Tag: ಜಸ್ಪ್ರಿತ್ ಬುಮ್ರಾ

  • Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    Asia Cup 2025: ಟೀಂ ಇಂಡಿಯಾ ಪ್ರಕಟ- ಸೂರ್ಯಕುಮಾರ್‌ ನಾಯಕ, ಕನ್ನಡಿಗ ವರುಣ್‌ಗೆ ಸ್ಥಾನ

    ಮುಂಬೈ: ಏಷ್ಯಾ ಕಪ್‌ 2025ರ (Asia Cup) ಟೂರ್ನಿಗಾಗಿ ಟೀಂ ಇಂಡಿಯಾ (Team India) ಪ್ರಕಟಿಸಲಾಗಿದೆ. ಸೂರ್ಯಕುಮಾರ್‌ ಯಾದವ್‌ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್‌ ಗಿಲ್‌ ಉಪನಾಯಕರಾಗಿದ್ದಾರೆ.

    ಮಂಗಳವಾರ ಮಧ್ಯಾಹ್ನ ಏಷ್ಯಾಕಪ್‌ಗಾಗಿ ಭಾರತದ 15 ಸದಸ್ಯರ ತಂಡವನ್ನು ಘೋಷಿಸಲಾಯಿತು. ಶುಭಮನ್ ಗಿಲ್, ಜಸ್ಪ್ರೀತ್ ಬುಮ್ರಾ ಮತ್ತು ಸಂಜು ಸ್ಯಾಮ್ಸನ್ ತಂಡದಲ್ಲಿದ್ದಾರೆ. ಕುಲದೀಪ್ ಯಾದವ್, ವರುಣ್ ಚಕ್ರವರ್ತಿ ಮತ್ತು ಅಕ್ಷರ್ ಪಟೇಲ್ ಅವರನ್ನು ಸ್ಪಿನ್ನರ್‌ಗಳಾಗಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: Asia Cup 2025 | ಹೊಸ ನಾಯಕತ್ವದಲ್ಲಿ ಪಾಕ್‌ ತಂಡ ಪ್ರಕಟ – ರಿಜ್ವಾನ್‌, ಬಾಬರ್‌ ಹೊರದಬ್ಬಿದ ಪಿಸಿಬಿ

    ಸೆಪ್ಟೆಂಬರ್ 9 ರಂದು ಯುಎಇಯಲ್ಲಿ ಆರಂಭವಾಗುವ ಏಷ್ಯಾಕಪ್‌ನೊಂದಿಗೆ ಭಾರತವು ಮುಂದಿನ ಫೆಬ್ರವರಿಯಲ್ಲಿ ಪುರುಷರ ಟಿ20 ವಿಶ್ವಕಪ್‌ಗೆ ಸಿದ್ಧತೆ ಪ್ರಾರಂಭಿಸಲಿದೆ. ಒಂದು ದಿನದ ನಂತರ ಭಾರತ ತನ್ನ ಮೊದಲ ಪಂದ್ಯವನ್ನು ಆಡಲಿದೆ.

    ಭಾರತ ತಂಡ ಹೀಗಿದೆ?
    ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಸರ್ ಪಟೇಲ್, ಜಿತೇಶ್ ಶರ್ಮಾ (ಡಬ್ಲ್ಯುಕೆ), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್), ಹರ್ಷಿತ್‌ ರಾಣಾ, ರಿಂಕು ಸಿಂಗ್.

    ಐದು ಸ್ಟ್ಯಾಂಡ್-ಬೈಗಳು: ಪ್ರಸಿದ್ಧ್ ಕೃಷ್ಣ, ವಾಷಿಂಗ್ಟನ್ ಸುಂದರ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್. ಇದನ್ನೂ ಓದಿ: ಅನಗತ್ಯ ರನ್‌ ಕದಿಯಲು ಯತ್ನಿಸಿ ಯಡವಟ್ಟು – ಮೈದಾನದಲ್ಲೇ ಬ್ಯಾಟ್‌ ಎಸೆದು ಪಾಕ್‌ ಓಪನರ್ ಆಕ್ರೋಶ

  • ಟೀಂ ಇಂಡಿಯಾ ಬೌಲರ್‌ಗಳ ಅಬ್ಬರಕ್ಕೆ ಆಂಗ್ಲರ ಪಡೆ ತತ್ತರ; ಭಾರತದ ಗೆಲುವಿಗೆ 193 ರನ್‌ ಗುರಿ

    ಟೀಂ ಇಂಡಿಯಾ ಬೌಲರ್‌ಗಳ ಅಬ್ಬರಕ್ಕೆ ಆಂಗ್ಲರ ಪಡೆ ತತ್ತರ; ಭಾರತದ ಗೆಲುವಿಗೆ 193 ರನ್‌ ಗುರಿ

    ಲೀಡ್ಸ್‌: ಇಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ವಿರುದ್ಧದ 3ನೇ ಟೆಸ್ಟ್‌ ಪಂದ್ಯದ ನಾಲ್ಕನೇ ದಿನದಾಟದಲ್ಲಿ ಟೀಂ ಇಂಡಿಯಾ ಬೌಲರ್‌ಗಳು ಅಬ್ಬರಿಸಿದ್ದಾರೆ. 192 ರನ್‌ಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡ ಆಂಗ್ಲರ ಪಡೆ ಭಾರತದ ಗೆಲುವಿಗೆ 193 ರನ್‌ ಗುರಿ ನೀಡಿದೆ.

    2ನೇ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ ಬೌಲರ್‌ಗಳ ಆರ್ಭಟಕ್ಕೆ ಆಂಗ್ಲರು ಲಯ ಕಳೆದುಕೊಂಡರು. ವಿಕೆಟ್‌ಗಳು ತರಗೆಲೆಯಂತೆ ಉರುಳಿದವು. ಜೋ ರೂಟ್‌ 40, ಬೆನ್‌ ಸ್ಟೋಕ್ಸ್‌ 33, ಹ್ಯಾರಿ ಬ್ರೂಕ್‌ 23, ಜ್ಯಾಕ್ ಕ್ರಾಲಿ 22 ರನ್‌ ಗಳಿಸಿದರು.

    181 ರನ್‌ಗಳಿಗೆ ಅದಾಗಲೇ 7 ವಿಕೆಟ್‌ ಕಳೆದುಕೊಂಡು ಇಂಗ್ಲೆಂಡ್‌ ತತ್ತರಿಸಿಹೋಗಿತ್ತು. ಇನ್ನು 11 ರನ್‌ಗಳ ಅಂತರದಲ್ಲಿ ಒಂದರ ಹಿಂದೆ ಒಂದರಂತೆ 3 ವಿಕೆಟ್‌ ಒಪ್ಪಿಸಿತು. ಅಂತಿಮವಾಗಿ 192 ರನ್‌ ಗಳಿಸಿ ಇಂಗ್ಲೆಂಡ್‌ ಆಲೌಟ್‌ ಆಯಿತು.

    ಟೀಂ ಇಂಡಿಯಾ ಪರ ವಾಷಿಂಗ್ಟನ್‌ ಸುಂದರ್‌ 4 ವಿಕೆಟ್‌ ಪಡೆದು ಅಬ್ಬರಿಸಿದರು. ಜಸ್ಪ್ರಿತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌ ತಲಾ 2, ನಿತಿಶ್‌ ಕುಮಾರ್‌ ರೆಡ್ಡಿ, ಆಕಾಶ್‌ ದೀಪ್‌ ತಲಾ 1 ವಿಕೆಟ್‌ ಪಡೆದರು.

    ಟೀಂ ಇಂಡಿಯಾ ಬ್ಯಾಟಿಂಗ್‌ ಆರಂಭಿಸಿದ್ದು, ಯಶಸ್ವಿ ಜೈಸ್ವಾಲ್‌ ಶೂನ್ಯ ಸುತ್ತಿ ಪೆವಿಲಿಯನ್‌ ಕಡೆ ನಡೆದರು. ಇನ್ನು ಕೆ.ಎಲ್‌.ರಾಹುಲ್‌ ಮತ್ತು ಕರುಣ್‌ ನಾಯರ್‌ ಜೋಡಿ ಬ್ಯಾಟಿಂಗ್‌ ಮಾಡುತ್ತಿದ್ದು, ಟೀಂ ಇಂಡಿಯಾ 1 ವಿಕೆಟ್‌ ನಷ್ಟಕ್ಕೆ 40 ರನ್‌ ಗಳಿಸಿದೆ.

  • ಟಿ20ಯಲ್ಲಿ ಕೆಟ್ಟ ಸಾಧನೆ ಮಾಡಿದ ಬುಮ್ರಾ

    ಟಿ20ಯಲ್ಲಿ ಕೆಟ್ಟ ಸಾಧನೆ ಮಾಡಿದ ಬುಮ್ರಾ

    ಹೈದರಾಬಾದ್‌: ಟೀಂ ಇಂಡಿಯಾದ(Team India) ಬೌಲರ್‌ ಜಸ್‌ಪ್ರೀತ್‌ ಬುಮ್ರಾ(Jasprit Bumrah ) ತಮ್ಮ ವೈಯಕ್ತಿಕ ಟಿ20 ಕ್ರಿಕೆಟ್‌ ಜೀವನದಲ್ಲಿ ಕೆಟ್ಟ ಸಾಧನೆ ಮಾಡಿದ್ದಾರೆ.

    ಭಾನುವಾರ ಆಸ್ಟ್ರೇಲಿಯಾ(Australia) ವಿರುದ್ಧದ ಪಂದ್ಯದಲ್ಲಿ ಬುಮ್ರಾ 4 ಓವರ್‌ ಎಸೆದು 50 ರನ್‌ ಬಿಟ್ಟುಕೊಟ್ಟಿದ್ದಾರೆ. ಯಾರ್ಕರ್‌ ಸ್ಪೆಷಲಿಸ್ಟ್‌ ಆಗಿರುವ ಬುಮ್ರಾ ಯಾವುದೇ ವಿಕೆಟ್‌ ಪಡೆದಿರಲಿಲ್ಲ.

    ಈ ಹಿಂದೆ 2016 ಆಗಸ್ಟ್‌ನಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ 2 ವಿಕೆಟ್‌ ಪಡೆದು 47 ರನ್‌ ನೀಡಿದ್ದರು. ಇದು ಇಲ್ಲಿಯವರೆಗಿನ ಬುಮ್ರಾ ಅವರ ಕೆಟ್ಟ ಸಾಧನೆಯಾಗಿತ್ತು. ಇದನ್ನೂ ಓದಿ: ಕೊಹ್ಲಿ ಜೊತೆ ಸೂರ್ಯನ ಅಬ್ಬರ – ವಿಶ್ವಚಾಂಪಿಯನ್ನರಿಗೆ ಸೋಲು, ಭಾರತಕ್ಕೆ T20 ಸರಣಿ

    ಮೊದಲ ಓವರ್‌ನಲ್ಲಿ 17 ರನ್‌ ನೀಡಿದರೆ ಬುಮ್ರಾ ತಮ್ಮ ಎರಡನೇ ಓವರ್‌ನಲ್ಲಿ 9 ರನ್‌ ನೀಡಿದ್ದರು. ಮೂರನೇ ಓವರ್‌ನಲ್ಲಿ 6 ರನ್‌ ಬಂದರೆ, ನಾಲ್ಕನೇ ಓವರ್‌ನಲ್ಲಿ 18 ರನ್‌ ನೀಡಿದ್ದರು.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಆಸ್ಟ್ರೇಲಿಯಾ 7 ವಿಕೆಟ್‌ ನಷ್ಟಕ್ಕೆ 186 ರನ್‌ ಗಳಿಸಿತ್ತು. ಭಾರತ ಇನ್ನು ಒಂದು ಎಸೆತ ಇರುವಂತೆಯೇ 187 ರನ್‌ ಹೊಡೆದು 6 ವಿಕೆಟ್‌ಗಳ ರೋಚಕ ಜಯ ಸಾಧಿಸಿ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿತು.

    ಸೂರ್ಯಕುಮಾರ್‌ ಯಾದವ್‌ 69 ರನ್‌(36 ಎಸೆತ, 5 ಬೌಂಡರಿ, 5 ಸಿಕ್ಸ್‌), ಕೊಹ್ಲಿ 63 ರನ್‌(48 ಎಸೆತ, 3 ಬೌಂಡರಿ, 4 ಸಿಕ್ಸರ್‌) ಹಾರ್ದಿಕ್‌ ಪಾಂಡ್ಯ ಔಟಾಗದೇ 25 ರನ್‌(16 ಎಸೆತ, 2 ಬೌಂಡರಿ, 1 ಸಿಕ್ಸ್‌) ಹೊಡೆದರು.  ಸೂರ್ಯಕುಮಾರ್‌ ಯಾದವ್‌ ಪಂದ್ಯಶ್ರೇಷ್ಠ, ಅಕ್ಷರ್‌ ಪಟೇಲ್‌ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

    Live Tv
    [brid partner=56869869 player=32851 video=960834 autoplay=true]

  • ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಇಂದು ಏಕದಿನ ಸರಣಿ ಕೊನೆಯ ಪಂದ್ಯ, ಸರಣಿ ಗೆಲ್ಲುವ ತವಕದಲ್ಲಿ ಭಾರತ

    ಲಂಡನ್: ಏಕದಿನ ಸರಣಿಯಲ್ಲಿ 1-1 ಅಂತರದಲ್ಲಿ ಗೆಲುವು ಸಾಧಿಸಿರುವ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇಂದು ಸರಣಿ ಜಯಕ್ಕಾಗಿ ಸೆಣಸಲಿವೆ.

    ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಕ್ರಿಕೆಟ್ ಮೈದಾನದಲ್ಲಿ ಮಧ್ಯಾಹ್ನ 3:30ರ ವೇಳೆಗೆ ಪಂದ್ಯ ಆರಂಭವಾಗಲಿದ್ದು, 2ನೇ ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ ಶಾಕ್‌ನಿಂದ ಕಂಗೆಟ್ಟಿರುವ ಭಾರತ ಅಂತಿಮ ಪಂದ್ಯದಲ್ಲಿ ತನ್ನ ಬ್ಯಾಟಿಂಗ್ ಪ್ಲಾನ್ ಬದಲಿಸಿಕೊಂಡು ಸರಣಿ ಜಯದ ಎದುರು ನೋಡುತ್ತಿದೆ. ಇದನ್ನೂ ಓದಿ: ಈ ಸಮಯ ಕಳೆದು ಹೋಗುತ್ತದೆ ಕೊಹ್ಲಿ ಬೆಂಬಲಕ್ಕೆ ನಿಂತ ಬಾಬರ್ ಅಜಮ್

    ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಬಗ್ಗುಬಡಿದ ಭಾರತ 2ನೇ ಪಂದ್ಯದಲ್ಲಿ ಸೋಲು ಕಂಡಿತು. 247 ಸಾಧಾರಣ ರನ್‌ಗಳ ಗುರಿ ಬೆನ್ನತ್ತಿದ ರೋಹಿತ್ ಶರ್ಮಾ ಪಡೆ 100 ರನ್‌ಗಳ ಅಂತರದಲ್ಲಿ ಸೋಲನ್ನು ಅನುಭವಿಸಿತು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಹಾರ್ದಿಕ್ ಪಾಂಡ್ಯ, ಜಡೇಜಾ ಹೋರಾಡಿದರೂ ಅವರ ಬ್ಯಾಟಿಂಗ್ ಟೀಂ ಇಂಡಿಯಾ ಗೆಲುವಿಗೆ ಸಹಕಾರಿಯಾಗಲಿಲ್ಲ. ಇದೀಗ ಅಂತಿಮ ಪಂದ್ಯದಲ್ಲಿ ಟಿ20 ಮಾದರಿಯಂತೆ ಭರ್ಜರಿ ಪ್ರದರ್ಶನ ನೀಡುವ ಮೂಲಕ ಸರಣಿ ಕೈವಶ ಮಾಡಿಕೊಳ್ಳಲು ಭಾರತ ಮುಂದಾಗಿದೆ.

    ಮೊದಲ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾರೊಂದಿಗೆ ಉತ್ತಮ ಬ್ಯಾಟಿಂಗ್ ನಡೆಸಿದ ಶಿಖರ್ ಧವನ್ 2ನೇ ಪಂದ್ಯದಲ್ಲಿ ನಿರೀಕ್ಷಿತ ಆಟವಾಡದೇ ಇರುವುದು ತಂಡಕ್ಕೆ ಹಿನ್ನಡೆ ಉಂಟು ಮಾಡಿತು. ಅಲ್ಲದೆ ವಿರಾಟ್ ಕೊಹ್ಲಿ ಸಹ ಅಲ್ಪಮೊತ್ತಕ್ಕೆ ನಿರ್ಗಮಿಸಿದ್ದರು. ಅಂತಿಮ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದಿಂದ ಆಟಗಾರರಿಂದಲೂ ಉತ್ತಮ ಪ್ರದರ್ಶನ ನಿರೀಕ್ಷಿಸಲಾಗಿದೆ. ಇದನ್ನೂ ಓದಿ: 2ನೇ ಪಂದ್ಯದಲ್ಲಿ ಎಡವಿದ ಭಾರತ – ಇಂಗ್ಲೆಂಡ್‌ಗೆ 100 ರನ್‌ಗಳ ಭರ್ಜರಿ ಜಯ

    ಜಸ್ಪ್ರಿತ್‌ ಬುಮ್ರಾ ನೇತೃತ್ವದ ಬೌಲಿಂಗ್ ಪಡೆ ಉತ್ತಮ ಲಯದಲ್ಲಿದೆಯಾದರೂ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ ಪರಿಣಾಮಕಾರಿಯಾಗುತ್ತಿಲ್ಲ. ಹೀಗಾಗಿ ಇನ್ನಿಂಗ್ಸ್ ಮಧ್ಯದಲ್ಲಿ ಜೊತೆಯಾಟಗಳನ್ನು ಮುರಿಯುವುದರಲ್ಲಿ ಭಾರತ ಹಿಂದೆ ಬೀಳುತ್ತಿದೆ.

    ಮತ್ತೊಂದೆಡೆ ಇಂಗ್ಲೆಂಡ್ ಅಂತಿಮ ಪಂದ್ಯದಲ್ಲಿ ಸುಧಾರಿತ ಪ್ರದರ್ಶನ ನೀಡಲು ಕಾಯುತ್ತಿದೆ. ಟಿ20 ನಲ್ಲಿ ಭಾರತದ ವಿರುದ್ಧ ಸೋಲು ಕಂಡ ಇಂಗ್ಲೆಂಡ್ ಇದೀಗ ಏಕದಿನ ಸರಣಿಯನ್ನು ಕೈವಶ ಮಾಡಿಕೊಳ್ಳುವ ಮೂಲಕ ಭಾರತದ ವಿರುದ್ಧ ಸೇಡು ತೀರಿಕೊಳ್ಳಲು ಕಾತರವಾಗಿದೆ.

    Live Tv

    [brid partner=56869869 player=32851 video=960834 autoplay=true]

  • ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಬುಮ್ರಾ ಬೌಲಿಂಗ್‌ ದಾಳಿಗೆ ತತ್ತರಿಸಿದ ಆಂಗ್ಲರು – ಭಾರತಕ್ಕೆ 10 ವಿಕೆಟ್‌ಗಳ ಭರ್ಜರಿ ಜಯ

    ಲಂಡನ್‌: ಜಸ್ಪಿತ್‌ ಬುಮ್ರಾ, ಮೊಹಮದ್‌ ಶಮಿ ಮಾರಕ ಬೌಲಿಂಗ್‌ ದಾಳಿ ಹಾಗೂ ರೋಹಿತ್‌ ಶರ್ಮಾ ಆಕರ್ಷಕ ಅರ್ಧಶತಕದ ನೆರವಿನಿಂದ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು.

    ಇಂಗ್ಲೆಂಡ್‌ನ ಕೆನ್ನಿಂಗ್ಟನ್‌ನ ಓವಲ್‌ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವ ಅವಕಾಶ ಪಡೆದ ಇಂಗ್ಲೆಂಡ್‌ ತಂಡ 25.2 ಓವರ್‌ಗಳಲ್ಲಿ 110 ರನ್‌ಗಳಿಗೆ ಸರ್ವಪತನ ಕಂಡಿತು. ಅಲ್ಪಮೊತ್ತದ ಗುರಿ ಬೆನ್ನತ್ತಿದ ಭಾರತ 18.4 ಓವರ್‌ಗಳಲ್ಲೇ ಯಾವುದೇ ವಿಕೆಟ್‌ ನಷ್ಟವಿಲ್ಲದೇ 114 ರನ್‌ಗಳಿಸಿ ಆಂಗ್ಲರನ್ನು ಮೊದಲ ಪಂದ್ಯದಲ್ಲೇ ಮಣ್ಣು ಮುಕ್ಕಿಸಿತು.

    ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ ಹಾಗೂ ಶಿಖರ್‌ ಧವನ್‌ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ಕೊನೆಯವರೆಗೂ ವಿಕೆಟ್‌ ಬಿಟ್ಟುಕೊಡದೇ ಆಂಗ್ಲ ಬೌಲರ್‌ಗಳ ಬೆವರಿಳಿಸಿದರು. ಇದನ್ನೂ ಓದಿ: 9 ವರ್ಷದ ಬಾಲಕನಾಗಿದ್ದಾಗ ನನ್ನನ್ನು ಕಳ್ಳಸಾಗಣೆ ಮಾಡಲಾಗಿತ್ತು: ಒಲಿಂಪಿಕ್, ವಿಶ್ವ ಚಾಂಪಿಯನ್‌ನ ಸ್ಫೋಟಕ ಹೇಳಿಕೆ

    ರೋಹಿತ್‌ ಆಕರ್ಷಕ ಅರ್ಧ ಶತಕ:
    ಐಪಿಎಲ್‌ನಲ್ಲಿ ತೀವ್ರ ಮುಖಭಂಗಕ್ಕೀಡಾಗಿದ್ದ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದು, ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. ರೋಹಿತ್‌ ಶರ್ಮಾ 58 ಎಸೆತಗಳಲ್ಲಿ 76 ರನ್‌ (7 ಬೌಂಡರಿ, 5 ಸಿಕ್ಸರ್‌) ಗಳಿಸಿದರು. ಇದಕ್ಕೆ ಜೊತೆಯಾಗಿ ಸಾಥ್‌ ನೀಡಿದ ಶಿಖರ್‌ ಧವನ್‌ 54 ಎಸೆತಗಳಲ್ಲಿ 31 ರನ್‌ ( 4 ಬೌಂಡರಿ) ಸಿಡಿಸುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ನೆರವಾದರು.

    ಬೂಮ್ರಾ ಬೌಲಿಂಗ್‌, ಶಮಿ ಶೈನ್‌:
    ಟೀಂ ಇಂಡಿಯಾದ ಪ್ರಮುಖ ವೇಗಿ ಜಸ್ಪ್ರೀತ್ ಬುಮ್ರಾ ತನ್ನ ಮೊದಲ ಓವರ್‌ನಿಂದಲೇ ಆರ್ಭಟಿಸಲು ಆರಂಭಿಸಿದ್ದರು. ತನ್ನ ಪ್ರಥಮ ಓವರ್‌ನಲ್ಲಿ ಜೇಸನ್ ರಾಯ್ ಹಾಗೂ ಜೋ ರೂಟ್ ಇಬ್ಬರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ 7 ರನ್‌ಗಳಿಸಿದ್ದ ಬೈರ್‌ಸ್ಟೋವ್ ಕೂಡ ಬೂಮ್ರಾ ದಾಳಿಗೆ ಬಲಿಯಾದರು. ನಂತರದಲ್ಲಿ ಕ್ರೀಸ್‌ಗಿಳಿದ ಲಿಯಾಮ್ ಲಿವಿಂಗ್‌ಸ್ಟೋನ್‌, ಡೇವಿಡ್‌ ವಿಲ್ಲಿ ಹಾಗೂ ಬ್ರಿಡನ್ ಕೇರ್ಸ್ ಶೂನ್ಯ ಸುತ್ತಿ ಬುಮ್ರಾಗೆ ವಿಕೆಟ್‌ ಒಪ್ಪಿಸಿದರು. ಇದರೊಂದಿಗೆ ಮೊಹಮದ್‌ ಶಮಿ 3 ವಿಕೆಟ್‌ ಪಡೆದರೆ, ಪ್ರಸಿದ್ಧ್‌ ಕೃಷ್ಣ ಒಂದು ವಿಕೆಟ್‌ ಪಡೆದು ಮಿಂಚಿದರು.

    ಇಂಗ್ಲೆಂಡ್‌ಗೆ ಆರಂಭಿಕ ಆಘಾತ:
    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಇಂಗ್ಲೆಂಡ್‌ ತಂಡವು ಜೇಸನ್‌ ರಾಯ್‌ ಶೂನ್ಯಕ್ಕೆ ಔಟಾಗುವ ಮೂಲಕ ಆರಂಭಿಕ ಆಘಾತ ಅನುಭವಿಸಿತು. ನಂತರ ಬಂದ ಜೋ ರೂಟ್‌, ಬೆನ್‌ಸ್ಟೋಕ್ಸ್‌ ಸಹ ಶೂನ್ಯ ಸಾಧನೆ ಮಾಡಿದರು. ಈ ಮೂಲಕ ಇಂಗ್ಲೆಂಡ್‌ ಸಂಕಷ್ಟಕ್ಕೆ ತುತ್ತಾಯಿತು. ಇದನ್ನೂ ಓದಿ: ವೈರಲ್ ಆಗುತ್ತಿದೆ SKY ಸಿಡಿಸಿದ ಬ್ಯಾಕ್‍ವರ್ಡ್ ಪಾಯಿಂಟ್ ಸಾಲಿಡ್ ಸಿಕ್ಸ್

    ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ಜೋಸ್‌ ಬಟ್ಲರ್‌ ತಂಡಕ್ಕೆ ಆಸರೆಯಾಗಲು ಮುಂದಾದರು ಆದರೆ ಸಿಕ್ಸರ್‌ ಸಿಡಿಸುವ ಭರದಲ್ಲಿ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ನಿರ್ಗಮಿಸಿದರು. ಆದರೂ ತಂಡಕ್ಕೆ 30 ರನ್‌ಗಳನ್ನು ತಂದುಕೊಟ್ಟರು. ನಂತರಲ್ಲಿ ಬಂದ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಇಂಗ್ಲೆಂಡ್‌ ತಂಡವು ಹೀನಾಯವಾಗಿ ಸೋಲನ್ನು ಅನುಭವಿಸಿತು. ಡೇವಿಡ್‌ ವಿಲ್ಲಿ 21 ರನ್‌ ಗಳಿಸಿದರೂ ಭಾರತದ ಬೌಲರ್‌ಗಳ ಪರಾಕ್ರಮದ ಮುಂದೆ ಇಂಗ್ಲೆಂಡ್‌ ಮಂಕಾಯಿತು. ಅಂತಿಮವಾಗಿ 25.2 ಓವರ್‌ಗಳಲ್ಲಿ 110ಕ್ಕೆ ಇಂಗ್ಲೆಂಡ್‌ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು.

    Live Tv
    [brid partner=56869869 player=32851 video=960834 autoplay=true]

  • ಅಂತರಾಷ್ಟ್ರೀಯ ಟಿ-20ಯಲ್ಲಿ ಬುಮ್ರಾನನ್ನು ಹಿಂದಿಕ್ಕುವ ತವಕದಲ್ಲಿ ಚಹಲ್

    ಅಂತರಾಷ್ಟ್ರೀಯ ಟಿ-20ಯಲ್ಲಿ ಬುಮ್ರಾನನ್ನು ಹಿಂದಿಕ್ಕುವ ತವಕದಲ್ಲಿ ಚಹಲ್

    ಮುಂಬೈ: ಅಂತಾರಾಷ್ಟ್ರೀಯ ಟಿ-20 ಪಂದ್ಯಗಳಲ್ಲಿ ಜಸ್ಪ್ರಿತ್ ಬುಮ್ರಾ ಅವರನ್ನು ಹಿಂದಿಕ್ಕುವ ಸನಿಹದಲ್ಲಿ ಭಾರತದ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಅವರಿದ್ದು, ಈ ಸಾಧನೆ ಮಾಡಲು ಅವರಿಗೆ ಎರಡು ವಿಕೆಟ್ ಬೇಕಿದೆ.

    ಭಾರತದ ಪರ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‍ನಲ್ಲಿ ವೇಗಿ ಜಸ್ಪ್ರಿತ್ ಬುಮ್ರಾ ಅವರು ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ಸಾಧನೆ ಮಾಡಿದ್ದಾರೆ. ಶುಕ್ರವಾರ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ-20 ಪಂದ್ಯದಲ್ಲಿ ಸೂಪರ್ ಆಗಿ ಸ್ಪಿನ್ ಮಾಡಿದ ಚಹಲ್ ಅವರು ಬುಮ್ರಾ ಅವರನ್ನು ಹಿಂದಿಕ್ಕಲು ಕೇವಲ ಎರಡು ವಿಕೆಟ್‍ಗಳ ಅಂತರವನ್ನು ಹೊಂದಿದ್ದಾರೆ.

    ಭಾರತದ ಪರ ಒಟ್ಟು 50 ಟಿ-20 ಪಂದ್ಯಗಳನ್ನು ಆಡಿರುವ ಜಸ್ಪ್ರಿತ್ ಬುಮ್ರಾ 59 ವಿಕೆಟ್ ಪಡೆದು ಅತೀ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಶುಕ್ರವಾರ ನಡೆದ ಆಸ್ಟ್ರೇಲಿಯಾ ವಿರುದ್ಧ ಮೊದಲ ಟಿ-20 ಪಂದ್ಯದಲ್ಲಿ ಬದಲಿ ಆಟಗಾರನಾಗಿ ಬಂದು ಮೂರು ವಿಕೆಟ್ ಪಡೆದು ಮಿಂಚಿದ ಚಹಲ್, 43 ಪಂದ್ಯಗಳನ್ನಾಡಿ 58 ವಿಕೆಟ್ ಪಡೆದು ಎರಡನೇ ಸ್ಥಾನದಲ್ಲಿ ಇದ್ದಾರೆ. ಇನ್ನೆರೆಡು ವಿಕೆಟ್ ಪಡೆದರೆ ಚಹಲ್ ಬುಮ್ರಾ ಅವರನ್ನು ಹಿಂದಿಕ್ಕಲಿದ್ದಾರೆ.

    ಈ ಪಟ್ಟಿಯಲ್ಲಿ ಮೊದಲೆರಡು ಸ್ಥಾನದಲ್ಲಿ ಬುಮ್ರಾ ಮತ್ತು ಚಹಲ್ ಇದ್ದರೆ, 46 ಪಂದ್ಯಗಳಲ್ಲಿ 52 ವಿಕೆಟ್ ಪಡೆದಿರುವ ಭಾರತದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಮೂರನೇ ಸ್ಥಾನದಲ್ಲಿ ಇದ್ದಾರೆ. ನಾಲ್ಕನೇ ಸ್ಥಾನದಲ್ಲಿ 43 ಪಂದ್ಯಗಳಿಗೆ 41 ವಿಕೆಟ್ ಪಡೆದಿರುವ ಅನುಭವಿ ವೇಗಿ ಭುವನೇಶ್ವರ್ ಕುಮಾರ್, 43 ಪಂದ್ಯಗಳಲ್ಲಿ 39 ವಿಕೆಟ್ ಪಡೆದಿರುವ ಲೆಗ್ ಸ್ಪಿನ್ನರ್ ಕುಲ್‍ದೀಪ್ ಯಾದವ್ ಅವರು ಐದನೇ ಸ್ಥಾನದಲ್ಲಿ ಇದ್ದಾರೆ.

    ಶುಕ್ರವಾರ ಕ್ಯಾನ್ಬೆರಾದಲ್ಲಿ ನಡೆದ ಮೊದಲನೇ ಟಿ-20 ಪಂದ್ಯದಲ್ಲಿ ಸೂಪರ್ ಆಗಿ ಬೌಲ್ ಮಾಡಿದ ಯುಜ್ವೇಂದ್ರ ಚಹಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಬ್ಯಾಟಿಂಗ್ ವೇಳೆ ರವೀಂದ್ರ ಜಡೇಜಾ ಗಾಯದ ಸಮಸ್ಯೆಗೆ ತುತ್ತಾದ ಕಾರಣ ಆಡುವ 11ರ ಬಳಗಕ್ಕೆ ಬಂದ ಚಹಲ್, ನಾಲ್ಕು ಓವರ್ ಬೌಲ್ ಮಾಡಿ ಮೂರು ವಿಕೆಟ್ ಪಡೆದ ಕೇವಲ 25 ರನ್ ನೀಡಿ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

  • ನನಗೆ ಮಾಲಿಂಗ ಯಾರ್ಕರ್ ಹಾಕೋದನ್ನು ಹೇಳಿಕೊಟ್ಟಿಲ್ಲ – ಬೌಲಿಂಗ್ ಗುಟ್ಟು ಬಿಚ್ಚಿಟ್ಟ ಬುಮ್ರಾ

    ನನಗೆ ಮಾಲಿಂಗ ಯಾರ್ಕರ್ ಹಾಕೋದನ್ನು ಹೇಳಿಕೊಟ್ಟಿಲ್ಲ – ಬೌಲಿಂಗ್ ಗುಟ್ಟು ಬಿಚ್ಚಿಟ್ಟ ಬುಮ್ರಾ

    ನವದೆಹಲಿ: ಶ್ರೀಲಂಕಾದ ಯಾರ್ಕರ್ ಸ್ಪೆಶಲಿಸ್ಟ್ ಲಸಿತ್ ಮಾಲಿಂಗ ನನಗೆ ಯಾರ್ಕರ್ ಹಾಕುವುದನ್ನು ಹೇಳಿಕೊಟ್ಟಿಲ್ಲ ಎಂದು ಭಾರತದ ಯುವ ಸ್ಟಾರ್ ವೇಗಿ ಜಸ್ಪ್ರಿತ್ ಬುಮ್ರಾ ಹೇಳಿದ್ದಾರೆ.

    ಈಗ ಭಾರತದ ತಂಡದ ಬೌಲಿಂಗ್ ಸ್ಟಾರ್ ಆಗಿರುವ ಬುಮ್ರಾ ಹಾಗೂ ಮಾಲಿಂಗ ಐಪಿಎಲ್ ನಲ್ಲಿ ಒಂದೇ ತಂಡದ ಪರವಾಗಿ ಆಡುತ್ತಾರೆ. ಬುಮ್ರಾ ಅವರು ಮುಂಬೈ ಇಂಡಿಯನ್ಸ್ ಪರ ಆಡುವಾಗ ಮಾಲಿಂಗ ಅವರ ಬಳಿ ಯಾರ್ಕರ್ ಎಸೆತವನ್ನು ಮಾಡುವುದನ್ನು ಕಲಿತಿದ್ದಾರೆ. ಹಾಗಾಗಿ ಅವರು ಇಂದು ಡೆಡ್ಲಿ ಯಾರ್ಕರ್ ಗಳನ್ನು ಎಸೆಯುತ್ತಾರೆ ಎಂಬ ಮಾತುಗಳು ಕ್ರಿಕೆಟ್ ವಲಯದಲ್ಲಿ ಕೇಳಿ ಬಂದಿತ್ತು.

    ಈಗ ಈ ಗಾಳಿ ಸುದ್ದಿಗೆ ತೆರೆ ಎಳೆದಿರುವ ಬುಮ್ರಾ, ಲಸಿತ್ ಮಾಲಿಂಗ ಅವರು ನನಗೆ ಯಾರ್ಕರ್ ಎಸೆತ ಹಾಕುವುದನ್ನು ಹೇಳಿಕೊಟ್ಟಿಲ್ಲ. ನಾನು ಮತ್ತು ಅವರು ಮುಂಬೈ ಇಂಡಿಯನ್ಸ್ ಪರ ಆಡುವಾಗ ಒಂದೇ ನೆಟ್‍ನಲ್ಲಿ ಅಭ್ಯಾಸ ಮಾಡಿದ್ದೇವೆ. ಆದರೆ ಅವರು ನನಗೆ ಯಾರ್ಕರ್ ಎಸೆತವನ್ನು ಹೇಗೆ ಎಸೆಯುವುದು ಎಂಬುದರ ಬಗ್ಗೆ ಹೇಳಿಕೊಟ್ಟಿಲ್ಲ. ಬದಲಿಗೆ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಒತ್ತಡವನ್ನು ಹೇಗೆ ನಿರ್ವಹಿಸಬೇಕು ಎಂದು ಹೇಳಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

    ಖಾಸಗಿ ಮಾಧ್ಯಮದ ಸಂದರ್ಶನವೊಂದರಲ್ಲಿ ಮಾತನಾಡಿರುವ ಬುಮ್ರಾ, ನನಗೆ ಯಾರು ಯಾರ್ಕರ್ ಎಸೆತವನ್ನು ಹೇಳಿಕೊಟ್ಟಿಲ್ಲ. ಮಾಲಿಂಗ ಅವರು ನಾನು ಐಪಿಎಲ್ ಅಲ್ಲಿ ಒಂದೇ ತಂಡಕ್ಕೆ ಆಡುತ್ತೇವೆ. ಆದರೆ ಮಾಲಿಂಗ ಕೂಡ ನನಗೆ ಯಾರ್ಕರ್ ಎಸೆತದ ಬಗ್ಗೆ ಹೇಳಿಕೊಟ್ಟಿಲ್ಲ. ನಾನು ಟಿವಿ ನೋಡಿಯೇ ಬೌಲಿಂಗ್ ಮಾಡುವುದನ್ನು ಕಲಿತ್ತಿದ್ದೇನೆ. ವಿಡಿಯೋ ನೋಡಿ ಅಲ್ಲಿನ ಪ್ರತಿಕ್ರಿಯೆಯನ್ನು ಅನುಸರಿಸಿ ನಾನು ಬೌಲಿಂಗ್ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    ನಾನು ಈಗಲೂ ಕೂಡ ಟಿವಿ ನೋಡಿಯೇ ಬೌಲಿಂಗ್ ಕಲಿಯುತ್ತೇನೆ. ನನಗೆ ನನ್ನದೇ ದಾರಿಯಲ್ಲಿ ಅಭ್ಯಾಸ ಮಾಡಲು ಇಷ್ಟಪಡುತ್ತೇನೆ. ನನ್ನ ಬಗ್ಗೆ ನಾನೇ ವಿಶ್ಲೇಷಣೆ ಮಾಡಲು ಪ್ರಯತ್ನಿಸುತ್ತೇನೆ. ಏಕೆಂದರೆ ಕ್ರಿಕೆಟ್ ಆಡುವಾಗ ಮೈದಾನದಲ್ಲಿ ನಾನು ಒಬ್ಬಂಟಿಯಾಗಿ ಬೌಲಿಂಗ್ ಮಾಡಬೇಕು. ಅಲ್ಲಿ ನನಗೆ ಸಹಾಯ ಮಾಡಲು ಯಾರು ಇರುವುದಿಲ್ಲ. ಹಾಗಾಗಿ ನಾನು ನನ್ನ ದಾರಿಯಲ್ಲಿ ನಾನೇ ಅಭ್ಯಾಸ ಮಾಡಿ. ನನಗೆ ನಾನೇ ಸಹಾಯ ಮಾಡಿಕೊಳ್ಳುತ್ತೇನೆ ಎಂದು ತನ್ನ ಬೌಲಿಂಗ್ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ.

    ಕೆಲವರು ಮಾಲಿಂಗ ಅವರು ನನಗೆ ಯಾರ್ಕರ್ ಮಾಡುವುದನ್ನು ಹೇಳಿಕೊಟ್ಟಿದ್ದಾರೆ ಎಂದು ಹೇಳುತ್ತಾರೆ. ಅದು ನಿಜವಲ್ಲ. ಅವರು ನನಗೆ ಮೈದಾನದಲ್ಲಿ ಏನೂ ಹೇಳಿಕೊಟ್ಟಿಲ್ಲ. ಅವರ ಬಳಿ ನಾನು ಕಲಿತಿರುವುದು ಮನಸ್ಸನ್ನು ಹೇಗೆ ನಿಯಂತ್ರಣ ಮಾಡುವುದು, ಕೋಪ ಮಾಡಿಕೊಳ್ಳದೇ ಹೇಗೆ ಇರುವುದು. ವಿಭಿನ್ನ ಸಂದರ್ಭಗಳನ್ನು ಹೇಗೆ ನಿಭಾಯಿಸುವುದು ಮತ್ತು ಒಬ್ಬ ಬ್ಯಾಟ್ಸ್ ಮ್ಯಾನ್ ಅನ್ನು ಔಟ್ ಮಾಡಲು ಹೇಗೆ ಯೋಜನೆ ರೂಪಿಸುವುದು ಎಂಬುದನ್ನು ನಾನು ಅವರ ಬಳಿ ಕಲಿತಿದ್ದೇನೆ ಎಂದು ಹೇಳಿದ್ದಾರೆ.

    ಬೆನ್ನು ನೋವಿನ ಗಾಯದ ಸಮಸ್ಯೆಯಿಂದ ಕಳೆದ ಐದು ತಿಂಗಳಿಂದ ಭಾರತದ ತಂಡದಿಂದ ಹೊರಬಿದ್ದಿದ್ದ ಬುಮ್ರಾ ಅವರು ಜನವರಿ 5 ರಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಗೆ ಭಾರತ ತಂಡವನ್ನು ಸೇರಿಕೊಂಡಿದ್ದಾರೆ.

  • ಬುಮ್ರಾ, ಧವನ್ ಬ್ಯಾಕ್, ರೋಹಿತ್‍ಗೆ ವಿಶ್ರಾಂತಿ – ಲಂಕಾ, ಆಸಿಸ್ ಸರಣಿಗೆ ಭಾರತ ಆಟಗಾರ ಪಟ್ಟಿ ಬಿಡುಗಡೆ

    ಬುಮ್ರಾ, ಧವನ್ ಬ್ಯಾಕ್, ರೋಹಿತ್‍ಗೆ ವಿಶ್ರಾಂತಿ – ಲಂಕಾ, ಆಸಿಸ್ ಸರಣಿಗೆ ಭಾರತ ಆಟಗಾರ ಪಟ್ಟಿ ಬಿಡುಗಡೆ

    ನವದೆಹಲಿ: ಮುಂಬರುವ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧದ ಟಿ-20 ಮತ್ತು ಏಕದಿನ ಸರಣಿಗೆ ಭಾರತ ತಂಡವನ್ನು ಇಂದು ಆಯ್ಕೆ ಮಾಡಿದ್ದು, ಕಳೆದ ನಾಲ್ಕು ತಿಂಗಳಿಂದ ತಂಡದಿಂದ ಹೊರಗಡೆಯಿದ್ದ ಬೌಲರ್ ಜಸ್ಪ್ರಿತ್ ಬುಮ್ರಾ ಅವರು ಭಾರತದ ತಂಡಕ್ಕೆ ವಾಪಸ್ ಆಗಿದ್ದಾರೆ.

    ಬುಮ್ರಾ ಅವರ ಜೊತೆಗೆ ಕಳೆದ ವೆಸ್ಟ್ ಇಂಡೀಸ್ ಸರಣಿಯಲ್ಲಿ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಬಿದ್ದಿದ್ದ ಆರಂಭಿಕ ಆಟಗಾರ ಶಿಖರ್ ಧವನ್ ಅವರು ಟಿ-20 ಮತ್ತು ಏಕದಿನ ಎರಡು ತಂಡಗಳಿಗೆ ಮರಳಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಏಕದಿನ ಪಂದ್ಯಗಳಲ್ಲಿ ಅತೀ ಹೆಚ್ಚು ರನ್ ಸಿಡಿಸಿರುವ ರೋಹಿತ್ ಶರ್ಮಾ ಅವರಿಗೆ ಶ್ರೀಲಂಕಾ ವಿರುದ್ಧದ ಟಿ-20 ಸರಣಿಗೆ ರೆಸ್ಟ್ ನೀಡಲಾಗಿದೆ. ಇವರ ಜೊತೆಗೆ ವೇಗಿ ಮೊಹಮ್ಮದ್ ಶಮಿ ಅವರಿಗೂ ರೆಸ್ಟ್ ನೀಡಲಾಗಿದೆ.

    ಬೆನ್ನು ನೋವಿನ ಸಮಸ್ಯೆಯಿಂದ ಶಸ್ತ್ರಚಿಕೆತ್ಸೆಗೆ ಒಳಗಾಗಿದ್ದ ಬುಮ್ರಾ ಅವರು ನಾಲ್ಕು ತಿಂಗಳ ನಂತರ ಭಾರತ ತಂಡಕ್ಕೆ ವಪಾಸ್ ಆಗಿದ್ದಾರೆ. ಅವರು ಕಳೆದ ಆಗಸ್ಟ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತನ್ನ ಕೊನೆಯ ಅಂತರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇದಾದ ನಂತರ ವಿಶಾಖಪಟ್ಟಣದಲ್ಲಿ ನಡೆದ ಭಾರತ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನೆಟ್‍ನಲ್ಲಿ ಬೌಲಿಂಗ್ ಮಾಡಿ ತಮ್ಮ ಫಿಟ್ನೆಸ್ ಸಾಬೀತು ಮಾಡಿದ್ದರು.

    ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಮತ್ತು ಟಿ-20 ಸರಣಿಗೆ ಗಾಯದ ಸಮಸ್ಯೆಯಿಂದ ಹೊರಬಿದ್ದಿದ್ದ ಶಿಖರ್ ಧವನ್ ಅವರು ಮತ್ತೆ ತಂಡಕ್ಕೆ ಮರಳಿದ್ದಾರೆ. ಈ ವರ್ಷ ಕೊಹ್ಲಿ ಅವರ ಅನುಪಸ್ಥಿತಿಯಲ್ಲಿ ಭಾರತವನ್ನು ಮುನ್ನಡೆಸಿದ ರೋಹಿತ್ ಶರ್ಮಾ ಅವರಿಗೆ ಕೊಂಚ ಬ್ರೇಕ್ ನೀಡಲಾಗಿದ್ದು, ಎಂದಿನಂತೆ ನಾಯಕ ಕೊಹ್ಲಿ ಜನವರಿ 5 ರಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ 3 ಟಿ-20 ಸರಣಿ ಮತ್ತು ಜನವರಿ 14 ರಿಂದ ಆರಂಭವಾಗುವ ಆಸ್ಟ್ರೇಲಿಯಾದ ವಿರುದ್ಧದ 3 ಏಕದಿನ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

    ಎಂಎಸ್‍ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿಯು ನವದೆಹಲಿಯಲ್ಲಿ ಈ ಎರಡು ಸರಣಿಗೆ ಆಟಗಾರರನ್ನು ಆಯ್ಕೆ ಮಾಡಿದೆ. ಸಭೆಯ ನಂತರ ಮಾತನಾಡಿದ ಎಂಎಸ್‍ಕೆ ಪ್ರಸಾದ್ ರಿಷಭ್ ಪಂತ್ ಅವರಿಗೆ ವಿಕೆಟ್ ಕೀಪಿಂಗ್ ಕೌಶಲ್ಯವನ್ನು ಸುಧಾರಿಸಲು ಒಳ್ಳೆಯ ವಿಕೆಟ್ ಕೀಪಿಂಗ್ ಕೋಚ್ ಅನ್ನು ನೇಮಕ ಮಾಡಲಾಗುತ್ತದೆ. ಅವರು ಕೀಪಿಂಗ್ ಅಲ್ಲಿ ಸ್ವಲ್ಪ ಸುಧಾರಿಸಬೇಕಿದೆ ಹಾಗಾಗಿ ತಜ್ಞ ತರಬೇತುದಾರನನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿದರು.

    ಶ್ರೀಲಂಕಾ ಟಿ-20 ಸರಣಿ:
    ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಿವಂ ದುಬೆ, ಯುಜ್ವೇಂದ್ರ ಚಹಲ್, ಕುಲದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಮನೀಶ್ ಪಾಂಡೆ, ವಾಷಿಂಗ್ಟನ್ ಸುಂದರ್, ಸಂಜು ಸ್ಯಾಮ್ಸನ್.

    ಆಸ್ಟ್ರೇಲಿಯಾ ಏಕದಿನ ಸರಣಿ:
    ವಿರಾಟ್ ಕೊಹ್ಲಿ (ಕ್ಯಾಪ್ಟನ್), ಶಿಖರ್ ಧವನ್, ರೋಹಿತ್ ಶರ್ಮಾ, ಕೆ.ಎಲ್.ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಕೇದಾರ್ ಜಾಧವ್, ಶಿವಂ ದುಬೆ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯುಜ್ವೇಂದ್ರ ಚಹಲ್, ನವದೀಪ್ ಸೈನಿ, ಶಾರ್ದುಲ್ ಠಾಕೂರ್, ಜಸ್ಪ್ರಿತ್ ಬುಮ್ರಾ.

  • ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಬುಮ್ರಾ, ಪೃಥ್ವಿ ಶಾ ಎಂಟ್ರಿ

    ವಿಂಡೀಸ್ ವಿರುದ್ಧದ 2ನೇ ಏಕದಿನ ಪಂದ್ಯಕ್ಕೆ ಬುಮ್ರಾ, ಪೃಥ್ವಿ ಶಾ ಎಂಟ್ರಿ

    ನವದೆಹಲಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯಕ್ಕೆ ಭಾರತದ ವೇಗದ ಬೌಲರ್ ಜಸ್ಪ್ರಿತ್ ಬುಮ್ರಾ ಮತ್ತು ಉದಯೋನ್ಮುಖ ಬ್ಯಾಟ್ಸ್‌ಮನ್‌ ಪೃಥ್ವಿ ಶಾ ವೆಸ್ಟ್ ಸ್ಥಾನ ಪಡೆಯಲಿದ್ದಾರೆ.

    ವಿಶಾಖಪಟ್ಟಣಂನಲ್ಲಿ ಡಿಸೆಂಬರ್ 18 ರಂದು ಎರಡನೇ ಏಕದಿನ ಪಂದ್ಯ ನಡೆಯಲಿದೆ. ಈ ನಿಟ್ಟಿನಲ್ಲಿ ಬುಮ್ರಾ ಹಾಗೂ ಪೃಥ್ವಿ ಶಾ ನೆಟ್‍ನಲ್ಲಿ ಅಭ್ಯಾಸ ಆರಂಭಿಸಿದ್ದಾರೆ. ಬಿಸಿಸಿಐ ಪಂದ್ಯಕ್ಕೂ ಮುನ್ನವೇ ಈ ಇಬ್ಬರು ಆಡಗಾರರ ಫಿಟ್‍ನೆಸ್ ಪರೀಕ್ಷೆ ಮಾಡಲಿದೆ.

    ಭಾರತ ತಂಡವು ಜನವರಿಯಲ್ಲಿ ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಐದು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಭಾರತ ಆಡಲಿದೆ. ಹೀಗಾಗಿ ಪ್ರವಾಸಕ್ಕೂ ಮುನ್ನ ಈ ಇಬ್ಬರು ಆಟಗಾರರ ಫಿಟ್‍ಎಂದು ಘೋಷಿಸಬೇಕೆಂದು ಆಯ್ಕೆ ಸಮಿತಿ ನಿರ್ಧರಿಸಿದೆ.

    ಈ ಸಂಬಂಧ ಮಾಧ್ಯಮಗಳ ಜೊತೆಗೆ ಮಾತನಾಡಿದ ಬಿಸಿಸಿಐ ಅಧಿಕಾರಿಯೊಬ್ಬರು, ವಿಶಾಖಪಟ್ಟಣದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಅನುಭವಿ ಬ್ಯಾಟ್ಸ್‌ಮನ್‌ ಗಳು ಇರಲಿದ್ದಾರೆ. ಬೌಲಿಂಗ್ ಪಡೆ ಬಲ ಹೆಚ್ಚಿಸಲು ಬುಮ್ರಾ ಅವರನ್ನು ತಂಡಕ್ಕೆ ಆಯ್ಕೆ ಮಾಡಲು ನಿರ್ಧರಿಸಲಾಗಿದೆ. ಅವರ ಬೆನ್ನಿನ ಗಾಯವನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

    ಭಾರತ ತಂಡವು ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಸರಣಿ ಆಡಲಿದೆ. ಈ ಎರಡೂ ಸರಣಿಯಲ್ಲಿ ಬುಮ್ರಾ ಅವರನ್ನು ಟೀಂ ಇಂಡಿಯಾದಲ್ಲಿ ಸೇರಿಸಲಾಗುವುದು ಎನ್ನಲಾಗುತ್ತಿದೆ. ಜನವರಿ 5ರಿಂದ 10 ರವರೆಗೆ ಶ್ರೀಲಂಕಾ ವಿರುದ್ಧ ಭಾರತವು ಮೂರು ಟಿ20 ಪಂದ್ಯಗಳನ್ನು ಆಡಲಿದೆ. ಬಳಿಕ ಜನವರಿ 14ರಿಂದ 19ರವರೆಗೆ ಮೂರು ಏಕದಿನ ಪಂದ್ಯಗಳನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗಾಗಿ ಬುಮ್ರಾ ಅವರನ್ನು ಟೆಸ್ಟ್ ತಂಡದಲ್ಲಿ ಸೇರಿಸಲಾಗಿತ್ತು. ಆದರೆ ಬೆನ್ನು ನೋವಿನಿಂದಾಗಿ ಅವರನ್ನು ತಂಡದಿಂದ ಕೈಬಿಡಲಾಗಿದೆ. ವಿಶ್ವಕಪ್ ನಂತರ ವೆಸ್ಟ್ ಇಂಡೀಸ್ ವಿರುದ್ಧ ಟಿ20 ಮತ್ತು ಏಕದಿನ ಪಂದ್ಯಗಳಿಂದ ಬುಮ್ರಾ ವಿಶ್ರಾಂತಿ ಪಡೆದಿದ್ದರು.

    ಮತ್ತೊಂದೆಡೆ, ಪೃಥ್ವಿ ಶಾ ಕಳೆದ ವರ್ಷ ನವೆಂಬರ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ನಂತರ ಅವರನ್ನು ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಅಭ್ಯಾಸ ಪಂದ್ಯದಲ್ಲಿ ಪೃಥ್ವಿ ಶಾ ಗಾಯಗೊಂಡಿದ್ದರು. ಹೀಗಾಗಿ ಅವರು ಆಸ್ಟ್ರೇಲಿಯಾ ಪ್ರವಾಸದಿಂದ ತವರಿಗೆ ಹಿಂತಿರುಗಿದ್ದರು.

    ವೆಸ್ಟ್ ಇಂಡೀಸ್-ಎ ತಂಡದ ವಿರುದ್ಧದ ಅನಧಿಕೃತ ಟೆಸ್ಟ್ ಪಂದ್ಯಕ್ಕಾಗಿ ಭಾರತ-ಎ ತಂಡದಲ್ಲಿ ಶಾ ಅವರನ್ನು ಸೇರಿಸಲಾಗಿತ್ತು. ಆದರೆ ಬಿಸಿಸಿಐನಿಂದ ನಿಷೇಧಕ್ಕೆ ಒಳಗಾಗಿ ಕಳೆದ 8 ತಿಂಗಳಿನಿಂದ ಕ್ರಿಕೆಟ್‍ನಿಂದ ದೂರ ಉಳಿದಿದ್ದ ಯುವ ಆಟಗಾರ ಪೃಥ್ವಿ ಶಾ, ಸೈಯದ್ ಮಷ್ತಾಕ್ ಅಲಿ ಟ್ರೋಫಿಯಲ್ಲಿ ಕಮ್‍ಬ್ಯಾಕ್ ಮಾಡಿದ್ದರು. ಬುಧವಾರ ನಡೆದ ರಂಜಿ ಟ್ರೋಫಿಯಲ್ಲಿ ಅವರು ದ್ವಿಶತಕ ಬಾರಿಸಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ಪ್ರವಾಸದಲ್ಲಿ ರಿಸರ್ವ್ ಓಪನರ್ ಆಗಿ ಪೃಥ್ವಿ ಶಾ ಸ್ಥಾನ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

    ಅಂದಹಾಗೇ ಶಾ ಟೀಂ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಪಾದಾರ್ಪಣೆ ಮಾಡಿದ ಪಂದ್ಯದಲ್ಲೇ ಶತಕ ಗಳಿಸಿದ 2ನೇ ಕಿರಿಯ ಆಟಗಾರ ಎಂಬ ದಾಖಲೆಯನ್ನು ಹೊಂದಿದ್ದಾರೆ. ಕಳೆದ ವರ್ಷ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾ ರಾಜ್ ಕೋಟ್‍ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 134 ರನ್ ಸಿಡಿಸಿದ್ದರು. ಆ ಬಳಿಕ ಆಸ್ಟ್ರೇಲಿಯಾ ವಿರುದ್ಧ ಟೂರ್ನಿಯಲ್ಲಿ ಗಾಯಗೊಂಡು ತಂಡದಿಂದ ಹೊರ ನಡೆದಿದ್ದರು. ಆ ಬಳಿಕ ಐಪಿಎಲ್‍ನಲ್ಲಿ ಡೆಲ್ಲಿ ತಂಡದ ಪರ ಆಡಿ 16 ಪಂದ್ಯಗಳಲ್ಲಿ 353 ರನ್ ಗಳಿಸಿದ್ದರು.

  • ಬುಮ್ರಾ ಆರ್‌ಸಿಬಿಗೆ ಹೋಗ್ತಾರಾ? ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ಮುಂಬೈ ಇಂಡಿಯನ್ಸ್

    ಬುಮ್ರಾ ಆರ್‌ಸಿಬಿಗೆ ಹೋಗ್ತಾರಾ? ಅಭಿಮಾನಿಗಳ ಪ್ರಶ್ನೆಗೆ ಉತ್ತರಿಸಿದ ಮುಂಬೈ ಇಂಡಿಯನ್ಸ್

    ನವದೆಹಲಿ: ಮುಂಬೈ ಇಂಡಿಯನ್ಸ್ ಆಟಗಾರರು ಹಬ್ಬಕ್ಕೂ ಮುನ್ನವೇ ದೀಪಾವಳಿ ಸಂಭ್ರಮಿಸಿದ್ದು, ತಂಡದ ಫ್ರಾಂಚೈಸಿ ಮಾಲೀಕ ಮುಖೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ಕೂಡ ಆಟಗಾರರಿಗೆ ಸಾಥ್ ನೀಡಿದ್ದಾರೆ.

    ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ಯುವರಾಜ್ ಸಿಂಗ್, ಹಾರ್ದಿಕ್ ಪಾಂಡ್ಯ, ಕೃಣಾಲ್ ಪಾಂಡ್ಯ, ಕೋಚ್ ಮಹೇಲ ಜಯವರ್ಧನೆ ಸೇರಿದಂತೆ ತಂಡಕ್ಕೆ ಲಭ್ಯವಿರುವ ಆಟಗಾರರು ದೀಪಾವಳಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಬಳಿಕ ಮುಖೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಮುಂಬೈ ಇಂಡಿಯನ್ಸ್ ತಂಡದ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: ಐಪಿಎಲ್ ಇತಿಹಾಸದಲ್ಲೇ ಮೊದಲ ಮಹಿಳಾ ಸಹಾಯಕ ಸಿಬ್ಬಂದಿಯನ್ನು ನೇಮಿಸಿದ ಆರ್‌ಸಿಬಿ

    ಈ ಸಂಭ್ರಮದ ಫೋಟೋಗಳನ್ನು ಮುಂಬೈ ಇಂಡಿಯನ್ಸ್ ತನ್ನ ಟ್ವಿಟ್ಟರ್ ಖಾತೆ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದೆ. ಟೀಂ ಇಂಡಿಯಾ ವೇಗಿ, ಮುಂಬೈ ಇಂಡಿಯನ್ಸ್ ನ ಪ್ರಮುಖ ಆಟಗಾರ ಜಸ್ಪ್ರಿತ್ ಬುಮ್ರಾ ಫೋಟೋದಲ್ಲಿ ಕಾಣಿಸಿಕೊಳ್ಳದೆ ಇರುವುದನ್ನು ಗಮನಿಸಿದ ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಪ್ರಶ್ನೆಗಳನ್ನು ಕೇಳಿದ್ದಾರೆ. ಇದನ್ನೂ ಓದಿ: ಕೊಹ್ಲಿ ನಾಯಕನಾಗಿ ಮುಂದುವರಿಯಲಿದ್ದಾರೆ: ಆರ್‌ಸಿಬಿ ಸ್ಪಷ್ಟನೆ

    ಜಸ್ಪ್ರಿತ್ ಬುಮ್ರಾ ಎಲ್ಲಿದ್ದಾರೆ? ಅವರು ಆರ್‌ಸಿಬಿ ತಂಡವನ್ನು ಹೋಗುತ್ತಾರಾ ಎಂದು ಪ್ರವೀಣ್ ಕುಮಾರ್ ಎಂಬವರು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮುಂಬೈ ಇಂಡಿಯನ್ಸ್, ರೋಹಿತ್ ಶರ್ಮಾ ಅವರ ಜಿಪ್ ಇಮೇಜ್ ಟ್ವೀಟ್ ಮಾಡಿ, ಸ್ವಲ್ಪ ತಾಳ್ಮೆಯಿಂದ ಇರಿ (ಶಾಂತವಾಗಿರಿ) ಎಂದು ಉತ್ತರಿಸಿದೆ. ಈ ಮೂಲಕ ಜಿಸ್ಪ್ರಿತ್ ಬುಮ್ರಾ ಅವರನ್ನು ತಂಡದಿಂದ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಮುಂಬೈ ಇಂಡಿಯನ್ಸ್ ಸ್ಪಷ್ಟಪಡಿಸಿದೆ. ಇದನ್ನೂ ಓದಿ:  ವರ್ಷದ ವಿಸ್ಡೆನ್ ಇಂಡಿಯಾ ಕ್ರಿಕೆಟರ್ಸ್ ಆದ ಬುಮ್ರಾ, ಮಂಧಾನಾ