Tag: ಜಪಾನ್

  • ಭಾರತದ ಜೊತೆ ಉತ್ತಮ ಸಂಬಂಧ – ಅಬೆಗೆ ಸಿಕ್ಕಿತ್ತು ಪದ್ಮ ವಿಭೂಷಣ ಗೌರವ

    ಭಾರತದ ಜೊತೆ ಉತ್ತಮ ಸಂಬಂಧ – ಅಬೆಗೆ ಸಿಕ್ಕಿತ್ತು ಪದ್ಮ ವಿಭೂಷಣ ಗೌರವ

    ನವದೆಹಲಿ: ಜಪಾನಿನ ಮಾಜಿ ಪ್ರಧಾನಿ ಶಿಂಜೋ ಅಬೆ ಭಾರತದ ಜೊತೆ ಉತ್ತಮ ಸಂಬಂಧ ಹೊದಿದ್ದರು. ಕಳೆದ ವರ್ಷ ಅಬೆ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿಯನ್ನು ಭಾರತ ಸರ್ಕಾರ ಘೋಷಿಸಿತ್ತು.

    ಲಿಬರಲ್ ಡೆಮಾಕ್ರಾಟಿಕ್ ಪಕ್ಷದ ಅಧ್ಯಕ್ಷರಾಗಿದ್ದ ಅಬೆ ನಾಲ್ಕು ಬಾರಿ ಸುಧೀರ್ಘ ಕಾಲ ಪ್ರಧಾನಿಯಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ರಾಜೀನಾಮೆ ನೀಡಿದ್ದರು. ಆರೋಗ್ಯ ಚೇತರಿಕೆಯಾದ ಬೆನ್ನಲ್ಲೇ ಮತ್ತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದರು.

    ಭಾರತದ ಜೊತೆಗೆ ಉತ್ತಮ ಸಂಬಂಧ ಹೊಂದಿದ್ದಅವರು ಜಪಾನ್‌ನಿಂದ ಭಾರತಕ್ಕೆ ಅತಿ ಹೆಚ್ಚು ಬಾರಿ ಭೇಟಿ ನೀಡಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.

    2006-07 ಅವಧಿಯಲ್ಲಿ ಮೊದಲ ಬಾರಿ ಭಾರತಕ್ಕೆ ಬಂದಿದ್ದ ಅವರು ಸಂಸತ್ ಉದ್ದೇಶಿಸಿ ಮಾತನಾಡಿದ್ದರು. ಎರಡನೇ ಬಾರಿ ಪ್ರಧಾನಿಯಾದಾಗ ಮೂರು ಬಾರಿ ಭೇಟಿ ನೀಡಿದ್ದರು. 2014 ಜನವರಿ, ಡಿಸೆಂಬರ್ 2015, ಸೆಪ್ಟೆಂಬರ್ 2017 ರಲ್ಲಿ ಭಾರತಕ್ಕೆ ಭೇಟಿ ನೀಡಿದ್ದರು.

    2014 ರಲ್ಲಿ ಭಾರತದ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದರು. ಹೀಗೆ ಅತಿಥಿಯಾದ ಜಪಾನ್ ಮೊದಲ ಪ್ರಧಾನಿ ಇವರಾಗಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಅತ್ಯುತ್ತಮ ಒಡನಾಟ ಹೊಂದಿದ್ದರು. 2001 ರಿಂದ ಭಾರತ ಜಪಾನ್ ಗೆಳೆತನ ಶುರುವಾಗಿದ್ದು 2012 ರಿಂದ ಈ ಸಂಬಂಧ ಗಟ್ಟಿ ಮಾಡುವಲ್ಲಿ ಅಬೆ ಪಾತ್ರ ದೊಡ್ಡದು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಗುಜರಾತ್ ಸಿಎಂ ಆದ ಕಾಲದಿಂದ ಅಬೆ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ನಂಟು ಹೊಂದಿದ್ದರು. ಮೋದಿ ಪ್ರಧಾನಿಯಾದ ಬಳಿಕ ಹಲವು ಒಪ್ಪಂದಗಳು ಭಾರತ ಜಪಾನ್ ನಡುವೆ ನಡೆದಿದ್ದವು. ಬುಲೆಟ್‌ ರೈಲು ನಿರ್ಮಾಣ ಯೋಜನೆಗೆ ಮೋದಿ ಮತ್ತು ಅಬೆ ಸೇರಿ ಅಹಮದಾಬಾದ್‌ನಲ್ಲಿ ಶಂಕುಸ್ಥಾಪನೆ ನೆರವೇರಿಸಿದ್ದರು. ಅಷ್ಟೇ ಅಲ್ಲದೇ ಅಹಮದಾಬಾದ್‌ನಲ್ಲಿ ನಾಯಕರು ರೋಡ್‌ ಶೋ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಅಬೆಯೊಂದಿಗಿನ ಹಳೆ ಕ್ಷಣ ನೆನೆದ ಮೋದಿ – ಜುಲೈ 9ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ

    ಅಬೆಯೊಂದಿಗಿನ ಹಳೆ ಕ್ಷಣ ನೆನೆದ ಮೋದಿ – ಜುಲೈ 9ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ

    ನವದೆಹಲಿ: ದುಷ್ಕರ್ಮಿಯೊಬ್ಬನ ಗುಂಡೇಟಿಗೆ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆ(62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ತಮ್ಮ ಆತ್ಮೀಯನ ಅಗಲಿಕೆಯಿಂದ ಕಂಬನಿ ಮಿಡಿದಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಆಳವಾದ ಗೌರವದ ಸಂಕೇತವಾಗಿ ಜುಲೈ 9ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆ ನಡೆಸಲು ಸೂಚಿಸಿದ್ದಾರೆ.

    ನರೇಂದ್ರ ಮೋದಿ ತಮ್ಮ ಗೆಳೆಯ ಶಿಂಜೋ ಅಬೆಯವರ ಒಡನಾಟದ ನೆನಪನ್ನು ಭಾವುಕರಾಗಿ ತಿಳಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮೋದಿ, ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ಅವರ ದುರಂತ ನಿಧನದಿಂದ ನಾನು ಪದಗಳಲ್ಲಿ ಹೇಳಲಾಗದಷ್ಟು ಆಘಾತ ಮತ್ತು ದುಃಖಿತನಾಗಿದ್ದೇನೆ. ಅವರು ಅತ್ಯುನ್ನತ ಜಾಗತಿಕ ರಾಜಕಾರಣಿ, ಅತ್ಯುತ್ತಮ ನಾಯಕ ಹಾಗೂ ಗಮನಾರ್ಹ ಆಡಳಿತಗಾರರಾಗಿದ್ದರು. ಜಪಾನ್ ಹಾಗೂ ಜಗತ್ತನ್ನು ಉತ್ತಮವಾಗಿಸಲು ಅವರು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಅಬೆ ಅವರೊಂದಿಗಿನ ನನ್ನ ಒಡನಾಟ ಹಲವು ವರ್ಷಗಳ ಹಿಂದಿನದು. ನಾನು ಗುಜರಾತ್ ಸಿಎಂ ಆಗಿದ್ದಾಗ ಅವರನ್ನು ಪರಿಚಯ ಮಾಡಿಕೊಂಡಿದ್ದೆ. ನಾನು ಪ್ರಧಾನಿಯಾದ ಬಳಿಕವೂ ನಮ್ಮ ಸ್ನೇಹ ಮುಂದುವರಿಯಿತು. ಆರ್ಥಿಕತೆ ಮತ್ತು ಜಾಗತಿಕ ವ್ಯವಹಾರಗಳ ಬಗ್ಗೆ ಅವರ ತೀಕ್ಷ್ಣವಾದ ಒಳನೋಟ ಯಾವಾಗಲೂ ನನ್ನ ಮೇಲೆ ಆಳವಾದ ಪ್ರಭಾವ ಬೀರಿತ್ತು ಎಂದರು.

    ನನ್ನ ಇತ್ತೀಚಿನ ಜಪಾನ್ ಪ್ರವಾಸದ ಸಂದರ್ಭದಲ್ಲಿ ಅಬೆ ಅವರನ್ನು ಮತ್ತೊಮ್ಮೆ ಭೇಟಿ ಮಾಡಲು ಹಾಗೂ ಅನೇಕ ವಿಷಯಗಳನ್ನು ಚರ್ಚಿಸಲು ನನಗೆ ಅವಕಾಶ ಸಿಕ್ಕಿತು. ಅವರು ಎಂದಿನಂತೆ ಬುದ್ಧಿವಂತ ಮತ್ತು ಒಳನೋಟವುಳ್ಳವರಾಗಿದ್ದರು. ಆದರೆ ಅದು ನಮ್ಮ ಕೊನೆಯ ಸಭೆ ಎಂದು ನನಗೆ ತಿಳಿದಿರಲಿಲ್ಲ ಎಂದು ಆಘಾತ ವ್ಯಕ್ತಪಡಿಸಿದರು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಅಬೆ ಅವರು ಭಾರತ-ಜಪಾನ್ ಸಂಬಂಧಗಳನ್ನು ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯ ಮಟ್ಟಕ್ಕೆ ಏರಿಸಲು ಅಪಾರ ಕೊಡುಗೆ ನೀಡಿದ್ದಾರೆ. ಇಂದು, ಇಡೀ ಭಾರತ ಜಪಾನ್‌ನೊಂದಿಗೆ ದುಃಖಿಸುತ್ತಿದೆ. ಈ ಕಷ್ಟದ ಕ್ಷಣದಲ್ಲಿ ನಾವು ಜಪಾನಿನ ಸಹೋದರ-ಸಹೋದರಿಯರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

    ಮಾಜಿ ಪ್ರಧಾನಿ ಅಬೆ ಶಿಂಜೋ ಅವರಿಗೆ ನಮ್ಮ ಆಳವಾದ ಗೌರವದ ಸಂಕೇತವಾಗಿ, ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು – ಆಸ್ಪತ್ರೆಯಲ್ಲಿ ನಿಧನ

    ಟೋಕಿಯೋ: ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆ (62) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಪಾನ್‌ ಸರ್ಕಾರ ಅಧಿಕೃತವಾಗಿ ಈ ವಿಚಾರವನ್ನು ತಿಳಿಸಿದೆ.

    ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಹಿಂದಿನಿಂದ ವ್ಯಕ್ತಿಯೊಬ್ಬ ಶೂಟ್‌ ಮಾಡಿದ್ದ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತು. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಜಪಾನ್‌ನ ದೀರ್ಘ ಕಾಲದ ಪ್ರಧಾನಿ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಜಪಾನ್‌ ಕಾಲಮಾನ ಬೆಳಗ್ಗೆ 11 ಗಂಟೆಗೆ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗ 2 ಬಾರಿ ಶೂಟ್‌ ಮಾಡಿ ಮಾಡಲಾಗಿತ್ತು.

    ಜಪಾನ್ ಸಂಸತ್​ನ ಮೇಲ್ಮನೆಗೆ ಚುನಾವಣೆ ನಡೆಯುತ್ತಿದ್ದ ಪ್ರಚಾರದ ವೇಳೆ ಈ ಘಟನೆ ನಡೆದಿದೆ. ಅವರ ಹಿಂದೆ ಸ್ವಲ್ಪ ದೂರದಲ್ಲೇ  ನಿಂತಿದ್ದ 41 ವರ್ಷದ ಟೆಟ್ಸುಯಾ ಯಮಗಾಮಿ ಎಂಬಾತ ಶಿಂಜೋ ಅಬೆ ಹತ್ಯೆ ಮಾಡಿದ್ದಾನೆ. ಹಂತಕನನ್ನು ಕೂಡಲೇ ಪೊಲೀಸರು ಬಂಧಿಸಿದ್ದಾರೆ. ತನಿಖೆಯಲ್ಲಿ ಆರೋಪಿ ನಾರಾ ಸಿಟಿಯ ನಿವಾಸಿಯಾಗಿದ್ದು ನೌಕಾಸೇನೆಯ ಮಾಜಿ ಅಧಿಕಾರಿ ಎಂದು ಗುರುತಿಸಲಾಗಿದೆ. ಘಟನೆಗೆ ಮನೆಯಲ್ಲಿ ತಯಾರಿಸಿದ ದೇಸಿ ಗನ್ ಬಳಿಕೆ ಮಾಡಿ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ ಘಟನೆಗೆ ನಿಖರ ಕಾರಣ ಇನ್ನು ವರದಿಯಾಗಿಲ್ಲ.

    ಆಸ್ಪತ್ರೆ ದಾಖಲಿಸುವ ವೇಳೆಗೆ ಅವರ ಉಸಿರಾಟ ನಿಂತು ಹೋಗಿತ್ತು. ಅದಾಗ್ಯೂ ಅವರನ್ನು ಉಳಿಸಿಕೊಳ್ಳುವ ಪ್ರಯತ್ನವನ್ನು ವೈದ್ಯರು ಮಾಡಿದರು. ಆದರೆ ಯಾವ ಚಿಕಿತ್ಸೆಗೆ ಸ್ಪಂಧಿಸದ ಹಿನ್ನಲೆ ಜಪಾನ ಕಾಲ ಮಾನದ ಪ್ರಕಾರ ಸಂಜೆ ಐದು ಗಂಟೆಗೆ ಅವರ ಸಾವಿನ ಸುದ್ದಿಯನ್ನು ಅಧಿಕೃತಗೊಳಿಸಲಾಯಿತು.

    Live Tv
    [brid partner=56869869 player=32851 video=960834 autoplay=true]

  • ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾಷಣ ಮಾಡುತ್ತಿದ್ದ ಸಂದರ್ಭದಲ್ಲೇ ದುಷ್ಕರ್ಮಿಯೊಬ್ಬ ಎದೆಗೆ ಗುಂಡು ಹಾರಿಸಿದ್ದು, ಅಬೆಗೆ ತೀವ್ರ ರಕ್ತಸ್ರಾವವಾಗಿದೆ.

    ಈ ಆಘಾತಕಾರಿ ಘಟನೆಗೆ ವಿಶ್ವದ ನಾಯಕರು ಪ್ರತಿಕ್ರಿಯಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿಯ ಉಳಿವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ.

    ಘಟನೆ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿ ತೀವ್ರ ಆಘಾತ ತಂದಿದೆ. ನಮ್ಮ ಆಲೋಚನೆ ಹಾಗೂ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಹಾಗೂ ಜಪಾನ್ ಜನರೊಂದಿಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಅಮೆರಿಕದ ರಾಯಭಾರಿ ರಹಮ್ ಇಮ್ಯಾನುಯೆಲ್, ಅಬೆ-ಸಾನ್ ಜಪಾನ್‌ನ ಅತ್ಯುತ್ತಮ ನಾಯಕ ಹಾಗೂ ಅಮೆರಿಕದ ಅಚಲ ಮಿತ್ರರಾಗಿದ್ದಾರೆ. ಅಮೆರಿಕ ಸರ್ಕಾರ ಹಾಗೂ ಅಮೆರಿಕದ ಜನರು ಅಬೆ-ಸಾನ್ ಅವರ ಕುಟುಂಬ ಹಾಗೂ ಜಪಾನ್‌ನ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡು ಹಾರಿಸಲಾಗಿದೆ ಎಂದು ಜಪಾನ್‌ನಿಂದ ಬಂದ ಆಘಾತಕಾರಿ ಸುದ್ದಿ – ಈ ಸಮಯದಲ್ಲಿ ನಮ್ಮ ಆಲೋಚನೆಗಳು ಅವರ ಕುಟುಂಬ ಹಾಗೂ ಜಪಾನ್‌ನ ಜನರೊಂದಿಗೆ ಇದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್, ಎಲ್ಲರಿಗೂ ನನ್ನಂತೆಯೇ ಆಘಾತ ಹಾಗೂ ದುಃಖ ತಂದಿದೆ ಎಂದು ನಾನು ಭಾವಿಸುತ್ತೇನೆ. ತೈವಾನ್ ಹಾಗೂ ಜಪಾನ್ ಎರಡೂ ಕಾನೂನು ಆಳ್ವಿಕೆಯನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು. ನನ್ನ ಸರ್ಕಾರದ ಪರವಾಗಿ, ನಾನು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಟೋಕಿಯೋ: ಜಪಾನ್‍ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ದುಷ್ಕರ್ಮಿಗಳಿಂದ ಗುಂಡೇಟು ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಜಪಾನ್ ನಾರಾ ನಗರದಲ್ಲಿ ಭಾಷಣ ಮಾಡುತ್ತಿರುವಾಗಲೇ ಶಿಂಜೋ ಅಬೆಗೆ ಗುಂಡೇಟು ಬಿದ್ದಿದೆ. ಭಾಷಣ ಮಾಡುತ್ತಿರುವಾಗ ಶಿಂಜೋ ಅಬೆ ಎದೆಗೆ ಗುಂಡು ತಾಗಿದ ಪರಿಣಾಮ ತೀವ್ರ ರಕ್ತಸ್ರಾವವಾಗಿತ್ತು. ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ಜಪಾನ್‌ ಕಾಲಮಾನ ಬೆಳಗ್ಗೆ 11 ಗಂಟೆಗೆ ಘಟನೆ ನಡೆದಿದೆ. ‌ಇದನ್ನೂ ಓದಿ: ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಶಿಂಜೋ ಅಬೆ ಎರಡು ಬಾರಿ ಜಪಾನ್ ಪ್ರಧಾನಿಯಾಗಿದ್ದರು. ಈ ಹಿಂದೆ ಭಾರತಕ್ಕೂ ಕೂಡ ಶಿಂಜೋ ಅಬೆ ಭೇಟಿ ನೀಡಿದ್ದರು. ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಅತ್ಯಾಪ್ತರಾಗಿದ್ದರು. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • 10 ಸಾವಿರ ಮನೆಗಳ ಕರೆಂಟ್‌ ಕಿತ್ತ ಹಾವು!

    10 ಸಾವಿರ ಮನೆಗಳ ಕರೆಂಟ್‌ ಕಿತ್ತ ಹಾವು!

    ಟೋಕಿಯೋ: ವಿದ್ಯುತ್‌ ಸ್ಟೇಷನ್‌ಗೆ ಹಾವು ನುಗ್ಗಿದ ಪರಿಣಾಮ ಸುಮಾರು 10,000 ಮನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡ ಘಟನೆ ಜಪಾನ್‌ನಲ್ಲಿ ನಡೆದಿದೆ. ವಿದ್ಯುತ್‌ ಸ್ಪರ್ಶದಿಂದ ಹಾವು ಮೃತಪಟ್ಟಿದೆ.

    ಜಪಾನ್‌ನ ಫುಕುಶಿಮಾ ಪ್ರಿಫೆಕ್ಚರ್‌ನಲ್ಲಿರುವ ಕೊರಿಯಾಮಾ ನಗರದ ನಿವಾಸಿಗಳು ವಿದ್ಯುತ್ ಸಮಸ್ಯೆ ಎದುರಿಸಿದರು. ತೊಹೊಕು ಎಲೆಕ್ಟ್ರಿಕ್ ಪವರ್ ಕಂಪನಿಯ ತನಿಖಾಧಿಕಾರಿಗಳು ವಿದ್ಯುತ್‌ ಸ್ಥಗಿತಕ್ಕೆ ಕಾರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ವಿದ್ಯುತ್‌ ಸ್ಟೇಷನ್‌ಗೆ ಭೇಟಿ ಕೊಟ್ಟಾಗ ಕೆಲವು ಯಂತ್ರೋಪಕರಣಗಳಲ್ಲಿ ಹಾವಿನ ಸುಟ್ಟ ಅವಶೇಷಗಳು ಪತ್ತೆಯಾಗಿವೆ. ಇದನ್ನೂ ಓದಿ: ದೋಣಿ ದುರಂತ- ಮಕ್ಕಳು ಸೇರಿ 22 ಮಂದಿ ದುರ್ಮರಣ

    ವಿದ್ಯುತ್‌ ತಂತಿ ತಗುಲಿ ಹಾವು ಸುಟ್ಟುಹೋಗಿದೆ. ಪರಿಣಾಮವಾಗಿ ಸ್ಟೇಷನ್‌ನಲ್ಲಿ ಶಾರ್ಟ್‌ ಸರ್ಕ್ಯೂಟ್‌ ಆಗಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಇದರಿಂದಾಗಿ ಸುಮಾರು 10 ಸಾವಿರ ಮನೆಗಳ ನಿವಾಸಿಗಳು ವಿದ್ಯುತ್‌ ಕಡಿತದಿಂದ ಸಮಸ್ಯೆ ಎದುರಿಸಬೇಕಾಯಿತು.

    ಹಾವಿನ ಕುರಿತಾದ ಸುದ್ದಿಯು ನಿವಾಸಿಗಳಲ್ಲಿ ಹೆಚ್ಚಿನ ಆಸಕ್ತಿಯನ್ನು ಹುಟ್ಟುಹಾಕಿದೆ. ನಗರದ ವಿದ್ಯುತ್ ಸೌಲಭ್ಯಗಳನ್ನು ಹಾವು ಎಷ್ಟು ಸುಲಭವಾಗಿ ನಿಷ್ಕ್ರಿಯಗೊಳಿಸಿದೆ ಎಂದು ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜೀಸಸ್‌ ಸುಪ್ರೀಂ ಎಂದಿದ್ದ ವ್ಯಕ್ತಿಗೆ ಪಾಕ್‌ನಲ್ಲಿ ಗಲ್ಲು ಶಿಕ್ಷೆ

    Live Tv
    [brid partner=56869869 player=32851 video=960834 autoplay=true]

  • ಪ್ರವಾಹದಿಂದ ರಕ್ಷಿಸಿಕೊಳ್ಳಲು ತೇಲುವ ಮನೆ ನಿರ್ಮಿಸಿದ ಜಪಾನ್ – ಏನಿದರ ವಿಶೇಷತೆ?

    ಪ್ರವಾಹದಿಂದ ರಕ್ಷಿಸಿಕೊಳ್ಳಲು ತೇಲುವ ಮನೆ ನಿರ್ಮಿಸಿದ ಜಪಾನ್ – ಏನಿದರ ವಿಶೇಷತೆ?

    ಟೋಕಿಯೊ: ಒಂದು ದೇಶ ಅಭಿವೃದ್ಧಿ ಹೊಂದಿರಲಿ, ಹೊಂದದಿರಲಿ, ಪ್ರವಾಹ ಮಾತ್ರ ಯಾವುದೇ ರಿಯಾಯಿತಿ ತೋರಿಸುವುದಿಲ್ಲ. ಒಮ್ಮೆಲೆ ಅಬ್ಬರಿಸಿದರೆ ನೂರಾರು ಜೀವಗಳು ಬಲಿಯಾಗುತ್ತವೆ. ಸಾವಿರಾರು ಮನೆಗಳನ್ನು ಆಹುತಿ ಪಡೆಯುತ್ತದೆ. ವಿಶ್ವದಲ್ಲೇ ಅತಿಹೆಚ್ಚು ಬಾರಿ ಪ್ರವಾಹಕ್ಕೆ ತುತ್ತಾಗಿರುವ ದೇಶ ಜಪಾನ್ ಆಗಿದೆ.

    https://twitter.com/LeeTyler/status/1540145698309431296?ref_src=twsrc%5Etfw%7Ctwcamp%5Etweetembed%7Ctwterm%5E1540145698309431296%7Ctwgr%5E%7Ctwcon%5Es1_&ref_url=https%3A%2F%2Fwww.udayavani.com%2Fnews-section%2Fnational-news%2Fjapanese-company-invents-floating-house-calls-it-flood-proof

    ಜಪಾನ್ ಎಷ್ಟು ಬಾರಿ ಪ್ರವಾಹಕ್ಕೆ ತುತ್ತಾದರೂ ಮತ್ತೆ – ಮತ್ತೆ ಪುಟಿದು ನಿಲ್ಲುತ್ತದೆ. ಇದೀಗ ಪ್ರವಾಹದೊಂದಿಗೇ ಬದುಕಲು ನೂತನ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡು ನಿರ್ಗತಿಕರಾಗು­ವವರಿಗಾಗಿಯೇ ಜಪಾನಿನ ಇಚಿಜೋ ಕೊಮುಟೆನ್ ಹೌಸ್ ಡೆವಲಪರ್ ಕಂಪೆನಿ ತೇಲುವ ಮನೆಯನ್ನು ನಿರ್ಮಿಸಿದೆ. ಇದನ್ನೂ ಓದಿ: ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್

    ಹೌದು.. ಜಪಾನ್ ಕಂಪನಿ ಅಭಿವೃದ್ಧಿಪಡಿಸಿರುವ ಈ ಮನೆ ಪ್ರವಾಹ ಬಂದಾಗ ತೇಲಲು ಆರಂಭಿಸುತ್ತದೆ. ನೀರಿನ ಮಟ್ಟ ಕರಗಿದಾಗ ಮತ್ತೆ ನೆಲಕ್ಕೆ ಬಂದು ನಿಲ್ಲುತ್ತದೆ. ಇದನ್ನು ಒಂದು ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷಿಕೆ ಮೂಲಕವೂ ಕಂಪನಿ ತೋರಿಸಿದ್ದು, ಜನರನ್ನು ಅಚ್ಚರಿಗೊಳಿಸಿದೆ. ಇದನ್ನೂ ಓದಿ: ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ

    ಹೇಗೆ ಇರಲಿದೆ?
    ನೀರು ನುಗ್ಗಲು ಶುರುವಾದ ಕೂಡಲೇ ನಿಧಾನವಾಗಿ ಮನೆ ಭೂಸ್ಪರ್ಶದಿಂದ ಮೇಲೆ ಬರಲು ಪ್ರಾರಂಭಿಸುತ್ತದೆ. ಗರಿಷ್ಠ 5 ಮೀಟರ್ ವರೆಗೆ ಮಲೆ ಮೇಲೆದ್ದು ತೇಲುತ್ತದೆ. ಮನೆಯ ಸುತ್ತ ಬಲವಾದ ಕಬ್ಬಿಣದ ಸಲಾಕೆಯಂತಿರುವ ಕಂಬಗಳನ್ನು ಹೊಂದಿರುತ್ತದೆ. ಅವು ಪಿಲ್ಲರ್‌ಗಳಂತೆ ಮನೆಗಳಿಗೆ ಭದ್ರತೆ ಒದಗಿಸುತ್ತವೆ. ಜೊತೆಗೆ ಈ ಕಂಬಗಳಿಗೆ ಬಲವಾದ ವೈರ್‌ಗಳನ್ನು ಬಿಗಿದು ಮನೆಗೆ ಕಟ್ಟಲಾಗಿರುತ್ತದೆ. ಪ್ರವಾಹ ಬಂದಾಗ ಮೇಲೇಳುವ ಮನೆ, ಪ್ರವಾಹ ಹೋದಾಗ ಅದೇ ಸ್ಥಳದಲ್ಲಿ ನೆಲಕ್ಕಿಳಿಯುತ್ತದೆ.

    Live Tv

  • ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು

    ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ-ಕೋರ್ಟ್ ತೀರ್ಪು

    ಟೋಕಿಯೋ: ಸಲಿಂಗ ವಿವಾಹ ನಿಷೇಧಿಸುವುದು ಅಸಾಂವಿಧಾನಿಕವಲ್ಲ ಎಂದು ಜಪಾನಿನ ಒಸಾಕಾ ನ್ಯಾಯಾಲಯ ತೀರ್ಪು ನೀಡಿದೆ. ಇದರೊಂದಿಗೆ ಸಲಿಂಗಿಗಳ ವಿವಾಹ ಸಂಬಂಧ ಎಲ್‌ಜಿಬಿಟಿಕ್ಯೂ ಕಾರ್ಯಕರ್ತರಿಗೆ 7 ರಾಷ್ಟ್ರಗಳಲ್ಲಿ ಹಿನ್ನಡೆಯಾಗಿದೆ.

    court order law

    ಸಲಿಂಗ ವಿವಾಹಕ್ಕೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ತಮಗೆ ನ್ಯಾಯ ಕಲ್ಪಿಸಿಕೊಡುವಂತೆ ಮೂರು ಸಲಿಂಗ ದಂಪತಿ ಒಸಾಕಾ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಈ ವಿಷಯದ ಬಗ್ಗೆ ಜಪಾನ್‌ನಲ್ಲಿ 2ನೇ ವಿಚಾರಣೆ ನಡೆಯಿತು. ಈ ವೇಳೆ ಸಲಿಂಗ ವಿವಾಹವನ್ನು ನಿಷೇಧಿಸುವುದು ಅಸಾಂವಿಧಾನಿಕ ಎನ್ನುವ ಹಕ್ಕನ್ನು ತಿರಸ್ಕರಿಸಿತು. ಜೊತೆಗೆ ನ್ಯಾಯಾಲಯವು ಪ್ರತಿ ದಂಪತಿಗೆ ನೀಡಬೇಕಿದ್ದ ಆರ್ಥಿಕ ಬೇಡಿಕೆಯನ್ನೂ ತಿರಸ್ಕರಿಸಿತು. ಇದನ್ನೂ ಓದಿ: ಇಂದಿನಿಂದ 2 ದಿನ ಪ್ರಧಾನಿ ರಾಜ್ಯ ಪ್ರವಾಸ – 20 ಗಂಟೆಯಲ್ಲಿ 10 ಕಾರ್ಯಕ್ರಮಗಳಲ್ಲಿ ಮೋದಿ ಭಾಗಿ

    Marrage

    ಸಪೋರೊ ನ್ಯಾಯಾಲಯವು 2021ರ ಮಾರ್ಚ್ ತಿಂಗಳಲ್ಲಿ ಸಲಿಂಗಿಗಳ ವಿವಾಹವನ್ನು ಅನುಮತಿಸುವುದು ಅಸಂವಿಧಾನಿಕವಾಗಿದೆ ಎಂದು ಹೇಳಿತ್ತು. ಈ ತೀರ್ಪಿನ ಪರವಾಗಿಯೇ ತೀರ್ಪು ಪ್ರಕಟಿಸುವಂತೆ ಜಪಾನ್ ಸರ್ಕಾರದ ಮೇಲೆ ಒತ್ತಡ ತರಲಾಗಿತ್ತು. ಅದರಂತೆ ತೀರ್ಪು ನೀಡಿರುವ ಜಪಾನ್ ಒಸಾಕಾ ನ್ಯಾಯಾಲಯವು ಸಲಿಂಗ ವಿವಾಹ ನಿಷೇಧದ ಪರವಾಗಿ ತೀರ್ಪು ನೀಡಿದೆ. ಇದನ್ನೂ ಓದಿ: ‘ವಿದ್ಯಾಪೀಠ’ದಲ್ಲಿ ಯಾರೆಲ್ಲ ಭಾಗವಹಿಸುತ್ತಿದ್ದಾರೆ? – ಉಚಿತ ಪ್ರವೇಶದ ಕಾರ್ಯಕ್ರಮಕ್ಕೆ ಬನ್ನಿ

    ಈ ತೀರ್ಪು ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳಿಗೆ ಗುರಿಯಾಗಿದೆ. ಜೊತೆಗೆ ಸಲಿಂಗ ವಿವಾಹಕ್ಕೆ ಬೆಂಬಲಿಸಿ ಅಭಿಪ್ರಾಯವನ್ನೂ ಸಂಗ್ರಹಿಸಲಾಗುತ್ತಿದೆ. ವಿಚಾರಣೆ ಮುಂದುವರಿದ್ದು, ಈ ವರ್ಷದ ಕೊನೆಯಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ ಎಂದು ಜಪಾನ್‌ನ ಒಸಾಕಾ ನ್ಯಾಯಾಲಯ ತಿಳಿಸಿದೆ.

    Live Tv

  • ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ

    ಹಾಕಿ ಏಷ್ಯಾ ಕಪ್ 2022: ಭಾರತಕ್ಕೆ ಕಂಚಿನ ಪದಕ

    ನವದೆಹಲಿ: ಹಾಕಿ ಏಷ್ಯಾ ಕಪ್‍ನಲ್ಲಿ ಭಾರತದ ರಾಜ್‍ಕುಮಾರ್ ಪಾಲ್ ಬಾರಿಸಿದ ಸೊಗಸಾದ ಗೋಲಿನ ನೆರವಿನಿಂದ ಭಾರತವು 1-0 ಗೋಲುಗಳಿಂದ ಜಪಾನ್ ತಂಡವನ್ನು ಸೋಲಿಸಿ ಕಂಚಿನ ಪದಕವನ್ನು ಗೆದ್ದುಕೊಂಡಿತು.

    ಜಕಾರ್ತಾನ ಹಾಕಿ ಕ್ರೀಡಾಂಗಣದಲ್ಲಿ ಇಂದು ಕಂಚಿನ ಪದಕಕ್ಕಾಗಿ ಹೋರಾಟ ನಡೆಸಿದ ಭಾರತ ಮೊದಲ ಕ್ವಾರ್ಟರ್‌ನಲ್ಲಿಯೇ ಗೋಲು ಗಳಿಸಿ ಮುನ್ನಡೆ ಸಾಧಿಸಿತು. ಪಂದ್ಯದ ಆರಂಭದಲ್ಲಿ ತಂಡವು ಒಂದು ಗೋಲಿನಿಂದ ಮುನ್ನಡೆ ಸಾಧಿಸಿತು, ನಂತರದಲ್ಲಿ ಜಪಾನಿನ ಯಾವುದೇ ಸಂಭಾವ್ಯ ದಾಳಿಗೆ ಆಸ್ಪದ ನೀಡದೇ ಪಂದ್ಯವನ್ನು ಕೈವಶಮಾಡಿಕೊಳ್ಳುವಲ್ಲಿ ಭಾರತ ತಂಡ ಯಶಸ್ವಿಯಾಯಿತು. ಇದನ್ನೂ ಓದಿ: ಚಾಂಪಿಯನ್ ತಂಡವನ್ನು ಗೌರವಿಸಿದ ಗುಜರಾತ್ ಸರ್ಕಾರ – ಹಾರ್ದಿಕ್ ಪಾಂಡ್ಯಗೆ ವಿಶೇಷ ಉಡುಗೊರೆ

    ಹಾಲಿ ಚಾಂಪಿಯನ್ ಕೊರಿಯಾ ವಿರುದ್ಧ ರೋಚಕ 4-4 ಡ್ರಾ ನಂತರ ಟೂರ್ನಿಯ ಫೈನಲ್ ಪ್ರವೇಶಿಸಲು ಭಾರತವು ವಿಫಲವಾಯಿತು. ಸೂಪರ್ 4ರ ಪೂಲ್ ಟೇಬಲ್‍ನಲ್ಲಿ ಗೋಲುಗಳ ವ್ಯತ್ಯಾಸದಿಂದಾಗಿ ಭಾರತ ಫೈನಲ್‍ಗೆ ಪ್ರವೇಶಿಸುವ ಅವಕಾಶ ಕಳೆದುಕೊಂಡಿತ್ತು. ಇದೀಗ ಕಂಚಿನ ಪದಕಕ್ಕೆ ತೃಪ್ತಿ ಪಟ್ಟಿದೆ. ಇದನ್ನೂ ಓದಿ: ಪಾಕಿಸ್ತಾನದವನಾಗಿ ನಾನು ಹೇಳುತ್ತೇನೆ ವಿರಾಟ್ ಕೊಹ್ಲಿ ಒಬ್ಬ ಸಾರ್ವಕಾಲಿಕ ಶ್ರೇಷ್ಠ ಆಟಗಾರ: ಶೋಯೆಬ್ ಅಕ್ತರ್

  • ಜಪಾನ್‌ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ

    ಜಪಾನ್‌ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು: ಮೋದಿ ಆಹ್ವಾನ

    ಟೋಕಿಯೊ: ತಂತ್ರಜ್ಞಾನ ಮತ್ತು ಪ್ರತಿಭೆ ಕೇಂದ್ರಿತ ಭವಿಷ್ಯದ ಬಗ್ಗೆ ಭಾರತವು ಹೆಚ್ಚು ಆಶಾವಾದಿಯಾಗಿದೆ. ಜಪಾನ್ ಯುವಕರು ಒಮ್ಮೆಯಾದರೂ ಭಾರತಕ್ಕೆ ಭೇಟಿ ನೀಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಹ್ವಾನ ನೀಡಿದರು.

    ಭಾರತೀಯ ಸಮುದಾಯದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋದಿ ಅವರು, ಸ್ವಾಮಿ ವಿವೇಕಾನಂದರು ಜಪಾನ್‌ನಿಂದ ಪ್ರಭಾವಿತರಾಗಿದ್ದರು. ಭಾರತದ ಯುವಕರು ತಮ್ಮ ಜೀವನದಲ್ಲಿ ಒಮ್ಮೆಯಾದರೂ ಜಪಾನ್‌ಗೆ ಭೇಟಿ ನೀಡಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು ಎಂದು ಸ್ಮರಿಸಿದರು. ಇದನ್ನೂ ಓದಿ: ಭಾರತದ ಸ್ಮಾರ್ಟ್ ಸಿಟಿ, 5ಜಿ ಯೋಜನೆಗೆ ಕೊಡುಗೆ ನೀಡಲು ಮುಂದಾದ ಜಪಾನ್

    ಈ ಸದ್ಭಾವನೆಯನ್ನು ಮುಂದುವರಿಸೋಣ. ಅದಕ್ಕಾಗಿ ಜಪಾನ್ ಯುವಕರು ತಮ್ಮ ಜೀವನದಲ್ಲಿ ಒಮ್ಮೆಯಾದರೂ ಭಾರತಕ್ಕೆ ಬರಬೇಕು ಎಂದು ನಾನು ಈ ಮೂಲಕ ಆಸೆ ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.

    ಜಪಾನ್‌ನಲ್ಲಿರುವ ಭಾರತೀಯರು ಕಾರ್ಯಕ್ರಮದ ಬಗ್ಗೆ ಉತ್ಸುಕತೆ ಹೊಂದಿದ್ದರು. ಪ್ರಧಾನಿ ಮೋದಿ ತಮ್ಮ ಭಾಷಣ ಆರಂಭಿಸುತ್ತಿದ್ದಂತೆ ʼಮೋದಿ ಮೋದಿ, ಜೈ ಶ್ರೀರಾಮ್‌ʼ ಎಂದು ಘೋಷಣೆಗಳನ್ನು ಕೂಗಿದರು. ಇದನ್ನೂ ಓದಿ: ಉಕ್ರೇನ್‌ ನಾಗರಿಕನನ್ನು ಕೊಂದ ರಷ್ಯಾ ಸೈನಿಕನಿಗೆ ಜೀವಾವಧಿ ಶಿಕ್ಷೆ

    ಕಾರ್ಯಕ್ರಮಕ್ಕಾಗಿ ಭಾರತೀಯ ವಲಸಿಗರಲ್ಲಿ ಅಪಾರ ಉತ್ಸಾಹವಿತ್ತು ಮತ್ತು ಅವರು ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ ‘ಮೋದಿ ಮೋದಿ ಮತ್ತು ಜೈ ಶ್ರೀ ರಾಮ್’ ಘೋಷಣೆಗಳು ಸಭಾಂಗಣದಲ್ಲಿ ಪ್ರತಿಧ್ವನಿಸಿತು.

    ನಂತರ ಮಾತು ಮುಂದುವರಿಸಿದ ಪ್ರಧಾನಿ ಮೋದಿ, ಜಪಾನಿಗೆ ಬಂದಾಗಲೆಲ್ಲ ಇಲ್ಲಿನ ಜನರಿಂದ ವಿಪರೀತ ಪ್ರೀತಿ ಸಿಗುತ್ತದೆ. ನಿಮ್ಮಲ್ಲಿ ಕೆಲವರು ವರ್ಷಗಳಿಂದ ಜಪಾನ್‌ನಲ್ಲಿ ನೆಲೆಸಿದ್ದೀರಿ. ಈ ದೇಶದ ಸಂಸ್ಕೃತಿಯನ್ನು ಅಳವಡಿಸಿಕೊಂಡಿದ್ದೀರಿ. ಆದರೂ ಭಾರತೀಯ ಸಂಸ್ಕೃತಿ ಮತ್ತು ಭಾಷೆಯ ಬಗೆಗಿನ ಪ್ರೀತಿ ಸದಾಕಾಲ ಹಾಗೆಯೇ ಇದೆ ಎಂದು ಸಂತಸ ವ್ಯಕ್ತಪಡಿಸಿದರು.