Tag: ಜಮ್ಮು ಮತ್ತು ಕಾಶ್ಮೀರ

  • ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ರಿಯಾಸಿ ಭಯೋತ್ಪಾದಕ ದಾಳಿ – ಉಗ್ರರ ಮೇಲೆ ಹದ್ದಿನ ಕಣ್ಣು, ರಜೌರಿಯ ಹಲವೆಡೆ NIA ರೇಡ್‌

    ಶ್ರೀನಗರ: ಕಳೆದ ಮೂರು ವಾರಗಳ ಹಿಂದೆಯಷ್ಟೇ ರಿಯಾಸಿ ಭಯೋತ್ಪಾದಕ ದಾಳಿಗೆ (Reasi Terror Attack) ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಾನುವಾರ (ಇಂದು) ಜಮ್ಮು ಮತ್ತು ಕಾಶ್ಮೀರದ ರಜೌರಿ (Rajouri) ಜಿಲ್ಲೆಯ ಅನೇಕ ಕಡೆದ ದಾಳಿ ನಡೆಸಿದೆ.

    ಇದೇ ತಿಂಗಳ ಜೂನ್‌ 9ರಂದು ರಿಯಾಸಿ ಜಿಲ್ಲೆಯ ಪೌನಿ ಪ್ರದೇಶದಲ್ಲಿ ಭಯೋತ್ಪಾದಕರು ಶಿವ ಖೋರಿ ಗುಹಾಂತರ ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್‌ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ ಬಸ್‌ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದರು 33 ಮಂದಿ ಗಾಯಗೊಂಡಿದ್ದರು. ಆದ್ರೆ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಎನ್‌ಐಎ ಜೂನ್‌ 15ರಂದು ಪ್ರಕರಣ ಕೈಗೆತ್ತಿಕೊಂಡಿದ್ದ ರಾಷ್ಟ್ರೀಯ ತನಿಖಾ ಸಂಸ್ಥೆ ಭಾನುವಾರ ಹಲವೆಡೆ ದಾಳಿ ನಡೆಸಿದೆ.

    ರಿಯಾಸಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಜೂನ್ 19 ರಂದು ಬಂಧಿಸಲಾದ ಶಂಕಿತ ಉಗ್ರ ಹಕಮ್ ಖಾನ್ ಅಕಾ ಹಕಿನ್ ದಿನ್ ನೀಡಿದ ಸುಳಿವು ಆಧರಿಸಿ ರಾಜೌರಿಯಲ್ಲಿ ದಾಳಿ ನಡೆಸಲಾಗಿದೆ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಿಯಾಸಿ ಬಸ್‌ ಮೇಲೆ ದಾಳಿ – ಉಗ್ರರಿಗೆ ಸಹಕಾರ ನೀಡಿದ್ದ ಓರ್ವ ವ್ಯಕ್ತಿ ಅರೆಸ್ಟ್‌

    ಪ್ರಾಥಮಿಕ ಮಾಹಿತಿ ಪ್ರಕಾರ ಬಂಧಿತನು ಭಯೋತ್ಪಾದಕರಿಗೆ ವ್ಯವಸ್ಥಿತವಾಗಿ ಬೆಂಬಲ ನೀಡುತ್ತಿದ್ದ ಜೊತೆಗೆ ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದ. ಉಗ್ರರ ದಾಳಿಗೆ ನೆರವಾಗುವ ಸ್ಥಳಗಳ ಬಗ್ಗೆಯೂ ಮಾಹಿತಿ ನೀಡಿದ್ದ, ಅನ್ನೋದು ತಿಳಿದುಬಂದಿದೆ ಎಂದು ರಿಯಾಸಿಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಮೋಹಿತಾ ಶರ್ಮಾ ಹೇಳಿದ್ದಾರೆ.

    ಅಲ್ಲದೇ ವಿಚಾರಣೆ ವೇಳೆ ತನ್ನ ಮನೆಯಲ್ಲಿ ಮೂವರು ಉಗ್ರರು ತಂಗಿದ್ದರು. ಅದಕ್ಕಾಗಿ ತನಗೆ 6,000 ರೂ. ನೀಡಿದ್ದರು ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ವಿಶ್ವಕಪ್‌ ಜೊತೆಗೆ ಕೋಟ್ಯಂತರ ಭಾರತೀಯರ ಹೃದಯ ಗೆದ್ದಿದ್ದೀರಿ: ಟೀಂ ಇಂಡಿಯಾಕ್ಕೆ ಮೋದಿ ಅಭಿನಂದನೆ

  • Photos Gallery: ಯೋಗ ದಿನಾಚರಣೆ ವೇಳೆ ಕಾಶ್ಮೀರಿ ಮಹಿಳೆಯರೊಂದಿಗೆ ಮೋದಿ ಸೆಲ್ಫಿ!

    Photos Gallery: ಯೋಗ ದಿನಾಚರಣೆ ವೇಳೆ ಕಾಶ್ಮೀರಿ ಮಹಿಳೆಯರೊಂದಿಗೆ ಮೋದಿ ಸೆಲ್ಫಿ!

    10ನೇ ಅಂತಾರಾಷ್ಟ್ರೀಯ ಯೋಗ ದಿನದ (International Yoga Day 2024) ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು. ಬಳಿಕ ಅಲ್ಲಿನ ಅಲ್ಲಿನ ಜನರೊಂದಿಗೆ ಸರಳ ಸಂವಾದ ನಡೆಸಿ, ವಿಶೇಷತೆಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಜನರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟಿದ್ದಾರೆ. ಈ ಫೋಟೋಗಳನ್ನು ಮೋದಿ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹಾಗಾದ್ರೆ ದಾಲ್‌ ಸರೋವರ ತೀರದಲ್ಲಿ ಕಂಡ ಅದ್ಭುತ ಕ್ಷಣಗಳು ಹೇಗಿತ್ತು ಎಂಬುದನ್ನು ಫೋಟೋ ನೋಡಿ ಕಣ್ತುಂಬಿಕೊಳ್ಳಿ….

  • `ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ – ದಾಲ್‌ ಸರೋವರ ತೀರದಲ್ಲಿ ನಮೋ ಯೋಗ!

    `ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ – ದಾಲ್‌ ಸರೋವರ ತೀರದಲ್ಲಿ ನಮೋ ಯೋಗ!

    ಶ್ರೀನಗರ: 10ನೇ ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ‌ಜಮ್ಮು ಮತ್ತು ಕಾಶ್ಮೀರದ ದಾಲ್‌ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.

    ಈ ಬಾರಿ 10ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ. ಇದನ್ನೂ ಓದಿ: International Yoga Day: ‘ಯೋಗ’ವೆಂಬ ಗಿನ್ನಿಸ್‌ ರೆಕಾರ್ಡ್‌ – ಯಾವ ವರ್ಷ, ಎಲ್ಲಿ ದಾಖಲೆಯಾಗಿತ್ತು?

    3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಜಮ್ಮು‌ ಮತ್ತು‌ ಕಾಶ್ಮೀರಕ್ಕೆ ಭೇಟಿ ನೀಡಿದ್ದ ಮೋದಿ ಅವರು, ಶ್ರೀನಗರದ ದಾಲ್‌ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಯೋಗ ಪ್ರದರ್ಶನ ನೀಡಿದರು. ಇದರೊಂದಿಗೆ ಸರಿಸುಮಾರು 7 ಸಾವಿರ ಮಂದಿ ಪಾಲ್ಗೊಂಡು ವಿಶ್ವಕ್ಕೆ ಆರೋಗ್ಯ ಜಾಗೃತಿಯ ಸಂದೇಶ ಸಾರಿದರು. ಇದನ್ನೂ ಓದಿ: ವಿಧಾನಸೌಧದ ಎದುರು ಡಿಕೆಶಿ ಯೋಗ – ನಟಿ ಅನು ಪ್ರಭಾಕರ್‌, ಕ್ರಿಕೆಟಿಗ ಮನಿಷ್‌ ಪಾಂಡೆ ಸಾಥ್‌

    ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿತ್ತು. ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕ್ಯಾಪ್ಚರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.

    ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳಲ್ಲೂ ವರ್ಚುವಲ್ ವೇದಿಕೆಯನ್ನು ಕಲ್ಪಿಸಲಾಗಿತ್ತು. ವರ್ಚುವಲ್‌ನಲ್ಲೂ‌ ಪ್ರತಿ ಜಿಲ್ಲೆಯಿಂದು ಸುಮಾರು ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ಯೋಗ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಇದನ್ನೂ ಓದಿ: 

  • ನಮೋ ಜಮ್ಮು-ಕಾಶ್ಮೀರ ಪ್ರವಾಸ ಇಂದಿನಿಂದ ಆರಂಭ – ಬಿಗಿ ಭದ್ರತೆ ನಿಯೋಜನೆ

    ನಮೋ ಜಮ್ಮು-ಕಾಶ್ಮೀರ ಪ್ರವಾಸ ಇಂದಿನಿಂದ ಆರಂಭ – ಬಿಗಿ ಭದ್ರತೆ ನಿಯೋಜನೆ

    – ಶುಕ್ರವಾರ ದಾಲ್‌ ಸರೋವರ ತೀರದಲ್ಲಿ ಮೋದಿ ಯೋಗ ಪ್ರದರ್ಶನ

    ಶ್ರೀನಗರ: ಪ್ರಧಾನಿ ಮೋದಿ (Narendra Modi) ಅವರ 2 ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಇಂದು (ಗುರುವಾರ) ಆರಂಭವಾಗಲಿದೆ. 3ನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಮೋದಿ ಅವರ ಮೊದಲ ಭೇಟಿಯೂ ಇದಾಗಿದೆ.

    ಶ್ರೀನಗರದಲ್ಲಿ (Srinagar) ಜೂನ್‌ 21ರಂದು (ಶುಕ್ರವಾರ) ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮೋದಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವ್ಯಾಪಕ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಹಂತಗಳಲ್ಲಿ ಭದ್ರತೆ ನಿಯೋಜಿಸಲಾಗಿದೆ. ಇದನ್ನೂ ಓದಿ: ವಿಶ್ವ ಆರೋಗ್ಯಕ್ಕಾಗಿ ಯೋಗ – ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗʼ

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲೆ ಪ್ರಮಾಣದ ಮತದಾನವಾಗಿದ್ದು, ಪ್ರಧಾನಿ ಅವರ ಈ ಭೇಟಿಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಹಿನ್ನೆಲೆಯಲ್ಲಿ ಶಿಷ್ಟಾಚಾರದ ಪ್ರಕಾರ, ಹಲವು ಹಂತಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೂಗೊಳ್ಳಲಾಗಿದೆ ಎಂದು ಕಾಶ್ಮೀರ ವಲಯದ ಐಜಿಪಿ ವಿಧಿ ಕುಮಾರ್ ಬರ್ಡಿ ತಿಳಿಸಿದ್ದಾರೆ.

    ಭದ್ರತಾ ಕ್ರಮದ ಭಾಗವಾಗಿ ಶ್ರೀನಗರದಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದ್ದು, ಡ್ರೋನ್ (Drone) ಮತ್ತು ಕ್ವಾಡ್‌ಕಾಪ್ಟರ್‌ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಡ್ರೋನ್ ನಿಯಮಗಳು 2021ರ ನಿಬಂಧನೆಗಳ ಪ್ರಕಾರ ನಿಯಮ ಉಲ್ಲಂಘಿಸಿದವರಿಗೆ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಎಂಎಸ್‌ಪಿ ಹೆಚ್ಚಿಸಿದ ಕೇಂದ್ರ – ಇಲ್ಲಿದೆ ನೋಡಿ ದರ ಪಟ್ಟಿ..

    ದಾಲ್‌ ಸರೋವರದ ತೀರದಲ್ಲಿ ಯೋಗ:
    10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಈ ಬಾರಿ ಪ್ರಧಾನಿ ಮೋದಿ ಅವರು ಯೋಗ ದಿನವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಆಚರಿಸಲಿದ್ದಾರೆ. ಶ್ರೀನಗರದ ದಾಲ್‌ ಸರೋವರದ (Darl Lake) ತೀರದಲ್ಲಿನ ಶೇರ್-ಐ-ಕಾಶ್ಮೀರ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ 9,000 ಮಂದಿ ಯೋಗ ಪ್ರದರ್ಶನ ನೀಡಲಿದ್ದಾರೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.

    ಈ ವೇಳೆ ಜಮ್ಮು ಮತ್ತು ಕಾಶ್ಮೀರದ ಎಲ್ಲ 20 ಜಿಲ್ಲೆಗಳನ್ನು ವರ್ಚುವಲ್ ಆಗಿ ಸಂಪರ್ಕಿಸುವ ಯೋಜನೆ ಇದೆ ಪ್ರತಿ ಜಿಲ್ಲೆಯಿಂದ 2,000 ಜನರು ಸಂಪರ್ಕ ಸಾಧಿಸಿದರೂ, ಕಾರ್ಯಕ್ರಮದಲ್ಲಿ ಸುಮಾರು 50,000 ಭಾಗವಹಿಸಿದಂತಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ. ಇದನ್ನೂ ಓದಿ: ರಾಮಾಯಣ ನಾಟಕ ಪ್ರದರ್ಶಿಸಿದ್ದಕ್ಕೆ ವಿದ್ಯಾರ್ಥಿಗಳಿಗೆ 1.02 ಲಕ್ಷ ದಂಡ ವಿಧಿಸಿದ ಬಾಂಬೆ ಐಐಟಿ

    ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ:
    ಈ ಬಾರಿಯ 10ನೇ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್‌ (ವಸ್ತು ವಿಷಯ) ʻಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ (Yoga for Self and Society) ಎಂದಾಗಿದೆ. ಜೂನ್‌ 21 ರಂದು ಪ್ರಧಾನಿ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಈ ವಿಶೇಷ ದಿನವನ್ನು ಆಚರಣೆ ಮಾಡಲಿದ್ದಾರೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನ್ನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.

  • ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕ್‌ ಕೈವಾಡ – ರಹಸ್ಯ ಬಯಲು!

    ಜಮ್ಮು-ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಹಿಂದೆ ಪಾಕ್‌ ಕೈವಾಡ – ರಹಸ್ಯ ಬಯಲು!

    – ಪೂಂಚ್, ರಜೌರಿಯಲ್ಲೂ ಉಗ್ರರ ದಾಳಿಗೆ ಪಾಕ್‌ ಸಂಚು – ಗುಪ್ತಚರ ಇಲಾಖೆ ಮಾಹಿತಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಕಥುವಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿ (IB) ಬಳಿ ಹಳ್ಳಿಯೊಂದರಲ್ಲಿ ಇತ್ತೀಚೆಗೆ ನಡೆದ ಎನ್‌ಕೌಂಟರ್‌ನಲ್ಲಿ (Kathua Encounter) ಭದ್ರತಾಪಡೆಗಳು ಹತ್ಯೆಗೈದ ಇಬ್ಬರು ಭಯೋತ್ಪಾದಕರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್‌ ಎಂದು ಮೂಲಗಳಿಂದ ತಿಳಿದುಬಂದಿದೆ.

    ಮೂಲಗಳ ಪ್ರಕಾರ, ಹತ್ಯೆಗೀಡಾದ ಇಬ್ಬರಲ್ಲಿ ಓರ್ವ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆಯ ಕಮಾಂಡರ್ ರಿಹಾನ್ ಎಂದು ಗುರುತಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯ ಹಿಂದೆ ಪಾಕ್‌ (Pakistan) ಕೈವಾಡವಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ದೆಹಲಿಯ ಯಮುನಾ ಬಳಿಯ ಪ್ರಾಚೀನ ಶಿವಮಂದಿರ ಕೆಡವಲು ನೀಡಿದ ಆದೇಶ ಎತ್ತಿಹಿಡಿದ ಸುಪ್ರೀಂ

    ಹತ್ಯೆಗೀಡಾದ ರಿಹಾನ್‌, ಉಪಗ್ರಹ ಸಂವಹನ ಸಾಧನ‌ (ಸ್ಯಾಟಲೈಟ್‌ ಫೋನ್‌) ಹಾಗೂ ಅತ್ಯಾಧುನಿಕ M4 ರೈಫಲ್‌ ಅನ್ನು ಹೊತ್ತೊಯ್ಯುತ್ತಿದ್ದ. ಪಾಕಿಸ್ತಾನ ಸೇನೆ, ನೌಕಾಪಡೆ ಹಾಗೂ ವಾಯುಸೇನೆಗಾಗಿ ಈ ಮೈಕ್ರೋ ಸ್ಯಾಟಲೈಟ್‌ ಫೋನ್‌ ಅನ್ನು ಖರೀದಿಸಲಾಗಿತ್ತು ಎಂದು ಉನ್ನ ಮೂಲಗಳಿಂದ ತಿಳಿದುಬಂದಿದೆ.

    ಈ ಉಗ್ರರ ಹತ್ಯೆ ನಡೆಯುವುದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ವೇಳೆ ಭಯೋತ್ಪಾದಕ ದಾಳಿ ನಡೆದಿತ್ತು. ಬಸ್‌ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ ಪರಿಣಾಮ ಬಸ್‌ ಕಮರಿಗೆ ಉರುಳಿ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಹತರಾಗಿದ್ದರು. ಇದಾದ ಬಳಿಕ ದೋಡಾ ಜಿಲ್ಲೆಯಲ್ಲಿ 4 ಭಯೋತ್ಪಾದಕ ದಾಳಿ ನಡೆದಿತ್ತು. ಉಗ್ರರು ಮತ್ತು ಸೇನೆ ನಡುವಿನ ಗುಂಡಿನ ಚಕಮಕಿಯಲ್ಲಿ ಸಿಆರ್‌ಪಿಎಫ್‌ ಯೋಧ ಮತ್ತು ಇಬ್ಬರು ಭಯೋತ್ಪಾದಕರು ಸೇರಿ 11 ಮಂದಿ ಹತರಾಗಿದ್ದರು.

    ಉಗ್ರರ ಮಹತ್ವದ ಸಭೆ:
    ಜೂನ್‌ 9ರಂದು ರಿಯಾಸಿಯಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜೈಶ್‌ ಎ ಮೊಹಮ್ಮದ್‌ ಮತ್ತು ಹಿಜ್ಬ್‌-ಉಲ್‌ ಮುಜಾಹಿದ್ದೀನ್‌ ಭಯೋತ್ಪಾದಕ ಸಂಘಟನೆಗಳು ಪಾಕಿಸ್ತಾನದ ರಾವಲಕೋಟ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದವು. ಈ ವೇಳೆ ಭಾರತದ ಮೇಲಿನ ದಾಳಿಗೆ ಯೋಜಿಸಿದ್ದವು ಎಂದು ತಿಳಿದುಬಂದಿದೆ.

    ಇದೀಗ ಕಳೆದ 2 ವರ್ಷಗಳಿಂದ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿರುವ ಪೂಂಚ್ ಮತ್ತು ರಜೌರಿ ಜಿಲ್ಲೆಗಳಲ್ಲಿ ಭಯೋತ್ಪಾದಕ ದಾಳಿ ನಡೆಸಲು ಪ್ಲ್ಯಾನ್‌ ಮಾಡಿರುವ ಬಗ್ಗೆ ಗುಪ್ತಚರ ಇಲಾಖೆ ವರದಿ ನೀಡಿದ್ದು, ಭದ್ರತಾ ಪಡೆಗಳು ಹದ್ದಿನಕಣ್ಣಿಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದುರಹಂಕಾರಿಗಳಾಗಿ ಬದಲಾಗಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ: ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ಮುಖಂಡ ವಾಗ್ದಾಳಿ

  • ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    ಪುಲ್ವಾಮಾದಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ – ಸಿಕ್ಕಿಬಿದ್ದ ಲಷ್ಕರ್‌ ಟಾಪ್‌ ಕಮಾಂಡರ್ಸ್‌

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ (Security Forces) ನಡೆದ ಗುಂಡಿನ ಚಕಮಕಿಯಲ್ಲಿ (Gunfight) ಪಾಕಿಸ್ತಾನ ಮೂಲದ ಇಬ್ಬರು ಉಗ್ರರು ಸಿಕ್ಕಿಬಿದ್ದಿದ್ದಾರೆ.

    ಭಾರತೀಯ ಸೇನೆಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಉಪಶಾಖೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಇಬ್ಬರು ಟಾಪ್‌ ಕಮಾಂಡರ್‌ಗಳು (Lashkar Commander), ಮನೆಯೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು

    ಪುಲ್ವಾಮಾದ (Pulwama) ನೆಹಮಾ ಪ್ರದೇಶದಲ್ಲಿ ಭಯೋತ್ಪಾದಕರು ಮನೆಯೊಂದರಲ್ಲಿ ಅಡಗಿದ್ದಾರೆ ಎಂಬುದರ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು, ಗುಂಡಿನ ದಾಳಿ ನಡೆಸಿದ್ದವು. ಈ ವೇಳೆ ಪಾಕ್‌ ಮೂಲದ ಉಗ್ರರರಿಂದಲೂ ಪ್ರತಿದಾಳಿ ನಡೆದಿದ್ದು, ಕೊನೆಗೆ ಮನೆಯೊಂದರಲ್ಲಿ ಅಡಗಿದ್ದ ಉಗ್ರರು ಸೇನಾ ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾರೆ.

    ಭಯೋತ್ಪಾದಕರಾದ ರಯೀಸ್ ಅಹ್ಮದ್ ಮತ್ತು ರಿಯಾಜ್ ಅಹ್ಮದ್ ದಾರ್ ಇಬ್ಬರೂ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ನಿವಾಸಿಗಳು ಎಂದು ಸೇನೆ ಖಚಿತಪಡಿಸಿದೆ. ಇದನ್ನೂ ಓದಿ:  Election Results – ಟ್ರೆಂಡ್‌ ಬೇಗನೇ ಗೊತ್ತಾದ್ರೂ ತಡವಾಗಲಿದೆ ಅಧಿಕೃತ ಫಲಿತಾಂಶ

    ಈ ಕುರಿತು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ವಲಯದ ಪೊಲೀಸರು, ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ಎನ್‌ಕೌಂಟರ್‌ ಪ್ರಾರಂಭವಾಗಿದೆ. ಪೊಲೀಸರು ಹಾಗೂ ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆಯಲ್ಲಿವೆ. ಈವರೆಗೆ ಸಾವು ನೋವುಗಳಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕಳೆದ ಮೇ 7ರಂದು ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರಯಾ ಪಡೆದಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದರು. ಇದನ್ನೂ ಓದಿ: ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ

  • ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್‌

    ಭಾರತೀಯ ಸೈನಿಕರ ಮೇಲೆ ದಾಳಿ – ಮೂವರು ಪಾಕಿಸ್ತಾನಿ ಉಗ್ರರ ಫೋಟೋ ರಿಲೀಸ್‌

    ಶ್ರೀನಗರ: ಇತ್ತೀಚೆಗೆ ಪೂಂಚ್‌ನಲ್ಲಿ (Poonch Attack) ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಗೆ ಹೊಣೆಗಾರರಾಗಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಫೋಟೋಗಳನ್ನು ಭಾರತೀಯ ವಾಯುಪಡೆಯ (IAF) ಅಧಿಕಾರಿಗಳು ಹಂಚಿಕೊಂಡಿದ್ದಾರೆ.

    ಸಿಸಿಟಿವಿಯಲ್ಲಿ ಸೆರೆಯಾದ ಭಯೋತ್ಪಾದಕರ (Terrorists) ಚಿತ್ರಗಳನ್ನು ಭದ್ರತಾ ಪಡೆ ಹಂಚಿಕೊಂಡಿದೆ. ಸಿಸಿಟಿವಿ ದೃಶ್ಯಾವಳಿಯಲ್ಲಿ (CCTV Footage) ಮೂವರು ಭಯೋತ್ಪಾದಕರು ಆಕ್ರಮಣಕಾರಿ ರೈಫಲ್‌ಗಳನ್ನು ಹಿಡಿದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಯುಎಸ್‌ ನಿರ್ಮಿತ M4 ಮತ್ತು ರಷ್ಯಾ ನಿರ್ಮಿತ AK-47 ರೈಫಲ್‌ಗಳನ್ನು ಹಿಡಿದೊಯ್ಯುತ್ತಿರುವುದು ಕಂಡುಬಂದಿದೆ. ಅಲ್ಲದೇ ಇದು ಈ ವರ್ಷದಲ್ಲಿ ಮಿಲಿಟರಿಯನ್ನು ಗುರಿಯಾಗಿಸಿ ನಡೆಸಿದ ಪ್ರಮುಖ ದಾಳಿಯೂ ಆಗಿದೆ. ಕಳೆದ ವರ್ಷ ಸೈನಿಕರನ್ನ ಗುರಿಯಾಗಿಸಿ ಪ್ರಮುಖ ದಾಳಿಗಳು ನಡೆದಿದ್ದವು ಎಂದು ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾದ ಮೂವರು ಪಾಕಿಸ್ತಾನದ ಉಗ್ರರು ಎಂದು ಅಧಿಕಾರಿಗಳು ಹೇಳಿದ್ದಾರೆ. ಪಾಕ್ ಸೇನೆಯ ಮಾಜಿ ಕಮಾಂಡೊ ಇಲಿಯಾಸ್, ಲಷ್ಕರ್ ಕಮಾಂಡರ್ ಅಬು ಹಮ್ಜಾ ಮತ್ತು ಹಾಡೂನ್ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಹಮ್ಜಾ 30-32 ವರ್ಷ ವಯಸ್ಸಿನವನು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಅಂದಾಜಿಸಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಭಾರತದಲ್ಲಿ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಧಿಸಿದರೆ ಅಂಬಾನಿ, ಅದಾನಿಯಂಥ ಶ್ರೀಮಂತರು ದುಬೈಗೆ ಹೋಗ್ತಾರೆ: ಆರ್ಥಶಾಸ್ತ್ರಜ್ಞ

    ಕಳೆದ ವಾರವಷ್ಟೇ ಪೂಂಚ್‌ನ ಶಾಸಿತಾರ್ ಬಳಿ ಐಎಎಫ್ ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಐಎಎಫ್ ಕಾರ್ಪೋರಲ್ ವಿಕ್ಕಿ ಪಹಾಡೆ ಪ್ರಾಣ ಕಳೆದುಕೊಂಡಿದ್ದರು. ಅಲ್ಲದೇ ಘಟನೆಯಲ್ಲಿ ನಾಲ್ವರು ಸೈನಿಕರು ಗಾಯಗೊಂಡಿದ್ದರು. ದಾಳಿಯ ಬಳಿಕ ಶಾಸಿತಾರ್ ಪ್ರದೇಶದಲ್ಲಿ ಸಶಸ್ತ್ರ ಪಡೆಗಳು ಮಹತ್ವದ ಶೋಧಕಾರ್ಯ ನಡೆಸಿದವು. ಈ ಸಂಬಂಧ ತನಿಖೆ ನಡೆಸುತ್ತಿದ್ದ ಭದ್ರತಾಪಡೆಯ ಅಧಿಕಾರಿಗಳು ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರ ರೇಖಾಚಿತ್ರಗಳನ್ನೂ ಬಹಿರಂಗಪಡಿಸಿದ್ದರು. ಶಂಕಿತ ಉಗ್ರರ ಬಂಧನಕ್ಕೆ ನೆರವಾಗುವ ಯಾವುದೇ ಮಾಹಿತಿ ನೀಡಿದವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಭದ್ರತಾ ಪಡೆ ಘೋಷಿಸಿತ್ತು.

  • ಕಾಶ್ಮೀರದಲ್ಲಿ ಸೇನೆಯಿಂದ ಎನ್‍ಕೌಂಟರ್ – ಇಬ್ಬರು ಉಗ್ರರು ಬಲಿ

    ಕಾಶ್ಮೀರದಲ್ಲಿ ಸೇನೆಯಿಂದ ಎನ್‍ಕೌಂಟರ್ – ಇಬ್ಬರು ಉಗ್ರರು ಬಲಿ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕುಲ್ಗಾಮ್‍ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಭದ್ರತಾ ಪಡೆಗಳು (Security Forces) ನಡೆಸಿದ ಎನ್‍ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಉಗ್ರರ ಶವವನ್ನು ವಶಪಡಿಸಿಕೊಳ್ಳಲಾಗಿದ್ದು, ಅವರ ಗುರುತು ಇನ್ನೂ ಪ್ತತೆಯಾಗಿಲ್ಲ. ಮೃತ ಉಗ್ರರ ಗುರುತು ಪತ್ತೆಹಚ್ಚುವ ಕಾರ್ಯನಡೆಯುತ್ತಿದೆ. ಅಲ್ಲದೇ ಉಗ್ರರ ಅಡಗುದಾಣದಲ್ಲಿ ಸೇನೆ ಕಾರ್ಯಾಚರಣೆ ಮುಂದುವರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸೈನಿಕರ ಮೇಲೆ ದಾಳಿ – ಇಬ್ಬರು ಪಾಕ್ ಉಗ್ರರ ತಲೆಗೆ 20 ಲಕ್ಷ ಬಹುಮಾನ ಘೋಷಿಸಿದ IAF

    ಮೇ 4 ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‍ನಲ್ಲಿ ಭಾರತೀಯ ವಾಯುಪಡೆಯ (Indian Air Force) ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಓರ್ವ ಯೋಧ ಸಾವನ್ನಪ್ಪಿ, ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದರು. ಇದಾದ ಬಳಿಕ ಈ ಭಾಗಗಳಲ್ಲಿ ಸೇನೆ, ಉಗ್ರರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಲಾಗಿತ್ತು.

    ಎನ್‍ಕೌಂಟರ್‌ನಲ್ಲಿ ಹತರಾದ ಉಗ್ರರು, ವಾಯುಪಡೆಯ ವಾಹನದ ಮೇಲೆ ದಾಳಿ ನಡೆಸಿದವರೇ ಎಂಬ ಅಧಿಕೃತ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ವಾಯುಸೇನೆಯ ವಾಹನದ ಮೇಲೆ ಉಗ್ರರ ದಾಳಿ – ಹಲವರನ್ನು ವಶಕ್ಕೆ ಪಡೆದ ಸೇನೆ

  • ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ- ಫಾರೂಖ್ ಅಬ್ದುಲ್ಲ ವಿವಾದಾತ್ಮಕ ಹೇಳಿಕೆ

    ಪಾಕಿಸ್ತಾನ ಕೈಗೆ ಬಳೆ ತೊಟ್ಟಿಲ್ಲ- ಫಾರೂಖ್ ಅಬ್ದುಲ್ಲ ವಿವಾದಾತ್ಮಕ ಹೇಳಿಕೆ

    ಶ್ರೀನಗರ: ಪಾಕಿಸ್ತಾನ ಕೈಗೆ ಬಳೆ ತೊಟ್ಟಿಕೊಂಡಿಲ್ಲ. ಭಾರತದ ವಿರುದ್ಧ ಬಳಸಬಹುದಾದ ಪರಮಾಣು ಶಸ್ತ್ರಾಸ್ತ್ರಗಳನ್ನು ಪಾಕಿಸ್ತಾನ (Pakistan) ಹೊಂದಿದೆ ಎಂದು ಹೇಳುವ ಮೂಲಕ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ (Farooq Abdullah)  ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಪಾಕ್ ಆಕ್ರಮಿತ ಕಾಶ್ಮೀರವನ್ನು (POK) ಭಾರತದೊಂದಿಗೆ ವಿಲೀನಗೊಳಿಸುವ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajanath Singh) ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಇದೀಗ ಫಾರೂಕ್‌ ಅಬ್ದುಲ್ಲಾ ವಿವಾದಕ್ಕೀಡಾಗಿದ್ದಾರೆ. ರಕ್ಷಣಾ ಸಚಿವರು ಹೇಳುತ್ತಿದ್ದರೆ, ಮುಂದುವರಿಯಿರಿ, ನಾವು ತಡೆಯಲು ಯಾರು? ಆದರೆ ನೆನಪಿಡಿ, ಪಾಕಿಸ್ತಾನ ಬಳೆಗಳನ್ನು ಧರಿಸಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್‍ಗೆ ಮಧ್ಯಂತರ ಜಾಮೀನು

    ರಾಜನಾಥ್ ಸಿಂಗ್ ಹೇಳಿದ್ದೇನು?:‌  ಪಿಓಕೆ ವಶಪಡಿಸಿಕೊಳ್ಳಲು ಸೇನಾ ಬಲ ಪ್ರಯೋಗಿಸುವ ಅಗತ್ಯವಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿರುವ ಅಭಿವೃದ್ಧಿಗಳನ್ನು ಕಂಡು ಅಲ್ಲಿನ ಜನರೇ ಭಾರತದ ಭಾಗವಾಗಲು ಬಯಸುತ್ತಾರೆ. ನನ್ನ ಪ್ರಕಾರ, ಭಾರತ ಏನೂ ಮಾಡುವುದು ಬೇಕಿಲ್ಲ ಎಂದು ಸಂದರ್ಶನವೊಂದರಲ್ಲಿ ರಾಜನಾಥ್ ಸಿಂಗ್ ಹೇಳಿದ್ದರು.

    ಅಲ್ಲದೇ ಜಮ್ಮು ಮತ್ತು ಕಾಶ್ಮೀರದ ಆರ್ಥಿಕ ಪ್ರಗತಿ ಹಾಗೂ ಶಾಂತಿ ಮರಳಿರುವ ರೀತಿಯನ್ನು ಕಂಡಾಗ ಭಾರತದ ಜೊತೆ ವಿಲೀನಗೊಳ್ಳಬೇಕು ಎಂದು ಪಿಒಕೆ ಜನರೇ ಡಿಮಾಂಡ್‌ ಮಾಡುತ್ತಾರೆ. ಅಲ್ಲದೇ ನಾವು ಭಾರತದೊಂದಿಗೆ ಸೇರಬೇಕು ಎಂದು ಸ್ವತಃ ಜನರೇ ಹೇಳುವುದರಿಂದ ನಾವು ಪಿಒಕೆಯನ್ನು ವಶಪಡಿಸಿಕೊಳ್ಳಲು ಬಲ ಪ್ರಯೋಗಿಸುವ ಅಗತ್ಯ ಬರಲ್ಲ. POK ಹಿಂದೆ, ಈಗ ಮತ್ತು ಎಂದೆಂದಿಗೂ ನಮ್ಮದೇ ಎಂದು ಪುನರುಚ್ಚರಿಸಿದ್ದರು.

  • ಜಮ್ಮು, ಕಾಶ್ಮೀರದಲ್ಲಿ ಪ್ರವಾಹ- ಐವರ ದುರ್ಮರಣ

    ಜಮ್ಮು, ಕಾಶ್ಮೀರದಲ್ಲಿ ಪ್ರವಾಹ- ಐವರ ದುರ್ಮರಣ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu And Kashmir) ಸುರಿಯುತ್ತಿರುವ ಭಾರೀ ಮಳೆಯಿಂದ (Rain) ಭೂಕುಸಿತ (Jammu And Kashmir) ಮತ್ತು ಪ್ರವಾಹದಿಂದಾಗಿ (Flood) ಐವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ದೋಡಾ, ರಿಯಾಸಿ, ಕಿಶ್ತ್ವಾರ್, ರಾಂಬನ್ ಮತ್ತು ಬಾರಾಮುಲ್ಲಾ ಸೇರಿದಂತೆ ಹಲವಾರು ಗುಡ್ಡಗಾಡು ಭಾಗಗಳಲ್ಲಿ ಭಾರೀ ಮಳೆ ಮತ್ತು ಭೂಕುಸಿತ ಸಂಭವಿಸಿದೆ. ಅಲ್ಲದೇ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಇದರ ನಡುವೆ ಜನರ ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ

    ಭೂಕುಸಿತದವಾದ ಪ್ರದೇಶಗಳಿಂದ ಜನರನ್ನು ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಜನರ ಜೀವಗಳನ್ನು ಉಳಿಸುವುದು ನಮ್ಮ ಆದ್ಯತೆಯಾಗಿದೆ. ಈ ಭಾಗದಲ್ಲಿ ಆದ ನಷ್ಟದ ಬಗ್ಗೆ ನಾವು ಸೂಕ್ತ ನಿರ್ಣಯ ಕೈಗೊಂಡಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರವಾಹದಿಂದ ಕುಪ್ವಾರಾ ಜಿಲ್ಲೆಯಲ್ಲಿ ಶುಮ್ರಿಯಾಲ್ ಸೇತುವೆ, ಖುಮ್ರಿಯಾಲ್ ಸೇತುವೆ, ಶತ್ಮುಕಮ್ ಸೇತುವೆ, ಸೋಹಿಪೋರಾ-ಹಯ್ಹಮಾ ಸೇತುವೆ, ಫಕ್ರ್ಯಾನ್ ಸೇತುವೆ, ಕುಪ್ವಾರದಲ್ಲಿರುವ ಎರಡು ಗ್ರಾಮೀಣಾಭಿವೃದ್ಧಿ ಇಲಾಖೆ ಕಟ್ಟಡಗಳು ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳು ಹಾಗೂ ಮನೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಛತ್ತೀಸ್‍ಗಢದಲ್ಲಿ ಎನ್‍ಕೌಂಟರ್ – ಇಬ್ಬರು ಮಹಿಳೆಯರು ಸೇರಿ 7 ಮಂದಿ ನಕ್ಸಲರ ಹತ್ಯೆ