Tag: ಜಾನ್ವಿ ಕಪೂರ್

  • ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್

    ಶ್ರೀದೇವಿ ಪುತ್ರಿ ಜಾನ್ವಿಗೆ ಅವಕಾಶ ಕೊಟ್ಟ ಕರಣ್ ಜೋಹಾರ್

    ಕ್ಷಿಣದಲ್ಲಿ ಹೆಚ್ಚೆಚ್ಚು ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿರುವ ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್, ಇದೀಗ ಬಾಲಿವುಡ್ ನಲ್ಲಿ ಮತ್ತೊಂದು ಅವಕಾಶ ಪಡೆದಿದ್ದಾರೆ. ಕರಣ್ ಜೋಹಾರ್ (Karan Johar) ನಿರ್ಮಾಣದಲ್ಲಿ ಮೂಡಿ ಬರಲಿರುವ ಹೊಸ ಚಿತ್ರಕ್ಕೆ ಜಾನ್ವಿ ನಾಯಕಿಯಾಗಿ ಆಯ್ಕೆಯಾಗಿದ್ದಾರಂತೆ. ಶಶಾಂಕ್ ಖೈತಾನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದೆ.

    ಈ ನಡುವೆ ಜಾನ್ವಿ ಕಪೂರ್ ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ನೆಲೆಯೂರುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈಗಾಗಲೇ ತೆಲುಗಿನಲ್ಲಿ ಅವರು ಜ್ಯೂನಿಯರ್ ಎನ್.ಟಿ.ಆರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದೀಗ ತೆಲುಗಿನ ರಾಮ್ ಚರಣ್ ನಟನೆಯ ಹೊಸ ಸಿನಿಮಾಗೂ ಜಾನ್ವಿ ಕಪೂರ್ (Janhvi Kapoor) ನಾಯಕಿ ಎಂದು ಹೇಳಲಾಗುತ್ತಿದೆ.

    ಅಷ್ಟೇ ಅಲ್ಲದೇ, ಸ್ಯಾಂಡಲ್ ವುಡ್ ಖ್ಯಾತ ನಟ ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

    ಈಗಾಗಲೇ ಎರಡು ತಮಿಳು ಸಿನಿಮಾದಲ್ಲಿ ನಟಿಸಿರುವ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivaraj Kumar), ಇದೀಗ ತೆಲುಗು (Telugu) ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು.

    ತೆಲುಗಿನ ಹೆಸರಾಂತ ನಟ ರಾಮ್ ಚರಣ್ ನಟನೆಯ ಹೊಸ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

     

    ರಾಮ್ ಚರಣ್ (Ram Charan) ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

     

  • ರಾಮ್ ಚರಣ್ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ

    ರಾಮ್ ಚರಣ್ ಚಿತ್ರಕ್ಕೆ ಜಾನ್ವಿ ಕಪೂರ್ ನಾಯಕಿ

    ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಬಾಲಿವುಡ್ ಗಿಂತಲೂ ದಕ್ಷಿಣದಲ್ಲೇ ನೆಲೆಯೂರುವ ಎಲ್ಲ ಲಕ್ಷಣಗಳು ತೋರುತ್ತಿವೆ. ಈಗಾಗಲೇ ತೆಲುಗಿನಲ್ಲಿ ಅವರು ಜ್ಯೂನಿಯರ್ ಎನ್.ಟಿ.ಆರ್ ಜೊತೆ ತೆರೆ ಹಂಚಿಕೊಂಡಿದ್ದಾರೆ. ಇದೀಗ ತೆಲುಗಿನ ರಾಮ್ ಚರಣ್ ನಟನೆಯ ಹೊಸ ಸಿನಿಮಾಗೂ ಜಾನ್ವಿ ಕಪೂರ್ (Janhvi Kapoor) ನಾಯಕಿ ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲದೇ, ಸ್ಯಾಂಡಲ್ ವುಡ್ ಖ್ಯಾತ ನಟ ಶಿವರಾಜ್ ಕುಮಾರ್ ಕೂಡ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನುವ ಮಾಹಿತಿಯೂ ಹರಿದಾಡುತ್ತಿದೆ.

    ಈಗಾಗಲೇ ಎರಡು ತಮಿಳು ಸಿನಿಮಾದಲ್ಲಿ ನಟಿಸಿರುವ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ (Shivaraj Kumar), ಇದೀಗ ತೆಲುಗು (Telugu) ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿತ್ತು. ತೆಲುಗಿನ ಹೆಸರಾಂತ ನಟ ರಾಮ್ ಚರಣ್ ನಟನೆಯ ಹೊಸ ಚಿತ್ರದಲ್ಲಿ ಶಿವಣ್ಣ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತಂತೆ ಸ್ವತಃ ಶಿವರಾಜ್ ಕುಮಾರ್ ಮಾತನಾಡಿದ್ದಾರೆ.

    ರಾಮ್ ಚರಣ್ (Ram Charan) ಜೊತೆಗಿನ ಸಿನಿಮಾ ಬಗ್ಗೆ ಮಾತನಾಡಿರುವ ಶಿವರಾಜ್ ಕುಮಾರ್, ‘ತೆಲುಗಿನಲ್ಲಿ ಆಫರ್ ಬಂದಿದ್ದು ನಿಜ. ರಾಮ್ ಚರಣ್ ಅವರ ಚಿತ್ರವನ್ನು ನಿರ್ದೇಶನ ಮಾಡುತ್ತಿರುವ ಬುಚ್ಚಿ ಬಾಬು ನನ್ನನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಮಾತನಾಡಿದ್ದೇನೆ. ಆದರೆ, ಆ ಸಿನಿಮಾ ಬಗ್ಗೆ ಸದ್ಯ ಏನೂ ಹೇಳಲಾರೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

    ಒಂದು ವೇಳೆ ಆ ಸಿನಿಮಾದಲ್ಲಿ ಶಿವಣ್ಣ ನಟಿಸದೇ ಇದ್ದರೆ ಅಭಿಮಾನಿಗಳಿಗೆ ನಿರಾಸೆ ಆಗೋದು ಬೇಡ ಎನ್ನುವುದು ಚಿತ್ರದ ಬಗ್ಗೆ ಮಾತನಾಡದೇ ಇರುವುದಕ್ಕೆ ಕಾರಣವಂತೆ. ಮುಂದಿನ ದಿನಗಳಲ್ಲಿ ಚಿತ್ರ ತಂಡವೇ ಹಲವು ವಿಷಯಗಳನ್ನು ಹೇಳಬಹುದು ಎನ್ನುವುದು ಶಿವಣ್ಣ ಅವರ ಲೆಕ್ಕಾಚಾರ.

     

    ಸದ್ಯ ಶಿವರಾಜ್ ಕುಮಾರ್ ಅವರು ತಮ್ಮ ತಮಿಳಿನ ಮತ್ತೊಂದು ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಧನುಷ್ ಜೊತೆ ಆಕ್ಟ್ ಮಾಡಿರೋ ಕ್ಯಾಪ್ಟನ್ ಮಿಲ್ಲರ್ ಸಿನಿಮಾ ಇದೇ ಸಂಕ್ರಾಂತಿಗೆ ಬಿಡುಗಡೆ ಆಗುತ್ತಿದೆ. ನಿನ್ನೆಯಷ್ಟೇ ಹಾಡು ಕೂಡ ರಿಲೀಸ್ ಆಗಿದೆ. ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಶಿವಣ್ಣ ಕೂಡ ಭಾಗಿಯಾಗಿದ್ದರು.

  • Ramayana: ಸಾಯಿ ಪಲ್ಲವಿ ಔಟ್, ಸೀತೆಯ ಪಾತ್ರದಲ್ಲಿ ಶ್ರೀದೇವಿ ಪುತ್ರಿ

    Ramayana: ಸಾಯಿ ಪಲ್ಲವಿ ಔಟ್, ಸೀತೆಯ ಪಾತ್ರದಲ್ಲಿ ಶ್ರೀದೇವಿ ಪುತ್ರಿ

    ಬಾಲಿವುಡ್ ನಿರ್ದೇಶಕ ನಿತೀಶ್ ತಿವಾರಿ (Nitesh Tiwari) ಇದೀಗ ರಾಮಾಯಣ (Ramayana) ಆಧರಿಸಿ ಸಿನಿಮಾ ಮಾಡಲು ಸಕಲ ತಯಾರಿ ಮಾಡುತ್ತಿದ್ದಾರೆ. ರಾಮನಾಗಿ ರಣ್‌ಬೀರ್ ಕಪೂರ್ (Ranbir Kapoor) ಸೆಲೆಕ್ಟ್ ಆಗಿದ್ರೆ, ಸೀತೆಯ ಪಾತ್ರದಲ್ಲಿ ಸಾಯಿ ಪಲ್ಲವಿ ನಟಿಸಲಿದ್ದಾರೆ ಎನ್ನಲಾಗಿತ್ತು. ಈಗ ಸಾಯಿ ಪಲ್ಲವಿ ಬದಲು ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ (Janhvi Kapoor) ನಟಿಸಲಿದ್ದಾರೆ ಎನ್ನಲಾಗುತ್ತಿದೆ.

    ದಂಗಲ್, ಬಾವಲ್ ಚಿತ್ರಗಳ ನಿರ್ದೇಶಕ ನಿತೀಶ್ ತಿವಾರಿ ‘ರಾಮಾಯಣ’ ಕುರಿತು ಸಿನಿಮಾ ಮಾಡಲು ಮುಂದಾಗಿದ್ದಾರೆ. ಈಗಾಗಲೇ ಪ್ರೀ- ಪ್ರೊಡಕ್ಷನ್ ಹಂತದ ಕೆಲಸಗಳು ಕೂಡ ಭರದಿಂದ ಸಾಗುತ್ತಿದೆ. ತೆರೆಮರೆಯಲ್ಲಿ ಪಾತ್ರಗಳ ಆಯ್ಕೆ ಕೂಡ ನಡೆಯುತ್ತಿದೆ. ಸೀತೆಯ ಪಾತ್ರದ ಆಯ್ಕೆಯ ಬಗ್ಗೆ ಸಿಕ್ಕಾಪಟ್ಟೆ ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ:ಪೂನಂ ಪರವಾಗಿ ಕ್ಷಮೆ ಕೇಳಿದ ಡಿಜಿಟೆಲ್ ಟೀಮ್

    ‘ರಾಮಾಯಣ’ ಸಿನಿಮಾ ಬಗ್ಗೆ ಒಂದಲ್ಲ ಒಂದು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಇದೀಗ ಮತ್ತೊಂದು ಸುದ್ದಿ ಹೊರಬಿದ್ದಿದೆ. ರಣಬೀರ್ ರಾಮನ ಪಾತ್ರ ಮಾಡ್ತಾರೆ ಎನ್ನುವ ಸುದ್ದಿ ಹೊರಬಂದ ಬಳಿಕ ಸೀತೆಯಾಗಿ ಆಲಿಯಾ ಭಟ್ ಕಾಣಿಸಿಕೊಳ್ತಾರೆ ಎನ್ನಲಾಯ್ತು. ಆದರೆ ಡೇಟ್ ಸಮಸ್ಯೆಯಿಂದ ಆಲಿಯಾ ಈ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ. ಬಳಿಕ ಸೌತ್ ಬ್ಯೂಟಿ ಸಾಯಿ ಪಲ್ಲವಿ (Sai Pallavi) ಸೀತೆಯ ಪಾತ್ರ ಮಾಡಲಿದ್ದಾರೆ ಎನ್ನುವ ಸುದ್ದಿ ಹೊರಬಿದ್ದಿತ್ತು. ಇದಾದ ಬಳಿಕ ಇದೀಗ ಶ್ರೀದೇವಿ ಮಗಳಿಗೆ ಸೀತೆಯಾಗುವ ಚಾನ್ಸ್ ಸಿಕ್ಕಿದೆ ಎನ್ನಲಾಗ್ತಿದೆ.

    ಸೌತ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಜಾನ್ವಿ ಇದೀಗ ‘ರಾಮಾಯಣ’ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ರಾ ಈ ಬಗ್ಗೆ ಸದ್ಯದಲ್ಲೇ ಅಧಿಕೃತ ಅಪ್‌ಡೇಟ್ ಹೊರಬೀಳಲಿದೆ.

  • ಕೊನೆಗೂ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ಶ್ರೀದೇವಿ ಪುತ್ರಿ ಜಾನ್ವಿ

    ಕೊನೆಗೂ ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟ ಶ್ರೀದೇವಿ ಪುತ್ರಿ ಜಾನ್ವಿ

    ಬಾಲಿವುಡ್ ನಟಿ ಜಾನ್ವಿ ಕಪೂರ್ ಸಿನಿಮಾಗಿಂತ ಹೆಚ್ಚೆಚ್ಚು ತಮ್ಮ ಖಾಸಗಿ ವಿಚಾರವಾಗಿಯೇ ಚಾಲ್ತಿಯಲ್ಲಿರುತ್ತಾರೆ. ಇದೀಗ ‘ಕಾಫಿ ವಿತ್ ಕರಣ್’ ಸೀಸನ್ 8ರಲ್ಲಿ (Koffe With Karan 8) ಬಾಯ್‌ಫ್ರೆಂಡ್ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ:ಬಾಲಿವುಡ್ ನಿರ್ಮಾಪಕನ ಜೊತೆ ಮದುವೆಗೆ ಸಜ್ಜಾದ ಕನ್ನಡದ ‘ಗಿಲ್ಲಿ’ ನಟಿ ರಾಕುಲ್

    ಸೆನ್ಸೇಷನಲ್ ಶೋ ಅಂದರೆ ಅದು ಕಾಫಿ ವಿತ್ ಕರಣ್ ಕಾರ್ಯಕ್ರಮ. ಏನಾದರೂ ವಿವಾದಗಳ ಅಥವಾ ಸ್ಟಾರ್‌ಗಳ ಸೀಕ್ರೆಟ್ ರಿವೀಲ್ ಆಗುವ ಮೂಲಕ ಶೋ ಅಭಿಮಾನಿಗಳ ಗಮನ ಸೆಳೆದಿದೆ. ಹೀಗಿರುವಾಗ ಕರಣ್ ಶೋಗೆ ಶ್ರೀದೇವಿ ಪುತ್ರಿಯರು ಜಾನ್ವಿ-ಖುಷಿ ಕಪೂರ್ ಎಂಟ್ರಿ ಕೊಟ್ಟಿದ್ದಾರೆ. ಇದೀಗ ತಮ್ಮ ರಿಯಲ್ ಲೈಫ್ ಲವ್ ಬಗ್ಗೆ ಜಾನ್ವಿ (Janhvi Kapoor) ರಿವೀಲ್ ಮಾಡಿದ್ದಾರೆ.

    ಜಾನ್ವಿ ಕಪೂರ್-ಶಿಖರ್ ಪಹಾಡಿಯಾ ಡೇಟಿಂಗ್ ದೃಢವಾಗಿದೆ. ಕಾರ್ಯಕ್ರಮದಲ್ಲಿ ನೀವು ಹೆಚ್ಚಾಗಿ ಫೋನಿನಲ್ಲಿ ಮಾತನಾಡೋದು ಯಾರ ಜೊತೆ, ನಿಮಗೆ ಯಾರು ತುಂಬಾ ಕ್ಲೋಸ್ ಎಂದು ಕರಣ್ ಜೋಹರ್ (Karan Johar) ಪ್ರಶ್ನೆ ಕೇಳಿದ್ದಾರೆ.

    ಅದಕ್ಕೆ ಜಾನ್ವಿ, ಮೊದಲಿಗೆ ಅಪ್ಪ, ತಂಗಿ ಖುಷಿ, ಶಿಖು ಎಂದು ಹೇಳಿದ್ದರು. ಶಿಖು ಎಂದು ಶಿಖರ್ ನಿಕ್ ನೇಮ್ ಅನ್ನು ಮಿಸ್ ಆಗಿ ಹೇಳಿದ್ದಕ್ಕೆ ಸ್ವತಃ ಜಾನ್ವಿಯೇ ಶಾಕ್ ಆದರು.

    ನಾನು ಶಿಖರ್ ಹೆಸರನ್ನು ತಪ್ಪಾಗಿ ತೆಗೆದುಕೊಂಡೆ ಎಂದು ಜಾನ್ವಿ ನಕ್ಕರು. ಶಿಖರ್ ಹೆಸರನ್ನು ಹೇಳುತ್ತಿದ್ದಂತೆ ಖುಷಿ ಮತ್ತು ಕರಣ್ ಜೋಹರ್ ಜೋರಾಗಿ ನಕ್ಕರು. ಆಗ ಜಾನ್ವಿ ಕೂಡ ನಾಚಿಕೆಯಿಂದ ತಲೆತಗ್ಗಿಸಿದ್ದಾರೆ. ಈ ಮೂಲಕ ಶಿಖರ್ ಜೊತೆಗಿನ ಡೇಟಿಂಗ್ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ.

  • ಕೆಂಪು ಬಣ್ಣದ ಡ್ರೆಸ್‌ನಲ್ಲಿ ಜಾನ್ವಿ ಕಪೂರ್ ಹಾಟ್‌ ಫೋಟೋಶೂಟ್‌

    ಕೆಂಪು ಬಣ್ಣದ ಡ್ರೆಸ್‌ನಲ್ಲಿ ಜಾನ್ವಿ ಕಪೂರ್ ಹಾಟ್‌ ಫೋಟೋಶೂಟ್‌

    ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಕೆಂಪು ಬಣ್ಣದ ಡ್ರೆಸ್‌ನಲ್ಲಿ ನಟಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಶ್ರೀದೇವಿ (Sridevi) ಪುತ್ರಿಯ ನಯಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ನಟಿ ಜಾನ್ವಿ, ಆಗಾಗ ಗಮನ ಸೆಳೆಯುತ್ತಲೇ ಇರುತ್ತಾರೆ. ಇದರ ನಡುವೆ ಈಗೀನ ಹೊಸ ಅವತಾರ ಪಡ್ಡೆಹುಡುಗರ ನಿದ್ದೆ ಕೆಡಿಸುತ್ತಿದೆ. ಇದನ್ನೂ ಓದಿ:‘ಬಿಗ್ ಬಾಸ್’ ಪ್ರೇಕ್ಷಕರಿಗೆ ಗುಡ್ ನ್ಯೂಸ್- ಇಲ್ಲಿದೆ ಬಿಗ್ ಸರ್ಪ್ರೈಸ್

    ಕೆಂಪು ಬಣ್ಣದ ಡ್ರೆಸ್‌ನಲ್ಲಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೈಟ್ ಆಗಿರೋ ಟಾಪ್ ಧರಿಸಿ ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ನಟಿಯ ಗ್ಲ್ಯಾಮರಸ್‌ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

    2018ರಲ್ಲಿ ‘ಧಡಕ್’ ಸಿನಿಮಾ ಮೂಲಕ ನಾಯಕಿಯಾಗಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಎಂಟ್ರಿ ಕೊಟ್ಟರು. ಬಳಿಕ ಮಿಲಿ, ರೂಹಿ, ಗುಡ್ ಲಕ್ ಜೆರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದರು. ಇದನ್ನೂ ಓದಿ:ನಿರ್ದೇಶಕನ ಹೆಸರನ್ನೇ ಕಿತ್ತಾಕಿದ ನಿರ್ಮಾಪಕ: ‘ಡೆವಿಲ್’ ವಿವಾದ

    ಅದರಲ್ಲಿ ಈ ವರ್ಷ ತೆರೆಕಂಡ ‘ಬಾವಲ್’ ಸಿನಿಮಾ ಸೌಂಡ್ ಮಾಡಿತ್ತು. ಜಾನ್ವಿ ನಟನೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿತ್ತು. ವರುಣ್ ಧವನ್- ಜಾನ್ವಿ ಕೆಮಿಸ್ಟ್ರಿ ಕೂಡ ಚಿತ್ರದಲ್ಲಿ ಕ್ಲಿಕ್ ಆಗಿತ್ತು.

    ಇನ್ನೂ ತಾಯಿ ಶ್ರೀದೇವಿ ಕಪೂರ್ (Sridevi Kapoor) ಬಹುಭಾಷೆಗಳಲ್ಲಿ ನಟಿಸುವ ಮೂಲಕ ಸಾಕಷ್ಟು ವರ್ಷಗಳು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ತಾಯಿಯಂತೆ ತಾನು ಕೂಡ ದೊಡ್ಡ ಸ್ಟಾರ್ ಆಗಿ ಮಿಂಚಬೇಕು ಎಂದು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಅದಕ್ಕಾಗಿಯೇ ಹಿಂದಿ ಮಾತ್ರವಲ್ಲ ತೆಲುಗು ಸಿನಿಮಾಗಳಲ್ಲಿ ನಟಿ ಅಭಿನಯಿಸುತ್ತಿದ್ದಾರೆ.

    ತೆಲುಗಿನ ‘ದೇವರ’ (Devara) ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್‌ಗೆ ನಾಯಕಿಯಾಗಿ ಜಾನ್ವಿ ನಟಿಸುತ್ತಿದ್ದಾರೆ. ಮುಂದಿನ ವರ್ಷ ಈ ಚಿತ್ರ ರಿಲೀಸ್ ಆಗಲಿದೆ. ಬಹುಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ.

    ಜಾನ್ವಿ ಸಹೋದರಿ ಖುಷಿ ಕಪೂರ್ (Kushi Kapoor) ಕೂಡ ನಾಯಕಿಯಾಗಿ ಮಿಂಚಲು ಅಖಾಡಕ್ಕೆ ಹೆಜ್ಜೆ ಇಟ್ಟಾಗಿದೆ. ‘ದಿ ಆರ್ಚೀಸ್’ ಎಂಬ ಸಿನಿಮಾದಲ್ಲಿ ಈಗಾಗಲೇ ನಟಿಸಿದ್ದಾರೆ.

  • ಎದೆಯ ಗೀಟು ಕಾಣುವಂತೆ ಬೋಲ್ಡ್ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್

    ಎದೆಯ ಗೀಟು ಕಾಣುವಂತೆ ಬೋಲ್ಡ್ ಆಗಿ ಕಾಣಿಸಿಕೊಂಡ ಜಾನ್ವಿ ಕಪೂರ್

    ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಅವರು ಸಖತ್ ಹಾಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಎದೆಯ ಗೀಟು ಕಾಣಿಸುವಂತೆ ಕ್ಯಾಮೆರಾ ಕಣ್ಣಿಗೆ ಜಾನ್ವಿ ಬೋಲ್ಡ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

    ಕಪ್ಪು ಬಣ್ಣದ ಉಡುಗೆಯಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಜಾನ್ವಿ ಕಪೂರ್ ಬೋಲ್ಡ್ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಬ್ಲ್ಯಾಕ್ ಕಲರ್ ಬಟ್ಟೆ ಧರಿಸಿ ಮಾದಕ ಲುಕ್‌ನಿಂದ ಎಲ್ಲರ ಗಮನ ಸೆಳೆದಿದ್ದಾರೆ. ಇದನ್ನೂ ಓದಿ:‘ಮೂರನೇ ಕೃಷ್ಣಪ್ಪ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್

    ಬಾಲಿವುಡ್‌ನಲ್ಲಿ ಮಿಂಚ್ತಿದ್ದ ಶ್ರೀದೇವಿ ಕಪೂರ್ ಪುತ್ರಿ ಜಾನ್ವಿ ತೆಲುಗಿಗೆ ಕಾಲಿಟ್ಟಿರೋದು ಗೊತ್ತೇ ಇದೆ. ಜ್ಯೂ.ಎನ್‌ಟಿಆರ್‌ಗೆ ನಾಯಕಿಯಾಗಿ ಬಣ್ಣ ಹಚ್ತಿದ್ದಾರೆ. ‘ದೇವರ’ (Devara Film) ಸಿನಿಮಾದಲ್ಲಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.

    ಜ್ಯೂ.ಎನ್‌ಟಿಆರ್‌ಗೆ (Jr.Ntr) ಜೋಡಿಯಾಗುವ ಮೂಲಕ ತೆಲುಗಿಗೆ ಜಾನ್ವಿ ಡೆಬ್ಯೂ ಮಾಡ್ತಿದ್ದಾರೆ. ಸೌತ್ ಸಿನಿ ಪ್ರಿಯರ ಮನಗೆಲ್ಲುತ್ತಾರಾ ಕಪೂರ್ ಕುಟುಂಬದ ಕುಡಿ? ಬಾಲಿವುಡ್ ಚಿತ್ರರಂಗ ಅಂತೂ ಕೈಹಿಡಿಯಲಿಲ್ಲ. ಟಾಲಿವುಡ್‌ನಲ್ಲಿಯಾದ್ರೂ (Tollywood) ಗೆದ್ದು ಬೀಗುತ್ತಾರಾ ಕಾದುನೋಡಬೇಕಿದೆ.

  • ಎರಡು ಭಾಗವಾಗಿ ಬರಲಿದೆ ‘ದೇವರ’ ಸಿನಿಮಾ : ಕೊರಟಾಲ ಶಿವ

    ಎರಡು ಭಾಗವಾಗಿ ಬರಲಿದೆ ‘ದೇವರ’ ಸಿನಿಮಾ : ಕೊರಟಾಲ ಶಿವ

    ಜ್ಯೂನಿಯರ್ ಎನ್.ಟಿ.ಆರ್ ಮತ್ತು ಜಾನ್ವಿ ಕಪೂರ್ ಕಾಂಬಿನೇಷನ್ ನ ‘ದೇವರ’ ಸಿನಿಮಾದಿಂದ ಮತ್ತೊಂದು ಮೆಗಾ ಸುದ್ದಿ ಬಂದಿದೆ. ಈ ಸಿನಿಮಾವನ್ನು ಎರಡು ಭಾಗದಲ್ಲಿ ನೋಡಬಹುದಾಗಿದೆ ಎಂದಿದ್ದಾರೆ ನಿರ್ದೇಶಕ ಕೊರಟಾಲ ಶಿವ (Koratala Shiva). ಇದೀಗ ಮೊದಲ ಭಾಗದ ಚಿತ್ರೀಕರಣ ನಡೆದಿದ್ದು, ಬಿಡುಗಡೆಯ ನಂತರ ಪಾರ್ಟ್ ಬಗ್ಗೆ ಪ್ಲ್ಯಾನ್ ಮಾಡುವುದಾಗಿ ಅವರು ತಿಳಿಸಿದ್ದಾರೆ.

    ದೇವರ (Devara) ಸಿನಿಮಾದಲ್ಲಿ ವಿಶೇಷ ತಾರಾಗಣವೇ ಇದೆ. ಬಾಲಿವುಡ್ ನಟ ಸೈಫ್ ಅಲಿಖಾನ್ (Saif Ali Khan) ಈ ಸಿನಿಮಾದಲ್ಲಿ ಖಳನಟರಾಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರದ ಟೀಸರ್ ಈ ಹಿಂದೆಯಷ್ಟೇ ರಿಲೀಸ್ ಆಗಿದ್ದು, ಟೀಸರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಮತ್ತು ಸೈಫ್ ಅಲಿಖಾನ್ ಅವರ ಲುಕ್ ಕೂಡ ವಿಶೇಷವಾಗಿದೆ.

    ‘ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿದ್ದಾರೆ.

     

    2024ರ ಏಪ್ರಿಲ್ 06ಕ್ಕೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ. ‘ದೇವರ’ ಸಿನಿಮಾದಲ್ಲಿ ಪ್ರತಿಭಾವಂತ ನಟಿ ಸಾಯಿ ಪಲ್ಲವಿ (Sai Pallavi) ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಸಾಯಿ ಪಲ್ಲವಿ ಮತ್ತು ಜ್ಯೂ.ಎನ್.ಟಿ.ಆರ್ ಅಭಿಮಾನಿಗಳು ಈ ವಿಷಯವನ್ನು ಸಂಭ್ರಮಿಸಿದ್ದರು. ಈ ಜೋಡಿ ತೆರೆಯ ಮೇಲೆ ಮೋಡಿ ಮಾಡಲಿದೆ ಎಂದು ಖುಷಿ ಪಟ್ಟಿದ್ದರು. ಆದರೆ, ಆ ಖುಷಿಯು ಠುಸ್ ಪಟಾಕಿಯಾಗಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿಲ್ಲ ಎಂದು ಸ್ವತಃ ಚಿತ್ರತಂಡವೇ ಸ್ಪಷ್ಟನೆ ನೀಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೊದಲ ಬಾಯ್‌ಫ್ರೆಂಡ್ ಜೊತೆಗಿನ ಬ್ರೇಕಪ್ ಬಗ್ಗೆ ಬಾಯ್ಬಿಟ್ಟ ಜಾನ್ವಿ ಕಪೂರ್

    ಮೊದಲ ಬಾಯ್‌ಫ್ರೆಂಡ್ ಜೊತೆಗಿನ ಬ್ರೇಕಪ್ ಬಗ್ಗೆ ಬಾಯ್ಬಿಟ್ಟ ಜಾನ್ವಿ ಕಪೂರ್

    ಬಾಲಿವುಡ್ (Bollywood) ಬ್ಯೂಟಿ ಜಾನ್ವಿ ಕಪೂರ್ (Janhvi Kapoor) ಇದೀಗ ತಮ್ಮ ಮೊದಲ ಬ್ರೇಕಪ್ (Breakup) ಬಗ್ಗೆ ಮಾತನಾಡಿದ್ದಾರೆ. ಮೊದಲ ಬಾಯ್ ಫ್ರೆಂಡ್ ಜೊತೆಗಿನ ಬ್ರೇಕಪ್ ಯಾಕೆ ಆಯಿತು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ಇದನ್ನೂ ಓದಿ:ಶಾರುಖ್ ಖಾನ್ ಮನೆಗೆ ಹೆಚ್ಚಿನ ಭದ್ರತೆ: ಮನೆ ಮುಂದೆ ಪ್ರತಿಭಟನೆ

    ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ವೈಯಕ್ತಿಕ ಬದುಕಿನ ಬಗ್ಗೆ ನಟಿ ಹಂಚಿಕೊಂಡಿದ್ದಾರೆ. ಕೆಲವರ್ಷಗಳ ಹಿಂದೆ ಜಾನ್ವಿ ಎಂಗೇಜ್ ಆಗಿದ್ದರು. ಇಬ್ಬರ ಪ್ರೀತಿಗೆ ಶ್ರೀದೇವಿ ದಂಪತಿ (Sridevi) ಸಮ್ಮತಿ ಸೂಚಿಸಿರಲಿಲ್ಲ. ಹಾಗಾಗಿ ಆ ಹುಡುಗನ ಜೊತೆ ಬ್ರೇಕಪ್ ಮಾಡಿಕೊಳ್ಳಬೇಕಾಯಿತು ಎಂದು ನಟಿ ಹೇಳಿದ್ದಾರೆ. ತಂದೆ- ತಾಯಿಯ ಒಪ್ಪಿಗೆ ಇಲ್ಲದೇ ಇರೋದಕ್ಕೆ ಬ್ರೇಕಪ್ ಮಾಡಿಕೊಂಡೆ ಎಂದು ನಟಿ ಬಾಯ್ಬಿಟ್ಟಿದ್ದಾರೆ. ಆದರೆ ಆ ಹುಡುಗ ಯಾರು ಎಂಬುದನ್ನ ರಿವೀಲ್ ಮಾಡಿಲ್ಲ.

    ನನ್ನ ಮೊದಲ ಬಾಯ್‌ಫ್ರೆಂಡ್ ಜೊತೆ ಕದ್ದು ಮುಚ್ಚಿ ಓಡಾಡುವ ಸಂಬಂಧವಾಗಿತ್ತು. ಆ ಸಂಬಂಧ ನಂತರ ಬ್ರೇಕಪ್ ಮೂಲಕ ಅಂತ್ಯವಾಯಿತು. ಪ್ರತಿ ಸಲ ನನ್ನ ತಂದೆ-ತಾಯಿಗೆ ಸುಳ್ಳು ಹೇಳಬೇಕಿತ್ತು. ನಮ್ಮದು ಸಂಪ್ರದಾಯಸ್ಥ ಕುಟುಂಬ ಆಗಿರುವ ಕಾರಣ, ನೋ ಬಾಯ್‌ಫ್ರೆಂಡ್ ರೂಲ್ಸ್ ಇತ್ತು ಎಂದಿದ್ದಾರೆ.

    ಪ್ರಸ್ತುತ ಉದ್ಯಮಿ ಶಿಖರ್‌ ಪಹಾರಿಯಾ ಜೊತೆ ಜಾನ್ವಿ ಕಪೂರ್‌ ಡೇಟ್‌ ಮಾಡ್ತಿದ್ದಾರೆ ಎಂಬ ಸುದ್ದಿ ಸದ್ದು ಮಾಡುತ್ತಿದೆ. ಈ ಬಗ್ಗೆ ನಟಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದು ನಿಜಾನಾ? ಅಥವಾ ಗಾಸಿಪ್‌ ಕಾದುನೋಡಬೇಕಿದೆ.

    ವರುಣ್ ಧವನ್ ಜೊತೆಗಿನ ‘ಬವಾಲ್’ ಸಿನಿಮಾದಲ್ಲಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದರು. ಈಗ ತೆಲುಗಿನ ಹೀರೋ ಜ್ಯೂ.ಎನ್‌ಟಿಆರ್‌ಗೆ ಹೀರೋಯಿನ್ ಆಗಿ ‘ದೇವರ’ (Devara) ಚಿತ್ರದಲ್ಲಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಕ್ಷಿಣದ ಸಿನಿಮಾರಂಗ ತವರು ಮನೆಯಂತೆ ಅನಿಸುತ್ತಿದೆ : ಜಾನ್ವಿ ಕಪೂರ್

    ದಕ್ಷಿಣದ ಸಿನಿಮಾರಂಗ ತವರು ಮನೆಯಂತೆ ಅನಿಸುತ್ತಿದೆ : ಜಾನ್ವಿ ಕಪೂರ್

    ಹುಭಾಷಾ ನಟಿ ಶ್ರೀದೇವಿ ಕಪೂರ್ (Sridevi Kapoor) ಪುತ್ರಿ ಜಾನ್ವಿ ಕಪೂರ್ (Janhavi Kapoor) ಅಮ್ಮನ ಮಾದರಿಯಲ್ಲೇ ಹೆಜ್ಜೆ ಇಡುತ್ತಿದ್ದಾರೆ. ಶ್ರೀದೇವಿ ರೀತಿಯಲ್ಲೇ ಜಾನ್ವಿ ದಕ್ಷಿಣದ ಸಿನಿಮಾಗಳತ್ತ ಹೆಚ್ಚು ಗಮನ ನೀಡ್ತಿದ್ದಾರೆ. ಹಾಗಾಗಿ ಸದ್ಯ ಜಾನ್ವಿ ಎರಡು ತೆಲುಗು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ.

    ಚಿತ್ರೀಕರಣಕ್ಕಾಗಿ ಹಲವು ದಿನಗಳಿಂದ ಹೈದರಾಬಾದ್ ನಲ್ಲೇ ಬೀಡು ಬಿಟ್ಟಿರುವ ಜಾನ್ವಿ, ದಕ್ಷಿಣದ ಸಿನಿಮಾ ರಂಗ ನನ್ನ ತವರು ಮನೆಯಂತೆ ಭಾಸವಾಗುತ್ತಿದೆ. ಪ್ರತಿ ಕ್ಷಣವೂ ಅಮ್ಮ ನೆನಪಾಗುತ್ತಿದ್ದಾರೆ ಎಂದು ಮಾತನಾಡಿದ್ದಾರೆ. ಸ್ಟಾರ್ ನಟರ ಜೊತೆ ನಟಿಸುವುದಕ್ಕೆ ಅವಕಾಶ ಕೊಟ್ಟಿರುವುದಕ್ಕಾಗಿ ಧನ್ಯವಾದ ತಿಳಿಸಿದ್ದಾರೆ.

    ಇತ್ತೀಚೆಗಷ್ಟೇ ಜಾನ್ವಿ ಕಪೂರ್,  ಜ್ಯೂನಿಯರ್ ಎನ್‌ಟಿಆರ್ (Jr.ntr) ಒಪ್ಪಿಕೊಂಡಿದ್ದರು. ಆ ಸಿನಿಮಾದ ಶೂಟಿಂಗ್ ಕೂಡ ಇನ್ನೂ ಮುಗಿದಿಲ್ಲ, ಅದಕ್ಕೂ ಮುನ್ನವೇ ಮತ್ತೊಂದು ಬಂಪರ್ ಆಫರ್‌ ಅನ್ನು ನಟಿ ತಮ್ಮದಾಗಿಸಿಕೊಂಡಿದ್ದಾರೆ. ಜಾನ್ವಿ ಇದೀಗ ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಜಾನ್ವಿ ಕಮಾಲ್‌ ಮಾಡಲಿದ್ದಾರೆ. ಇದನ್ನೂ ಓದಿ:ದಾಂಪತ್ಯಕ್ಕೆ ಅಂತ್ಯ ಹಾಡಿದ ನಟಿ, ಡಿವೋರ್ಸ್ ಬಗ್ಗೆ ಬಿಗ್ ಬಾಸ್ ಚೈತ್ರಾ ಅಪ್‌ಡೇಟ್

    ಈ ಹೊಸ ಸಿನಿಮಾದಲ್ಲಿ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni)  ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ. ಯುವ ನಿರ್ದೇಶಕ ಅನಿಲ್ ಕುಮಾರ್ (Anil Kumar) ನಿರ್ದೇಶನದಲ್ಲಿ ಅಖಿಲ್- ಜಾನ್ವಿ ಆಕ್ಟ್ ಮಾಡಲಿದ್ದಾರೆ. ಅನಿಲ್ ಈ ಹಿಂದೆ ಪ್ರಭಾಸ್ ನಟನೆಯ ‘ಸಾಹೋ’ (Saho) ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

    ಅಲ್ಲದೇ, ಕೊರಟಾಲ ಶಿವ ನಿರ್ದೇಶನದ ಸಿನಿಮಾದಲ್ಲಿ ಮೂಡಿ ಬರುತ್ತಿರುವ ‘ದೇವರ’ ಸಿನಿಮಾದಲ್ಲಿ ಜ್ಯೂ.ಎನ್‌ಟಿಆರ್‌ಗೆ ನಾಯಕಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ನಲ್ಲೂ ಅವರು ಪಾಲ್ಗೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ನಟಿ ಜಾನ್ವಿ

    ಕಮಲ್ ಹಾಸನ್ ನಿರ್ಮಾಣದ ಸಿನಿಮಾದಲ್ಲಿ ನಟಿ ಜಾನ್ವಿ

    ಗಾಗಲೇ ಬಹುಭಾಷಾ ನಟಿಯಾಗಿ ಶ್ರೀದೇವಿ ಕಪೂರ್ (Sridevi Kapoor) ಪುತ್ರಿ  ಜಾನ್ವಿ ಕಪೂರ್ (Janhavi Kapoor)  ಎರಡು ತೆಲುಗು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಜ್ಯೂನಿಯರ್ ಎನ್.ಟಿ.ಆರ್ ನಟನೆಯ ದೇವರ ಚಿತ್ರದಲ್ಲಿ ಅವರು ನಟಿಸುತ್ತಿದ್ದು,  ಅಖಿಲ್ ಅಕ್ಕಿನೇನಿ ಹೊಸ ಸಿನಿಮಾವನ್ನು ಒಪ್ಪಿಕೊಂಡಿದ್ದಾರೆ. ಈ ನಡುವೆ ತಮಿಳು ಚಿತ್ರೋದ್ಯಮಕ್ಕೂ ಜಾನ್ವಿ ಹಾರಿದ್ದು, ಈ ಸಿನಿಮಾವನ್ನು ಕಮಲ್ ಹಾಸನ್ (Kamal Haasan) ನಿರ್ಮಾಣ ಮಾಡುತ್ತಿದ್ದಾರೆ.

    ಮಿಲಿ, ಗುಡ್ ಲಕ್ ಜರಿ ಸಿನಿಮಾಗಳ ಮೂಲಕ ಬಾಲಿವುಡ್‌ನಲ್ಲಿ (Bollywood) ಮೋಡಿ ಮಾಡಿರುವ ಹಾಟ್ ಬ್ಯೂಟಿ ಜಾನ್ವಿ ಕಪೂರ್ ತೆಲುಗಿನತ್ತ ಮುಖ ಮಾಡಿದಾಗ ಹುಬ್ಬೇರಿಸಿದವರೇ ಹೆಚ್ಚು. ಶ್ರೀದೇವಿ ಅವರು ಹೇಗೆ ಒಂದೊಂದೇ ಯಶಸ್ಸಿನ ಮೆಟ್ಟಿಲನ್ನು ಏರಿದ್ದರೋ ಅದೇ ರೀತಿ ಸೌತ್ ಸಿನಿಮಾ ಸ್ಕ್ರಿಪ್ಟ್‌ಗಳಿಗೆ ಜಾನ್ವಿ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಥೇಟ್ ಅಮ್ಮನ ನಡೆಯನ್ನೇ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಜ್ಯೂನಿಯರ್ ಎನ್‌ಟಿಆರ್ (Jr.ntr) ಜೊತೆಗಿನ ದೇವರ ಸಿನಿಮಾ ರಿಲೀಸ್ ಆಗುವ ಮುನ್ನವೇ ಮತ್ತೊಂದು ಬಂಪರ್ ಆಫರ್‌ ಅನ್ನ ನಟಿ ತಮ್ಮದಾಗಿಸಿಕೊಂಡಿದ್ದಾರೆ. ಜಾನ್ವಿ ಇದೀಗ ಮತ್ತೊಬ್ಬ ತೆಲುಗಿನ ನಟನ ಜೊತೆ ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಹೊಸ ಬಗೆಯ ಕಥೆಯಲ್ಲಿ ಜಾನ್ವಿ ಕಮಾಲ್‌ ಮಾಡಲಿದ್ದಾರೆ. ಇದನ್ನೂ ಓದಿ:‘ಟೋಬಿ’ ಶೆಟ್ಟರ ಕೆನ್ನೆಗೆ ಮುತ್ತಿಟ್ಟ ಚೈತ್ರಾ- ರಾಜ್ ಬಿ ಶೆಟ್ಟಿ ಸ್ಪಷನೆ

    ಹೊಸ ಸಿನಿಮಾಗೆ ನಾಗಾರ್ಜುನ ಪುತ್ರ ಅಖಿಲ್ ಅಕ್ಕಿನೇನಿಗೆ (Akhil Akkineni)  ನಾಯಕಿಯಾಗಿ ಜಾನ್ವಿ ಕಪೂರ್ ಸೆಲೆಕ್ಟ್ ಆಗಿದ್ದಾರೆ. ಯುವ ನಿರ್ದೇಶಕ ಅನಿಲ್ ಕುಮಾರ್ (Anil Kumar) ನಿರ್ದೇಶನದಲ್ಲಿ ಅಖಿಲ್- ಜಾನ್ವಿ ಆಕ್ಟ್ ಮಾಡಲಿದ್ದಾರೆ. ಅನಿಲ್ ಈ ಹಿಂದೆ ಪ್ರಭಾಸ್ ನಟನೆಯ ‘ಸಾಹೋ’ (Saho) ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದಾರೆ.

     

    ಮೊದಲ ಬಾರಿಗೆ ಜಾನ್ವಿ- ಅಖಿಲ್‌ ತೆರೆಯ ಮೇಲೆ ಒಂದಾಗುತ್ತಿದ್ದು, ಈ ಫ್ರೆಶ್‌ ಫೇರ್‌ ಅದೆಷ್ಟರ ಮಟ್ಟಿಗೆ ಮೋಡಿ ಮಾಡಲಿದೆ ಎಂಬುದನ್ನ ಮುಂದಿನ ದಿನಗಳವರೆಗೂ ಕಾದುನೋಡಬೇಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]