Tag: ಜಪಾನ್ ಪ್ರಧಾನಿ

  • ರಾಜೀನಾಮೆ ಘೋಷಿಸಿದ ಜಪಾನ್‌ ಪ್ರಧಾನಿ ಶಿಗೇರು ಇಶಿಬಾ

    ರಾಜೀನಾಮೆ ಘೋಷಿಸಿದ ಜಪಾನ್‌ ಪ್ರಧಾನಿ ಶಿಗೇರು ಇಶಿಬಾ

    ಟೊಕಿಯೊ: ಜಪಾನ್‌ ಪ್ರಧಾನಿ ಶಿಗೇರು ಇಶಿಬಾ (Shigeru Ishiba) ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿದ್ದಾರೆ. ಅಧಿಕಾರಕ್ಕೇರಿ ಒಂದು ವರ್ಷ ಅವಧಿ ಪೂರೈಸುವುದಕ್ಕಿಂತ ಮೊದಲೇ ಸಂಸತ್ತಿನ ಉಭಯ ಸದನಗಳಲ್ಲಿ ಬಹುಮತ ಕಳೆದುಕೊಂಡು ರಾಜೀನಾಮೆ ಘೋಷಿಸಿದ್ದಾರೆ.

    ವಿಶ್ವದ 4ನೇ ಅತೀ ದೊಡ್ಡ ಆರ್ಥಿಕತೆಯಾಗಿರುವ ಜಪಾನ್‌ನಲ್ಲಿ (Japan) ಆಹಾರ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾರು ಉದ್ಯಮದ ಮೇಲೆ ಅಮೆರಿಕ ಹೇರಿದ ಸುಂಕವು ಆರ್ಥಿಕತೆಗೆ ದೊಡ್ಡ ಹೊಡೆತ ನೀಡಿದೆ. ಈ ನಡುವೆಯೆ ಪ್ರಧಾನಿ ಶಿಗೇರು ರಾಜೀನಾಮೆ ಘೋಷಿಸಿದ್ದಾರೆ. ಈಗ ವಿಶ್ವದ 4ನೇ ಆರ್ಥಿಕತೆಯಾದ ಜಪಾನ್‌ ಅನ್ನು ಯಾರು ಮುನ್ನಡೆಸುತ್ತಾರೆ ಎಂಬುದು ಕುತೂಹಲ ಹುಟ್ಟಿಕೊಂಡಿದೆ. ಇದನ್ನೂ ಓದಿ: ಮೋದಿ ನನ್ನ ಒಳ್ಳೆಯ ಸ್ನೇಹಿತ: ಮತ್ತೆ ಯೂಟರ್ನ್‌ ಹೊಡೆದ ಟ್ರಂಪ್‌

    ಸದ್ಯ ಅಮೆರಿಕದ ಸುಂಕದ ಕ್ರಮಗಳ ಕುರಿತ ಮಾತುಕತೆಗಳು ಒಂದು ತೀರ್ಮಾನಕ್ಕೆ ಬಂದಿವೆ. ಇದು ಸೂಕ್ತ ಸಮಯ ಎಂದು ನಾನು ಭಾವಿಸುತ್ತೇನೆ. ನಾನು ಪಕ್ಕಕ್ಕೆ ಸರಿದು ಮುಂದಿನ ತಲೆಮಾರಿಗೆ ದಾರಿ ಮಾಡಿಕೊಡಲು ತೀರ್ಮಾನಿಸಿದ್ದೇನೆ ಎಂದು ಇಶಿಬಾ ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ಮತ್ತೊಮ್ಮೆ ಇಂಡೋ-ಚೀನಾ ಭಾಯಿ ಭಾಯಿ- ಭಾರತಕ್ಕೆ ಚೀನಾ ಯಾಕೆ ಬೇಕು?

    ಇಶಿಬಾ ರಾಜೀನಾಮೆ ಏಕೆ?
    ದೀರ್ಘಕಾಲದ ವರೆಗೆ ಜಪಾನ್‌ ಆಳಿದ ಲಿಬರಲ್ ಡೆಮಾಕ್ರಟಿಕ್ ಪಾರ್ಟಿ (LDP)ಯಿಂದ ಇಶಿಬಾ ಪ್ರಧಾನಿ ಹುದ್ದೆಗೇರಿದ್ದರು. ಈಗ ಸಂಸತ್ತಿನ ಎರಡೂ ಸದನಗಳಲ್ಲಿ ಬಹುಮತ ಕಳೆದುಕೊಂಡಿದ್ದಾರೆ. ಕಳೆದ ಒಂದು ತಿಂಗಳಿನಿಂದಲೂ ತಮ್ಮದೇ ಪಕ್ಷದ ಕೆಲ ಬಲಪಂಥೀಯ ನಾಯಕರು ಇಶಿಬಾ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಯುವಂತೆ ಒತ್ತಾಯಿಸುತ್ತಿದ್ದರು. ಆದ್ರೆ ಇಶಿಬಾ ಈ ಒತ್ತಾಯವನ್ನ ವಿರೋಧಿಸುತ್ತಲೇ ಬಂದಿದ್ದರು. ಆ ಬಳಿಕ ಹೊಸ ನಾಯಕನನ್ನ ಮತ ಚಲಾವಣೆ ಮೂಲಕ ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಇದಕ್ಕೆ ಇನ್ನೂ ಒಂದು ದಿನ ಬಾಕಿಯಿರುವಾಗಲೇ ಇಶಿಬಾ ರಾಜೀನಾಮೆ ಘೋಷಿಸಿದ್ದಾರೆ. ಪಕ್ಷ ವಿಭಜನೆ ತಪ್ಪಿಸಲು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

  • ದೆಹಲಿ ಬಿಟ್ಟು ಗುಜರಾತ್ ನಲ್ಲಿ ಜಪಾನ್ ಪ್ರಧಾನಿಗೆ ರಾಜಾತಿಥ್ಯ ನೀಡಿದ್ದು ಯಾಕೆ: ಕಾಂಗ್ರೆಸ್ ಪ್ರಶ್ನೆ

    ದೆಹಲಿ ಬಿಟ್ಟು ಗುಜರಾತ್ ನಲ್ಲಿ ಜಪಾನ್ ಪ್ರಧಾನಿಗೆ ರಾಜಾತಿಥ್ಯ ನೀಡಿದ್ದು ಯಾಕೆ: ಕಾಂಗ್ರೆಸ್ ಪ್ರಶ್ನೆ

    ನವದೆಹಲಿ: ಜಪಾನ್ ಪ್ರಧಾನಿ ಅಬೆ ಜೊತೆಗಿನ ಎರಡು ದಿನಗಳ ಭಾರತದ ಭೇಟಿಯನ್ನು ಮೋದಿ ಸರ್ಕಾರವು ತನ್ನ ರಾಜಕೀಯ ಲಾಭವನ್ನು ಹೆಚ್ಚಿಸಿಕೊಳ್ಳಲು ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಕಾಂಗ್ರೆಸ್ ಪಕ್ಷದ ಮುಖಂಡ ಮನೀಷ್ ತಿವಾರಿ ಪ್ರತಿಕ್ರಿಯಿಸಿ, ಯಾವುದೇ ಪ್ರತಿಷ್ಟಿತ ದೇಶದ ಪ್ರಧಾನಿಗಳು ದೇಶಕ್ಕೆ ಆಗಮಿಸಿದರೆ ಅವರಿಗೆ ದೆಹಲಿಯಲ್ಲಿ ಅತಿಥ್ಯವನ್ನು ನೀಡಲಾಗುತ್ತದೆ. ಆದರೆ ಈ ಬಾರಿ ಗುಜರಾತ್ ನಲ್ಲಿ ರಾಜಾತಿಥ್ಯ ನೀಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

    ಜಪಾನ್ ಪ್ರಧಾನಿ ಅವರು ಗುಜರಾತ್‍ಗೆ ಭೇಟಿ ನೀಡಿದ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಅದರೆ ಮುಂದಿನ ದಿನಗಳಲ್ಲಿ ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಿತ ದೇಶದ ಪ್ರಧಾನಿಗಳ ಜೊತೆ ರೋಡ್ ಶೋ ನಡೆಸುವ ಅಗತ್ಯತೆಯನ್ನು ಪ್ರಶ್ನಿಸುತ್ತಿದ್ದೇವೆ ಎಂದರು.

    ಬಿಜೆಪಿಯ ಈ ನಡೆಯು ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭವನ್ನು ಪಡೆಯುವ ಉದ್ದೇಶವನ್ನು ಹೊಂದಿರುವುದಿಲ್ಲ ಎಂದು ಆಶಿಸುತ್ತೇವೆ. ಜಪಾನ್ ಹಾಗೂ ಭಾರತದ ನಡುವೆ ಹಲವು ವರ್ಷಗಳಿಂದಲೂ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದು, ಹಲವು ಬಾರಿ ಜಪಾನ್ ನಮಗೇ ಸಹಾಯದ ಹಸ್ತವನ್ನು ಚಾಚಿದೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವೇಳೆಯಲ್ಲೂ ಉತ್ತಮ ಸಂಬಂಧಗಳನ್ನು ಏರ್ಪಡಿಸಲಾಗಿತ್ತು ಎಂದು ಮನೀಷ್ ತಿವಾರಿ ತಿಳಿಸಿದರು.

    ರೋಹಿಂಗ್ಯಾ ಮುಸ್ಲಿಮ್ ನಿರಾಶ್ರಿತರ ವಿಚಾರದ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಟೀಕೆ ಭಾರತ ಒಳಗಾಗಬೇಕಾಯಿತು. ಸರ್ಕಾರದ ಈ ನಡೆಯು ಭಾರತೀಯ ಸಂಸ್ಕೃತಿಗೆ ಸಂಪೂರ್ಣ ವಿರುದ್ಧವಾಗಿದ್ದು. ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧಗಳನ್ನು ಏರ್ಪಡಿಸಲು ಈ ಕ್ರಮಗಳು ಋಣಾತ್ಮಾಕ ಪರಿಣಾಮಗಳನ್ನು ಬೀರುತ್ತದೆ. ಭಾರತವು ಎಂದು ಈ ರೀತಿಯ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದರು.

    ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ತಮ್ಮ ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು, ಭಾರತ-ಜಪಾನ್ ಸಹಕಾರದ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಅಹಮದಾಬಾದ್ ನಲ್ಲಿ ಶಂಕುಸ್ಥಾಪನೆ ಮಾಡಿದರು.