Tag: ಜಮ್ಮು ಮತ್ತು ಕಾಶ್ಮೀರ

  • Viral Video | ಜಮ್ಮು-ಕಾಶ್ಮೀರದಲ್ಲಿ ಉಗ್ರರು ಸೇನೆ ನಡುವೆ ಗುಂಡಿನ ಚಕಮಕಿ – ರಕ್ಷಣೆಗಾಗಿ ಓಡಿದ ಭಯೋತ್ಪಾದಕ!

    Viral Video | ಜಮ್ಮು-ಕಾಶ್ಮೀರದಲ್ಲಿ ಉಗ್ರರು ಸೇನೆ ನಡುವೆ ಗುಂಡಿನ ಚಕಮಕಿ – ರಕ್ಷಣೆಗಾಗಿ ಓಡಿದ ಭಯೋತ್ಪಾದಕ!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಬಾರಾಮುಲ್ಲಾದಲ್ಲಿ (Baramulla) ಭದ್ರತಾ ಪಡೆಗಳು ಬಂಧಿಸಿದ್ದ ಭಯೋತ್ಪಾದಕ ತನ್ನ ಆಕ್ರಮಣಕಾರಿ ರೈಫಲ್‌ನಿಂದ ಗುಂಡು ಹಾರಿಸಿ, ಕಟ್ಟದಿಂದ ಎಸ್ಕೇಪ್‌ ಆದ ಆಗಿರುವ ಡ್ರೋನ್‌ ವೀಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ (Socail Media) ಸದ್ದು ಮಾಡುತ್ತಿದೆ.

    ಬಾರಾಮುಲ್ಲಾದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿರುವುದಾಗಿ ಸೇನಾಧಿಕಾರಿಗಳು ತಿಳಿಸಿದ್ದು, ಇದು ಗಮನಾರ್ಹ ಯಶಸ್ಸು ಎಂದೇ ಬಣ್ಣಿಸಿದ್ದಾರೆ.ಇದನ್ನೂ ಓದಿ: ಮಂಗಳೂರಿನ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ಕಲ್ಲು ತೂರಾಟ!

    ಇನ್ನೂ ಈ ಬಗ್ಗೆ ಸೇನೆಯ ಸೆಕ್ಟರ್-10 ರಾಷ್ಟ್ರೀಯ ರೈಫಲ್ಸ್ ಬ್ರಿಗೇಡಿಯರ್ (Rashtriya Rifles Brigadier) ಸಂಜಯ್ ಕನ್ನೋತ್ ಮಾತನಾಡಿ, ಬಾರಾಮುಲ್ಲಾದ ಚಕ್ ಟಪ್ಪರ್ ಕ್ರೀರಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

    ಡ್ರೋನ್‌ ವೀಡಿಯೋ ವೈರಲ್‌:
    ಜಾಲತಾಣದಲ್ಲಿ ಸದ್ದು ಮಾಡುತ್ತಿರುವ ಡ್ರೋನ್‌ ವೀಡಿಯೋದಲ್ಲಿ ಭಯೋತ್ಪಾದಕನು ಕಟ್ಟಡವೊಂದರಿಂದ ಹೊರನುಸುಳಿ ಅಲ್ಲಿಂದ ಹತ್ತಿರದಲ್ಲಿರುವ ಮರಗಳ ಕಡೆಗೆ ತಲುಪುತ್ತಾನೆ. ಆಗ ಗುಂಡಿನ ಚಕಮಕಿ ಶುರುವಾಗಿದ್ದು, ಸ್ಪಷ್ಟವಾಗಿ ಸೆರೆಯಾಗಿದೆ. ಈ ವೇಳೆ ಸೈನಿಕರು ಹಾರಿಸಿದ ಗುಂಡುಗಳು ಕಾಂಕ್ರೀಟ್‌ ಗೋಡೆಗಳಿಗೆ ತಾಕಿ ಧೂಳು ಆವರಿಸುತ್ತದೆ. ಈ ಸಮಯದಲ್ಲಿ ಮತ್ತಷ್ಟು ಗುಂಡಿನ ಚಕಮಕಿ ನಡೆದು, ಮೂವರು ಭಯೋತ್ಪಾದರನ್ನು ಸೇನೆ ಹೊಡೆದುರುಳಿಸುತ್ತದೆ.

    ಇತ್ತೀಚೆಗೆ ಕುಪ್ವಾರದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ (Encounter) ಇಬ್ಬರು ಸೇನಾ ಯೋಧರು ಹುತಾತ್ಮರಾಗಿದ್ದರು.ಇದನ್ನೂ ಓದಿ: Mandya | ನಾಗಮಂಗಲದಲ್ಲಿ ಖಾಕಿ ಹೈ ಅಲರ್ಟ್ – ಈದ್ ಮಿಲಾದ್ ಹಿನ್ನೆಲೆ ಪೊಲೀಸ್ ಸರ್ಪಗಾವಲು

    ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಡುವೆ ಭಯೋತ್ಪಾದನಾ ಚಟುವಟಿಕೆಗಳು ಮತ್ತಷ್ಟು ಹೆಚ್ಚಾಗಿವೆ.

  • ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

    ಹಿರಿಯ ಅಧಿಕಾರಿ ವಿರುದ್ಧ IAF ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾಧಿಕಾರಿಯಿಂದ ಅತ್ಯಾಚಾರ ಆರೋಪ – ಕೇಸ್‌ ದಾಖಲು

    – ಸಂಭೋಗಕ್ಕೆ ಒತ್ತಾಯಿಸುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖ

    ಶ್ರೀನಗರ: ಕೋಲ್ಕತ್ತಾದಲ್ಲಿ (Kolkata) ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಟ್ರೈನಿ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ದೇಶಾದ್ಯಂತ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಇದೀಗ ಭಾರತೀಯ ವಾಯುಪಡೆಯಲ್ಲೂ ಅಧಿಕಾರಿಯೊಬ್ಬರ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಿದೆ.

    ಭಾರತೀಯ ವಾಯುಪಡೆಯ ಫ್ಲೈಯಿಂಗ್‌ ಸ್ಕ್ವಾಡ್‌ ಮಹಿಳಾ ಅಧಿಕಾರಿಯೊಬ್ಬರು (IAF Officer) ವಿಂಗ್‌ ಕಮಾಂಡರ್‌ ಮೇಲೆ ಅತ್ಯಾಚಾರ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ ಪೊಲೀಸ್‌ (udgam Police) ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಇಬ್ಬರೂ ಅಧಿಕಾರಿಗಳು ಶ್ರೀನಗರದಲ್ಲಿ (Srinagar) ನೆಲೆಸಿದ್ದಾರೆ. ಇದನ್ನೂ ಓದಿ: Haryana Poll | ಬಿಜೆಪಿಯಿಂದ 21 ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್‌ – ವಿನೇಶ್‌ ವಿರುದ್ಧ ಪ್ರಬಲ ಅಭ್ಯರ್ಥಿ ಅಖಾಡಕ್ಕೆ

    ಪ್ರಕರಣ ದಾಖಲಾಗುತ್ತಿದ್ದಂತೆ ಸ್ಥಳೀಯ ಬುಡ್ಗಾಮ್ ಠಾಣೆಯ ಪೊಲೀಸರು ವಾಯುಪಡೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ವಾಯುಪಡೆಯ ಅಧಿಕಾರಿಗಳು ಸಹ ಅಧಿಕಾರಿಗಳ ವಿಚಾರಣೆಗೆ ಸಹಕಾರ ನೀಡಿರುವುದಾಗಿ ವರದಿಯಾಗಿದೆ. ಕಳೆದ 2 ವರ್ಷಗಳಿಂದ ಕಿರುಕುಳ, ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇನೆ ಎಂದು ಫ್ಲೈಯಿಂಗ್‌ ಸ್ಕ್ವಾಡ್‌ನ ಮಹಿಳಾ ಅಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆ ನಿಲ್ಲಿಸಿ, ದುರ್ಗಾಪೂಜೆಗೆ ಗಮನ ಹರಿಸಿ – ದೀದಿ ಹೇಳಿಕೆಗೆ ಮೃತ ಟ್ರೈನಿ ವೈದ್ಯೆಯ ತಾಯಿ ಆಕ್ರೋಶ

    ದೂರಿನಲ್ಲಿ ಏನಿದೆ?
    2023ರ ಡಿಸೆಂಬರ್‌ 31ರ ಮಧ್ಯರಾತ್ರಿ ಹೊಸ ವರ್ಷದ ಪಾರ್ಟಿ ವೇಳೆ ವಿಂಗ್‌ ಕಮಾಂಡರ್‌ ತನಗೆ ಉಡುಗೊರೆ ನೀಡುವುದಾಗಿ ತನ್ನ ಕೋಣೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಹಿಳೆ ನಿಮ್ಮ ಕುಟುಂಬ ಎಲ್ಲಿದೆ ಎಂದು ಕೇಳಿದಾಗ, ಪುರುಷ ಅಧಿಕಾರಿ ಅವರು ಬೇರೆಡೆ ನೆಲೆಸಿದ್ದಾರೆ ಎಂದು ಹೇಳಿದ್ದರು. ಆ ದಿನ ರಾತ್ರಿ ತನ್ನೊಂದಿಗೆ ಸಂಭೋಕ್ಕೆ ಒತ್ತಾಯಿಸಿ, ಕಿರುಕುಳ ನೀಡಿದರು. ನಾನೂ ಇದು ಸರಿಯಿಲ್ಲ ಎಂದು ಪದೇ ಪದೇ ಹೇಳಿದೆ. ಸಾಧ್ಯವಾದಷ್ಟು ವಿರೋಧಿಸಲು ಪ್ರಯತ್ನಿಸಿದೆ, ಆದ್ರೆ ಅವರು ನನ್ನ ಮಾತು ಕೇಳದೇ ಮೇಲೆರಗಲು ಬಂದರು. ಆಗ ನಾನು ಅವರನ್ನು ತಳ್ಳಿ ಅಲ್ಲಿಂದ ಓಡಿ ಹೋದೆ. ಇದಾದ ನಂತರ ಅವರ ಕುಟುಂಬದೊಂದಿಗೆ ಮತ್ತೆ ಭೇಟಿಯಾಗೋಣ ಎಂದು ಕೇಳಿದ್ದರು. ಇದೇ ರೀತಿ ಅನೇಕ ಸಂದರ್ಭಗಳಲ್ಲಿ ಕಿರುಕುಳ ನೀಡುತ್ತಿದ್ದರು.

    ಆತನಿಂದ ನನ್ನ ಮಾನಸಿಕ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರಿದೆ. ನಿರಂತರ ಭಯದಲ್ಲಿ ಬದುಕುತ್ತಿದ್ದೇನೆ. ಹಲವು ಬಾರಿ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಯೋಚಿಸಿದ್ದೆ. ಇದರಿಂದ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಬಹಳ ಸಮಯದಿಂದ ಈ ಚಿತ್ರಹಿಂದೆ ಸಹಿಸಿಕೊಂಡಿದ್ದೇನೆ. ಕೊನೆಗೆ ವಿಧಿಯಿಲ್ಲದೇ ದೂರು ನೀಡಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೇ ತಮ್ಮ ವಿರುದ್ಧ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅನೇಕ ಸಂರ್ಭಗಳನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅಭಿವೃದ್ಧಿ ವಿಷಯದಲ್ಲಿ ಸಂಘರ್ಷ ಬೇಡ – ಸಚಿವ ಎಂ.ಬಿ ಪಾಟೀಲ್‌ಗೆ ಕೇಂದ್ರ ಸಚಿವ ಹೆಚ್‌ಡಿಕೆ HD ಕುಮಾರಸ್ವಾಮಿ ಭರವಸೆ

  • ಭಯೋತ್ಪಾದನೆಗೆ ಪ್ರಾಯೋಜಕತ್ವ ನಿಲ್ಲಿಸಿದ್ರೆ ಪಾಕ್‌ ಜೊತೆ ಮಾತುಕತೆಗೆ ಭಾರತ ಸಿದ್ಧ: ರಾಜನಾಥ್‌ ಸಿಂಗ್‌

    ಭಯೋತ್ಪಾದನೆಗೆ ಪ್ರಾಯೋಜಕತ್ವ ನಿಲ್ಲಿಸಿದ್ರೆ ಪಾಕ್‌ ಜೊತೆ ಮಾತುಕತೆಗೆ ಭಾರತ ಸಿದ್ಧ: ರಾಜನಾಥ್‌ ಸಿಂಗ್‌

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಯೋತ್ಪಾದನೆಗೆ ಪ್ರಾಯೋಜಕತ್ವ ನಿಲ್ಲಿಸಿದ್ರೆ ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸಲು ಭಾರತ ಸಿದ್ಧವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಹೇಳಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ (J&K Poll) ಹಿನ್ನೆಲೆ ಇಲ್ಲಿನ ರಾಂಬನ್‌ ಜಿಲ್ಲೆಯಲ್ಲಿ ನಡೆದ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡಿದರು. ಇದೇ ವೇಳೆ ರಾಂಬನ್‌ ಜಿಲ್ಲೆಯ ಬನಿಹಾಲ್‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ (BJP Candidate) ಮೊಹಮ್ಮದ್‌ ಸಲೀಂ ಭಟ್‌ ಪರ ಮತಯಾಚನೆ ನಡೆಸಿದರು. ಇದನ್ನೂ ಓದಿ: ಭಾರತದಿಂದ ಶೇಖ್ ಹಸೀನಾ ಗಡಿಪಾರಿಗೆ ಅಗತ್ಯ ಕ್ರಮ: ಬಾಂಗ್ಲಾ ಎಚ್ಚರಿಕೆ

    ನಾವು ಯಾವುದೇ ಸಂದರ್ಭದಲ್ಲೂ ಭಯೋತ್ಪಾದಕ ಚಟುವಟಿಕೆಗಳನ್ನು ಭಾರತ ಒಪ್ಪಿಕೊಳ್ಳುವುದಿಲ್ಲ. ಕೆಲವರು ಪಾಕಿಸ್ತಾನದೊಂದಿಗೆ ಮಾತುಕತೆಯ ಬಗ್ಗೆ ಮಾತನಾಡುತ್ತಾರೆ. ನಾನು ಹೇಳುತ್ತೇನೆ, ಪಾಕಿಸ್ತಾನ ಒಂದು ಕೆಲಸ ಮಾಡಬೇಕು, ಭಯೋತ್ಪಾದನೆಯನ್ನು ಆಶ್ರಯಿಸುವುದನ್ನು ನಿಲ್ಲಿಸಬೇಕು. ನೆರೆಯ ರಾಷ್ಟ್ರದೊಂದಿಗೆ ಸಂಬಂಧವನ್ನು ಸುಧಾರಿಸಲು ಯಾರೂ ಬಯಸುವುದಿಲ್ಲ. ಏಕೆಂದರೆ ಅದರ ವಾಸ್ತವತೆ ನನಗೆ ತಿಳಿದಿದೆ. ನಾವು ಪಾಕಿಸ್ತಾನದೊಂದಿಗೆ ಸುಧಾರಿತ ಸಂಬಂಧ ಬಯಸುತ್ತೇವೆ. ಆದ್ರೆ ಅದಕ್ಕೂ ಮುನ್ನ ಅವರು ಭಯೋತ್ಪಾದನೆ ನಿಲ್ಲಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ ಅಮೆರಿಕ ಪ್ರವಾಸ – ಏರ್‌ಪೋರ್ಟ್‌ನಲ್ಲಿ ಸ್ವಾಗತಿಸಿದ ಸ್ಯಾಮ್‌ ಪಿತ್ರೋಡಾ

    ಭಯೋತ್ಪಾದಕರಿಂದ ಕೊಲ್ಲಲ್ಪಟ್ಟ ಶೇ.85 ಜನ ಮುಸ್ಲಿಮರೇ ಆಗಿದ್ದಾರೆ. ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹಾಗೂ ದಾಳಿಗಳು ವಾಡಿಕೆಯಂತೆಯೇ ನಡೆಯುತ್ತಿದ್ದವು. ಇಂತಹ ಘಟನೆಗಳಲ್ಲಿ ಅತ್ಯಧಿಕ ಸಂಖ್ಯೆಯ ಮುಸ್ಲಿಮರು ಪ್ರಾಣ ಕಳೆದುಕೊಂಡಿದಾರೆ ಎಂಬುದು ನನಗೆ ಗೊತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

    ಪಾಕಿಸ್ತಾನದಲ್ಲಿ ಆಮೂಲಾಗ್ರ ಅಂಶಗಳ ಸಾಮಾನ್ಯೀಕರಣವು ಇಸ್ಲಾಮಾಬಾದ್‌ನ ರಾಜ್ಯ ನೀತಿಯ ಒಂದು ಭಾಗವಾಗಿದೆ. 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಬೆಂಬಲಿತ ರಾಜಕೀಯ ಪಕ್ಷವೂ ಪಾಕಿಸ್ತಾನದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿತ್ತು. ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕ ಹಫೀಜ್ ಸಯೀದ್, ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಸ್ಥಾಪಕ. ಆದ್ರೆ ಪಾಕಿಸ್ತಾನವನ್ನು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಗ್ರೇ ಲಿಸ್ಟ್‌ಗೆ ಸೇರಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಮುಖ ಭಯೋತ್ಪಾದಕ ದಾಳಿಗಳು ಕಡಿಮೆಯಾಗಿವೆ ಎಂದು ಸಿಂಗ್‌ ಹೇಳಿದ್ದಾರೆ.

    ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: 3 ವರ್ಷದ ಹಿಂದೆ ಸಾವಾಗಿ ಅಸ್ಥಿಪಂಜರ ಸಿಕ್ಕ ವ್ಯಕ್ತಿಯ ಪ್ರಕರಣಕ್ಕೆ ಟ್ವಿಸ್ಟ್ – ಈಗ ಕೊಲೆ ಆರೋಪ 

  • ಜಮ್ಮು ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು: ಉಗ್ರರ ದಾಳಿಯಾಗಿರುವ ಶಂಕೆ

    ಜಮ್ಮು ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು: ಉಗ್ರರ ದಾಳಿಯಾಗಿರುವ ಶಂಕೆ

    ಶ್ರೀನಗರ: ಜಮ್ಮುವಿನ (Jammu) ಸುಂಜ್ವಾನ್ ಸೇನಾ ಶಿಬಿರದಲ್ಲಿ (Sunjwan Military Base) ಯೋಧರೊಬ್ಬರು ನಿಗೂಢವಾಗಿ ಸಾವನ್ನಪ್ಪಿದ್ದು, ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಶಂಕೆ ವ್ಯಕ್ತವಾಗಿದೆ.

    ಸೋಮವಾರ ಈ ಘಟನೆ ನಡೆದಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಆ ದಿನ ಬೆಳಗ್ಗೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮಿಲಿಟರಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಸಿಎಂ ಪತ್ನಿಗೆ 50:50 ಅನುಪಾತದಲ್ಲಿ ಸೈಟ್ ಕೊಟ್ಟಿದ್ದು ತಪ್ಪು – ಅಧಿಕೃತವಾಗಿ ಒಪ್ಪಿಕೊಂಡ ಸರ್ಕಾರ

    ಇದು ಉಗ್ರರ ದಾಳಿ ಇರಬಹುದು ಎಂದು ಭಾರತೀಯ ಸೇನೆ ಶಂಕಿಸಿದೆ. ಹೀಗಾಗಿ, ಸೇನೆ ಹಾಗೂ ಪೊಲೀಸ್ ತಂಡದಿಂದ ಶೋಧ ಕಾರ್ಯಾಚರಣೆವನ್ನು ಪ್ರಾರಂಭಿಸಿದ್ದಾರೆ. ಜೊತೆಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು ನಿಯೋಜಿಸಲಾಗಿದೆ.

    ಉಗ್ರಗಾಮಿಗಳು ಸೈನಿಕನ ಮೇಲೆ ಗುರಿಯಿಡಲು ಸ್ನೈಪರ್‌ ಬಂದೂಕನ್ನು ಬಳಸಿದ್ದು, ನಂತರ ಘಟನಾ ಸ್ಥಳದಿಂದ ಪಲಾಯನ ಮಾಡಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ಶಂಕಿಸಿದ್ದಾರೆ. ದಿನವಿಡೀ ಶೋಧಕಾರ್ಯ ಮುಂದುವರೆದಿದ್ದು, ರಕ್ಷಣಾ ಮೂಲಗಳ ಪ್ರಕಾರ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ಯಾವುದೇ ಶಂಕಿತ ಉಗ್ರಗಾಮಿಗಳ ಚಲನವಲನಗಳು ಪತ್ತೆಯಾಗಿಲ್ಲ ಎಂದು ತಿಳಿಸಿವೆ.ಇದನ್ನೂ ಓದಿ: ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶವೇ ಸರ್ಕಾರಕ್ಕೆ ಸುಸೈಡ್ ನೋಟ್: ಶಾಸಕ ಶ್ರೀವತ್ಸ

    ಸದ್ಯ ಶೋಧಕಾರ್ಯ ಮುಂದುವರೆದಿದ್ದು, ಉಗ್ರಗಾಮಿಗಳ ಯಾವುದೇ ಸುಳಿವು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

  • Haryana Polls Dates | ಹರಿಯಾಣ ಚುನಾವಣೆ ದಿನಾಂಕ ಬದಲು – ಅಕ್ಟೋಬರ್‌ 5ಕ್ಕೆ ಮತದಾನ

    Haryana Polls Dates | ಹರಿಯಾಣ ಚುನಾವಣೆ ದಿನಾಂಕ ಬದಲು – ಅಕ್ಟೋಬರ್‌ 5ಕ್ಕೆ ಮತದಾನ

    – ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವೂ ಬದಲು

    ನವದೆಹಲಿ: ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ (Bishnoi community) ದೀರ್ಘಕಾಲದ ಸಂಪ್ರದಾಯವನ್ನು ಪರಿಗಣಿಸಿ ಭಾರತೀಯ ಚುನಾವಣಾ ಆಯೋಗವು (ECI) ಹರಿಯಾಣ ಹಾಗೂ ವಿಧಾನಸಭಾ ಚುನಾವಣೆಗಳ ದಿನಾಂಕದಲ್ಲಿ ಬದಲಾವಣೆ ಘೋಷಿಸಿದೆ.

    ಮುಂದಿನ ಅಕ್ಟೋಬರ್‌ 1 ರಂದು ನಡೆಯಬೇಕಿದ್ದ ಹದಿಯಾಣ ವಿಧಾನಸಭಾ ಚುನಾವಣಾ (Haryana Assembly polls) ದಿನಾಂಕವನ್ನು ಅಕ್ಟೋಬರ್‌ 5ಕ್ಕೆ ನಿಗದಿಪಡಿಸಿದೆ. ಇನ್ನೂ ಜಮ್ಮು ಮತ್ತು ಕಾಶ್ಮೀರ (Jammu and Kashmir) ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ದಿನಾಂಕವನ್ನು ಅಕ್ಟೋಬರ್‌ 4ರ ಬದಲಿಗೆ ಅಕ್ಟೋಬರ್‌ 8ಕ್ಕೆ ಪರಿಷ್ಕರಿಸಿದೆ. ಇದನ್ನೂ ಓದಿ: ರೋಟಿ-ಸಬ್ಜಿಯಿಂದ ತೃಪ್ತಿಯಾಗ್ತಿಲ್ಲ, ಮೊಟ್ಟೆ ಊಟ ಕೊಡಿ; ಕೋಲ್ಕತ್ತಾ ವೈದ್ಯೆ ರೇಪ್‌ ಆರೋಪಿ ಡಿಮ್ಯಾಂಡ್‌

    ಈ ಮೂಲಕ ಚುನಾವಣಾ ಆಯೋಗವು ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮವಾಸ್ಯೆ ಹಬ್ಬ ಆಚರಿಸುವ ಬಿಷ್ಣೋಯ್ ಸಮುದಾಯದ ದೀರ್ಘಕಾಲದ ಸಂಪ್ರದಾಯವನ್ನು ಎತ್ತಿ ಹಿಡಿದಿದೆ. ಇದನ್ನೂ ಓದಿ: ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್‌ – ಕೋರಮಂಗಲ ಪೊಲೀಸರಿಂದ ಆರೋಪಿ ವಿರುದ್ಧ 1,200 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಪಂಜಾಬ್, ರಾಜಸ್ಥಾನ ಮತ್ತು ಹರಿಯಾಣದ ಹಲವಾರು ಕುಟುಂಬಗಳು ತಮ್ಮ ಗುರು ಜಾಂಬೇಶ್ವರನ ಸ್ಮರಣಾರ್ಥ ಅಸೋಜ್ ಅಮವಾಸ್ಯೆ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಹರಿಯಾಣದ ಬಿಷ್ಣೋಯ್ ಸಮುದಾಯದ ಜನ ರಾಜಸ್ಥಾನಕ್ಕೆ ಸಾಮೂಹಿಕವಾಗಿ ತೆರಳಲಿದ್ದಾರೆ. ಅಕ್ಟೋಬರ್‌ 2ರಂದು ಹಬ್ಬ ಇರುವುದರಿಂದ ಸಿರ್ಸಾ, ಫತೇಹಾಬಾದ್ ಮತ್ತು ಹಿಸಾರ್‌ನಲ್ಲಿ ವಾಸಿಸುವ ಸಾವಿರಾರು ಬಿಷ್ಣೋಯಿ ಕುಟುಂಬಗಳು ಅಕ್ಟೋಬರ್‌ 1ರಂದು (ನಿಗದಿಪಡಿಸಿದ್ದ ಮತದಾನದ ದಿನ) ರಾಜಸ್ಥಾನಕ್ಕೆ ಪ್ರಯಾಣಿಸಲಿವೆ.

    ಅಲ್ಲದೇ ಅದು ಶತಮಾನಗಳ ಸಂಪ್ರದಾಯ ಹಬ್ಬವಾಗಿರುವುದರಿಂದ ಅವರು ಮತದಾನವನ್ನೂ ನಿರಾಕರಿಸಲು ಮುಂದಾಗಿದ್ದಾರೆ. ಇದರಿಂದ ಮತದಾರರ ಭಾಗವಹಿಸುವಿಕೆಯನ್ನು ಕಡಿಮೆ ಮಾಡಬಹುದು. ಹಾಗಾಗಿ ಸಮುದಾಯಗಳ ಭಾವನೆ ಗೌರವಿಸುವ ಉದ್ದೇಶದಿಂದ ಚುನಾವಣಾ ಆಯೋಗ ಚುನಾವಣಾ ದಿನಾಂಕ ಬದಲಾವಣೆ ಮಾಡಿದೆ ಎಂದು ಆಯೋಗ ತಿಳಿಸಿದೆ. ಇದನ್ನೂ ಓದಿ: Paris Paralympics 2024 | ಭಾರತಕ್ಕೆ ಮತ್ತೊಂದು ಪದಕ – ಕಂಚಿಗೆ ರುಬಿನಾ ಶೂಟ್‌

  • J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

    J&K Election | ಇಂಡಿಯಾ ಒಕ್ಕೂಟದ ಸೀಟು ಹಂಚಿಕೆ ಒಪ್ಪಂದ ಸುಖಾಂತ್ಯ – ಎನ್‌ಸಿ 51, ಕಾಂಗ್ರೆಸ್‌ 32 ಸ್ಥಾನಗಳಲ್ಲಿ ಸ್ಪರ್ಧೆ

    ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ (Jammu And Kashmir Assembly Poll) ಕಾಂಗ್ರೆಸ್‌ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನಡುವಿನ ಸೀಟು ಹಂಚಿಕೆಯ ಹಗ್ಗಜಗ್ಗಾಟ ಅಂತ್ಯಕಂಡಿದೆ. 90 ಸ್ಥಾನಗಳ ಪೈಕಿ 51 ಕ್ಷೇತ್ರಗಳಲ್ಲಿ ನ್ಯಾಷನಲ್‌ ಕಾನ್ಫರೆನ್ಸ್‌ (National Conference) ಸ್ಪರ್ಧಿಸಲಿದ್ದು, ಕಾಂಗ್ರೆಸ್‌ 32 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿವೆ. ಪಕ್ಷಗಳ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಅಧಿಕೃತವಾಗಿ ಹೇಳಿದ್ದಾರೆ.

    ಸೀಟು ಹಂಚಿಕೆ ಒಪ್ಪಂದ ಪ್ರಕಟಿಸುವಾಗ, ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ (Congress) ಮುಖ್ಯಸ್ಥ ತಾರಿಕ್ ಹಮೀದ್ ಕರ್ರಾ, ಮೈತ್ರಿಕೂಟವು ಕೇಂದ್ರಾಡಳಿತ ಪ್ರದೇಶದ 5 ಸ್ಥಾನಗಳಲ್ಲಿ ಸೌಹಾರ್ದಯುತ ಮತ್ತು ಶಿಸ್ತಿನ ಸ್ಪರ್ಧೆ ಹೊಂದಿರುತ್ತದೆ ಎಂದು ಹೇಳಿದ್ದಾರೆ.

    ನ್ಯಾಶನಲ್ ಕಾನ್ಫರೆನ್ಸ್ 51 ಸ್ಥಾನಗಳಲ್ಲಿ, ಕಾಂಗ್ರೆಸ್ 32 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಪ್ಯಾಂಥರ್ಸ್ ಪಾರ್ಟಿಗೆ ತಲಾ 1 ಸ್ಥಾನ ನಿಯೋಜಿಸಿದೆ.

    ವಿಪಕ್ಷಗಳ ವಿರುದ್ಧ ವಾಗ್ದಾಳಿ:
    ಇನ್ನೂ ಸೀಟು ಹಂಚಿಕೆ ಘೋಷಣೆ ಬಳಿಕ ಕಾಂಗ್ರೆಸ್‌ & ಎನ್‌ಸಿ ನಾಯಕರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಶಕ್ತಿಗಳ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಒಟ್ಟಾಗಿ ಹೋರಾಡಲಿವೆ. ಅದಕ್ಕಾಗಿ ಈ ಅಭಿಯಾನವನ್ನು ಆರಂಭಿಸಿದ್ದೇವೆ. ಕೋಮುವಾದ ಬಯಸುವ ಶಕ್ತಿಗಳನ್ನು ಬಗ್ಗು ಬಡಿಯಲು ಈ ಒಕ್ಕೂಟ ರಚಿಸಿದ್ದೇವೆ ಎಂದು ಗುಡುಗಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟದ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಾಲ್, ಬಿಜೆಪಿಯು ಜಮ್ಮು ಮತ್ತು ಕಾಶ್ಮೀರದ ಆತ್ಮವನ್ನೇ ನಾಶಮಾಡಲು ಪ್ರಯತ್ನಿಸುತ್ತಿದೆ. ಆದ್ರೆ ನಮ್ಮ ಸರ್ಕಾರ ಜನಸ್ನೇಹಿಯಾಗಿರಲಿದೆ. ಒಗ್ಗಟ್ಟಿನಿಂದ ಹೋರಾಡಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

    ದಶಕಗಳ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆ ಇದಾಗಿದೆ. ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಸೆ.18, 25, ಹಾಗೂ ಅ.1 ರಂದು ಮೂರು ಹಂತಗಳಲ್ಲಿ ನಡೆಯಲಿದೆ ಮತ್ತು ಅ.4 ರಂದು ಮತ ಎಣಿಕೆ ನಡೆಯಲಿದೆ.

  • ಜಮ್ಮು-ಕಾಶ್ಮೀರದ ಸೋಪೂರ್‌ನಲ್ಲಿ ಎನ್‌ಕೌಂಟರ್ – ಉಗ್ರರ ಒಳನುಸುಳುವಿಕೆ ತಡೆಯಲು ಕೇಂದ್ರ ಮಾಸ್ಟರ್‌ ಪ್ಲ್ಯಾನ್‌!

    ಜಮ್ಮು-ಕಾಶ್ಮೀರದ ಸೋಪೂರ್‌ನಲ್ಲಿ ಎನ್‌ಕೌಂಟರ್ – ಉಗ್ರರ ಒಳನುಸುಳುವಿಕೆ ತಡೆಯಲು ಕೇಂದ್ರ ಮಾಸ್ಟರ್‌ ಪ್ಲ್ಯಾನ್‌!

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೋಪೋರ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶನಿವಾರ ಗುಂಡಿನ ಚಕಮಕಿ (Sopore Encounter) ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

    ಘಟನೆ ನಂತರ ಎಚ್ಚೆತ್ತ ಭದ್ರತಾ ಸಿಬ್ಬಂದಿ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸಿದರು. ತಕ್ಷಣವೇ ಪಡೆಗಳು ಸೋಪೋರ್‌ನ ವಾಟರ್‌ಗಾಮ್ ಪ್ರದೇಶವನ್ನು ಸುತ್ತುವರಿದು ಉಗ್ರರನ್ನು ಬೇಟೆಯಾಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಅಸ್ಸಾಂ ಲೈಂಗಿಕ ದೌರ್ಜನ್ಯ ಆರೋಪಿ ಪೊಲೀಸರಿಂದ ಎಸ್ಕೇಪ್ ವೇಳೆ ಕೆರೆಗೆ ಬಿದ್ದು ಸಾವು

    ಕಳೆದ ಐದು ದಿನಗಳ ಹಿಂದೆಯಷ್ಟೇ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. ದಾಳಿಯಲ್ಲಿ ಸಿಆರ್‌ಪಿಎಫ್‌ನ 187 ಬೆಟಾಲಿಯನ್‌ನ ಇನ್ಸ್‌ಪೆಕ್ಟರ್ ಕುಲದೀಪ್ ಕುಮಾರ್ ಗುಂಡೇಟಿನಿಂದ ಗಾಯಗೊಂಡರು. ಇದನ್ನೂ ಓದಿ: ಪೋಲೆಂಡ್, ಉಕ್ರೇನ್ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್

    J&K ನಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳ:
    ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಇತ್ತೀಚೆಗೆ ದೋಡಾದ ಎನ್‌ಕೌಂಟರ್‌ನಲ್ಲಿ ಸೇನಾಧಿಕಾರಿ ಕ್ಯಾಪ್ಟನ್‌ ದೀಪಕ್‌ ಸಿಂಗ್‌ ಸಾವನ್ನಪ್ಪಿದ್ದರು, ಇದಕ್ಕೂ ಮುನ್ನ ಶಿವಗಢ-ಅಸ್ಸಾರ್‌ ಪ್ರದೇಶದ ಕಾರ್ಯಾಚರಣೆ ವೇಳೆ ಅರಣ್ಯ ಪ್ರದೇಶ ಭಾಗದಲ್ಲಿ ಅಧಿಕಾರಿಯೊಬ್ಬರಿಗೆ ಗುಂಡೇಟು ತಗುಲಿತ್ತು.

    ಹಾಗಾಗಿಯೇ ಈ ತಿಂಗಳ ಆರಂಭದಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಹ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದರು. ದೆಹಲಿಯ ಸೌತ್ ಬ್ಲಾಕ್‌ನಲ್ಲಿ ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರೊಂದಿಗೆ ಮಾತುಕತೆ ನಡೆದಿ ಭದ್ರತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿತ್ತು. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ಇಸ್ಕಾನ್ ಟೆಂಪಲ್‌ ಬಳಿ ಸಂಚಾರ ಮಾರ್ಗದಲ್ಲಿ ಬದಲಾವಣೆ

    ಕ್ರಿಯಾ ಯೋಜನೆಗೆ ಪ್ಲ್ಯಾನ್‌:
    ಕಾಶ್ಮೀರ ಕಣಿವೆಯನ್ನು ಭದ್ರ ಪಡಿಸಿರುವ ಕೇಂದ್ರ ಸರ್ಕಾರ ಇದೀಗ ಜಮ್ಮುವನ್ನು ಗುರಿಯಾಗಿಸುತ್ತಿರುವ ಉಗ್ರರನ್ನು ಮಟ್ಟಹಾಕಲು ಮುಂದಾಗಿದೆ. ಅದಕ್ಕಾಗಿ ಜಮ್ಮು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯತೆಗಳನ್ನು ಗುರುತಿಸಿದೆ. ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಭಯೋತ್ಪಾದಕರು ಕಂಡುಕೊಂಡಿರುವ ಒಳನುಸುಳುವಿಕೆ ಮಾರ್ಗಗಳನ್ನು ಗುರುತಿಸಿ ಅನಾಹುತಕ್ಕೆ ತಡೆಹಾಕುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ| ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 22 ಮಂದಿಗೆ ಗಾಯ

    ಕಾಶ್ಮೀರ ಬಿಟ್ಟು ಜಮ್ಮುವಿನತ್ತ ಚಿತ್ತ ಹರಿಸಿದ್ದೇಕೆ?
    2014 ರಿಂದ 2018ರ ಅವಧಿ ಜಮ್ಮು ಮತ್ತು ಕಾಶ್ಮೀರ ಸ್ಥಳಗಳು ಉಗ್ರರ ಸ್ವರ್ಗವಾಗಿತ್ತು. 2014ರಿಂದ 2018ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 1,708 ಉಗ್ರರ ದಾಳಿಗಳು ನಡೆದಿದ್ದವು, 2018ರಿಂದ 2022ರ ವರೆಗೆ 761 ಉಗ್ರರ ದಾಳಿಗಳು ನಡೆದು 174 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ್ದ ಸೇನೆ (Indian Army) 626 ಉಗ್ರರನ್ನು ಬಲಿ ಪಡೆದಿತ್ತು. 2023ರಲ್ಲಿ ಜಮ್ಮು ಪ್ರದೇಶದಲ್ಲಿ ಮಾತ್ರವೇ ಸುಮಾರು 40 ಭಯೋತ್ಪಾದಕ ದಾಳಿಗಳು ನಡೆದಿರುವುದಾಗಿ ಸೇನೆ ಹೇಳಿದೆ. 2019ರಲ್ಲಿಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತು. ಆ ನಂತರ ಹೆಚ್ಚಿನ ದಾಳಿ ನಡೆಯುತ್ತಿದ್ದ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ದೀರ್ಘಕಾಲದ ಶಾಂತಿ ನೆಲೆಸಿತ್ತು. ಹೆಚ್ಚಿನ ಭದ್ರತಾ ಪಡೆಗಳು ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಬೀಡುಬಿಟ್ಟ ಕಾರಣ ಉಗ್ರರು ಜಮ್ಮುವನ್ನು ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

  • ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!

    ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!

    ಶ್ರೀನಗರ: ಜಮ್ಮು-ಕಾಶ್ಮೀರದ (Jammu And Kashmir) ಅನಂತ್‌ನಾಗ್‌ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ (Car Accident) ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿರುವ ಘಟನೆ ನಡೆಸಿದೆ.

    ಟಾಟಾ ಸುಮೋ ಕಾರೊಂದು ಕಮರಿಗೆ ಉರುಳಿದ್ದು, ಐವರು ಮಕ್ಕಳು ಸೇರಿ 8 ಮಂದಿ ದಾರುಣವಾಗಿ ಸಾವಿಗೀಡಾಗಿದ್ದಾರೆ. ಜಮ್ಮು-ಕಾಶ್ಮೀರದ ದಕ್ಸುಮ್‌ ಪ್ರದೇಶದಲ್ಲಿ ಕಾರು ನಿಯಂತ್ರಣ ತಪ್ಪಿ, ಕಮರಿಗೆ ಉರುಳಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ರಾಮನಗರ ಇತಿಹಾಸ ಅಳಿಸುವ ಕೆಲಸ: ನಿಖಿಲ್

    ದಕ್ಸುಮ್‌ ಪ್ರದೇಶದಿಂದ ಸುಮಾರು 20 ಕಿಮೀ ದೂರದಲ್ಲಿರುವ ಆರ್ಶುನ್‌ ಹಟ್‌ ಎಂಬ ಪ್ರದೇಶದಲ್ಲಿ ಕಾರು ಸಂಚರಿಸುವಾಗ ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಕಣಿವೆಗೆ ಉರುಳುತ್ತಲೇ ಅವರ ರಕ್ಷಣೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಇನ್ನೂ ಕಾರನ್ನು ಮೇಲಕ್ಕೆ ಎತ್ತಿಲ್ಲ. ಶವಗಳನ್ನು ಕೂಡ ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದೆ. ಮೃತರ ಕುರಿತು ಕೂಡ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Paris Olympics 2024: ಭಾರತದ ಮನು ಭಾಕರ್‌ ಫೈನಲ್‌ಗೆ ಎಂಟ್ರಿ – 20 ವರ್ಷಗಳ ಬಳಿಕ ವಿಶೇಷ ಸಾಧನೆ!

    ಜಮ್ಮು-ಕಾಶ್ಮೀರವು ಕಣಿವೆ ಪ್ರದೇಶವಾದ ಕಾರಣ ವಾಹನಗಳು ಹೆಚ್ಚಾಗಿ ಕಣಿವೆಗೆ ಉರುಳುತ್ತವೆ. ರಾಜೌರಿ ಜಿಲ್ಲೆಯಲ್ಲಿ ಕಳೆದ ಜೂನ್‌ನಲ್ಲಿ ಸೇನೆಯ ವಾಹನವೊಂದು ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರು ಹಾಗೆಯೇ, ನಾಲ್ವರು ಸೈನಿಕರು ಗಾಯಗೊಂಡಿದ್ದರು. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ನೀಡಲಾಗಿತ್ತು. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್‌ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್‌ ರಜಾಕ್‌

  • ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ – ಐವರು ಸೈನಿಕರು ಹುತಾತ್ಮ!

    ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನದ ಮೇಲೆ ಉಗ್ರರ ದಾಳಿ – ಐವರು ಸೈನಿಕರು ಹುತಾತ್ಮ!

    – ಎರಡು ದಿನಗಳಲ್ಲಿ 7 ಮಂದಿ ಯೋಧರು ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and kashmir) ಕಥುವಾ ಜಿಲ್ಲೆಯ ದೂರದ ಮಚೇಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಐವರು ಸೈನಿಕರು (Army Personnel) ಹುತಾತ್ಮರಾಗಿದ್ದಾರೆ. 6 ಮಂದಿ ಗಾಯಗೊಂಡಿದ್ದಾರೆ ಎಂದು ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

    ಕಥುವಾ ಪಟ್ಟಣದಿಂದ ಸುಮಾರು 150 ಕಿಲೋಮೀಟರ್ ದೂರದಲ್ಲಿರುವ ಲೋಹೈ ಮಲ್ಹಾರ್‌ನ ಬದ್ನೋಟಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೆಲ ಸೇನಾ ವಾಹನಗಳು ಈ ಪ್ರದೇಶದಲ್ಲಿ ನಿತ್ಯ ಗಸ್ತು ತಿರುಗುತ್ತಿದ್ದವು ಎಂದು ಹೇಳಲಾಗಿದೆ. ಇದನ್ನೂ ಓದಿ: ಅಪಘಾತಕ್ಕೂ ಮುನ್ನ 18,730 ರೂ. ಮದ್ಯ ಕುಡಿದಿದ್ದ ಮಿಹಿರ್‌ ಶಾ – ಮಗ ಮಾಡಿದ ತಪ್ಪಿಗೆ ತಂದೆಗೆ ಜೈಲು!

    ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜು.8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದರು. ಈ ವೇಳೆ ನಮ್ಮ ಸೈನಿಕರು ಸಹ ಪ್ರತಿದಾಳಿ ನಡೆಸಿದ್ದರು. ಆದ್ರೆ ದುರದೃಷ್ಟವಶಾತ್‌ ಐವರು ಯೋಧರು ಹುತಾತ್ಮರಾಗಿದ್ದಾರೆ. ಭಾರತೀಯ ಸೇನೆಯ ಕಾರ್ಪ್ಸ್‌ ಅಡಿಯಲ್ಲಿ ಈ ಪ್ರದೇಶ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು. ಇದನ್ನೂ ಓದಿ: ಋತುಚಕ್ರದ ವೇಳೆ ಮಹಿಳೆಯರಿಗೆ ರಜೆ ನೀಡೋದು ಸರ್ಕಾರದ ನೀತಿಯ ವಿಷಯ- ವಿಚಾರಣೆ ನಡೆಸಲು ಸುಪ್ರೀಂ ನಕಾರ

    ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಸಮೀಪದ ಅರಣ್ಯ ಪ್ರದೇಶದಲ್ಲಿ ಸುಮಾರು ಇಬ್ಬರು-ಮೂವರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಹೆಚ್ಚಿನ ಸೈನಿಕರನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ.

  • ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

    ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ವಾಹನದ ಮೇಲೆ ಉಗ್ರರ ದಾಳಿ – 2 ದಿನಗಳಲ್ಲಿ 2ನೇ ಅಟ್ಯಾಕ್‌!

    – ಇಬ್ಬರು ಯೋಧರಿಗೆ ಗಾಯ, ಉಗ್ರರಿಗಾಗಿ ಶೋಧ

    ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಉಗ್ರರು ಮತ್ತೆ ಅಟ್ಟಹಾಸ ಮುಂದುವರಿಸಿದ್ದಾರೆ. ಕಥುವಾ ಜಿಲ್ಲೆಯಲ್ಲಿ ಭಾರತೀಯ ಸೇನೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ (Terrorists Attack) ನಡೆಸಿದ್ದಾರೆ.

    ಕತುವಾ ಜಿಲ್ಲೆಯ ಮಚೇಡಿ ಪ್ರದೇಶದ ಜೆಂಡಾ ನಲ್ಲಾ ಗ್ರಾಮದ ಬಳಿ ಸೋಮವಾರ (ಜು.8) ಮಧ್ಯಾಹ್ನ 3.30ರ ಸುಮಾರಿಗೆ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಉಗ್ರರ ದಾಳಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಕಳೆದ 2 ದಿನಗಳಲ್ಲಿ ಇದು ಸೇನೆಯ ಮೇಲೆ ನಡೆದ 2ನೇ ದಾಳಿಯಾಗಿದೆ. ಜೊತೆಗೆ ಒಂದು ವಾರದಲ್ಲಿ ಸೇನಾ ವಾಹನವನ್ನೇ ಗುರಿಯಾಗಿಸಿ ನಡೆಸಿದ 2ನೇ ದಾಳಿಯೂ ಆಗಿದೆ. ಇತ್ತೀಚೆಗೆ ಇಲ್ಲಿನ ಕುಲ್ಗಾಮ್‌ ಜಿಲ್ಲೆಯಲ್ಲಿ ನಡೆದ 2 ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 6 ಭಯೋತ್ಪಾದಕರು ಮೃತಪಟ್ಟಿದ್ದರು. ಇದನ್ನೂ ಓದಿ: NEET-UG ಮರು ಪರೀಕ್ಷೆ ನಮ್ಮ ಕೊನೆಯ ಆಯ್ಕೆ, ಪೇಪರ್‌ ಸೋರಿಕೆ ಬಗ್ಗೆ ತನಿಖೆ ನಡೆಸಬೇಕು: ಸುಪ್ರೀಂ

    ಸೇನೆಯ ವಾಹನ ತೆರಳುವ ಕುರಿತು ಮಾಹಿತಿ ಪಡೆದಿದ್ದ ಉಗ್ರರು, ಯೋಜನೆ ರೂಪಿಸಿ, ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ನಂತರ, ಸೈನಿಕರೂ ಪ್ರತಿದಾಳಿ ನಡೆಸಿದ್ದಾರೆ. ಇದನ್ನೂ ಓದಿ: 1.92 ಲಕ್ಷ ಮೌಲ್ಯದ ಸೀರೆಯುಟ್ಟು ಮಿಂಚಿದ ಗರ್ಭಿಣಿ ದೀಪಿಕಾ ಪಡುಕೋಣೆ

    ಸದ್ಯ ಸೇನಾ ವಾಹನವನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಲೇ ಭಾರತೀಯ ಸೇನೆಯ ಯೋಧರು ತಿರುಗೇಟು ನೀಡುತ್ತಿದ್ದಾರೆ. ಅರಣ್ಯ ಪ್ರದೇಶದಲ್ಲಿ ಸುಮಾರು 2-3 ಉಗ್ರರು ಅಡಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಉಗ್ರರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಅಸ್ಸಾಂನಲ್ಲಿ ಭೀಕರ ಪ್ರವಾಹ – ಕಾಜಿರಂಗ ಪಾರ್ಕ್‍ನಲ್ಲಿ 131 ವನ್ಯಜೀವಿಗಳು ಸಾವು