೊಡಿಸಲು ಮನವಿ ಮಾಡಿದ ಪ್ರಸಂಗ ನಡೆದಿದೆ. ಇದನ್ನೂ ಓದಿ: ನಕಲಿ ಚಿನ್ನ ಕೊಟ್ಟು ಅಸಲಿ ಆಭರಣದೊಂದಿಗೆ ಅಜ್ಜಿ ಗ್ಯಾಂಗ್‌ ಎಸ್ಕೇಪ್‌

    ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಶೀತ್ ಪಿರೇರಾ ಟಿಕೆಟ್ ಕಸರತ್ತು ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಭಾನುವಾರ ಜನಾರ್ದನ ಪೂಜಾರಿ ಮನೆಗೆ ತೆರಳಿ ಟಿಕೆಟ್ ತೆಗೆಸಿ ಕೊಡಲು ಪ್ಲಾನ್ ಮಾಡಿದ್ದಾರೆ. ಅಂತೆಯೇ ಜನಾರ್ದನ ಪೂಜಾರಿ ಅವರು, ಡಿಕೆಶಿಗೆ ಕರೆ ಮಾಡಿ ಆಶೀತ್ ಗೆ ಟಿಕೆಟ್ ಕೊಡುವಂತೆ ಹೇಳಿದ್ದಾರೆ. ಜೆ.ಆರ್.ಲೋಬೋ ಬದಲು ಆಶೀತ್ ಪಿರೇರಾಗೆ ಟಿಕೆಟ್ ಕೊಡಲು ಹೇಳಿದ್ದಾರೆ. ಇದನ್ನೂ ಓದಿ: ಸುಮಲತಾ ಜೊತೆ ನಮ್ಮ ಕಾರ್ಯಕರ್ತರು ಗುರುತಿಸಿಕೊಳ್ಳಬೇಡಿ: ಮಂಡ್ಯ ಕಾಂಗ್ರೆಸ್

    ಡಿಕೆಶಿ ಬಳಿ ಪೂಜಾರಿ ಹೇಳಿದ್ದೇನು..?: ನನ್ನಲ್ಲಿಗೆ ಯೂತ್ ಕಾಂಗ್ರೆಸ್ ಲೀಡರ್ ಆಶೀತ್ ಪಿರೇರಾ ಬಂದಿದ್ದಾರೆ. ಅವರಿಗೆ ಮಂಗಳೂರು ದಕ್ಷಿಣಕ್ಕೆ ಏನಾದ್ರೂ ಸಹಾಯ ಮಾಡಲು ಸಾಧ್ಯ ಉಂಟಾ..?. ನೀವೇ ಸುಧಾರಿಸಿ, ಜೆ.ಆರ್.ಲೋಬೋ ಸ್ಥಾನಕ್ಕೆ, ಆಶೀತ್ ಪಿರೇರಾ ಕೂಡ ಕ್ರಿಶ್ಚಿಯನ್. ಡಿಕೆಶಿಗೆ ಕರೆ ಮಾಡಿ ಆಶೀತ್ ಪಿರೇರಾ ಪರ ಪೂಜಾರಿ ಮಾತನಾಡಿದ್ದಾರೆ.

    ಸದ್ಯ ಮಂಗಳೂರು ದಕ್ಷಿಣದಿಂದ ಮಾಜಿ ಶಾಸಕ ಜೆ.ಆರ್ ಲೋಬೋ (J R Lobo) ಮತ್ತು ಐವನ್ ಡಿಸೋಜಾ (Ivan D’Souza) ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇದನ್ನೂ ಓದಿ: ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿಕೆಶಿ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಿಸ್ತಾರೆ: ಜನಾರ್ದನ ಪೂಜಾರಿ

    ಡಿಕೆಶಿ ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಿಸ್ತಾರೆ: ಜನಾರ್ದನ ಪೂಜಾರಿ

    ಮಂಗಳೂರು: ಉಪಚುನಾವಣೆಯಲ್ಲಿ ಗೆಲುವು ಸಾಧಿಸದೇ ಡಿಕೆ ಶಿವಕುಮಾರ್ ಸೋದರರು ವಿರಮಿಸಲ್ಲ. ಅವರು ಹಣ ಖರ್ಚು ಮಾಡಿ ಚುನಾವಣೆ ಗೆಲ್ಲಿಸ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್, ಚುನಾವಣೆಗೆ ಖರ್ಚು ಮಾಡಲು ಸಾಧ್ಯವಿರುವ ವ್ಯಕ್ತಿ. ಹೀಗಾಗಿ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸದೇ ಡಿಕೆ ಶಿವಕುಮಾರ್ ಸೋದರರು ವಿರಮಿಸಲ್ಲ ಎಂದರು. ಇದನ್ನೂ ಓದಿ: ಆರ್‍ಆರ್ ನಗರ, ಶಿರಾ ಉಪಚುನಾವಣೆ- ಅಭ್ಯರ್ಥಿಗಳ ಆಸ್ತಿ ಎಷ್ಟಿದೆ?

    ಚುನಾವಣೆಗೆ ಖರ್ಚು ಮಾಡಲು ಸಾಧ್ಯ ಇರುವ ವ್ಯಕ್ತಿ ಅಂದ್ರೆ ಡಿಕೆಶಿ. ಖರ್ಚು ಮಾಡುವಷ್ಟು ಹಣ ಡಿಕೆಶಿ ಅವರಲ್ಲಿದೆ. ಗೆಲುವು ಸಿಗುವವರೆಗೆ ಅವರು ನಿದ್ದೆ ಮಾಡಲ್ಲ. ಅವರೊಂದಿಗೆ ಡಿಕೆ ಸುರೇಶ್ ಮತ್ತು ಅವರ ತಾಯಿ ಕೂಡ ನಿದ್ದೆ ಮಾಡಲ್ಲ. ಅವರ ತಾಯಿ ಮಕ್ಕಳನ್ನ ಗೆಲ್ಲಿಸದೇ ಬಿಡೋದೇ ಇಲ್ಲ. ಅವರೇ ನಿಂತು ಈ ಚುನಾವಣೆ ಗೆಲ್ಲಿಸ್ತಾರೆ ಅನ್ನೋ ವಿಶ್ವಾಸ ಇದೆ ಎಂದು ತಿಳಿಸಿದರು.

    ದೇಶಾದ್ಯಂತ ಒಟ್ಟು 56 ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಪ್ರಕಟವಾಗಿದೆ. ನವೆಂಬರ್ 3ಕ್ಕೆ ಮತದಾನ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಹೊರಬೀಳಲಿದೆ. ಕಾಂಗ್ರೆಸ್ಸಿ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದು, ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ. ಇದನ್ನೂ ಓದಿ: ಆರ್.ಆರ್.ನಗರ ಉಪಚುನಾವಣೆ- ಕೋಟ್ಯಧೀಶೆ, ಸಾಲಗಾರ್ತಿ ಆಗಿದ್ದಾರೆ ಕುಸುಮಾ

    ಜೆಡಿಎಸ್ ಶಾಸಕರಾಗಿದ್ದ ಬಿ. ಸತ್ಯನಾರಾಯಣ ನಿಧನದಿಂದ ತೆರವಾಗಿರುವ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಗರಿಗೆದರಿದೆ. ಇನ್ನು ರಾಜರಾಜೇಶ್ವರಿ ನಗರದ ಮಾಜಿ ಶಾಸಕ ಮುನಿರತ್ನ ಅವರಿಗೆ ಹೈಕೋರ್ಟ್ ಈ ಹಿಂದೆ ಬಿಗ್ ರಿಲೀಫ್ ನೀಡಿತ್ತು. ಪರಾಜಿತ ಅಭ್ಯರ್ಥಿ ಮುನಿರಾಜು ತನ್ನನ್ನು ಶಾಸಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. 2018ರ ವಿಧಾನಸಭೆ ಚನಾವಣೆಯಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಮುನಿರತ್ನ ಅವರು ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಪಿ.ಎಂ.ಮುನಿರಾಜುಗೌಡ ತಕಾರರು ಅರ್ಜಿಯನ್ನು ಸಲ್ಲಿಸಿದ್ದರು.

  • ಚರ್ಚ್, ದೇವಸ್ಥಾನದಲ್ಲಿ ಗಳಗಳನೆ ಕಣ್ಣೀರಿಟ್ಟ ಜನಾರ್ದನ ಪೂಜಾರಿ

    ಚರ್ಚ್, ದೇವಸ್ಥಾನದಲ್ಲಿ ಗಳಗಳನೆ ಕಣ್ಣೀರಿಟ್ಟ ಜನಾರ್ದನ ಪೂಜಾರಿ

    ಮಂಗಳೂರು: ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಕೇಂದ್ರ ಸಚಿವರಾದ ಜನಾರ್ದನ ಪೂಜಾರಿ ಇಂದು ದೇವಸ್ಥಾನ ಹಾಗೂ ಚರ್ಚ್ ನಲ್ಲಿ ಗಳಗಳನೆ ಅತ್ತುಬಿಟ್ಟರು.

    ಜನಾರ್ದನ ಪೂಜಾರಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಆರೋಗ್ಯಕ್ಕಾಗಿ ಪ್ರಾರ್ಥಿಸಲು ಚರ್ಚ್ ಗೆ ತೆರಳಿದ್ದರು. ಈ ವೇಳೆ ಅಲ್ಲಿ ಆಸ್ಕರ್ ಅವರನ್ನು ಕಂಡು ಪೂಜಾರಿ ಅವರು ಬೇಸ್ತು ಬಿದ್ದರು.

    ಆಸ್ಕರ್ ಫೆರ್ನಾಂಡಿಸ್ ಆರೋಗ್ಯದಲ್ಲಿ ಏರುಪೇರಾಗಿದೆ ಎನ್ನುವ ಮಾಹಿತಿ ತಿಳಿದ ಪೂಜಾರಿಯವರು ದಿಢೀರನೆ ದೇವಸ್ಥಾನ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆಗೆ ತೆರಳಿದ್ದರು. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಪ್ರಾರ್ಥನೆ ನೆರವೇರಿಸಿದ ಪೂಜಾರಿ, ಅಲ್ಲಿ ಆಸ್ಕರ್ ನೆನೆದು ಗಳಗಳನೆ ಅತ್ತಿದ್ದೂ ಆಗಿತ್ತು. ಬಳಿಕ ನಗರದ ರೊಸಾರಿಯೋ ಚರ್ಚ್ ಗೆ ಪ್ರಾರ್ಥನೆಗಾಗಿ ತೆರಳಿದ ಸಂದರ್ಭದಲ್ಲಿ ಸ್ವತಃ ಆಸ್ಕರ್ ಫೆರ್ನಾಂಡಿಸ್ ಚರ್ಚ್ ನಲ್ಲಿರುವುದನ್ನು ಕಂಡು ಪೂಜಾರಿ ಒಂದು ಕ್ಷಣ ವಿಚಲಿತರಾದರು.

    ಬಳಿಕ ಆಸ್ಕರ್ ಜೊತೆಗೆ ಚರ್ಚ್ ನಲ್ಲಿ ಪ್ರಾರ್ಥನೆ ನಡೆಸಿದ ಪೂಜಾರಿ ಅವರು ಪರಸ್ಪರ ಆಲಿಂಗಿಸಿಕೊಂಡರು. ಆಸ್ಕರ್ ಅವರಿಗೆ ಹುಷಾರಿಲ್ಲ ಎಂದು ಪೂಜಾರಿಯವರಿಗೆ ಯಾರೋ ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ವತಃ ಅನಾರೋಗ್ಯದಿಂದ ಬಳಲುತ್ತಿರುವ ಪೂಜಾರಿ, ದೇವರಲ್ಲಿ ಪ್ರಾರ್ಥನೆ ನೆರವೇರಿಸಲು ಮಂಗಳೂರಿಗೆ ಆಗಮಿಸಿದ್ದರು. ಎದ್ದು ನಡೆಯಲಾಗದ ಸ್ಥಿತಿಯಲ್ಲಿರುವ ಜನಾರ್ದನ ಪೂಜಾರಿ ಅವರು, ತಮಗಿಂತ ಕಿರಿಯರಾಗಿರುವ ಆಸ್ಕರ್ ಆರೋಗ್ಯಕ್ಕಾಗಿ ಪ್ರಾರ್ಥಿಸಲು ತೆರಳುವಂತೆ ಮಾಡಿದ್ದು ಯಾರೆಂಬ ವಿಚಾರ ಈಗ ಚರ್ಚೆಗೆ ಗ್ರಾಸವಾಗಿದೆ.

  • ಸೋನಿಯಾ ಹುಟ್ಟುಹಬ್ಬವನ್ನು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಆಚರಿಸಿದ ಜನಾರ್ದನ ಪೂಜಾರಿ

    ಸೋನಿಯಾ ಹುಟ್ಟುಹಬ್ಬವನ್ನು ಅನಾಥಾಶ್ರಮ, ವೃದ್ಧಾಶ್ರಮದಲ್ಲಿ ಆಚರಿಸಿದ ಜನಾರ್ದನ ಪೂಜಾರಿ

    ಮಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯ ಹುಟ್ಟುಹಬ್ಬಕ್ಕೆ ಕರ್ನಾಟಕ ಕಾಂಗ್ರೆಸ್ ಹೀನಾಯ ಸೋಲಿನ ಉಡುಗೊರೆ ಕೊಟ್ಟರೆ ಕಾಂಗ್ರೆಸ್‍ನ ಹಿರಿಯ ನಾಯಕ ಜನಾರ್ದನ ಪೂಜಾರಿ ಅನಾಥಾಶ್ರಮಗಳಿಗೆ ಫಲವಸ್ತು, ಊಟ ಕೊಡುವುದರ ಮೂಲಕ ಹುಟ್ಟುಹಬ್ಬ ಆಚರಿಸಿದ್ದಾರೆ.

    ಈ ಬಾರಿ ದೇಶದೆಲ್ಲೆಡೆ ಮಹಿಳೆಯರ ಮೇಲಿನ ದೌರ್ಜನ್ಯದಿಂದ ನೊಂದು ತನ್ನ ಜನ್ಮ ದಿನಾಚರಣೆ ಮಾಡುವುದಿಲ್ಲ ಎಂದು ಸೋನಿಯಾ ಗಾಂಧಿ ಘೋಷಿಸಿದ್ದರು. ಈ ರೀತಿ ಹೆಣ್ಣು ಮಕ್ಕಳ ದೌರ್ಜನ್ಯದಿಂದ ನೊಂದು ಹುಟ್ಟುಹಬ್ಬ ಆಚರಿಸದಿರುವ ಉದಾತ್ತ ಮಹಿಳೆ ಜಗತ್ತಿನಲ್ಲಿಯೇ ಬೇರೆ ಯಾರು ಇರುವುದಿಲ್ಲ ಎಂದು ಕೇಂದ್ರ ಸರ್ಕಾರದ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ಅಭಿಪ್ರಾಯಪಟ್ಟಿದ್ದಾರೆ.

    ಹೀಗಾಗಿ ಪ್ರತಿ ವರ್ಷ ಸೋನಿಯಾ ಗಾಂಧಿಯ ಹುಟ್ಟುಹಬ್ಬವನ್ನು ವಿವಿಧ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ ಮಾಡುವ ಮೂಲಕ ಜನಾರ್ದನ ಪೂಜಾರಿ ಆಚರಿಸುತ್ತಿದ್ದರು. ಅದೇ ರೀತಿ ಈ ವರ್ಷವೂ ನಗರದ ಸಂತ ಅಂತೋನಿಯವರ ಸೈಂಟ್ ಜೋಸೆಫ್ ಪ್ರಶಾಂತ್ ನಿವಾಸದ ವೃದ್ಧಾಶ್ರಮ, ಕೋಣಾಜೆಯ ಅಭಯಾಶ್ರಮಗಳಿಗೆ ಹಣ್ಣು-ಹಂಪಲು ನೀಡಿದ್ದಾರೆ. ಮಂಗಳೂರಿನ ಶಕ್ತಿನಗರದಲ್ಲಿರುವ ಸಾನಿಧ್ಯ ವಿಶೇಷ ಮಕ್ಕಳ ಶಾಲೆಯಲ್ಲಿ ಊಟ ಹಾಗೂ ಹಣ್ಣುಹಂಪಲು ನೀಡಿ ಹುಟ್ಟುಹಬ್ಬ ಆಚರಿಸಿದರು.

    ಬಳಿಕ ಮಾತನಾಡಿದ ಅವರು, ಬಡವರ ಆಶಯದಂತೆ ಸೋನಿಯಾ ಗಾಂಧಿ ಜನ್ಮ ದಿನವನ್ನು ಈ ಬಾರಿಯೂ ಸರಳವಾಗಿ ಆಚರಿಸುವುದಾಗಿ ತಿಳಿಸಿದ್ದಾರೆ. ಪ್ರತಿ ವರ್ಷ ಆಶ್ರಮದಲ್ಲಿರುವ ಬಡವರ ಸಂತೋಷಕ್ಕಾಗಿ ಸೋನಿಯಾ ಗಾಂಧಿಯವರ ಜನ್ಮ ದಿನವನ್ನು ಅವರೊಂದಿಗೆ ಆಚರಿಸುತ್ತೇನೆ. ಅದಕ್ಕಾಗಿ ಬಡವರು ಸದಾ ಅದರ ನಿರೀಕ್ಷೆಯಲ್ಲಿರುತ್ತಾರೆ. ಆ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಅವರ ಹುಟ್ಟು ಹಬ್ಬದ ಆಚರಣೆ ಬೇಡ ಎಂದರು, ಹಾಗಾಗಿ ಈ ರೀತಿಯಲ್ಲಿ ಆಚರಿಸಲಾಯಿತು ಎಂದರು.

    ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕಳ್ಳಿಗೆ ತಾರಾನಾಥ ಶೆಟ್ಟಿ, ಅಬ್ದುಲ್ ಸಲೀಂ, ಮನಪಾ ಸದಸ್ಯೆ ಜೆಸಿಂತಾ, ಮಾಜಿ ಮನಪಾ ಸದಸ್ಯೆ ಸಬಿತಾ ಮಿಸ್ಕಿತ್, ದೀಪಕ್ ಪೂಜಾರಿ ಮತ್ತು ಟಿ.ಕೆ ಸುಧೀರ್, ಲಕ್ಷ್ಮೀ ನಾರಾಯಣ, ರಮಾನಂದ ಪೂಜಾರಿ, ನೀರಜ್ ಪಾಲ್, ಮೋಹನ್ ಶೆಟ್ಟಿ, ಕರುಣಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

  • ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಶನಿಯಿದ್ದಂತೆ: ಜನಾರ್ದನ ಪೂಜಾರಿ

    ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಶನಿಯಿದ್ದಂತೆ: ಜನಾರ್ದನ ಪೂಜಾರಿ

    – ಅಮಿತ್ ಶಾ ಬ್ರೈನ್ ಇರೋ ಮನುಷ್ಯ

    ಮಂಗಳೂರು: ಸದಾ ಮಾಜಿ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಬಿ. ಜನಾರ್ದನ ಪೂಜಾರಿ ಅವರು ಈ ಬಾರಿಯೂ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡಿಯೇ ಹೋಗುತ್ತಾರೆ. ಅದು ನನಗೆ ಮಾತ್ರವಲ್ಲ ಆ ದೇವರಿಗೆ ಕೂಡ ಗೊತ್ತಿದೆ. ಅವರಿಂದಲೇ ರಾಜ್ಯದಲ್ಲಿ ಕಾಂಗ್ರೆಸ್ ಈ ಮಟ್ಟಕ್ಕೆ ಬಂದಿದೆ ಎಂದು ಗಂಭೀರ ಆರೋಪ ಮಾಡಿದರು.

    ಸಿದ್ದರಾಮಯ್ಯರಿಗೆ ಪಕ್ಷದಲ್ಲಿ ಮತ್ತೆ ಪ್ರಾಮುಖ್ಯತೆ ಕೊಟ್ಟಿದ್ದು ತಪ್ಪು. ಅವರಿಗೆ ಯಾವುದೇ ಜವಾಬ್ದಾರಿ ನೀಡಬಾರದು ಎಂದು ಹೈಕಮಾಂಡಿಗೆ ಕೂಡ ನಾನು ಹೇಳುತ್ತೇನೆ. ಹೈಕಮಾಂಡ್ ತಪ್ಪು ಮಾಡುತ್ತಿದೆ. ಹೋಗಿ ಹೈಕಮಾಂಡಿಗೆ ನನ್ನ ವಿರುದ್ಧ ದೂರು ನೀಡಲಿ. ನನ್ನನ್ನು ಪಕ್ಷದಿಂದ ತೆಗೆಯಲಿ. ನಾನೂ ಅಲ್ಲೇ ಇದ್ದವನು. ಇವರಿಗೆಲ್ಲ ಹೊಸಬನಾಗಿ ಕಾಣುತ್ತಿರಬಹುದು. ಆದರೆ ಇಡೀ ಪಾರ್ಟಿಯನ್ನು ನಾನು ನೋಡುತ್ತಿದ್ದೇನೆ. ಇಲ್ಲದಿದ್ದರೆ ಹೈಕಮಾಂಡ್, ಪೂಜಾರಿ ನಮಗೆ ನೀವು ಹೊಸಬರು. ನಿಮಗೂ ನಮಗೂ ಸಂಬಂಧವೇ ಇಲ್ಲ ಎಂದು ಹೇಳಲಿ. ಆಗ ನಾನು ಸಂಬಂಧ ಇದೆಯೋ ಇಲ್ಲವೋ ಎಂಬುದನ್ನು ತೋರಿಸಿಕೊಡುತ್ತೇನೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಕಿಡಿಕಾರಿದರು.

    ಎರಡು ಬಾರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆ ಸೋತಿದ್ದಾರೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದಲ್ಲಿ ಇರುವ ತನಕ ಕಾಂಗ್ರೆಸ್ಸಿಗೆ ಶನಿಯೇ ಎಂದರು.

    ಮೈತ್ರಿ ಸರ್ಕಾರ ಪತನದ ಬಗ್ಗೆ ಸಿಎಂ ಯಡಿಯೂರಪ್ಪ ಆಡಿಯೋ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ತಾಕತ್ತಿದ್ದರೆ ಅಮಿತ್ ಶಾ ಅವರು, ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲಿ. ಇಲ್ಲವೆಂದಲ್ಲಿ ಅಮಿತ್ ಶಾ ಅವರ ಒಪ್ಪಿಗೆ ಇದೆ ಎಂದು ಆಗುತ್ತದೆ. ಅವರು ಹೇಳಿಯೇ 17 ಶಾಸಕರು ರಾಜೀನಾಮೆ ನೀಡಿರುವುದು ಎಂದಾಗುತ್ತದೆ. ಹೀಗಾಗಿ ಯಡಿಯೂರಪ್ಪ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಅಮಿತ್ ಶಾ ಸೂಚನೆಯಲ್ಲೇ ಸರ್ಕಾರ ಉರುಳಿಸಲಾಗಿತ್ತು. ಅಮಿತ್ ಶಾ ತಲೆಯಲ್ಲಿ ಬ್ರೈನ್ ಇರುವ ಮನುಷ್ಯ ಎಂದು ತಿಳಿಸಿದರು.

  • ದೊಡ್ಡ ತಪ್ಪು ಮಾಡಿದ್ದೇನೆ, ಮನ್ನಿಸು: ಗೋಕರ್ಣನಾಥನಿಗೆ ಕ್ಷಮೆ ಯಾಚಿಸಿದ ಪೂಜಾರಿ

    ದೊಡ್ಡ ತಪ್ಪು ಮಾಡಿದ್ದೇನೆ, ಮನ್ನಿಸು: ಗೋಕರ್ಣನಾಥನಿಗೆ ಕ್ಷಮೆ ಯಾಚಿಸಿದ ಪೂಜಾರಿ

    – ಶಪಥ ಮುರಿದು ಕುದ್ರೋಳಿ ದೇವಸ್ಥಾನಕ್ಕೆ ಭೇಟಿ

    ಮಂಗಳೂರು: ಜೀವನದಲ್ಲಿ ದೊಡ್ಡ ತಪ್ಪು ಮಾಡಿದ್ದೇನೆ, ಮನ್ನಿಸು ಎಂದು ಕಾಂಗ್ರೆಸ್‍ನ ಹಿರಿಯ ನಾಯಕ ಜನಾರ್ದನ ಪೂಜಾರಿ ಗೋಕರ್ಣನಾಥನ ಮುಂದೆ ಕ್ಷಮೆ ಯಾಚಿಸಿದ್ದಾರೆ.

    ನಗರದ ಪ್ರಸಿದ್ಧ ಕುದ್ರೋಳಿ ದೇವಸ್ಥಾನಕ್ಕೆ ಭಾನುವಾರ ಜನಾರ್ದನ ಪೂಜಾರಿ ಅವರು ಭೇಟಿ ನೀಡಿದರು. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮಾಡಿದ್ದ ಶಪಥವನ್ನು ಮುರಿದಿದ್ದಾರೆ.

    ಒಂದು ವೇಳೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗೆಲುವು ಸಾಧಿಸದಿದ್ದರೆ ಕುದ್ರೋಳಿ ದೇವಸ್ಥಾನ ಪ್ರವೇಶ ಮಾಡುವುದಿಲ್ಲ ಎಂದು ಜನಾರ್ದನ ಪೂಜಾರಿ ಶಪಥ ಮಾಡಿದ್ದರು. ಆದರೆ ಬಿಜೆಪಿ ಅಭ್ಯರ್ಥಿ ನಳೀನ್ ಕುಮಾರ್ ಕಟೀಲ್ ವಿರುದ್ಧ ಮಿಥುನ್ ರೈ ಸೋಲು ಕಂಡಿದ್ದರು.

    ಜನಾರ್ದನ ಪೂಜಾರಿ ಅವರು ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ರೂವಾರಿಯಾಗಿದ್ದಾರೆ. ಪ್ರತಿಜ್ಞೆ ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಭೇಟಿ ನೀಡಿ, ಗೋಕರ್ಣನಾಥನಿಗೆ ಕ್ಷಮೆ ಕೇಳಿದ್ದಾರೆ.

    2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಹ್ಯಾಟ್ರಿಕ್ ಸಾಧನೆ ಮಾಡಿದ್ದಾರೆ. ನರೇಂದ್ರ ಮೋದಿ ಅಲೆಯಲ್ಲಿ 2,74,621 ಮತಗಳ ಅಂತರದಿಂದ ಮೂರನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದಾರೆ. ಕಟೀಲ್ 7,74,285 ಮತಗಳನ್ನು ಪಡೆದರೆ ಕಾಂಗ್ರೆಸ್ಸಿನ ಮಿಥುನ್ ರೈ 4,99,664 ಮತಗಳನ್ನು ಪಡೆದಿದ್ದರು.

  • ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ್ರು ನಳಿನ್ ಕುಮಾರ್

    ಜನಾರ್ದನ ಪೂಜಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ್ರು ನಳಿನ್ ಕುಮಾರ್

    ಮಂಗಳೂರು: ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಅವರಿಂದ ಆಶೀರ್ವಾದ ಪಡೆದಿದ್ದಾರೆ.

    ಇಂದು ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬ್ರಹ್ಮಶ್ರೀ ನಾರಾಯಣಗುರುವಿಗೆ ವಂದಿಸಿ ಬಳಿಕ ಅಲ್ಲೇ ಇದ್ದ ಜನಾರ್ದನ ಪೂಜಾರಿಯವರ ಆಶೀರ್ವಾದ ಪಡೆದಿದ್ದಾರೆ. ನಂತರ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

    ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮೋದಿ ಅಲೆಯಿದೆ. ಕಾಂಗ್ರೆಸ್‍ನಿಂದ ಮಿಥುನ್ ರೈ ಉತ್ತಮ ಅಭ್ಯರ್ಥಿ. ಮೋದಿ ಅಲೆಯಿಂದಾಗಿ ಇಲ್ಲಿ ಕಾಂಗ್ರೆಸ್ ಪರಿಸ್ಥಿತಿ ಚೆನ್ನಾಗಿಲ್ಲ. ಇನ್ನು ಎರಡು ಚುನಾವಣೆಯಲ್ಲೂ ಮೋದಿಯವರೇ ಅಧಿಕಾರಕ್ಕೆ ಬರುತ್ತಾರೆ. ಇಡೀ ದೇಶದಲ್ಲಿ ಮೋದಿ ಹವಾ ಹೆಚ್ಚಾಗಿದೆ. ಮೋದಿಯೇ ಬರ್ತಾರೆ ಎಂದು ಜನಾರ್ದನ ಪೂಜಾರಿ ಭವಿಷ್ಯ ನುಡಿದರು.


    ನಾನೂ ಚೌಕೀದಾರ್ ಎಂಬ ಘೋಷಣೆಯೊಂದಿಗೆ ನೂರಾರು ಕಾರ್ಯಕರ್ತರು ಮೋದಿ ರೀತಿಯಲ್ಲಿ ಕೇಸರಿ ಪೇಟ ತೊಟ್ಟು ಮನೆ, ಮನೆಗೆ ತೆರಳಿ, ಪ್ರಚಾರ ನಡೆಸಿದ್ದಾರೆ. ಕೇಸರಿ ಪಾಳಯದ ಹೊಸ ರೀತಿಯ ಪ್ರಚಾರ ಕಾರ್ಯಕರ್ತರಲ್ಲಿ ಹೊಸ ಹುರುಪು ನೀಡಿದೆ. ಒಟ್ಟಿನಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ವಿಳಂಬವಾದ್ರೂ, ಚುನಾವಣೆಯ ಕಾವು ಒಂದೇ ಬಾರಿಗೆ ಏರತೊಡಗಿದೆ. ನಾಳೆ, ಬಿಜೆಪಿ – ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದು ಮಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ.

  • ಪ್ರಾಣ ಹೋದರೂ ಯಡಿಯೂರಪ್ಪನವರು ಆಪರೇಷನ್ ಕಮಲ ಬಿಡಲ್ಲ: ಜನಾರ್ದನ ಪೂಜಾರಿ

    ಪ್ರಾಣ ಹೋದರೂ ಯಡಿಯೂರಪ್ಪನವರು ಆಪರೇಷನ್ ಕಮಲ ಬಿಡಲ್ಲ: ಜನಾರ್ದನ ಪೂಜಾರಿ

    – ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಇನ್ನೊಂದು ಶನಿ

    ಮಂಗಳೂರು: ಮಾಜಿ ಸಿಎಂ ಯಡಿಯೂರಪ್ಪನವರು ಪ್ರಾಣ ಹೋದರೂ ಆಪರೇಷನ್ ಕಮಲ ಮಾಡುವುದನ್ನು ಬಿಡಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಟೀಕಿಸಿದ್ದಾರೆ.

    ಬಿಜೆಪಿಯ ಆಪರೇಷನ್ ಕಮಲ ಆಡಿಯೋ ವಿಚಾರ ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಒಪ್ಪಲಿ, ಬಿಡಲಿ ತನಿಖೆ ಆಗಲೇಬೇಕು. ಕಾಂಗ್ರೆಸ್ ತಪ್ಪು ಮಾಡಿದರೂ ಸತ್ಯಾಂಶ ಹೊರಬರಲಿ. ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯಲಿ. ದೂರು ನೀಡಿಯೇ ತನಿಖೆ ಆಗಬೇಕೆಂದೇನಿಲ್ಲ. ಎಲ್ಲರಲ್ಲೂ ಒಂದು ಸಂಶಯವಿದೆ, ಅದು ನಿವಾರಣೆಯಾಗಲಿ. ಬಿಜೆಪಿಯವರು ಯಾವ ತನಿಖೆಗೆ ಒತ್ತಾಯಿಸುತ್ತಾರೆ ಅದು ಆಗಲಿ. ಜನತೆಗೆ ಸತ್ಯಾಂಶ ತಿಳಿಸೋದು ಶಾಸಕರ, ಸರಕಾರದ ಕರ್ತವ್ಯ ಎಂದು ಹೇಳಿದ್ದಾರೆ.

    ಈ ವಿಚಾರವಾಗಿ ಸ್ಪೀಕರ್ ಹಾಗೂ ಸದನದ ನಿರ್ಣಯದ ಮೇಲೆ ಏನೆಂದು ಸರ್ಕಾರ ತೀರ್ಮಾನ ಕೈಗೊಳ್ಳಲಿ. ಪ್ರಾಣ ಹೋದರೂ ಯಡಿಯೂರಪ್ಪನವರು ಆಪರೇಷನ್ ಕಮಲ ಮಾಡುವುದು ಬಿಡಲ್ಲ. ಈ ತರಹದ ಆಪರೇಷನ್‍ಗಳು ಅವರಿಗೆ ಹವ್ಯಾಸವಾಗಿ ಬಿಟ್ಟಿದೆ. ಇನ್ನಾದರೂ ಆಪರೇಷನ್ ಕಮಲ ಬಿಡಲಿ. ಬಿಜೆಪಿ ಪಕ್ಷವನ್ನೇ ಅವರು ನಾಶ ಮಾಡುತ್ತಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲೂ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದಿದೆ. ತಕ್ಷಣ ಯಡಿಯೂರಪ್ಪ ಕ್ಷಮೆಯಾಚಿಸಲಿ ಎಂದು ಜನಾರ್ದನ ಪೂಜಾರಿ ಬಿಜೆಪಿಗೆ ಸಲಹೆ ನೀಡಿದ್ದಾರೆ.

    ಅಷ್ಟೇ ಅಲ್ಲದೆ ಆಪರೇಷನ್ ಕಮಲ ಮಾಡುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ. ಹಾಗೆಯೇ ಅತೃಪ್ತ ಶಾಸಕರಿಗೆ ಸಿದ್ದರಾಮಯ್ಯ ಬೆಂಬಲ ಆರೋಪ ವಿಚಾರವಾಗಿ ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ಸಿಗೆ ಇನ್ನೊಂದು ಶನಿ. ಅವರಿಗೆ ಯಾವಾಗ ಬುದ್ಧಿ ಬರುತ್ತೋ ಪರಮಾತ್ಮನಿಗೆ ಗೊತ್ತು ಎಂದು ಕಿಡಿಕಾರಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮೋದಿ ದೇಶಕ್ಕೆ ಶನಿ ಇದ್ದಂತೆ- ಮಾಜಿ ಸಚಿವ ಜನಾರ್ದನ ಪೂಜಾರಿ

    ಮೋದಿ ದೇಶಕ್ಕೆ ಶನಿ ಇದ್ದಂತೆ- ಮಾಜಿ ಸಚಿವ ಜನಾರ್ದನ ಪೂಜಾರಿ

    ಮಂಗಳೂರು: ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು ಎಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಸರ್ಕಾರದ ವಿರುದ್ಧ ಸಮರ ಸಾರಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗೆ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಬೆಂಬಲ ಸೂಚಿಸಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ರಕ್ತಪಾತವಾಗುತ್ತಿದೆ. ಮಮತಾ ಬ್ಯಾನರ್ಜಿ ನಿನ್ನೆಯಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ನನಗೆ ಬದುಕಬೇಕೆಂಬ ಆಸೆ ಇಲ್ಲ. ರಾಜ್ಯದ ಜನರಿಗೋಸ್ಕರ ನಾನು ಜನರಿಗೋಸ್ಕರ ಸಾಯುತ್ತೇನೆ. ಮೋದಿಯವರು ನನ್ನ ಬಂಗಾಳದ ಜನರನ್ನು ಸಂಪೂರ್ಣವಾಗಿ ನಾಶ ಮಾಡಲು ಹೊರಟಿದ್ದಾರೆ. ಈ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದ್ದಾರೆ. ದೇಶದಲ್ಲಿ ಯಾರಿಗೂ ರಕ್ಷಣೆ ಸಿಗುತ್ತಿಲ್ಲ. ಪ್ರಧಾನಿ ಮೋದಿ ಈ ದೇಶಕ್ಕೆ ಶನಿಯಾಗಿದ್ದಾರೆ. ಇನ್ನಾದ್ರೂ ಮೋದಿಯವರು ಜನರ ಅಭಿಪ್ರಾಯಕ್ಕೆ ಮನ್ನಣೆ ಕೊಡಬೇಕು. ಸುಪ್ರೀಂ ಕೋರ್ಟ್ ನಲ್ಲಿ ಪ್ರಕರಣದ ತ್ವರಿತ ವಿಚಾರಣೆ ನಡೆಸಬೇಕೆಂದು ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸಿಬಿಐ Vs ಮಮತಾ: ಮಂಗಳವಾರಕ್ಕೆ ಅರ್ಜಿ ಮುಂದೂಡಿಕೆ: ಸುಪ್ರೀಂನಲ್ಲಿ ಇಂದು ಏನಾಯ್ತು?

    ಮಮತಾಗೆ ಬೆಂಬಲ ಸೂಚಿಸಿ ತಾನೂ ಕುದ್ರೋಳಿ ದೇವಸ್ಥಾನದಲ್ಲಿ ಉಪವಾಸ ಕೂರೋದಾಗಿ ಮೊದಲು ಹೇಳಿದ ಜನಾರ್ದನ ಪೂಜಾರಿ ನಂತರ ದಿಢೀರ್ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ನಾಳೆ ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಉಪವಾಸದ ನಿರ್ಧಾರ ಕೈಗೊಳ್ಳೋದಾಗಿ ಸ್ಪಷ್ಟಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv