Tag: ಜಾವಗಲ್ ಶ್ರೀನಾಥ್

  • ಎಲ್ಲರೂ ಮನೆಯಲ್ಲಿರಿ, ಯಾರೂ ಅನಗತ್ಯವಾಗಿ ಓಡಾಡ್ಬೇಡಿ: ಜಾವಗಲ್ ಶ್ರೀನಾಥ್

    ಎಲ್ಲರೂ ಮನೆಯಲ್ಲಿರಿ, ಯಾರೂ ಅನಗತ್ಯವಾಗಿ ಓಡಾಡ್ಬೇಡಿ: ಜಾವಗಲ್ ಶ್ರೀನಾಥ್

    ಮೈಸೂರು: ಕೊರೊನಾ ವೈರಸ್ ಹರಡದಂತೆ ಇಡೀ ದೇಶವನ್ನೇ ಲಾಕ್‍ಡೌನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಟ, ನಟಿಯರು ಸೇರಿದಂತೆ ರಾಜಕೀಯ ನಾಯಕರು ಕೂಡ ಮನೆಯಲ್ಲೇ ಇರಿ ಎಂದು ಮನವಿ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಖ್ಯಾತ ಅಂತರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ಕೂಡ ಜಾಗೃತಿ ಮೂಡಿಸಿದ್ದಾರೆ.

    ಈ ಬಗ್ಗೆ ವಿಡಿಯೋ ಮಾಡಿರುವ ಶ್ರೀನಾಥ್, ಕೊರೊನಾ ಪ್ರಪಂಚದಾದ್ಯಂತ ಹಬ್ಬಿ ಬಹಳ ತೊಂದರೆ ಕೊಡುತ್ತಿದೆ. ಈ ಬಗ್ಗೆ ನಮ್ಮ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದು, ಬಹು ಬೇಗನೇ ಲಾಕ್‍ಡೌನ್ ಮಾಡುವ ಮೂಲಕ ಇಂದು ನಾವೆಲ್ಲರೂ ಪರಿಣಾಮಕಾರಿಯಾಗಿರುವ ಸ್ಥಿತಿಯಲ್ಲಿದ್ದೇವೆ. ಇನ್ನೂ ಎರಡು ವಾರ ಕಷ್ಟಪಡಬೇಕಾಬಹುದು. ಆ ಕಷ್ಟ ನಾವೆಲ್ಲರೂ ಪಡೋಣ ಎಂದಿದ್ದಾರೆ.

    ಸರ್ಕಾರದ ಎಲ್ಲಾ ನಿರ್ಧಾರಗಳಿಗೂ ನಾವು ಸ್ಪಂದಿಸೋಣ. ಬಹಳ ಮುಖ್ಯವಾದ ವಿಚಾರವೆಂದರೆ ಪೊಲೀಸ್ ಇಲಾಖೆ, ನರ್ಸ್ ಹಾಗೂ ವೈದ್ಯರನ್ನು ಫ್ರಂಟ್ ಲೈನ್ ವಾರಿಯರ್ಸ್ ಎಂದೇ ಕರೆಯಬಹುದು. ಇವರೊಂದಿಗೆ ದಿನಾ ಬೆಳಗ್ಗೆ ಬಂದು ಕಸ ಗುಡಿಸುವ ಪೌರಕಾರ್ಮಿಕರೂ ಕೂಡ ವಾರಿಯರ್ಸ್. ಈ ಮೂಲಕ ಅವರು ದೇಶವನ್ನು ಕ್ಲೀನ್ ಆಗಿ ಇಡುತ್ತಿದ್ದಾರೆ. ಇವರೆಲ್ಲರಿಗೂ ನಮ್ಮ ಕಡೆಯಿಂದ ಒಂದು ಸಹಕಾರ ಆಗಬೇಕು. ಈ ಸಹಕಾರ ಈಡೇರಬೇಕಾದರೆ ನಾವು ತೃಪ್ತಿ ಪಡಿಸಬೇಕು. ಅದೇ ಮನೆ ಬಿಟ್ಟು ಹೊರಗಡೆ ಬರಬಾರದು ಎಂದು ಜನರಲ್ಲಿ ಕೇಳಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಪೊಲೀಸರು ಬಹಳ ಒಳ್ಳೆಯ ಕೆಲಸ ಮಾಡುತ್ತಿದ್ದು, ಅವರಿಗೆ ಚಿರಋಣಿ ಎಂದು ಹೇಳಿದ್ದಾರೆ. ಹಾಗೆಯೇ ವೈದ್ಯರು ಹಾಗೂ ನರ್ಸ್‍ಗಳು ಕೂಡ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಿಮಗೆ ಯಾವ ರೀತಿಯಲ್ಲಿ ಬೆಂಬ ಬೇಕೋ ಅದೇ ರೀತಿಯಲ್ಲಿ ಜನ ಸ್ಪಂದಿಸುತ್ತಾರೆ. ಒಟ್ಟಿನಲ್ಲಿ ಈ ರೀತಿಯ ಒಳ್ಳೆಯ ಕೆಲಸಗಳಿಂದ ಕೊರೊನಾ ವೈರಸನ್ನು ಈ ಪ್ರಪಂಚದಿಂದ ತೊಲಗಿಸೋಣ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ನಮೋ ಪ್ರಮಾಣ ವಚನ – ಕ್ರೀಡಾಪಟುಗಳು, ರಾಜ್ಯದ ಗಣ್ಯರಿಗೆ ಆಹ್ವಾನ

    ನಮೋ ಪ್ರಮಾಣ ವಚನ – ಕ್ರೀಡಾಪಟುಗಳು, ರಾಜ್ಯದ ಗಣ್ಯರಿಗೆ ಆಹ್ವಾನ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕನ್ನಡದ ಮೂವರು ಕ್ರಿಕೆಟ್ ದಿಗ್ಗಜರಿಗೆ ಆಹ್ವಾನ ನೀಡಲಾಗಿದೆ.

    ಈ ಕಾರ್ಯಕ್ರಮಕ್ಕೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಮೋದಿ ಅವರು ಆಹ್ವಾನ ಮಾಡಿದ್ದಾರೆ. ಅಷ್ಟೇ ಅಲ್ಲದೇ ಅನಿಲ್ ಕುಂಬ್ಳೆ ಮತ್ತು ಜಾವಗಲ್ ಶ್ರೀನಾಥ್ ಅವರನ್ನು ಆಹ್ವಾನಿಸಲಾಗಿದೆ.

    ಆದಿಚುಂಚನಗಿರಿ ಮಠದ ಡಾ. ನಿರ್ಮಲಾನಂದನಾಥ ಸ್ವಾಮೀಜಿ, ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಸುತ್ತೂರು ಮಠದ ಡಾ. ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ, ಮಾದಾರ ಚೆನ್ನಯ್ಯ ಪೀಠದ ಶ್ರೀ ಮಾದಾರ ಚೆನ್ನಯ್ಯ ಸ್ವಾಮೀಜಿ, ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾ ಮೂರ್ತಿ, ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್ ಭೈರಪ್ಪ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

    ಕ್ರೀಡಾ ವಿಭಾಗದಿಂದ ಮಾಜಿ ಓಟಗಾರ್ತಿ ಪಿ.ಟಿ ಉಷಾ, ಮತ್ತು ಹರ್ಭಜನ್ ಸಿಂಗ್, ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಬ್ಯಾಡ್ಮಿಂಟನ್ ತರಬೇತುಗಾರ ಪುಲೆಲ್ಲಾ ಗೋಪಿಚಂದ್ ಮತ್ತು ಜಿಮ್ನಾಸ್ಟಿಕ್ ಆಟಗಾರ್ತಿ ದೀಪಾ ಕರ್ಮಕರ್ ಭಾಗವಹಿಸಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ನೆರೆಹೊರೆಯ ರಾಷ್ಟ್ರದ ಮುಖ್ಯಸ್ಥರು, ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಮತ್ತು ಚಲನಚಿತ್ರ ನಟರನ್ನು ಆಹ್ವಾನ ಮಾಡಲಾಗಿದೆ. ಈ ಬಾರಿ ಪಶ್ಚಿಮ ಬಂಗಾಳದ ಚುನಾವಣೆ ಸಂದರ್ಭದಲ್ಲಿ ಸಾವನ್ನಪ್ಪಿದ 50 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಕುಟುಂಬಗಳನ್ನು ಆಹ್ವಾನ ಮಾಡಲಾಗಿದೆ.

    ವಿದೇಶಿ ಗಣ್ಯರುಗಳಾಗಿ ಪ್ರಮಾಣ ವಚನ ಸ್ವೀಕರ ಸಭೆಗೆ ಬಿಮ್‍ಸ್ಟಿಕ್ (ಬಂಗಾಳ ಕೊಲ್ಲಿ ಬಹುವಲಯ ತಾಂತ್ರಿಕ ಮತ್ತು ಆರ್ಥಿಕ ಸಹಕಾರಕ್ಕಾಗಿ ಇರುವ ಸಂಘಟನೆ) ಈ ಸಂಘಟನೆಯ ಬಾಂಗ್ಲಾದೇಶ, ಭೂತಾನ್, ಮಯನ್ಮಾರ್, ನೇಪಾಳ, ಶ್ರೀಲಂಕಾ ಮತ್ತು ಥೈಲ್ಯಾಂಡ್ ದೇಶದ ಮುಖ್ಯಸ್ಥರು ಬರುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ.

    ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸಮಾರಂಭಕ್ಕೆ ಆಹ್ವಾನ ಮಾಡಲಾಗಿದೆ. ಇವರ ಜೊತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸಮಾರಂಭಕ್ಕೆ ಆಗಮಿಸಲಿದ್ದಾರೆ.

  • ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ಐಪಿಎಲ್ ಮ್ಯಾಚ್‍ಗಳಲ್ಲಿ ಅಂಪೈರ್‍ಗಳಿಗೆ ಎಷ್ಟು ಸಂಬಳ ಸಿಗುತ್ತೆ? ಇಲ್ಲಿದೆ ಮಾಹಿತಿ

    ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ (ಐಪಿಎಲ್) ಹಣದ ಹೊಳೆ ಹರಿಯುವುದು ನಿಮಗೆ ಗೊತ್ತೆ ಇರುವ ವಿಚಾರ. ಆಟಗಾರರು ಕೋಟಿಗಟ್ಟಲೇ ಹಣಕ್ಕೆ ಸೇಲ್ ಆದರೆ ಅಂಪೈರ್‍ಗಳಿಗೂ ಲಕ್ಷಗಟ್ಟಲೇ ಹಣ ಸಂಬಳ ರೂಪದಲ್ಲಿ ಸಿಗುತ್ತಿದೆ.

    2016ರಲ್ಲಿ ಸಿ.ಕೆ.ನಂದನ್, ಅನಿಲ್ ಚೌಧರಿ ಮತ್ತು ಸಿ.ಸಂಶುದ್ದೀನ್ ಐಪಿಎಲ್ ಪಂದ್ಯಗಳ ಅಂಪೈರ್‍ಗಳಾಗಿ ಕಾರ್ಯನಿರ್ವಹಿಸಿದ್ದು ಇವರು ಹತ್ತಿರ ಹತ್ತಿರ ಒಟ್ಟು 40 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ.

    2016 ರಲ್ಲಿ ಅನಿಲ್ ಚೌಧರಿ ಅವರು ಸರಿಸುಮಾರು 39.63 ಲಕ್ಷ ಸಂಭಾವನೆಯನ್ನು ಪಡೆದಿದ್ದರೆ, ನಂದನ್ ಸಂಶುದ್ದೀನ್ ಕೂಡ ಸರಿ ಸುಮಾರು 40.83 ಲಕ್ಷ ರೂ. ಸಂಬಳವನ್ನು ಐಪಿಎಲ್‍ನಿಂದ ಪಡೆದಿದ್ದರು.

    ರೆಫ್ರಿಗಳಿಗೂ ಐಪಿಎಲ್ ಒಳ್ಳೆಯ ಸಂಭಾವನೆಯನ್ನ ನೀಡುತ್ತಿದೆ. ಜಾವಗಲ್ ಶ್ರೀನಾಥ್ ಹಲವು ವರ್ಷಗಳಿಂದ ಮ್ಯಾಚ್ ರೆಫ್ರಿಯಾಗಿದ್ದು, ಐಪಿಎಲ್ ನಿಂದ ಬರೋಬ್ಬರಿ 26.42 ಲಕ್ಷ ರೂ. ಸಂಬಳವನ್ನು ಪಡೆದಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶ್ರೀನಾಥ್ ಅವರನ್ನು ಹತ್ತು ವರ್ಷಗಳ ಹಿಂದೆ ಮ್ಯಾಚ್ ರೆಫ್ರಿಯಾಗಿ ನೇಮಕ ಮಾಡಿಕೊಂಡಿತ್ತು. ಇದೂವರೆಗೂ 24 ಟೆಸ್ಟ್, 122 ಅಂತರಾಷ್ಟ್ರೀಯ ಏಕದಿನ ಮತ್ತು 25 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಶ್ರೀನಾಥ್ ಮ್ಯಾಚ್ ರೆಫ್ರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಮತ್ತೊಬ್ಬ ಅಂಪೈರ್ ಕೆ.ಎನ್. ಅನಂತಪದ್ಮನಾಭನ್ ಅವರಿಗೆ 26.65 ಲಕ್ಷ ರೂ.ಸಂಬಳವನ್ನು ಬಿಸಿಸಿಐ ನೀಡಿದೆ.

    ಇದನ್ನೂ ಓದಿ: ಟೀಂ ಇಂಡಿಯಾದ ಬ್ಯಾಟಿಂಗ್, ಫೀಲ್ಡಿಂಗ್ ಕೋಚ್‍ಗೆ 15 ಲಕ್ಷ ರೂ. ಸಂಬಳ!

    ದೆಹಲಿ ಮೂಲದವರಾದ ಅನಿಲ್ ಚೌಧರಿ ವಿಶ್ವ ಕ್ರಿಕೆಟ್‍ನ ಅಂಪೈರ್‍ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಅನಿಲ್ ಈಗಾಗಲೇ 39 ಐಪಿಎಲ್ ಮ್ಯಾಚ್‍ಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ 17 ಏಕದಿನ ಪಂದ್ಯಗಳು ಮತ್ತು 16 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ಅಂಪೈರಾಗಿ ಕೆಲಸ ಮಾಡಿದ್ದಾರೆ.

    ಸಿ.ಕೆ.ನಂದನ್ ಇವರು ಹುಟ್ಟಿದ್ದು ದೆಹಲಿ ಆದರೆ ರಣಜಿ ಕ್ರಿಕೆಟ್‍ನಲ್ಲಿ ಕರ್ನಾಟಕ ರಾಜ್ಯದ ಪರವಾಗಿ ಆಡಿದ್ದಾರೆ. ನಂದನ್ 6 ಅಂತರಾಷ್ಟ್ರೀಯ ಏಕದಿನ ಪಂದ್ಯಗಳು ಮತ್ತು 7 ಅಂತರಾಷ್ಟ್ರೀಯ ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿದ್ದರು.

    ಹೈದರಾಬಾದ್ ನಿವಾಸಿಯಾಗಿರುವ ಸಿ.ಸಂಶುದ್ದೀನ್ ಇದೂವರೆಗೂ 17 ಅಂತರಾಷ್ಟ್ರೀಯ ಏಕದಿನ ಪಂದ್ಯ ಮತ್ತು 11 ಟಿ-20 ಪಂದ್ಯಗಳಿಗೆ ನಿರ್ಣಾಯಕರಾಗಿ ಕೆಲಸ ಮಾಡಿರುವ ಅನುಭವವಿದೆ.

    ಇದನ್ನೂ ಓದಿ: ಆರ್‍ಸಿಬಿ 12 ಕೋಟಿ ನೀಡಿ ಟೈಮಲ್ ಮಿಲ್ಸ್ ಅವರನ್ನೇ ಖರೀದಿಸಿದ್ದು ಯಾಕೆ?