Tag: ಜಾಲ ಪತ್ತೆ

  • ಲಿಕ್ವಿಡ್ ಹಾಕಿದ್ರೆ ನಕಿಲಿ ನೋಟು ಅಸಲಿಯಾಗುತಂತೆ..!

    ಲಿಕ್ವಿಡ್ ಹಾಕಿದ್ರೆ ನಕಿಲಿ ನೋಟು ಅಸಲಿಯಾಗುತಂತೆ..!

    – ಖೋಟಾ ನೋಟು ವಂಚಕರ ಜಾಲ ಪತ್ತೆ

    ಬಾಗಲಕೋಟೆ: ಜನರನ್ನು ನಂಬಿಸಿ ಕಪ್ಪು ಕಾಗದಕ್ಕೆ ಲಿಕ್ವಿಡ್ ಹಾಕಿದ್ರೆ ನೈಜ ನೋಟಾಗಿ ಬದಲಾಗುತ್ತವೆ ಎಂದು ಮೋಸ ಮಾಡುತ್ತಿದ್ದ ವಂಚಕರ ಜಾಲವನ್ನು ಜಿಲ್ಲೆಯ ಸಿಇಎನ್ ಪೊಲೀಸರು ಕಾರ್ಯಾಚರಣೆ ಮಾಡಿ ಪತ್ತೆ ಮಾಡಿದ್ದಾರೆ.

    ಸೋಮಶೇಖರ್ ಹಳ್ಳೂರ, ಮಲ್ಲಿಕಾರ್ಜುನ ತೋರಗಲ್, ಈರಣ್ಣ ಹಾದಿಮನಿ ಬಂಧಿತ ವಂಚಕರು. ಈ ಮೂವರ ಇನ್ನೋರ್ವ ಸೇರಿ ನೋಟಿನಾಕಾರದ ಕಪ್ಪು ಕಾಗದವನ್ನು ಜನರಿಗೆ ನೀಡಿ ಇದಕ್ಕೆ ನಾವು ಕೊಡುವ ಲಿಕ್ವಿಡ್ ಹಾಕಿದ್ರೆ ನಿಜವಾದ ನೋಟು ಆಗುತ್ತೆ ಎಂದು ವಂಚನೆ ಮಾಡುತ್ತಿದ್ದರು. ಅಲ್ಲದೆ 500 ಹಾಗೂ 2000 ಮುಖಬೆಲೆಯ ನೋಟ್‍ಗಳಾಗುತ್ತವೆ ಎಂದು ಜನರನ್ನು ವಂಚಿಸುತ್ತಿದ್ದರು. ಆರೋಪಿಗಳಲ್ಲಿ ಮೂವರು ನಕಲಿ ನೋಟ್ ವಂಚಕರನ್ನು ಪೊಲೀಸರು ಕಾರ್ಯಚರಣೆ ಮಾಡಿ ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.

    ಬಂಧಿತ ಮೂವರು ಗುಳೇದಗುಡ್ಡ ಪಟ್ಟಣದವರು ಎಂದು ಗುರುತಿಸಲಾಗಿದ್ದು, ಮರಿಯಪ್ಪ ಮಾದರ ಎಂಬ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಗಳು ಜನರಿಗೆ ಕಪ್ಪು ನಕಲಿ ನೋಟ್ ನೀಡಿ ಹಣ ಪಡೆದು ವಂಚಿಸುವ ಪ್ರಯತ್ನದಲ್ಲಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಪೊಲೀಸರು ಗುಳೇದಗುಡ್ಡ ಪಟ್ಟಣದ ಶಿಕ್ಷಕರ ಕಾಲೋನಿಯಲ್ಲಿ ನಡೆಯುತ್ತಿದ್ದ ದಂದೆಗೆ ಬ್ರೇಕ್ ಹಾಕಿದ್ದಾರೆ. ಆರೋಪಿಗಳ ಬಳಿ ಇದ್ದ 2 ಸಾವಿರ ರೂ. ಮುಖಬೆಲೆಯ ಎರಡು ಖೋಟಾ ನೋಟನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಈ ಘಟನೆ ಕುರಿತು ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಭಿಕ್ಷಾಟನೆ ಜಾಲದಿಂದ ರಕ್ಷಿಸಿದ್ದ 5 ಮಕ್ಕಳಲ್ಲಿ ಇಬ್ಬರಿಗೆ ಕಿರುನಾಲಗೆಯೇ ಇಲ್ಲ!

    ಭಿಕ್ಷಾಟನೆ ಜಾಲದಿಂದ ರಕ್ಷಿಸಿದ್ದ 5 ಮಕ್ಕಳಲ್ಲಿ ಇಬ್ಬರಿಗೆ ಕಿರುನಾಲಗೆಯೇ ಇಲ್ಲ!

    ಕಲಬುರಗಿ: ಜಿಲ್ಲೆಯಲ್ಲಿ ಭಿಕ್ಷಾಟನೆ ಜಾಲ ಪತ್ತೆಯಾಗಿದ್ದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಭಿಕ್ಷಾಟನೆ ಜಾಲದಿಂದ ರಕ್ಷಿಸಲ್ಪಟ್ಟ 5 ಮಕ್ಕಳಲ್ಲಿ ಎರಡು ಮಕ್ಕಳಿಗೆ ಕಿರುನಾಲಗೆಯೇ ಇಲ್ಲವಂತೆ.

    ಕಲಬುರಗಿ ಜಿಲ್ಲಾಸ್ಪತ್ರೆಯ ಅಪೌಷ್ಠಿಕ ಮಕ್ಕಳ ತುರ್ತು ನಿಗಾ ಘಟಕದಲ್ಲಿ ಭಿಕ್ಷಾಟನೆ ಜಾಲದಿಂದ ರಕ್ಷಿಸಲ್ಪಟ್ಟ ಮಕ್ಕಳನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಈ ವೇಳೆ ದುಷ್ಕರ್ಮಿಗಳ ಕೃತ್ಯ ಬೆಳಕಿಗೆ ಬಂದಿದೆ.

    ಮ್ಕಕಳಿಗೆ ಸರಿಯಾಗಿ ಮಾತನಾಡಲು ಬರಬಾರದು ಎನ್ನುವ ಉದ್ದೇಶದಿಂದ ದುಷ್ಕರ್ಮಿಗಳು ಇಬ್ಬರು ಮಕ್ಕಳ ಕಿರುನಾಲಗೆಯನ್ನು ಕತ್ತರಿಸಿದ್ದಾರೆ. ಅಲ್ಲದೇ ಭಿಕ್ಷಾಟನೆ ವೇಳೆ ಮಕ್ಕಳ ಮೇಲೆ ಜನರಿಗೆ ಸಿಂಪತಿ, ಅನುಕಂಪ ಬರಲು ಮಕ್ಕಳಿಗೆ ಸರಿಯಾಗಿ ಊಟ ಕೂಡಾ ಹಾಕುತ್ತಿರಲಿಲ್ಲ ಎನ್ನುವುದು ಬಯಲಿಗೆ ಬಂದಿದೆ.

    ಜೂನ್ 8ರಂದು ಭಿಕ್ಷಾಟನೆಯಲ್ಲಿ ತೊಡಗಿದ್ದ ಐದು ಮಕ್ಕಳನ್ನು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶ ರೂಬಿ ಮತ್ತು ರೈಯಿಸಾ ಬೇಗಂ ಎನ್ನುವ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ ಆರೋಪಿ ರೂಬಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವಶಕ್ಕೆ ಪಡೆದಿರುವ ಐದು ಜನ ಮಕ್ಕಳು ತನ್ನವೆಂದು ಹೇಳುತ್ತಿದ್ದಾರೆ.

    ಈ ಕುರಿತು ರಾಘವೇಂದ್ರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.