Tag: ಜಯಮಾಲ

  • ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

    ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ನೋಡಿಲ್ಲ: ಜಯಮಾಲ

    ಟ ಸುದೀಪ್ (Sudeep) ಮನೆಯಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅಮ್ಮನ ನಿಧನದಿಂದ ಸುದೀಪ್‌ಗೆ ಆಘಾತವಾಗಿದೆ. ಈ ಹಿನ್ನೆಲೆ ಸುದೀಪ್ ತಾಯಿಯ ಅಂತಿಮ ದರ್ಶನ ಪಡೆಯಲು ಸ್ಯಾಂಡಲ್‌ವುಡ್ ನಟ, ನಟಿಯರು ಮತ್ತು ರಾಜಕೀಯ ಗಣ್ಯರು ನಟನ ಮನೆಗೆ ಆಗಮಿಸುತ್ತಿದ್ದಾರೆ. ಇದೀಗ ಅಂತಿಮ ದರ್ಶನ ಪಡೆದ ಬಳಿಕ ಹಿರಿಯ ನಟಿ ಜಯಮಾಲ (Jayamala) ಮಾತನಾಡಿ, ತಾಯಿಯನ್ನು ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನು ನಾನೆಲ್ಲೂ ನೋಡಿಲ್ಲ ಎಂದು ಸುದೀಪ್‌ ಕುರಿತು ಹೇಳಿದ್ದಾರೆ.

    ಸರೋಜಮ್ಮ ನನಗೆ 1979ರಿಂದ ಪರಿಚಯ. ನಾನು ಯಾವತ್ತೂ ಅವರಲ್ಲಿ ಅಕ್ಕನನ್ನ ಕಾಣಲಿಲ್ಲ, ತಾಯಿಯನ್ನ ಕಾಣುತ್ತಿದ್ದೆ ಎಂದಿದ್ದಾರೆ.
    ಅವರ ಜೊತೆ ತುಂಬಾ ಒಡನಾಟ ಇತ್ತು. ಅವರೊಂದು ಸಾಮ್ರಾಜ್ಯವನ್ನೇ ಕಟ್ಟಿದ್ದರು. ಅದಕ್ಕೆ ಪಿಲ್ಲರ್ ಆಗಿ ನಿಂತುಕೊಂಡಿದ್ದರು. ಎಲ್ಲರಿಗೂ ಸಮಾಧಾನ ಹೇಳೋರು, ಎಲ್ಲರಿಗೂ ಒಳ್ಳೆಯದನ್ನೇ ಬಯಸುತ್ತಿದ್ದರು. ಇವತ್ತು ಒಂದೊಳ್ಳೆಯ ಹೃದಯ ನಮ್ಮನ್ನು ಬಿಟ್ಟು ಹೋಗಿದೆ ಎಂದು ಜಯಮಾಲಾ ಭಾವುಕರಾಗಿದ್ದಾರೆ.

    ಸುದೀಪ್‌ಗೆ ಅವನ ತಾಯಿಯೇ ಅಸ್ಥಿತ್ವ, ಇದೀಗ ತನ್ನ ಅಸ್ತಿತ್ವವನ್ನೇ ಸುದೀಪ್ ಕಳೆದುಕೊಂಡೆ ಅಂತ ಅವರಿಗೆ ಕಷ್ಟ ಆಗುತ್ತಿದೆ. ತಾಯಿಯನ್ನ ಇಷ್ಟೊಂದು ಪ್ರೀತಿಸುವ ವ್ಯಕ್ತಿಯನ್ನ ನಾನು ಎಲ್ಲೂ ಕಂಡಿಲ್ಲ. ತಾಯಿನ ಕಂಡರೆ ಅಷ್ಟು ಅಗಾಧವಾದ ಪ್ರೀತಿಯಿತ್ತು. ಅವರ 2 ಹೆಣ್ಣುಮಕ್ಕಳಿಗೆ ಧೈರ್ಯ ಕೊಡಲಿ. ಸರೋಜಮ್ಮ ಇಡೀ ಹೆಣ್ಣು ಕುಲಕ್ಕೆ ಮಾದರಿಯಾಗಿದ್ದರು. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಜಯಮಾಲ ಮಾತನಾಡಿದ್ದಾರೆ. ಇದನ್ನೂ ಓದಿ:ಕನ್ನಡದಲ್ಲೇ ಪತ್ರ ಬರೆದು ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ ಪವನ್ ಕಲ್ಯಾಣ್

    ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ 7:04ಕ್ಕೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

  • ಮದುವೆಗೆ ಮುನ್ನ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್

    ಮದುವೆಗೆ ಮುನ್ನ ಹರ್ಷಿಕಾಗೆ ಸಿಕ್ತು ಸಖತ್ ಗಿಫ್ಟ್

    ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಒಟ್ಟಾಗಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿಲೆಬ್ರಿಟಿಗಳ ಮನೆಗೆ ಹೋಗಿ ನೀಡುತ್ತಿದ್ದಾರೆ. ಈ ಜೋಡಿಗೆ ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆಯೊಂದು ದೊರೆತಿದೆ. ಹಿರಿಯ ನಟಿ ಜಯಮಾಲ (Jayamala) ಅವರು ಹರ್ಷಿಕಾಗೆ ಚಿನ್ನದ ಓಲೆ ಗಿಫ್ಟ್ (Gift) ನೀಡಿದ್ದಾರೆ. ಭುವನ್–ಹರ್ಷಿಕಾಗೆ ವಿವಾಹಕ್ಕೂ ಮುನ್ನ ಚಿನ್ನದ ಉಡುಗೊರೆ ಕೊಟ್ಟು ಸರ್ ಪ್ರೈಸ್ ನೀಡಿದ್ದಾರೆ ಜಯಮಾಲ. ಜೊತೆಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ್ದಾರೆ.

    ಹಲವು ವರ್ಷಗಳಿಂದ ಸ್ನೇಹಿತರಾಗಿದ್ದ ನಟ ಭುವನ್ (Bhuvan) ಹಾಗೂ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಸಹವಾಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ಈಗಾಗಲೇ ಬ್ಯಾಚುಲರ್ ಪಾರ್ಟಿ ಮುಗಿಸಿಕೊಂಡು ಬಂದಿರುವ ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.

    ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ (Virajpet) ಅದ್ದೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದ್ದು, ಸಾಕಷ್ಟು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಕೊಡವ (Kodava) ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆಯಾಗುತ್ತಿದ್ದು (Marriage), ಅದಕ್ಕಾಗಿ ವಿರಾಜಪೇಟೆಯ ‘ಅಮ್ಮತಿ ಕೊಡವ ಸಮಾಜ’ ಸಿಂಗಾರಗೊಳ್ಳಲಿದೆ. ಇದನ್ನೂ ಓದಿ:ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್

    ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಜೋಡಿ,  ಸಿಎಂ ಸಿದ್ದರಾಮಯ್ಯ,  ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಈ ಜೋಡಿ ಆಹ್ವಾನಿಸಿದೆ.

     

    ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್  ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್,  ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಾಹಸಸಿಂಹನ ಸಮಾಧಿ ವಿಚಾರದಲ್ಲಿ ನಾವು ಅಸಹಾಯಕರು – ಡಾ. ಜಯಮಾಲಾ

    ಸಾಹಸಸಿಂಹನ ಸಮಾಧಿ ವಿಚಾರದಲ್ಲಿ ನಾವು ಅಸಹಾಯಕರು – ಡಾ. ಜಯಮಾಲಾ

    ಉಡುಪಿ: ಸಾಹಸಸಿಂಹ ವಿಷ್ಣುವರ್ಧನ್ ಸಮಾಧಿ ವಿಚಾರದಲ್ಲಿ ನಾವು ಅಸಹಾಯಕರು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಜಯಮಾಲಾ ಒಪ್ಪಿಕೊಂಡಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತಿ ವಿಷ್ಣುವರ್ಧನ್ ಅವರ ಬೇಸರ ಸಹಜವಾದದ್ದು. ವಿಷ್ಣುವರ್ಧನ್ ಅವರು ನಮ್ಮನ್ನು ಅಗಲಿ ಒಂಬತ್ತು ವರ್ಷಗಳಾಗಿದೆ. ಭಾರತಿ ಅವರ ಕುಟುಂಬಕ್ಕೆ ನಾನು ಬೆಲೆ ಕೊಡುತ್ತೇನೆ. ಮೈಸೂರಿನಲ್ಲಿ ಸ್ಮಾರಕ ಆಗಬೇಕೆಂದು ಭಾರತಿ ಕೇಳುತ್ತಿದ್ದಾರೆ. ಏಕೆಂದರೆ ಮೈಸೂರು ಅಂದರೆ ವಿಷ್ಣುವರ್ಧನ್ ಅವರಿಗೆ ಪಂಚ ಪ್ರಾಣ. ಅಲ್ಲದೇ ವಿಷ್ಣು ಅವರ ಆಸೆ ಏನು ಎಂಬುದು ಅವರ ಕುಟುಂಬಕ್ಕೆ ಮಾತ್ರ ಗೊತ್ತಿರುತ್ತದೆ. ಅಲ್ಲದೇ ತನ್ನ ಆಸೆ ಏನು ಎಂಬುದನ್ನು ವಿಷ್ಣುವರ್ಧನ್ ಬದುಕಿದ್ದಾಗ ಕುಟುಂಬದವರಲ್ಲಿ ಹೇಳಿರುತ್ತಾರೆ ಎಂದು ಹೇಳಿದರು.

    ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಸಹ ಸಿನೆಮಾ ರಂಗದವರೇ. ಹೀಗಾಗಿ ವಿಷ್ಣು ಸ್ಮಾರಕ ವಿಚಾರಕ್ಕೆ ಯಾವುದೇ ಭಿನ್ನಾಭಿಪ್ರಾಯ ಬರಲ್ಲ. ಭೂಮಿಗೆ ಸಂಬಂಧಪಟ್ಟ ಸಣ್ಣ ತಕರಾರು ಇದೆ. ಗುರುವಾರ ಮುನಿರತ್ನ ಹಾಗೂ ಮಂಜು ಚರ್ಚೆ ನಡೆಸಿ, ಸಂಧಾನ ಮಾಡಿದ್ದಾರೆ. ಈ ಬಗ್ಗೆ ಖುದ್ದು ಪತ್ರದ ಮುಖಾಂತರ ಭಾರತಿ ಅವರಿಗೂ ವಿಚಾರ ತಿಳಿಸಿದ್ದಾರೆ ಎಂದರು.

    ವಿಷ್ಣು ಸಮಾಧಿ ವಿಚಾರದಲ್ಲಿ ನಮಗೆಲ್ಲರಿಗೂ ಅಸಹಾಯಕತೆ ಇದೆ. ಎಲ್ಲಿ ಸ್ಮಾರಕ ಮಾಡಲು ಹೋದರೂ, ಒಂದು ವಿವಾದ ಆಗುತ್ತಿದೆ. ರಾಜ್ಯದಲ್ಲಿ ಯಾಕೆ ಹೀಗಾಗುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಏನೇ ಆದರೂ ನಾವೆಲ್ಲರೂ ಭಾರತಿ ವಿಷ್ಣುವರ್ಧನ್ ಅವರ ಪರ ನಿಲ್ಲುತ್ತೇವೆಂದು ತಿಳಿಸಿದರು.

    ಅಂಬರಿಶ್ ಒಬ್ಬ ಮಹಾನ್ ನಾಯಕ. ನಿಜವಾದ ನಾಯಕ, ಜನರ ಹೃದಯದಲ್ಲಿ ವಾಸ ಮಾಡಿದ ನಟ ಅಂಬರೀಷ್ ಸ್ಮಾರಕಕ್ಕೆ ಯಾವುದೇ ತೊಂದರೆ ಇಲ್ಲ ಎಂದರು.

    ಇದೇ ವೇಳೆ ಸಚಿವ ಸ್ಥಾನ ಆಕಾಂಕ್ಷಿ ಶಾಸಕರು ಮುಂಬೈ ಗೆ ತೆರಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹೋಗೋರು ಹೋಗ್ತಾ ಇರ್ತಾರೆ ಸಾರ್, ಕಾಂಗ್ರೆಸ್ ಹಾಗೂ ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಭದ್ರವಾಗಿದೆ. ಅಸಮಾಧಾನವೆಂಬುದು ಎಲ್ಲಾ ಸುಳ್ಳು ಇದೊಂದು ಅಪಪ್ರಚಾರ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೈ ಪರಿಷತ್ ಸದಸ್ಯರಿಂದ ಸಚಿವೆ ಜಯಮಾಲ ವಿರುದ್ಧ ಅಸಮಾಧಾನ!

    ಕೈ ಪರಿಷತ್ ಸದಸ್ಯರಿಂದ ಸಚಿವೆ ಜಯಮಾಲ ವಿರುದ್ಧ ಅಸಮಾಧಾನ!

    ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಅವರನ್ನು ವಿಧಾನಪರಿಷತ್ ಸಭಾ ನಾಯಕಿಯನ್ನಾಗಿ ನೇಮಿಸಿದ್ದಕ್ಕೆ, ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ಭಾನುವಾರ ಸಮನ್ವಯ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲು ಅನೇಕ ಶಾಸಕರು, ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಮುಂದಾಗುತ್ತಿದ್ದಾರೆ. ಅವರಲ್ಲಿ ಅನೇಕರು ಜಯಮಾಲ ಅವರಿಗೆ ಮಂತ್ರಿಗಿರಿ ಹಾಗೂ ವಿಧಾನ ಪರಿಷತ್ ಸಭಾನಾಯಕಿ ಸ್ಥಾನ ನೀಡಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಜಯಮಾಲ ಅವರನ್ನು ಸಭಾನಾಯಕಿ ಮಾಡಬಾರದು. ಬದಲಿಗೆ ಹಿರಿಯ ಪರಿಷತ್ ಸದಸ್ಯರೊಬ್ಬರನ್ನು ಸಚಿವರನ್ನಾಗಿ ನೇಮಿಸಿ ಅವರಿಗೆ ಸಭಾ ನಾಯಕರ ಸ್ಥಾನ ನೀಡಬೇಕು ಎಂದು ಪರಿಷತ್ ಸದಸ್ಯರಾದ ವಿ.ಎಸ್.ಉಗ್ರಪ್ಪ, ಹೆಚ್.ಎಂ.ರೇವಣ್ಣ, ಕೊಂಡಜ್ಜಿ ಮೋಹನ್ ಅವರ ನೇತೃತ್ವದ ಸದಸ್ಯರ ನಿಯೋಗ ಮನವಿ ಸಲ್ಲಿಸಿದೆ.

    ಕೆ.ಸಿ.ವೇಣುಗೋಪಾಲ್ ಅವರನ್ನು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ್ದು, ರಾಜ್ಯ ರಾಜಕೀಯದ ಪ್ರಸಕ್ತ ವಿದ್ಯಮಾನ ಹಾಗೂ ಸಮ್ಮಿಶ್ರ ಸರ್ಕಾರದಲ್ಲಿನ ಬೆಳವಣಿಗೆ ಕುರಿತಾಗಿ ಗಮನಕ್ಕೆ ತಂದಿದ್ದಾರೆ ಎಂದು ಪಕ್ಷದ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

  • ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ- ಬಜೆಟ್ ಮಂಡಿಸಿದ್ರೆ ಮಂಡಿಸಲಿ: ಸಿಎಂ ಇಬ್ರಾಹಿಂ

    ಬೆಂಗಳೂರು: ನೂತನ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡನೆ ವಿಚಾರದಲ್ಲಿ ಉಂಟಾದ ಗೊಂದಲಕ್ಕೆ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂರವರು ಹೊಸ ಸಿಎಂ ಹುಮ್ಮಸ್ಸಿನಲ್ಲಿದ್ದಾರೆ ಬಜೆಟ್ ಮಂಡಿಸಿದರೆ ಮಂಡಿಸಲಿ ಎಂದು ಹೇಳಿಕೆ ನೀಡಿದ್ದಾರೆ.

    ಇಂದು ಹೊಸ ಬಜೆಟ್ ಮಂಡನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಮ್ಮಿಶ್ರ ಸರ್ಕಾರಕ್ಕೆ ಮದುವೆ ಆಗಿ ಮುಹೂರ್ತ ಫಿಕ್ಸ್ ಆಗಿದೆ. ಮುಖ್ಯಮಂತ್ರಿಯವರು ಕೂಡ ಹೊಸ ಹುರುಪಿನಲ್ಲಿದ್ದಾರೆ. ಹೀಗಾಗಿ ಬಜೆಟ್ ಮಂಡನೆ ವಿಚಾರದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಹೊಸ ಬಜೆಟ್ ಮಂಡಿಸಿದರೆ ಮಂಡಿಸಲಿ ಬಿಡಿ ಎಂದು ಉತ್ತರಿಸಿದ್ದಾರೆ.

    ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ ಸಚಿವ ಸಂಪುಟದ ಗೊಂದಲದ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೋಡಿಕೊಳ್ಳುತ್ತಾರೆ ಎಂದರು.

    ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್‍ರವರ ಹೇಳಿಕೆಗೆ ಪ್ರತಿಕ್ರಿಯಿಸಿದ ಇಬ್ರಾಹಿಂರವರು, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ನಾನು ಹೇಳಿದ್ದು ಅಮಾಯಕ ಯುವಕರ ತಲೆ ಕೆಡಿಸಿದವರು ಯಾರು ಎಂದು? ಆರೋಪಿಗಳು ಈಗಾಗಲೇ ನಾಲ್ಕು ತಂಡಗಳಾಗಿ ಹತ್ಯೆ ಮಾಡಿರುವುದಾಗಿ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ. ಹತ್ಯೆಗೆ ಆರೋಪಿಗಳಿಗೆ ಪ್ರೇರೆಪಿಸಿದ್ದು ಯಾರು ಎಂದು ಪ್ರಮೋದ್ ಮುತಾಲಿಕ್ ಹಾಗೂ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಯವರಿಗೆ ಪ್ರಶ್ನಿಸಿದ್ದಾರೆ.

    ಮನುಷ್ಯನ ಜೀವನ ಶಾಶ್ವತ ಅಲ್ಲ, ನಾವು 60-70 ವರ್ಷ ಬದುಕುತ್ತೇವೆ. ಈ ವೇಳೆ ಒಳ್ಳೆಯ ಕೆಲಸಗಳನ್ನು ಮಾಡಬೇಕು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ನಮ್ಮಲ್ಲಿ ವಿಷ ಬೀಜ ಬಿತ್ತುತ್ತಿರುವುದು ಯಾರು? ಯಾವುದೇ ಧರ್ಮದವರಾದರೂ ಇಂತಹ ಘಟನೆಗಳನ್ನು ಖಂಡಿಸಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ದೇಶಕ್ಕೆ ಭಾರೀ ಗಂಡಾಂತರ ಎದುರಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.

    ನಮಗೆ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅಡ್ವಾಣಿಯವರ ಮೇಲೆಯೂ ಗೌರವವಿದೆ. ಮುತಾಲಿಕ್ ರವರು ಆಚಾರವಿಲ್ಲದ ನಾಲಿಗೆ ಎಂಬಂತೆ ಮಾತನಾಡಬಾರದು ಎಂದು ಹೇಳಿದರು.