Tag: ಜಾರ್ಜ್ ಫರ್ನಾಂಡಿಸ್

  • ಕೋಕಾ ಕೋಲಾ ಕುಡಿಯುವುದನ್ನು ಬಿಟ್ಟ ಕತೆ ಹೇಳಿದ ಸಿದ್ದರಾಮಯ್ಯ

    ಕೋಕಾ ಕೋಲಾ ಕುಡಿಯುವುದನ್ನು ಬಿಟ್ಟ ಕತೆ ಹೇಳಿದ ಸಿದ್ದರಾಮಯ್ಯ

    ಬೆಂಗಳೂರು: ಕೇಂದ್ರ ಮಾಜಿ ಸಚಿವ ದಿವಂಗತ ಜಾರ್ಜ್ ಫರ್ನಾಂಡಿಸ್ ಗೌರವಾರ್ಥ ಶಾಸಕರ ಭವನದಲ್ಲಿ ನುಡಿ ನಮನ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಾವು ಕೋಕಾ ಕೋಲಾ ಕುಡಿಯುವುದನ್ನು ಬಿಟ್ಟ ಕತೆ ಹೇಳಿದರು.

    ನಾನು ಮೈಸೂರಿನಲ್ಲಿ ಕಾನೂನು ಓದುತ್ತಿದ್ದಾಗ ಜಾರ್ಜ್ ಫರ್ನಾಂಡಿಸ್ ಅವರ ಪರಿಚಯವಾಯಿತು. ಜಾರ್ಜ್ ಫರ್ನಾಂಡಿಸ್ ಅವರ ನೇತೃತ್ವದಲ್ಲಿ ನಡೆದ ಅನೇಕ ಹೋರಾಟಗಳಲ್ಲಿ ನಾನು ಕೂಡ ಪಾಲ್ಗೊಂಡಿದ್ದೇನೆ. ಹೋರಾಟಗಳ ಮೂಲಕವೇ ಜಾರ್ಜ್ ರಾಷ್ಟ್ರೀಯ ನಾಯಕರಾಗಿ ಬೆಳೆದರು ಎಂದು ಸಿದ್ದರಾಮಯ್ಯ ಹೇಳಿದರು.

    ಕೋಕಾ ಕೋಲಾ ವಿರುದ್ಧ ಜಾರ್ಜ್ ಫರ್ನಾಂಡಿಸ್ ಬೃಹತ್ ಹೋರಾಟ ನಡೆಸಿದರು. ಅವರ ಹೋರಾಟದಿಂದ ನಾನು ಸ್ಫೂರ್ತಿಗೊಂಡೆ. ಅಂದಿನಿಂದ ನಾನು ಕೋಕಾ ಕೋಲಾ ಕುಡಿಯದೇ ಇರಲು ನಿರ್ಧರಿಸಿದೆ. ನನ್ನ ಈ ನಿರ್ಧಾರಕ್ಕೆ ಕಾರಣವೇ ಜಾರ್ಜ್ ಫರ್ನಾಂಡಿಸ್ ಎಂದು ತಿಳಿಸಿದರು.

    ಈ ವೇಳೆ ಜಾನ್ಸನ್ ಮಾರ್ಕೆಟ್ ಬಳಿ ಇರುವ ಫರ್ನಾಂಡಿಸ್ ನಿವಾಸದ ಸಮೀಪದ ರಸ್ತೆಯೊಂದಕ್ಕೆ ಜಾರ್ಜ್ ಫರ್ನಾಂಡಿಸ್ ಎಂದು ಹೆಸರಿಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

    ಸ್ಪೀಕರ್ ರಮೇಶದ ಕುಮಾರ್, ಶಾಸಕರಾದ ಕುಮಾರ್ ಬಂಗಾರಪ್ಪ, ಮಾಧುಸ್ವಾಮಿ ಅವರು ಜಾರ್ಜ್ ಫರ್ನಾಂಡಿಸ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಜಾರ್ಜ್ ಫರ್ನಾಂಡಿಸ್ ಸಹೋದರ ಮೈಕೆಲ್ ಫರ್ನಾಂಡಿಸ್ ಹಾಗೂ ಆಪ್ತರು ಉಪಸ್ಥಿತರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ

    ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ

    ನವದೆಹಲಿ: ಮಾಜಿ ರಕ್ಷಣಾ ಮಂತ್ರಿ ಜಾರ್ಜ್ ಫರ್ನಾಂಡಿಸ್ (88) ವಿಧಿವಶರಾಗಿದ್ದಾರೆ.

    ಜಾರ್ಜ್ ಫರ್ನಾಂಡಿಸ್ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಯನ್ನು ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಜಾರ್ಜ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ.

    ಬಹು ಅಂಗಾಂಗಗಳ ತೊಂದರೆಯಿಂದ ಜಾರ್ಜ್ ಫರ್ನಾಂಡಿಸ್ ಬಳಲುತ್ತಿದ್ದು, ಸಂಪೂರ್ಣ ವಿಶ್ರಾಂತಿಯಲ್ಲಿದ್ದರು. ದೆಹಲಿಯ ಅನೇಕ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ವೈದ್ಯರು ಜಾರ್ಜ್ ಫರ್ನಾಂಡಿಸ್ ಮನೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದರು. ಆದರೆ ಈಗ ಎಷ್ಟೆ ಪ್ರಯತ್ನ ಮಾಡಿದರು ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಕುಟುಂಬಸ್ಥರು ದುಃಖ ವ್ಯಕ್ತಪಡಿಸುತ್ತಿದ್ದಾರೆ.

    ಮೊದಲಿಗೆ ಅವರು ಮೂತ್ರನಾಳದ ಸಮಸ್ಯೆಯಿಂದ ಬಳಲುತ್ತಿದ್ದರು. ಬಳಿಕ ಒಂದೊಂದೆ ಅಂಗಾಂಗ ವೈಫಲ್ಯವಾಗಿದ್ದು, ಇಂದು ಕೊನೆ ಉಸಿರೆಳೆದಿದ್ದಾರೆ. ಜಾರ್ಜ್ ಫರ್ನಾಂಡಿಸ್ ಅವರು ವಾಜಪೇಯಿ ಅವಧಿಯಲ್ಲಿ ಕೇಂದ್ರ ಸಚಿವರಾಗಿದ್ದರು. ತಮ್ಮ ಸಾಮಾಜಿಕ ಕೆಲಸಗಳಿಂದಲೇ ಒರ್ವ ಜನನಾಯಕನಾಗಿ ಗುರುತಿಸಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv