Tag: ಜವಾಹರಲಾಲ್ ನೆಹರೂ

  • ಸ್ವತಂತ್ರ ಭಾರತದ 2ನೇ ಲೋಕಸಭಾ ಚುನಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

    ಸ್ವತಂತ್ರ ಭಾರತದ 2ನೇ ಲೋಕಸಭಾ ಚುನಾವಣೆ ಬಗ್ಗೆ ನಿಮಗೆಷ್ಟು ಗೊತ್ತು?

    – ದೇಶದ ಗಮನ ಸೆಳೆದಿದ್ದ ಕರ್ನಾಟಕದ ಪಕ್ಷೇತರ ಅಭ್ಯರ್ಥಿ
    – ಸ್ವತಂತ್ರ ಅಭ್ಯರ್ಥಿಗೆ ಬಿದ್ದಿರಲಿಲ್ಲ ಒಂದೇ ಒಂದು ವೋಟ್‌!

    – ಪಬ್ಲಿಕ್‌ ಟಿವಿ ವಿಶೇಷ

    ಭಾರತಕ್ಕೆ ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕ ನಂತರದ ಆರಂಭಿಕ ವರ್ಷಗಳಲ್ಲಿ ರಾಜಕೀಯವಾಗಿ ಕಾಂಗ್ರೆಸ್ ಪ್ರಬಲವಾಗಿತ್ತು. ಆಗ ಚುನಾವಣೆಗಳಲ್ಲೂ ದೇಶದೆಲ್ಲೆಡೆ ಕಾಂಗ್ರೆಸ್‌ನದ್ದೇ ಪಾರುಪತ್ಯ. ಹಲವು ದಶಕಗಳ ಕಾಲ ಲೋಕಸಭಾ ಚುನಾವಣೆಯಲ್ಲಿ ಬಹುಮತದೊಂದಿಗೆ ಗೆದ್ದು ದೇಶದ ಚುಕ್ಕಾಣಿ ಹಿಡಿದು ಆಡಳಿತ ನಡೆಸಿತು. ಲೋಕಸಭಾ ಚುನಾವಣೆಯ ಇತಿಹಾಸ ಗಮನಿಸಿದರೆ ಕಾಂಗ್ರೆಸ್‌ನ ಪ್ರಾಬಲ್ಯ ಎಷ್ಟರ ಮಟ್ಟಿಗೆ ಇತ್ತು ಎಂಬುದು ತಿಳಿಯುತ್ತದೆ.

    ಸ್ವಾತಂತ್ರ್ಯ ನಂತರ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಬಗ್ಗೆ ನೀವು ಈಗಾಗಲೇ ಓದಿದ್ದೀರಿ. ನಂತರ 1957 ರಲ್ಲಿ ಎರಡನೇ ಸಾರ್ವತ್ರಿಕ ಚುನಾವಣೆ (1957 Lok Sabha Election) ನಡೆಯಿತು. ಆ ಚುನಾವಣೆಯಲ್ಲಾದ ರಾಜಕೀಯ ಬೆಳವಣಿಗೆ ಏನು? ಫಲಿತಾಂಶ ಏನಾಗಿತ್ತು ಎಂಬುದನ್ನು ‘ಪಬ್ಲಿಕ್‌ ಟಿವಿ’ ನಿಮಗೆ ತಿಳಿಸಿಕೊಡುತ್ತದೆ. ಇದನ್ನೂ ಓದಿ: ಭಾರತದ ಮೊದಲ ಚುನಾವಣೆ 4 ತಿಂಗಳ ಕಾಲ ನಡೆದಿದ್ದು ನಿಮಗೆ ಗೊತ್ತಾ..?

    15 ಪಕ್ಷಗಳು ಸ್ಪರ್ಧೆ
    ದೇಶದ ಎರಡನೇ ಲೋಕಸಭಾ ಚುನಾವಣೆಯು 1957 ರ ಫೆ.24 ರಿಂದ ಮಾ.14 ರ ವರೆಗೆ ನಡೆದಿತ್ತು. ಸುಮಾರು 15 ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. 494 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಬಹುಮತಕ್ಕೆ 248 ಸೀಟ್‌ಗಳು ಬೇಕಾಗಿದ್ದವು. ಮುಖ್ಯ ಚುನಾವಣಾ ಆಯುಕ್ತ ಸುಕುಮಾರ್‌ ಸೇನ್‌ ಅವರು ಚುನಾವಣೆ ಮೇಲ್ವಿಚಾರಣೆ ಮಾಡಿದರು.

     

    ಹಕ್ಕು ಚಲಾಯಿಸಿದವರೆಷ್ಟು?
    1957 ರ ಲೋಕಸಭಾ ಚುನಾವಣೆಯಲ್ಲಿ ಮತದಾನಕ್ಕೆ 26,52,41,358 ಮಂದಿ ಅರ್ಹತೆ ಪಡೆದಿದ್ದರು. 18,20,75,041 ಜನರು ಮತದಾನ ಮಾಡಿದರು. ಆ ಸಂದರ್ಭದಲ್ಲಿ 68.6% ಮತ ಚಲಾವಣೆಯಾಗಿತ್ತು.

    371 ಸ್ಥಾನ ಗೆದ್ದ ಕಾಂಗ್ರೆಸ್
    1957 ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಅಂತರದಿಂದ ಗೆದ್ದಿತ್ತು. 371 ಸ್ಥಾನಗಳನ್ನು ಪಡೆದು ಅಧಿಕಾರದ ಗದ್ದುಗೆ ಏರಿತ್ತು. ಉಳಿದಂತೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿ 19, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ 27, ಭಾರತೀಯ ಜನ ಸಂಘ 4, ಪರಿಶಿಷ್ಟ ಜಾತಿ ಫೆಡರಲ್ 6, ಆಲ್ ಇಂಡಿಯಾ ಜನತಂತ್ರ ಪರಿಷದ್ 7, ಪೀಪಲ್ಸ್ ಡೆಮಾಕ್ರಟಿಕ್ ಫ್ರಂಟ್ 2, ಹಿಂದೂ ಮಹಾಸಭಾ 1, ಪಿಡಬ್ಲ್ಯೂಪಿಐ 4, ಜಾರ್ಖಂಡ್ ಪಾರ್ಟಿ 6, ಫಾರ್ವರ್ಡ್ ಬ್ಲಾಕ್ (ಮಾರ್ಕ್ಸಿಸ್ಟ್) 2, ಸಿಎನ್‌ಎಸ್‌ಪಿಜೆಪಿ 3 ಹಾಗೂ ಸ್ವತಂತ್ರ ಅಭ್ಯರ್ಥಿಗಳು ಸ್ಥಾನಗಳನ್ನು ಗೆದ್ದಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

    ಈ ಚುನಾವಣೆಯಲ್ಲಿ ಕಾಂಗ್ರೆಸ್ ಎರಡನೇ ಸಲ ಭಾರಿ ಅಂತರದಿಂದ ಜಯ ಸಾಧಿಸಿತ್ತು. ಸಮಾಜವಾದಿ ಪಕ್ಷ ಮತ್ತು ಕೆಎಂಪಿಪಿಯೊಂದಿಗೆ ವಿಲೀನಗೊಂಡ ನಂತರ ಹೊಸದಾಗಿ ರೂಪುಗೊಂಡ ಪ್ರಜಾ ಸೋಷಿಯಲಿಸ್ಟ್ ಪಕ್ಷವು (ಪಿಎಸ್‌ಪಿ) 19 ಸ್ಥಾನಗಳನ್ನು ಪಡೆಯಿತು. ಕಮ್ಯುನಿಸ್ಟ್ ಪಕ್ಷ ಆಫ್ ಇಂಡಿಯಾವು (ಸಿಪಿಐ) 27 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿತು. ಜನಸಂಘ ಮತದಾನ ಪ್ರಮಾಣವನ್ನು ದ್ವಿಗುಣಗೊಳಿಸಿಕೊಂಡರೂ, ಪಕ್ಷವು ಹೆಚ್ಚು ಸ್ಥಾನಗಳನ್ನು ಗಳಿಸಲಿಲ್ಲ. ಅಂಬೇಡ್ಕರ್ ಅವರ ಅಖಿಲ ಭಾರತದ ಪರಿಶಿಷ್ಟ ಜಾತಿ ಒಕ್ಕೂಟ (ಎಸ್‌ಸಿಎಫ್) ಆರು ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿತು.

    ಮತದಾನದ ಪ್ರಮಾಣ ಎಷ್ಟಿತ್ತು?
    ಕಾಂಗ್ರೆಸ್ ಮತದಾನದ ಪ್ರಮಾಣ 47.8% ಇತ್ತು. ಉಳಿದಂತೆ ಇತರೆ 25.2%, ಪಿಎಸ್‌ಪಿ 10.4%, ಸಿಪಿಐ 8.9%, ಬಿಜೆಎಸ್ 6%, ಎಸ್‌ಸಿಎಫ್ 1.7% ಮತವನ್ನು ಪಡೆದುಕೊಂಡಿದ್ದವು. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್- ಕಾಂಗ್ರೆಸ್‌ನಿಂದ ಮಿಡ್‍ನೈಟ್ ಆಪರೇಷನ್

    ನೆಹರೂ ನೇತೃತ್ವದಲ್ಲಿ ‘ಕೈ’ಗೆ ಮತ್ತೊಂದು ಗೆಲುವು
    ಜವಾಹರಲಾಲ್ ನೆಹರೂ ಅವರ ನಾಯಕತ್ವದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 494 ಸ್ಥಾನಗಳಲ್ಲಿ 371 ಸ್ಥಾನಗಳನ್ನು ಪಡೆದು ಎರಡನೇ ಅವಧಿಗೆ ಅಧಿಕಾರ ಏರಿತು. ಮೊದಲ ಚುನಾವಣೆಗಿಂತ ಏಳು ಸ್ಥಾನಗಳನ್ನು ಹೆಚ್ಚುವರಿಯಾಗಿ ಗೆದ್ದಿತ್ತು. ಮತ ಪ್ರಮಾಣ 45% ರಿಂದ 48% ಕ್ಕೆ ಏರಿತು. ಆ ಸಂದರ್ಭದಲ್ಲಿ 2ನೇ ಅತಿ ದೊಡ್ಡ ಪಕ್ಷವಾಗಿ ಗುರುತಿಸಿಕೊಂಡಿದ್ದು ಕಮ್ಯುನಿಸ್ಟ್ ಪಕ್ಷ. ಈ ಪಕ್ಷ ಗೆದ್ದಿದ್ದು 27 ಸ್ಥಾನಗಳನ್ನು.

    ಪಕ್ಷೇತರ ಅಭ್ಯರ್ಥಿಗಳ ದಾಖಲೆ
    ಪಕ್ಷೇತರರಾಗಿ ಸ್ಪರ್ಧಿಸಿದ್ದವರ ಪೈಕಿ 42 ಅಭ್ಯರ್ಥಿಗಳು ಗೆದ್ದು ಪಾರ್ಲಿಮೆಂಟ್‌ ಪ್ರವೇಶಿಸಿದರು. 19% ವೋಟ್‌ ಶೇರ್‌ ಪಕ್ಷೇತರ ಅಭ್ಯರ್ಥಿಗಳ ಪಾಲಾಗಿತ್ತು. ಇದು ಭಾರತೀಯ ಸಾರ್ವತ್ರಿಕ ಚುನಾವಣೆಗಳಲ್ಲೇ ಅತ್ಯಧಿಕ ಎಂಬ ದಾಖಲೆ ಕೂಡ ಬರೆದಿದೆ. ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 36 ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದರು. ಅದು ಬಿಟ್ಟರೆ 1991 ರಲ್ಲಿ ಅತೀ ಕಡಿಮೆ ಅಂದರೆ ಒಬ್ಬರು ಸ್ವತಂತ್ರ ಅಭ್ಯರ್ಥಿ ಮಾತ್ರ ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದರು. ಇನ್ನು 2019 ರ ಚುನಾವಣೆಯಲ್ಲಿ ನಾಲ್ವರು ಪಕ್ಷೇತರ ಅಭ್ಯರ್ಥಿಗಳು ಗೆದ್ದಿದ್ದರು.

    ಮೈನ್‌ಪುರಿ ಅಭ್ಯರ್ಥಿಗೆ ಸೊನ್ನೆ (0) ವೋಟ್‌?
    ದೇಶದ ಎರಡನೇ ಲೋಕಸಭಾ ಚುನಾವಣೆಯಲ್ಲಿ ಹಲವು ಸ್ವಾರಸ್ಯಕರ ಘಟನೆಗಳು ನಡೆದಿದ್ದವು. ಮೈನ್‌ಪುರಿ ಕ್ಷೇತ್ರದ ಅಭ್ಯರ್ಥಿಯೊಬ್ಬರಿಗೆ ಆಗ ಒಬ್ಬರೇ ಒಬ್ಬ ಮತದಾರ ಕೂಡ ವೋಟು ಹಾಕಿರಲಿಲ್ಲ. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಂಕರ್‌ ಲಾಲ್‌ ಎಂಬವರಿಗೆ ಶೂನ್ಯ ವೋಟಿನ ಹೊಡೆತ ಬಿದ್ದಿತ್ತು. ತಮ್ಮ ಪರವಾಗಿ ತಾವೇ ಚಲಾಯಿಸಿಕೊಂಡಿದ್ದ ಒಂದೇ ಒಂದು ವೋಟ್‌ ಕೂಡ ಅಮಾನ್ಯವಾಗಿತ್ತು. ಹೀಗಾಗಿ ಸೊನ್ನೆ ವೋಟ್‌ ಪಡೆದ ಕೆಟ್ಟ ದಾಖಲೆ ಬರೆದರು. ಇದನ್ನೂ ಓದಿ: ಬಾಲಕಿಯಿಂದ ವಿನೂತನವಾಗಿ ಮತದಾನ ಜಾಗೃತಿ- ಚುನಾವಣಾ ಆಯೋಗ ಪ್ರಶಂಸೆ

    ಮೈಸೂರು ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟ್?
    ಕರ್ನಾಟಕ ಏಕೀಕರಣವಾಗಿದ್ದು 1956 ರಲ್ಲಿ. ಆದರೆ ಕರ್ನಾಟಕ ಎಂದು ನಾಮಕರಣವಾಗಿದ್ದು 1974 ರಲ್ಲಿ. ಈ ಹಿನ್ನೆಲೆಯಲ್ಲಿ 1957 ರ ಸಾರ್ವತ್ರಿಕ ಚುನಾವಣೆಯಲ್ಲೂ ಮೈಸೂರು ರಾಜ್ಯ ಎಂದೇ ಪರಿಗಣಿಸಲಾಗಿತ್ತು. ಮೈಸೂರು ರಾಜ್ಯದಲ್ಲಿ ಒಟ್ಟು 26 ಸ್ಥಾನಗಳ ಪೈಕಿ 23 ರಲ್ಲಿ ಕಾಂಗ್ರೆಸ್ ಗೆದ್ದು ಬೀಗಿತ್ತು. ಉಳಿದಂತೆ ಪ್ರಜಾ ಸೋಷಿಯಲಿಸ್ಟ್ ಪಾರ್ಟಿ 1, ಪರಿಶಿಷ್ಟ ಜಾತಿ ಫೆಡರಲ್ 1 ಹಾಗೂ ಪಕ್ಷೇತರ 1 ಸ್ಥಾನ ಬಂದಿತ್ತು.

    ದೇಶದ ಗಮನ ಸೆಳೆದಿದ್ದ ಕರ್ನಾಟಕದ ಪಕ್ಷೇತರ ಅಭ್ಯರ್ಥಿ
    1957 ರಲ್ಲಿ ಅಂದಿನ ಮೈಸೂರು-ಕರ್ನಾಟಕದ ಬಿಜಾಪುರ ಉತ್ತರ ಲೋಕಸಭಾ ಕ್ಷೇತ್ರದಿಂದ (ಈಗಿನ ವಿಜಯಪುರ) ಮರಿಗಪ್ಪ ಸಿದ್ದಪ್ಪ ಸುಗಂಧಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಆಯ್ಕೆಯಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿ ದಾಖಲೆ ಮಾಡಿದ್ದರು.

    ಪಕ್ಷೇತರ ಹಾಗೂ ರಾಷ್ಟ್ರೀಯ ಅಭ್ಯರ್ಥಿ ಸ್ಪರ್ಧೆಯಿಂದಾಗಿ ಬಿಜಾಪುರ ಕ್ಷೇತ್ರ ಅಂದು ರಾಷ್ಟ್ರದ ಗಮನ ಸೆಳೆದಿತ್ತು. ಪಕ್ಷೇತರ ಅಭ್ಯರ್ಥಿ ಹಾಗೂ ರಾಷ್ಟ್ರೀಯ ಅಭ್ಯರ್ಥಿ ಸ್ಫರ್ಧೆಯಿಂದಾಗಿ ಬಿಜಾಪುರ ಕ್ಷೇತ್ರ ಅಂದು ರಾಷ್ಟ್ರದ ಗಮನಸೆಳೆದಿತ್ತು. ಒಟ್ಟು 3,53,151 ಮತಗಳ ಪೈಕಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಮುರಿಯಪ್ಪ ಸಿದ್ದಪ್ಪ ಸುಗಂಧಿ 88,209 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ರಾಜಾರಾಮ ಗಿರಿಧರಲಾಲ ದುಬೆ 77,223 ಮತಗಳನ್ನು ಪಡೆದಿದ್ದರು. ಅಂತಿಮವಾಗಿ ಪಕ್ಷೇತರ ಅಭ್ಯರ್ಥಿಯಾದ ಸುಗಂಧಿಯವರು 10,936 ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಇದನ್ನೂ ಓದಿ: ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆ

    ಮುರಿಯಪ್ಪ ಸಿದ್ದಪ್ಪ ಸುಗಂಧಿ, ದಿನಕರ ದತ್ತಾತ್ರೇಯ ದೇಸಾಯಿ ಹಾಗೂ ಸುಮಲತಾ ಅಂಬರೀಶ್ ಅವರು ಕರ್ನಾಟಕ ರಾಜ್ಯದ ಲೋಕಸಭಾ ಚುನಾವಣಾ ಇತಿಹಾಸದಲ್ಲಿಯೇ ಪಕ್ಷೇತರ ಅಭ್ಯರ್ಥಿಯಾಗಿ ಸಂಸದರಾದ ದಾಖಲೆ ಬರೆದಿದ್ದಾರೆ.

  • ಭಾರತದ ಮೊದಲ ಚುನಾವಣೆ 4 ತಿಂಗಳ ಕಾಲ ನಡೆದಿದ್ದು ನಿಮಗೆ ಗೊತ್ತಾ..?

    ಭಾರತದ ಮೊದಲ ಚುನಾವಣೆ 4 ತಿಂಗಳ ಕಾಲ ನಡೆದಿದ್ದು ನಿಮಗೆ ಗೊತ್ತಾ..?

    – 1951-52 ರಲ್ಲಿ ನಡೆದಿದ್ದ ಮೊದಲ ಲೋಕಸಭೆ ಚುನಾವಣೆ

    -ಪಬ್ಲಿಕ್ ಟಿವಿ ವಿಶೇಷ

    2024ರ ಲೋಕಸಭೆ ಚುನಾವಣೆಗೆ (Lok Sabha Election 2024) ಕ್ಷಣಗಣನೆ ಶುರುವಾಗಿದೆ. ಇನ್ನು ಮುಂದಿನ 2 ತಿಂಗಳ ಅವಧಿಯಲ್ಲಿ ನಡೆಯುವ ಚುನಾವಣೆಯಲ್ಲಿ ದೆಹಲಿ ಗದ್ದುಗೆ ಏರುವವರು ಯಾರು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಕ್ಕಲಿದೆ. ಅದೆಲ್ಲಾ ಸರಿ. ಆದರೆ ಸ್ವತಂತ್ರ ಭಾರತದ ಮೊದಲ ಚುನಾವಣೆ (India’s First Lok Sabha Election) ಹೇಗಿತ್ತು ಎಂಬ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಈ ಕುತೂಹಲ ತಣಿಸುವ ಯತ್ನವನ್ನು ನಿಮ್ಮ ‘ಪಬ್ಲಿಕ್ ಟಿವಿ’ ಇಲ್ಲಿ ಮಾಡಿದೆ.

    ಭಾರತದ ಮೊದಲ ಚುನಾವಣೆ!
    ದೇಶದ ಮೊಟ್ಟ ಮೊದಲ ಚುನಾವಣೆ ಯಾವಾಗ, ಎಷ್ಟು ದಿನಗಳ ಅವಧಿಯಲ್ಲಿ ನಡೆಯಿತು ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಅಂದಿನ ಚುನಾವಣೆಯಲ್ಲಿ ಗೆದ್ದವರು ಯಾರು ಎಂಬೆಲ್ಲಾ ವಿವರಗಳು ಇಲ್ಲಿವೆ. ಇದನ್ನೂ ಓದಿ: ನಮ್ಮ ಬಲಿಷ್ಠ ಸರ್ಕಾರದ ಅವಧಿಯಲ್ಲಿ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ: ಮೋದಿ

    120 ದಿನಗಳ ಸುದೀರ್ಘ ಅವಧಿಯಲ್ಲಿ ಚುನಾವಣೆ!
    ಸ್ವತಂತ್ರ ಭಾರತದ ಮೊದಲ ಸಾರ್ವತ್ರಿಕ ಚುನಾವಣೆ 1951-1952ರಲ್ಲಿ ನಡೆಯಿತು. 1951ರ ಅಕ್ಟೋಬರ್ 25ರಿಂದ 1952ರ ಫೆಬ್ರವರಿ 21ರ ನಡುವೆ 120 ದಿನ ಅಂದ್ರೆ 4 ತಿಂಗಳ ಕಾಲ ಲೋಕಸಭೆ ಚುನಾವಣೆ ನಡೆಯಿತು. ವಿಶ್ವದ ಜನಸಂಖ್ಯೆಯ 6ನೇ ಒಂದು ಭಾಗದಷ್ಟು ಜನರು ಮತ ಚಲಾವಣೆಗೆ ಹೊರಟಿದ್ದು, ವಿಶ್ವದ ಅತಿ ದೊಡ್ಡ ಚುನಾವಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

     

    1874 ಅಭ್ಯರ್ಥಿಗಳು & 53 ಪಕ್ಷಗಳು!
    ದೇಶದ ಮೊದಲ ಚುನಾವಣೆಯಲ್ಲಿ 53 ಪಕ್ಷಗಳಿಂದ ಒಟ್ಟು 1874 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 53 ರಾಜಕೀಯ ಪಕ್ಷಗಳಲ್ಲಿ 14 ಪಕ್ಷಗಳು ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆ ಪಡೆದಿದ್ದವು. ಕಾಂಗ್ರೆಸ್ (Congress), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI), ಸೋಷಲಿಸ್ಟ್ ಪಾರ್ಟಿ, ಕಿಸಾನ್ ಮಜ್ದೂರ್ ಪ್ರಜಾ ಪಾರ್ಟಿ, ಅಖಿಲ ಭಾರತೀಯ ಹಿಂದೂ ಮಹಾಸಭಾ ಮುಂತಾದ ಪಕ್ಷಗಳು ರಾಷ್ಟ್ರಮಟ್ಟದ ಪಕ್ಷಗಳೆಂದು ಮಾನ್ಯತೆ ಪಡೆದಿದ್ದವು.

    ಮೊದಲ ಲೋಕಸಭೆಯಲ್ಲಿತ್ತು 489 ಸೀಟು
    ಭಾರತ ದೇಶದ ಮೊದಲ ಲೋಕಸಭೆಯಲ್ಲಿ ಒಟ್ಟು 489 ಕ್ಷೇತ್ರಗಳಿದ್ದವು. 489 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು 364 ಸೀಟುಗಳನ್ನು ಗೆದ್ದು ಭರ್ಜರಿ ಬಹುಮತ ಗಳಿಸಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ಶೇಕಡಾ 45ರಷ್ಟು ವೋಟ್ ಷೇರು ಪಡೆದಿತ್ತು. ಸಿಪಿಐ ಪಕ್ಷ 16 ಸೀಟುಗಳನ್ನು ಗೆದ್ದು ಪ್ರಮುಖ ವಿಪಕ್ಷವಾಗಿತ್ತು. ಜಯಪ್ರಕಾಶ್ ನಾರಾಯಣ್ ಹಾಗೂ ರಾಮ್ ಮನೋಹರ್ ಲೋಹಿಯಾ ನಾಯಕತ್ವದ ಸೋಷಲಿಸ್ಟ್ ಪಾರ್ಟಿ 12 ಸೀಟು ಗೆದ್ದು 3ನೇ ಸ್ಥಾನ ಪಡೆಯಿತು. ಇದನ್ನೂ ಓದಿ: ಇಂದಿರಾ ಗಾಂಧಿ ಹಂತಕನ ಪುತ್ರ ಪಂಜಾಬ್‌ನಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧೆ

    ನೆಹರೂ ಭಾರತದ ಮೊದಲ ಪ್ರಧಾನಿ
    364 ಸೀಟು ಗೆದ್ದ ಜವಾಹರ್ ಲಾಲ್ ನೆಹರೂ (Jawaharlal Nehru) ಸ್ವತಂತ್ರ ಭಾರತದಲ್ಲಿ ಜನರಿಂದ ಆಯ್ಕೆಯಾದ ಮೊದಲ ಪ್ರಧಾನಿ ಎಂಬ ಖ್ಯಾತಿಗೆ ಪಾತ್ರರಾದರು.

    1947ರ ಆಗಸ್ಟ್ 15ರಂದೇ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದರೂ ದೇಶದ ಮೊದಲ ಚುನಾವಣೆ 1951ರಲ್ಲಿ ನಡೆಯಿತು. 1947ರಿಂದ 6ನೇ ಕಿಂಗ್ ಜಾರ್ಜ್ ಆಡಳಿತದಲ್ಲಿ ಲೂಯಿಸ್ ಮೌಂಟ್ ಬ್ಯಾಟನ್ ಭಾರತದ ಮೊತ್ತಮೊದಲ ಗವರ್ನರ್ ಜನರಲ್ ಆಗಿ ಅಧಿಕಾರ ಚಲಾಯಿಸುತ್ತಿದ್ದರು. 1949ರ ನವೆಂಬರ್ 26ರಂದು ಸಂವಿಧಾನವನ್ನು ಅಂಗೀಕರಿಸಿದ ಬಳಿಕ, ಜವಾಹರ್ ಲಾಲ್ ನೆಹರೂ ನೇತೃತ್ವದ ಸಂವಿಧಾನ ಸಭೆಯು ಮೊದಲ ಚುನಾಯಿತ ಸರ್ಕಾರ ಅಧಿಕಾರ ಸ್ವೀಕರಿಸುವ ಮುನ್ನ ಸಂಸತ್ತಿನಂತೆ ಕಾರ್ಯನಿರ್ವಹಿಸುತ್ತಿತ್ತು. ನೆಹರೂ ಅವರ ಈ ಮಧ್ಯಂತರ ಕ್ಯಾಬಿನೆಟ್‌ನಲ್ಲಿ ವಿವಿಧ ಸಮುದಾಯಗಳು ಮತ್ತು ಪಕ್ಷಗಳ 15 ಸದಸ್ಯರಿದ್ದರು. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಆರ್ಟಿಕಲ್ 370 ಸಹವಾಸ ಬೇಡ: ಕಾಂಗ್ರೆಸ್‍ಗೆ ಅಮಿತ್ ಶಾ ಎಚ್ಚರಿಕೆ

    1948ರ ಜುಲೈನಲ್ಲೇ ಚುನಾವಣೆ ನಡೆಸಲು ರಾಷ್ಟ್ರಮಟ್ಟದ ನಾಯಕರು ಸಿದ್ಧರಿದ್ದರೂ ಚುನಾವಣೆ ನಡೆಸುವುದು ಹೇಗೆ ಎಂಬ ಕಾನೂನು ಅಂದು ರೂಪುಗೊಂಡಿರಲಿಲ್ಲ. ಅಂಬೇಡ್ಕರ್ ಅವರ ನೇತೃತ್ವದಲ್ಲಿ 1950ರ ಜನವರಿ 26ರಂದು ಭಾರತದಲ್ಲಿ ಸಂವಿಧಾನ ಜಾರಿಗೆ ಬಂತು.

    ಸುಕುಮಾರ್ ಸೇನ್ ಭಾರತದ ಮೊದಲ ಚುನಾವಣಾ ಆಯುಕ್ತ
    ಭಾರತದಲ್ಲಿ ಸಂವಿಧಾನ ಜಾರಿಗೆ ಬಂದ ಬಳಿಕ ದೇಶದಲ್ಲಿ ಚುನಾವಣಾ ಆಯೋಗ ರಚನೆಯಾಯಿತು. ದೇಶದಲ್ಲಿ ಮೊದಲ ಚುನಾವಣೆ ನಡೆಸುವ ಮಹತ್ವದ ಜವಾಬ್ದಾರಿ ಸುಕುಮಾರ್ ಸೇನ್ ಅವರ ಮೇಲೆ ಬಿತ್ತು. ಸುಕುಮಾರ್ ಸೇನ್ ಅವರೇ ದೇಶದ ಮೊಟ್ಟಮೊದಲ ಚುನಾವಣಾ ಆಯುಕ್ತರಾಗಿದ್ದರು.

    ಚುನಾವಣೆಗೆ ಸಿದ್ಧವಾಗಲು ಬೇಕಾಯಿತು 3 ವರ್ಷ
    ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಚುನಾವಣೆ ನಡೆಸಬೇಕು ಎನ್ನುವುದು ಜವಾಹರ್ ಲಾಲ್ ನೆಹರೂ ಅವರ ಉದ್ದೇಶವಾಗಿತ್ತು. ಪ್ರಜಾಪ್ರಭುತ್ವದ ಸವಿಯುಣ್ಣಲು ಭಾರತ ಸ್ವಾತಂತ್ರ್ಯ ಸಿಕ್ಕಿದ ಬಳಿಕ ಮೂರು ವರ್ಷಗಳ ಕಾಲ ಕಾಯಬೇಕಾಯಿತು. ಆದರೆ ಭಾರತದಂತಹ ದೇಶದಲ್ಲಿ ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕ ರೀತಿಯಲ್ಲಿ ದೊಡ್ಡ ಮಟ್ಟದ ಚುನಾವಣೆ ನಡೆಸುವುದು ಅಂದುಕೊಂಡಷ್ಟು ಸರಳವಾಗಿರಲಿಲ್ಲ. ಹೀಗಾಗಿ ಸಂವಿಧಾನ ಜಾರಿಗೆ ಬಂದರೂ ದೇಶ ಮೊದಲ ಚುನಾವಣೆ ನೋಡಲು 3 ವರ್ಷ ಕಾಯಬೇಕಾಯಿತು. ಇದನ್ನೂ ಓದಿ: ನಮ್ಮ ಬಲಿಷ್ಠ ಸರ್ಕಾರದ ಅವಧಿಯಲ್ಲಿ ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ: ಮೋದಿ

    ಸವಾಲುಗಳೇ ಅಧಿಕ
    ದೇಶದಲ್ಲಿ ಮೊದಲ ಲೋಕಸಭೆ ಚುನಾವಣೆ ನಡೆಯುವ ವೇಳೆ ಭಾರತದ ಜನಸಂಖ್ಯೆ 36 ಕೋಟಿ ಇತ್ತು. ಸಂವಿಧಾನವನ್ನು ಜಾರಿಗೊಳಿಸಿದಾಗ ಸಾರ್ವತ್ರಿಕ ಮತದಾನದ ವಯಸ್ಸನ್ನು 21 ಎಂದು ನಿಗದಿಗೊಳಿಸಿತು. ಇದರ ಫಲವಾಗಿ ದೇಶದ 17 ಕೋಟಿ ಜನರು ಮತದಾನ ಮಾಡಲು ಅರ್ಹತೆ ಪಡೆದರು.

    ಅದರಲ್ಲೂ, ಅರ್ಹ 17 ಕೋಟಿ ಜನರಲ್ಲಿ ಶೇ.85ರಷ್ಟು ಜನರಿಗೆ ಓದಲು ಅಥವಾ ಬರೆಯಲು ಬರುತ್ತಿರಲಿಲ್ಲ. ಹಾಗಾಗಿ ಮತದಾರರ ಗುರುತಿಸುವಿಕೆ, ಹೆಸರು ಸೇರಿಸುವುದು ಮತ್ತು ಮತದಾರನಾಗಿ ನೋಂದಣಿ ಮಾಡಿಸುವುದು ಸವಾಲಿನ ಕೆಲಸವೇ ಆಗಿತ್ತು.

    ಜನಗಣತಿ ಆಧಾರದಲ್ಲಿ ಕ್ಷೇತ್ರ ವಿಂಗಡಣೆ
    ದೇಶದ ಜನಗಣತಿ ಆಧಾರದಲ್ಲಿ ಲೋಕಸಭಾ ಕ್ಷೇತ್ರವನ್ನು ವಿಂಗಡಿಸಬೇಕಾಗಿತ್ತು. ಈ ವಿಂಗಡಣೆಯನ್ನು 1951ರಲ್ಲಿ ಮಾಡಲಾಯಿತು. ದೇಶದ ಅನಕ್ಷರಸ್ಥ ಜನರಿಗೆ ಅರ್ಥ ಮಾಡಿಸಲು ಪಕ್ಷಗಳ ಚಿಹ್ನೆ, ಬ್ಯಾಲಟ್ ಪೇಪರ್ ಹಾಗೂ ಬ್ಯಾಲಟ್ ಬಾಕ್ಸ್ ಅಥವಾ ಮತ ಪೆಟ್ಟಿಗೆ ವಿನ್ಯಾಸಗೊಳಿಸಬೇಕಾದ ಸಮಸ್ಯೆಗಳು ಇದ್ದವು. ಮತದಾನಕ್ಕಾಗಿ ಮತಗಟ್ಟೆ ನಿರ್ಮಾಣ ಮಾಡಬೇಕಿತ್ತು. ದಕ್ಷ ಅಧಿಕಾರಿಗಳನ್ನು ಆಯ್ಕೆ ಮಾಡಿ ಅವರಿಗೆ ಚುನಾವಣಾ ತರಬೇತಿ ನೀಡಬೇಕಿತ್ತು.

    ಆಹಾರದ ಕೊರತೆಯೂ ಇತ್ತು!
    ಮತದಾನದ ಈ ಎಲ್ಲ ಸವಾಲುಗಳ ನಡುವೆ ಅಂದು ಭಾರತದ ಹಲವು ರಾಜ್ಯಗಳಲ್ಲಿ ಆಹಾರದ ಕೊರತೆ ಇತ್ತು. ಹಾಗಾಗಿ ಅಧಿಕಾರಿಗಳು ಪರಿಹಾರ ಕಾರ್ಯದಲ್ಲೂ ಭಾಗಿಯಾಗಬೇಕಿತ್ತು. ಈ ಎಲ್ಲ ಕೆಲಸಗಳು ಮುಗಿಯಲು ಭಾರೀ ಸಮಯ ಬೇಕಾಯಿತು. ಆದರೆ ಕೊನೆಯಲ್ಲಿ ಭಾರತದ ಚುನಾವಣೆ ನಡೆದಾಗ ಶೇ.45.70ರಷ್ಟು ಜನರು ತಮ್ಮ ಮನೆಯಿಂದ ಹೊರಬಂದು ಅದೇ ಮೊದಲ ಬಾರಿಗೆ ಮತ ಚಲಾಯಿಸಿದರು. ಈ ಮೂಲಕ ಭಾರತ ಜನರಿಂದ, ಜನರಿಗಾಗಿ, ಜನರಿಗೋಸ್ಕರ ಆಯ್ಕೆಯಾದ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಯಿತು. ಮೊದಲ ಚುನಾವಣೆಯ ಫಲಿತಾಂಶ 1952ರ ಫೆಬ್ರವರಿ 10ರಂದು ಪ್ರಕಟವಾಯಿತು.

  • ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ

    ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ

    ನವದೆಹಲಿ: ಹಳೇ ಸಂಸತ್‌ ಭವನಕ್ಕೆ (Old Parliament Bulding) ಬೀಳ್ಕೊಡುಗೆ ನೀಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಪ್ರಧಾನಿಯಾಗಿದ್ದ ಜವಾಹರಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದಾರೆ.

    ಸಂಸತ್ತಿನಲ್ಲಿ ಜವಾಹರಲಾಲ್ ನೆಹರೂ (Jawaharlal Nehru) ಅವರ ಐತಿಹಾಸಿಕ ‘ಎ ಟ್ರೈಸ್ಟ್ ವಿತ್ ಡೆಸ್ಟಿನಿ’ ಭಾಷಣದ ಪ್ರತಿಧ್ವನಿಯು ದೇಶದ ಚುನಾಯಿತ ಪ್ರತಿನಿಧಿಗಳಿಗೆ ಸ್ಫೂರ್ತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದಾರೆ. ಪ್ರಧಾನಿ ಮೋದಿ, ಹಳೆಯ ಸಂಸತ್ತಿನ ಕಟ್ಟಡದ ಸುಮಾರು ಎಂಟು ದಶಕಗಳ ಪ್ರಯಾಣ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 5 ದಿನ ಸಂಸತ್ ವಿಶೇಷ ಅಧಿವೇಶನ

    “ಸಂಸತ್ತಿನಲ್ಲಿ ನೆಹರೂ ಮಾಡಿದ ಮಧ್ಯರಾತ್ರಿಯ ಭಾಷಣ ಈಗಲೂ ಪ್ರತಿಧ್ವನಿಸುತ್ತಿದೆ. ಅಟಲ್ ಬಿಹಾರಿ ವಾಜಪೇಯಿ ಅವರು, ಸರ್ಕಾರಗಳು ಬರುತ್ತವೆ ಮತ್ತು ಹೋಗುತ್ತವೆ. ಆದರೆ ಈ ದೇಶ ಉಳಿಯುತ್ತದೆ ಎಂದು ಹೇಳಿದ್ದೂ ಈ ಸದನದಲ್ಲೇ. ಸಂಸತ್ತಿನ ಐತಿಹಾಸಿಕ ಪಯಣದಲ್ಲಿ ಭಾಗಿಯಾದ ಪ್ರತಿಯೊಬ್ಬರನ್ನು ನೆನಪಿಸಿಕೊಳ್ಳುವ ಸಂದರ್ಭ ಇದಾಗಿದೆ” ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.

    ರಾಜೇಂದ್ರ ಪ್ರಸಾದ್ ಅವರಿಂದ ಹಿಡಿದು ರಾಮನಾಥ್ ಕೋವಿಂದ್, ದ್ರೌಪದಿ ಮುರ್ಮು ಅವರ ವರೆಗೆ ಎಲ್ಲರ ಮಾರ್ಗದರ್ಶನವನ್ನು ಈ ಸಂಸತ್ತು ಪಡೆದುಕೊಂಡಿದೆ. ಜವಾಹರಲಾಲ್ ನೆಹರೂ, ಲಾಲ್ ಬಹದ್ದೂರ್ ಶಾಸ್ತ್ರಿ, ಅಟಲ್ ಬಿಹಾರಿ ವಾಜಪೇಯಿ, ಮನಮೋಹನ್ ಸಿಂಗ್ ಅವರ ಕಾಲಕ್ಕೂ ಈ ಸಂಸತ್ತು ಸಾಕ್ಷಿಯಾಗಿದೆ. ಸಂಸತ್ತಿನ ಕಲಾಪಗಳು ಈಗ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಬಹುದು. ಆದರೆ ಈ ಕಟ್ಟಡವು ಭವಿಷ್ಯದ ಪೀಳಿಗೆಗೆ ಯಾವಾಗಲೂ ಸ್ಫೂರ್ತಿ ನೀಡುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮ ಕಾಯ್ತಿದ್ದಾನೆ: ಯೋಗಿ ಆದಿತ್ಯನಾಥ್

    ಆಗಸ್ಟ್ 15, 1947 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ. ಅಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ದೇಶದ ಮೊದಲ ಪ್ರಧಾನಿ ನೆಹರೂ, “ಈ ತಡರಾತ್ರಿಯಲ್ಲಿ ಜಗತ್ತೇ ಮಲಗಿರುವಾಗ, ಭಾರತ ಜೀವನ ಮತ್ತು ಸ್ವಾತಂತ್ರ್ಯಕ್ಕೆ ಎಚ್ಚರಗೊಂಡಿದೆ” ಎಂದು ಹೇಳಿದ್ದರು.

    ಸಂಸತ್ತಿನ ವಿಶೇಷ ಅಧಿವೇಶನ ಇಂದಿನಿಂದ ಆರಂಭವಾಗಿದೆ. ಹಳೆ ಸಂಸತ್ತಿನಲ್ಲಿ ಮೊದಲ ದಿನದ ಅಧಿವೇಶನ ನಡೆಯಿತು. ಮಂಗಳವಾರ ಸಂಸತ್‌ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನೆಹರೂ ಯಾಕೆ ಹೀಗೆ ಮಾಡಿದ್ರು: ಕಾಶ್ಮೀರ ಬಗ್ಗೆ ನಿರ್ಮಲಾ ಸೀತಾರಾಮನ್‌ ಪ್ರಶ್ನೆ

    ನೆಹರೂ ಯಾಕೆ ಹೀಗೆ ಮಾಡಿದ್ರು: ಕಾಶ್ಮೀರ ಬಗ್ಗೆ ನಿರ್ಮಲಾ ಸೀತಾರಾಮನ್‌ ಪ್ರಶ್ನೆ

    ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಕೆಲಸವನ್ನು ಯಾಕೆ ಮಾಡಿದರು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಶ್ನಿಸಿದ್ದಾರೆ.

    ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ನೆಹರೂ ಅವರು ಕಾಶ್ಮೀರ ಸಮಸ್ಯೆಯನ್ನು ವಿಶ್ವಸಂಸ್ಥೆಗೆ ಕೊಂಡೊಯ್ಯುವ ಮೂಲಕ ಅದನ್ನು ಅಂತಾರಾಷ್ಟ್ರೀಯ ವಿಷಯವನ್ನಾಗಿಸಿದ್ದಾರೆ. ಇದು ಆಂತರಿಕ ವಿಚಾರವಾಗಿರುವುದರಿಂದ ಜಾಗತಿಕ ವೇದಿಕೆಗೆ ಹೋಗಬಾರದಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಇದು ಉತ್ತರ ಪ್ರದೇಶ ಅಲ್ಲ, ಬಂಗಾಳ: ಬಿಜೆಪಿಗೆ ಮಮತಾ ತಿರುಗೇಟು

    ಭಾರತ ಮತ್ತು ಪಾಕಿಸ್ತಾನದ ನಡುವೆ ಮೊದಲ ಯುದ್ಧ ಪ್ರಾರಂಭವಾದ ನಂತರ 1948ರ ಜನವರಿಯಂದು ನೆಹರೂ ಅವರು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ (UNSC) ಮನವಿ ಮಾಡಿದ್ದರು. ಅವರ ಮನವಿಯನ್ನು ಆಧರಿಸಿ ಕೌನ್ಸಿಲ್ ಎರಡು ದೇಶಗಳ ನಡುವೆ ಮಧ್ಯಸ್ಥಿಕೆ ವಹಿಸಲು ಭಾರತ ಮತ್ತು ಪಾಕಿಸ್ತಾನಕ್ಕಾಗಿ ವಿಶ್ವಸಂಸ್ಥೆಯ ಆಯೋಗವನ್ನು ಸ್ಥಾಪಿಸಿತು. ಕಾಶ್ಮೀರ ಸಮಸ್ಯೆ ಮೂಲಭೂತವಾಗಿ ಭಾರತಕ್ಕೆ ಸಂಬಂಧಿಸಿದ ವಿಷಯ. ಅದನ್ನು ಕಾಂಗ್ರೆಸ್‌, ವಿಶ್ವಸಂಸ್ಥೆಗೆ ಕೊಂಡೊಯ್ಯಿತು. ಬ್ರಿಟಿಷರು ಅವರಿಗೆ ಏನಾದರೂ ಸಲಹೆ ನೀಡಿರಬಹುದು. ಸಮಸ್ಯೆ ಸುಧಾರಿಸುವುದಿಲ್ಲ ಅಂತ ಯುಎನ್‌ಗೆ ಕೊಂಡೊಯ್ದರು ಎಂದು ಸನ್ನಿವೇಶ ಕುರಿತು ಬೇಸರ ವ್ಯಕ್ತಪಡಿಸಿದ್ದಾರೆ.

    ಪಾಕಿಸ್ತಾನವನ್ನು ಉಲ್ಲೇಖಿಸಿದ ಸೀತಾರಾಮನ್, ಇದುವರೆಗೂ ನಮ್ಮ ನೆರೆಹೊರೆಯವರು ಅದನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಕಾಶ್ಮೀರವನ್ನು ಭಾರತದ ಅವಿಭಾಜ್ಯ ಅಂಗ. ಇದು ಜಾಗತಿಕ ವೇದಿಕೆಗೆ ಹೋಗಬಾರದ ವಿಷಯ. ಇದು ಮೂಲಭೂತವಾಗಿ ಭಾರತೀಯ ಸಮಸ್ಯೆಯಾಗಿದೆ. ನಾವು ಈಗ ಅದನ್ನು ನಿಭಾಯಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರ್‌ ಫೈಲ್ಸ್‌ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ IAS ಅಧಿಕಾರಿ ನಿಯಾಜ್‌ ಖಾನ್‌ಗೆ ನೋಟಿಸ್‌: MP ಗೃಹ ಸಚಿವ

    ಜಮ್ಮು ಮತ್ತು ಕಾಶ್ಮೀರಕ್ಕೆ 2022-23ನೇ ಸಾಲಿನಲ್ಲಿ 1.42 ಲಕ್ಷ ಕೋಟಿ ರೂ. ಹಣ ಮೀಸಲಿಡಲು ಬಜೆಟ್‌ಗೆ ಸಂಸತ್‌ ಬುಧವಾರ ಅನುಮೋದನೆ ನೀಡಿತು. ರಾಜ್ಯಸಭೆಯು ಸಂಬಂಧಿತ ಮಸೂದೆಗಳನ್ನು ಲೋಕಸಭೆಗೆ ಹಿಂದಿರುಗಿಸಿತು. ಲೋಕಸಭೆಯು ಮಾರ್ಚ್ 14 ರಂದು ಮಸೂದೆಗಳನ್ನು ಅಂಗೀಕರಿಸಿತ್ತು.

  • ಏನಿದು ಆರ್ಟಿಕಲ್ 370, 35 (ಎ) ಇದು ಹೇಗೆ ಜಾರಿಗೆ ಬಂತು?

    ಏನಿದು ಆರ್ಟಿಕಲ್ 370, 35 (ಎ) ಇದು ಹೇಗೆ ಜಾರಿಗೆ ಬಂತು?

    ಬೆಂಗಳೂರು: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ಅಂದಿನ ಪ್ರಧಾನ ಮಂತ್ರಿಯಾದ ಜವಾಹರಲಾಲ್ ನೆಹರೂ ಅವರು ಆರ್ಟಿಕಲ್ 370, 35(ಎ) ವಿಧಿಯನ್ನು ಜಾರಿ ಮಾಡಿ ಭಾರತದಲ್ಲಿ ಕಾಶ್ಮೀರವನ್ನು ಒಂದು ಪ್ರತ್ಯೇಕ ರಾಜ್ಯ ಅದಕ್ಕೆ ಬೇರೆ ಸಂವಿಧಾನ ಮಾಡಲು ಅವಕಾಶ ನೀಡಿದ್ದರು.

    35(ಎ) ವಿಧಿಯಲ್ಲಿರುವ ಸವಲತ್ತುಗಳೇನು?
    ರಾಜ್ಯದ ಶಾಶ್ವತ ನಿವಾಸಿಗಳು ಮತ್ತು ಅವರ ಹಕ್ಕುಗಳ ಬಗ್ಗೆ ಸ್ವತಂತ್ರ್ಯ ನಿರ್ಧಾರ ಕೈಗೊಳ್ಳುವ ನಿರ್ಧಾರವನ್ನು ಈ ವಿಧಿ ಜಮ್ಮು-ಕಾಶ್ಮೀರ ಸರ್ಕಾರಕ್ಕೆ ನೀಡುತ್ತದೆ. 1954ರಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಜವಾಹರಲಾಲ್ ನೆಹರೂ ನೇತೃತ್ವದ ಸರ್ಕಾರದ ಸಲಹೆ ಮೇರೆಗೆ ಆಗಿನ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಸಾಂವಿಧಾನಿಕ ಆದೇಶದ ಮೂಲಕ ಈ ವಿಧಿಯನ್ನು ಸಂವಿಧಾನಕ್ಕೆ ಸೇರಿಸಿದರು.

    1956ರಲ್ಲಿ ಜಮ್ಮು-ಕಾಶ್ಮೀರಕ್ಕಾಗಿ ಪ್ರತ್ಯೇಕ ಸಂವಿಧಾನವನ್ನು ರಚಿಸಲಾಗಿದ್ದು, ಇದು ರಾಜ್ಯದ ಶಾಶ್ವತ ನಿವಾಸಿಗಳನ್ನು ನಿರ್ಧರಿಸುತ್ತದೆ. ಈ ವಿಧಿಯ ಪ್ರಕಾರ 1954 ಮೇ 14ಕ್ಕೂ ಮುನ್ನ ರಾಜ್ಯದಲ್ಲಿ ನೆಲೆಸಿದವರು ಅಥವಾ ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ನೆಲೆಸಿದ್ದು, ಕಾನೂನು ಬದ್ಧವಾಗಿ ಸ್ಥಿರಾಸ್ತಿ ಹೊಂದಿರುವವರಿಗಷ್ಟೇ ರಾಜ್ಯದ ಶಾಶ್ವತ ನಿವಾಸಿ ಹಕ್ಕು ದೊರೆಯುತ್ತದೆ.

    ಈ ವಿಧಿಯ ಪ್ರಕಾರ ಹೊರ ರಾಜ್ಯದವರು ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಲು ಅಥವಾ ಸರ್ಕಾರಿ ಉದ್ಯೋಗ ಹೊಂದಲು ಅವಕಾಶವಿಲ್ಲ. 35 (ಎ) ವಿಧಿಯ ಮೂಲ ನಿಯಮವು ಮಹಿಳೆಯರ ವಿಚಾರದಲ್ಲಿ ತಾರತಮ್ಯ ಹೊಂದಿದ್ದು, ಅದರ ಪ್ರಕಾರ ಹೊರ ರಾಜ್ಯದ ವ್ಯಕ್ತಿಯನ್ನು ವಿವಾಹವಾಗುವ ಜಮ್ಮು-ಕಾಶ್ಮೀರ ಮಹಿಳೆ ಶಾಶ್ವತ ನಿವಾಸಿ ಹಕ್ಕನ್ನು ಕಳೆದುಕೊಳ್ಳುತ್ತಾಳೆ. ಆದರೆ ಪರುಷರು ಬೇರೆ ರಾಜ್ಯದ ಮಹಿಳೆಯನ್ನು ವಿವಾಹವಾದರೆ ಆ ಪುರಷನ ಹಕ್ಕಿಗೆ ಯಾವುದೇ ಧಕ್ಕೆ ಆಗುವುದಿಲ್ಲ. 2002 ರಲ್ಲಿ ಜಮ್ಮು-ಕಾಶ್ಮೀರ ಹೈಕೋರ್ಟ್ ಐತಿಹಾಸಿಕ ತೀರ್ಪಿನಲ್ಲಿ ಇಂತಹ ಹಕ್ಕುನ್ನು ಮಹಿಳೆ ಕಳೆದುಕೊಳ್ಳುವುದಿಲ್ಲ. ಆದರೆ ಈ ದಂಪತಿಗೆ ಜನಿಸುವ ಮಕ್ಕಳಿಗೆ ಶಾಶ್ವತ ನಿವಾಸಿ ಹಕ್ಕು ಇರುವುದಿಲ್ಲ ಎಂದು ತೀರ್ಪು ನೀಡಿತ್ತು.

    35 (ಎ) ವಿಧಿಯ ಬಗ್ಗೆ ಆಕ್ಷೇಪಗಳು
    ಸಂವಿಧಾನಕ್ಕೆ 35 (ಎ) ವಿಧಿಯನ್ನು ಏಕಾಏಕಿ ಸೇರ್ಪಡೆ ಮಾಡಲಾಗಿದ್ದು, ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆದು, ಪಾರ್ಲಿಮೆಂಟಿನ ಅಂಗೀಕಾರ ಪಡೆದುಕೊಂಡಿಲ್ಲ. ಹೀಗಾಗಿ ಇದನ್ನು ರದ್ದು ಪಡಿಸಬೇಕೆಂದು ವಿ.ದಿ ಸಿಟಿಜನ್ಸ್ ಎಂಬ ಎನ್‍ಜಿಒ 2014 ರಲ್ಲಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

    ರಾಜ್ಯದ ಮಹಿಳೆಯರು ಹೊರ ರಾಜ್ಯದವರನ್ನು ಮದುವೆಯಾದರೆ ಅಂತಹವರ ಮಕ್ಕಳಿಗೆ ಶಾಶ್ವತ ನಿವಾಸಿ ಹಕ್ಕು ಕಿತ್ತುಕೊಳ್ಳುವ 35 (ಎ) ವಿಧಿಯನ್ನು ರದ್ದು ಮಾಡಬೇಕು ಎಂದು ಜಮ್ಮು – ಕಾಶ್ಮೀರದ ಇಬ್ಬರು ಮಹಿಳೆಯರು ಸುಪ್ರೀಂಕೋರ್ಟ್‍ನಲ್ಲಿ ಅರ್ಜಿ ಹಾಕಿದ್ದರು.

    370 ನೇ ವಿಧಿ ಪ್ರಕಾರ ಕಾಶ್ಮೀರಕ್ಕೆ ವಿಶೇಷ ಅಧಿಕಾರ
    370 ಭಾರತ ಸಂವಿಧಾನದ ಈ ವಿಧಿಯು ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ವಾಯತ್ತತೆಯನ್ನು ಕಲ್ಪಿಸುತ್ತದೆ. ಇದರ ಅಡಿಯಲ್ಲಿ ಜಮ್ಮು – ಕಾಶ್ಮೀರದಲ್ಲಿ ರಕ್ಷಣೆ, ವಿದೇಶಾಂಗ ವ್ಯವಹಾರ ಹಾಗೂ ಸಂವಹನ ಈ ಮೂರು ಕ್ಷೇತ್ರಗಳನ್ನು ಹೊರತು ಪಡಿಸಿ, ಬೇರೆ ಯಾವುದೇ ಕಾನೂನು ಜಾರಿಗೊಳಿಸುವ ಮುನ್ನ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕು.

    ಯುದ್ಧ, ಬಾಹ್ಯ ಆಕ್ರಮಣ ಹೊರತಾಗಿ ಬೇರೆ ಯಾವುದೇ ಸಂದರ್ಭದಲ್ಲಿ ಜಮ್ಮು-ಕಾಶ್ಮೀರದಲ್ಲಿ ತುರ್ತು ಪರಿಸ್ಥಿತಿ ಹೇರಲು ಕೇಂದ್ರಕ್ಕೆ ಅಧಿಕಾರವಿಲ್ಲ. ಆಂತರಿಕ ಗಲಭೆ, ರಾಜಕೀಯ ಅಸ್ಥಿರತೆ ಮುಂತಾದ ಸಂದರ್ಭಗಳಲ್ಲಿ ರಾಜ್ಯ ಸರ್ಕಾರದ, ರಾಜ್ಯಪಾಲರ ಮನವಿ ಅಥವಾ ಸೂಚನೆ ಮೇರೆಗೆ ಮಾತ್ರ ತುರ್ತು ಪರಿಸ್ಥಿತಿ ಹೇರಬಹುದು.