Tag: ಜಾಹ್ನವಿ ಕಪೂರ್

  • ನಟಿ ಜಾಹ್ನವಿ ಬಾಯ್ ಫ್ರೆಂಡ್ ಜೊತೆ ಇಟಲಿಗೆ ಹಾರಿದ್ದೇಕೆ?

    ನಟಿ ಜಾಹ್ನವಿ ಬಾಯ್ ಫ್ರೆಂಡ್ ಜೊತೆ ಇಟಲಿಗೆ ಹಾರಿದ್ದೇಕೆ?

    ಬಾಲಿವುಡ್‌ನಲ್ಲಿ (Bollywood) ಆಗಾಗ ಗುಸು-ಗುಸು ಪಿಸು-ಪಿಸು ಮಾತುಗಳು ಕೇಳಿಬರೋದು ಸರ್ವೆಸಾಮಾನ್ಯ. ಅದರಲ್ಲೂ ನಟ, ನಟಿಯರ ವಿಷ್ಯದಲ್ಲಂತೂ ಈ ಸುದ್ದಿ ಬೇಗನೇ ಸ್ಪ್ರೆಡ್ ಆಗಿಬಿಡುತ್ತೆ. ಬಾಲಿವುಡ್ ನಟಿ ಜಾಹ್ನವಿ ಕಪೂರ್ (Jahnavi Kapoor) ಹಾಗೂ ಶಿಖರ್ ಪಹಾರಿಯಾ  (Shikhar Pahariya)ವಿಷ್ಯದಲ್ಲೂ ಈ ಸುದ್ದಿ ಆಗಾಗ ಕೇಳಿ ಬರ್ತಾನೇ ಇರುತ್ತೆ. ಅದಕ್ಕೆ ಪುಷ್ಟಿ ಎಂಬಂತೆ ಮತ್ತೊಂದು ಸಾಕ್ಷಿ ನಿಮ್ಮ ಮುಂದಿದೆ.

    ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ-ವೆಡ್ಡಿಂಗ್ ಇತ್ತೀಚೆಗೆ ಇಟಲಿಯಲ್ಲಿ (Italy) ಅದ್ಧೂರಿಯಾಗಿ ನೆರವೇರಿದೆ. ಈ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗಿಯಾಗಿದ್ದರು. ಅದರಂತೆ ಬಾಲಿವುಡ್ ನಟಿ ಜಾಹ್ನವಿ ಕಪೂರ್ ಸಹ ತಮ್ಮ ಬಾಯ್‌ಫ್ರೆಂಡ್ ಜೊತೆ ಕಾಣಿಸಿಕೊಂಡಿದ್ದು ವಿಶೇಷಗಳಲ್ಲಿ ವಿಶೇಷ.

    ಹೌದು, ತಮ್ಮ ಬಾಯ್‌ಫ್ರೆಂಡ್ ಶಿಖರ್ ಪಹಾರಿಯಾ ಕೈ ಹಿಡಿದು ನಡೆದಿದ್ದಾರೆ ಬಾಲಿವುಡ್ ಬ್ಯೂಟಿ ಜಾಹ್ನವಿ ಕಪೂರ್. ಬಾಲಿವುಡ್ ಅಂಗಳದಲ್ಲಿ ಜಾಹ್ನವಿ ಕಪೂರ್ ಹಾಗೂ ಶಿಖರ್ ಪಹಾರಿಯಾ ಸುದ್ದಿ ಆಗಾಗ ಮೇನ್ ಸ್ಟ್ರೀಮ್ ಗೆ  ಬರ್ತಾನೆ ಇತ್ತು. ಅದಕ್ಕೆಲ್ಲ ಕ್ಯೂಟ್ ನಟಿ ಜಾನು ಆನ್ಸರ್ ಮಾಡ್ತಾನೆ ಬಂದಿದ್ದಾರೆ. ಇದೀಗ ಅಂಬಾನಿ ಪುತ್ರನ ಪ್ರೀ ವೆಡ್ಡಿಂಗ್‌ನಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನ ತಮ್ಮ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ ಜಾಹ್ನವಿ.

  • ‘ದೇವರ’ ಸಿನಿಮಾದಲ್ಲಿ ಜಾಹ್ನವಿಯದ್ದು ಡಬಲ್ ಶೇಡ್ ಪಾತ್ರ

    ‘ದೇವರ’ ಸಿನಿಮಾದಲ್ಲಿ ಜಾಹ್ನವಿಯದ್ದು ಡಬಲ್ ಶೇಡ್ ಪಾತ್ರ

    ಜ್ಯೂನಿಯರ್ ಎನ್.ಟಿ.ಆರ್ ಜೊತೆ ನಟಿಸಿರುವ ದೇವರ (Devara) ಸಿನಿಮಾದಲ್ಲಿ ತಮ್ಮದು ಡಬಲ್ ಶೇಡ್  (Double Shade)ಪಾತ್ರವೆಂದು ಹೇಳಿಕೆ ನೀಡಿದ್ದಾರೆ ನಟಿ ಜಾಹ್ನವಿ ಕಪೂರ್. ಮೊದಲ ಸಿನಿಮಾದಲ್ಲೇ ತಮಗೆ ಅಂಥದ್ದೊಂದು ಪಾತ್ರ ಸಿಕ್ಕಿರುವುದು ಅದೃಷ್ಟವೆಂದೂ ಅವರು ಮಾತನಾಡಿದ್ದಾರೆ. ಎರಡೂ ಶೇಡ್ ಅನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ ಎನ್ನುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

    ಈ ನಡುವೆ ಜಾಹ್ನವಿಗೆ ಸಾಕಷ್ಟು ಆಫರ್ಸ್ ಬರುತ್ತಿವೆ. ಮೊನ್ನೆಯಷ್ಟೇ ರಾಮ್ ಚರಣ್ (Ram Charan) ಮತ್ತು ಜಾಹ್ನವಿ ಕಪೂರ್ (Jahnavi Kapoor) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ರಾಮ್ ಚರಣ್ ತಂದೆ ಚಿರಂಜೀವಿ (Chiranjeevi), ಜಾಹ್ನವಿ ಕಪೂರ್ ತಂದೆ ಬೋನಿ ಕಪೂರ್ (Boney Kapoor) ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ತಮ್ಮ ಮಕ್ಕಳಿಗೆ ಈ ಸಿನಿಮಾ ಸಾಕಷ್ಟು ಗೆಲುವು ತಂದು ಕೊಡಲಿ ಎಂದು ಇಬ್ಬರೂ ತಮ್ಮ ತಮ್ಮ ಮಕ್ಕಳಿಗೆ ಹಾರೈಸಿದ್ದಾರೆ.

    ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ  ನಿನ್ನೆ ಹೈದ್ರಾಬಾದ್ ನಲ್ಲಿ ನೆರವೇರಿದೆ.

     

    ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು.  ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

  • ಮೊಣಕಾಲಿನಿಂದ ತಿರುಪತಿ ತಿಮ್ಮಪ್ಪನ ಮೆಟ್ಟಿಲೇರಿದ ಜಾಹ್ನವಿ ಕಪೂರ್

    ಮೊಣಕಾಲಿನಿಂದ ತಿರುಪತಿ ತಿಮ್ಮಪ್ಪನ ಮೆಟ್ಟಿಲೇರಿದ ಜಾಹ್ನವಿ ಕಪೂರ್

    ತಿರುಪತಿ ತಿಮ್ಮಪ್ಪನ (Tirupati Thimmappa) ದರ್ಶನವನ್ನು ಕಠಿಣ ವ್ರತ ಮಾಡಿ ಪಡೆದುಕೊಂಡಿದ್ದಾರೆ ಬಾಲಿವುಡ್ ನಟಿ ಜಾಹ್ನವಿ ಕಪೂರ್. ಮೊಣಕಾಲಿನಿಂದಲೇ ಮೆಟ್ಟಿಲುಗಳನ್ನು ಏರಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇಷ್ಟೊಂದು ಭಕ್ತಿ ಹೊಂದಿರುವ ನಟಿಗೆ ಒಳ್ಳೆಯದು ಆಗಲಿ ಎಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.

    ಈ ನಡುವೆ ಜಾಹ್ನವಿಗೆ ಸಾಕಷ್ಟು ಆಫರ್ಸ್ ಬರುತ್ತಿವೆ. ನಿನ್ನೆಯಷ್ಟೇ ರಾಮ್ ಚರಣ್ (Ram Charan) ಮತ್ತು ಜಾಹ್ನವಿ ಕಪೂರ್ (Jahnavi Kapoor) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ರಾಮ್ ಚರಣ್ ತಂದೆ ಚಿರಂಜೀವಿ (Chiranjeevi), ಜಾಹ್ನವಿ ಕಪೂರ್ ತಂದೆ ಬೋನಿ ಕಪೂರ್ (Boney Kapoor) ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ತಮ್ಮ ಮಕ್ಕಳಿಗೆ ಈ ಸಿನಿಮಾ ಸಾಕಷ್ಟು ಗೆಲುವು ತಂದು ಕೊಡಲಿ ಎಂದು ಇಬ್ಬರೂ ತಮ್ಮ ತಮ್ಮ ಮಕ್ಕಳಿಗೆ ಹಾರೈಸಿದ್ದಾರೆ.

    ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ  ನಿನ್ನೆ ಹೈದ್ರಾಬಾದ್ ನಲ್ಲಿ ನೆರವೇರಿದೆ.

     

    ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು.  ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

  • ಮಕ್ಕಳ ಚಿತ್ರದ ಮುಹೂರ್ತಕ್ಕೆ ಸಾಕ್ಷಿಯಾದ ಚಿರಂಜೀವಿ, ಬೋನಿ ಕಪೂರ್

    ಮಕ್ಕಳ ಚಿತ್ರದ ಮುಹೂರ್ತಕ್ಕೆ ಸಾಕ್ಷಿಯಾದ ಚಿರಂಜೀವಿ, ಬೋನಿ ಕಪೂರ್

    ನಿನ್ನೆಯಷ್ಟೇ ರಾಮ್ ಚರಣ್ (Ram Charan) ಮತ್ತು ಜಾಹ್ನವಿ ಕಪೂರ್ (Jahnavi Kapoor) ಕಾಂಬಿನೇಷನ್ ನ ಹೊಸ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಮುಹೂರ್ತ ಸಮಾರಂಭಕ್ಕೆ ರಾಮ್ ಚರಣ್ ತಂದೆ ಚಿರಂಜೀವಿ (Chiranjeevi), ಜಾಹ್ನವಿ ಕಪೂರ್ ತಂದೆ ಬೋನಿ ಕಪೂರ್ (Boney Kapoor) ಸಾಕ್ಷಿಯಾಗಿದ್ದು ವಿಶೇಷವಾಗಿತ್ತು. ತಮ್ಮ ಮಕ್ಕಳಿಗೆ ಈ ಸಿನಿಮಾ ಸಾಕಷ್ಟು ಗೆಲುವು ತಂದು ಕೊಡಲಿ ಎಂದು ಇಬ್ಬರೂ ತಮ್ಮ ತಮ್ಮ ಮಕ್ಕಳಿಗೆ ಹಾರೈಸಿದ್ದಾರೆ.

    ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಪ್ರಾಜೆಕ್ಟ್ ನಲ್ಲಿ ಬ್ಯುಸಿಯಾಗಿರುವ ರಾಮ್ ಚರಣ್ ಬುಚ್ಚಿ ಬಾಬು ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ RC 16 ಎಂದು ಟೈಟಲ್ ಇಡಲಾಗಿದೆ. ಈ ಹೊಸ ಸಿನಿಮಾದ ಮುಹೂರ್ತ ಸಮಾರಂಭ  ನಿನ್ನೆ ಹೈದ್ರಾಬಾದ್ ನಲ್ಲಿ ನೆರವೇರಿದೆ.

    ನಿರ್ಮಾಪಕ ಅಲ್ಲು ಅರವಿಂದ್ ಅವರು ಬೌಂಡ್ ಸ್ಕ್ರಿಪ್ಟ್ ಅನ್ನು ನಿರ್ದೇಶಕ ಬುಚ್ಚಿ ಬಾಬು ಸನಾ ಅವರಿಗೆ ಹಸ್ತಾಂತರಿಸಿದರು. ರಾಮ್ ಚರಣ್ ಅವರ ಗೇಮ್ ಚೇಂಜರ್ ಚಿತ್ರವನ್ನು ನಿರ್ದೇಶಿಸುತ್ತಿರುವ ಸ್ಟಾರ್ ನಿರ್ದೇಶಕ ಶಂಕರ್ ಅವರು ಬೋನಿ ಕಪೂರ್ ಮತ್ತು ಅನ್ಮೋಲ್ ಶರ್ಮಾ ಕ್ಯಾಮೆರಾ ಚಾಲನೆ ನೀಡಿದರು.  ಮೆಗಾ ಸ್ಟಾರ್ ಚಿರಂಜೀವಿ ಕ್ಲಾಪ್ ಬೋರ್ಡ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು.

    ಇದು ರಾಮ್‌ಚರಣ್ ನಟನೆಯ 16ನೇ ಸಿನಿಮಾ. ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಬುಚ್ಚಿಬಾಬು ನಿರ್ದೇಶನದ ಇನ್ನು ಹೆಸರಿಡದ ಈ ಚಿತ್ರ ಭಾರೀ ನಿರೀಕ್ಷೆ ಮೂಡಿಸಿದೆ. ಚಿತ್ರದಲ್ಲಿ ರಾಮ್‌ಚರಣ್ ಜೋಡಿಯಾಗಿ ಜಾನ್ವಿ ಕಪೂರ್ ನಟಿಸುತ್ತಿದ್ದಾರೆ. ಎ. ಆರ್ ರೆಹಮಾನ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಆರ್.ರತ್ನವೇಲು ಛಾಯಾಗ್ರಹಣ, ಆಂಟೋನಿ ರುಬಿನ್ ಸಂಕಲನ ಚಿತ್ರಕ್ಕಿದೆ. ಚಂದ್ರಬೋಸ್, ಆನಂತಶ್ರೀರಾಮ್, ಬಾಲಾಜಿ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ.

    ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್‌ನಲ್ಲಿ RC16 ಸಿನಿಮಾ ನಿರ್ಮಾಣವಾಗುತ್ತಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿನಿಮಾ ಪ್ರೇಕ್ಷಕರ ಮುಂದೆ ಬರಲಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ವಿಶೇಷ.

  • ‘ಪುಷ್ಪ’ಗಾಗಿ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಜಾಹ್ನವಿ ಕಪೂರ್

    ‘ಪುಷ್ಪ’ಗಾಗಿ ಐಟಂ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ಜಾಹ್ನವಿ ಕಪೂರ್

    ಪುಷ್ಪ 2 ಚಿತ್ರದ ಅಡ್ಡಾದಿಂದ ಲೇಟೆಸ್ಟ್ ಸುದ್ದಿಯೊಂದು ಹರಿದಾಡುತ್ತಿದೆ. ಈ ಸಿನಿಮಾದ ಮಾದಕ ಗೀತೆ (Item Dance_ ಬಾಲಿವುಡ್ ನಟಿ ಜಾಹ್ನವಿ ಕಪೂರ್ (Jahnavi Kapoor) ಹೆಜ್ಜೆ ಹಾಕಲಿದ್ದಾರೆ ಎಂದು ಹೇಳಲಾಗಿತ್ತು. ಈ ಹಿಂದೆ ನಾನಾ ನಾಯಕಿಯರ ಹೆಸರು ಇದೇ ಹಾಡಿಗೆ ಕೇಳಿ ಬಂದಿತ್ತು. ಆದರೆ, ಇದೀಗ ಜಾಹ್ನವಿ ಹೆಸರು ಓಡಾಡುತ್ತಿದೆ. ಅವರು ಡಾನ್ಸ್ ಮಾಡಿದ ನಂತರವೇ ಪಕ್ಕಾ ಆಗುವುದು.

    ಈ ನಡುವೆ ಚಿತ್ರದ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿದೆ. ಕಾರಣ ಬಜೆಟ್ ತುಂಬಾನೇ ಏರಿಕೆ ಆಗಿದೆಯಂತೆ. ಅಲ್ಲು ಅರ್ಜುನ್ (Allu Arjun) ನಟನೆಯ ಪುಷ್ಪ 2 ಸಿನಿಮಾ ಕುರಿತಂತೆ ಅಚ್ಚರಿಯ ಸಂಗತಿಗಳು ಹೊರ ಬೀಳುತ್ತಲೇ ಇವೆ. ಪ್ರತಿ ಬಾರಿಯೂ ಅವುಗಳೆಲ್ಲ ಕಟ್ಟುಕಥೆಗಳೇ ಇರುತ್ತಿದ್ದವು. ಇದೀಗ ಸ್ವತಃ ಸಿನಿಮಾದ ನಿರ್ದೇಶಕ ಸುಕುಮಾರನ್ (Sukumaran)  ಮಾತನಾಡಿದ್ದಾರೆ. ಸಿನಿಮಾ ಕುರಿತಂತೆ ಹಲವಾರು ವಿಷಯಗಳನ್ನು ಅವರು ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಚಿತ್ರ ಬಜೆಟ್ ಬಗ್ಗೆ ಮಾತನಾಡಿದ್ದಾರೆ.

    ಪುಷ್ಪ ಸಿನಿಮಾಗಿಂತ ಪುಷ್ಪ 2 ಸಿನಿಮಾದ ಬಜೆಟ್ ಡಬಲ್ ಆಗಿದೆಯಂತೆ. ಜೊತೆಗೆ ಅಷ್ಟೇ ಶ್ರೀಮಂತಿಕೆಯಿಂದ ಕೂಡಿದೆಯಂತೆ. ಫಹಾದ್ ಫಾಸಿಲ್ (Fahadh Faasil) ಮತ್ತು ಅಲ್ಲು ಅರ್ಜುನ್ ನಡುವಿನ ದೃಶ್ಯ ಮತ್ತೊಂದು ಲೆವಲ್ ನಲ್ಲಿ ಇದೆ ಎಂದಿದ್ದಾರೆ ನಿರ್ದೇಶಕ ಸುಕುಮಾರನ್. ಇಡೀ ಕಥೆಯನ್ನು ಈ ಇಬ್ಬರೂ ನಟರು ಹೇಗೆ ತೂಗಿಸಿಕೊಂಡು ಹೋಗಿದ್ದಾರೆ ಎನ್ನುವುದನ್ನು ವಿವರಿಸಿದ್ದಾರೆ.

    ಒಂದು ಕಡೆ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ಇನ್ನೊಂದು ಕಡೆ ‘ಪುಷ್ಪ 2’ (Pushpa 2) ಸಿನಿಮಾದ ಆಡಿಯೋ (Audio) ಹಕ್ಕು (Right) ಭರ್ಜರಿ ಮೊತ್ತಕ್ಕೆ ಸೇಲ್ ಆಗಿದೆಯಂತೆ. ಈವರೆಗೂ ದಾಖಲಾಗಿದ್ದ ಎಲ್ಲ ಮೊತ್ತವನ್ನೂ ಅದು ಹಿಂದಿಕ್ಕಿದ್ದು ಟಿ ಸೀರಿಸ್ ಕಂಪೆನಿಯು 65 ಕೋಟಿ ರೂಪಾಯಿ ಹಣ ನೀಡಿ ಆಡಿಯೋ ಹಕ್ಕುಗಳನ್ನು ಖರೀದಿಸಿದೆ ಎಂದು ವರದಿಯಾಗಿದೆ. ಕನ್ನಡ, ಹಿಂದಿ, ತೆಲುಗು, ಮಲಯಾಳಂ, ತಮಿಳು ಸೇರಿದಂತೆ ರಿಲೀಸ್ ಆಗುವ ಅಷ್ಟು ಭಾಷೆಗಳಿಗೆ ಈ ಹಕ್ಕು ಅನ್ವಯಿಸಲಿದೆ.

     

    ಈ ಹಿಂದೆ ರಿಲೀಸ್ ಆಗಿರುವ ಬಾಹುಬಲಿ ಚಿತ್ರದ ಆಡಿಯೋ ಹಕ್ಕು ಹತ್ತು ಕೋಟಿ ಸೇಲ್ ಆಗಿತ್ತು. ಆರ್.ಆರ್.ಆರ್ ಆಡಿಯೋ ಹಕ್ಕು 25 ಕೋಟಿಗೆ ಬಿಕರಿ ಆಗಿತ್ತು. ಸಾಹೋ ಸಿನಿಮಾದ ಆಡಿಯೋ ಹಕ್ಕು ಕೂಡ 22 ಕೋಟಿಗೆ ಸೇಲ್ ಆಗಿತ್ತು. ಈ ಎಲ್ಲ ದಾಖಲೆಗಳನ್ನೂ ಪುಷ್ಪ 2 ಸಿನಿಮಾ ಮುರಿದಿದೆ. ಅಲ್ಲದೇ, ಓಟಿಟಿಗೂ ಭಾರೀ ಮೊತ್ತಕ್ಕೆ ಮಾತುಕತೆ ನಡೆಯುತ್ತಿದೆ ಎಂದು ವರದಿ ಆಗಿದೆ.

  • ಬಾಲಿವುಡ್ ನತ್ತ ತಮಿಳಿನ ಸೂರ್ಯ: ಜಾಹ್ನವಿಗೆ ಸಖತ್ ಅವಕಾಶ

    ಬಾಲಿವುಡ್ ನತ್ತ ತಮಿಳಿನ ಸೂರ್ಯ: ಜಾಹ್ನವಿಗೆ ಸಖತ್ ಅವಕಾಶ

    ಮಿಳಿನ ಹೆಸರಾಂತ ನಟ ಸೂರ್ಯ, ಇದೀಗ ಬಾಲಿವುಡ್ ನತ್ತ ಮುಖ ಮಾಡಿದ್ದಾರೆ. ಹೌದು, ಅವರು ಹಿಂದಿ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಚಿತ್ರದಲ್ಲಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Janhvi Kapoor)ನಾಯಕಿಯಾಗಿ ನಟಿಸಲಿದ್ದಾರಂತೆ. ಚಿತ್ರದ ಕುರಿತಂತೆ ಸಾಕಷ್ಟು ವಿವರಗಳು ಸಿಗದೇ ಇದ್ದರೂ, ಸೂರ್ಯ ಮತ್ತು ಜಾಹ್ನವಿ ಕಾಂಬಿನೇಷನ್ ಬಗ್ಗೆ ಸಖತ್ ಸುದ್ದಿಗಳು ಹರಿದಾಡುತ್ತಿವೆ.

    ಒಂದು ಕಡೆ ಸೂರ್ಯ ಬಾಲಿವುಡ್ ಪ್ರವೇಶ ಮಾಡುತ್ತಿದ್ದರೆ ಮತ್ತೊಂದು ಕಡೆ ಸೂರ್ಯ (Surya) ನಟನೆಯ ‘ಕಂಗುವ’ (Kanguva) ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಈ ಪೋಸ್ಟರ್ ನಲ್ಲಿ ಸೂರ್ಯ ಸಖತ್ ಮಿಂಚಿದ್ದಾರೆ. ಪೋಸ್ಟರ್ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.  ಜೊತೆಗೆ ಈ ಸಿನಿಮಾವನ್ನು ಬರೋಬ್ಬರಿ 38 ಭಾಷೆಗಳಲ್ಲಿ ರಿಲೀಸ್ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ. ಜೊತೆಗೆ 3 ಡಿ ತಂತ್ರಜ್ಞಾನದಲ್ಲೂ ಈ ಸಿನಿಮಾವನ್ನು ನೋಡಬಹುದಾಗಿದೆ. ಈ ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಆಗಲೇ ಭರ್ಜರಿ ವ್ಯಾಪಾರ ಕೂಡ ಆರಂಭಿಸಿದೆ.  ಭಾರೀ ಮೊತ್ತಕ್ಕೆ ಓಟಿಟಿಗೆ ಸೇಲ್ ಆಗುವ ಮೂಲಕ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.

    ಮೂಲಗಳ ಪ್ರಕಾರ ಅಮೆಜಾನ್ ಪ್ರೈಮ್ ಸಂಸ್ಥೆಯು ಕಂಗುವ ಸಿನಿಮಾದ ಓಟಿಟಿ (OTT) ಹಕ್ಕನ್ನು ಬರೋಬ್ಬರಿ 80 ಕೋಟಿಗೆ ಖರೀದಿ ಮಾಡಿದೆಯಂತೆ. ಇದು ಎಲ್ಲ ಭಾಷೆಯ ಹಕ್ಕುಗಳನ್ನೂ ಒಳಗೊಂಡಿದೆ ಎನ್ನಲಾಗುತ್ತಿದೆ.  ಈ ಮಾಹಿತಿಯನ್ನು ಚಿತ್ರತಂಡವೇ ಬಹಿರಂಗ ಪಡಿಸಿದೆ ಎಂದು ಕೆಲ ಮಾಧ್ಯಮಗಳ ವರದಿ ಮಾಡಿವೆ.

    ಸ್ಟುಡಿಯೋ ಗ್ರೀನ್ನಡಿ ಕೆ.ಇ. ಜ್ನಾನ ವೇಲ್ ರಾಜ ನಿರ್ಮಿಸಿ, ಶಿವ (Shiva) ನಿರ್ದೇಶಿಸುತ್ತಿರುವ ಈ ಚಿತ್ರವು ಪ್ರಾರಂಭವಾದಾಗಿನಿಂದ ಅಭಿಮಾನಿಗಳ ವಲಯದಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದೆ. ಬಹುಕೋಟಿ ವೆಚ್ಚದ ಈ ಚಿತ್ರದಲ್ಲಿ ಸೂರ್ಯಗೆ ನಾಯಕಿಯಾಗಿ ಬಾಲಿವುಡ್ ಬೆಡಗಿ ದಿಶಾ ಪಠಾಣಿ (Disha Pathani) ಅಭಿನಯಿಸುತ್ತಿದ್ದು, ಯೋಗಿ ಬಾಬು ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

     

    ‘ಕಂಗುವ’ ಚಿತ್ರವು ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದರಿಂದ ಎಲ್ಲ ಭಾಷೆಗಳಿಗೂ ಕನೆಕ್ಟ್ ಆಗುವಂತಹ ಶೀರ್ಷಿಕೆಯೊಂದರ ಹುಡುಕಾಟದಲ್ಲಿ ಚಿತ್ರತಂಡ ಇತ್ತು. ಆ ಶೀರ್ಷಿಕೆ ಕೊನೆಗೂ ಸಿಕ್ಕಿದ್ದು, ‘ಕಂಗುವ’ ಎಂದರೆ, ಬೆಂಕಿಯ ಶಕ್ತಿಯುಳ್ಳವನು ಎಂದರ್ಥ. ಇಲ್ಲಿ ನಾಯಕ ಒಬ್ಬ ಸೂಪರ್ ಹೀರೋ ಆಗಿದ್ದು, ಹಲವು ಅವತಾರಗಳಲ್ಲಿ ಕಾಣಿಸಿಕೊಳ್ಳುತ್ತಾನೆ.

  • ನಟರ ಜೊತೆ ಡೇಟ್ ಮಾಡುವುದಿಲ್ಲ: ಜಾಹ್ನವಿ ಶಾಕಿಂಗ್ ಹೇಳಿಕೆ

    ನಟರ ಜೊತೆ ಡೇಟ್ ಮಾಡುವುದಿಲ್ಲ: ಜಾಹ್ನವಿ ಶಾಕಿಂಗ್ ಹೇಳಿಕೆ

    ಬಾಲಿವುಡ್ ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Jahnavi Kapoor) ಹಿಂದಿನ ಪಾಪ್ಯುಲರ್ ಶೋ ಕಾಫಿ ವಿತ್ ಕರಣ್ (Koffee With Karan) ದಲ್ಲಿ ಭಾಗಿಯಾಗಿದ್ದಾರೆ. ಕರಣ್ ಜೊತೆ ಜಾಹ್ನವಿ ಹಲವಾರು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಪ್ರಮುಖವಾಗಿ ಡೇಟಿಂಗ್ (Dating) ವಿಚಾರವನ್ನು ಹಂಚಿಕೊಂಡಿದ್ದು, ತಾವು ಯಾವುದೇ ಕಾರಣಕ್ಕೂ ನಟರ ಜೊತೆ ಡೇಟ್ ಮಾಡುವುದಿಲ್ಲವೆಂದು ಅವರು ಹೇಳಿದ್ದಾರೆ.

    ಕಾಫಿ ವಿತ್ ಕರಣ್ ಶೋನಲ್ಲಿ ಇದಷ್ಟೇ ಅಲ್ಲ, ಇನ್ನೂ ಹಲವು ಸಂಗತಿಗಳನ್ನು ಅವರು ನೇರವಾಗಿ ಮಾತನಾಡಿದ್ದಾರೆ. ನಿರೂಪಕ ಕರಣ್ ಜೋಹಾರ್ (Karan Johar) ಕೇಳಿದ ಪ್ರಶ್ನೆಗೆ ಅಷ್ಟೇ ಬೋಲ್ಡ್ ಆಗಿ ಉತ್ತರಿಸಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಬೋಲ್ಡ್ ಪ್ರಶ್ನೆಗಳನ್ನು ಕೇಳುವುದರಲ್ಲಿ ಕರಣ್ ಜೋಹಾರ್ ಎತ್ತಿದ ಕೈ. ಅದರಲ್ಲೂ ಕಾಂಟ್ರವರ್ಸಿ ಎನ್ನುವಂತಹ ಪ್ರಶ್ನೆಗಳನ್ನೂ ಅವರು ಕೇಳುತ್ತಾರೆ. ಹೆಚ್ಚಾಗಿ ಅವರ ಮಾತುಗಳು ಸೆಕ್ಸ್, ಅಫೇರ್, ಬ್ರೇಕ್ ಅಪ್, ಡೇಟಿಂಗ್ ಇದರ ಸುತ್ತಲೇ ಗಿರಕಿ ಹೊಡೆಯುತ್ತವೆ. ಅದರಲ್ಲೂ ಸೆಕ್ಸ್ ಬಗ್ಗೆ ಕೇಳದೇ ಯಾವ ಎಪಿಸೋಡ್ ಅನ್ನು ಅವರು ಮುಗಿಸೋದಿಲ್ಲ. ಜಾಹ್ನವಿ ಎಪಿಸೋಡ್ ನಲ್ಲಿ ಅವರು ಬೇರೆ ರೀತಿಯಲ್ಲಿ ಕೇಳಿ ಅಚ್ಚರಿ ಮೂಡಿಸಿದ್ದಾರೆ.

    ಜಾಹ್ನವಿ ಕಪೂರ್ ಅವರ ಸಿನಿಮಾ ಕೆರಿಯರ್, ಶೂಟಿಂಗ್, ಫ್ರೆಂಡ್ಸ್ ಹೀಗೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಾ ಹೋಗುವ ಕರಣ್ ಜೋಹಾರ್, ಕೊನೆಗೊಂದು ಪ್ರಶ್ನೆ ಮಾಡುತ್ತಾರೆ. ರಾಪಿಡ್ ರೌಂಡ್ ನಲ್ಲಿ ಅವರು, ನಿಮ್ಮನ್ನು ಮೊದಲ ಬಾರಿಗೆ ಹುಡುಗರು ನೋಡಿದಾಗ, ಅವರ ಕಣ್ಣುಗಳು ನಿಮ್ಮಲ್ಲಿ ಏನನ್ನು ನೋಡುತ್ತಿರುತ್ತವೆ ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ ಅಷ್ಟೇ ಸಖತ್ತಾಗಿ ಆನ್ಸರ್ ಮಾಡಿದ್ದಾರೆ ಜಾಹ್ನವಿ.

     

    ಮೊದಲ ಬಾರಿಗೆ ಹುಡುಗರು ನನ್ನನ್ನು ನೋಡಿದಾಗ, ಅವರು ನನ್ನ ಕಣ್ಣುಗಳನ್ನು ನೋಡುತ್ತಾರೆ ಎಂದುಕೊಂಡಿದ್ದೆ. ಆದರೆ, ಅವರು ಬೇರೆಯದನ್ನೇ ನೋಡ್ತಾ ಇರ್ತಾರೆ ಅನ್ನೋದು ಆಮೇಲೆ ಗೊತ್ತಾಯಿತು ಎಂದು ಹೇಳುವ ಮೂಲಕ ಹುಡುಗರಿಗೆ ಶಾಕ್ ನೀಡಿದ್ದಾರೆ.

  • ಜಾಹ್ನವಿಯಲ್ಲಿ ಹುಡುಗರು ಮೊದಲು ನೋಡೋದೇನು? : ಬೋಲ್ಡ್ ಉತ್ತರ ಕೊಟ್ಟ ನಟಿ

    ಜಾಹ್ನವಿಯಲ್ಲಿ ಹುಡುಗರು ಮೊದಲು ನೋಡೋದೇನು? : ಬೋಲ್ಡ್ ಉತ್ತರ ಕೊಟ್ಟ ನಟಿ

    ಬಾಲಿವುಡ್ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ (Janhvi Kapoor) ಆಡಿದ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಕಾಫಿ ವಿತ್ ಕರಣ್ (Koffee With Karan) ಕಾರ್ಯಕ್ರಮದಲ್ಲಿ ಭಾಗಿ ಆಗಿರುವ ಜಾಹ್ನವಿ, ನಿರೂಪಕ ಕರಣ್ ಜೋಹಾರ್ (Karan Johar) ಕೇಳಿದ ಪ್ರಶ್ನೆಗೆ ಅಷ್ಟೇ ಬೋಲ್ಡ್ ಆಗಿ ಉತ್ತರಿಸಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

    ಬೋಲ್ಡ್ ಪ್ರಶ್ನೆಗಳನ್ನು ಕೇಳುವುದರಲ್ಲಿ ಕರಣ್ ಜೋಹಾರ್ ಎತ್ತಿದ ಕೈ. ಅದರಲ್ಲೂ ಕಾಂಟ್ರವರ್ಸಿ ಎನ್ನುವಂತಹ ಪ್ರಶ್ನೆಗಳನ್ನೂ ಅವರು ಕೇಳುತ್ತಾರೆ. ಹೆಚ್ಚಾಗಿ ಅವರ ಮಾತುಗಳು ಸೆಕ್ಸ್, ಅಫೇರ್, ಬ್ರೇಕ್ ಅಪ್, ಡೇಟಿಂಗ್ ಇದರ ಸುತ್ತಲೇ ಗಿರಕಿ ಹೊಡೆಯುತ್ತವೆ. ಅದರಲ್ಲೂ ಸೆಕ್ಸ್ ಬಗ್ಗೆ ಕೇಳದೇ ಯಾವ ಎಪಿಸೋಡ್ ಅನ್ನು ಅವರು ಮುಗಿಸೋದಿಲ್ಲ. ಜಾಹ್ನವಿ ಎಪಿಸೋಡ್ ನಲ್ಲಿ ಅವರು ಬೇರೆ ರೀತಿಯಲ್ಲಿ ಕೇಳಿ ಅಚ್ಚರಿ ಮೂಡಿಸಿದ್ದಾರೆ.

    ಜಾಹ್ನವಿ ಕಪೂರ್ ಅವರ ಸಿನಿಮಾ ಕೆರಿಯರ್, ಶೂಟಿಂಗ್, ಫ್ರೆಂಡ್ಸ್ ಹೀಗೆ ಒಂದೊಂದೇ ಪ್ರಶ್ನೆಗಳನ್ನು ಕೇಳುತ್ತಾ ಹೋಗುವ ಕರಣ್ ಜೋಹಾರ್, ಕೊನೆಗೊಂದು ಪ್ರಶ್ನೆ ಮಾಡುತ್ತಾರೆ. ರಾಪಿಡ್ ರೌಂಡ್ ನಲ್ಲಿ ಅವರು, ನಿಮ್ಮನ್ನು ಮೊದಲ ಬಾರಿಗೆ ಹುಡುಗರು ನೋಡಿದಾಗ, ಅವರ ಕಣ್ಣುಗಳು ನಿಮ್ಮಲ್ಲಿ ಏನನ್ನು ನೋಡುತ್ತಿರುತ್ತವೆ ಎಂದು ಕೇಳಿದ್ದಾರೆ. ಈ ಪ್ರಶ್ನೆಗೆ ಅಷ್ಟೇ ಸಖತ್ತಾಗಿ ಆನ್ಸರ್ ಮಾಡಿದ್ದಾರೆ ಜಾಹ್ನವಿ.

    ಮೊದಲ ಬಾರಿಗೆ ಹುಡುಗರು ನನ್ನನ್ನು ನೋಡಿದಾಗ, ಅವರು ನನ್ನ ಕಣ್ಣುಗಳನ್ನು ನೋಡುತ್ತಾರೆ ಎಂದುಕೊಂಡಿದ್ದೆ. ಆದರೆ, ಅವರು ಬೇರೆಯದನ್ನೇ ನೋಡ್ತಾ ಇರ್ತಾರೆ ಅನ್ನೋದು ಆಮೇಲೆ ಗೊತ್ತಾಯಿತು ಎಂದು ಹೇಳುವ ಮೂಲಕ ಹುಡುಗರಿಗೆ ಶಾಕ್ ನೀಡಿದ್ದಾರೆ.

  • ಗೆಳೆಯನ ಜೊತೆ ತಿಮ್ಮಪ್ಪನ ದರ್ಶನ ಮಾಡಿದ ಜಾಹ್ನವಿ ಕಪೂರ್

    ಗೆಳೆಯನ ಜೊತೆ ತಿಮ್ಮಪ್ಪನ ದರ್ಶನ ಮಾಡಿದ ಜಾಹ್ನವಿ ಕಪೂರ್

    ತೆಲುಗು ಚಿತ್ರೋದ್ಯಮಕ್ಕೆ ಎಂಟ್ರಿ ಕೊಟ್ಟಿರುವ ಬಾಲಿವುಡ್ ನ ಖ್ಯಾತ ನಟಿ ಜಾಹ್ನವಿ ಕಪೂರ್ (Jahnavi Kapoor) , ಪದೇ ಪದೇ ತಿರುಪತಿ ತಿಮ್ಮಪ್ಪನ (Tirupati Timmappa) ದರ್ಶನ ಮಾಡುತ್ತಿದ್ದಾರೆ. ಪ್ರತಿ ಬಾರಿಯೂ ಒಬ್ಬರೇ ದರ್ಶನ ಮಾಡುತ್ತಿದ್ದವರು, ಈ ಬಾರಿ ಗೆಳೆಯ ಶಿಖರ್ ಪಹರಿಯಾ (Shikhar Paharia) ಜೊತೆ ತಿರುಪತಿಗೆ ಬಂದಿದ್ದರು. ಶುಕ್ರವಾರ ಬೆಳಗ್ಗೆ ಗೆಳೆಯನ ಜೊತೆ ಆಗಮಿಸಿದ್ದ ಅವರು, ಜೊತೆಯಾಗಿ ದರ್ಶನ ಮಾಡಿದ್ದಾರೆ.

    ಹೊಸ ವರ್ಷವನ್ನು ಅವರು ತಿರುಪತಿಗೆ ತಿಮ್ಮಪ್ಪನ ಆಶೀರ್ವಾದ ಪಡೆಯುವ ಮೂಲಕ ಆಚರಿಸಿದ್ದಾರೆ. 2024 ಅನ್ನು ಹೊಸ ಕನಸಿನೊಂದಿಗೆ ಆರಂಭಿಸುತ್ತಿದ್ದೇನೆ ಎಂದು ಅವರು ಇನ್ಸ್ಟಾದಲ್ಲಿ ಪೋಸ್ಟ್ ಮಾಡಿದ್ದಾರೆ. ಗೋಲ್ಡನ್ ಕಲರ್ ಸೀರೆಯುಟ್ಟು, ದೇವಸ್ಥಾನದ ಮುಂದೆ ನಿಂತು ಫೋಟೋ ತೆಗೆದುಕೊಂಡಿದ್ದಾರೆ.

     

    ಗೆಳೆಯ ಶಿಖರ್ ಪಹರಿಯಾ ಬಗ್ಗೆ ಜಾ‍ಹ್ನವಿ ಹಲವಾರು ಬಾರಿ ಮಾತನಾಡಿದ್ದಾರೆ. ಡೇಟಿಂಗ್ ವಿಚಾರ ಬಂದಾಗ, ಶಿಖರ್ ನನ್ನ ಇಡೀ ಕುಟುಂಬಕ್ಕೆ ಪರಿಚಿತರು ಎಂದು ಹೇಳುವ ಮೂಲಕ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಇದೀಗ ಬಹಿರಂಗವಾಗಿಯೇ ಗೆಳೆಯನ ಜೊತೆ ದೇವಸ್ಥಾನಕ್ಕೂ ಬಂದಿದ್ದಾರೆ.

  • ‘ದೇವರ’ ಸಿನಿಮಾದಲ್ಲಿಲ್ಲ ಸಾಯಿ ಪಲ್ಲವಿ : ಚಿತ್ರತಂಡ ಸ್ಪಷ್ಟನೆ

    ‘ದೇವರ’ ಸಿನಿಮಾದಲ್ಲಿಲ್ಲ ಸಾಯಿ ಪಲ್ಲವಿ : ಚಿತ್ರತಂಡ ಸ್ಪಷ್ಟನೆ

    ಜ್ಯೂನಿಯರ್ ಎನ್.ಟಿ.ಆರ್ ನಟನೆಯ ‘ದೇವರ’ ಸಿನಿಮಾದಲ್ಲಿ ಪ್ರತಿಭಾವಂತ ನಟಿ ಸಾಯಿ ಪಲ್ಲವಿ (Sai Pallavi) ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಸಾಯಿ ಪಲ್ಲವಿ ಮತ್ತು ಜ್ಯೂ.ಎನ್.ಟಿ.ಆರ್ ಅಭಿಮಾನಿಗಳು ಈ ವಿಷಯವನ್ನು ಸಂಭ್ರಮಿಸಿದ್ದರು. ಈ ಜೋಡಿ ತೆರೆಯ ಮೇಲೆ ಮೋಡಿ ಮಾಡಲಿದೆ ಎಂದು ಖುಷಿ ಪಟ್ಟಿದ್ದರು. ಆದರೆ, ಆ ಖುಷಿಯು ಠುಸ್ ಪಟಾಕಿಯಾಗಿದೆ. ಈ ಚಿತ್ರದಲ್ಲಿ ಸಾಯಿ ಪಲ್ಲವಿ ನಟಿಸುತ್ತಿಲ್ಲ ಎಂದು ಸ್ವತಃ ಚಿತ್ರತಂಡವೇ ಸ್ಪಷ್ಟನೆ ನೀಡಿದೆ.

    ರ್ ಆರ್ ಆರ್ ಚಿತ್ರದ ನಂತರ ಜ್ಯೂನಿಯರ್ ಎನ್ಟಿಆರ್ (Jr NTR) ಕೊರಟಾಲ ಶಿವ (Koratala Shiva) ನಿರ್ದೇಶನದ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜ್ಯೂನಿಯರ್ ಎನ್ಟಿಆರ್ ಅವರ ಹುಟ್ಟುಹಬ್ಬದಂದು ಚಿತ್ರದ ಹೆಸರನ್ನು ಘೋಷಿಸಲಾಗಿತ್ತು. ಚಿತ್ರಕ್ಕೆ ‘ದೇವರ’ (Devara) ಎಂಬ ಶೀರ್ಷಿಕೆ ಇಡಲಾಗಿದ್ದು, ಚಿತ್ರದ ಫಸ್ಟ್ಲುಕ್ ಪೋಸ್ಟರ್ ಸಹ ಅದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ:ಕಿಚ್ಚನ ಮುಂದಿನ ಚಿತ್ರಕ್ಕೆ ಹೊಸ ನಿರ್ದೇಶಕ: ಅವರನ್ನ ಬಿಟ್ಟು ಇವರಾರು?

    ಈ ಪೋಸ್ಟರ್ನಲ್ಲಿ ಜ್ಯೂನಿಯರ್ ಎನ್.ಟಿ.ಆರ್ ಕಪ್ಪು ಬಣ್ಣದ ಲುಂಗಿ ಮತ್ತು ಶರ್ಟ್ ತೊಟ್ಟು,  ಸಮುದ್ರದ ಬಂಡೆಗಳ ಮೇಲೆ ಕೊಡಲಿ ಹಿಡಿದು ನಿಂತು ತೀಕ್ಷ್ಣವಾಗಿ ನೋಡುತ್ತಿರುವ ಪೋಸ್ಟರ್ ಅದಾಗಿತ್ತು. ಕೆಳೆಗೆ ಹೆಣಗಳ ರಾಶಿ ಇದೆ. ಪಕ್ಕದಲ್ಲಿ ಮುರಿದು ಬಿದ್ದ ದೋಣಿಯೊಂದನ್ನೂ ಕಾಣಬಹುದಾಗಿದೆ. ಜ್ಯೂನಿಯರ್ ಎನ್.ಟಿ.ಆರ್ ಅವರ ಅಭಿಮಾನಿಗಳು ಅವರ ಮಾಸ್ ಲುಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.

    ಈ ಸಿನಿಮಾದ ನಾಯಕಿ ಕುರಿತು ಹೊಸ ಅಪ್ ಡೇಟ್ ಸಿಕ್ಕಿದ್ದು, ದೇವರ ಚಿತ್ರದ ಮೂಲಕ ಶ್ರೀದೇವಿ ಮಗಳು ಜಾಹ್ನವಿ ಕಪೂರ್ (Jahnavi Kapoor) ಇದೇ ಮೊದಲ ಬಾರಿಗೆ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಜೊತೆಗೆ ಬಾಲಿವುಡ್ನ ಖ್ಯಾತ ನಟ ಸೈಫ್ ಅಲಿ ಖಾನ್ ಸಹ ಖಳನಟನಾಗಿ ಈ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದಲ್ಲದೆ ಪ್ರಕಾಶ್ ರೈ, ಶ್ರೀಕಾಂತ್ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದೆ. ಯುವಸುಧಾ ಆರ್ಟ್ಸ್ ಮತ್ತು ಎನ್ಟಿಆರ್ ಆರ್ಟ್ಸ್ನಡಿ ಮಿಕ್ಕಿಲಿನೇನಿ ಸುಧಾಕರ್ ಮತ್ತು ಹರಿಕೃಷ್ಣ ನಿರ್ಮಿಸುತ್ತಿರುವ ಈ ಚಿತ್ರವನ್ನು ಖ್ಯಾತ ನಟ ನಂದಮೂರಿ ಕಲ್ಯಾಣರಾಮ್ ನಿರ್ಮಿಸುತ್ತಿದ್ದಾರೆ.

    2024ರ ಏಪ್ರಿಲ್ 06ಕ್ಕೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗಲಿರುವ ಈ ಚಿತ್ರಕ್ಕೆ ಅನಿರುದ್ಧ್ ಸಂಗೀತ, ರತ್ನವೇಲು ಛಾಯಾಗ್ರಹಣ ಮತ್ತು ಶ್ರೀಕರ್ ಪ್ರಸಾದ್ ಅವರ ಸಂಕಲನವಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]