Tag: ಜಾಮರ್

  • ಹಿಂಡಲಗಾ ಜೈಲಿನ ಜಾಮರ್‌ನಿಂದ ಮೊಬೈಲ್‌ ನೆಟ್‌ವರ್ಕ್‌ ಜಾಮ್‌ – ಕಾಲ್‌ಗೆ ಪರದಾಡುತ್ತಿದ್ದಾರೆ ಜನ

    ಹಿಂಡಲಗಾ ಜೈಲಿನ ಜಾಮರ್‌ನಿಂದ ಮೊಬೈಲ್‌ ನೆಟ್‌ವರ್ಕ್‌ ಜಾಮ್‌ – ಕಾಲ್‌ಗೆ ಪರದಾಡುತ್ತಿದ್ದಾರೆ ಜನ

    ಬೆಳಗಾವಿ: 2ಜಿ ಜಾಮರ್‌ ಬದಲಾಯಿಸಿ ಹಿಂಡಲಗಾ ಜೈಲಿನಲ್ಲಿ (Hindalga Jail) 5ಜಿ ಜಾಮರ್‌ (Jammer) ಅಳವಡಿಸಿದ್ದರಿಂದ ಸಮೀಪದ ಗ್ರಾಮಸ್ಥರಿಗೆ ಈಗ ಸಮಸ್ಯೆಯಾಗುತ್ತಿದೆ.

    ಜಾಮರ್ ಅಳವಡಿಕೆಯಿಂದ ಜೈಲು ಪಕ್ಕದ ಹಳ್ಳಿಗಳಾದ ವಿಜಯನಗರ, ಗಣೇಶಪುರ,ಬೆನಕನಹಳ್ಳಿ ಸೇರಿದಂತೆ ಹಿಂಡಲಗಾ ಗ್ರಾಮಕ್ಕೆ ಸಾಕಷ್ಟು ಸಮಸ್ಯೆ ಆಗುತ್ತಿದೆ.‌

    ಸರ್ಕಾರಿ ಕಚೇರಿಗಳಲ್ಲಿ ನೆಟ್‌ವರ್ಕ್‌ ಸಿಗದೇ ಸರ್ವರ್ ಡೌನ್ ಆಗುತ್ತಿದೆ. ಪರೀಕ್ಷಾ ಸಮಯವಾಗಿರುವುದರಿಂದ ವಿದ್ಯಾರ್ಥಿಗಳಿಗೂ ಸಾಕಷ್ಟು ಸಮಸ್ಯೆ ಆಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.‌

    ಜೈಲಿನಲ್ಲಿ ಖೈದಿಗಳ ಮೊಬೈಲ್‌ ಬಳಕೆಗೆ ಬ್ರೇಕ್ ಹಾಕಬೇಕು ಎನ್ನುವ ನಿಟ್ಟಿನಲ್ಲಿ ಜೈಲಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಆದರೆ ಇದರಿಂದ ಖೈದಿಗಳಿಗಿಂತ ಹೊರಗಿರುವ ಜನಸಾಮಾನ್ಯರಿಗೆ ಹೆಚ್ಚು ತೊಂದರೆ ಆಗುತ್ತಿದೆ. ಇದನ್ನೂ ಓದಿ: ಜಮೀನಿಗೆ ಬಂದ ಜೀವಂತ ಮೊಸಳೆ ಸೆರೆ – ಜೆಸ್ಕಾಂ ಕಚೇರಿ ಬಳಿ ತಂದು ರೈತರ ಪ್ರತಿಭಟನೆ

    ಕೇದ್ರ ಸಚಿವ ನಿತಿನ್ ಗಡ್ಕರಿಗೆ ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಖೈದಿಯೋರ್ವ ಜೀವ ಬೆದರಿಕೆ ಹಾಕಿದ್ದ. ಇದನ್ನು ಮನಗಂಡು ಜೈಲಧಿಕಾರಿಗಳು ಜಾಮರ್ ಅಳವಡಿಕೆಗೆ ಕ್ರಮ ಕೈಗೊಂಡಿದ್ದಾರೆ.

    ಅಳವಡಿಕೆಯಾಗಿರುವ ಜಾಮರ್‌ ಫ್ರಿಕ್ವೆನ್ಸಿ ಕಡಿಮೆ ಮಾಡಿ ಎಂದು ಜೈಲಾಧಿಕಾರಿಗಳಿಗೆ ಜನಸಾಮಾನ್ಯರು ಮನವಿ ಮಾಡಿದ್ದಾರೆ.

     

  • ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

    ಸರ್ಕಾರಿ ನೇಮಕಾತಿ ಪರೀಕ್ಷೆಗಳ ಅಕ್ರಮ ತಡೆಯಲು ಟಫ್ ರೂಲ್ಸ್!

    ಬೆಂಗಳೂರು: ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ನಡೆಯುವ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಟಫ್ ರೂಲ್ಸ್ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

    ರಾಜ್ಯದಲ್ಲಿ ಎಲ್ಲ ಸರ್ಕಾರಿ ನೇಮಕಾತಿ ಪರೀಕ್ಷೆಗಳ ವೇಳೆ ಇನ್ಮುಂದೆ ಜಾಮರ್ ಅಳವಡಿಸಲು ಸರ್ಕಾರ ಚಿಂತನೆ ನಡೆಸಿದೆ. ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ ಕರ್ಮಕಾಂಡ ಹಿನ್ನೆಲೆಯಲ್ಲಿ ಜಾಮರ್ ಅಳವಡಿಕೆಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಮುಳುಗಿದ ರಾಜಧಾನಿ – ಪೂಲ್‌ನಲ್ಲಿ ಈಜಾಡಲು ಬನ್ನಿ ಬೊಮ್ಮಾಯಿಯವರೇ ಎಂದ ಯುವಕ

    VIDHAN SHOUDHA

    ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಜಾಮರ್ ಅಳವಡಿಕೆ ಸಂಬಂಧ ಸರ್ಕಾರ ಮಟ್ಟದಲ್ಲಿ ಮಹತ್ವದ ಚರ್ಚೆ ನಡೆದಿದೆ. ಯಾವುದೇ ಪರೀಕ್ಷೆ ನಡೆದರೂ ಜಾಮರ್ ಕಡ್ಡಾಯ ಮಾಡುವ ಬಗ್ಗೆ ಪ್ಲ್ಯಾನ್‌ ಮಾಡುತ್ತಿದೆ. ಜಾಮರ್ ಅಳವಡಿಕೆ ಸಂಬಂಧ ಜೂನ್ ವಾರದಲ್ಲಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

    ಜಾಮರ್ ಜೊತೆಗೆ ವಿಚಕ್ಷಣಾ ದಳವನ್ನೂ ಹೆಚ್ಚಳ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಸಾಲು ಸಾಲು ಅಕ್ರಮಗಳಿಂದ ಬಿಜೆಪಿ ಸರ್ಕಾರಕ್ಕೆ ಕಪ್ಪುಚುಕ್ಕೆಯಾಗಿದ್ದು, ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಬಿಜೆಪಿ ಹೈಕಮಾಂಡ್ ಕೂಡ ಕೆಂಡಕಾರಿತ್ತು. ಪರೀಕ್ಷಾ ವ್ಯವಸ್ಥೆ ಸುಧಾರಿಸಲು ಮುಂದಾಗುವಂತೆ ಆರ್‌ಎಸ್‌ಎಸ್ ಕೂಡ ತಾಕೀತು ಮಾಡಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ರಣಮಳೆಗೆ ಇಬ್ಬರು ಕಾರ್ಮಿಕರು ಬಲಿ