Tag: ಜಾತ್ರಾ ಮಹೋತ್ಸವ

  • ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

    ಶಾಸ್ತ್ರೋಕ್ತವಾಗಿ ತೆರೆದ ಹಾಸನಾಂಬೆ ಗರ್ಭಗುಡಿ ಬಾಗಿಲು – ಉರಿಯುತ್ತಿದ್ದ ದೀಪ, ಬಾಡದ ಹೂವು, ಹಳಸದ ನೈವೇದ್ಯ

    ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ (Hasanamba Temple) ಗರ್ಭಗುಡಿ ಬಾಗಿಲನ್ನು ಶಾಸ್ತ್ರೋಕ್ತವಾಗಿ ತೆರೆಯಲಾಗಿದೆ. ಮಧ್ಯಾಹ್ನ 12:21ಕ್ಕೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಕಳೆದ ವರ್ಷ ಗರ್ಭಗುಡಿ ಬಾಗಿಲು ಮುಚ್ಚುವ ವೇಳೆ ಹಚ್ಚಿದ್ದ ದೀಪ ಉರಿಯುತ್ತಿತ್ತು. ದೇವರ ಮುಂದೆ ಇಟ್ಟಿದ್ದ ನೈವೇದ್ಯ ಹಳಸಿರಲಿಲ್ಲ ಮತ್ತು ಹೂವು ಬಾಡಿರಲಿಲ್ಲ.

    ಅರಸು ವಂಶಸ್ಥ ನಂಜರಾಜೇಅರಸ್ ಗೊನೆಯುಳ್ಳ ಬಾಳೆಗೊನೆ ಕಡಿದ ಬಳಿಕ ಗರ್ಭಗುಡಿ ಬಾಗಿಲನ್ನು ತೆರೆಯಲಾಗಿದೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಆದಿಚುಂಚನಗಿರಿ ಹಾಸನ ಮಠದ ಪೀಠಾಧ್ಯಕ್ಷ ಶ್ರೀ ಶಂಭುನಾಥ ಸ್ಬಾಮೀಜಿ, ಶಾಸಕ ಹೆಚ್.ಪಿ.ಸ್ವರೂಪ್ ಪ್ರಕಾಶ್, ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೇತಾ ಸೇರಿದಂತೆ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್

    ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ. ಇದನ್ನೂ ಓದಿ: ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ – ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು

    ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ. ಇದನ್ನೂ ಓದಿ: ಬಿಗ್‌ಬಾಸ್ ಮನೆ ಬೀಗ ಓಪನ್ ಆದ್ರೂ ಶೂಟಿಂಗ್ ಇನ್ನೂ ಶುರುವಾಗಿಲ್ಲ!

  • ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

    ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರಾ ಮಹೋತ್ಸವ ಆರಂಭಕ್ಕೆ ಕ್ಷಣಗಣನೆ

    ಹಾಸನ: ವರ್ಷಕ್ಕೊಮ್ಮೆ ಮಾತ್ರ ತೆರಯುವ ಹಾಸನಾಂಬ ದೇವಿ ದೇವಾಲಯದ (Hasanamba Devi Temple) ಜಾತ್ರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆಯ ಗರ್ಭಗುಡಿ ಬಾಗಿಲು ತೆರೆಯಲಿದೆ.

    ಪುರಾಣ ಪ್ರಸಿದ್ದ ಹಾಸನಾಂಬ ದೇವಿ ಜಾತ್ರಾ ಮಹೋತ್ಸವವು (Jatra Mahotsava) ಇಂದಿನಿಂದ ಅಕ್ಟೊಬರ್ 23 ರವರೆಗೆ ನಡೆಯಲಿದೆ. ಕೊನೆಯ ದಿನ ಹೊರತುಪಡಿಸಿ 13 ದಿನಗಳ ಕಾಲ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶವಿರುತ್ತದೆ. ಇದನ್ನೂ ಓದಿ: ಡಿಕೆಶಿ ಆದೇಶದ ಬೆನ್ನಲ್ಲೇ ಮಧ್ಯರಾತ್ರಿ ಬಿಗ್‌ ಬಾಸ್‌ ಮನೆ ರೀ ಓಪನ್‌

    ಅರಸು ವಂಶಸ್ಥರು ಬನ್ನಿ ಕಡಿದ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿಯನ್ನು ತೆರೆಯಲಾಗುವುದು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ತುಮಕೂರು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್ ಸಮ್ಮುಖದಲ್ಲಿ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗುವುದು. ಇದನ್ನೂ ಓದಿ: ಕಲಬುರಗಿ | ಪ್ರವಾಹ ಪೀಡಿತ ಪ್ರದೇಶಗಳಿಗೆ ಜೆಡಿಎಸ್ ನಿಯೋಗ ಭೇಟಿ

    ಕಳೆದ ವರ್ಷ ಅಕ್ಟೋಬರ್ 24 ರಿಂದ ನವೆಂಬರ್ 3ರವರೆಗೆ ಹಾಸನಾಂಬೆ ಜಾತ್ರೋತ್ಸವ ನಡೆದಿತ್ತು. ಈ ವೇಳೆ 20 ಲಕ್ಷಕ್ಕೂ ಅಧಿಕ ಭಕ್ತರು ಹಾಸನಾಂಬೆ ದರ್ಶನ ಪಡೆದಿದ್ದರು. ಕಳೆದ ನ.3 ರಂದು ಮುಚ್ಚಿದ್ದ ಗರ್ಭಗುಡಿ ಬಾಗಿಲು ಇಂದು ತೆರೆಯಲಿದೆ. ಈ ಬಾರಿ 25 ಲಕ್ಷಕ್ಕೂ ಅಧಿಕ ಭಕ್ತರು ಆಗಮಿಸುವ ನಿರೀಕ್ಷೆಯಿದೆ.

    ಜಾತ್ರಾ ಮಹೋತ್ಸವಕ್ಕೆ ಜಿಲ್ಲಾಡಳಿತವು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಹಾಸನಾಂಬೆ ದರ್ಶನಕ್ಕೆ ಬರುವ ಭಕ್ತರಿಗಾಗಿ ಹಲವು ವಿಶೇಷ ವ್ಯವಸ್ಥೆ ಮಾಡಿದೆ. ಜಾತ್ರೋತ್ಸವದಲ್ಲಿ ಹೆಲಿ ಟೂರಿಸಂ, ಟೂರ್ ಪ್ಯಾಕೇಜ್, ಶ್ವಾನ ಪ್ರದರ್ಶನ, ಪಾಕ ಸ್ಪರ್ಧೆ, ಜಾನಪದ ಉತ್ಸವ ಸೇರಿದಂತೆ ಹಲವು ಆಕರ್ಷಣೆಯಿರಲಿದೆ.

  • ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    ಕುಕ್ಕೆಯಲ್ಲಿ ಮೊದಲ ಬಾರಿಗೆ ವ್ಯಾಪಾರದಿಂದ ದೂರ ಉಳಿದ ಮುಸ್ಲಿಂ ವ್ಯಾಪಾರಿಗಳು- ಸಂಘರ್ಷವಿಲ್ಲದೆ ಜಾತ್ರೆ ಸಂಪನ್ನ

    -ಕುಕ್ಕೆ ಸುಬ್ರಹ್ಮಣ್ಯದ ಚಂಪಾಷಷ್ಠಿ ಜಾತ್ರಾ ಮಹೋತ್ಸವಕ್ಕೂ ಧರ್ಮ ದಂಗಲ್ ಕರಿನೆರಳು
    -ಮುಸ್ಲಿಂ ವ್ಯಾಪಾರಸ್ಥರಿಗೆ ಬಹಿಷ್ಕಾರ

    ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದ (Kukke Subramanya) ಚಂಪಾಷಷ್ಠಿ ಉತ್ಸವಕ್ಕೆ ಈ ಬಾರಿ ಧರ್ಮ ದಂಗಲ್‌ನ ಕರಿನೆರಳು ಬಿದ್ದಿದೆ. ಹಲವಾರು ವರ್ಷಗಳಿಂದ ಜಾತ್ರೆಯಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಮರಿಗೆ ಈ ಬಾರಿ ಹಿಂದೂ ಸಂಘಟನೆಗಳು ಬಹಿಷ್ಕಾರ ಹಾಕಿದೆ. ಹೀಗಾಗಿ ಮುಸ್ಲಿಮರು ಜಾತ್ರೆಯ ವ್ಯಾಪಾರಕ್ಕೆ ಬಾರದೆ ಧರ್ಮ ದಂಗಲ್‌ನ ಆತಂಕದಲ್ಲಿದ್ದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಂಘರ್ಷವಿಲ್ಲದೇ ಜಾತ್ರೆ ಸಂಪನ್ನಗೊಂಡಿದೆ.

    ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿಗೆ ಧರ್ಮದಂಗಲ್‌ನ ಕರಿನೆರಳು ಬೀರಿದೆ. ಈ ಬಾರಿ ಚಂಪಾಷಷ್ಠಿಗೆ ಮುಸ್ಲಿಂ ವ್ಯಾಪಾರಿಗಳು ಬರಬಾರದು ಅಂತಾ ಹಿಂದೂ ಸಂಘಟನೆಗಳು ತಾಕೀತು ಮಾಡಿದೆ. ಈ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಚಂಪಾಷಷ್ಠಿ ಮುಸ್ಲಿಂ ವ್ಯಾಪಾರಿಗಳಿಲ್ಲದೇ ನಡೆದಿದೆ. ಮುಸ್ಲಿಂ ವ್ಯಾಪಾರಿಗಳೂ ಹಿಂದೂ ಸಂಘಟನೆಗಳ ತಾಕೀತಿಗೆ ಮಣಿದು ವ್ಯಾಪಾರಕ್ಕೆ ಬಾರದೇ ಜಾತ್ರೋತ್ಸವದಿಂದ ದೂರವುಳಿದಿದ್ದಾರೆ. ಹೀಗಾಗಿ ಚಂಪಾಷಷ್ಠಿ ಧರ್ಮ ದಂಗಲ್‌ನ ಆತಂಕವಿಲ್ಲದೇ ನಿರಾಳವಾಗಿ ನಡೆದಿದೆ.

    ಕಳೆದ ವರ್ಷ ಕರಾವಳಿಯಲ್ಲಿ ಆರಂಭವಾಗಿದ್ದ ಧರ್ಮದಂಗಲ್ ಈ ಬಾರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್ಟಿದೆ. ಈ ಹಿನ್ನಲೆಯಲ್ಲಿ ಚಂಪಾಷಷ್ಠಿಯ ಜಾತ್ರಾ ಸಂಧರ್ಭದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡಬಾರದು ಅಂತಾ ಹಿಂದೂ ಸಂಘಟನೆಗಳು ಬ್ಯಾನರ್ ಅಳವಡಿಸಿದೆ. ಜೊತೆಗೆ ಪೊಲೀಸ್ ಠಾಣೆಗೂ ದೂರು ನೀಡಿತ್ತು. ದೆಹಲಿಯ ಶ್ರದ್ಧಾ ಹತ್ಯೆ, ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ (Mangaluru Blast) ಸೇರಿದಂತೆ ಹಲವು ಪ್ರಕರಣದಲ್ಲಿ ಮುಸ್ಲಿಮರೇ ತೊಡಗಿಕೊಂಡು ರಾಷ್ಟ್ರದಲ್ಲಿ ಅಭದ್ರತೆ ಕಾರಣರಾಗಿದ್ದಾರೆ. ಹೀಗಾಗಿ ಅವರು ಕುಕ್ಕೆಯಲ್ಲಿ ವ್ಯಾಪಾರ ಮಾಡುವ ಅವಶ್ಯಕತೆ ಇಲ್ಲ ಅಂತಾ ಹಿಂದೂ ಸಂಘಟನೆಗಳು ಖಡಕ್ ಎಚ್ಚರಿಕೆ ನೀಡಿದೆ.

    ಚಂಪಾಷಷ್ಠಿಯ ಉತ್ಸವಕ್ಕೆ ಲಕ್ಷಾಂತರ ಭಕ್ತರು ಕುಕ್ಕೆಗೆ ಆಗಮಿಸಿದ್ದಾರೆ. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯಬಾರದು ಅಂತಾ ಕುಕ್ಕೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಮುಜರಾಯಿ ಇಲಾಖೆಯ ಆದೇಶದನ್ವಯ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದು ಅಂತಾ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಹಿಂದೂ ಜಾಗರಣ ವೇದಿಕೆ ಮನವಿಯನ್ನೂ ಮಾಡಿತ್ತು. ಜೊತೆಗೆ ಮುಸ್ಲಿಂ ವ್ಯಾಪಾರಿಗಳು ಕ್ಷೇತ್ರದ ಆವರಣಕ್ಕೆ ಬಾರದಂತೆ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ನಿಗಾ ವಹಿಸಿದ್ದರು.

    ಈ ಬಾರಿ ಮಾತ್ರ ಅಲ್ಲ ಇನ್ನು ಮುಂದೆ ಯಾವುದೇ ಸಂದರ್ಭದಲ್ಲೂ ಮುಸ್ಲಿಮರನ್ನು‌ ನಮ್ಮ ಶ್ರದ್ಧಾ ಕೇಂದ್ರವಾದ ಕುಕ್ಕೆಗೆ ಬರಲು ಬಿಡೋದಿಲ್ಲ ಎಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಕಿಡಿಕಾರಿದ್ದಾರೆ. ಇದನ್ನೂ ಓದಿ: ಚುನಾವಣಾ ರ‍್ಯಾಲಿ ವೇಳೆ ನುಗ್ಗಿದ ಗೂಳಿ, ಸಭಿಕರು ಚೆಲ್ಲಾಪಿಲ್ಲಿ- ಬಿಜೆಪಿ ಪಿತೂರಿ ಎಂದ ರಾಜಸ್ಥಾನ ಸಿಎಂ

    ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್‌ನ ಕಾವು ಹೆಚ್ಚಾಗಿದೆ. ವ್ಯಾಪಾರ ನಿರ್ಬಂಧದ ಬಿಸಿ ಬೇರೆ ಬೇರೆ ಜಾತ್ರೋತ್ಸವಗಳಿಗೆ ಹಬ್ಬುತ್ತಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡೋದೇ ಪೊಲೀಸರಿಗೆ ಸವಾಲಾಗಿದೆ. ಇದನ್ನೂ ಓದಿ: ಬಿಜೆಪಿಗೆ ಗಲಭೆ ಎಬ್ಬಿಸಲು ರೌಡಿಗಳು ಬೇಕು: ಸಿದ್ದರಾಮಯ್ಯ

    Live Tv
    [brid partner=56869869 player=32851 video=960834 autoplay=true]

  • ಹಾಸನಾಂಬ ಜಾತ್ರಾ ಮಹೋತ್ಸವ – ಭಕ್ತರಿಗೆ ದರ್ಶನ ಕೊಟ್ಟ ಹಾಸನಾಂಬೆ

    ಹಾಸನಾಂಬ ಜಾತ್ರಾ ಮಹೋತ್ಸವ – ಭಕ್ತರಿಗೆ ದರ್ಶನ ಕೊಟ್ಟ ಹಾಸನಾಂಬೆ

    ಹಾಸನ: ವಿಶೇಷವಾಗಿ ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ತಾಯಿ ಹಾಸನಾಂಬೆ ಜಾತ್ರಾ ಮಹೋತ್ಸವ (Hasanamba jatra mahotsava) ಕ್ಕೆ ಗುರುವಾರ ಶುಭ ಚಾಲನೆ ದೊರೆಯಿತು. ಆಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.12 ಕ್ಕೆ ಅರಸು ವಂಶಸ್ಥ ನಂಜರಾಜೆ ಅರಸ್ ಸಂಪ್ರದಾಯದಂತೆ ಗೊನೆಯುಳ್ಳ ಬಾಳೆ ಕಂಬ ಕಡಿದ ನಂತರ ಹಲವು ಗಣ್ಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ದೇವಿಯ ಗರ್ಭಗುಡಿ ಬಾಗಿಲು ತೆರೆಯಿತು. ಈ ವೇಳೆ ಹಾಜರಿದ್ದ ನೂರಾರು ಭಕ್ತರು, ಹಾಸನಾಂಬೆಗೆ ಜಯವಾಗಲಿ ವಿಶೇಷತಃ ಘೋಷವಾಕ್ಯ ಮೊಳಗಿಸಿದರು.

    ಅರಸು ವಂಶಸ್ಥ ನಂಜ ರಾಜೆ ಅರಸು ಗೊನೆಯುಳ್ಳ ಬಾಳೆಕಂಬ ಕಡಿದ ನಂತರ ಗರ್ಭಗುಡಿಯಲ್ಲಿ ಮರೆಯಾಗಿದ್ದ ಹಾಸನಾಂಬೆ ವರ್ಷದ ನಂತರ ದರ್ಶನ ಕರುಣಿಸಿದಳು. ಗರ್ಭಗುಡಿ ಬಾಗಿಲು ತೆರೆದ ವೇಳೆ ಕಳೆದ ವರ್ಷ ಹಚ್ಚಿದ್ದ ದೀಪ ಉರಿಯುತ್ತಿದ್ದು, ಹೂವು ಬಾಡಿರಲಿಲ್ಲ, ನೈವೇದ್ಯ ಹಳಸಿರಲಿಲ್ಲ. ಈ ವಿಶೇಷ ಸಂದರ್ಭಕ್ಕೆ ಸಚಿವರಾದ ಕೆ.ಗೋಪಾಲಯ್ಯ (K Gopalaiah), ಶಾಸಕ ಪ್ರೀತಂಗೌಡ (Preetham Gowda), ಡಿಸಿ, ಎಸ್ಪಿ ಸೇರಿದಂತೆ ಹಲವರು ಸಾಕ್ಷಿಯಾದರು. ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶ ಇಲ್ಲ ಎಂದು ಹೇಳಿದ್ದರೂ, ಬೆಳಗ್ಗೆಯಿಂದಲೇ ಸಾವಿರಾರು ಮಂದಿ ದೇವಾಲಯದ ಒಳ-ಹೊರಗೆ ಜಮಾಯಿಸಿದ್ದರು. ಕೆಲವರು ಸರತಿ ಸಾಲಿನಲ್ಲಿ ನಿಂತಿದ್ದರು. ಕಡೆಗೆ ಆಗಮಿಸಿದ್ದ ಎಲ್ಲರಿಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

    ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಹಾಸನಾಂಬೆ ಹಲವು ಪವಾಡ ಸದೃಶ ಸಂಗತಿಗಳನ್ನು ಮೈಗೂಡಿಸಿಕೊಂಡಿದ್ದಾಳೆ. ಪ್ರತಿ ವರ್ಷ ಗರ್ಭಗುಡಿ ಬಾಗಿಲು ಹಾಕುವಾಗ ಹಚ್ಚಿದ ಹಣತೆ, ಇಟ್ಟ ನೈವೇದ್ಯ, ಮುಡಿಸಿದ ಹೂ ಬಾಡುವುದಿಲ್ಲ ಎಂಬ ನಂಬಿಕೆ ಹಿಂದಿನಿಂದಲೂ ಇದೆ. ಜೊತೆಗೆ ಬೇಡಿದ ಇಷ್ಟಾರ್ಥಗಳನ್ನು ಅಧಿದೇವತೆ ಈಡೇರಿಸುತ್ತಾಳೆ ಎಂಬ ನಂಬಿಕೆ ಇರುವುದರಿಂದ ಜಿಲ್ಲೆ ಮಾತ್ರವಲ್ಲದೆ ರಾಜ್ಯ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ದೇವಿ ದರ್ಶನಕ್ಕಾಗಿ ಆಗಮಿಸುತ್ತಾರೆ. ಮಳೆ-ಬಿಸಿಲಿಂದ ರಕ್ಷಿಸಿ ಭಕ್ತರಿಗೆ ಅನುಕೂಲವಾಗಲಿ ಎಂದು ದೇಗುಲದ ಹೊರಗಡೆ ಟೆಂಟ್ ನಿರ್ಮಿಸಲಾಗಿದೆ. ಇದನ್ನೂ ಓದಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಬ್‌ ನಿಷೇಧ ಮುಂದುವರಿಕೆ – ಸಚಿವ ಬಿ.ಸಿ.ನಾಗೇಶ್

    ಅ.14 ರಿಂದ ಬೆಳಗ್ಗೆ 6 ಗಂಟೆಯಿಂದ 4 ಗಂಟೆಯವರೆಗೆ ಸಾರ್ವಜನಿಕ ದರ್ಶನವಿದ್ದು, ಸಂಜೆ 4 ಗಂಟೆಯಿಂದ ದರ್ಶನ ಇರುವುದಿಲ್ಲ. ಅ.15 ರಿಂದ ಅ.24 ರವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಮಧ್ಯಾಹ್ನ 1 ರಿಂದ 3.30 ರವರೆಗೆ ದರ್ಶನ ಇರುವುದಿಲ್ಲ. 3.30 ರಿಂದ ಭಕ್ತರು ಇರುವವರೆಗೂ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಅ.25 ರಂದು ಗ್ರಹಣ ಹಿನ್ನೆಲೆಯಲ್ಲಿ ಸಾರ್ವಜನಿಕ ದರ್ಶನ ಇರುವುದಿಲ್ಲ. ಅ.26 ಬಲಿಪಾಡ್ಯಮಿ ದಿನದಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದರ್ಶನವಿದ್ದು, 4 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಸಾರ್ವಜನಿಕರಿಗೆ ದರ್ಶನವಿರುತ್ತದೆ. ಅ.27 ರಂದು ಸಾರ್ವಜನಿಕರಿಗೆ ದರ್ಶನ ಇರುವುದಿಲ್ಲ ಮಧ್ಯಾಹ್ನದ ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಹಾಕಲಾಗುವುದು.

    ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ದೇವಾಲಯದ ಒಳ-ಹೊರಗು ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಸಿಂಗಾರ ಮಾಡಲಾಗಿದೆ. ಈ ಬಾರಿ ಹೆಚ್ಚು ದಿನಗಳು ಇರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಇಡಿ ಹಾಸನ ನಗರ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಕಾರವಾರ: ವರ್ಷಕ್ಕೊಮ್ಮೆ ದರ್ಶನ ನೀಡುವ ಸಾತೇರಿ ದೇವರ ಜಾತ್ರೆ ಆರಂಭ

    ಕಾರವಾರ: ವರ್ಷಕ್ಕೊಮ್ಮೆ ದರ್ಶನ ನೀಡುವ ಸಾತೇರಿ ದೇವರ ಜಾತ್ರೆ ಆರಂಭ

    ಕಾರವಾರ: ವರ್ಷದಲ್ಲಿ 7 ದಿನಗಳು ಮಾತ್ರ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡುವ ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಪ್ರಸಿದ್ಧ ಶ್ರೀ ಸಾತೇರಿ ದೇವರ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸೆಪ್ಟೆಂಬರ್ 5 ರಿಂದ 5 ದಿನಗಳ ಕಾಲ ಸಾರ್ವಜನಿಕರ ಸೇವೆ, ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

    ಸೆ.3ರ ಮಧ್ಯರಾತ್ರಿ 12 ಗಂಟೆಗೆ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಮೊದಲ 2 ದಿನಗಳಲ್ಲಿ ಕುಳಾವಿ ಸಮುದಾಯದ ಮಹಿಳೆಯರು ಹಾಗೂ ಹೆಣ್ಣುಮಕ್ಕಳಿಂದ ಅಡಿಕೆ ಹಾಗೂ ಪುರುಷರಿಂದ ತಳಯ ಸಲ್ಲಿಸಲಾಗುತ್ತಿದೆ. ಸೆ.5 ರಿಂದ 9ರ ವರೆಗೆ ಸಾರ್ವಜನಿಕರಿಗೆ ದೇವಿಯ ದರ್ಶನ ಹಾಗೂ ಹರಕೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ನಮ್ಮ ಹೊಸ ಪಕ್ಷಕ್ಕೆ ಜಮ್ಮು-ಕಾಶ್ಮೀರದ ಜನರೇ ಹಿಂದೂಸ್ತಾನಿ ಹೆಸರಿಡಲಿ: ಆಜಾದ್‌

    ಸೆ.5 ರಿಂದ ಪ್ರತಿದಿನ ಬೆಳಗ್ಗೆ 10 ಗಂಟೆಗೆ ಮಹಾಪ್ರಸಾದ ವಿತರಣೆ ನಡೆಯಲಿದ್ದು, ಸಂಜೆ 7 ಗಂಟೆಗೆ ವಿವಿಧ ಮಂಡಳಿಗಳಿಂದ ಭಜನೆ ಕಾರ್ಯಕ್ರಮ ನಡೆಯಲಿದೆ. ಸೆ.5 ರಿಂದ 8ರ ವರೆಗೆ ಸದಾಶಿವಗಡದ ಓಂಕಾರ ಭಕ್ತಿ ಸಂಗೀತ ಮಂಡಳಿ, ಹಣಕೋಣದ ರಾಮದಾಸ ರಾಯ್ಕರ ಭಜನಾ ಮಂಡಳಿ, ಕಾಣಕೋಣ ಭಕ್ತಮಂಡಳಿ, ಮಾಜಾಳಿಯ ಸಂಕಟಮೋಚನ ಭಜನಾ ಮಂಡಳಿಗಳು ವಿವಿಧ ಭಜನಾ ಕಾರ್ಯಕ್ರಮ ನಡೆಸಿಕೊಡಲಿವೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಟಾಟಾ ಗ್ರೂಪ್‍ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ದುರ್ಮರಣ

    ಸೆ.9 ರಂದು ಮಧ್ಯಾಹ್ನದವರೆಗೆ ಶ್ರೀ ಸಾತೇರಿ ದೇವಿಯ ದರ್ಶನಕ್ಕೆ ಅವಕಾಶವಿರಲಿದ್ದು, ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಬೆನ್ನಿಗೆ ಕಬ್ಬಿಣದ ಕೊಂಡಿ ಹಾಕಿಕೊಂಡು ಬೃಹತ್ ವಾಹನ ಎಳೆದು ಹರಕೆ ತೀರಿಸಿದ ಭಕ್ತರು

    ಬೆನ್ನಿಗೆ ಕಬ್ಬಿಣದ ಕೊಂಡಿ ಹಾಕಿಕೊಂಡು ಬೃಹತ್ ವಾಹನ ಎಳೆದು ಹರಕೆ ತೀರಿಸಿದ ಭಕ್ತರು

    ಚಿಕ್ಕಮಗಳೂರು: ದೇವರಿಗೆ ಹರಕೆ ಹೊತ್ತುಕೊಳ್ಳುವ ಭಕ್ತರು ನಾನಾ ರೀತಿ ಹರಕೆ ತೀರಿಸಿ ಭಕ್ತಿ ಸಮರ್ಪಿಸುತ್ತಾರೆ. ಅದೇ ರೀತಿ ನಗರದಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಕ್ತರು ದೇಹವನ್ನ ದಂಡಿಸಿ ಭಕ್ತಿ ಸಮರ್ಪಿಸಿದ್ದಾರೆ.

    ನಗರದಲ್ಲಿ ಇಂದು ಕರುಮಾರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ನಡೆಯಿತು. ಈ ಜಾತ್ರೆಯಲ್ಲಿ ಹರಕೆ ಹೊತ್ತಿದ್ದ ಭಕ್ತರು ಬೆನ್ನಿಗೆ ಕಬ್ಬಿಣದ ಕೊಂಡಿಗಳುಳ್ಳ ಸರಪಳಿಯನ್ನ ಹಾಕಿಕೊಂಡು ಟ್ರ್ಯಾಕ್ಟರ್, ಲಾರಿ, ಕಾರು, ಆಟೋಗಳನ್ನ ಎಳೆದು ಭಕ್ತಿ ಸಮರ್ಪಿಸಿ ಹರಕೆ ತೀರಿಸಿದ್ದಾರೆ. ದೇವರಿಗೆ ಉಪವಾಸವಿದ್ದು ಅಥವಾ ಮುಡಿ ನೀಡಿ ವಿಶಿಷ್ಟ ರೀತಿಯ ಅಡುಗೆಯನ್ನ ಮಾಡಿ ದೇವರಿಗೆ ನೈವೇದ್ಯ ಮಾಡಿ ಹರಕೆ ತೀರಿಸುವುದು ವಾಡಿಕೆ.

    ಆದರೆ ನಗರದ ಕರುಮಾರಿಯಮ್ಮನ ಭಕ್ತರು ಈ ರೀತಿ ದೇಹವನ್ನ ದಂಡಿಸಿ ದೇವಿಗೆ ಹರಕೆ ತೀರಿಸುತ್ತಾರೆ. ಈ ಬಾರಿ 26 ಜನರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ. ಜಾತ್ರೆ ಹಿನ್ನೆಲೆ ಶುಕ್ರವಾರ ಬೆಳಗ್ಗೆ ದಂಟರಮಕ್ಕಿಯ ಕೆರೆಕೋಡಿಯಮ್ಮನ ಸನ್ನಿಧಿಯಲ್ಲಿ ಕರಗ ಪೂಜೆ ನೆರವೇರಿಸಿದರು. ಬಳಿಕ ಬೆನ್ನಿನ ಚರ್ಮಕ್ಕೆ ಕಬ್ಬಿಣದ ಮೂರ್ನಾಲ್ಕು ಕೊಂಡಿಗಳನ್ನು ಹಾಕಿಕೊಂಡು ಟ್ರ್ಯಾಕ್ಟರ್, ಆಟೋ, ಕಾರು, ಮಿನಿ ಲಾರಿಯಂತಹ ಬೃಹತ್ ವಾಹನಗಳನ್ನು ಕೆರೆಕೋಡಿಯಮ್ಮ ದೇವಸ್ಥಾನದಿಂದ ಕರುಮಾರಿಯಮ್ಮ ದೇವಸ್ಥಾನದವರೆಗೆ ಎಳೆದುಕೊಂಡು ಹೋಗುವ ಮೂಲಕ ಭಕ್ತಿ ಮೆರೆದರು.

    ಈ ವೇಳೆ ಸಂಬಂಧಿಕರು, ಜಾತ್ರೆಯಲ್ಲಿ ಭಾಗವಹಿಸಿದವರು `ಗೋವಿಂದ.. ಗೋವಿಂದ’ ಎಂದು ಕೂಗುವ ಮೂಲಕ ಅವರಿಗೆ ಧೈರ್ಯ ತುಂಬುತ್ತಿದ್ದರು. ಈ ವಿಭಿನ್ನ ಆಚರಣೆಗೆ ಅಳಲು ಹಾಕುವುದು ಎಂದು ಸ್ಥಳೀಯರು ಕರೆಯುತ್ತಾರೆ. ಕೆಲವು ಭಕ್ತರು ತಮ್ಮ ಕಾಲು, ಬೆನ್ನಿಗೆ ಕಬ್ಬಿಣದ ಕೊಂಡಿಗಳನ್ನು ಹಾಕಿಕೊಂಡು ದೇವರ ಕಳಸವನ್ನು ಕುತ್ತಿಗೆಗೆ ಹಾಕಿಕೊಂಡು ವಾಹನದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ನೇತು ಬಿದ್ದಿದ್ದರು.

    ಕೆಲವು ಮಕ್ಕಳು ಬಾಯಿಗೆ ಕಬ್ಬಿಣದ ಸರಳುಗಳನ್ನು ಹಾಕಿಕೊಂಡು ಸಾಗಿದರು. ಜಾತ್ರೆ ಹಿನ್ನೆಲೆ ಕಳೆದ ಎರಡು ದಿನದಿಂದ ದೇವಸ್ಥಾನದಲ್ಲಿ ಹಲವು ವಿಭಿನ್ನ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

  • ಗ್ರಾಮದ ಜಾತ್ರೆಯಲ್ಲಿ ನೃತ್ಯ ಮಾಡಿ ರಂಜಿಸಿದ ಸಿದ್ದರಾಮಯ್ಯ

    ಗ್ರಾಮದ ಜಾತ್ರೆಯಲ್ಲಿ ನೃತ್ಯ ಮಾಡಿ ರಂಜಿಸಿದ ಸಿದ್ದರಾಮಯ್ಯ

    ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಸ್ವಗ್ರಾಮ ಸಿದ್ದರಾಮೇಶ್ವರ ಜಾತ್ರಾ ಮಹೋತ್ಸವದಲ್ಲಿ ನೃತ್ಯ ಮಾಡಿದ್ದಾರೆ.

    ಸ್ನೇಹಿತರು ಮತ್ತು ಬೆಂಬಲಿಗರ ಜೊತೆ 40 ನಿಮಿಷಗಳ ಕಾಲ ಜಾನಪದ ವಾದ್ಯಗಳ ಹಿಮ್ಮೆಳಕ್ಕೆ ತಕ್ಕಂತೆ ಹೆಜ್ಜೆ ಹಾಕಿದ್ದಾರೆ. ಉಪಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನೃತ್ಯ ಮಾಡಿದ್ದ ಸಿದ್ದರಾಮಯ್ಯ ಈಗ 15 ವರ್ಷದ ಬಳಿಕ ಗ್ರಾಮದ ಜಾತ್ರೆಯಲ್ಲಿ ಸ್ಟೆಪ್‌ ಹಾಕಿದ್ದಾರೆ. ಇದನ್ನೂ ಓದಿ: ಪತ್ರಕರ್ತರಿಗೆ ಮಧ್ಯರಾತ್ರಿಯ ಸರ್ಪ್ರೈಸ್ ಕೊಟ್ಟ RRR ಟೀಮ್..!

    70ರ ಹರೆಯದ ಸಿದ್ದರಾಮಯ್ಯ ಅವರ ನೃತ್ಯ ನೋಡಲು ಗ್ರಾಮಸ್ಥರು ಮುಗಿ ಬಿದ್ದಿದ್ದರು. ನೂಕು ನುಗ್ಗಲು ಮಧ್ಯೆ ಸಿದ್ದರಾಮಯ್ಯ ನೃತ್ಯ ಮಾಡಿ ಜನರನ್ನು ರಂಜಿಸಿದ್ದಾರೆ.

    ತಂದೆಯ ನೃತ್ಯದ ಬಗ್ಗೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಅಪ್ಪ ಪ್ರತಿ ವರ್ಷ ಜಾತ್ರೆಯ ವೇಳೆ ವೀರನ ಕುಣಿತ ಮಾಡುತ್ತಿದ್ದರು. ಆದರೆ ಈ ವಯಸ್ಸಿನಲ್ಲಿ ಅಪ್ಪ ವೀರನ ಕುಣಿತ ಮಾಡುತ್ತಾರೆ ಅಂತ ಅಂದುಕೊಂಡಿರಲಿಲ್ಲ. ನಾನು ನೃತ್ಯ ಮಾಡುವುದಿಲ್ಲ ಎಂದು ತಂದೆ ಮೊದಲೇ ಹೇಳಿದ್ದರು. ಆದರೆ ಜನರ ಉತ್ಸಾಹ ನೋಡಿ ಅವರು ನೃತ್ಯ ಮಾಡಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಮೇಕೆದಾಟು: ತಮಿಳುನಾಡು ವಿರುದ್ಧದ ಖಂಡನಾ ನಿರ್ಣಯಕ್ಕೆ ಜೆಡಿಎಸ್ ಬೆಂಬಲ

    ತಂದೆ ಶಾಲೆಯಲ್ಲಿ ವೀರನ ಕುಣಿತ ಕಲಿತಿದ್ದರು. ಹೀಗಾಗಿ ಅವರಿಗೆ ಪ್ರತಿಯೊಂದು ಸ್ಟೆಪ್ ನೆನಪಿದೆ ಎಂದು ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

  • ಅ.17ರಿಂದ 29ರವರೆಗೆ ಭಕ್ತರಿಗೆ ಹಸನಾಂಬೆಯ ದರುಶನ ಭಾಗ್ಯ

    ಅ.17ರಿಂದ 29ರವರೆಗೆ ಭಕ್ತರಿಗೆ ಹಸನಾಂಬೆಯ ದರುಶನ ಭಾಗ್ಯ

    ಹಾಸನ: ವರ್ಷಕ್ಕೊಮ್ಮೆಯಷ್ಟೇ ಬಾಗಿಲು ತೆಗೆಯುವ ಹಾಸನಾಂಬೆಯ ದರ್ಶನಕ್ಕೆ ದಿನಗಣನೆ ಶುರುವಾಗಿದ್ದು, ಅಕ್ಟೋಬರ್ 17 ರಿಂದ 29 ರವರಗೆ ದೇವಿಯ ಜಾತ್ರಾ ಮಹೋತ್ಸವ ನಡೆಯಲಿದೆ. ಒಟ್ಟು 13 ದಿನಗಳಲ್ಲಿ ಮೊದಲ ಮತ್ತು ಕೊನೆಯ ದಿನ ಹೊರತುಪಡಿಸಿ ಉಳಿದೆಲ್ಲ ದಿನಗಳು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಸಿಗಲಿದೆ.

    ಒಂದು ವರ್ಷಗಳ ಕಾಲ ದೀಪ ಉರಿಯುತ್ತಿರುತ್ತದೆ ಎನ್ನುವ ಪವಾಡ ಹಾಸನಾಂಬೆಯದ್ದಾಗಿದೆ. ದೇವಿಯ ಸನ್ನಿಧಿಗೆ ಆಗಮಿಸಿ ಪ್ರತಿವರ್ಷ ಲಕ್ಷಾಂತರ ಭಕ್ತರು ದರ್ಶನ ಪಡೆಯುತ್ತಾರೆ. ಹಾಸನದ ಅಧಿದೇವತೆಯ ದೇವಸ್ಥಾನದ ಬಾಗಿಲು ಪ್ರತಿ ವರ್ಷ ಆಶ್ವಿಜ ಮಾಸದ ಮೊದಲ ಗುರುವಾರ ತೆರೆಯಲಿದೆ. ಬಲಿಪಾಡ್ಯಮಿ ಮಾರನೇ ದಿನ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಈ ಸಂಪ್ರದಾಯ ಹಲವು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ.

    ಈ ಸಂಪ್ರದಾಯದಂತೆ ಅಕ್ಟೋಬರ್ 17 ರಿಂದ 29 ರ ವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಬಾರಿ ಅಮ್ಮನವರನ್ನು ಎದುರುಗೊಳ್ಳುವ ಅಪೂರ್ವ ಅವಕಾಶ ಸಿಗುವುದು 11 ದಿನಗಳು ಮಾತ್ರ. ಈ ವರ್ಷದ ಉತ್ಸವ ಆರಂಭವಾಗಲು ಕೇವಲ 30 ದಿನಗಳು ಮಾತ್ರ ಬಾಕಿ ಇವೆ. ಬಾಗಿಲು ಮುಚ್ಚುವ ವೇಳೆ ಹಚ್ಚಿದ ಹಣತೆ ಹಾಗೇ ಬೆಳಗುತ್ತಿರುತ್ತದೆ ಎಂಬ ಪವಾಡ ನಂಬಿಕೆಗಳಿರುವುದರಿಂದ ಪ್ರತಿವರ್ಷ ಜಿಲ್ಲೆ, ರಾಜ್ಯ ಮಾತ್ರವಲ್ಲದೇ ದೂರದೂರುಗಳಿಂದಲೂ ಅಪಾರ ಭಕ್ತರು ಆಗಮಿಸುತ್ತಾರೆ.

    ಸಾಮಾನ್ಯ ದರ್ಶನವನ್ನು ಪಡೆಯುವ ಭಕ್ತಾದಿಗಳಿಗೆ ಧರ್ಮದರ್ಶನದ ವ್ಯವಸ್ಥೆ ಪ್ರತಿವರ್ಷದಂತೆ ಈ ಬಾರಿಯೂ ಇರಲಿದೆ. ಅಲ್ಲದೆ, ವಿಶೇಷ ದರ್ಶನಕ್ಕೆ ವ್ಯವಸ್ಥೆ ಸಹ ಮಾಡಲಾಗಿದೆ. ಒಂದು ಸಾವಿರ ರೂ. ಮತ್ತು 300 ರೂ. ಪಾಸ್ ಪಡೆದು ದೇವಿಯ ದರ್ಶನ ಪಡೆಯಬಹುದಾಗಿದೆ. ಒಂದು ಸಾವಿರ ರೂ.ನ ವಿಶೇಷ ದರ್ಶನಕ್ಕೆ 4 ಲಾಡುಗಳು ಮತ್ತು 300 ರೂಪಾಯಿ ದರ್ಶನಕ್ಕೆ 2 ಲಾಡುಗಳು ಪ್ರಸಾದವಾಗಿ ಸಿಗಲಿದೆ.

  • ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

    ಅದ್ಧೂರಿಯಾಗಿ ನಡೆದ ಆಷಾಢದಲ್ಲಿ ನವದಂಪತಿ ಸೇರುವ ಜಾತ್ರಾ ಮಹೋತ್ಸವ

    ರಾಮನಗರ: ಆಷಾಢ ಮಾಸದಲ್ಲಿ ನೂತನ ದಂಪತಿಗಳನ್ನು ಬೇರೆ ಮಾಡಿ, ಹೆಣ್ಣನ್ನು ತವರು ಮನೆಗೆ ಕಳಿಸುವುದು ವಾಡಿಕೆ. ಯಾಕೆಂದರೆ ಆಷಾಢ ಮಾಸದಲ್ಲಿ ಅತ್ತೆ-ಸೊಸೆ ಒಂದೇ ಬಾಗಿಲಿನಲ್ಲಿ ಓಡಾಡಿದರೆ ಕೇಡಾಗುತ್ತೆ ಎನ್ನಲಾಗುತ್ತದೆ.

    ಆದರೆ ದಂಪತಿಗಳನ್ನು ಆಷಾಢದಲ್ಲಿ ಒಂದೆಡೆ ಸೇರಿಸುವಂತಹ ಜಾತ್ರಾ ಮಹೋತ್ಸವ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರ ಹೊಸಹಳ್ಳಿಯಲ್ಲಿ ನಡೆಯುತ್ತದೆ. ನೂತನ ದಂಪತಿಗಳನ್ನು ಒಂದೆಡೆ ಸೇರಿಸುವ ಸಂಜೀವರಾಯಸ್ವಾಮಿಯ ಜಾತ್ರಾ ಮಹೋತ್ಸವ ಇಂದು ಅದ್ಧೂರಿಯಾಗಿ ನಡೆಯಿತು.

    ದೇವರ ಹೊಸಹಳ್ಳಿಯ ಪುರಾತನವಾದ ಸಂಜೀವರಾಯ ಸ್ವಾಮಿ ಬ್ರಹ್ಮರಥೋತ್ಸವದಲ್ಲಿ ಹೊಸ ದಂಪತಿಗಳು ಇಲ್ಲಿಗೆ ಬಂದು ದೇವರಲ್ಲಿ ಇಷ್ಟಾರ್ಥವನ್ನು ನೆನೆದು ಪೂಜೆ ಸಲ್ಲಿಸುತ್ತಾರೆ. ಅಲ್ಲದೇ ನೂತನ ದಂಪತಿಗಳು ಈ ದೇವರ ಸನ್ನಿಧಿಯಲ್ಲಿ ಸಂತಾನ ಬಯಸಿ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ನೆರವೇರುತ್ತೆ ಎಂಬ ಪ್ರತೀತಿ ಸಹ ಇದೆ. ಬೇರೆಯಾಗಿರುವ ದಂಪತಿಗಳಿಗೆ ಈ ಜಾತ್ರೆ ವೇದಿಕೆಯಾಗಿದ್ದು ರಾಮನಗರ ಜಿಲ್ಲೆ ಅಲ್ಲದೇ ಸುತ್ತಮುತ್ತಲ ಜಿಲ್ಲೆಯ ನೂತನ ದಂಪತಿಗಳು ಸಹ ಇಂದು ನಡೆದ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.

    ಆಷಾಢದ ವಿರುದ್ಧವಾಗಿ ನಡೆಯುವ ಜಾತ್ರೆಗಳಲ್ಲಿ ಸಂಜೀವರಾಯ ಸ್ವಾಮಿಯ ಜಾತ್ರೆಯೂ ಕೂಡಾ ಒಂದಾಗಿದ್ದು, ಬ್ರಹ್ಮರಥೋತ್ಸವದಲ್ಲಿ ನೂತನ ದಂಪತಿಗಳು ಇಷ್ಟಾರ್ಥವನ್ನು ನೆನೆದು ರಥವನ್ನು ಎಳೆದು ಜಾತ್ರೆಯಲ್ಲೆಲ್ಲ ದಂಪತಿಗಳು ಕೈ ಕೈ ಹಿಡಿದು ಓಡಾಡಿದ್ದು ವಿಶೇಷವಾಗಿತ್ತು.

  • ಕೊಲ್ಲೂರು ಸನ್ನಿಧಾನದಲ್ಲಿ ಶಿವಮಣಿ ಕಲಾಸೇವೆ

    ಕೊಲ್ಲೂರು ಸನ್ನಿಧಾನದಲ್ಲಿ ಶಿವಮಣಿ ಕಲಾಸೇವೆ

    ಉಡುಪಿ: ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದೆ. ವಿಜ್ರಂಭಣೆಯ ಉತ್ಸವದಲ್ಲಿ ದೇಶದ ನಾನಾ ಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಬ್ರಹ್ಮ ರಥೋತ್ಸವ ನಡೆಯುವ ಮುನ್ನ ದೇವಸ್ಥಾನದ ಪ್ರಾಂಗಣದಲ್ಲಿ ಬಲಿ ಉತ್ಸವ ಸಂದರ್ಭ ಡ್ರಮ್ಮರ್ ಶಿವಮಣಿ ಕಲಾಸೇವೆ ನೀಡಿದರು.

    ಡ್ರಮ್ ಮಾಂತ್ರಿಕ ಶಿವಮಣಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದಲ್ಲಿ ಪಾಲ್ಗೊಂಡು ತಮ್ಮ ಸೇವೆಯನ್ನು ನೀಡಿದರು. ವಾಲಗದವರ ಜೊತೆ ಸೇರಿಕೊಂಡು ಡ್ರಮ್ಸ್ ನುಡಿಸಿದರು. ಪ್ರತಿ ವರ್ಷ ಶಿವಮಣಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಂದು ಕಲಾ ಸೇವೆ ನೀಡುತ್ತಾರೆ. ಈ ಬಾರಿ ಬಲಿ ಉತ್ಸವ ಸಂದರ್ಭ ನಾದಸ್ವರ, ಸಮ್ಮೇಳ, ಡೋಲಿನ ಜೊತೆ ಡ್ರಮ್ಸ್ ಬೀಟ್ ಹಾಕಿದ್ದು ವಿಶೇಷವಾಗಿತ್ತು.

    ಎಲ್ಲೂ ಸಾಂಪ್ರದಾಯಿಕ ಲಯಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಆಧುನಿಕ ಪರಿಕರಗಳೊಂದಿಗೆ ಶಿವಮಣಿ ಕಲಾಶಕ್ತಿಯನ್ನು ಮೆರೆದಿದ್ದಾರೆ. ಉತ್ಸವ ಸಂದರ್ಭ ಶಿವಮಣಿಯನ್ನು, ಅವರ ಕಲಾಸೇವೆಯನ್ನು ನೋಡಲು ಜನ ಜಮಾಯಿಸಿದ್ದರು.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ದೇವಳದ ಗಂಗಾಧರ ಬಿಡೆ ಶಿವಮಣಿಯವರು ಪ್ರತೀ ವರ್ಷ ಅಮ್ಮನಲ್ಲಿ ಬಂದು ಸೇವೆ ನೀಡುತ್ತಿದ್ದಾರೆ. ಈ ಬಾರಿಯೂ ಬಂದಿದ್ದಾರೆ. ಮಹಾನ್ ಕಲಾವಿದನಾದರೂ ಸಾಮಾನ್ಯನಂತೆ ಜನಗಳ ಜೊತೆ ಬೆರೆಯುತ್ತಾರೆ. ಸರಸ್ವತಿ ಮಂಟಪದಲ್ಲಿ ತಾಯಿಯ ಮುಂಭಾಗ ನಡೆದ ಸಂಗೀತ ಕಾರ್ಯಕ್ರಮವನ್ನೂ ಬಹಳ ಜನ ಆಸ್ವಾದಿಸಿದ್ದಾರೆ ಎಂದು ಹೇಳಿದರು.