Tag: ಜನ್ಮದಿನ

  • ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

    ಪೀಣ್ಯ ಫ್ಲೈಓವರ್ ಮೇಲೆ ಸರಣಿ ಅಪಘಾತ – ಟ್ರಾಫಿಕ್ ಜಾಮ್

    ಬೆಂಗಳೂರು: ಶಾಸಕರ ಜನ್ಮದಿನದ ಬ್ಯಾನರ್ ತೆರವುಗೊಳಿಸುವ ವೇಳೆ ಪೀಣ್ಯ ಫ್ಲೈಓವರ್ ಮೇಲೆ ಸರಣಿ ವಾಹನಗಳ ಅಪಘಾತವಾಗಿದೆ.

    ಬೆಂಗಳೂರಿನಿಂದ ತುಮಕೂರು ಕಡೆ ವಾಹನಗಳು ಹೋಗುವಂತಹ ಸಂದರ್ಭದಲ್ಲಿ ಶಾಸಕ ವಿಶ್ವನಾಥ್ ಹುಟ್ಟು ಹಬ್ಬಕ್ಕೆ ಹಾಕಿದ್ದ ಬ್ಯಾನರ್‍ನನ್ನು ಹೈವೇ ಪ್ಯಾಟ್ರೋಲಿಂಗ್ ಸಿಬ್ಬಂದಿ ತೆರವುಗೊಳಿಸುತ್ತಿದ್ದರು. ಆ ವಾಹನವನ್ನು ತಪ್ಪಿಸಲು ಹೋಗಿ ಕಾರೊಂದು ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ವಾಹನಗಳು ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಒಪ್ಪಿಗೆಯಿಲ್ಲದೆ ಮದುವೆಯಾಗಿದ್ದ ಅಳಿಯ, ಮಗಳನ್ನ ಕುಡುಗೋಲಿನಿಂದ ಕೊಚ್ಚಿ ಕೊಂದ ತಂದೆ 

    ಘಟನೆಯಲ್ಲಿ ಸುಮಾರು ಹತ್ತು ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿದ್ದ ಅಜ್ಜಿಗೆ ಗಂಭೀರ ಗಾಯವಾಗಿದೆ. ಪ್ರಸ್ತುತ ಸ್ಥಳಕ್ಕೆ ಭೇಟಿ ಕೊಟ್ಟ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೋದಿ ತಾಯಿಗೆ 100ರ ಸಂಭ್ರಮ – ಶುಭಕೋರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಧಾನಿ

    ಮೋದಿ ತಾಯಿಗೆ 100ರ ಸಂಭ್ರಮ – ಶುಭಕೋರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಪ್ರಧಾನಿ

    ಗಾಂಧೀನಗರ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್‌ ಮೋದಿ ಅವರು ಇಂದು 100ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

    ಶತಾಯುಷಿಯಾದ ತಾಯಿ ಹೀರಾಬೆನ್‌ ಅವರನ್ನು ಪ್ರಧಾನಿ ಮೋದಿ ಭೇಟಿಯಾದರು. ಗುಜರಾತ್‌ ರಾಜಧಾನಿ ಗಾಂಧೀನಗರದಲ್ಲಿರುವ ತಮ್ಮ ನಿವಾಸಕ್ಕೆ ಭೇಟಿ ನೀಡಿದ ಮೋದಿ, ತಾಯಿಯ ಹುಟ್ಟುಹಬ್ಬವನ್ನು ಆಚರಿಸಿದರು. ಇದನ್ನೂ ಓದಿ: 2023ರ ಚುನಾವಣೆಗೆ ಬಿಜೆಪಿ ಸಜ್ಜು- ಕೋಟೆನಾಡಿಗೆ ಇಂದು ಜೆ.ಪಿ. ನಡ್ಡಾ ಭೇಟಿ

    ತಮ್ಮ ತಾಯಿಗೆ ಸಿಹಿ ತಿನಿಸಿ ಜನ್ಮದಿನದ ಶುಭಾಶಯ ತಿಳಿಸಿದ ಮೋದಿ ನಂತರ ತಾಯಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

    ಜನ್ಮದಿನದ ಸಂಭ್ರಮದಲ್ಲಿರುವ ಹೀರಾಬೆನ್ ಮೋದಿ ಅವರಿಗೆ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯ ಪ್ರಾಪ್ತವಾಗಲಿ ಎಂದು ಹಾರೈಸಿ ಮೋದಿ ಅವರ ಹುಟ್ಟೂರು ವಡನಗರದಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

    Live Tv

  • ಪ್ರೇಮವಿವಾಹದ ವೇಳೆ ಅಣ್ಣನಂತೆ ಭುಜಕೊಟ್ಟರು – ಟೈಗರ್ ಪ್ರಭಾಕರ್ ಸ್ಮರಿಸಿದ್ರು ಜಗ್ಗೇಶ್

    ಪ್ರೇಮವಿವಾಹದ ವೇಳೆ ಅಣ್ಣನಂತೆ ಭುಜಕೊಟ್ಟರು – ಟೈಗರ್ ಪ್ರಭಾಕರ್ ಸ್ಮರಿಸಿದ್ರು ಜಗ್ಗೇಶ್

    ಬೆಂಗಳೂರು: ಇಂದು ದಿವಂಗತ ನಟ ಟೈಗರ್ ಪ್ರಭಾಕರ್ ಅವರ ಜನ್ಮದಿನ. ಈ ಹಿನ್ನೆಲೆಯಲ್ಲಿ ನವರಸನಾಯಕ ಜಗ್ಗೇಶ್ ಇಂದು ಅವರನ್ನು ಸ್ಮರಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್, ನಾವಿಬ್ಬರು ನಟಿಸಿದ ಚಿತ್ರ ಅರ್ಜುನ ಅಭಿಮನ್ಯು 1995 ಸಮಯದಲ್ಲಿ ಅಮ್ಮ ತೀರಿಕೊಂಡಳು! ಜಗವೆ ಶೂನ್ಯವಾಗಿ ದುಃಖಿಸುವಾಗ 2ಕೈ ನನ್ನ ತಬ್ಬಿ ಅಳುತ್ತಾ ರಾಜಣ್ಣೆ ನೀನು ನನ್ನಂತೆ ಅಮ್ಮನ ಕಳೆದುಕೊಂಡೆಯಾ ಎಂದಾಗ ನನ್ನ ದುಃಖದ ಕಟ್ಟೆಯೊಡೆದು ಹುಚ್ಚನಂತೆ ಅತ್ತುಬಿಟ್ಟೆ! ಅಂಥ ಕರುಣಾಮಯಿ ಪ್ರಭಣ್ಣ ನಿಮಗೆ ಹುಟ್ಟುಹಬ್ಬದ ಶುಭಾಶಯ! ನಿಮ್ಮ ಪ್ರೀತಿ ಅವಿಸ್ಮರಣೀಯ ಎಂದು ಬರೆದುಕೊಂಡಿದ್ದಾರೆ.

    ಇನ್ನೊಂದು ಟ್ವೀಟ್ ಮಾಡಿ, ಪ್ರಭಣ್ಣ ನನ್ನ ಸ್ನೇಹ ಆದದ್ದು 1987 ಚಿತ್ರ #ಅಗ್ನಿಪರ್ವ! ನನ್ನ ಪ್ರೇಮವಿವಾಹ ಆಗಿ ಯಾರ ಸಹಾಯ ಇಲ್ಲದೆ ಪರದಾಡಬೇಕಾದರೆ ಅಣ್ಣನಂತೆ ಭುಜಕೊಟ್ಟರು! ಅಲ್ಲಿಂದ ನನ್ನ ಬೆಳವಣಿಗೆ ನೋಡಿ ಆನಂದಿಸುತ್ತಿದ್ದರು! ಎಷ್ಟೋ ದಿನಗಳು ನಾವಿಬ್ಬರೇ ಗುಂಡುಪಾರ್ಟಿ ಸಹಪಾಟಿಗಳು! ಅವರ ಮರಣಯಾತ್ರೆವರೆಗೂ ಜೊತೆ ಇದ್ದೆ! ಅವರು ನನ್ನ ಕರೆಯುತ್ತಿದ್ದ ಶೈಲಿ ರಾಜಣ್ಣೆ ಅದ್ಭುತ ಎಂದು ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಟೈಗರ್ ಪ್ರಭಾಕರ್ ಅವರನ್ನು ನೆನಪಿಸಿಕೊಂಡರು.

    ಸ್ಯಾಂಡಲ್‍ವುಡ್, ಕಾಲಿವುಡ್, ಟಾಲಿವುಡ್, ಮಾಲಿವುಡ್ ಹಾಗೂ ಬಾಲಿವುಡ್ ಹೀಗೆ ಎಲ್ಲಾ ಭಾಷೆಗಳ ಸಿನಿಮಾಗಳಲ್ಲಿ ಟೈಗರ್ ಪ್ರಭಾಕರ್ ಮಿಂಚಿದ್ದರು. ಅವರು ನಮ್ಮನ್ನು ಅಗಲಿ ಎರಡು ದಶಕಗಳೇ ಉರುಳಿವೆ. ಆದರೂ ಸಿನಿಪ್ರಿಯರು, ಆಪ್ತರು ಹಾಗೂ ಅವರ ಅಭಿಮಾನಿಗಳ ಹೃದಯದಲ್ಲಿ ನಟ ಇಂದಿಗೂ ನೆಲೆಸಿದ್ದು, ಜನ್ಮದಿನದ ಹಿನ್ನೆಲೆಯಲ್ಲಿ ಎಲ್ಲರೂ ಅವರನ್ನು ನೆನಪಿಸಿಕೊಂಡಿದ್ದಾರೆ.

  • 3ನೇ ವಸಂತಕ್ಕೆ ಕಾಲಿಟ್ಟ ಡಿಕಿ – ಕೇಕ್ ಕತ್ತರಿಸಿದ ಪೊಲೀಸರು

    3ನೇ ವಸಂತಕ್ಕೆ ಕಾಲಿಟ್ಟ ಡಿಕಿ – ಕೇಕ್ ಕತ್ತರಿಸಿದ ಪೊಲೀಸರು

    ಲಕ್ನೋ: 2020ರಲ್ಲಿ ಭಾರತಕ್ಕೆ ಆಗಮಿಸಿದ ಡೋನಾಲ್ಡ್ ಟ್ರಂಪ್‍ಗೆ ಭದ್ರತಾ ತಂಡದಲ್ಲಿ ಭಾಗವಹಿಸಿದ್ದ ಸ್ನಿಫರ್ ಶ್ವಾನ ಡಿಕಿಯ ಜನ್ಮದಿನವನ್ನು ಶನಿವಾರ ಮುಜಾಫರ್‍ನಗರದ ಪೊಲೀಸರು ಆಚರಿಸಿದ್ದಾರೆ.

    3ನೇ ವಸಂತಕ್ಕೆ ಕಾಲಿಟ್ಟಿರುವ ಡಿಕಿಗೆ ಕೇಕ್ ಕಟ್ ಮಾಡಲು ಸುನೀಲ್ ಕುಮಾರ್ ಸಹಾಯ ಮಾಡಿದ್ದಾರೆ. ಬರ್ತ್‍ಡೇ ಕ್ಯಾಪ್ ಧರಿಸಿದ ಡಿಕಿ ಕೋರೆ ಹಲ್ಲುಗಳನ್ನು ಹೊಂದಿದ್ದು, ಗಂಭೀರವಾಗಿ ಕುಳಿತು ಎಲ್ಲರನ್ನು ನೋಡುತ್ತಿತ್ತು. ನಂತರ ಪೊಲೀಸರು ಕೇಕ್ ಕತ್ತರಿಸಿದರು.

    ಲ್ಯಾಬ್ರಡಾರ್ ರಿಟ್ರೈವರ್‍ಗೆ ಉಡುಗೊರೆಯಾಗಿ ಕೋಟ್ ಸಿಕ್ಕಿದೆ. ವಿಶೇಷವೆಂದರೆ ತನ್ನ ದಿನನಿತ್ಯದ ಊಟದ ಜೊತೆಗೆ ಹುಟ್ಟುಹಬ್ಬದಂದು ಡಿಕಿ ಮೊಟ್ಟೆ, ಮಾಂಸ, ಹಾಲು, ತರಕಾರಿ, ಬ್ರೆಡ್‍ನಂತೆ ಭರ್ಜರಿ ಊಟ ಸವಿಯಿತು.

    ಡಿಕಿಗೆ ಇಂಡೋ-ಟಿಬೆಟಿಯನ್ ಗಡಿ ಭಾಗದ ಪೊಲೀಸರು ಹರಿಯಾಣದ ಪಂಚಕುಲದಲ್ಲಿ ತರಬೇತಿ ನೀಡಿದ ಬಳಿಕ 2019ರ ಆಗಸ್ಟ್‍ನಲ್ಲಿ ಮುಜಫರ್‍ನಗರಕ್ಕೆ ಬಂದಿದೆ. ಡಿಕಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಮಾರುಕಟ್ಟೆ ಮತ್ತು ಇತರ ಪ್ರಮುಖ ಸ್ಥಳಗಳಲ್ಲಿನ ಸ್ಪೋಟಕಗಳ ಕಾರ್ಯಾಚರಣೆಯ ವೇಳೆ ಪಾಲ್ಗೊಳ್ಳುತ್ತದೆ.

  • ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ನಟ ವಿಜಯ್ ಸೇತುಪತಿ

    ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ ನಟ ವಿಜಯ್ ಸೇತುಪತಿ

    ಚೆನ್ನೈ: ಹುಟ್ಟುಹಬ್ಬದಂದು ಲಾಂಗ್ ಹಿಡಿದು ಕೇಕ್ ಕತ್ತರಿಸಿದ ಕಾಲಿವುಡ್ ನಟ ವಿಜಯ್ ಸೇತುಪತಿ ತನ್ನ ತಪ್ಪಿನ ಅರಿವಾಗಿ ಟ್ವೀಟ್ ಮಾಡುವ ಮೂಲಕವಾಗಿ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

    ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ವಿಜಯ್ ಸೇತುಪತಿಯವರು ಶೂಟಿಂಗ್ ಸೆಟ್‍ನಲ್ಲೇ ಬರ್ತ್ ಡೇ ಆಚರಿಸಿದ್ದರು. ಈ ವೇಳೆ ಲಾಂಗ್ ಹಿಡಿದು ಕೇಕ್ ಕಟ್ ಮಾಡಿದ್ದರು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.

    ವಿಜಯ್ ಕೇಕ್ ಕಟ್ ಮಾಡುತ್ತಿರುವ ಫೋಟೋವನ್ನು ನೋಡಿದ ನೆಟ್ಟಿಗರು ಆಕ್ರೋಶವನ್ನು ವ್ಯಕ್ತಪಡಿಸಿದ್ದರು. ನಾಯಕ ನಟನಾಗಿ ಹಲವರಿಗೆ ಮಾದರಿಯಾಗಿ ನಿಲ್ಲಬೇಕಿದ್ದ ನೀವು, ಈ ರೀತಿ ತಲ್ವಾರ್‍ನಲ್ಲಿ ಕೇಕ್ ಕತ್ತರಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಜನರು ಪ್ರಶ್ನೆ ಮಾಡಿದ್ದರು. ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ವಿರೋಧವನ್ನು ವ್ಯಕ್ತಪಡಿಸಿದ ಬೆನ್ನಲ್ಲೇ ವಿಜಯ್ ಸೇತುಪತಿಯವರು ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ.

    ನನ್ನ ಜನ್ಮ ದಿನದ ಶುಭಹಾರೈಸಿದ ಅಭಿಮಾನಿಗಳಿಗೆ ಧನ್ಯವಾದ. ಮೂರು ದಿನಗಳ ಹಿಂದೆ ನನ್ನ ಹುಟ್ಟುಹಬ್ಬದ ಆಚರಣೆಯಂದು ತೆಗೆದಿರುವ ಫೋಟೋಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ನಾನು ನಿರ್ದೇಶಕ ಪೊನ್‍ರಾಮ್ ಅವರ ಚಿತ್ರದಲ್ಲಿ ನಟಿಸಲಿದ್ದೇನೆ. ಅವರ ಸಿನಿಮಾದಲ್ಲಿ ಕತ್ತಿ ಪ್ರಮುಖ ಮಾತ್ರವನ್ನು ವಹಿಸುತ್ತದೆ. ಹೀಗಾಗಿ ಕೇಕ್ ಕತ್ತರಿಸಲು ಅದೇ ಕತ್ತಿಯನ್ನು ಬಳಕೆ ಮಾಡಿದ್ದೇನೆ. ನಾನು ಲಾಂಗ್ ಹಿಡಿದು ಕೇಕ್ ಕತ್ತರಿಸುವ ಮೂಲಕವಾಗಿ ಕೆಟ್ಟ ಸಂದೇಶವನ್ನು ನೀಡಿದಂತಾಗುತ್ತದೆ. ಮುಂದಿನ ದಿನಗಳಲ್ಲಿ ಹುಷಾರ್ ಆಗಿರುತ್ತೇನೆ. ನೋವುಂಟು ಮಾಡಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

  • ರಾಷ್ಟ್ರೀಯ ನಿರುದ್ಯೋಗ ದಿನದ ಹಾರ್ದಿಕ ಶುಭಾಶಯ – ಮೋದಿಗೆ ದಿನೇಶ್ ವಿಶ್

    ರಾಷ್ಟ್ರೀಯ ನಿರುದ್ಯೋಗ ದಿನದ ಹಾರ್ದಿಕ ಶುಭಾಶಯ – ಮೋದಿಗೆ ದಿನೇಶ್ ವಿಶ್

    – ಆಡಳಿತದ ನಿರುದ್ಯೋಗ ಪರ್ವ ಮುಂದುವರಿದಿದೆ ಅಂದ ಸಿದ್ದು

    ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರ 70ನೇ ವರ್ಷದ ಹುಟ್ಟುಹಬ್ಬವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಶುಭಹಾರೈಸುತ್ತಿದ್ದಾರೆ. ಈ ಮಧ್ಯೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ವಿಭಿನ್ನವಾಗಿ ವಿಶ್ ಮಾಡಿದ್ದಾರೆ. ಇನ್ನೊಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಡಳಿತದ ನಿರುದ್ಯೋಗ ಪರ್ವ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಗುಂಡೂರಾವ್, ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಪೊಳ್ಳು ಭರವಸೆ ನೀಡಿ, ತಮ್ಮ ಎಡಬಿಡಂಗಿ ಆಡಳಿತ ನೀತಿಯ ಮೂಲಕ ಕಳೆದ 6 ತಿಂಗಳಲ್ಲಿ 2.1 ಕೋಟಿ ಯುವಕರ ಉದ್ಯೋಗ ಕಸಿದು ಅವರನ್ನು ಬೀದಿಗೆ ಬರುವಂತೆ ಮಾಡಿದ ನರೇಂದ್ರ ಮೋದಿಯವರ ಜನ್ಮದಿನದ ಅರ್ಥಾತ್ ‘ರಾಷ್ಟ್ರೀಯ ನಿರುದ್ಯೋಗ ದಿನಾಚರಣೆ’ಯ ಹಾರ್ದಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದು ಬರೆದು ರಾಷ್ಟ್ರೀಯ ನಿರುದ್ಯೋಗ ದಿನವೆಂದು ಹ್ಯಾಶ್ ಟ್ಯಾಗ್ ಹಾಕಿದ್ದಾರೆ.

    ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು?, ದೇಶದ ಯುವಜನ ಕೇಳುತ್ತಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಇನ್ನು ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಜನ್ಮದಿನದ ಶುಭಾಶಯಗಳು. ಅವರು ಚುರುಕು ನಾಯಕತ್ವ, ದೃಢ ನಿರ್ಧಾರ, ನಿರ್ಣಾಯಕ ಕ್ರಮದಿಂದ ಭಾರತ ಸಾಕಷ್ಟು ಲಾಭ ಗಳಿಸಿದೆ. ಬಡವರು ಹಾಗೂ ನಿರ್ಗತಿಕರ ಸಬಲೀಕರಣಕ್ಕಾಗಿ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರ ನಾಯಕತ್ವದಲ್ಲಿ ರಾಷ್ಟ್ರಕ್ಕೆ ಅಪಾರ ಪ್ರಯೋಜನವಾಗಿದೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

  • ಪ್ರಧಾನಿ ಮೋದಿ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಲು ನಿರ್ಧಾರ

    ಪ್ರಧಾನಿ ಮೋದಿ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಲು ನಿರ್ಧಾರ

    ಹುಬ್ಬಳ್ಳಿ: ಸೇವಾ ಹೀ ಸಂಘಟನಾ ಎಂಬ ಪರಿಕಲ್ಪನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ವಿಭಿನ್ನವಾಗಿ ಆಚರಿಸಿಲು ರಾಜ್ಯ ಬಿಜೆಪಿ ಘಟಕ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಹೇಳಿದರು.

    ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಹೇಶ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಕೆ.ಪಿ.ನಡ್ಡಾರವರ ಕರೆಯ ಮೇರೆಗೆ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 02 ರವರೆಗೆ ಸೇವಾ ಸಪ್ತಾಹ, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಮಹಾತ್ಮಾ ಗಾಂಧಿ ಜಯಂತಿಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 17 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಪಕ್ಷದ ಎಲ್ಲಾ ಕಾರ್ಯಕರ್ತರು ಪ್ರತಿ ವರ್ಷದಂತೆ ಸೇವಾ ಸಪ್ತಾಹದ ಮೂಲಕ ವಿವಿಧ ರೀತಿಯ ಸೇವಾ ಚಟುವಟಿಕೆಗಳ ಮೂಲಕ ಆಚರಿಸಲಾಗುತ್ತಿದೆ ಎಂದರು.

    ರಾಷ್ಟ್ರೀಯ ಅಧ್ಯಕ್ಷ ನಡ್ಡಾರವರ ನಿರ್ದೇಶನದಂತೆ ಸೆಪ್ಟಂಬರ್ 14 ರಿಂದ ಸೆಪ್ಟೆಂಬರ್ 20 ರವರೆಗೆ ಪ್ರತಿ ಮಂಡಲಗಳಲ್ಲಿ 70 ದಿವ್ಯಾಂಗ ವ್ಯಕ್ತಿಗಳಿಗೆ ಕೃತಕ ಅಂಗ ಜೋಡಣಾ ಉಪಕರಣಗಳನ್ನು ನೀಡುವುದು. 70 ಬಡ ಪುರುಷರು ಮತ್ತು ಮಹಿಳೆಯರಿಗೆ ಉಚಿತ ಕನ್ನಡಕಗಳನ್ನು ನೀಡುವುದು. ಕೋವಿಡ್ 19 ನಿಯಮಗಳನ್ನು ಪಾಲಿಸಿ ಪ್ರತಿ ಜಿಲ್ಲೆಯ 70 ಆಸ್ಪತ್ರೆ ಮತ್ತು ಬಡ ಕಾಲೋನಿಗಳಲ್ಲಿ ಹಣ್ಣು ಹಂಪಲುಗಳನ್ನು ವಿತರಿಸುವುದು. ಸ್ಥಳೀಯ ಆವಶ್ಯಕತೆ ಅನುಗುಣವಾಗಿ ಆಸ್ಪತ್ರೆಯ ಮೂಲಕ ಕೋವಿಡ್-19 ರಿಂದ ಪೀಡಿತರಾದ 70 ವ್ಯಕ್ತಿಗಳಿಗೆ ಪ್ಲಾಸ್ಮಾ ದಾನ ಮಾಡುವುದು.

    ಯುವಮೋರ್ಚಾದ ವತಿಯಿಂದ ರಾಜ್ಯದಲ್ಲಿ 70 ರಕ್ತದಾನ ಶಿಬಿರಗಳನ್ನು ಮಾಡುವುದು. ಪ್ರತಿ ಜಿಲ್ಲೆಗಳಲ್ಲಿ ಕನಿಷ್ಟ 1 ರಕ್ತದಾನ ಶಿಬಿರ ಆಯೋಜಿಸುವುದು. ಪ್ರತಿ ಬೂತ್‍ನಲ್ಲಿ 70 ವೃಕ್ಷಾರೋಹಣ ಕಾರ್ಯಕ್ರಮ ಮತ್ತು ಪರಿಸರ ಸಂರಕ್ಷಣೆಯ ಸಂಕಲ್ಪ ಕಾರ್ಯಕ್ರಮ. ಪ್ರತಿ ಜಿಲ್ಲೆಗಳ 70 ಹಳ್ಳಿಗಳಲ್ಲಿ ಸ್ವಚ್ಛತಾ ಅಭಿಯಾನವನ್ನು ನಡೆಸುವುದು. ಪ್ಲಾಸ್ಟಿಕ್ ನಿಷೇಧ ಕುರಿತು ಜನಜಾಗೃತಿ, ಪ್ರತಿ ಜಿಲ್ಲಾ ಕೇಂದ್ರದಲ್ಲಿ 70 ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸುವುದು ಸೇರಿದಂತೆ ಮುಂತಾದ ಸೇವಾ ಸಪ್ತಾಹ ಕಾರ್ಯಕ್ರಮ ನಡೆಸಲಾಗುವುದು ಎಂದರು.

  • ಜನ್ಮದಿನದಂದು ದಿ.ಅನಂತ್ ಕುಮಾರ್‌ರನ್ನು ಸ್ಮರಿಸಿಕೊಂಡ ಬಿಎಸ್‍ವೈ

    ಜನ್ಮದಿನದಂದು ದಿ.ಅನಂತ್ ಕುಮಾರ್‌ರನ್ನು ಸ್ಮರಿಸಿಕೊಂಡ ಬಿಎಸ್‍ವೈ

    ಬೆಂಗಳೂರು: ರಾಜ್ಯದಲ್ಲಿ ಪಕ್ಷ ಕಟ್ಟಲು ಶ್ರಮಿಸಿದ್ದ ಮಾಜಿ ಕೇಂದ್ರ ಸಚಿವ ದಿವಂಗತ ಅನಂತ್ ಕುಮಾರ್ ಅವರ ಜನ್ಮದಿನವಾಗಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮರಿಸಿದ್ದಾರೆ.

    ಟ್ವೀಟ್ ಮಾಡುವ ಮೂಲಕ ಸ್ಮರಣೆ ಮಾಡಿದ ಸಿಎಂ, ಇಂದು ನನ್ನ ಆತ್ಮೀಯ ಮಿತ್ರ, ದಶಕಗಳ ರಾಜಕೀಯ ಜೀವನದ ಒಡನಾಡಿ, ಸಾರ್ವಜನಿಕ ಜೀವನದಲ್ಲಿ ಅಚ್ಚಳಿಯದ ನೆನಪು, ಸಾಧನೆ, ಸಾರ್ಥಕತೆಗಳನ್ನು ಬಿಟ್ಟುಹೋಗಿರುವ ಹಿರಿಯ ನಾಯಕ ಅನಂತಕುಮಾರ್ ಅವರ ಜನ್ಮದಿನ. ಲಕ್ಷಾಂತರ ಕಾರ್ಯಕರ್ತರ ಪಾಲಿಗೆ ಸದಾ ಸ್ಫೂರ್ತಿಯಾಗಿರುವ ಅನಂತಕುಮಾರ್, ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ಮತ್ತು ಸಂಘಟನೆಗೆ ನೀಡಿದ ಕೊಡುಗೆ ಅನನ್ಯ ಎಂದು ಬರೆದುಕೊಂಡಿದ್ದಾರೆ.

    ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅವರು 2018ರ ನವೆಂಬರ್ 12 ರಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು. ಅನಂತ್ ಕುಮಾರ್ ನಿಧನಕ್ಕೆ ಇಡೀ ದೇಶವೇ ಕಂಬನಿ ಮಿಡಿದಿತ್ತು, ರಾಷ್ಟ್ರ ಹಾಗೂ ರಾಜ್ಯದ ಹಿರಿಯ ನಾಯಕರು ಅವರ ಆತ್ಮಕ್ಕೆ ಶಾಂತಿ ಕೋರಿದ್ದರು.

  • 78ನೇ ವಸಂತಕ್ಕೆ ಬಿಎಸ್‍ವೈ ಎಂಟ್ರಿ- ಜನ್ಮದಿನದಂದು ಸಿಎಂ ದಿನಚರಿ ಹೀಗಿದೆ

    78ನೇ ವಸಂತಕ್ಕೆ ಬಿಎಸ್‍ವೈ ಎಂಟ್ರಿ- ಜನ್ಮದಿನದಂದು ಸಿಎಂ ದಿನಚರಿ ಹೀಗಿದೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ 78ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ನಾಳೆ ಇಡೀ ದಿನ ಬ್ಯುಸಿ ಶೆಡ್ಯೂಲ್ ಹಾಕಿಕೊಂಡಿದ್ದಾರೆ. ಸಿಎಂ ಯಡಿಯೂರಪ್ಪ ತಮ್ಮ ಜನ್ಮದಿವಾದ ಫೆ.27 ರಂದು ಇಡೀ ದಿನ ವಿವಿಧ ಕಾರ್ಯಕ್ರಮಗಳಲ್ಲಿ ಬ್ಯುಸಿ ಇರಲಿದ್ದಾರೆ.

    ಸಿಎಂ ಯಡಿಯೂರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಮನೆ ಮೈದಾನದ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ನಡೆಯಲಿರುವ ಅಭಿನಂದನಾ ಸಮಾರಂಭ ನಾಳೆ ಸಂಜೆ 6ಕ್ಕೆ ಆರಂಭವಾಗಲಿದೆ. ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಸಿಎಂ ಎಸ್.ಎಂ.ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು, ಸಂಸದರು, ರಾಜ್ಯಸಭೆ ಸದಸ್ಯರು, ರಾಜ್ಯದ ಸಚಿವರು, ಶಾಸಕರು, ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಕುರಿತ ಅಭಿನಂದನಾ ಗ್ರಂಥದ ಲೋಕಾರ್ಪಣೆ ಆಗಲಿದೆ.

    ಇದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಕಾವೇರಿ ನಿವಾಸದಲ್ಲಿ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಿದ್ದಾರೆ. ಇದರ ಜೊತೆ ಗೃಹ ಪ್ರವೇಶ ಪೂಜೆಯನ್ನೂ ನಾಳೆಯೇ ಇಟ್ಟುಕೊಂಡಿದ್ದಾರೆ. ಕಾವೇರಿಯಲ್ಲಿ ಬೆಳಗ್ಗೆಯಿಂದಲೇ ನಡೆಯಲಿರುವ ಪೂಜಾ ಕೈಂಕರ್ಯಗಳಲ್ಲಿ ಯಡಿಯೂರಪ್ಪ ಅವರು ಕುಟುಂಬದ ಸದಸ್ಯರೂ ಭಾಗವಹಿಸಲಿದ್ದಾರೆ.

    ನಂತರ ಶಿವಮೊಗ್ಗ- ಚೆನ್ನೈ ಮಾರ್ಗದ ರೈಲು ಸಂಚಾರಕ್ಕೆ ಮುಖ್ಯಮಂತ್ರಿಗಳು ಚಾಲನೆ ಕೊಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರೈಲು ಸಂಚಾರಕ್ಕೆ ಸಿಎಂ ಯಡಿಯೂರಪ್ಪ ಚಾಲನೆ ಕೊಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರದ ರಾಜ್ಯ ರೈಲ್ವೆ ಖಾತೆಯ ಸಚಿವ ಸುರೇಶ್ ಅಂಗಡಿ ಕೂಡ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಸಿಎಂ ಯಡಿಯೂರಪ್ಪ ಅರಮನೆ ಮೈದಾನಕ್ಕೆ ತೆರಳಿದ್ದಾರೆ.

    ಟ್ವೀಟ್ ಮೂಲಕ ಸಿಎಂ ಮನವಿ:
    ನಾಳೆ ತಮ್ಮ ಜನ್ಮದಿನ ಹಿನ್ನೆಲೆ ಸಿಎಂ ಟ್ವೀಟ್ ಮೂಲಕ ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು, ಆಪ್ತರಿಗೆ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ನಾಳೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದು ಎಂದು ತಿಳಿಸಿದ್ದಾರೆ.

    ನಾಡಿನ ಸಮಸ್ತ ಜನತೆ, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳಲ್ಲಿ ವಿನಯ ಪೂರ್ವಕವಾಗಿ ಈ ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮಲ್ಲೆರ ಸೇವೆ ಮಾಡುವ ಸ್ಥಾನದ ಸೌಭಾಗ್ಯವನ್ನು ಪಡೆದಿದ್ದೇನೆ. ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ, ವಿನೀತನಾಗಿದ್ದೇನೆ. ಹಾಗಾಗಿ ನಾಳೆ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಕೂಡ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ ಎಂದು ಸಿಎಂ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

  • 101ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಅಜ್ಜಿ

    101ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ಅಜ್ಜಿ

    ಚಿಕ್ಕಬಳ್ಳಾಪುರ: ಮೊಮ್ಮಕ್ಕಳು, ಮರಿಮೊಮ್ಮಕ್ಕಳ ಜೊತೆ ಅಜ್ಜಿಯೊಬ್ಬರು 101ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡು ಸಂಭ್ರಮಿಸಿದ್ದಾರೆ.

    ಮಕ್ಕಳು ಮೊಮ್ಮಕ್ಕಳು ಮರಿಮೊಮ್ಮಕ್ಕಳು ಸೇರಿದಂತೆ ನೂರಾರು ಜನರಿರುವ ತನ್ನ ಕುಡಿಯನ್ನು ನೋಡುವ ಅದೃಷ್ಟ ಅದು ಎಷ್ಟು ಜನಕ್ಕೆ ಇರುತ್ತೋ ಇಲ್ಲವೊ ಗೊತ್ತಿಲ್ಲ. ಆದರೆ ಚಿಕ್ಕಬಳ್ಳಾಪುರ ನಗರದ ಗಂಗಮ್ಮಮಿದ್ದೆ ಬಡಾವಣೆಯಲ್ಲಿ 101 ವಯಸ್ಸಿನ ಮುನಿಯಮ್ಮ ಅವರು ಆರೋಗ್ಯವಾಗಿದ್ದಾರೆ. ಕಣ್ಣು, ಕಿವಿ ಅಂಗಾಗಗಳು ಚೆನ್ನಾಗಿದ್ದು ಈಗಿನ ಯುವಕ ಯುವತಿಯರೇ ನಾಚುವ ಹಾಗೆ ಆರೋಗ್ಯವನ್ನು ಕಾಪಾಡಿಕೊಂಡಿದ್ದಾರೆ.

    ಅಜ್ಜಿ ಮುನಿಯಮ್ಮ 101ನೇ ವರ್ಷಕ್ಕೆ ಕಾಲಿಟ್ಟಿದ್ದು, ಮಕ್ಕಳು ಮೊಮ್ಮಕ್ಕಳು ಮರಿಮಕ್ಕಳು ಒಂದೆಡೆ ಸೇರಿ ಶತಾಯುಷಿ ಸರಳವಾಗಿ ಹುಟ್ಟುಹಬ್ಬ ಆಚರಿಸಿ ಭರ್ಜರಿ ಬಾಟೂಟ ಹಾಕಿಸಿದ್ದಾರೆ. ಮುನಿಯಮ್ಮ ಅವರಿಗೆ ನಾಲ್ಕು ಜನ ಗಂಡು ಮಕ್ಕಳಿದ್ದು, ಅವರಿಗೆ ತಲಾ ನಾಲ್ಕು ಜನ ಮಕ್ಕಳು, 16 ಜನ ಮೊಮ್ಮಕ್ಕಳು, 20ಕ್ಕೂ ಹೆಚ್ಚು ಮರಿ ಮೊಮ್ಮಕ್ಕಳಿದ್ದಾರೆ. ಅವರಲ್ಲಿ ಬಹುತೇಕ ಎಲ್ಲರೂ ಈಗ ಅಜ್ಜಿಯ ಹುಟ್ಟು ಹಬ್ಬಕ್ಕೆ ಆಗಮಿಸಿ, ತಮ್ಮ ಅಜ್ಜಿ ಇನ್ನೂ ನೂರು ಕಾಲ ಚೆನ್ನಾಗಿರಲಿ ಅಂತ ಶುಭ ಹಾರೈಸಿದ್ದಾರೆ.

    ಈಗಿನ ಕಾಲದ ಯುವ ಜನತೆ ಮೂವತ್ತು ಮೂವ್ವತೈದು ವರ್ಷ ಆಗುತ್ತಿದ್ದಂತೆ ಕಾಯಿಲೆಗೆ ತುತ್ತಾಗುತ್ತಾರೆ. ಮುನಿಯಮ್ಮ ಅವರು ಯಾವುದೇ ಕಾಯಿಲೆ ತುತ್ತಾಗದೆ, ಆರೋಗ್ಯವನ್ನು ಚೆನ್ನಾಗಿ ಕಾಪಾಡಿಕೊಂಡು ಬಂದಿದ್ದಾರೆ.