Tag: ಜಶೋದಾ ಬೆನ್

  • ಬೆಂಗಳೂರಿನ ದೇಗುಲದಲ್ಲಿ ಮೋದಿ ಪತ್ನಿ ಜಶೋದಾ ಬೆನ್

    ಬೆಂಗಳೂರಿನ ದೇಗುಲದಲ್ಲಿ ಮೋದಿ ಪತ್ನಿ ಜಶೋದಾ ಬೆನ್

    ಬೆಂಗಳೂರು: ಸದ್ಯ ಕರ್ನಾಟಕದ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಪ್ರಧಾನಿ ಮೋದಿ ಅವರ ಪತ್ನಿ ಜಶೋದಾ ಬೆನ್ ಇಂದು ಬೆಂಗಳೂರಿನ ದೇವಾಲಯಗಳಿಗೆ ಭೇಟಿ ನೀಡಿದ್ದಾರೆ.

    ಬೆಂಗಳೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಜಶೋದಾ ಬೆನ್ ಅವರು, ಇಂದು ಬೆಳಗ್ಗೆ ರಾಜನುಕುಂಟೆಯ ವೇಣುಗೋಪಾಲ ಸ್ವಾಮಿ ದೇವಾಲಯ ಮತ್ತು ಮಹದೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ದೇವರ ದರ್ಶನ ಪಡೆದುಕೊಂಡರು.

    ಬುಧವಾರ ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ರಾಮಚಂದ್ರಾಪುರ ಮಠಕ್ಕೆ ತೆರಳುತ್ತಿದ್ದ ಜಶೋದಾ ಬೆನ್ ಅವರು ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಕೆಲಕಾಲ ವಿಶ್ರಾಂತಿ ಪಡೆದ್ದರು. ಜಶೋದಾ ಅವರು ನಿತ್ಯ ಬೆಳಿಗ್ಗೆ ಶಿವನ ದರ್ಶನ ಪಡೆಯದೇ ನೀರು ಸಹ ಕುಡಿಯುವುದಿಲ್ಲ. ಹೀಗಾಗಿ ಶಿವನ ದೇಗುಲ ಹುಡುಕಿಕೊಂಡು ಅವರು ನೀಲಕಂಠೇಶ್ವರಸ್ವಾಮಿ ದೇಗುಲಕ್ಕೆ ಬಂದಿದ್ದರು. ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸುಮಾರು 20 ನಿಮಿಷ ದೇಗುಲದಲ್ಲಿದ್ದರು.

    ಪ್ರವಾಸಿ ಮಂದಿರದಲ್ಲಿ ಅವರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಉಪಾಹಾರ ಸೇವನೆಗೂ ಮುನ್ನ ಅಶ್ವತ್ಥಾ ವೃಕ್ಷಕ್ಕೆ ಪೂಜೆ ಸಲ್ಲಿಸುವ ಇಚ್ಛೆ ವ್ಯಕ್ತಪಡಿಸಿದರು. ಆದರೆ ಅಶ್ವಥ ಮರದ ಕಟ್ಟೆ ಸಿಗದೇ ಅತ್ತಿ ಮರ ಸುತ್ತಿ ಭಕ್ತಿ ಸಮರ್ಪಿಸಿದ ಬಳಿಕ ಆಹಾರ ಸೇವನೆ ಮಾಡಿದ್ದರು. ನಂತರ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿದ್ದ ಜಶೋದಾ ಬೆನ್, ಸಂಜೆ ಆರು ಗಂಟೆ ವೇಳೆಗೆ ಶೃಂಗೇರಿ ಶಾರದಾಂಬೆ ಸನ್ನಿದಿಗೆ ಭೇಟಿ ಕೊಟ್ಟಿದ್ದರು. ಈ ವೇಳೆ ತುಂಗಾ ನದಿ ಹಾಗೂ ಸುತ್ತಮುತ್ತಲಿನ ಪರಿಸರ ಕಂಡು ಪುಳಕಿತರಾಗಿದ್ದರು.

    ಬಳಿಕ ಶೃಂಗೇರಿ ಶಾರದಾಂಬೆ ದರ್ಶನ ಪಡೆದು, ಶಾರದಾಂಬೆ ಸನ್ನಿಧಿಯಲ್ಲಿ ಗರ್ಭಗುಡಿಗೆ ಮೂರು ಸುತ್ತು ಪ್ರದಕ್ಷಿಣೆ ಹಾಕಿ, ನಂತರ ಎರಡು ನಿಮಿಷಗಳ ಕಾಲ ಪ್ರಾರ್ಥನೆ ಸಲ್ಲಿಸಿದ್ದರು. ಅಲ್ಲಿಂದ ಶ್ರೀಮಠಕ್ಕೆ ತೆರಳಿದ ಜಶೋದಾ ಬೆನ್, ಶೃಂಗೇರಿ ಮಠದ ಜಗದ್ಗುರುಗಳಾದ ಭಾರತೀ ತೀರ್ಥ ಸ್ವಾಮೀಜಿ ಹಾಗೂ ವಿಧುಶೇಖರ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಬೆಂಗಳೂರುಗೆ ವಾಪಸ್ ಆಗಿದ್ದರು.

  • ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಪತ್ನಿ

    ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಪತ್ನಿ

    ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅವರು ಇಂದು ಜಿಲ್ಲೆಯ ಹೊಸನಗರ ತಾಲೂಕಿನ ರಾಮಚಂದ್ರಪುರ ಮಠಕ್ಕೆ ಭೇಟಿ ನೀಡಿ, ಮಠದಲ್ಲಿ ನಡೆಯುತ್ತಿದ್ದ ಕೃಷ್ಣಾರ್ಪಣಂ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಮೊದಲು ಇಲ್ಲಿನ ಗೋವರ್ಧನ ಗಿರಿ ಶ್ರೀ ಗೋಪಾಲಕೃಷ್ಣ ದೇವಾಲಯಕ್ಕೆ ಜಶೋದಾ ಬೆನ್ ಅವರು ಭೇಟಿ ನೀಡಿ ಪೂಜೆ ನೆರವೇರಿಸಿದರು. ಆ ಬಳಿಕ ರಾಘವೇಶ್ವರ ಭಾರತೀ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಮಠದ ಆವರಣದಲ್ಲಿ ನಡೆಸಲಾದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಸಾನಿಧ್ಯ ವಹಿಸಿದ್ದ ಕೃಷ್ಣಾರ್ಪಣಂ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೇದಿಕೆ ಹಂಚಿಕೊಂಡರು.

    ವಿಷ್ಣು ಸಹಸ್ರನಾಮ ಪಠಣದ ವೇಳೆ ಪ್ರಾರ್ಥನಾ ಗೀತೆ ಹಾಡಿದ ಜಶೋದಾ ಅವರು ಕಾರ್ಯಕ್ರಮದಲ್ಲಿ ನೆರೆದಿದ್ದ ಭಕ್ತರನ್ನುದ್ದೇಶಿಸಿ ಮಾತನಾಡಿದರು.

    ಚಿತ್ರದುರ್ಗದ ನೀಲಕಂಠೇಶ್ವರನಿಗೆ ಪೂಜೆ:
    ಮೋದಿ ಅವರ ಪತ್ನಿ ರಾಮಚಂದ್ರಾಪುರ ಮಠಕ್ಕೆ ಬರುವ ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಕೆಲಕಾಲ ವಿಶ್ರಾಂತಿ ಪಡೆದರು. ಜಶೋದಾ ಅವರು ನಿತ್ಯ ಬೆಳಿಗ್ಗೆ ಶಿವನ ದರ್ಶನ ಪಡೆಯದೇ ನೀರು ಸಹ ಕುಡಿಯುವುದಿಲ್ಲ. ಹೀಗಾಗಿ ಶಿವನ ದೇಗುಲ ಹುಡುಕಿಕೊಂಡು ಅವರು ನೀಲಕಂಠೇಶ್ವರಸ್ವಾಮಿ ದೇಗುಲಕ್ಕೆ ಬಂದಿದ್ದರು. ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದ್ದರು. ಸುಮಾರು 20 ನಿಮಿಷ ದೇಗುಲದಲ್ಲಿದ್ದರು.

    ಪ್ರವಾಸಿ ಮಂದಿರದಲ್ಲಿ ಅವರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಉಪಾಹಾರ ಸೇವನೆಗೂ ಮುನ್ನ ಅಶ್ವತ್ಥಾ ವೃಕ್ಷಕ್ಕೆ ಪೂಜೆ ಸಲ್ಲಿಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ, ಅಶ್ವತ್ಥಾ ಮರದ ಕಟ್ಟೆ ಸಿಗದೇ, ಅತ್ತಿ ಮರ ಸುತ್ತಿ ಭಕ್ತಿ ಸಮರ್ಪಿಸಿದ ಬಳಿಕ ಆಹಾರ ಸೇವನೆ ಮಾಡಿದ್ದರು.

  • ಕೋಟೆನಾಡಿನ ನೀಲಕಂಠನಿಗೆ ಪ್ರಧಾನಿ ಮೋದಿ ಪತ್ನಿ ಪೂಜೆ

    ಕೋಟೆನಾಡಿನ ನೀಲಕಂಠನಿಗೆ ಪ್ರಧಾನಿ ಮೋದಿ ಪತ್ನಿ ಪೂಜೆ

    – ನೀರು ಉಪಹಾರ ಸೇವಿಸದೆ ಪಾರ್ಥನೆ

    ಚಿತ್ರದುರ್ಗ: ಪ್ರಧಾನಿ ನರೇಂದ್ರ ಮೋದಿ ಅವರ ಪತ್ನಿ ಜಶೋದಾ ಬೆನ್ ಅವರು ಇಂದು ಚಿತ್ರದುರ್ಗಕ್ಕೆ ಭೇಟಿ ನೀಡಿ ನೀಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ.

    ಬೆಂಗಳೂರಿನಿಂದ ಶಿವಮೊಗ್ಗ ಜಿಲ್ಲೆಯ ರಾಮಚಂದ್ರಾಪುರ ಮಠಕ್ಕೆ ತೆರಳುತ್ತಿದ್ದ ಜಶೋದಾ ಬೆನ್ ಅವರು ಮಾರ್ಗ ಮಧ್ಯೆ ಚಿತ್ರದುರ್ಗದಲ್ಲಿ ಕೆಲಕಾಲ ವಿಶ್ರಾಂತಿ ಪಡೆದರು. ಜಶೋದಾ ಅವರು ನಿತ್ಯ ಬೆಳಿಗ್ಗೆ ಶಿವನ ದರ್ಶನ ಪಡೆಯದೇ ನೀರು ಸಹ ಕುಡಿಯುವುದಿಲ್ಲ. ಹೀಗಾಗಿ ಶಿವನ ದೇಗುಲ ಹುಡುಕಿಕೊಂಡು ಅವರು ನೀಲಕಂಠೇಶ್ವರಸ್ವಾಮಿ ದೇಗುಲಕ್ಕೆ ಬಂದಿದ್ದರು. ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಸುಮಾರು 20 ನಿಮಿಷ ದೇಗುಲದಲ್ಲಿದ್ದರು.

    ಪ್ರವಾಸಿ ಮಂದಿರದಲ್ಲಿ ಅವರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಮಾಡಲಾಗಿತ್ತು. ಉಪಾಹಾರ ಸೇವನೆಗೂ ಮುನ್ನ ಅಶ್ವತ್ಥಾ ವೃಕ್ಷಕ್ಕೆ ಪೂಜೆ ಸಲ್ಲಿಸುವ ಇಚ್ಛೆ ವ್ಯಕ್ತಪಡಿಸಿದರು. ಆದರೆ ಅಶ್ವಥ ಮರದ ಕಟ್ಟೆ ಸಿಗದೇ ಅತ್ತಿ ಮರ ಸುತ್ತಿ ಭಕ್ತಿ ಸಮರ್ಪಿಸಿದ ಬಳಿಕ ಆಹಾರ ಸೇವನೆ ಮಾಡಿದರು.

    ಬೆಂಗಳೂರಿಗೆ ಮಂಗಳವಾರ ಬಂದಿದ್ದ ಜಶೋದಾ ಬೆನ್ ಅವರು ಇಂದು ಬೆಳಗ್ಗೆ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಬೇಕಿತ್ತು. ಆದರೆ ಸ್ವಾಮೀಜಿ ಮಠದಲ್ಲಿರದ ಹಿನ್ನೆಲೆಯಲ್ಲಿ ಚಿತ್ರದುರ್ಗಕ್ಕೆ ಬಂದರು. ಇಲ್ಲಿಂದ ರಾಮಚಂದ್ರಾಪುರ ಮಠಕ್ಕೆ ಭೇಟಿ ನೀಡಿ ಬಳಿಕ ಅವರು ಶೃಂಗೇರಿಗೆ ತೆರಳುವರು ಎಂದು ಮೂಲಗಳು ತಿಳಿಸಿವೆ.