Tag: ಜಮಖಂಡಿ

  • ಜಮಖಂಡಿಯಲ್ಲಿ ಮತ್ತೊಮ್ಮೆ `ಕೈ’ ಹಿಡಿದ ಮತದಾರ- ಯಾರಿಗೆ ಎಷ್ಟು ಮತ?

    ಜಮಖಂಡಿಯಲ್ಲಿ ಮತ್ತೊಮ್ಮೆ `ಕೈ’ ಹಿಡಿದ ಮತದಾರ- ಯಾರಿಗೆ ಎಷ್ಟು ಮತ?

    ಬಾಗಲಕೋಟೆ: ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಸಿದ್ದು ನ್ಯಾಮಗೌಡ ಜಯಗಳಿಸಿದ್ದಾರೆ.

    ಆನಂದ್ ನ್ಯಾಮಗೌಡ 97,017 ಮತಗಳನ್ನು ಪಡೆದುಕೊಂಡು 39,480 ಮತಗಳ ಅಂತರದಿಂದ ಜಯಶೀಲರಾಗಿದ್ದಾರೆ. ಇವರ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಒಟ್ಟು 57,537 ಮತಗಳನ್ನು ಪಡೆದುಕೊಂಡಿದ್ದಾರೆ.

     

    ಶಾಸಕ ಸಿದ್ದು ನ್ಯಾಮಗೌಡರ ಅಕಾಲಿಕ ಮರಣದಿಂದಾಗಿ ಜಮಖಂಡಿ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆದಿತ್ತು. ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿದ್ದು ನ್ಯಾಮಗೌಡರ ಪುತ್ರ ಆನಂದ ಸಿದ್ದು ನ್ಯಾಮಗೌಡ ಸ್ಪರ್ಧಿಸಿದ್ದರೆ, ಕಳೆದ ಬಾರಿ ಕಡಿಮೆ ಅಂತರದಿಂದ ಪರಾಜಯಗೊಂಡಿದ್ದ ಬಿಜೆಪಿ ಅಭ್ಯರ್ಥಿ ಕುಲಕರ್ಣಿ ಶ್ರೀಕಂಠ ಸುಬ್ಬರಾವ್ ಮತ್ತೊಮ್ಮೆ ಅಖಾಡಕ್ಕೆ ಧುಮುಕಿದ್ದರು.

    ಈ ಬಾರಿಯ ಜಮಖಂಡಿ ಉಪ ಚುನಾವಣೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರತಿಷ್ಠೆಯ ಕಣವಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಅನುಕಂಪದ ಆಧಾರದ ಮೇಲೆ ಜಯಗಳಿಸುತ್ತಾರೆ ಎನ್ನುತ್ತಿದ್ದರೆ, ಬಿಜೆಪಿ ಅಭ್ಯರ್ಥಿ ಕಳೆದ ಬಾರಿ ಕಡಿಮೆ ಅಂತರದಿಂದ ಸೋಲನ್ನು ಕಂಡಿದ್ದರು. ಅವರಿಗೆ ಮತದಾರ ಒಲವು ತೋರುತ್ತಾರೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿ ಬಂದಿದ್ದವು. ಆದರೆ ಇಂದಿನ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ಸಿಗೆ ಗೆಲುವನ್ನು ತಂದುಕೊಟ್ಟಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಮಖಂಡಿ ಬಂಡಿ ಯಾರ ಕೈಗೆ..?

    ಜಮಖಂಡಿ ಬಂಡಿ ಯಾರ ಕೈಗೆ..?

    ಬಾಗಲಕೋಟೆ: ಕಾಂಗ್ರೆಸ್ ಶಾಸಕರಾಗಿದ್ದ ಸಿದ್ದುನ್ಯಾಮೇಗೌಡರ ನಿಧನದಿಂದ ಅನಿವಾರ್ಯವಾಗಿ ನಡೆಯುತ್ತಿರುವ ಉಪಚುನಾವಣೆ ಇದಾಗಿದೆ. ಕಳೆದ ಚುನಾವಣೆಯಲ್ಲಿ ಕಷ್ಟಪಟ್ಟು ಗೆದ್ದಿದ್ದ ಕಾಂಗ್ರೆಸ್ ಈ ಬಾರಿ ದೋಸ್ತಿಯೋ ಅಥವಾ ಬಿಜೆಪಿಯೋ ಎಂಬುದು ಪ್ರಶ್ನೆಯಾಗಿದೆ. ಒಟ್ಟಿನಲ್ಲಿ ಜಮಖಂಡಿಯಲ್ಲಿ ಬಂಡಿ ಎಳೆಯೋರು ಯಾರು ಅನ್ನೋದು ಕುತೂಹಲ ಕೆರಳಿಸಿದೆ.

    ಬಾಗಲಕೋಟೆಯ ಜಮಖಂಡಿಯಲ್ಲಿ ಕಾಂಗ್ರೆಸ್ ನ ಆನಂದ ನ್ಯಾಮೇಗೌಡ ಹಾಗೂ ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಮಧ್ಯೆ ಹಣಾಹಣಿ ನಡೆದಿದೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ 2,03,681 ಒಟ್ಟು ಮತದಾರರಿದ್ದಾರೆ. ಇದರಲ್ಲಿ ಪುರುಷರು- 1,02,216 ಹಾಗೂ 1,01,460 ಮಹಿಳಾ ಮತದಾರರಿದ್ದಾರೆ.  ಇದನ್ನೂ ಓದಿ: ಪ್ರತಿಷ್ಠೆಯ ಕಣ ಶಿವಮೊಗ್ಗದಲ್ಲಿ ಯಾರಿಗೆ ವಿಜಯಮಾಲೆ..?

    ಇನ್ನು ಜಾತಿ ಲೆಕ್ಕಾಚಾರದಲ್ಲಿ ನೋಡೋದಾದ್ರೆ ಲಿಂಗಾಯತ (ಪಂಚಮಸಾಲಿ ಬಣಜಿಗ)- 28,000, ಹಾಲುಮತ- 22,000, ಗಾಣಿಗ ಲಿಂಗಾಯತ-20,000, ಮುಸ್ಲಿಂ- 20,000, ಜೈನ್- 10,000, ಎಸ್ಸಿ, ಎಸ್ಟಿ- 28,000, ಮರಾಠ/ಕ್ಷತ್ರೀಯ- 15,000, ರೆಡ್ಡಿ ಲಿಂಗಾಯತ್-8,500, ಇತರೆ ಸಮುದಾಯದಲ್ಲಿ 28,000 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಾಯಕ ಪಾತ್ರ ವಹಿಸುತ್ತಾರೆ. ಇದನ್ನೂ ಓದಿ: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಹವಾ-ಮತದಾರರ ಒಲವು ಯಾರ ಅತ್ತ?

    2018ರ ಫಲಿತಾಂಶ ಹೀಗಿತ್ತು:
    ಕಾಂಗ್ರೆಸ್ ನಿಂದ ಸಿದ್ದು ನ್ಯಾಮೇಗೌಡ ಸ್ಪರ್ಧಿಸಿ 49,245 ಮತಗಳನ್ನು ಗಳಿಸಿದ್ದರು. ಇನ್ನು ಬಿಜೆಪಿಯಿಂದ ಶ್ರೀಕಾಂತ ಕುಲಕರ್ಣಿ ಸ್ಪರ್ಧಿಸಿ 46,450 ಮತಗಳನ್ನು ತಮ್ಮದಾಗಿಸಿಕೊಂಡಿದ್ದು, ಗೆಲುವಿನ ಅಂತರ- 2,795 ಆಗಿತ್ತು. ಇದನ್ನೂ ಓದಿ: ಮಂಡ್ಯದಲ್ಲಿ ಮತದಾರನ ಒಲವು ದೋಸ್ತಿಗೋ, ಬಿಜೆಪಿಗೋ?


    ಕಾಂಗ್ರೆಸ್ ಸೋತರೆ ಏನಾಗುತ್ತೆ…?
    ಜಮಖಂಡಿಯಲ್ಲಿ ಈ ಬಾರಿ ಕಾಂಗ್ರೆಸ್ ಸೋತರೆ ಮಾಜಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್‍ಗೆ ಮುಖಭಂಗವಾಗುತ್ತದೆ. ಈ ಮೂಲಕ ಬಿಎಸ್‍ವೈ ವೀರಶೈವ-ಲಿಂಗಾಯತ ಸಮುದಾಯದ ನಾಯಕ ಅನ್ನೋದು ಮತ್ತೊಮ್ಮೆ ಸಾಬೀತಾಗುತ್ತದೆ. ಇಷ್ಟು ಮಾತ್ರವಲ್ಲದೇ ಉತ್ತರ ಕರ್ನಾಟಕದಲ್ಲಿ ಬಿಎಸ್‍ವೈ ಬಲಿಷ್ಠ ಅನ್ನೋದು ಪ್ರೂವ್ ಆಗುತ್ತದೆ. ಕಾಂಗ್ರೆಸ್‍ನಲ್ಲಿ ಡಿಸಿಎಂ ಪರಮೇಶ್ವರ್ ಪ್ರಭಾವ ಕುಗ್ಗಲಿದೆ. ವಿಧಾನಸಭೆಯಲ್ಲಿ ಬಿಜೆಪಿ ಸಂಖ್ಯಾಬಲ 104ರಿಂದ 105ಕ್ಕೆ ಹೆಚ್ಚಳವಾಗುತ್ತದೆ. ಬಿಎಸ್‍ವೈ ಮತ್ತೆ ಸಿಎಂ ಆಗುವ ಆಸೆ ಚಿಗುರಲಿದೆ. ಇದನ್ನೂ ಓದಿ: ಗಣಿ ನಾಡಿಗೆ ಯಾರು ಧಣಿ? ಬಳ್ಳಾರಿ ಮಹಾಭಾರತದಲ್ಲಿ ಪಾಂಡವರು ಯಾರು..?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜಮಖಂಡಿಯಲ್ಲಿ ರಾತ್ರೋ ರಾತ್ರಿ ಕುಣಿಯುತ್ತಿದೆ ಬೆಟ್ಟಿಂಗ್ ಕಾಂಚಾಣ

    ಜಮಖಂಡಿಯಲ್ಲಿ ರಾತ್ರೋ ರಾತ್ರಿ ಕುಣಿಯುತ್ತಿದೆ ಬೆಟ್ಟಿಂಗ್ ಕಾಂಚಾಣ

    -ಗೆಲ್ಲೋದ್ಯಾರೋ, ಸೋಲೋದ್ಯಾರೋ ಲೆಕ್ಕಾಚಾರದಲ್ಲಿ ಕಾಂಚಾಣ ಝಣ..ಝಣ

    ಬಾಗಲಕೋಟೆ: ಮಂಗಳವಾರ ಕರ್ನಾಟಕ ಉಪಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಅಭ್ಯರ್ಥಿಗಳಲ್ಲಿ ಫಲಿತಾಂಶ ಏನು ಬರುತ್ತೋ ಎಂಬ ಆತಂಕ ಹೆಚ್ಚಾಗಿದೆ. ಅಭ್ಯರ್ಥಿಗಳಿಂದ ಚುನಾವಣೆಯ ಫಲಿತಾಂಶದ ಲಕ್ಷ ಲಕ್ಷ ಹಣ ಹೂಡಿರುವ ಬೆಟ್ಟಿಂಗ್ ದಂಧೆಕೋರರಲ್ಲಿಯೂ ಆತಂಕ ಹೆಚ್ಚಾಗಿದೆ. ನಾಡಿನ ಜನತೆ ಫಲಿತಾಂಶ ಏನು ಆಗುತ್ತೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಇತ್ತ ಜಮಖಂಡಿ, ಮುಧೋಳ, ಬಾಗಲಕೋಟೆ ನಗರದ ಲಾಡ್ಜ್ ಗಳು, ಪಾನ್ ಶಾಪ್ ಗಳಲ್ಲಿ ಬೆಟ್ಟಿಂಗ್ ನಡೆಯುತ್ತಿದೆ.

    ಈ ಬಾರಿ ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡ ಮತ್ತು ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ನಡುವೆ ಸಮಬಲದ ಪೈಪೋಟಿ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿ ಬೆಟ್ಟಿಂಗ್ ಆಡುವವರ ಸಂಖ್ಯೆ ಜಿಲ್ಲೆಯಾದ್ಯಂತ ಹೆಚ್ಚಾಗುತ್ತಿದೆ. ಈ ಹಿಂದೆ ಬಾದಾಮಿ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಶಾಸಕ ಶ್ರೀರಾಮುಲು ಸ್ಪರ್ಧೆ ಮಾಡಿದ್ದಾಗಲೂ ಲಕ್ಷದ ಲೆಕ್ಕದಲ್ಲಿ ಬೆಟ್ಟಿಂಗ್ ನಡೆದಿತ್ತು ಎಂದು ಹೇಳಲಾಗಿತ್ತು.

    ಈಗ ಪೊಲೀಸರಿಗೆ ಸುಳಿವು ನೀಡದೇ ದಂಧೆಕೋರರು ಬೆಟ್ಟಿಂಗ್ ನಲ್ಲಿ ಲಕ್ಷಾಂತರ ಹಣ ಹಾಕುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಾದ್ಯಂತ ಯಾರು ಗೆಲ್ಲುತ್ತಾರೆ? ಯಾರು ಸೋಲ್ತಾರೆ? ಎಂಬ ಸೋಲು ಗೆಲುವಿನ ಲೆಕ್ಕಾಚಾರಗಳು ಆರಂಭಗೊಂಡಿವೆ. ಅಭ್ಯರ್ಥಿಗಳ ಜೊತೆಯಲ್ಲಿ ಬೆಟ್ಟಿಂಗ್ ಹಣ ಹೂಡಿದವರಲ್ಲಿ ಫಲಿತಾಂಶ ಏನಾಗುತ್ತೆ ಎಂಬ ಆತಂಕ ಹೆಚ್ಚಾಗಿರೋದು ಸತ್ಯ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉಪಸಮರಕ್ಕೆ ಶಾಂತಿಯುತ ತೆರೆ – ಜಮಖಂಡಿಯಲ್ಲಿ ಅತೀ ಹೆಚ್ಚು, ಮಂಡ್ಯದಲ್ಲಿ ಕಡಿಮೆ ಮತದಾನ

    ಉಪಸಮರಕ್ಕೆ ಶಾಂತಿಯುತ ತೆರೆ – ಜಮಖಂಡಿಯಲ್ಲಿ ಅತೀ ಹೆಚ್ಚು, ಮಂಡ್ಯದಲ್ಲಿ ಕಡಿಮೆ ಮತದಾನ

    ಬೆಂಗಳೂರು: ರಾಜ್ಯದ ಐದು ಕ್ಷೇತ್ರಗಳ ಉಪಚುನಾವಣೆ ಮುಕ್ತಾಯವಾಗಿದ್ದು, ನವೆಂಬರ್ 6 ರಂದು ಪ್ರಕಟವಾಗುವ ಫಲಿತಾಂಶದತ್ತ ಎಲ್ಲರ ದೃಷ್ಟಿ ನೆಟ್ಟಿದೆ.

    ಇತ್ತ ಎಲ್ಲೆಲ್ಲಿ ಎಷ್ಟೆಷ್ಟು ಮತದಾನ ಆಗಿದೆ? ಎಲ್ಲಿ ವೋಟ್ ಹೆಚ್ಚಾಗಿದ್ದರೆ ಲಾಭ? ಕಡಿಮೆಯಾದರೆ ಏನಾಗಬಹುದು ಎನ್ನುವ ಲೆಕ್ಕಾಚಾರದಲ್ಲಿ ರಾಜಕೀಯ ನಾಯಕರು ಮುಳುಗಿದ್ದಾರೆ. ಈ ಕುರಿತು ಮಾಹಿತಿ ನೋಡುವುದಾದರೆ ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚಿನ ಮತದಾನ ಆಗಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾನ ಆಗಿದೆ.

    ಯಾವ ಕ್ಷೇತ್ರದಲ್ಲಿ ಎಷ್ಟು?
    ಕಳೆದ ಮೂರು ವಾರಗಳಿಂದ ರಾಜಕೀಯ ರಣರಂಗವಾಗಿದ್ದ ಬಳ್ಳಾರಿಯಲ್ಲಿ ಸುಗಮ ಮತದಾನ ನಡೆದಿದ್ದು, ಆದರೆ ಮತದಾನದ ಪ್ರಮಾಣ ಕಡಿಮೆ ಆಗಿದೆ. ಮತದಾರರು ಮತಗಟ್ಟೆಗೆ ಬರಲು ಹೆಚ್ಚು ಉತ್ಸಾಹ ತೋರದ ಕಾರಣ ಶೇ.63.85 ರಷ್ಟು ಮತದಾನ ನಡೆದಿದೆ. ಮೂವರು ಮಾಜಿ ಮುಖ್ಯಮಂತ್ರಿಗಳ ಪುತ್ರರು ಸ್ಪರ್ಧಿಸಿರುವ ಶಿವಮೊಗ್ಗ ಲೋಕಸಭೆ ಉಪ ಚುನಾವಣೆಯಲ್ಲಿಯೂ ಮತದಾನ ಪ್ರಮಾಣ ನಿರೀಕ್ಷೆಯಷ್ಟು ನಡೆಯದೇ ಶೇ. 61.05 ದಾಖಲಾಗಿದೆ. ಈ ನಡುವೆ ಮಂಡ್ಯ ಲೋಕಸಭೆ ಉಪ ಚುನಾವಣೆಯಲ್ಲಿ ಕೊನೆಯ ದಿನವೂ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಲ್ಲಿ ಒಮ್ಮತ ಮೂಡಲೇ ಇಲ್ಲ. ಈ ಗೊಂದಲದ ನಡುವೆ ಶೇ.53.93 ರಷ್ಟು ಮತದಾನ ನಡೆದಿದ್ದು, ಈ ಮೂಲಕ ಅತ್ಯಂತ ಕಡಿಮೆ ಮತದಾನವಾಗಿದೆ.

    ವಿಧಾನಸಭೆ ಉಪಚುನಾವಣೆ ನಡೆದ ಕ್ಷೇತ್ರಗಳತ್ತ ಗಮನ ಹರಿಸಿದರೆ ಸಿಎಂ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ರಾಮನಗರದಲ್ಲಿ ವಿಚಿತ್ರ ಸನ್ನಿವೇಶದಲ್ಲಿ ಮತದಾನ ನಡೆಯಿತು. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ 2 ದಿನಗಳಲ್ಲಿ ನಡೆದ ನಾಟಕೀಯ ಬೆಳವಣಿಗೆಗಳ ನಡುವೆ ಶೇ.71.88 ರಷ್ಟು ಆಗಿದೆ. ಸಿದ್ದು ನ್ಯಾಮಗೌಡ ಅವರ ಆಕಾಲಿಕ ಮರಣದಿಂದ ತೆರವಾಗಿದ್ದ ಜಮಖಂಡಿ ಕ್ಷೇತ್ರದಲ್ಲಿ ಅತ್ಯಧಿಕ 77.17ರಷ್ಟು ಮತದಾನ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರಿಂದ ನೀತಿ ಸಂಹಿತೆ ಉಲ್ಲಂಘನೆ

    ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡರಿಂದ ನೀತಿ ಸಂಹಿತೆ ಉಲ್ಲಂಘನೆ

    ಬಾಗಲಕೋಟೆ: ಜಮಖಂಡಿ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮ ಗೌಡ ಅವರು ಚುನಾವಣೆಯಂದೇ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

    ಮತಗಟ್ಟೆ ಕೇಂದ್ರದ ಆವರಣದಲ್ಲೆ ಅಭ್ಯರ್ಥಿಯಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಜಮಖಂಡಿ ತಾಲೂಕಿನ ನಾಗನೂರ ಗ್ರಾಮದಲ್ಲಿ ಆರತಿ ಬೆಳಗಿದ ಮಹಿಳೆಯ ತಟ್ಟೆಯಲ್ಲಿ 100 ರೂಪಾಯಿ ನೋಟು ಇಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

    ಆನಂದ ನ್ಯಾಮಗೌಡ ಅವರು ನಾಗನೂರ ಗ್ರಾಮದ ಮತಗಟ್ಟೆ ಸಂಖ್ಯೆ 97 ಹಾಗೂ 98ಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಮತಗಟ್ಟೆ ಕೇಂದ್ರದಲ್ಲಿ ಮಹಿಳೆಯರು ಆರತಿ ಬೆಳಗಿದ್ದಾರೆ. ಇದೇ ಸಂದರ್ಭದಲ್ಲಿ ನ್ಯಾಮಗೌಡ ಆರತಿ ತಟ್ಟೆಯಲ್ಲಿ 100 ರೂಪಾಯಿ ನೋಟು ಇಟ್ಟಿದ್ದಾರೆ.

    ಮಹಿಳೆಯರಿಂದ ಮತದಾನ ಜಾಗೃತಿ:
    ಜಮಖಂಡಿ ತಾಲೂಕಿನ ನಾಗನೂರಿನಲ್ಲಿ ಆಶಾ ಕಾರ್ಯಕರ್ತೆಯರು ವಿಶಿಷ್ಟವಾಗಿ ಮತದಾರರಲ್ಲಿ ಜಾಗೃತಿ ಮೂಡಿಸಿದ್ದಾರೆ. ನಾಗನೂರ ಗ್ರಾಮದ ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿರುವ 97 ಹಾಗೂ 98 ಮತಗಟ್ಟೆಯಲ್ಲಿ ಮತದಾರರಿಗೆ ಆರತಿ ಬೆಳಗಿದ್ದಾರೆ. ಅಂಗನವಾಡಿ ಆಶಾ ಕಾರ್ಯಕರ್ತೆಯರು ಮತದಾನಕ್ಕೆ ಆಗಮಿಸುತ್ತಿರುವ ಪ್ರತಿಯೊಬ್ಬರಿಗೂ ಕುಂಕುಮ ಹಚ್ಚಿ, ಆರತಿ ಬೆಳಗಿದ್ದಾರೆ.

    ಮತದಾನಕ್ಕೆ ಬಂದವರಿಗೆ ಆರತಿ ಎತ್ತಿ ಪೂಜೆ ಸಲ್ಲಿಸುವ ಮೂಲಕ ಆಶಾ ಕರ್ಯಕರ್ತೆಯರ ಮತದಾನದ ಜಾಗೃತಿ ಕೆಲಸಕ್ಕೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ರಾಮನಗರ, ಜಮಖಂಡಿ ಉಪಚುನಾವಣಾ ಕ್ಷೇತ್ರದ ವಿವರ

    ರಾಮನಗರ, ಜಮಖಂಡಿ ಉಪಚುನಾವಣಾ ಕ್ಷೇತ್ರದ ವಿವರ

    ಬೆಂಗಳೂರು: ರಾಮನಗರ ಹಾಗೂ ಜಮಖಂಡಿ ಇಂದಿನ ಲೋಕಸಭಾ ಉಪಚುನಾವಣೆಯ ಪ್ರತಿಷ್ಠೆಯ ಕಣಗಳಾಗಿದೆ. ರಾಮಗರದಲ್ಲಿ ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸಿದ್ರೆ ಬಿಜೆಪಿಯಿಂದ ಎಲ್ ಚಂದ್ರಶೇಖರ್ ಅವರು ಅಭ್ಯರ್ಥಿಯಾಗಿದ್ದರು. ಆದ್ರೆ ಚಂದ್ರಶೇಖರ್ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.


    ರಾಮನಗರ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 2,07,005 ಇದೆ. ಅದರಲ್ಲಿ ಪುರುಷರ ಸಂಖ್ಯೆ 1,02,948 ಇದ್ದು, 1,04,032 ಮಹಿಳಾ ಮತದಾರರಿದ್ದಾರೆ. ಇನ್ನು ಜಾತಿ ಲೆಕ್ಕಾಚಾರದಲ್ಲಿ ನೋಡೋದಾದ್ರೆ ಒಕ್ಕಲಿಗರು- 99,572, ಎಸ್ಸಿ/ ಎಸ್ಟಿ- 45,953, ಮುಸ್ಲಿಂ- 35,990, ಲಿಂಗಾಯತರು- 16,900 ಹಾಗೂ ಇತರ 8190 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರೇ ನಿರ್ಣಾಯಕ ಪಾತ್ರ ವಹಿಸುತ್ತಾರೆ.

    ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ 04 ಹೋಬಳಿಗಳು ಹಾಗೂ 20 ಗ್ರಾಮ ಪಂಚಾಯತ್‍ಗಳಿವೆ. ಅದರಲ್ಲಿ 123 ಜನವಸತಿ ಇರುವ ಗ್ರಾಮಗಳಿದ್ದು, ಕ್ಷೇತ್ರದಲ್ಲಿ 2,85,466 ಜನರಿದ್ದಾರೆ. ಇದರಲ್ಲಿ ಪುರುಷರು- 1,45,187 ಹಾಗೂ 1,40,279 ಮಹಿಳಾ ಮತದಾರರಿದ್ದಾರೆ.

    ರಾಮನಗರ 2018ರ ಚುನಾವಣೆಯಲ್ಲಿ ಜೆಡಿಎಸ್ ನಿಂದ ಎಚ್ ಡಿ ಕುಮಾರಸ್ವಾಮಿ ಸ್ಪರ್ಧಿಸಿ, 92,926 ಮತಗಳನ್ನು ಪಡೆದುಕೊಂಡಿದ್ದರು. ಇನ್ನು ಕಾಂಗ್ರೆಸ್ ನಿಂದ ಇಕ್ಭಾಲ್ ಹುಸೇನ್ ಅವರು ಸ್ಪರ್ಧಿಸಿದ್ದು 69,990 ಮತಗಳನ್ನು ತಮ್ಮದಾಗಿಸಿಕೊಂಡಿದ್ದರು. ಜೆಡಿಎಸ್ ಅಭ್ಯರ್ಥಿ ಎಚ್‍ಡಿ ಕುಮಾರಸ್ವಾಮಿಯವರು 22,289 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.


    ಬಾಗಲಕೋಟೆಯ ಜಮಖಂಡಿಯಲ್ಲಿ ಕಾಂಗ್ರೆಸ್ ನ ಆನಂದ ನ್ಯಾಮಗೌಡ ಹಾಗೂ ಬಿಜೆಪಿಯ ಶ್ರೀಕಾಂತ ಕುಲಕರ್ಣಿ ಮಧ್ಯೆ ಹಣಾಹಣಿ ನಡೆಯುತ್ತಿದೆ. ಜಮಖಂಡಿ ವಿಧಾನಸಭಾ ಕ್ಷೇತ್ರದಲ್ಲಿ 2,03,681 ಒಟ್ಟು ಮತದಾರರಿದ್ದಾರೆ. ಇದರಲ್ಲಿ ಪುರುಷರು- 1,02,216 ಹಾಗೂ 1,01,460 ಮಹಿಳಾ ಮತದಾರರಿದ್ದಾರೆ.

    ಇನ್ನು ಜಾತಿ ಲೆಕ್ಕಾಚಾರದಲ್ಲಿ ನೋಡೋದಾದ್ರೆ ಲಿಂಗಾಯತ (ಪಂಚಮಸಾಲಿ ಬಣಜಿಗ)- 28,000, ಹಾಲುಮತ- 22,000, ಗಾಣಿಗ ಲಿಂಗಾಯತ-20,000, ಮುಸ್ಲಿಂ- 20,000, ಜೈನ್- 10,000, ಎಸ್ಸಿ, ಎಸ್ಟಿ- 28,000, ಮರಾಠ/ಕ್ಷತ್ರೀಯ- 15,000, ರೆಡ್ಡಿ ಲಿಂಗಾಯತ್-8,500, ಇತರೆ ಸಮುದಾಯದಲ್ಲಿ 28,000 ಮತದಾರರಿದ್ದಾರೆ. ಈ ಕ್ಷೇತ್ರದಲ್ಲಿ ಲಿಂಗಾಯತ ಮತದಾರರೇ ನಿರ್ಣಾಯಕ ಪಾತ್ರ ವಹಿಸುತ್ತಾರೆ.


    ಜಮಖಂಡಿ 2018ರ ಫಲಿತಾಂಶ ಹೀಗಿತ್ತು:
    ಕಾಂಗ್ರೆಸ್ ನಿಂದ ಸಿದ್ದು ನ್ಯಾಮಗೌಡ ಸ್ಪರ್ಧಿಸಿ 49,245 ಮತಗಳನ್ನು ಗಳಿಸಿದ್ದರು. ಇನ್ನು ಬಿಜೆಪಿಯಿಂದ ಶ್ರೀಕಾಂತ ಕುಲಕರ್ಣಿ ಸ್ಪರ್ಧಿಸಿ 46,450 ಮತಗಳನ್ನು ತಮ್ಮದಾಗಿಸಿಕೊಂಡಿದ್ದು, ಗೆಲುವಿನ ಅಂತರ- 2,795 ಆಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂದು ರಾಜ್ಯದ 5 ಕ್ಷೇತ್ರಗಳಲ್ಲಿ ‘ಮಿನಿ’ ಫೈಟ್

    ಇಂದು ರಾಜ್ಯದ 5 ಕ್ಷೇತ್ರಗಳಲ್ಲಿ ‘ಮಿನಿ’ ಫೈಟ್

    ಬೆಂಗಳೂರು: 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಕರ್ನಾಟಕದ ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಲೋಕಸಭಾ ಕ್ಷೇತ್ರಗಳಾದ ಬಳ್ಳಾರಿ, ಶಿವಮೊಗ್ಗ, ಮಂಡ್ಯ ವಿಧಾನಸಭಾ ಕ್ಷೇತ್ರಗಳಾದ ಜಮಖಂಡಿ ಮತ್ತು ರಾಮನಗರಗಳಿಗೆ ಚುನಾವಣೆ ನಡೆಯುತ್ತಿದೆ.

    ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದೆ. ಚುನಾವಣೆ ನಡೆಯಲಿರುವ ಐದು ಕ್ಷೇತ್ರಗಳಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. 5 ಕ್ಷೇತ್ರಗಳಲ್ಲಿ ಒಟ್ಟು 6,453 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು, 1502 ಸೂಕ್ಷ್ಮ ಮತಗಟ್ಟೆ, ಭದ್ರತೆಗಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ.

    ಇದೇ ಮೊದಲ ಬಾರಿಗೆ ವಿಕಲಾಂಗ ಚೇತನರಿಗೆ ಮತಗಟ್ಟೆಗೆ ಕರೆದೊಯ್ಯುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. 9,822 ಮತಯಂತ್ರಗಳ ಜೊತೆಗೆ 8,922 ವಿವಿ ಪ್ಯಾಟ್‍ಗಳ ಬಳಕೆ ಆಗಲಿದೆ. 5 ಕ್ಷೇತ್ರಗಳಲ್ಲಿ ಮಹಿಳೆಯರಿಗೆ 57 ಪಿಂಕ್ ಮತಕೇಂದ್ರ ತೆರೆಯಲಾಗಿದೆ. ಬಳ್ಳಾರಿ, ಶಿವಮೊಗ್ಗ, ಮಂಡ್ಯ, ರಾಮನಗರ, ಜಮಖಂಡಿ ಮತಗಟ್ಟೆಗಳಲ್ಲಿ ಬಿಗಿಬಂದೋಬಸ್ತ್ ಕೈಗೊಳ್ಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರಧಾನಿ ಮೋದಿ ಸುಳ್ಳು ಹೇಳಿದ್ರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ

    ಪ್ರಧಾನಿ ಮೋದಿ ಸುಳ್ಳು ಹೇಳಿದ್ರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳ್ತಾರೆ: ಮಲ್ಲಿಕಾರ್ಜುನ ಖರ್ಗೆ

    -ಕೆಲಸ ಮಾಡಿದವರಿಗೆ ವೋಟ್ ಹಾಕ್ತಿರೋ? ಸುಳ್ಳು ಹೇಳೋರಿಗೆ ಅವಕಾಶ ಕೊಡತಿರೋ?

    ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡಿದಂಗೆ ಹೇಳುತ್ತಾರೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದ್ದಾರೆ.

    ಜಮಖಂಡಿ ವಿಧಾನಸಭಾ ಕ್ಷೇತ್ರದ ಸಾವಳಗಿ ಗ್ರಾಮದಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ ಅವರು, ಉದ್ಯೋಗ ಕೊಡುತ್ತೇನೆ ಅಂತ ಹೇಳಿ, ಯುವಕರಿಗೆ ಮೋಸ ಮಾಡಿದರು. ವಿದೇಶದಲ್ಲಿರುವ ಕಪ್ಪು ಹಣ ತಂದು, ದೇಶದ ಸಾಮಾನ್ಯ ಜನತೆಯ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಹಾಕುತ್ತೇನೆ ಎಂದು ಭರವಸೆ ಕೊಟ್ಟಿದ್ದರು. ಯಾರಿಗಾದರೂ ಹಣ ಹಾಕಿದ್ದಾರಾ? ಸಾವಳಗಿ ಜನರಿಗೆ ಏನಾದರು ಕೊಟ್ಟಿದ್ದಾರಾ ಎಂದು ಪ್ರಶ್ನಿಸಿ ಲೇವಡಿ ಮಾಡಿದರು.

    ಬಿಜೆಪಿಯವರು ಸಂವಿಧಾನ ತಿದ್ದಪಡಿ ಮಾಡಬೇಕು. ತೆಗೆದುಹಾಕಬೇಕು ಅಂತಿದ್ದಾರೆ. ಅದು ಅವರಿಂದ ಸಾಧ್ಯವಿಲ್ಲ. ಬಿಜೆಪಿ ಆಡಳಿತದಿಂದಾಗಿ ದೇಶದ ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕಷ್ಟದಲ್ಲಿವೆ ಎಂದ ಅವರು, ಕಾಂಗ್ರೆಸ್ ಸ್ವಾತಂತ್ರ್ಯ ತಂದುಕೊಟ್ಟಿದೆ. ಈ ವೇಳೆ ನಮ್ಮವರು ಪ್ರಾಣತ್ಯಾಗ ಮಾಡಿದ್ದಾರೆ. ಅಷ್ಟೇ ಅಲ್ಲದೆ ಪ್ರಜಾಪ್ರಭುತ್ವ ಮತ್ತು ಸಮಾಜಕ್ಕಾಗಿ ಕಾಂಗ್ರೆಸ್ ಕೆಲಸ ಮಾಡಿದೆ. ಬಿಜೆಪಿಯವರು ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.

    ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ, ಪೆಟ್ರೋಲ್ ಬೆಲೆ ಹೆಚ್ಚಾಗುತ್ತಿದೆ. ರೈತರನ್ನು ಉದ್ಧಾರ ಮಾಡುವವರು ಎಲ್ಲಿ ಹೋದರು? ಪ್ರಧಾನಿ ಮೋದಿ ಬಗ್ಗೆ ಪ್ರಚಾರ ಮಾಡುವ ಛೇಲಾಗಳು ಎಲ್ಲಿಗೆ ಹೋದರು ಎಂದು ಬಿಜೆಪಿ ಸ್ಥಳೀಯ ನಾಯಕರ ವಿರುದ್ಧ ಕಿಡಿಕಾರಿದರು.

    ಕೆಲಸ ಮಾಡಿದವರಿಗೆ ವೋಟ್ ಹಾಕುತ್ತಿರಾ? ಅಥವಾ ಸುಳ್ಳು ಹೇಳುವವರಿಗೆ ಮತದಾನ ಮಾಡುತ್ತಿರಾ ಎಂದು ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು, ರಫೆಲ್ ಯುದ್ಧ ವಿಮಾನಗಳ ಖರೀದಿ ಹಗರಣವನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಯಲಿಗೆಳೆದರು. ಜೊತೆಗೆ ಕೇಂದ್ರ ಮಾಜಿ ಸಚಿವ ಜಶವಂತ್ ಸಿನ್ಹಾ ಸೇರಿದಂತೆ ಕೆಲ ನಾಯಕರು ಸಿಬಿಐಗೆ ದೂರು ದಾಖಲಿಸಿದರು. ಹೀಗಾಗಿ ಬಿಜೆಪಿಯವರಿಗೆ ಪುಕು.. ಪುಕು.. ಶುರುವಾಯಿತು ಎಂದು ಲೇವಡಿ ಮಾಡಿದರು.

    ರಫೆಲ್ ಯುದ್ಧ ವಿಮಾನ ಹಗರಣ ತಮ್ಮ ಬುಡಕ್ಕೆ ಬರುತ್ತದೆ ಅಂತಾ ರಾತ್ರೋ ರಾತ್ರಿ ಸಿಬಿಐ ನಿರ್ದೇಶಕರನ್ನು ತೆಗೆದು ಹಾಕಿದರು ಎಂದು ಆರೋಪಿಸಿದ ಮಲ್ಲಿಕಾರ್ಜುನ ಖರ್ಗೆ, ಗೋವುಗಳ ಚರ್ಮ ಸುಲಿಯುವ ದಲಿತರಿಗೆ ಗೋವು ಕಳ್ಳರೆಂದು ಹಲ್ಲೆ ಮಾಡಿದರು. ಆದರೂ ಪ್ರಧಾನಿ ನರೇಂದ್ರ ಮೋದಿ ಒಂದು ಮಾತು ಆಡಲಿಲ್ಲ ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ಧರಾಮಯ್ಯ ಹಲ್ಲಿಲ್ಲದ ಹಾವು: ಶೋಭಾ ಕರಂದ್ಲಾಜೆ

    ಸಿದ್ಧರಾಮಯ್ಯ ಹಲ್ಲಿಲ್ಲದ ಹಾವು: ಶೋಭಾ ಕರಂದ್ಲಾಜೆ

    ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಲಿಲ್ಲದ ಹಾವಿನಂತಾಗಿದ್ದಾರೆ, ಆದರೆ ಆ ಹಾವಿಗೆ ಯಾರೂ ಹಾಲು ಎರೆಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

    ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಮತಯಾಚನೆ ಮಾಡಿ ಮಾತನಾಡಿದ ಸಂಸದೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬೆಂಗಳೂರಲ್ಲಿ ದೋಸ್ತಿ, ಹಳ್ಳಿಯಲ್ಲಿ ಕುಸ್ತಿ ಎನ್ನುವ ಹಾಗೇ ಆಗಿದೆ. ಆದರೆ ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಪರವಾದ ವಾತಾವರಣ ಕಾಣಿಸುತ್ತಿದೆ. ಕಳೆದ ನಾಲ್ಕು ತಿಂಗಳ ಸರ್ಕಾರದ ಕುರಿತು ಜನ ಬೇಸತ್ತಿದ್ದಾರೆ ಎಂದು ಆರೋಪಿಸಿದರು.

    ಇದೇ ವೇಳೆ ಸಮ್ಮಿಶ್ರ ಸರ್ಕಾರ ಕುರಿತು ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ಕೇವಲ ಭರವಸೆಗಳನ್ನು ಮಾತ್ರ ನೀಡುತ್ತಿದ್ದು, ಯಾವುದೇ ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿ ಮಾಡಿಲ್ಲ. ಸರ್ಕಾರ ಘೋಷಿಸಿದ್ದ ಸಾಲಮನ್ನಾ ಇನ್ನೂ ರೈತರಿಗೆ ಮರಿಚಿಕೆಯಾಗಿ ಉಳಿದಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ದೇವಸ್ಥಾನ ಸುತ್ತೋದನ್ನ ಮಾಡುತ್ತಿದ್ದಾರೆ. ಎಲ್ಲವನ್ನೂ ರಾಜ್ಯದ ಜನ ಗಮಿಸುತ್ತಿದ್ದಾರೆ. ಉಪ ಚುನಾವಣೆಯ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಈ ವೇಳೇ ಬಹಿರಂಗ ಸಭೆಗೆ ಮಳೆ ಅಡ್ಡಿಪಡಿಸಿದ ಕಾರಣ ಬಿಜೆಪಿ ನಾಯಕರು ಅರ್ಧದಲ್ಲಿಯೇ ಸಭೆ ಮುಕ್ತಾಯಗೊಳಿಸಿ ತೆರಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇನ್ನಾದರೂ ಭ್ರಮೆಯಿಂದ ಹೊರಬನ್ನಿ- ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

    ಇನ್ನಾದರೂ ಭ್ರಮೆಯಿಂದ ಹೊರಬನ್ನಿ- ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

    ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬಂದಂತೆ ಕಾಣುತ್ತಿಲ್ಲ, ಮಾನ್ಯ ಬಿಎಸ್‍ವೈ ಅವರೇ ಇನ್ನಾದರೂ ಭ್ರಮೆಯಿಂದ ಹೊರಬನ್ನಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಟಾಂಗ್ ನೀಡಿದ್ದಾರೆ.

    ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಬಿ.ಎಸ್ ಯಡಿಯೂರಪ್ಪ ಅವರು ಇನ್ನೂ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಹೊರಬಂದಂತೆ ಕಾಣುತ್ತಿಲ್ಲ. ಮೂರು ಹೊತ್ತು ಸರ್ಕಾರ ಬೀಳುತ್ತೆ ಎಂದು ಸುಳ್ಳು ಹೇಳುತ್ತಾ ತಮಗೆ ತಾವೇ ಸಂತೈಸಿಕೊಳ್ಳುತ್ತಿದ್ದಾರೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದ್ದು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಮಾನ್ಯ ಬಿಎಸ್‍ವೈ ಅವರೇ ಅವರೇ ಇನ್ನಾದರೂ ಭ್ರಮೆಯಿಂದ ಹೊರಬನ್ನಿ ಎಂದು ಬರೆದುಕೊಂಡಿದ್ದಾರೆ.

    ಮಂಗಳವಾರ ದೋಸ್ತಿ ಸರ್ಕಾರದಲ್ಲಿ ಏರುಪೇರಾಗುತ್ತದೆ ಹೇಳಿಕೆ ನೀಡಿದ್ದ ಯಡಿಯೂರಪ್ಪ ಅವರು ಇಂದು ನಾನು ಅಂತಹ ಹೇಳಿಕೆ ನೀಡಿಲ್ಲ ಎಂದು ಹೇಳುವ ಮೂಲಕ ಯೂ ಟರ್ನ್ ಮಾಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನು ಓದಿ: ಬಳ್ಳಾರಿ, ಶಿವಮೊಗ್ಗ ಈಗಲೇ ಗೆದ್ದಿದ್ದೇವೆ, ಮಂಡ್ಯ ಫಲಿತಾಂಶಕ್ಕಾಗಿ ಮೋದಿ ಕಾಯ್ತಿದ್ದಾರೆ : ಬಿಎಸ್‍ವೈ

    ಇದಕ್ಕೂ ಮುನ್ನ ಬಾಗಲಕೋಟೆಯ ಜಮಕಂಡಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಸಿದ್ದುನ್ಯಾಮಗೌಡ ಅವರು ಇಂದು ಸಚಿವ ಇದ್ದಿದ್ದರೆ ಮಂತ್ರಿ ಆಗುತ್ತಿದ್ದರು, ಆದರೆ ಅದು ಸಾಧ್ಯವಾಗಿಲ್ಲ. ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ ಈ ಚುನಾವಣೆಯಲ್ಲಿ ಆನಂದ್ ನ್ಯಾಮಗೌಡ ಅವರಿಗೆ ಮತ ನೀಡಿ. ಈ ಮೂಲಕ ನ್ಯಾಮಗೌಡ ಅವರ ಪತ್ನಿಯ ದು:ಖ ಕಡಿಮೆ ಮಾಡಿ. ನಾನು 4 ದಿನಗಳ ಕಾಲ ಇಲ್ಲಿ ಪ್ರಚಾರ ನಡೆಸುತ್ತೇನೆ ಎಂದು ತಿಳಿಸಿದರು. ಇದನ್ನು ಓದಿ: ಅಲ್ಲೋಲ ಕಲ್ಲೋಲ ಠುಸ್ ಪಟಾಕಿ: ಯೂ ಟರ್ನ್ ಹೊಡೆದ ಬಿಎಸ್‍ವೈ