Tag: ಜಾತ್ಯಾತೀತ

  • ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ

    ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ: ಪೇಜಾವರ ಶ್ರೀ

    ಮಂಗಳೂರು: ಒಂದು ಕಡೆ ನಾವು ಜಾತ್ಯಾತೀತರು ಎನ್ನುವುದು. ಇನ್ನೊಂದು ಎಲ್ಲಾ ವಲಯದಲ್ಲೂ ಅದನ್ನ ಪೋಷಿಸುವುದು.  ಜಾತಿ ವ್ಯವಸ್ಥೆಯನ್ನು ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಿದ್ದಾರೆ ಎಂದು ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ (Udupi Pejawar Vishwa Prasanna Teertha Swamiji) ಹೇಳಿದ್ದಾರೆ.

    ಜಾತ್ಯಾತೀತ (Secular) ಅಂತ ಹೇಳಿಕೊಳ್ಳುವಾಗ ಇಲ್ಲಿ ಜಾತಿ (Caste) ಪಂಗಡಗಳ ಲೆಕ್ಕಾಚಾರ ಯಾಕೆ ಎಂದು ಉಡುಪಿ ಪೇಜಾವರ ಪ್ರಶ್ನಿಸಿ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ವಿರುದ್ದ ಅವರು ಪರೋಕ್ಷ ವಾಗ್ದಾಳಿ ನಡೆಸಿದರು.

    ಮಂಗಳೂರಿನ ಕುಳಾಯಿ ಚಿತ್ರಾಪುರ ಮಠದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, ನಾವು ಹೇಳಿದ್ದು ತಪ್ಪಂತೆ. ಪುಡಿ ರಾಜಕಾರಣ (Politics) ಮಾಡುತ್ತಿದ್ದೇವೆ ಎನ್ನುತ್ತಾರೆ. ಹಾಗಾದರೆ ಇದು ಪ್ರಜಾಪ್ರಭುತ್ವ ರಾಷ್ಟ್ರ ಹೌದೋ ಅಲ್ವೋ ಹೇಳಿ ಎಂದಿದ್ದಾರೆ. ಹೌದು ಅಂತಾದ್ರೆ ಒಬ್ಬ ಮಾಠಾಧಿಪತಿಗೆ ಅಂತಲ್ಲ, ಸಾಮಾನ್ಯ ಪ್ರಜೆಗೂ ಮಾತಾಡುವ ಹಕ್ಕಿದೆ. ಹೀಗಿರುವಾಗ ಕಾವಿ ತೆಗೆದಿಟ್ಟು ಬಂದರೆ ಉತ್ತರ ಕೊಡುತ್ತೇನೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

     

    ಸಮಾಜದಲ್ಲಿ ಮಾತನಾಡುವ ಹಕ್ಕು ಇರುವುದು ಕೆಲವು ರಾಜಕಾರಣಿಗಳಿಗೆ ಮಾತ್ರವೇ? ಪ್ರಜೆಗಳಿಗೂ ಹಕ್ಕಿಲ್ಲ, ರಾಜಕಾರಣಿಗಳಿಗೆ ಮಾತ್ರ ಹಕ್ಕಿದೆ ಅಂತ ಹೇಳಲಿ. ಪ್ರಜಾಪ್ರಭುತ್ವ ಸತ್ತು ಹೋಯ್ತು, ಈಗ ಇರೋದು ರಾಜಕಾರಣಿಗಳ ರಾಜ್ಯ ಅಂತ ಹೇಳಿ ಬಿಡಲಿ. ಹಾಗಿಲ್ಲ ಅಂತಾದ್ರೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪೀಠಾಧಿಪತಿ ಮಾತ್ರ ಅಲ್ಲ, ಸಾಮಾನ್ಯ ಪ್ರಜೆಗೂ ಅಭಿಪ್ರಾಯ ವ್ಯಕ್ತಪಡಿಸುವ ಹಕ್ಕಿರಲೇಬೇಕು. ಹಾಗಾಗಿ ನಾವು ಅದನ್ನ ಮಾತ್ರ ಮಾಡಿದ್ದೇವೆಯೇ ಹೊರತು ಬೇರೆ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಪೇಜಾವರ ಶ್ರೀ ಬಗ್ಗೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ – ಬಾಗಲಕೋಟೆಯಲ್ಲಿ ಬ್ರಾಹ್ಮಣ ಸಮಾಜ ಆಕ್ರೋಶ

    ಇಂಥಹ ರಾಜಕಾರಣಿಗಳಿಗೆ ಸದ್ಭುದ್ದಿ ಕೊಡಲಿ ಎಂದು ದೇವರಲ್ಲಿ ಕೇಳುತ್ತಿದ್ದೇನೆ. ನಮ್ಮ ಪಂಗಡದೊಳಗೆ ಯಾರಿಗೆಲ್ಲಾ ವೈಮನಸ್ಸು ಇದೆಯೋ ಅದು ದೂರವಾಗಲಿ ಎಂದು ಅವರು ಪ್ರಾರ್ಥಿಸಿದರು.

    ಏನಿದು ಪುಡಿ ರಾಜಕಾರಣಿ ವಿವಾದ?
    ಜಾತಿಗಣತಿ ವಿಚಾರದ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದ ಪೇಜಾವರ ಶ್ರೀ, ಸರ್ಕಾರ ಹಣ ಖರ್ಚು ಮಾಡಿ ಜಾತಿ ಜನಗಣತಿ (Caste Census) ಮಾಡಿ ಮುಚ್ಚಿಟ್ಟಿದೆ. ಜಾತ್ಯಾತೀತವಾಗಿರುವ (Secular) ರಾಷ್ಟ್ರದಲ್ಲಿ ಜಾತಿ ಗಣತಿ ಯಾಕೆ ಬೇಕು ಎಂದು ಪ್ರಶ್ನಿಸಿದ್ದರು. ಒಂದು ಕಡೆ ಜಾತಿ ಆಧಾರದಲ್ಲಿ ರಾಜಕೀಯ ಬೇಡ ಎನ್ನುತ್ತೀರಿ. ಇನ್ನೊಂದು ಕಡೆ ಜಾತಿಗಣತಿ ಎನ್ನುತ್ತೀರಿ. ಈ ಜಾತಿ ಗಣತಿ ಯಾಕೆ ಎನ್ನುವುದು ತಿಳಿಯುತ್ತಿಲ್ಲ ಎಂದಿದ್ದರು.

    ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಹರಿಪ್ರಸಾದ್‌, ಪೇಜಾವರ ಸ್ವಾಮೀಜಿ ಅವರು ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ. ಪೇಜಾವರ ಸ್ವಾಮೀಜಿ ಅವರು ಕಾವಿ ಬಟ್ಟೆ ತ್ಯಜಿಸಿ ಬಂದರೆ ಅವರಿಗೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದರು.

     

  • ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ – ಬಿಜೆಪಿ ಕೆಂಡಾಮಂಡಲ

    ಮುಸ್ಲಿಂ ಲೀಗ್ ಜಾತ್ಯಾತೀತ ಪಕ್ಷ ಎಂದ ರಾಹುಲ್ – ಬಿಜೆಪಿ ಕೆಂಡಾಮಂಡಲ

    ನವದೆಹಲಿ: ಕೇರಳದಲ್ಲಿ ಅಸ್ತಿತ್ವದಲ್ಲಿರುವ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML) ಪಕ್ಷವನ್ನು ಜಾತ್ಯಾತೀತ ಪಕ್ಷ (Secular Party) ಎಂದು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gamdhi) ಬಣ್ಣಿಸಿರುವುದು ಬಿಜೆಪಿ (BJP) ಆಕ್ರೋಶಕ್ಕೆ ಕಾರಣವಾಗಿದೆ.

    ವಾಷಿಂಗ್ಟನ್ ಡಿಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಮುಸ್ಲಿಂ ಲೀಗ್ ಸಂಪೂರ್ಣವಾಗಿ ಲೌಕಿಕವಾದದ ಪಕ್ಷವಾಗಿದೆ. ಮುಸ್ಲಿಂ ಲೀಗ್‌ನಲ್ಲಿ ನಾನ್ ಸೆಕ್ಯುಲರ್ ಅಂಶಗಳು ಇಲ್ಲ ಎಂದು ತಿಳಿಸಿದ್ದಾರೆ. ಈ ಬೆನ್ನಲ್ಲೇ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಮುಗಿಬಿದ್ದಿದೆ.

    ನಮ್ಮ ದೇಶ ಧಾರ್ಮಿಕವಾಗಿ ಬೇರ್ಪಡಲು ಕಾರಣಕರ್ತರಾದ ಮಹ್ಮದ್ ಆಲಿ ಜಿನ್ನಾಗೆ ಸಂಬಂಧಿಸಿದ ಮುಸ್ಲಿಂ ಲೀಗ್ ಅನ್ನು ರಾಹುಲ್ ಗಾಂಧಿ ಜಾತ್ಯಾತೀತ ಎನ್ನುತ್ತಿದ್ದಾರೆ. ಅವರ ಮಾತುಗಳಲ್ಲಿ ಕಪಟತ್ವವೇ ತುಂಬಿದೆ. ವಯನಾಡ್ ಸಂಸದ ಸ್ಥಾನವನ್ನು ಮರುಸ್ಥಾಪಿಸಿಕೊಳ್ಳಲು ಹೀಗೆಲ್ಲಾ ಓಲೈಕೆ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಹಳಿ ತಪ್ಪಿದ ರೈಲಿಗೆ ಯಶವಂತಪುರದಿದ ಸಾಗುತ್ತಿದ್ದ ರೈಲು ಡಿಕ್ಕಿ – 50 ಸಾವು

    ಇದಕ್ಕೆ ಕಾಂಗ್ರೆಸ್ ವಕ್ತಾರ ಪವನ್ ಖೇರಾ ತಿರುಗೇಟು ನೀಡಿದ್ದಾರೆ. ಏನ್ ಬ್ರದರ್ ಓದಿಕೊಂಡಿಲ್ವಾ? ಕೇರಳದ ಮುಸ್ಲಿಂ ಲೀಗ್‌ಗೂ, ಜಿನ್ನಾ ಸ್ಥಾಪಿಸಿದ್ದ ಮುಸ್ಲಿಂ ಲೀಗ್‌ಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ. 2012ರಲ್ಲಿ ನಾಗ್ಪುರ ಪಾಲಿಕೆಯಲ್ಲಿ ಅಧಿಕಾರಕ್ಕಾಗಿ ಬಿಜೆಪಿ ಇದೇ ಐಯುಎಂಎಲ್ ಜೊತೆ ಕೈಜೋಡಿಸಿರಲಿಲ್ವಾ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಅಮಿತ್ ಮಾಳವೀಯ ಸುಳ್ಳು ಸುದ್ದಿ ಹಬ್ಬಿಸುವ ವ್ಯಕ್ತಿ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನೂ ಓದಿ: 200 ಯೂನಿಟ್ ಫ್ರೀ ನಿರೀಕ್ಷೆಯಲ್ಲಿದ್ದವರಿಗೆ ಶಾಕ್ – ವಾರ್ಷಿಕ ಸರಾಸರಿ ಅಸ್ತ್ರ ಬಳಸಿ ಬಿಲ್ ವಸೂಲಿ

  • ಮುಸ್ಲಿಂ ಸಮುದಾಯದ ಪರ ಬ್ಯಾಟಿಂಗ್‌ – ಎಚ್‍ಡಿಕೆ ಲೆಕ್ಕಾಚಾರ ಏನು?

    ಮುಸ್ಲಿಂ ಸಮುದಾಯದ ಪರ ಬ್ಯಾಟಿಂಗ್‌ – ಎಚ್‍ಡಿಕೆ ಲೆಕ್ಕಾಚಾರ ಏನು?

    ಬೆಂಗಳೂರು: ಮುಸ್ಲಿಂ ಸಮುದಾಯದ ಪರ ಕುಮಾರಸ್ವಾಮಿ ಬ್ಯಾಟಿಂಗ್ ಹಿಂದೆ ಭಾರೀ ಲೆಕ್ಕಾಚಾರ ಇದೆ ಎಂಬ ಮಾತು ಕೇಳಿ ಬಂದಿದೆ. ಕಾಂಗ್ರೆಸ್‍ನ ಸಾಫ್ಟ್ ಹಿಂದುತ್ವ ನಡೆಯ ಲಾಭ ಮಾಡಿಕೊಳ್ಳಲು ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದಾರಾ ಎಂಬ ವಿಶ್ಲೇಷಣೆ ಬಂದಿದೆ.

    ಜೆಡಿಎಸ್‌ ಪ್ಲ್ಯಾನ್‌ ಏನು?
    ಹಿಜಬ್, ಹಲಾಲ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಮಧ್ಯೆ ಗೊಂದಲವಿದೆ. ಹಿಜಬ್‌ ವಿಚಾರದಲ್ಲಿ ಸಿದ್ದರಾಮಯ್ಯನವರು ಬಹಿರಂಗ ಹೇಳಿಕೆ ನೀಡಿದರೆ ಉಳಿದ ನಾಯಕರು ದೂರ ಇದ್ದಾರೆ. ಈ ಗೊಂದಲದ ಲಾಭ ಪಡೆಯಲು ಕಾಂಗ್ರೆಸ್ ಪರವಿರುವ ಅಲ್ಪಸಂಖ್ಯಾತ ವೋಟ್ ಬ್ಯಾಂಕ್‍ಗೆ ಕೈ ಹಾಕಲು ಮುಂದಾಗಿದೆ.

    ಕಾಂಗ್ರೆಸ್ ರೀತಿ ಜೆಡಿಎಸ್‍ನದ್ದು ಸಾಫ್ಟ್ ಹಿಂದುತ್ವ ಅಲ್ಲ ಅಂತ ತೋರಿಸಿಕೊಳ್ಳಲು ಬಿಜೆಪಿ ವಿರುದ್ಧ ಗುಡುಗಬೇಕು. ಆಗ ಬಿಜೆಪಿ ವಿರೋಧಿ ಓಟ್ ಬ್ಯಾಂಕ್ ಧ್ರುವೀಕರಣಗೊಳ್ಳಬಹುದು. ಈ ರೀತಿ ಮಾಡಿದರೆ ಜೆಡಿಎಸ್-ಬಿಜೆಪಿ ಮೈತ್ರಿ ಗುಮಾನಿಯಿಂದ ಆಗಬಹುದಾದ ಡ್ಯಾಮೇಜ್ ಕಂಟ್ರೋಲ್ ಮಾಡಿದಂತಾಗುತ್ತದೆ ಎಂಬ ರಾಜಕೀಯ ಲೆಕ್ಕಾಚಾರ ಇದರಲ್ಲಿದೆ. ಇದನ್ನೂ ಓದಿ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ನಿಖಿಲ್ ಸ್ಪರ್ಧೆ: ಹೆಚ್‍ಡಿಕೆ ಘೋಷಣೆ

    ಚುನಾವಣಾ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಬಿ ಟೀಂ, ಬಿಜೆಪಿ ಜೊತೆ ಕುಮಾರಸ್ವಾಮಿ ಮ್ಯಾಚ್‍ಫಿಕ್ಸಿಂಗ್ ಮಾಡುತ್ತಾರೆ ಎಂದು ಆರೋಪ ಮಾಡುತ್ತಿರುತ್ತಾರೆ. ಈ ರೀತಿ ನಡೆದುಕೊಂಡರೆ ಆ ಆರೋಪ ಮುಂದೆ ಬರುವುದಿಲ್ಲ. ಅಷ್ಟೇ ಅಲ್ಲದೇ ಪಕ್ಷದ ಜಾತ್ಯಾತೀತ ಇಮೇಜ್‌ಗೆ ಯಾವುದೇ ಧಕ್ಕೆ ಆಗುವುದಿಲ್ಲ ಎಂಬ ಅಭಿಪ್ರಾಯಕ್ಕೆ ಬಂದಿದೆ ಎನ್ನಲಾಗುತ್ತಿದೆ.

    ಸಾಧಾರಣವಾಗಿ ಕುಮಾರಸ್ವಾಮಿ ಬಹಳ ತಾಳ್ಮೆಯಿಂದ ಪ್ರತಿಕ್ರಿಯೆ ನೀಡುತ್ತಾರೆ. ಆದರೆ ಹಿಜಬ್‌ ವಿವಾದದ ಆರಂಭದಲ್ಲಿ ಯಾವುದೇ ನಿಲುವನ್ನು ಪ್ರಕಟಿಸದೇ ಇದ್ದರೂ ನಂತರ ಸ್ಪಷ್ಟವಾಗಿ ಹಿಜಬ್‌ ಧರಿಸಿದರೆ ಏನು ಎಂದು ಪ್ರಶ್ನಿಸಿದ್ದರು. ಈಗ ಈ ವಿಚಾರದಲ್ಲೂ ಹಿಂದೂ ಕಾರ್ಯಕರ್ತರ ವಿರುದ್ಧ ಆಕ್ರೋಶವಾಗಿ ಪ್ರತಿಕ್ರಿಯಿಸುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಮತಗಳನ್ನು ಸೆಳೆಯಲು ಕುಮಾರಸ್ವಾಮಿ ಈ ಹೇಳಿಕೆಗಳನ್ನು ನೀಡುತ್ತಿರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

  • ದೇಶ ಸುತ್ತಿದ್ದೇನೆ, ಸಂವಿಧಾನ ಅರಿತಿದ್ದೇನೆ: ಶ್ರೀನಿವಾಸ ಪ್ರಸಾದ್ ಗೆ ಪೇಜಾವರ ಶ್ರೀ ಖಡಕ್ ತಿರುಗೇಟು

    ದೇಶ ಸುತ್ತಿದ್ದೇನೆ, ಸಂವಿಧಾನ ಅರಿತಿದ್ದೇನೆ: ಶ್ರೀನಿವಾಸ ಪ್ರಸಾದ್ ಗೆ ಪೇಜಾವರ ಶ್ರೀ ಖಡಕ್ ತಿರುಗೇಟು

    ಉಡುಪಿ: ನನಗೆ ಸಂವಿಧಾನ ಬಗ್ಗೆ ಅರಿವಿದೆ. ಸಂವಿಧಾನ ರಚನೆಯಾಗುವಾಗ ನನಗೆ 18 ವರ್ಷ ಆಗಿತ್ತು. ಸಂವಿಧಾನ ರಚನಾ ಸಮಿತಿಯಲ್ಲಿ ಯಾರೆಲ್ಲಾ ಸದಸ್ಯರು ಅಂತ ಗೊತ್ತಿದೆ ಎಂದು ಹೇಳುವ ಮೂಲಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್‍ರಿಗೆ ಪೇಜಾವರ ಶ್ರೀಗಳು ಖಡಕ್ ತಿರುಗೇಟು ನೀಡಿದ್ದಾರೆ.

    ಪತ್ರಿಕೆ ಓದಿ, ಲೋಕ ಸಂಚಾರ ಮಾಡಿದ ಅನುಭವ ನನಗಿದೆ. ನನಗೆ ಏನೂ ಗೊತ್ತಿಲ್ಲ ಅಂತ ಹೇಳುವುದು ಬೇಡ, ಸಂವಿಧಾನದಲ್ಲಿ ಹಲವು ತಿದ್ದುಪಡಿಯಾಗಿದೆ. ಈಗಲೂ ತಿದ್ದುಪಡಿಯಾದರೆ ತಪ್ಪೇನು ಎಂದು ಪೇಜಾವರ ಶ್ರೀಗಳು ಪ್ರಶ್ನೆ ಮಾಡಿದ್ದಾರೆ.

    ಮಠಾಧಿಪತಿಗಳಿಗೆ ಸಾಮಾಜಿಕ ಜವಾಬ್ದಾರಿ ಇದೆ. ಸಮಾಜದ ಬಗ್ಗೆ ನಾನು ಮಾತನಾಡಿದರೆ ತಪ್ಪೇನು? ಕೆಲ ವಿಚಾರಗಳು ಜಾತ್ಯಾತೀತತೆಗೆ ವಿರುದ್ಧವಾಗಿದೆ. ಅಲ್ಪಸಂಖ್ಯಾತ ಮತ್ತು ಬಹು ಸಂಖ್ಯಾತ ಜನರನ್ನು ಸರ್ಕಾರ ಒಂದೇ ರೀತಿಯಲ್ಲಿ ಕಾಣಬೇಕು. ಸರ್ಕಾರದ ಶಾದಿ ಭಾಗ್ಯ ಯೋಜನೆ ಹಿಂದುಳಿದವರಿಗೆ ಮತ್ತು ದಲಿತರಿಗೂ ಸಿಗಬೇಕು. ಒಂದು ವೇಳೆ ನಾನು ಹೇಳಿದ್ದರಲ್ಲಿ ತಪ್ಪಿದ್ದರೆ ತಿಳಿಸಿ ಅಂತಾ ಅಂದರು. ಇದನ್ನೂ ಓದಿ: ಬಿಜೆಪಿ ನಾಯಕರಿಗೆ ಬುದ್ಧಿ ಬೆಳೆದಿಲ್ಲ, ಪೇಜಾವರ ಶ್ರೀ ಎಲ್ಲದಕ್ಕೂ ಮಾತನಾಡುತ್ತಾರೆ- ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಕಿಡಿ

    ಶೃಂಗೇರಿ ಶ್ರೀಗಳ ವಿಚಾರ ಬೇರೆ ಇರಬಹುದು. ಹಲವು ಮಠಾಧಿಪತಿಗಳು ಜಾತ್ಯಾತೀತದ ಬಗ್ಗೆ ಮಾತನಾಡುತ್ತಾರೆ. ಮಠಾಧಿಪತಿಗಳು ಸಾಮಾಜಿಕ ಜವಬ್ದಾರಿಯನ್ನು ಹೊಂದಿದ್ದಾರೆ. ನಾವು ಧರ್ಮ ಮತ್ತು ಸಮಾಜದ ಬಗ್ಗೆಯೂ ಮಾತನಾಡುತ್ತೇವೆ, ನಮಗೇನು ಗೊತ್ತಿಲ್ಲ ಅಂತಾ ಹೇಳುವುದು ತಪ್ಪಾಗುತ್ತದೆ. ಸರ್ಕಾರ ರಾಜ್ಯದಲ್ಲಿನ ಎಲ್ಲ ಜನರನ್ನು ಒಂದೇ ಭಾವನೆಯಿಂದ ನೋಡಬೇಕು ಅಂತಾ ತಿಳಿಸಿದರು.

    https://youtu.be/8fnPGk-CNuQ

  • ಅಪ್ಪ-ಅಮ್ಮನ ಗುರುತು ಇಲ್ಲದೇ ಇರೋ ರಕ್ತವನ್ನು ಹೊಂದಿರುವವರು ಜಾತ್ಯತೀತರು: ಅನಂತಕುಮಾರ ಹೆಗ್ಡೆ

    ಅಪ್ಪ-ಅಮ್ಮನ ಗುರುತು ಇಲ್ಲದೇ ಇರೋ ರಕ್ತವನ್ನು ಹೊಂದಿರುವವರು ಜಾತ್ಯತೀತರು: ಅನಂತಕುಮಾರ ಹೆಗ್ಡೆ

    ಕೊಪ್ಪಳ: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಇದೀಗ ಜಾತ್ಯತೀತರ ಬಗ್ಗೆ ಹೊಸ ಹೇಳಿಕೆ ನೀಡುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

    ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯಾತೀತರು. ನಾನೊಬ್ಬ ಹಿಂದೂ ಅಥವಾ ಮುಸ್ಲಿಂ ಅಥವಾ ಕ್ರೈಸ್ತ, ಲಿಂಗಾಯತ ಅಂತಾ ಯಾರದ್ರೂ ತಮ್ಮ ಧರ್ಮವನ್ನು ಹೆಮ್ಮೆಯಿಂದ ಹೇಳಿಕೊಂಡರೆ ನನಗೆ ಖುಷಿ ಅನಿಸುತ್ತೆ. ಯಾಕಂದ್ರೆ ಅವರಿಗೆ ಅವರ ರಕ್ತದ ಅರಿವಿದೆ ಎಂದರ್ಥ. ಆದ್ರೆ ಈ ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ಅಲ್ವ. ಅಂಥವರು ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯಾತೀತರು ಅಂತ ಕರೆದುಕೊಳ್ಳುತ್ತಾರೆ ಅಂತ ಹೇಳಿದ್ರು.

    ಜಾತ್ಯಾತೀತರಿಗೆ ತಮ್ಮ ಗುರುತೇ ತಮಗಿರುವುದಿಲ್ಲ. ಮಾತೇತ್ತಿದ್ರೆ ದೊಡ್ಡ ವಿಚಾರವಾದಿಗಳು. ಅಪ್ಪ-ಅಮ್ಮನ ಪರಿಚಯ ಇಲ್ಲದೇ ಇರೋ ಇವರುಗಳು ದೊಡ್ಡ ವಿಚಾರವಾದಿಗಳು. ಇವರನ್ನು ಜಾತಿಯ ಜೊತೆ ಕೂರಿಸಿಕೊಳ್ಳುತ್ತಿರೋ ಅಥವಾ ನಿಮ್ಮ ಕುಲದ ಜೊತೆ ಕೂರಿಸಿಕೊಳ್ಳುತ್ತಿರೋ ಗುರುತಿಸಿಕೊಳ್ಳಿ ಸ್ವಾಮಿ. ನಿಮಗೆ ನಿಮ್ಮ ರಕ್ತದ ಪರಿಚಯ ಇದ್ದಿದ್ದೇ ಆದ್ರೆ ನಿಮ್ಮ ಕಾಲು ಮುಟ್ಟಿ ನಮಸ್ಕರಿಸುತ್ತೇನೆ. ಆದ್ರೆ ಜಾತ್ಯಾತೀತರು ಅಂತ ಹೇಳಿದ್ರೆ ಮಾತ್ರ ಸ್ವಲ್ಪ ನೀವು ಯಾರು ಅಂತ ಸಂಶಯ ಬರುತ್ತೆ ಅಂತ ಹೇಳಿದ್ದಾರೆ.

    ಹೌದು. ಸಂವಿಧಾನ ಜಾತ್ಯಾತೀತರು ಅಂತರು ಹೇಳಿದೆ. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ ಸಂವಿಧಾನ ಕಾಲಕ್ಕೆ ತಕ್ಕಂತೆ ಅದೆಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಬದಲಾಗುತ್ತೆ. ನಿಮಗೆ ಸಂಪ್ರದಾಯ, ಪರಂಪರೆ, ಸಂಸ್ಕೃತಿ ಇದರ ಐತಿಹಾಸಿಕ ಹೆಜ್ಜೆಯ ಗುರುತುಗಳೇ ನಿಮಗೆ ಗೊತ್ತಿಲ್ಲ. ನೀವು ಮೂರ್ಖರು. ಜಗತ್ತಿನ ಭೂಪಟಗಳು, ಸಾಮಾಜಿಕ ಚಿತ್ರಣ ಬದಲಾಗಿ ಹೋಗಿದೆ. ಆದ್ರೆ 800 ವರ್ಷಗಳು ಕಳೆದ್ರೂ ಕೂಡ ಭಾರತದಲ್ಲಿ ಪುಟುಗೋಸಿಗಳಿಗೆ ಇನ್ನು ಕೂಡ ತಲೆಯೆತ್ತಲು ಸಾಧ್ಯವಾಗಿಲ್ಲ ಅಂದ್ರು.

    ಯಾರಿಗೆ ಸಭ್ಯತೆಯ ಅರಿವಿದೆ ಅಂತವರು ಸಂಸ್ಕಾರ ಎಂಬ ಶಬ್ದವನ್ನು ಒಪ್ಪಿಕೊಳ್ಳಲೇ ಬೇಕು. ಆದ್ರೆ ಯಾರಿಗೆ ಈ ಶಬ್ಧ ಪರಿಚಯ ಇಲ್ಲವೋ ಅಥವಾ ಒಳ್ಳೆದು ಮತ್ತು ಕೆಟ್ಟದರ ಮಧ್ಯೆ ಇರೋ ಕಂದಕ ಗೊತ್ತಿಲ್ಲವೋ ಅಂತವರು ಶಿಕ್ಷಣವೇ ಸಂಸ್ಕಾರ ಅಂದುಕೊಂಡಿರುತ್ತಾರೆ. ಅಂತಹ ಮೂಢಮತಿಗಳ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಹೇಳಿದರು.