Tag: ಜಾಮೀನು ಅರ್ಜಿ

  • ರೆಡ್ಡಿ ಜಾಮೀನು ಅರ್ಜಿ – ಬುಧವಾರಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್: ಇಂದಿನ ಕಲಾಪದಲ್ಲಿ ವಾದ ಹೀಗಿತ್ತು

    ರೆಡ್ಡಿ ಜಾಮೀನು ಅರ್ಜಿ – ಬುಧವಾರಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್: ಇಂದಿನ ಕಲಾಪದಲ್ಲಿ ವಾದ ಹೀಗಿತ್ತು

    ಬೆಂಗಳೂರು: ಆಂಬಿಡೆಂಟ್ ವಂಚನೆ ಪ್ರಕರಣದ ಆರೋಪಿ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 1ನೇ ಎಸಿಎಂಎಂ ಕೋರ್ಟ್ ಬುಧವಾರಕ್ಕೆ ಆದೇಶವನ್ನು ಕಾಯ್ದಿರಿಸಿದೆ.

    ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯ ವಿಚಾರಣೆ ಇಂದು 1ನೇ ಎಸಿಎಂಎಂ ಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ನ್ಯಾಯಾಧೀಶರು ಸಿಸಿಬಿ ಅಧಿಕಾರಿಗಳನ್ನು ಹಾಗೂ ಸರ್ಕಾರಿ ಅಭಿಯೋಜಕರ ವಿರುದ್ಧ ಪ್ರಶ್ನೆ ಕೇಳಿದ್ದಾರೆ.

    ವಾದ ಪ್ರತಿವಾದ ಹೇಗಿತ್ತು?:
    ಸೂಕ್ತ ಸಾಕ್ಷಿಗಳಿಗಳಿಲ್ಲದೆ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ. ಅವರು ಯಾವುದೇ ಪ್ರಕರಣದಲ್ಲಿ ಭಾಗಿಯಾಗಿಲ್ಲ. ಹೀಗಿರುವಾಗ ರಿಕವರಿ ಎಲ್ಲಿಂದ ಬರುತ್ತದೆ. ಐದನೇ ಆರೋಪ ಬಳಿ ಮಾತ್ರ ರಿಕವರಿ ಮಾಡಬೇಕು. ಜನಾರ್ದನ ರೆಡ್ಡಿ ಪ್ರಕರಣದಲ್ಲಿ ಆರನೇ ಆರೋಪಿ ಆಗಿದ್ದಾರೆ. ಹೀಗಾಗಿ ಆರೋಪಿ ಜನಾರ್ದನ ರೆಡ್ಡಿಯನ್ನು ನ್ಯಾಯಾಂಗ ಬಂಧನಕ್ಕೆ ಕಳಹಿಸಿ ಎಂದು ಪೊಲೀಸರೇ ನ್ಯಾಯಾಧೀಶರಲ್ಲಿ ಕೇಳಿಕೊಂಡಿದ್ದಾರೆ. ಹೀಗಾಗಿ ವಿಚಾರಣೆ ಮುಗಿದಿದೆ ಎಂದು ಅರ್ಥವಲ್ಲವೇ ಎಂದು ರೆಡ್ಡಿ ಪರ ವಕೀಲ ಹನುಮಂತರಾಯ ಪ್ರಶ್ನಿಸಿ ವಾದಿಸಿದರು.

    ಸರ್ಕಾರಿ ಅಭಿಯೋಜಕರಿಗೆ ಪ್ರಶ್ನಿಸಿದ ನ್ಯಾಯಾಧೀಶ ವೆಂಕಟಗಿರಿ ಅವರು, ಜನಾರ್ದನ ರೆಡ್ಡಿಗೆ ಮತ್ತು ಕಂಪನಿಗೆ ನೇರ ನಂಟು ಇದೆಯಾ? ಹಣವನ್ನು ಜನಾರ್ದನ ರೆಡ್ಡಿಗೆ ಯಾರಾದರೂ ಕೊಟ್ಟಿದ್ದಾರಾ? ನೇರವಾಗಿ ಯಾವುದಾದರೂ ಲಿಂಕ್ ಇದೆಯಾ? ಸುಮ್ಮನೆ ಆರೋಪ ಮಾಡಬೇಕು ಅಂತ ಮಾಡಬೇಡಿ. ನೇರವಾದ ಸಂಬಂಧ ಇರುವುದರ ಬಗ್ಗೆ ಮಾಹಿತಿ ನೀಡಿ. ಮಾಹಿತಿಯೇ ಇಲ್ಲದೆ ಬಂಧನ ಮಾಡಿರುವಿರಿ. ಹಣ ಕಳೆದುಕೊಂಡವರು ಯಾರು ಜನಾರ್ದನ ರೆಡ್ಡಿಗೆ ಕೊಟ್ಟಿದ್ದೇವೆ ಅಂತಾ ದೂರಿದ್ದಾರೆಯೇ ಎಂದು ಪ್ರಶ್ನಿಸಿದರು.

    ಜನಾರ್ದನ ರೆಡ್ಡಿ ವಿರುದ್ಧ ಯಾವುದಾದರು ಒಂದೇ ಒಂದು ದೂರು ಇದ್ದರೆ ತೋರಿಸಿ. ಜಾರಿ ನಿರ್ದೇಶನಾಲಯ(ಇಡಿ) ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇಸ್ ಆಗಿರುವುದು ಇದು. ಅದಕ್ಕೆ ಬೇರೆ ವಿಚಾರಣೆ ಮಾಡಬೇಕಿತ್ತು. ಅದರ ಬದಲು ಚೀಟಿಂಗ್ ಅಂತ ಎಫ್‍ಐಆರ್ ದಾಖಲು ಮಾಡಿರುವಿರಿ. ಎಲ್ಲಿಂದ ಎಲ್ಲಿಗೆ ಸಂಬಂಧ ಎಂದು ಸಿಸಿಬಿ ಅಧಿಕಾರಿಗಳ ತನಿಖಾ ವೈಖರಿಗೆ ನ್ಯಾಯಾಧೀಶರು ತೀವ್ರ ಅಸಮಾಧಾನ ಹೊರ ಹಾಕಿದರು.

    ಜನಾರ್ದನ ರೆಡ್ಡಿ ವಿರುದ್ಧ ಯಾವ ಸಾಕ್ಷಿಗಳನ್ನು ಸಿಸಿಬಿ ಅಧಿಕಾರಿಗಳು ಹಾಜರುಪಡಿಸಿಲ್ಲ. ಕೇವಲ ಹೇಳಿಕೆಗಳ ಆಧಾರದ ಮೇಲೆ ಬಂಧಿಸಿದ್ದಾರೆ. ಇದು ರಾಜಕೀಯ ವೈಷಮ್ಯ ತೋರಿಸುತ್ತದೆ. ಉದ್ದೇಶ ಪೂರ್ವಕವಾಗಿ ಪ್ರಕರಣದಲ್ಲಿ ಶಾಮೀಲು ಮಾಡಲಾಗಿದೆ ವಕೀಲ ಸಿ.ಎಚ್.ಹನುಮಂತ ರಾಯ ವಾದ ಮಂಡಿಸಿದರು.

    ಪ್ರಕರಣದ ವಿಚಾರಣೆ ಬಳಿಕ ನ್ಯಾಯಾಧೀಶ ವೆಂಕಟಗಿರಿ ಅವರು, ಜಾಮೀನು ಅರ್ಜಿ ಆದೇಶವನ್ನು ನಾಳೆಗೆ ಕಾಯ್ದಿರಿಸಿದರು.

    ನಾನು ವ್ಯವಹಾರದ ವಿಚಾರಕ್ಕೆ ಚಿನ್ನ ಪಡೆದಿದ್ದೇನೆ. ಸಾಲದ ರೂಪದಲ್ಲಿ ಪಡೆದುಕೊಂಡಿದ್ದು, ಸದ್ಯದಲ್ಲಿಯೇ ವಾಪಸ್ ಕೊಡುತ್ತೇನೆ ಎಂದು ಆರೋಪಿ ಅಲಿಖಾನ್ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ಮೊಹಮ್ಮದ್ ನಲಪಾಡ್‍ಗೆ ಜಾಮೀನು ಮಂಜೂರು – ಹೈಕೋರ್ಟ್ ನಿಂದ ಷರತ್ತು ಬದ್ಧ ಬೇಲ್

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ಮೊಹಮ್ಮದ್ ನಲಪಾಡ್ ಗೆ ಕೊನೆಗೂ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

    ಇಬ್ಬರ ಶ್ಯೂರಿಟಿಯೊಂದಿಗೆ ಜಾಮೀನು ಮಂಜೂರು ಮಾಡಲಾಗಿದ್ದು, ತನಿಖೆಗೆ ಸಹಕರಿಸಬೇಕು. ಅಲ್ಲದೇ ವಿಚಾರಣೆಗೆ ಕರೆದಾಗಲೆಲ್ಲಾ ಬರಬೇಕು. ಅಧೀನ ನ್ಯಾಯಾಲಯ ನೀಡುವ ಷರತ್ತಿಗೂ ಬದ್ಧವಾಗಿರಬೇಕು ಎಂದು ಹೈಕೋರ್ಟ್ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ಆದೇಶ ನೀಡಿದ್ದಾರೆ.

    ಜಾಮೀನು ಮಂಜೂರು ಮಾಡಿದ ನಂತರದ ಪ್ರಕ್ರಿಯೆಗಳನ್ನು ನಲಪಾಡ್ ವಕೀಲರು ಆರಂಭಿಸಿದ್ದು, ಇಂದು ಸಂಜೆಯೊಳಗೆ ನಲಪಾಡ್ ಜೈಲಿನಿಂದ ಹೊರ ಬರುವ ಸಾಧ್ಯತೆಗಳಿವೆ. ಇತ್ತ ಪರಪ್ಪನ ಅಗ್ರಹಾರದಲ್ಲಿರುವ ನಲಪಾಡ್, ಜಾಮೀನು ಸಿಕ್ಕಿರುವ ಸುದ್ದಿ ತಿಳಿಯುತ್ತಿದ್ದಂತೆ ನಿಟ್ಟುಸಿರು ಬಿಟ್ಟಿದ್ದಾನೆ ಎಂದು ಪಬ್ಲಿಕ್ ಟಿವಿಗೆ ಮೂಲಗಳು ತಿಳಿಸಿವೆ.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಮುಕ್ತಾಯ- ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು

    ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಮುಕ್ತಾಯ- ಇಂದು ನಲಪಾಡ್ ಜಾಮೀನು ಅರ್ಜಿ ತೀರ್ಪು

    ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರೀಸ್ ಪುತ್ರ ನಲಪಾಡ್‍ಗೆ ಜೈಲಾ ಅಥವಾ ಬೇಲಾ ಎಂಬುದು ಇಂದು ತೀರ್ಮಾನವಾಗುತ್ತದೆ.

    ಹೈಕೋರ್ಟ್ ನಲ್ಲಿ ವಾದ-ಪ್ರತಿವಾದ ಇಂದು ಮುಕ್ತಾಯ ಹಂತಕ್ಕೆ ತಲುಪಲಿದೆ. ಎರಡು ಕಡೆಯ ವಾದ-ಪ್ರತಿವಾದ ಆಲಿಸಿ ಹೈಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಹಾಗಾಗಿ ನಲಪಾಡ್‍ನ ಜಾಮೀನು ಅರ್ಜಿಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

    ಚಾರ್ಜ್ ಶೀಟ್ ಸಲ್ಲಿಕೆಯಾಗೋವರೆಗೂ ಕಾದು ನಲಪಾಡ್ ಸೆಷನ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ದನು. ಚಾರ್ಜ್ ಶೀಟ್ ಸಲ್ಲಿಸಿರೋ ಹಿನ್ನೆಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇಲ್ಲ. ಹಾಗಾಗಿ ಜಾಮೀನು ನೀಡಿ ಅಂತ ನಲಪಾಡ್ ಪರ ವಕೀಲ ಬಿ.ವಿ.ಆಚಾರ್ಯರ ಪ್ರಬಲ ವಾದವಾಗಿದೆ .

    ವಿದ್ವತ್- ಹಲ್ಲೆಗೊಳಗಾದ ಯುವಕ.

    ಏನಿದು ಪ್ರಕರಣ?
    ನಗರದ ಫರ್ಜಿ ಕೆಫೆ ಯಲ್ಲಿ ಫೆಬ್ರವರಿ 17ರ ರಾತ್ರಿ ನಡೆದ ಪಾರ್ಟಿ ಆಯೋಜನೆಗೊಂಡಿತ್ತು. ನಗರದ ಶ್ರೀಮಂತ ಮನೆತನದ ಯುವಕ, ಯುವತಿಯರು ಪಾಲ್ಗೊಂಡಿದ್ದ ಕೆಫೆಯಲ್ಲಿ ಗಾಯಗೊಂಡಿದ್ದ ವಿದ್ವತ್ ಕಾಲು ಚಾಚಿ ಕುಳಿತಿದ್ದರು. ಇದನ್ನು ಕಂಡ ನಲಪಾಡ್ ನನ್ನ ಮುಂದೆ ದರ್ಪದಿಂದ ಕಾಲು ಚಾಚಿಕೊಂಡು ಕೂತಿದ್ದೀಯಾ ಎಂದು ವಿದ್ವತ್ ಮೇಲೆ ಜಗಳಕ್ಕೆ ನಿಂತಿದ್ದಾನೆ. ನಂತರ ಕ್ಷಮೆ ಕೇಳುವಂತೆ ಹೇಳಿದ್ದಕ್ಕೆ ವಿದ್ವತ್ ನಿರಾಕರಿಸಿದ್ದಾರೆ. ಇದರಿದ ರೊಚ್ಚಿಗೆದ್ದ ನಲಪಾಡ್ ಮೊದಲು ವಿದ್ವತ್ ಹೊಟ್ಟೆ ಮತ್ತು ಮುಖದ ಭಾಗಕ್ಕೆ ಏಟು ಕೊಟ್ಟಿದ್ದಾನೆ. ನಲಪಾಡ್ ಹೊಡೆದ ಬಳಿಕ ಆತನ ಗ್ಯಾಂಗ್ ನವರು ವಿದ್ವತ್ ಮೇಲೆ ಮನಸೋ ಇಚ್ಚೇ ಹಲ್ಲೆ ನಡೆಸಿದ್ದಾರೆ. ನಂತರ ಚಿಕಿತ್ಸೆಗೆಂದು ವಿದ್ವತ್ ಮಲ್ಯ ಆಸ್ಪತ್ರೆಗೆ ತೆರಳಿದಾಗ ಅಲ್ಲಿಗೂ ಹೋಗಿ ನಲಪಾಡ್ ಮತ್ತು ತಂಡ ಹಲ್ಲೆ ಮಾಡಿತ್ತು.

    ನಲಪಾಡ್ ಮೇಲೆ ಯಾವೆಲ್ಲ ಕೇಸ್ ಹಾಕಲಾಗಿದೆ?
    ಐಪಿಸಿ ಸೆಕ್ಷನ್ 307(ಕೊಲೆ ಯತ್ನ) ಜಾಮೀನು ರಹಿತ ಕೇಸಾಗಿದ್ದು ಉಳಿದ ಸೆಕ್ಷನ್ ಗಳಾದ 341(ಅಕ್ರಮ ಬಂಧನ), 504(ಅವ್ಯಾಚ್ಯ ಶಬ್ಧಗಳಿಂದ ನಿಂದನೆ), 143, 144- 146, 147, 149 (ಅಕ್ರಮ ಗುಂಪುಗಾರಿಕೆ), 326(ಗಂಭೀರ ಗಾಯ), 506 ಬಿ (ಪ್ರಾಣಬೆದರಿಕೆ) ಜಾಮೀನು ಸಿಗುವ ಕೇಸುಗಳಾಗಿವೆ.

  • ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ: ವಾದ, ಪ್ರತಿವಾದ ಹೀಗಿತ್ತು

    ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಹೈಕೋರ್ಟ್ ಗೆ ಸಲ್ಲಿಸಿರುವ ಜಾಮೀನು ಅರ್ಜಿಯ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದೆ.

    ಜಾಮೀನು ಅರ್ಜಿಯ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ಅವರು ನಲಪಾಡ್ ಜಾಮೀನು ನೀಡಬಾರದು ಎಂದು ವಾದ ಮಂಡಿಸಿದರು. ಈ ವೇಳೆ ನ್ಯಾಯಮೂರ್ತಿಗಳ ಮುಂದೇ ವಿಶೇಷ ಅಂಶವನ್ನು ಪ್ರಸ್ತಾಪಿಸಿದ ಅವರು, ಜೀವ ಭಯವಿರುವುದು ಹಲ್ಲೆಗೊಳಗಾದ ವಿದ್ವತ್ ಅವರಿಗೆ ಅಲ್ಲ. ಬದಲಾಗಿ ವಿದ್ವತ್‍ಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಎಂದು ವಾದ ಮಾಡಿದರು.

    ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು, ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ನನ್ನ ನಲಪಾಡ್ ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆದಿದೆ ಎಂದು ವಾದಿಸಿದರು. ಎರಡು ಕಡೆ ವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನ ಸೋಮವಾರಕ್ಕೆ ಮುಂದೂಡಿತು.

    ನಲಪಾಡ್ ಪರ ವಕೀಲ ಸಿ.ವಿ.ನಾಗೇಶ್ ವಾದ ಹೀಗಿತ್ತು:
    ವಿದ್ವತ್ ಆಸ್ಪತ್ರೆಯಲ್ಲಿದ್ದಾಗ ಪ್ರಜ್ಞೆ ತಪ್ಪಿರಲಿಲ್ಲ. ಐಸಿಯು ನಲ್ಲಿ ಚಿಕಿತ್ಸೆ ನೀಡುವ ವೇಳೆಯೂ ಆತ ಚೆನ್ನಾಗಿಯೇ ಮಾತನಾಡುತ್ತಿದ್ದ. ತನಿಖಾಧಿಕಾರಿಗಳಿಗೆ ವಿದ್ವತ್ ಪ್ರಜ್ಞೆ ತಪ್ಪಿದ್ದಾನೆ ಎನ್ನುವ ಸುಳ್ಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಬಾಟಲ್ ನಿಂದ ಹೊಡೆದಿದ್ದಾರೆ ಹೇಳಿದ್ದಾರೆ. ಆದರೆ ಇಲ್ಲಿ ಬಾಟಲ್ ಮಾರಕಾಸ್ತ್ರ ಅಲ್ಲ. ವಿದ್ವತ್ ಚೆನ್ನಾಗಿಯೇ ಇದ್ದರೂ, ತೀವ್ರವಾಗಿ ಹಲ್ಲೆಯಾಗಿದೆ ಎಂದು ಬಿಂಬಿಸಿಕೊಂಡಿದ್ದಾನೆ. ವಿದ್ವತ್ ಡಿಸ್ಚಾರ್ಜ್ ವರದಿಯಲ್ಲಿ ಯಾವುದೇ ರೊಟೀನ್ ಚಿಕಿತ್ಸೆ ನೀಡಿರುವ ಬಗ್ಗೆ ಉಲ್ಲೇಖಿಸಿಲ್ಲ. ಆತನನ್ನು ಸುಮ್ಮನೆ ಆಸ್ಪತ್ರೆಯಲ್ಲಿ ಇಟ್ಟುಕೊಂಡಿದ್ದರು. ವೈದ್ಯರು ಮನೆಗೆ ಹೋಗುವಂತೆ ಸೂಚನೆ ನೀಡಿದ್ದರೂ ವಿದ್ವತ್ ಮನೆಗೆ ಹೋಗಿಲ್ಲ. ಪದೆ ಪದೆ ತಲೆನೋವು, ಎದೆನೋವು ಎಂದು ನಾಟಕ ಮಾಡಿದ್ದಾರೆ. ನಲಪಾಡ್ ತಾನಾಗಿಯೇ ಬಂದು ಕಾನೂನಿಗೆ ತಲೆಬಾಗಿದ್ದಾನೆ. ಬೆದರಿಕೆ ಹಾಕುವ ಉದ್ದೇಶ ಇದ್ದಿದ್ದಾರೆ ನಲಪಾಡ್ ಶರಣಾಗತನಾಗುತ್ತಿರಲಿಲ್ಲ.

    ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ವಾದ ಹೀಗಿತ್ತು:
    ವೈದ್ಯಕೀಯ ದಾಖಲೆಗಳು ನಲಪಾಡ್ ಪರ ವಕೀಲರಿಗೆ ಸಿಕ್ಕಿದ್ದು ಹೇಗೆ? ಇದರಲ್ಲೆ ನಲಪಾಡ್ ಎಷ್ಟು ಪ್ರಭಾವಿ ಆಗಿದ್ದಾನೆ ಎನ್ನುವುದು ತಿಳಿಯುತ್ತದೆ. ವೈದ್ಯರು ನಮಗೆ ಸಹಕಾರ ನೀಡಿಲ್ಲ ಬದಲಾಗಿ ನಲಪಾಡ್ ಪರ ವಕೀಲರಿಗೆ ಸಹಕಾರ ನೀಡಿದ್ದಾರೆ. ವೈದ್ಯಕೀಯ ದಾಖಲೆ ಅರೋಪಿ ಪರ ವಕೀಲರಿಗೆ ಸಿಕ್ಕ ಬಗ್ಗೆ ತನಿಖೆ ಆಗಬೇಕು. ಮಲ್ಯ ಆಸ್ಪತ್ರೆಯ ವೈದ್ಯ ಆನಂದ್ ಮೇಲೆ ಸಾಕಷ್ಟು ಅನುಮಾನ ಇದೆ. ಇದೆ ಅನಂದ್ ಮೊದಲು ಸರ್ಜರಿ ಮಾಡಬೇಕು ಎಂದು ಹೇಳಿದರು. ಈಗ ಸರ್ಜರಿ ಅವಶ್ಯಕತೆ ಇಲ್ಲ ಎಂದು ವರದಿ ನೀಡಿದ್ದಾರೆ. ಇದು ಹೇಗೆ ಸಾಧ್ಯ. ಘಟನೆ ನಡೆದ ದಿನ ಕೊಟ್ಟ ಮೆಡಿಕಲ್ ರಿಪೋರ್ಟ್‍ನಲ್ಲಿ ಎಂಟು ಕಡೆ ಮೂಳೆ ಮುರಿದಿರುವುದಾಗಿ ಹೇಳಿದ್ದರು. ಆದರೆ ಇದೀಗ ಇದಕ್ಕೆ ವಿರುದ್ಧವಾಗಿ ವರದಿ ನೀಡಿದ್ದಾರೆ. ಇಲ್ಲಿ ವಿದ್ವತ್‍ಗೆ ಜೀವ ಬೆದರಿಕೆ ಬದಲು ವೈದ್ಯ ಆನಂದ್‍ಗೆ ಜೀವ ಬೆದರಿಕೆ ಇದೆ. ಹಾಗಾಗಿ ವೈದ್ಯ ಆನಂದ್ ಅವರು ವೈದ್ಯಕೀಯ ರಿಪೋರ್ಟ್ ತಿರುಚಿ ನೀಡಿದ್ದಾರೆ.

    ಘಟನೆ ನಡೆದು ಮಾರನೇ ದಿನವೇ ವಿದ್ವತ್ ವಿರುದ್ಧ ಕೌಂಟರ್ ಕೇಸ್ ದಾಖಲಾಗಿದೆ. ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುವವನ ವಿರುದ್ಧವೇ ಎಫ್‍ಐಆರ್ ದಾಖಲಿಸಲಾಗಿದೆ. ಈ ಬೆಳವಣಿಗೆ ಗಮನಿಸಿದರೆ ಸಮಾಜ ಎತ್ತ ಕಡೆ ಸಾಗುತ್ತಿದೆ ಎಂಬುದು ಗೊತ್ತಾಗಲಿದೆ. ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‍ಗೆ ಸಿಡಿ ನೀಡುತ್ತೇವೆ. ಅದನ್ನು ಒಮ್ಮೆ ನೋಡಿದರೆ ನಲಪಾಡ್ ಎಷ್ಟು ಕ್ರೂರ ಎಂಬುವುದು ತಿಳೀಯುತ್ತದೆ ಎಂದು ತಮ್ಮ ವಾದ ಮಂಡಿಸಿದರು.

    ಎರಡು ಕಡೆಯ ವಾದ ಪ್ರತಿವಾದ ಕೇಳಿದ ನ್ಯಾಯಾಮೂರ್ತಿಗಳು ಕೋರ್ಟ್‍ನ ಸಮಯ ಮುಗಿದಿದ್ದರಿಂದ ಪ್ರಕರಣವನ್ನ ಸೋಮವಾರಕ್ಕೆ ಮುಂದೂಡಿದರು. ಸೋಮವಾರ ವಿಶೇಷ ಅಭಿಯೋಜಕರು ಹಲ್ಲೆಯ ಸಿಸಿಟಿವಿ ದೃಶ್ಯಗಳನ್ನು ಕೋರ್ಟ್ ಗೆ ನೀಡಲಿದ್ದಾರೆ.

  • ಮಾ.2ಕ್ಕೆ ನಲಪಾಡ್ ಜಾಮೀನು ತೀರ್ಪು: ಕೋರ್ಟ್ ಕಲಾಪದಲ್ಲಿ ಇಂದು ವಾದ ಹೀಗಿತ್ತು

    ಮಾ.2ಕ್ಕೆ ನಲಪಾಡ್ ಜಾಮೀನು ತೀರ್ಪು: ಕೋರ್ಟ್ ಕಲಾಪದಲ್ಲಿ ಇಂದು ವಾದ ಹೀಗಿತ್ತು

    ಬೆಂಗಳೂರು: ವಿದ್ವತ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಲಪಾಡ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಮುಗಿದಿದ್ದು 63ನೇ ಸಿವಿಲ್ ನ್ಯಾಯಾಲಯ ಮಾರ್ಚ್ 2ಕ್ಕೆ ತೀರ್ಪು ಕಾಯ್ದಿರಿಸಿದೆ.

    ಇಂದು ಆರೋಪಿಗಳ ಪರ ವಾದ ಮಡಿಸಿದ ಹಿರಿಯ ವಕೀಲ ಬಾಲನ್ ಅವರು, ನಮ್ಮ ಕಕ್ಷೀದಾರರದ ಅರುಣ್ ಬಾಬು ಮತ್ತು ಇತರರ ಮೇಲೆ ಹಾಕಿರುವ ಎಲ್ಲಾ ಕೇಸ್‍ಗಳು ಒತ್ತಡ ಪೂರಿತವಾಗಿದೆ. ಹೀಗಾಗಿ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಬೇಕು ಎಂದು ವಾದ ಮಂಡಿಸಿದರು.

    ವಕೀಲ ಬಾಲನ್ ಅವರ ವಾದ: ಆರೋಪಿಗಳು ನಲಪಾಡ್‍ಗೆ ಪರಿಚಯಸ್ಥರು ಅನ್ನುವ ಕಾರಣಕ್ಕೆ ಇವರನ್ನು ಬಂಧಿಸಲಾಗಿದೆ. ರೆಸ್ಟೋರೆಂಟ್‍ನ ಯಾವುದೇ ಸಿಬ್ಬಂದಿ ಆರೋಪಿಗಳ ಹೆಸರು ಹೇಳಿಲ್ಲ. ಅರುಣ್ ಬಾಬು ಒಬ್ಬ ಮುಗ್ಧ ಹುಡುಗ. ವಿದ್ವತ್ ಕಾಲು ಮುರಿದಿತ್ತು ಎಂದು ಹೇಳಿದ್ದಾರೆ. ಏಕೆ ವಿದ್ವತ್ ಕಾಲ ಮುರಿದಿದೆ ಎಂದು ಕೋರ್ಟ್ ಗೆ ತಿಳಿಸಿಲ್ಲ. ವಿದ್ವತ್ ಚೆನ್ನಾಗಿಯೇ ಇದ್ದಾನೆ. ವೈದ್ಯರು ಆತನ ಆರೋಗ್ಯದ ಮಾಹಿತಿಯನ್ನ ಮುಚ್ಚಿಡುತ್ತಿದ್ದಾರೆ. ಹತ್ತರಿಂದ ಹದಿನೈದು ಜನ ಹೊಡೆದಿದ್ದಾರೆ ಎಂದು ಹೇಳುತ್ತಾರೆ. ಆದರೆ ಹೊಡೆದ ಆ ಹತ್ತರಿಂದ ಹದಿನೈದು ಜನ ಯಾರು ಎಂದು ಪ್ರಶ್ನಿಸಿದರು.

    ಯುಬಿಸಿಟಿಯ ಸಿಸಿಟಿವಿ ದೃಶ್ಯ ಮಾತ್ರ ವಶಕ್ಕೆ ತೆಗೆದುಕೊಂಡಿದ್ದಾರೆ. ಪೊಲೀಸರು ಎರಡು ಎಫ್‍ಐಆರ್ ದಾಖಲಿಸಿದ್ದಾರೆ. ಎರಡು ಎಫ್‍ಐಆರ್ ದಾಖಲು ಮಾಡಿದ್ದು ಯಾಕೆ? ವಿದ್ವತ್ ನೀಡಿದ ದೂರಿನ ತನಿಖೆ ನಡೆಯುತ್ತಿದೆ. ಆದರೆ ಅರುಣ್ ಬಾಬು ನೀಡಿರುವ ದೂರಿನ ತನಿಖೆ ಮಾತ್ರ ನಡೆಯುತ್ತಿಲ್ಲ. ಇಲ್ಲಿ ಒಂದೇ ಪ್ರಕರಣಕ್ಕೆ ಹೆಚ್ಚು ಮಹತ್ವ ನೀಡಿರುವುದು ಸ್ಪಷ್ಟವಾಗಿ ಕಂಡು ಬಂದಿದೆ ಎಂದು ವಾದಿಸಿದರು.

    ಹಿರಿಯ ವಕೀಲ ಟಾಮಿ ಸೆಬಾಸ್ಟಿನ್ ವಾದ: ವಿಶೇಷ ಅಭಿಯೋಜಕರಾಗಿರುವ ಶ್ಯಾಮ್ ಸುಂದರ್ ಗೆ ಜೀವ ಬೆದರಿಕೆ ಹಾಕುವಂತ ಕೇಸ್ ಅಲ್ಲ. ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದು ಪೊಲೀಸರ ತನಿಖೆಗೆ ಲಭ್ಯರಾಗಿದ್ದಾರೆ. ಹೀಗಾಗಿ ಷರತ್ತುಬದ್ಧ ಜಾಮೀನು ನೀಡಬೇಕು. ಇದು ಜಾಮೀನು ನಿರಾಕರಿಸುವಂತಹ ಪ್ರಕರಣವೇ ಅಲ್ಲ ಎಂದರು.

    ವಿಶೇಷ ಅಭಿಯೋಜಕ ಶ್ಯಾಮ್ ಸುಂದರ್ ವಾದ: ಕಬ್ಬನ್ ಪಾರ್ಕ್ ಪೋಲೀಸರು ಹಲ್ಲೆ ಮಾಡಿದವನ ರಕ್ಷಣೆ ನಿಂತಿದ್ದರು. ಹೊಡೆತ ತಿಂದವನ ಹೇಳಿಕೆ ಪಡೆಯುವುದನ್ನ ಬಿಟ್ಟು ಆತ ಕುಡಿದಿದ್ದಾನೋ ಇಲ್ಲವೋ ಎನ್ನುವುದನ್ನು ಪರೀಕ್ಷೆ ಮಾಡಲು ಹೇಳುತ್ತಾರೆ. ಇದು ಆರೋಪಿಗಳ ರಕ್ಷಣೆ ಮಾಡುವ ಉದ್ದೇಶವಲ್ಲ ಅಲ್ಲವೇ? ವಿದ್ವತ್ ಮೇಲೆ ದೂರು ದುರುದ್ದೇಶದಿಂದ ನೀಡಿದ್ದಾರೆ. ವಿದ್ವತ್ ಕುಡಿದಿದ್ದ ಎಂದು ದೂರಿನಲ್ಲಿ ಇದೆ. ಆದರೆ ಮಲ್ಯ ವೈದ್ಯಕೀಯ ದಾಖಲೆಗಳು ವಿದ್ವತ್ ಕುಡಿದಿಲ್ಲ ಎಂದು ತಿಳಿಸಿದ್ದಾರೆ. ಆರೋಪಿಯು ನಾನು ಕಿಂಗ್ ನಲಪಾಡ್ ನನ್ನ ವಿರುದ್ಧ ಯಾರು ಮಾತನಾಡೋ ಹಾಗೆ ಇಲ್ಲ. ಮಾತಾಡಿದ್ರೆ ಅವರ ಕಥೆ ಮುಗಿಸುತ್ತೇನೆ ಎನ್ನುವ ಉದ್ದೇಶವನ್ನು ಇಟ್ಟುಕೊಂಡಿದ್ದ. ಇಲ್ಲಿ ಇದ್ದದ್ದು ಇದೆ ಪ್ರೇರಣೆ. ಹೀಗಾಗಿ 307 ಸೆಕ್ಷನ್(ಕೊಲೆ ಯತ್ನ) ಹಾಕಲಾಗಿದೆ ಎಂದು ವಾದಿಸಿದರು.

  • ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ನಲಪಾಡ್‍ಗೆ ಜೈಲೇ ಗತಿ: ಆರೋಪಿಯ ಪರ ವಕೀಲರ ವಾದ ಏನಿತ್ತು? ಕೋರ್ಟ್ ಕಲಾಪದ ಡಿಟೇಲ್ ಇಲ್ಲಿದೆ

    ಬೆಂಗಳೂರು: ಬೆಂಗಳೂರಿನ ಯುಬಿ ಸಿಟಿಯ `ಫರ್ಜಿ ಕೆಫೆ’ಯಲ್ಲಿ ವಿದ್ವತ್ ಮೇಲಿನ ಮಾರಣಾಂತಿಕ ಹಲ್ಲೆ ಮಾಡಿ ಮಲ್ಯ ಆಸ್ಪತ್ರೆಯಲ್ಲೂ ಧಮ್ಕಿ ಹಾಕಿದ್ದ ಶಾಸಕ ಹ್ಯಾರಿಸ್ ಮಗ ನಲಪಾಡ್ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.

    ಇಂದು ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭಿಸಿದ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ವಾದ-ಪ್ರತಿವಾದಗಳು ಕಾವೇರಿದ ರೀತಿಯಲ್ಲಿ ನಡೆಯಿತು. ಈ ಕುರಿತು ನಾಳೆಯೂ ವಾದ ಮುಂದುವರಿಯಲಿದೆ. ಆರೋಪಿಗಳ ಪರ ಟಾಮಿ ಸೆಬಾಸ್ಟಿನ್ ಮತ್ತು ಬಾಲನ್ ವಾದ ಮಂಡಿಸಿದರು. ವಿಶೇಷ ಅಭಿಯೋಜಕರಾಗಿ ಶ್ಯಾಮ್ ಸುಂದರ್ ಪ್ರತಿವಾದ ಮಂಡಿಸಿದರು.

    ವಿದ್ವತ್ ಪರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ ಶ್ಯಾಮ್ ಸುಂದರ್ ಅವರಿಗೆ ವಿದ್ವತ್ ಅವರ ಆರೋಗ್ಯದ ಕುರಿತ ಮತ್ತಷ್ಟು ವೈದ್ಯಕೀಯ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನ್ಯಾಯಾಧೀಶರು ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿದರು.

    ನಲಪಾಡ್ ಪರ ವಕೀಲರ ವಾದವೇನು?
    ವಿದ್ವತ್ ಕೊಲೆ ಮಾಡುವ ಉದ್ದೇಶ ಯಾರಿಗೂ ಇರಲಿಲ್ಲ. ಕೊಲೆ ಉದ್ದೇಶ ಇದ್ದಿದ್ದರೆ ಆಯುಧ ಇಟ್ಟುಕೊಳ್ಳುತ್ತಿದ್ದರು. ಐಸ್‍ಕ್ಯೂಬ್ ತಲೆ ಮೇಲೆ ಎಸೆದಿದ್ದರಿಂದ ಗಾಯಗಳಾಗಿವೆ. ಬಿಯರ್ ಬಾಟಲ್ ಬಿಸಾಡಿದ್ದಾರೆ. ತಲೆಗೆ ಬೀಸಿರುವ ಮಾಹಿತಿ ಇಲ್ಲ. ಇದು ರಾಜಕೀಯ ದುರುದ್ದೇಶ ಪೂರಿತವಾಗಿರುವ ಘಟನೆಯಾಗಿದ್ದು, ಘಟನೆ ನಡೆದ ಹಲವು ಗಂಟೆಗಳ ನಂತರ ಸೆಕ್ಷನ್ 307 ಸೇರಿಸಲಾಗಿದೆ. ವಿದ್ವತ್ ಈಗಾಗಲೇ ಶೇ. 90 ರಷ್ಟು ಚೇತರಿಸಿಕೊಂಡಿದ್ದಾರೆ ಎಂದು ವಾದಿಸಿದರು.

    ವಿದ್ವತ್ ಹೇಳಿಕೆ ಪಡೆಯಲು ಉದ್ದೇಶ ಪೂರ್ವಕವಾಗಿ ಪೊಲೀಸರು ವಿಳಂಬ ಮಾಡುತ್ತಿದ್ದಾರೆ. ಕಾಲು ಮುರಿದಿದ್ದರಿಂದ ಎಸ್ಕಲೇಟರ್ ಮೇಲೆ ಬಿದ್ದು ವಿದ್ವತ್ ಒದ್ಡಾಡಿದ್ದಾರೆ. ವಿದ್ವತ್ ನೋಡುವುದಕ್ಕೆ ಮತ್ತೆ ಆಸ್ಪತ್ರೆಗೆ ನಲಪಾಡ್ ಹೋಗಿದ್ದ. ಈ ಕೇಸ್‍ಗೆ ವಿಶೇಷ ಅಭಿಯೋಜಕರ ನೇಮಕ ಮಾಡುವ ಉದ್ದೇಶ ಏನಿತ್ತು ಎಂದು ಪ್ರಶ್ನಿಸಿದರು.

    ಪ್ರಕರಣದಲ್ಲಿ ಅನಾವಶ್ಯಕ ಒತ್ತಡ ತರಲು 3ನೇ ವ್ಯಕ್ತಿಯಿಂದಲೂ ಅರ್ಜಿ ಸಲ್ಲಿಸಲಾಗಿದೆ. ಮೊಹಮ್ಮದ್ ನಲಪಾಡ್‍ಗಿಂತ ವಿದ್ವತ್ ಪ್ರಭಾವಿ ವ್ಯಕ್ತಿಯಾಗಿದ್ದು, ಘಟನೆ ನಂತರ ರಾಜಕೀಯ ವ್ಯಕ್ತಿಗಳು ಪ್ರತಿನಿತ್ಯ ಭೇಟಿಯಾಗುತ್ತಿದ್ದಾರೆ. ಹ್ಯಾರಿಸ್‍ರನ್ನು ರಾಜಕೀಯವಾಗಿ ಮುಗಿಸಲು ಮಗನನ್ನು ಬಳಸಿಕೊಳ್ಳಲಾಗಿದೆ ಎಂದು ವಾದಿಸಿದರು.

    ವಿಶೇಷ ಅಭಿಯೋಜಕರ ವಾದವೇನು?
    ವಿದ್ವತ್ ಮೇಲೆ ಉದ್ದೇಶಪೂರ್ವಕವಾಗಿ ಆರೋಪಿಗಳು ಹಲ್ಲೆ ಮಾಡಿದ್ದಾರೆ. ಕಾಲು ತಾಕಿದ್ದಕ್ಕೆ ವಿದ್ವತ್‍ಗೆ ಅವಾಜ್ ಹಾಕಿ ಹೊಡೆದಿದ್ದಾರೆ. ಅಲ್ಲದೇ ವಿದ್ವತ್ ರನ್ನು ಮೆಟ್ಟಿಲುಗಳ ಮೇಲೆ ಎಳೆದು ತಂದು ಆರೋಪಿಗಳು ಹೊಡೆದಿದ್ದಾರೆ. ಮೆಟ್ಟಿಲುಗಳ ಮೇಲೆ ಎಳೆದು ತಂದು ಹೊಡೆಯೋದು ದುರುದ್ದೇಶ ಅಲ್ವಾ? ವಿದ್ವತ್ ಮರ್ಮಾಂಗಕ್ಕೂ ಗಾಯವಾಗುವ ರೀತಿ ಹೊಡೆದಿದ್ದಾರೆ. ನಲಪಾಡ್ ಅಂಡ್ ಗ್ಯಾಂಗ್ ಹೊಡೆಯುತ್ತಿದ್ದರೂ ಬೌನ್ಸರ್‍ಗಳು ಸುಮ್ಮನಿದ್ದಾರೆ. `ಲೈಫ್ ಆಫ್ ಪೈ’ ಎಂಬ ಮೂವಿ ಹೀರೋ ತರಹ ವಿದ್ವತ್ ಸ್ಥಿತಿ ಆಗಿದೆ ಎಂದು ಶ್ಯಾಮ್ ಸುಂದರು ವಿವರಿಸಿದರು.

    ವಿದ್ವತ್ ಮೇಲಿನ ದಾಳಿಗೂ ಮುನ್ನ ಆತನ ಇದ್ದ ಆತನ ಮುಖವನ್ನು ಮತ್ತೆ ಅದೇ ರೀತಿ ನೋಡಲು ಸಾಧ್ಯವಿಲ್ಲ. ಕೊಲೆಯ ಉದ್ದೇಶದಿಂದಲೇ ಆಸ್ಪತ್ರೆವರೆಗೂ ಹಿಂಬಾಲಿಸಿದ್ದಾರೆ. ಇದು ಕೇವಲ 326 ಗಾಯದ ಪ್ರಕರಣವಲ್ಲ ಕೊಲೆ ಯತ್ನದ ಕೇಸ್. ನಲಪಾಡ್ ಗೆ ಜಾಮೀನು ನೀಡಿದರೆ ಸಾಕ್ಷಿಗಳನ್ನು ನಾಶ ಪಡಿಸುತ್ತಾನೆ. ಯಾರು ಏನಾದ್ರೂ ಮಾಡಬಹುದು ಅಂದುಕೊಂಡವರಿಗೆ ಪಾಠ ಆಗಬೇಕು. ಇದು ನಿರ್ಭಯಾ ಕೇಸ್‍ಗಿಂತಲೂ ಅತ್ಯಂತ ಕ್ರೂರವಾದ ಪ್ರಕರಣ ಎಂದು ವಾದಿಸಿ ಜಾಮೀನು ನೀಡದಂತೆ ಮನವಿ ಮಾಡಿದರು. ಇದನ್ನೂ ಓದಿ: ವಿದ್ವತ್ ಮೇಲೆ ನಲಪಾಡ್ ಹಲ್ಲೆ ಪ್ರಕರಣ- ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಮುಂದಾಗಿದ್ದ ಯುಬಿ ಸಿಟಿ ಸಿಬ್ಬಂದಿ

    https://www.youtube.com/watch?v=J5bj1Z0hrYI

    https://www.youtube.com/watch?v=QktQtDhVSJ4

    https://www.youtube.com/watch?v=CPdusTXs0QU

    https://www.youtube.com/watch?v=WI5DOng9vAY

  • ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಅಪ್ಪನ ಕೋಟೆಯಲ್ಲಿ ಮೆರೆದವ ಕೊನೆಗೂ ಜೈಲುಪಾಲು: ಎರಡು ಕೋರ್ಟ್ ಕಲಾಪ ಹೀಗಿತ್ತು

    ಬೆಂಗಳೂರು: ಫರ್ಜಿ ಕೆಫೆಯಲ್ಲಿ ಅಟ್ಟಹಾಸ ಮೆರೆದಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಕೊನೆಗೂ ಜೈಲು ಸೇರಿದ್ದಾನೆ. ಕಳೆದೆರಡು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ನಲಪಾಡ್ ಮತ್ತು ಆತನ 6 ಸಹಚರರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಿ ಬೆಂಗಳೂರಿನ 8ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

    ನ್ಯಾಯಾಧೀಶ ಮಹೇಶ್ ಬಾಬು ಈ ಆದೇಶ ಹೊರಡಿಸುತ್ತಲೇ ಕಟಕಟೆಯಲ್ಲಿ ನಿಂತಿದ್ದ ನಲಪಾಡ್ ಗಳಗಳನೆ ಕಣ್ಣೀರಿಟ್ಟದ್ದಾನೆ. ಆದೇಶ ಹೊರಬಿದ್ದ ಕೂಡಲೇ ನಲಪಾಡ್ ಹಾಗೂ ಆತನ ಸಹಚರರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋದರು. ನ್ಯಾಯಾಲಯದ ಆದೇಶದಂತೆ ನಲಪಾಡ್ ಹಾಗೂ ಆತನ ಸ್ನೇಹಿತರು ಮಾರ್ಚ್ 7 ರವರೆಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಲಿದ್ದಾರೆ. ಇದನ್ನೂ ಓದಿ: ನನ್ನ ಸೋದರನಿಗೆ ನೋವಾದ್ರೆ, ನನಗೂ ನೋವಾಗುತ್ತೆ- ವಿದ್ವತ್‍ಗೆ ನ್ಯಾಯ ದೊರಕಬೇಕೆಂದು ಒತ್ತಾಯಿಸಿದ ಗುರು ರಾಜ್‍ಕುಮಾರ್

    ನಲಪಾಡ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಸಿಟಿ ಸಿವಿಲ್ ಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ. ಮಧ್ಯಂತರ ಅರ್ಜಿ ನಾಳೆ ವಿಚಾರಣೆಗೆ ಬರಲಿದೆ. ನಲಪಾಡ್ ಪ್ರಕರಣ ಸಂಬಂಧ ಶ್ಯಾಂ ಸುಂದರ್ ರನ್ನು ವಿಶೇಷ ಅಭಿಯೋಜಕರನ್ನಾಗಿ ನೇಮಿಸುವಂತೆ ವಿದ್ವತ್ ತಂದೆ ಲೋಕನಾಥ್ ರಾಜ್ಯ ಗೃಹ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಇಷ್ಟೆಲ್ಲಾ ಆದರೂ ಶಾಸಕ ಎನ್‍ಎ ಹ್ಯಾರೀಸ್ ಮಗನನ್ನು ನೋಡಲು ಭೇಟಿ ನೀಡಿಲ್ಲ. ಇದನ್ನೂ ಓದಿ: ಫರ್ಜಿ ಕೆಫೆಯಲ್ಲಿ ನಲಪಾಡ್ ಗುಂಡಾಗಿರಿ ಪ್ರಕರಣಕ್ಕೆ ಮೆಗಾ ಟ್ವಿಸ್ಟ್

    8ನೇ ಎಸಿಎಂಎಂ ನ್ಯಾಯಾಯದಲ್ಲಿ ಕಲಾಪ ಹೀಗಿತ್ತು:
    ನಗರದ 8ನೇ ಎಸಿಎಂಎಂ ನ್ಯಾಯಾಲಯದ ನ್ಯಾ. ಮಹೇಶ್ ಬಾಬು ಅವರ ಸಮ್ಮುಖದಲ್ಲಿ ಪ್ರಕರಣದ ವಿಚಾರಣೆ ನಡೆಯಿತು. ಸರ್ಕಾರದ ಪರ ವಕೀಲರು ಹಾಗೂ ಆರೋಪಿ ನಲಪಾಡ್ ಪರ ವಕೀಲರು ನ್ಯಾಯಮೂರ್ತಿಗಳ ಮುಂದೇ ತಮ್ಮ ವಾದ ಮಂಡಿಸಿದರು.

    ಕೋರ್ಟ್‍ನಲ್ಲಿದ್ದ ವಕೀಲರು – ಕೋರ್ಟ್ ಹಾಲ್‍ನಲ್ಲಿ ಬರೀ ಗೂಂಡಾಗಳೇ ತುಂಬಿದ್ದಾರೆ. ಪೊಲೀಸರಿಗೆ ಕೂಡಲೇ ಎಲ್ಲರನ್ನೂ ಹೊರಗೆ ಕಳುಹಿಸಲು ಸೂಚಿಸಿ ಎಂದರು. ವಕೀಲರ ಮನವಿಯಂತೆ ಕೋರ್ಟ್ ಹಾಲ್ ನಿಂದ ಆರೋಪಿಗಳನ್ನು ಹೊರತು ಪಡಿಸಿ ಎಲ್ಲರನ್ನೂ ಹೊರಗೆ ಕಳುಹಿಸಿದರು.

    ಸರ್ಕಾರಿ ಪರ ವಕೀಲರು – ಕೇಸ್ ಇನ್ನೂ ಪ್ರಾಥಮಿಕ ವಿಚಾರಣೆ ಹಂತದಲ್ಲಿದೆ. ಹಲ್ಲೆಗೊಳಗಾದ ವ್ಯಕ್ತಿಯ ಮೂಳೆಗಳು ಮುರಿದಿವೆ. ಇದು ಸಿಸಿಟಿವಿಯ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಆರೋಪಿಗಳು ಆಸ್ಪತ್ರೆಗೂ ತೆರಳಿ ಹಲ್ಲೆಗೆ ಯತ್ನಿಸಿದ್ದಾರೆ. ಜಾಮೀನು ಮಂಜೂರು ಮಾಡಬೇಡಿ.

    ನ್ಯಾಯಾಧೀಶರು – ಇನ್ನೂ ಹೇಳುವುದು ಏನಾದರೂ ಇದೆಯಾ ?
    ಸರ್ಕಾರಿ ಪರ ವಕೀಲರು – ನಲಪಾಡ್ ಅಂಡ್ ಗ್ಯಾಂಗ್ ಸುಖಾಸುಮ್ಮನೆ ಹಲ್ಲೆ ಮಾಡಿಲ್ಲ. ವಿದ್ವತ್‍ರನ್ನು ಪ್ರಚೋದನೆ ಮಾಡಿ ಹಲ್ಲೆ ಮಾಡಿದ್ದಾರೆ. ಆಸ್ಪತ್ರೆಗೂ ನುಗ್ಗಿ ಹಲ್ಲೆ ಮಾಡಿದ್ದಾರೆ. ಆರೋಪಿಗಳು ಕೂಡ ಕೊಲೆ ಮಾಡಲು ಹೋಗಿದ್ದಾಗಿ ಒಪ್ಪಿಕೊಂಡಿದ್ದಾರೆ.

    ಸರ್ಕಾರಿ ಪರ ವಕೀಲರು – ವಿದ್ವತ್ ಮಾತನಾಡುವ ಸ್ಥಿತಿಯಲ್ಲಿ ಇಲ್ಲ. ನಮಗೆ ಆಕ್ಷೇಪಣೆ ಸಲ್ಲಿಸಲು ನಾಳೆಯವರೆಗೂ ಅವಕಾಶ ನೀಡಿ.

    ನ್ಯಾಯಾಧಿಶರು – ಓಕೆ.. ಆಕ್ಷೇಪಣೆ ಸಲ್ಲಸಲು ನಿಮಗೆ ನಾಳೆಯವರೆಗೆ ಕಾಲಾವಕಾಶ ನೀಡುತ್ತಿದ್ದೇವೆ.
    ನ್ಯಾಯಾಧೀಶರು – ನಲಪಾಡ್ ಮತ್ತು ಇತರೆ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗುತ್ತಿದೆ. ಇದನ್ನೂ ಓದಿ: ಶಾಂತಿನಗರದ ಪ್ರಿನ್ಸ್ ರೌಡಿ ನಲಪಾಡ್ ಈಗ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್!

    ಸಿಟಿ ಸಿವಿಲ್ ಕೋರ್ಟ್ ಕಲಾಪ ಹೀಗಿತ್ತು:
    ನಲಪಾಡ್ ಪರ ವಕೀಲರು ಸಲ್ಲಿಸಿದ್ದ ಜಾಮಿನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಕೋರ್ಟ್ ನಲ್ಲಿ ನಡೆಯಿತು. ಈ ವೇಳೆ ನ್ಯಾಯಾಲಯದಲ್ಲಿ ವಿದ್ವತ್ ತಂದೆ ಸಹ ಹಾಜರಿದ್ದರು.

    ಉದ್ಯಮಿ ಅಲಂಪಾಶಾ ಪರ ವಕೀಲ – ಆಡಳಿತಾರೂಢ ಪಕ್ಷದ ಶಾಸಕರ ಪುತ್ರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸರ್ಕಾರ ಪರ ಇದ್ದಾರೆ. ವಾದ ಮಂಡಿಸುತ್ತಿರುವ ವಕೀಲರು ಸರ್ಕಾರ ಪರ ಇದ್ದಾರೆ. ಹೀಗಾಗಿ ಜನಸಾಮಾನ್ಯರ ಪರವಾಗಿ ನಮ್ಮ ವಾದ ಮಂಡಿಸಲು ಅವಕಾಶ ನೀಡಿ.

    ನ್ಯಾಯಾಧೀಶರು – ಜಾಮೀನು ಅರ್ಜಿಯಲ್ಲಿ ಸೆಕ್ಷನ್ 307 ಉಲ್ಲೇಖವಿಲ್ಲ. ಅರ್ಜಿ ತಿದ್ದುಪಡಿ ಮಾಡಿ.
    ನಲಪಾಡ್ ಪರ ವಕೀಲ– ಅರ್ಜಿ ತಿದ್ದುಪಡಿ ಮಾಡಿ 307 ಸೆಕ್ಷನ್ ಸೇರಿಸಿ ನಂತರ ತಿದ್ದುಪಡಿ ಪತ್ರ ಸಲ್ಲಿಸಿದರು.

    ವಿದ್ವತ್ ತಂದೆ – ನಲಪಾಡ್ ಜಾಮೀನು ಅರ್ಜಿ ವೇಳೆ ನನ್ನ ವಾದವನ್ನು ಸಹ ಪರಿಗಣಿಸಿ ಎಂದು ಕೋರ್ಟ್‍ಗೆ ಅರ್ಜಿ ಸಲ್ಲಿಸಿದರು.
    ನ್ಯಾಯಾಧೀಶರು – ಅಲಂಪಾಶಾ, ವಿದ್ವತ್ ತಂದೆಯ ಅರ್ಜಿಯನ್ನು ವಿಚಾರಣೆ ವೇಳೆ ಪರಿಗಣಿಸಬೇಕೋ, ಅಥವಾ ಬೇಡವೋ ಎಂಬ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳಲಾಗುವುದು. ಶುಕ್ರವಾರ ಜಾಮೀನು ಅರ್ಜಿ ಕೈಗೆತ್ತಿಕೊಳ್ಳಲಾಗುವುದು. ಇದನ್ನೂ ಓದಿ: ಖಾಸಗಿ ವಿಮಾನ ಖರೀದಿಸಲು ಮುಂದಾಗಿದ್ದ ರೌಡಿ ನಲಪಾಡ್!

    https://www.youtube.com/watch?v=p8o_3v5-ZYs

    https://www.youtube.com/watch?v=XE5CFfnOvx0

    https://www.youtube.com/watch?v=RtMFKdQtfME

     

  • ಜನಾರ್ದನ ರೆಡ್ಡಿ ರಾಜಕೀಯ ರೀಎಂಟ್ರಿಗೆ ಹಿನ್ನಡೆ – ಬಳ್ಳಾರಿಗೆ ಭೇಟಿ ನೀಡುವಂತಿಲ್ಲ

    ಬೆಂಗಳೂರು: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ರಾಜಕೀಯ ಮರುಪ್ರವೇಶಕ್ಕೆ ಹಿನ್ನಡೆಯಾಗಿದೆ. ಬಳ್ಳಾರಿಯಿಂದ ಮತ್ತೆ ರಾಜಕೀಯ ಜೀವದಾನ ಪಡೆಯುವ ಗಣಿಧಣಿಯ ಕನಸಿಗೆ ಕಲ್ಲು ಬಿದ್ದಂತಾಗಿದೆ.

    ರೆಡ್ಡಿ ಜಾಮೀನು ಮಾರ್ಪಾಡಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಈ ಹಿಂದಿನ ಷರತ್ತು ಬದಲಾವಣೆಗೆ ಒಪ್ಪದ ಸುಪ್ರೀಂ ಕೋರ್ಟ್, ಬಳ್ಳಾರಿಗೆ ಹೋಗದಂತೆ ವಿಧಿಸಿದ್ದ ಷರತ್ತಿನಲ್ಲಿ ಸಡಿಲಿಕೆ ಇಲ್ಲ ಎಂದು ಹೇಳಿದೆ. ಷರತ್ತಿನ ಪ್ರಕಾರ ಆಂಧ್ರದ ಕರ್ನೂಲು, ಅನಂತಪುರಂಗೂ ರೆಡ್ಡಿ ಭೇಟಿ ನೀಡುವಂತಿಲ್ಲ.

    ಈ ಹಿಂದೆ ವಿಧಿಸಿದ್ದ ಷರತ್ತುಗಳ ಮಾರ್ಪಾಡಿಗೆ ಸುಪ್ರೀಂ ನಕಾರ ವ್ಯಕ್ತಪಡಿಸಿದ್ದು, ಮೊದಲು ಚಾರ್ಜ್‍ಶೀಟ್ ಸಲ್ಲಿಕೆಯಾಗಲಿ. ಬಳಿಕವಷ್ಟೆ ಜಾಮೀನು ಮಾರ್ಪಾಡು ಬಗ್ಗೆ ತೀರ್ಮಾನ ಎಂದು ಹೇಳಿದೆ.

    ಅಸೆಂಬ್ಲಿ ಎಲೆಕ್ಷನ್ ಗೆ 3 ತಿಂಗಳಷ್ಟೇ ಉಳಿದಿರುವ ಹಿನ್ನೆಲೆಯಲ್ಲಿ ಷರತ್ತು ಸಡಿಲಿಕೆ ಕೋರಿ ಜನಾರ್ದನ ರೆಡ್ಡಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಮಗಳ ಮದುವೆಗಾಗಿ ಜರ್ನಾದನ ರೆಡ್ಡಿ ಬಳ್ಳಾರಿಗೆ ಹೋಗಲು ಸುಪ್ರೀಂ ಕೋರ್ಟ್ ಈ ಹಿಂದೆ ಅನುಮತಿ ನೀಡಿತ್ತು.