Tag: ಜಿಂಬಾಂಬ್ವೆ

  • ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

    ಬೌಂಡರಿಯಿಂದಲೇ 196 ರನ್‌ – ವೇಗದ ತ್ರಿಶತಕ ಸಿಡಿಸಿ ದಾಖಲೆ ಬರೆದ ಮುಲ್ಡರ್

    ಬುಲವಾಯೊ: ಜಿಂಬಾಬ್ವೆ (Zimbabwe) ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ (Second Test) ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (South Africa) ತಂಡದ ನಾಯಕ ವಿಯಾನ್ ಮುಲ್ಡರ್ (Wiaan Mulder) ವೇಗದ ತ್ರಿಶತಕ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ.

    ಮುಲ್ಡರ್‌ 297 ಎಸೆತಗಳಲ್ಲಿ ತ್ರಿಶತಕ ಸಿಡಿಸಿದರು. ಈ ಮೂಲಕ ವೇಗದ ತ್ರಿಶತಕ (Triple Hundreds) ಸಿಡಿಸಿದ ಬ್ಯಾಟರ್‌ಗಳ ಪೈಕಿ ಎರಡನೇ ಸ್ಥಾನ ಪಡೆದರು.

    ವೇಗದ ತ್ರಿಶತಕ ಸಿಡಿಸಿದ ಬ್ಯಾಟರ್‌ ಪಟ್ಟಿಯಲ್ಲಿ ವೀರೇಂದ್ರ ಸೆಹ್ವಾಗ್‌ ಮೊದಲ ಸ್ಥಾನದಲ್ಲಿದ್ದಾರೆ. ಸೆಹ್ವಾಗ್‌ 2008 ರಲ್ಲಿ ಆಫ್ರಿಕಾ ವಿರುದ್ಧ ನಡೆದ ಟೆಸ್ಟ್‌ ಪಂದ್ಯದಲ್ಲಿ 278 ಎಸೆತದಲ್ಲಿ ತ್ರಿಶತಕ ಸಿಡಿಸಿದ್ದರು. ಇದನ್ನೂ ಓದಿ: ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ 4ನೇ ಸ್ಥಾನಕ್ಕೆ ಜಿಗಿದ ಭಾರತ

    ಮುಲ್ಡಾರ್‌ ಔಟಾಗದೇ 367 ರನ್‌ (334 ಎಸೆತ, 49 ಬೌಂಡರಿ, 4 ಸಿಕ್ಸ್‌) ಹೊಡೆದರು. ಇದು ದಕ್ಷಿಣ ಆಫ್ರಿಕಾ ಪರ ದಾಖಲಾದ ವೈಯಕ್ತಿಕ ಅತ್ಯಧಿಕ ಸ್ಕೋರ್‌. ಈ ಮೊದಲು ಹಾಶಿಮ್‌ ಆಮ್ಲಾ ಇಂಗ್ಲೆಂಡ್‌ ವಿರುದ್ಧ ಔಟಾಗದೇ 311 ರನ್‌ ಗಳಿಸಿದ್ದರು.

    ಮುಲ್ಡರ್‌ ಬೌಂಡರಿಯಿಂದಲೇ 196 ರನ್‌ ಹೊಡೆದಿರುವುದು ವಿಶೇಷ. ಅಂತಿಮವಾಗಿ ದಕ್ಷಿಣ ಆಫ್ರಿಕಾ 114 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 626 ರನ್‌ ಗಳಿಸಿದ್ದಾಗ ಮುಲ್ಡರ್‌ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿಕೊಂಡರು. ಇದನ್ನೂ ಓದಿ: ಸ್ಟೋಕ್ಸ್ಪಡೆಗೆ ಭಾರತ ಮಾಸ್ಟರ್ಸ್ಟ್ರೋಕ್ ಒಂದು ಗೆಲುವಿನಲ್ಲಿ ಹತ್ತಾರು ದಾಖಲೆಗಳ ಸುರಿಮಳೆ

    ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತ್ಯಧಿಕ ರನ್‌ ಹೊಡೆದ ಬ್ಯಾಟರ್‌ಗಳು
    ಬ್ರಿಯಾನ್‌ ಲಾರಾ – 400* ರನ್‌ – 582 ಎಸೆತ – ಇಂಗ್ಲೆಂಡ್‌ 2004

    ಮ್ಯಾಥ್ಯೂ ಹೇಡನ್ – 380 ರನ್‌ – 437 ಎಸೆತಗಳು – ಜಿಂಬಾಬ್ವೆ – 2003

    ಬ್ರಿಯಾನ್ ಲಾರಾ – 375 ರನ್‌- 538 ಎಸೆತಗಳು – ಇಂಗ್ಲೆಂಡ್ – 1994

    ಮಹೇಲಾ ಜಯವರ್ಧನೆ – 374 ರನ್‌ – 572 ಎಸೆತಗಳು – ದಕ್ಷಿಣ ಆಫ್ರಿಕಾ – 2006

    ವಿಯಾನ್ ಮುಲ್ಡರ್ – 367* ರನ್‌ – 334 ಎಸೆತಗಳು – ಜಿಂಬಾಬ್ವೆ – 2025

    ಗ್ಯಾರಿ ಸೋಬರ್ಸ್ – 365* ರನ್‌ – ರೆಕಾರ್ಡ್ ಮಾಡಲಾಗಿಲ್ಲ – ಪಾಕಿಸ್ತಾನ – 1958

  • ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಜನರ ಹಸಿವು ನೀಗಿಸಲು 200 ಆನೆಗಳ ಹತ್ಯೆಗೆ ಮುಂದಾದ ಜಿಂಬಾಬ್ವೆ!

    ಹರಾರೆ: ಭಾರತದಂತಹ ದೇಶಗಳಲ್ಲಿ ಕಾಡು ಪ್ರಾಣಿಗಳನ್ನು ಕೊಲ್ಲಲು ನಿಷೇಧವಿದೆ. ಆದರೀಗ ನಮೀಬಿಯಾ ಸರ್ಕಾರದ ಬಳಿಕ ಜಿಂಬಾಬ್ವೆ ಸರ್ಕಾರ (Zimbabwe Government) ಕೂಡ ಅಲ್ಲಿನ ಕಾಡು ಪ್ರಾಣಿಗಳನ್ನು ಕೊಲ್ಲಲ್ಲು ಅನುಮತಿ ನೀಡಿದೆ.

    ಹೌದು. ಭೀಕರ ಬರಗಾಲ ಎದುರಿಸುತ್ತಿರುವ ಜಿಂಬಾಬ್ವೆಯಲ್ಲಿ ಜನರಿಗೆ ಆಹಾರ ಒದಗಿಸುವ ಸಲುವಾಗಿ ಪರಿಣಮಿಸಿದೆ. ಆದ್ದರಿಂದ ಆನೆಗಳನ್ನು (Elephants) ಕೊಲ್ಲಲು ಅಲ್ಲಿನ ಅಧಿಕಾರಿಗಳೇ ನಿರ್ಧರಿಸಿದ್ದಾರೆ. 1.63 ಕೋಟಿಯಷ್ಟು ಜನಸಂಖ್ಯೆ ಹೊಂದಿರುವ ಜಿಂಬಾಬ್ವೆ ದೇಶದಲ್ಲಿ ಅರ್ಧದಷ್ಟು ಜನ ಹಸಿವಿನಿಂದ ಬಳಲುತ್ತಿದ್ದಾರೆ. ಅವರ ಹಸಿವನ್ನು ನೀಗಿಸುವ ಉದ್ದೇಶದಿಂದ 200 ಆನೆಗಳನ್ನು ಕೊಲ್ಲಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.

    ಜೊತೆಗೆ 55,000 ಆನೆಗಳಿಗೆ ಆಶ್ರಯ ಒದಗಿಸಬಲ್ಲ ನಮ್ಮ ದೇಶದಲ್ಲಿ ಪಸ್ತುತ 84,000 ಆನೆಗಳಿದ್ದು, ಆನೆಗಳ ಸಂಖ್ಯೆಯಲ್ಲಿ ಜಿಂಬಾಬ್ವೆ ವಿಶ್ವದಲ್ಲೇ 2ನೇ ಸ್ಥಾನದಲ್ಲಿದೆ ಎನ್ನುವ ಮೂಲಕ ಆನೆ ಹತ್ಯೆ ಸಮರ್ಥಿಸಿಕೊಂಡಿದ್ದಾರೆ. ಈ ನಡುವೆ ಆನೆಗಳನ್ನು ಕೊಂದು ಅವುಗಳ ಮಾಂಸವನ್ನು ಒಣಗಿಸಿ ಪ್ರೋಟೀನ್ ಅವಶ್ಯಕತೆ ಇರುವವರಿಗೆ ಕೊಡುವ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಜಿಂಬಾಬ್ವೆ ಪರಿಸರ ಸಚಿವ ಸಿತೆಂಬಿಸೋ ನಿಯೋನಿ ಹೇಳಿದ್ದಾರೆ ಎಂದೂ ಸಹ ವರದಿಯಾಗಿತ್ತು. ಇದನ್ನೂ ಓದಿ: ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಸದಸ್ಯರ ಮೇಲೆ ದಾಳಿ, ಸಾವಿರಾರು ಪೇಜರ್‌ ಸ್ಫೋಟ – 8 ಸಾವು, 2 ಸಾವಿರಕ್ಕೂ ಹೆಚ್ಚು ಮಂದಿ ಗಂಭೀರ ಗಾಯ

    ಅತಿಹೆಚ್ಚು ಆನೆಗಳನ್ನು ಹೊಂದಿರುವ ಟಾಪ್‌-5 ದೇಶಗಳು:
    ಪ್ರತಿ 5 ವರ್ಷಗಳಿಗೊಮ್ಮೆ ಆನೆ ಗಣತಿಯನ್ನು ನಡೆಸಲಾಗುತ್ತದೆ. 2021ರ ಆನೆ ಗಣತಿ ವರದಿ ಪ್ರಕಾರ ಜಿಂಬಾಬ್ವೆ 1 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವಕ್ಕೆ 2ನೇ ಸ್ಥಾನದಲ್ಲಿತ್ತು. ಆದರೀಗ 84 ಸಾವಿರ ಆನೆಗಳನ್ನಷ್ಟೇ ಹೊಂದಿದೆ ಎಂದು ವರದಿಗಳು ಉಲ್ಲೇಖಿಸಿವೆ. ಇದನ್ನೂ ಓದಿ: 83 ಆನೆ, 30 ಹಿಪ್ಪೋ ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಂದು ಮಾಂಸವನ್ನು ಜನರಿಗೆ ವಿತರಿಸಲು ಮುಂದಾದ ನಮೀಬಿಯಾ

    2021ರ ಆನೆ ಗಣತಿ ವರದಿ ಅನ್ವಯ ಬೋಟ್ಸ್ವಾನ 1.30 ಲಕ್ಷ ಆನೆಗಳನ್ನು ಹೊಂದಿದ್ದು, ವಿಶ್ವದಲ್ಲೇ ಅತಿಹೆಚ್ಚು ಆನೆಗಳನ್ನು ಹೊಂದಿರುವ ದೇಶವಾಗಿದೆ. ಇನ್ನೂ ಜಿಂಬಾಬ್ವೆ 1 ಲಕ್ಷ, ತಾಂಜಾನಿಯಾ 60 ಸಾವಿರ ಆನೆಗಳನ್ನು ಹೊಂದಿದೆ. 2022ರ ಗಣತಿ ಪ್ರಕಾರ 35 ಸಾವಿರ ಆನೆಗಳನ್ನು ಹೊಂದಿರುವ ಕೀನ್ಯಾ 4ನೇ ಸ್ಥಾನದಲ್ಲಿದ್ದು, 24 ಸಾವಿರ ಆನೆಗಳನ್ನು ಹೊಂದಿರುವ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದೆ.

    ನಮೀಬಿಯಾದಲ್ಲೂ ಬರ:
    ಕೆಲ ದಿನಗಳ ಹಿಂದೆಯಷ್ಟೇ ನಮೀಬಿಯಾ ಸರ್ಕಾರವೂ ಪ್ರಾಣಿಗಳನ್ನು ಕೊಲ್ಲುವ ನಿರ್ಧಾರ ತೆಗೆದುಕೊಂಡಿದೆ. ಬರದಿಂದ (Drought) ತತ್ತರಿಸಿರುವ ನಮೀಬಿಯಾ ಜನರಿಗೆ ಆಹಾರ ಒದಗಿಸುವ ನಿಟ್ಟಿನಲ್ಲಿ 83 ಆನೆಗಳು (Elephants) ಸೇರಿದಂತೆ 723 ಕಾಡು ಪ್ರಾಣಿಗಳನ್ನು ಕೊಲ್ಲುವ ಯೋಜನೆಯನ್ನು ರೂಪಿಸಿದೆ. ತೀವ್ರ ಬರಗಾಲದಿಂದ ಆಹಾರಕ್ಕಾಗಿ ಹೆಣಗಾಡುತ್ತಿರುವವರಿಗೆ ಮಾಂಸವನ್ನು ವಿತರಿಸುವುದಾಗಿ ಸರ್ಕಾರ ಇತ್ತೀಚೆಗೆ ಹೇಳಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

    ಪ್ರಾಣಿಗಳ ಸಂಖ್ಯೆಯು ಲಭ್ಯವಿರುವ ಹುಲ್ಲುಗಾವಲು ಭೂಮಿ ಮತ್ತು ನೀರಿನ ಸಂಪನ್ಮೂಲಗಳನ್ನು ಮೀರಿದೆ. ಇದರಿಂದಾಗಿ ಜನವಸತಿ ಇರುವ ಸ್ಥಳಗಳಲ್ಲಿ ಕಾಡು ಪ್ರಾಣಿಗಳು ಮತ್ತು ಮಾನವರ ಸಂಘರ್ಷ ಹೆಚ್ಚಾಗಿದೆ. ಈ ಸಂಘರ್ಷವನ್ನು ನಿಯಂತ್ರಿಸಲು ಗುರುತಿಸಲಾದ ಪ್ರದೇಶಗಳಿಂದ 83 ಆನೆಗಳನ್ನು ಕೊಲ್ಲಲಾಗುತ್ತದೆ ಮತ್ತು ಮಾಂಸವನ್ನು ಬರ ಪರಿಹಾರ ಕಾರ್ಯಕ್ರಮಕ್ಕೆ ಬಳಸಲಾಗುತ್ತದೆ. ಆನೆಗಳ ಜೊತೆಗೆ, 30 ಹಿಪ್ಪೋಗಳು, 60 ಎಮ್ಮೆಗಳು, 50 ಇಂಪಾಲಾಗಳು, 100 ನೀಲಿ ಕಾಡುಕೋಣಗಳು, 300 ಜೀಬ್ರಾಗಳು ಮತ್ತು 100 ಎಲ್ಯಾಂಡ್‌ಗಳನ್ನು ಕೊಲ್ಲಲು ಯೋಜಿಸಿದೆ. ವೃತ್ತಿಪರ ಬೇಟೆಗಾರರು ಮತ್ತು ಸರ್ಕಾರದಿಂದ ಗುತ್ತಿಗೆ ಪಡೆದ ಕಂಪನಿಗಳು ಈಗಾಗಲೇ 157 ಪ್ರಾಣಿಗಳನ್ನು ಬೇಟೆಯಾಡಿ, 56,800 ಕೆಜಿ ಮಾಂಸವನ್ನು ಜನರಿಗೆ ನೀಡಲಾಗಿದೆ ಎಂದು ನಮೀಬಿಯಾ ಪರಿಸರ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿತ್ತು.

  • ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಸಂಜು ಅಮೋಘ ಫಿಫ್ಟಿ, ಶಿವಂ ದುಬೆ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ; 4-1ರಲ್ಲಿ ಸರಣಿ ಗೆದ್ದ ಭಾರತ!

    ಹರಾರೆ: ಸಂಜು ಸ್ಯಾಮ್ಸನ್ (Sanju Samson)​ ಅಮೋಘ ಅರ್ಧ ಶತಕ, ಶಿವಂ ದುಬೆ ಆಲ್‌ರೌಂಡ್‌ ಆಟ ಹಾಗೂ ಮುಕೇಶ್‌ ಕುಮಾರ್‌ ಮಾರಕ ಬೌಲಿಂಗ್‌ ದಾಳಿಯಿಂದ ಭಾರತ ತಂಡ (Team India) ಜಿಂಬಾಬ್ವೆ ವಿರುದ್ಧ ಟಿ20 ಸರಣಿಯ 5ನೇ ಪಂದ್ಯದಲ್ಲೂ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1ರಲ್ಲಿ ಗೆದ್ದುಕೊಂಡಿದೆ.

    ಆರಂಭಿಕ ಪಂದ್ಯದಲ್ಲಿ ಅತ್ಯಲ್ಪ ಮೊತ್ತವಿದ್ದರೂ ಅಚ್ಚರಿ ಸೋಲು ಕಂಡಿದ್ದ ಯುವ ಬಳಗದ ಭಾರತ ತಂಡ ಬಳಿಕ ಸತತ ನಾಲ್ಕೂ ಪಂದ್ಯಗಳಲ್ಲೂ ಭರ್ಜರಿ ಗೆಲುವಿನೊಂದಿಗೆ ಸರಣಿ ತನ್ನದಾಗಿಸಿಕೊಂಡಿದೆ. ಅಲ್ಲದೇ ತನ್ನ ನಾಯಕತ್ವದಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಗೆಲುವು ಸಾಧಿಸುವ ಮೂಲಕ ಶುಭಮನ್‌ ಗಿಲ್‌ (Shubman Gill) ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

    ಭಾನುವಾರ ಹರಾರೆ ಸ್ಪೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆದ ಕೊನೇ ಟಿ20 ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 6 ವಿಕೆಟ್‌ ನಷ್ಟಕ್ಕೆ 167 ರನ್‌ ಬಾರಿಸಿತ್ತು. 168 ರನ್‌ಗಳ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ (Zimbabwe), ಟೀಂ ಇಂಡಿಯಾ ಬೌಲರ್‌ಗಳ ಮಾರಕ ದಾಳಿಗೆ ತತ್ತರಿಸಿ 18.3 ಓವರ್‌ಗಳಲ್ಲೇ 125 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ – ನಿತ್ಯ 8 ಸಾವಿರ ಕ್ಯುಸೆಕ್‌ ನೀರು ಹರಿಸಲು ಸರ್ಕಾರ ನಿರ್ಧಾರ: ಸಿಎಂ

    ಆರಂಭದಲ್ಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಗಿದ್ದ ಭಾರತ ತಂಡಕ್ಕೆ ಆಘಾತ ಎದುರಾಗಿತ್ತು. ಮೊದಲ ಐದು ಓವರ್‌ಗಳಲ್ಲೇ 40 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಸಂಜು ಸ್ಯಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾಯಿತು. 56 ಎಸೆತಗಳಲ್ಲಿ ಈ ಜೋಡಿ 4ನೇ ವಿಕೆಟ್‌ಗೆ 65 ರನ್‌ ಬಾರಿಸಿತ್ತು. ಈ ವೇಳೆ ಸಿಕ್ಸರ್‌ ಬಾರಿಸಲು ಮುಂದಾದ ರಿಯಾನ್‌ ಪರಾಗ್‌ ಕ್ಯಾಚ್‌ ನೀಡಿ ಔಟಾದರು. ಬಳಿಕ ಕ್ರೀಸ್‌ಗಿಳಿದ ಶಿವಂ ದುಬೆ (Shivam Dube) ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಲು ಶುರು ಮಾಡಿದರು. ಇದರಿಂದ ಭಾರತ ತಂಡ 160 ರನ್‌ ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು.

    ಸಂಜು 110 ಮೀಟರ್‌ ಸಿಕ್ಸರ್‌:
    ಸಂಕಷ್ಟ ಸಮಯದಲ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟಿದ ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ನೊಂದಿಗೆ 58 ರನ್‌ ಚಚ್ಚಿದರು. ಈ ವೇಳೆ ಸಂಜು ಸ್ಯಾಮ್ಸನ್‌ ಬಾರಿಸಿದ ಸಿಕ್ಸರ್‌ವೊಂದು 110 ಮೀಟರ್‌ ಸಾಗಿತು. ಸಂಜು ಸಿಡಿಲಬ್ಬರದ ಸಿಕ್ಸರ್‌ ಕಂಡು ಪ್ರೇಕ್ಷಕರೇ ದಂಗಾದರು. ಇದರೊಂದಿಗೆ ಶಿವಂ ದುಬೆ 28 ರನ್‌ (12 ಎಸೆತ, 2 ಸಿಕ್ಸರ್‌, 2 ಬೌಂಡರಿ), ರಿಯಾನ್‌ ಪರಾಗ್‌ 22 ರನ್‌, ಯಶಸ್ವಿ ಜೈಸ್ವಾಲ್‌ 12 ರನ್‌, ಶುಭಮನ್‌ ಗಿಲ್‌ 13 ರನ್‌, ಅಭಿಷೇಕ್‌ ಶರ್ಮಾ 14 ರನ್‌, ರಿಂಕು ಸಿಂಗ್‌ 11 ರನ್‌, ವಾಷಿಂಗ್ಟನ್‌ 10 ರನ್‌ಗಳ ಕೊಡುಗೆ ನೀಡಿದರು.  ಇದನ್ನೂ ಓದಿ: ಮುಸ್ಲಿಂ ಮಹಿಳೆ ವಿಚ್ಚೇದನ ಜೀವನಾಂಶಕ್ಕೆ ಅರ್ಹಳು: ಸುಪ್ರೀಂ ತೀರ್ಪು ಇಸ್ಲಾಮಿಕ್ ಕಾನೂನಿಗೆ ವಿರುದ್ಧವಾಗಿದೆ ಎಂದ ಮುಸ್ಲಿಂ ಬೋರ್ಡ್‌

    ಮುಕೇಶ್‌ ಮಾರಕ ದಾಳಿ:
    ಭಾರತ ನೀಡಿದ ಸ್ಪರ್ಧಾತ್ಮಕ ಗುರಿ ಬೆನ್ನಟ್ಟಿದ ಜಿಂಬಾಬ್ವೆ 15 ರನ್​ಗೆ 2 ವಿಕೆಟ್​ ಕಳೆದುಕೊಂಡು ಆತಂಕಕ್ಕೆ ಸಿಲುಕಿತ್ತು. ಬಳಿಕ ಡಿಯೋನ್​ ಮೈರ್ಸ್​ 34 ರನ್ ಬಾರಿಸಿ ತಂಡಕ್ಕೆ ಆಧಾರವಾದರು. ಅಲ್ಲದೇ ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಬಾರಿಸಿದರು. ಮರುಮಣಿ 27 ರನ್ ಕೊಡುಗೆ ನೀಡಿದ್ದು ಬಿಟ್ಟರೆ ಉಳಿದ ಯಾರೊಬ್ಬರೂ ಕ್ರೀಸ್‌ನಲ್ಲಿ ನೆಲೆಯೂರದ ಕಾರಣ ಜಿಂಬಾಬ್ವೆ ಕೊನೇ ಪಂದ್ಯದಲ್ಲೂ ಹೀನಾಯ ಸೋಲಿಗೆ ತುತ್ತಾಯಿತು. ಭಾರತ ಪರ ಬೌಲಿಂಗ್​ನಲ್ಲಿ ಮುಕೇಶ್ ಕುಮಾರ್​ 3.3 ಓವರ್‌ಗಳಲ್ಲಿ 22 ರನ್ ಬಿಟ್ಟುಕೊಟ್ಟು 4 ವಿಕೆಟ್ ಕಿತ್ತರೆ ಶಿವಂ ದುಬೆ 2 ವಿಕೆಟ್ ಪಡೆದರು. ಇದರೊಂದಿಗೆ ತುಷಾರ್‌ ದೇಶ್‌ಪಾಂಡೆ, ವಾಷಿಂಗ್ಟನ್‌ ಸುಂದರ್‌, ಅಭಿಷೇಕ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು. ಇದನ್ನೂ ಓದಿ: AR Wedding Celebrations: ಉದ್ಯಮಿ ಅಂತ ಹೇಳ್ಕೊಂಡು ಆಹ್ವಾನವಿಲ್ಲದೇ ಬಂದಿದ್ದ ಇಬ್ಬರ ವಿರುದ್ಧ ಕೇಸ್‌! 

  • ಯಶಸ್ವಿ ಕೈ ತಪ್ಪಿದ ಚೊಚ್ಚಲ T20I ಶತಕ – 10 ವಿಕೆಟ್‌ ಜಯದೊಂದಿಗೆ ಸರಣಿ ಗೆದ್ದ ಭಾರತ!

    ಯಶಸ್ವಿ ಕೈ ತಪ್ಪಿದ ಚೊಚ್ಚಲ T20I ಶತಕ – 10 ವಿಕೆಟ್‌ ಜಯದೊಂದಿಗೆ ಸರಣಿ ಗೆದ್ದ ಭಾರತ!

    ಹರಾರೆ: ಯಶಸ್ವಿ ಜೈಸ್ವಾಲ್‌ (Yashasvi Jaiswal), ನಾಯಕ ಶುಭಮನ್‌ ಗಿಲ್‌ (Shubman Gill) ಅವರ ಶತಕದ ಜೊತೆಯಾಟದಿಂದ ಜಿಂಬಾಬ್ವೆ ವಿರುದ್ಧ ಭಾರತ 10 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ 3-1 ಅಂತರದಲ್ಲಿ ಮುನ್ನಡೆ ಸಾಧಿಸಿದ್ದು, ಸರಣಿ ಗೆದ್ದುಕೊಂಡಿದೆ.

    ಇಲ್ಲಿನ ಹರಾರೆ ಸ್ಫೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಜಿಂಬಾಬ್ವೆಗೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ (Zimbabwe) 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 152 ರನ್‌ ಗಳಿಸಿತ್ತು. 153 ರನ್‌ ಗುರಿ ಪಡೆದ ಭಾರತ 15.2 ಓವರ್‌ಗಳಲ್ಲೇ 156 ರನ್‌ ಚಚ್ಚಿ ಗೆಲುವು ಸಾಧಿಸಿತು.

    153 ಗುರಿ ಪಡೆದ ಭಾರತದ ಪರ ಆರಂಭಿಕನಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್‌ ಎದುರಾಳಿ ಬೌಲರ್‌ಗಳನ್ನು ಹಿಗ್ಗಾಮುಗ್ಗಾ ದಂಡಿಸಿದರು. ಇದರೊಂದಿಗೆ ನಾಯಕ ಶುಭಮನ್‌ ಗಿಲ್‌ ಸಹ ಬ್ಯಾಟಿಂಗ್‌ ಸಾಥ್‌ ನೀಡಿದರು. ಮುರಿಯದ ಮೊದಲ ವಿಕೆಟ್‌ಗೆ ಈ ಜೋಡಿ 15.2 ಓವರ್‌ಗಳಲ್ಲಿ 156 ರನ್‌ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿತು.

    ಕೈತಪ್ಪಿದ ಯಶಸ್ವಿ ಚೊಚ್ಚಲ ಅಂತಾರಾಷ್ಟ್ರೀಯ ಶತಕ:
    ಆರಂಭದಿಂದಲೇ ಸ್ಫೋಟಕ ಪ್ರದರ್ಶನಕ್ಕೆ ಮುಂದಾಗಿದ್ದ ಯಶಸ್ವಿ ಜೈಸ್ವಾಲ್‌ 29 ಎಸೆತಗಳಲ್ಲೇ ಸ್ಫೋಟಕ ಫಿಫ್ಟಿ ಬಾರಿಸಿದ್ದರು. ಬಳಿಕವೂ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್‌ ಮುಂದುವರಿಸಿ 53 ಎಸೆತಗಳಲ್ಲಿ 93 ರನ್‌ (2 ಸಿಕ್ಸರ್‌, 13 ಬೌಂಡರಿ) ಗಳಿಸಿ ಅಜೇಯರಾಗುಳಿದರು. ಈ ವೇಳೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸುವ ಸನಿಹದಲ್ಲಿದ್ದ ಯಶಸ್ವಿ ಜೈಸ್ವಾಲ್‌ ಶತಕ ವಂಚಿತರಾದರು. ಮತ್ತೊಂದೆಡೆ ತಾಳ್ಮೆಯ ಬ್ಯಾಟಿಂಗ್‌ನೊಂದಿಗೆ ಸಾಥ್‌ ನೀಡಿದ ನಾಯಕ ಶುಭಮನ್‌ ಗಿಲ್‌ 39 ಎಸೆತಗಳಲ್ಲಿ 58 ರನ್‌ (6 ಬೌಂಡರಿ), 2 ಸಿಕ್ಸರ್)‌ ಗಳಿಸಿ ಮಿಂಚಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಜಿಂಬಾಬ್ವೆ ಪರ ನಾಯಕ ಸಿಖಂದರ್‌ ರಝಾ 28 ಎಸೆತಗಳ್ಲಲಿ ಸ್ಫೋಟಕ 46 ರನ್‌ (3 ಸಿಕ್ಸರ್, 2 ಬೌಂಡರಿ)‌ ಬಾರಿಸಿದರೆ, ಆರಂಭಿಕರಾದ ವೆಸ್ಲಿ ಮಾಧೆವೆರೆ 25 ರನ್‌, ತಡಿವಾನಾಶೆ ಮರುಮಣಿ 32 ರನ್‌ಗಳ ಕೊಡುಗೆ ನೀಡಿದರು. ಇದರೊಂದಿಗೆ ಜಿಂಬಾಬ್ವೆ 152 ರನ್‌ ಕಲೆಹಾಕಿತ್ತು.

    ಟೀಂ ಇಂಡಿಯಾ ಪರ ಖಲೀಲ್‌ ಅಹ್ಮದ್‌ 2 ವಿಕೆಟ್‌ ಕಿತ್ತರೆ, ತುಷಾರ್‌ ದೇಶ್‌ಪಾಂಡೆ, ವಾಷಿಂಗ್ಟನ್‌ ಸುಂದರ್‌, ಅಭಿಷೇಕ್‌ ಶರ್ಮಾ, ಶಿವಂ ದುಬೆ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

  • ಗಿಲ್‌, ಗಾಯಕ್‌ವಾಡ್‌ ಸ್ಫೋಟಕ ಆಟ – ಟೀಂ ಇಂಡಿಯಾಗೆ 23 ರನ್‌ಗಳ ಜಯ

    ಗಿಲ್‌, ಗಾಯಕ್‌ವಾಡ್‌ ಸ್ಫೋಟಕ ಆಟ – ಟೀಂ ಇಂಡಿಯಾಗೆ 23 ರನ್‌ಗಳ ಜಯ

    –  3 ವಿಕೆಟ್‌ ಕಿತ್ತ ವಾಷಿಂಗ್ಟನ್‌ ಸುಂದರ್‌

    ಹರಾರೆ: ನಾಯಕ ಶುಭಮನ್‌ ಗಿಲ್‌ ಮತ್ತು ಋತುರಾಜ್‌ ಗಾಯಕ್‌ವಾಡ್‌ ಅವರ ಸ್ಫೋಟಕ ಆಟ ಮತ್ತು ಬೌಲರ್‌ಗಳ ಸಂಘಟಿತ ಪ್ರಯತ್ನದಿಂದಾಗಿ ಜಿಂಬಾಬ್ವೆ (Zimbabwe) ವಿರುದ್ಧದ ಮೂರನೇ ಟಿ20 (T20) ಪಂದ್ಯವನ್ನು ಭಾರತ (Team India) 23 ರನ್‌ಗಳಿಂದ ಜಯಗಳಿಸಿದೆ. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-1 ರಲ್ಲಿ ಮುನ್ನಡೆ ಸಾಧಿಸಿದೆ.

    ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ 4 ವಿಕೆಟ್‌ ನಷ್ಟಕ್ಕೆ 182 ರನ್‌ಗಳಿಸಿತು. ಕಠಿಣ ಸವಾಲನ್ನು ಬೆನ್ನಟ್ಟಿದ ಜಿಂಬಾಬ್ವೆ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 159 ರನ್‌ ಹೊಡೆದು ಸೋಲನ್ನೊಪ್ಪಿಕೊಂಡಿತು. ಇದನ್ನೂ ಓದಿ: 2.5 ಕೋಟಿ ನಗದು ಬಹುಮಾನ ನಿರಾಕರಿಸಿದ ದ್ರಾವಿಡ್‌ – ಕನ್ನಡಿಗನ ನಡೆಗೆ ವ್ಯಾಪಕ ಮೆಚ್ಚುಗೆ!

    ಜಿಂಬಾಬ್ವೆ ಪರ ಡಿಯೋನ್ ಮೈಯರ್ಸ್ ಔಟಾಗದೇ 65 ರನ್‌ (49 ಎಸೆತ, 7 ಬೌಂಡರಿ, 1 ಸಿಕ್ಸರ್)‌ ಸಿಡಿಸಿದರೆ ಕ್ಲೈವ್ ಮದಂಡೆ 37 ರನ್‌ (26 ಎಸೆತ, 2 ಬೌಂಡರಿ, 2 ಸಿಕ್ಸರ್)‌ ಹೊಡೆದು ಔಟಾದರು. ವಾಷಿಂಗ್ಟನ್‌ ಸುಂದರ್‌ 3 ವಿಕೆಟ್‌, ಅವೇಶ್‌ ಖಾನ್‌ 2 , ಖಲೀಲ್‌ ಅಹ್ಮದ್‌ ತಲಾ ಒಂದು ವಿಕೆಟ್‌ ಪಡೆದರು.

    ಭಾರತದ ಪರ ಮೊದಲ ವಿಕೆಟಿಗೆ ಯಶಸ್ವಿ ಜೈಸ್ವಾಲ್‌ (Yashasvi Jaiswal) ಮತ್ತು ನಾಯಕ ಶುಭಮನ್‌ ಗಿಲ್‌ (Shubman Gill) 67 ರನ್‌ ಜೊತೆಯಾಟವಾಡಿದರು. ಜೈಸ್ವಾಲ್‌ 36 ರನ್‌(27 ಎಸೆತ, 4 ಬೌಂಡರಿ, 2 ಸಿಕ್ಸರ್‌) ಹೊಡೆದು ಔಟಾದರೆ ಶುಭಮನ್‌ ಗಿಲ್‌ 66 ರನ್‌(49 ಎಸೆತ, 7 ಬೌಂಡರಿ, 3 ಸಿಕ್ಸ್‌) ಗಾಯಕ್‌ವಾಡ್‌ 49 ರನ್‌ (28 ಎಸೆತ, 4 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಔಟಾದರು.

    ಮೊದಲ ಪಂದ್ಯವನ್ನು ಜಿಂಬಾಬ್ವೆ 13 ರನ್‌ಗಳಿಂದ ಗೆದ್ದರೆ ಎರಡನೇ ಪಂದ್ಯವನ್ನು ಭಾರತ 100 ರನ್‌ಗಳಿಂದ ಗೆದ್ದುಕೊಂಡಿತ್ತು. ನಾಲ್ಕನೇ ಟಿ20 ಪಂದ್ಯ ಶನಿವಾರ ನಡೆಯಲಿದೆ.

  • 134 ರನ್‌ಗಳಿಗೆ ಜಿಂಬಾಬ್ವೆ ಆಲೌಟ್‌ – ಭಾರತಕ್ಕೆ ಜಯದ ʻಅಭಿಷೇಕʼ

    134 ರನ್‌ಗಳಿಗೆ ಜಿಂಬಾಬ್ವೆ ಆಲೌಟ್‌ – ಭಾರತಕ್ಕೆ ಜಯದ ʻಅಭಿಷೇಕʼ

    ಹರಾರೆ: ಅಭಿಷೇಕ್‌ ಶರ್ಮಾ (Abhishek Sharma) ಸ್ಫೋಟಕ ಶತಕ, ರುತುರಾಜ್‌ ಗಾಯಕ್ವಾಡ್‌ , ರಿಂಕು ಸಿಂಗ್‌ ಸ್ಫೋಟಕ ಬ್ಯಾಟಿಂಗ್‌ ನೆರವಿನಿಂದ ಭಾರತ ತಂಡವು (Team India) ಜಿಂಬಾಬ್ವೆ ವಿರುದ್ಧ 100 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 1-1 ಸಮಬಲ ಸಾಧಿಸಿದೆ.

    ಇಲ್ಲಿನ ಹರಾರೆ ಸ್ಫೋರ್ಟ್‌ ಕ್ಲಬ್‌ ಮೈದಾನದಲ್ಲಿ ಜಿಂಬಾಬ್ವೆ (Zimbabwe) ವಿರುದ್ಧ ನಡೆದ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 234 ರನ್‌ ಸಿಡಿಸಿತ್ತು. 235 ರನ್‌ಗಳ ಬೃಹತ್‌ ಮೊತ್ತದ ಗುರಿ ಪಡೆದ ಜಿಂಬಾಬ್ವೆ 18.4 ಓವರ್‌ಗಳಲ್ಲಿ 134 ರನ್‌ಗಳಿಗೆ ಸರ್ವಪತನ ಕಂಡಿತು. ಇದನ್ನೂ ಓದಿ: ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    ಚೇಸಿಂಗ್‌ ಆರಂಭಿಸಿದ ಜಿಂಬಾಬ್ವೆ ಮೊದಲ ಓವರ್‌ನಿಂದಲೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. 2ನೇ ವಿಕೆಟ್‌ಗೆ 15 ಎಸೆತಗಳಲ್ಲಿ 36 ರನ್‌ಗಳ ಸ್ಫೋಟಕ ಜೊತೆಯಾಟ ನಂತರ ಬ್ಯಾಟರ್‌ಗಳು ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಲು ವಿಫಲರಾದರು. ಅವೇಶ್‌ ಖಾನ್‌, ಮುಕೇಶ್‌ ಕುಮಾರ್‌ (Mukesh Kumar) ಬೌಲಿಂಗ್‌ ಪ್ರಹಾರಕ್ಕೆ ಜಿಂಬಾಬ್ವೆ ಬ್ಯಾಟರ್‌ಗಳು ಮಕಾಡೆ ಮಲಗಿದರು. ಅಂತಿಮವಾಗಿ ಭಾರತ 100 ರನ್‌ಗಳ ಗೆಲುವು ಸಾಧಿಸಿತು.

    ಜಿಂಬಾಬ್ವೆ ಪರ ವೆಸ್ಲಿ ಮಾಧೆವೆರೆ 43 ರನ್‌, ಬ್ರಿಯಾನ್ ಬೆನೆಟ್ (Brian Bennett) 26 ರನ್‌, ಲ್ಯೂಕ್ ಜೊಂಗ್ವೆ 33 ರನ್‌ ಗಳಿಸಿದರು. ಇನ್ನೂ ಮಾರಕ ಬೌಲಿಂಗ್‌ ದಾಳಿ ನಡೆಸಿದ ಮುಕೇಶ್‌ ಕುಮಾರ್‌ ಮತ್ತು ಅವೇಶ್‌ ಖಾನ್‌ ತಲಾ 3 ವಿಕೆಟ್‌ ಕಿತ್ತರೆ, ರವಿ ಬಿಷ್ಣೋಯಿ 2 ವಿಕೆಟ್‌, ವಾಷಿಂಗ್ಟನ್‌ ಸುಂದರ್‌ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಮುಂಬೈನಲ್ಲಿ ದೇಶದ 2ನೇ ಅತಿದೊಡ್ಡ ಕ್ರಿಕೆಟ್‌ ಸ್ಟೇಡಿಯಂ ನಿರ್ಮಿಸಲು ಪ್ಲ್ಯಾನ್‌!

    ಚೊಚ್ಚಲ ಸರಣಿಯಲ್ಲೇ ಬೆಂಕಿ ಶತಕ:
    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ್ದ ಟೀಂ ಇಂಡಿಯಾ, 234 ರನ್‌ ಬಾರಿಸಿತ್ತು. ಐಪಿಎಲ್‌ ಬಳಿಕ ಚೊಚ್ಚಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಯನ್ನಾಡುತ್ತಿರುವ ಪಂಜಾಬ್‌ ಮೂಲದ ಅಭಿಷೇಕ್‌ ಶರ್ಮಾ ಸ್ಫೋಟಕ ಶತಕ ಸಿಡಿಸಿ ಮಿಂಚಿದರು. ಮೊದಲ 33 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಅಭಿ, ಮುಂದಿನ 13 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದ್ದಾರೆ. ಇದರಲ್ಲಿ 8 ಸಿಕ್ಸರ್‌, 7 ಬೌಂಡರಿಗಳೂ ಸೇರಿವೆ.

    ಮಿಂಚಿದ ರಿಂಕು, ರುತು:
    ಇತ್ತ ಅಭಿಷೇಕ್‌ ಶರ್ಮಾ ಶತಕ ಸಿಡಿಸಿ ಪೆವಿಲಿಯನ್‌ ಹಾದಿ ಹಿಡಿಯುತ್ತಿದ್ದಂತೆ ಜೊತೆಗೂಡಿದ ರುತುರಾಜ್‌ ಗಾಯಕ್ವಾಡ್‌, ರಿಂಕು ಸಿಂಗ್‌ ಜೋಡಿ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ 87 ರನ್‌ ಚಚ್ಚಿತು. ಇದರಿಂದ ಭಾರತ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ರುತುರಾಜ್‌ 47 ಎಸೆತಗಳಲ್ಲಿ 77 ರನ್‌ (1 ಸಿಕ್ಸರ್‌, 11 ಬೌಂಡರಿ) ಚಚ್ಚಿದರೆ, ರಿಂಕು ಸಿಂಗ್‌ ಸ್ಫೋಟಕ 48 ರನ್‌ (22 ಎಸೆತ, 5 ಸಿಕ್ಸರ್‌, 2 ಬೌಂಡರಿ) ಬಾರಿಸಿ ಅಜೇಯರಾಗುಳಿದರು. ನಾಯಕ ಶುಭಮನ್‌ ಗಿಲ್‌ 2 ರನ್‌ ಗಳಿಸಿದರು.

  • ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    ಹ್ಯಾಟ್ರಿಕ್‌ ಸಿಕ್ಸರ್‌ – ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ!

    – ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದ ಭಾರತ

    ಹರಾರೆ: ಟೀಂ ಇಂಡಿಯಾದ ಯುವ ಬ್ಯಾಟರ್‌ ಅಭಿಷೇಕ್‌ ಶರ್ಮಾ (Abhishek Sharma) ತಮ್ಮ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಜಿಂಬಾಬ್ವೆ ವಿರುದ್ಧ ಮೊದಲ ಪಂದ್ಯದಲ್ಲಿ ಗೋಲ್ಡನ್‌ ಡಕ್‌ ಆಗಿ ಭಾರೀ ಟೀಕೆಗೆ ಗುರಿಯಾಗಿದ್ದ ಅಭಿ, ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ ಕೊಟ್ಟಿದ್ದಾರೆ.

    ಇಲ್ಲಿನ ಹರಾರೆ ಸ್ಫೋರ್ಟ್‌ ಕ್ಲಬ್‌ ಮೈದಾನದಲ್ಲಿ ಜಿಂಬಾಬ್ವೆ (Zimbabwe) ವಿರುದ್ಧ ನಡೆಯುತ್ತಿರುವ 2ನೇ ಟಿ20 ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ (Team India) 10 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡರೂ ಬಳಿಕ ಅಭಿಷೇಕ್‌ ಶರ್ಮಾ ಅವರ ಸ್ಪೋಟಕ ಶತಕ ಹಾಗೂ ರುತುರಾಜ್‌ ಗಾಯಕ್ವಾಡ್‌ ಅವರ ಅರ್ಧಶತಕದ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 234 ರನ್‌ ಸಿಡಿಸಿದೆ.

    ಚೊಚ್ಚಲ ಸರಣಿಯಲ್ಲೇ ಬೆಂಕಿ ಶತಕ:
    ಐಪಿಎಲ್‌ ಬಳಿಕ ಚೊಚ್ಚಲ ಅಂತಾರಾಷ್ಟ್ರೀಯ ಕ್ರಿಕೆಟ್‌ ಸರಣಿಯನ್ನಾಡುತ್ತಿರುವ ಪಂಜಾಬ್‌ ಮೂಲದ ಅಭಿಷೇಕ್‌ ಶರ್ಮಾ ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಮೊದಲ 33 ಎಸೆತಗಳಲ್ಲಿ 50 ರನ್‌ ಬಾರಿಸಿದ್ದ ಅಭಿ, ಮುಂದಿನ 13 ಎಸೆತಗಳಲ್ಲಿ 50 ರನ್‌ ಚಚ್ಚಿ ಶತಕ ಪೂರೈಸಿದ್ದಾರೆ. ಇದರಲ್ಲಿ 8 ಸಿಕ್ಸರ್‌, 7 ಬೌಂಡರಿಗಳೂ ಸೇರಿವೆ.

    ಶತಕ ವೀರರ ಎಲೈಟ್‌ ಪಟ್ಟಿಗೆ ಅಭಿ:
    ಚೊಚ್ಚಲ ಅಂತಾರಾಷ್ಟ್ರೀಯ ಸರಣಿಯಲ್ಲೇ ಸ್ಫೋಟಕ ಶತಕ ಸಿಡಿಸಿದ ಅಭಿಷೇಕ್‌ ಶರ್ಮಾ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ ದಿಗ್ಗರ ಎಲೈಟ್‌ ಪಟ್ಟಿ ಸೇರಿದ್ದಾರೆ. ಆರನ್‌ ಫಿಂಚ್‌, ಕ್ರಿಸ್‌ಗೇಲ್‌, ಕೊಲಿನ್‌ ಮನ್ರೋ, ರವೀಂದರ್‌ಪಾಲ್‌ ಸಿಂಗ್‌, ಜೋಶ್‌ ಇಂಗ್ಲಿಸ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ ಈವರೆಗೆ 47 ಎಸೆತಗಳಲ್ಲಿ ಶತಕ ಸಿಡಿಸಿದ ಆಟಗಾರರಾಗಿದ್ದರು. ಇದೀಗ ಈ ದಿಗ್ಗಜರ ಪಟ್ಟಿಗೆ ಅಭಿಷೇಕ್‌ ಶರ್ಮಾ ಸೇರ್ಪಡೆಗೊಂಡಿದ್ದಾರೆ.

    ಜಿಂಬಾಬ್ವೆಗೆ 235 ರನ್‌ ಗುರಿ:
    ಜಿಂಬಾಬ್ವೆ ವಿರುದ್ಧ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ನಷ್ಟಕ್ಕೆ 234 ರನ್‌ ಬಾರಿಸಿದ್ದು, ಎದುರಾಳಿ ಜಿಂಬಾಬ್ವೆಗೆ 235 ರನ್‌ಗಳ ಗುರಿ ನೀಡಿದೆ.

    ಮಿಂಚಿದ ರಿಂಕು, ರುತು:
    ಇತ್ತ ಅಭಿಷೇಕ್‌ ಶರ್ಮಾ ಶತಕ ಸಿಡಿಸಿ ಪೆವಿಲಿಯನ್‌ ಹಾದಿ ಹಿಡಿಯುತ್ತಿದ್ದಂತೆ ಜೊತೆಗೂಡಿದ ರುತುರಾಜ್‌ ಗಾಯಕ್ವಾಡ್‌, ರಿಂಕು ಸಿಂಗ್‌ ಜೋಡಿ ಬ್ಯಾಟಿಂಗ್‌ ಅಬ್ಬರ ಮುಂದುವರಿಸಿತು. ಮುರಿಯದ 3ನೇ ವಿಕೆಟ್‌ಗೆ ಈ ಜೋಡಿ 36 ಎಸೆತಗಳಲ್ಲಿ 87 ರನ್‌ ಚಚ್ಚಿತು. ಇದರಿಂದ ಭಾರತ 200 ರನ್‌ಗಳ ಗಡಿ ದಾಟುವಲ್ಲಿ ಯಶಸ್ವಿಯಾಯಿತು. ರುತುರಾಜ್‌ 47 ಎಸೆತಗಳಲ್ಲಿ 77 ರನ್‌ (1 ಸಿಕ್ಸರ್‌, 11 ಬೌಂಡರಿ) ಚಚ್ಚಿದರೆ, ರಿಂಕು ಸಿಂಗ್‌ ಸ್ಫೋಟಕ 48 ರನ್‌ (22 ಎಸೆತ, 5 ಸಿಕ್ಸರ್‌, 2 ಬೌಂಡರಿ) ಬಾರಿಸಿ ಅಜೇಯರಾಗುಳಿದರು. ನಾಯಕ ಶುಭಮನ್‌ ಗಿಲ್‌ 2 ರನ್‌ ಗಳಿಸಿದರು.

  • ಕಳಪೆ ಬ್ಯಾಟಿಂಗ್‌ಗೆ ಬೆಲೆತೆತ್ತ ʻಯಂಗ್‌ ಇಂಡಿಯಾʼ – ಜಿಂಬಾಬ್ವೆಗೆ 13 ರನ್‌ಗಳ ರೋಚಕ ಗೆಲುವು!

    ಕಳಪೆ ಬ್ಯಾಟಿಂಗ್‌ಗೆ ಬೆಲೆತೆತ್ತ ʻಯಂಗ್‌ ಇಂಡಿಯಾʼ – ಜಿಂಬಾಬ್ವೆಗೆ 13 ರನ್‌ಗಳ ರೋಚಕ ಗೆಲುವು!

    ಹರಾರೆ: ಬೌಲಿಂಗ್‌ನಲ್ಲಿ ಬಿಗಿ ಹಿಡಿತ ಸಾಧಿಸಿದ್ದ ಭಾರತ (Team India) ಕಳಪೆ ಬ್ಯಾಟಿಂಗ್‌ನಿಂದ ಬೆಲೆತೆತ್ತಿದೆ. ಅತ್ತ ಸಂಘಟಿತ ಪ್ರದರ್ಶನ ನೀಡಿದ ಜಿಂಬಾಬ್ವೆ (Zimbabwe) ತಂಡವು ಭಾರತದ ವಿರುದ್ಧ 13 ರನ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ ಜಿಂಬಾಬ್ವೆ 1-0 ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

    ಇಲ್ಲಿನ ಹರಾರೆ ಸ್ಫೋರ್ಟ್ಸ್‌ ಕ್ಲಬ್‌ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಭಾರತ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಜಿಂಬಾಬ್ವೆ ತಂಡಕ್ಕೆ ಬಿಟ್ಟುಕೊಟ್ಟಿತು. ಮೊದಲು ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದರೂ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 115 ರನ್‌ ಕಲೆಹಾಕಿತ್ತು. 116 ರನ್‌ಗಳ ಅಲ್ಪ ಮೊತ್ತದ ಗುರಿ ಬೆನ್ನತ್ತಿದ್ದ ಭಾರತ ಅಗ್ರ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯದಿಂದ 19.5 ಓವರ್‌ಗಳಲ್ಲೇ 102 ರನ್‌ಗೆ ಆಲೌಟ್‌ ಆಗಿ ಹೀನಾಯ ಸೋಲು ಕಂಡಿತು.

    ಚೇಸಿಂಗ್‌ ಆರಂಭಿಸಿದ ಭಾರತಕ್ಕೆ ಆರಂಭದಲ್ಲೇ ತೀವ್ರ ಆಘಾತ ಎದುರಾಯಿತು. ಪವರ್‌ ಪ್ಲೇನಲ್ಲಿ 28 ರನ್‌ ಗಳಿಸುವಷ್ಟರಲ್ಲೇ ಪ್ರಮುಖ 4 ವಿಕೆಟ್‌ ಕಳೆದುಕೊಂಡಿತ್ತು. ಒಂದಂತದಲ್ಲಿ ರನ್‌ ಕದಿಯಲು ತಿಣುಕಾಡುತ್ತಿದ್ದ ಟೀಂ ಇಂಡಿಯಾ ಮತ್ತೊಂದೆಡೆ ವಿಕೆಟ್‌ ಕಳೆದುಕೊಳ್ಳುತ್ತಾ ಸಾಗಿತ್ತು. ಪರಿಣಾಮ 61 ರನ್‌ಗಳಿಗೆ 7 ವಿಕೆಟ್‌ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು.

    8ನೇ ವಿಕೆಟ್‌ಗೆ ಜೊತೆಯಾಗಿದ್ದ ವಾಷಿಂಗ್ಟನ್‌ ಸುಂದರ್‌ ಹಾಗೂ ಅವೇಶ್‌ ಖಾನ್ (Washington Sundar) ‌ಜೋಡಿ ನೀಡಿದ 23 ರನ್‌ಗಳ ಸಣ್ಣ ಜೊತೆಯಾಟ ಮತ್ತೆ ಗೆಲುವಿನ ಕನಸು ಚಿಗುರಿಸಿತ್ತು. ಈ ವೇಳೆ ಲಾಂಗ್‌ಆಫ್‌ನಲ್ಲಿ ಸಿಕ್ಸರ್‌ಗೆ ಯತ್ನಿಸಿ ಅವೇಶ್‌ ಖಾನ್‌ ಕ್ಯಾಚ್‌ ನೀಡಿ ಔಟಾದರು. ಇನ್ನೂ ಕೊನೇ ಓವರ್‌ ವರೆಗೂ ಗೆಲುವಿನ ಭರವಸೆ ಮೂಡಿಸಿದ್ದ ವಾಷಿಂಗ್ಟನ್‌ ಸುಂದರ್‌ ರನ್‌ ಕದಿಯುವಲ್ಲಿ ವಿಫಲರಾದರು. ಪರಿಣಾಮ ಜಿಂಬಾಬ್ವೆ ಎದುರು ಮಂಡಿಯೂರಬೇಕಾಯಿತು. ಟೀಂ ಇಂಡಿಯಾ ಪರ ನಾಯಕ ಶುಭಮನ್‌ ಗಿಲ್‌ (Shubman Gill )34 ರನ್‌ (29 ಎಸೆತ, 5 ಬೌಂಡರಿ), ವಾಷಿಂಗ್ಟನ್‌ ಸುಂದರ್‌ 27 ರನ್‌, ಅವೇಶ್‌ ಖಾನ್‌ 16 ರನ್‌ ರನ್‌ ಗಳಿಸಿದರು.

    ಜಿಂಬಾಬ್ವೆ ಪರ ಮಿಂಚಿನ ಬೌಲಿಂಗ್‌ ದಾಳಿ ನಡೆಸಿದ ಸಿಖಂದರ್‌ ರಝಾ (Sikandar Raza), ಟೆಂಡಿ ಛಟಾರ ತಲಾ ಮೂರು ವಿಕೆಟ್‌ ಕಿತ್ತರೆ, ಬ್ರಿಯಾನ್ ಬೆನೆಟ್ (Brian Bennett), ವೆಲ್ಲಿಂಗ್ಟನ್ ಮಸಕಡ್ಜಾ, ಮುಜರಬಾನಿ, ಲ್ಯೂಕ್ ಜೊಂಗ್ವೆ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಬ್ಯಾಟಿಂಗ್‌ ಮಾಡಿದ ಜಿಂಬಾಬ್ವೆ ಪರ ವೆಸ್ಲಿ ಮಾಧೆವೆರೆ 21 ರನ್‌, ಬ್ರಿಯಾನ್ ಬೆನೆಟ್ 22 ರನ್‌, ಸಿಕಂದರ್ ರಝಾ 17 ರನ್‌, ಡಿಯೋನ್ ಮೈಯರ್ಸ್ 23 ರನ್‌, ಕ್ಲೈವ್ ಮದಂಡೆ 29 ರನ್‌ಗಳ ಕೊಡುಗೆ ನೀಡಿದರು. ಉಳಿದ ಬ್ಯಾಟರ್ಸ್‌ಗಳು ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರದ ಕಾರಣ 20 ಓವರ್‌ಗಳಲ್ಲಿ 115 ರನ್‌ ಗಳಿಸಲಷ್ಟೇ ಸಾಧ್ಯವಾಯಿತು.

    ಟೀಂ ಇಂಡಿಯಾ ಪರ ರವಿ ಬಿಷ್ಣೋಯಿ (Ravi Bishnoi) 4 ಓವರ್‌ಗಳಲ್ಲಿ ಕೇವಲ 13 ರನ್‌ ಬಿಟ್ಟುಕೊಟ್ಟು 4 ವಿಕೆಟ್‌ ಕಿತ್ತರೆ, ವಾಷಿಂಗ್ಟನ್‌ ಸುಂದರ್‌ 2 ವಿಕೆಟ್‌ ಹಾಗೂ ಮುಕೇಶ್‌ ಕುಮಾರ್‌ 1 ವಿಕೆಟ್‌ ಪಡೆದು ಮಿಂಚಿದರು.

  • ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಹರಾರೆ: ಚಂಡಮಾರುತ ಅಪ್ಪಳಿಸಿದ್ದರಿಂದಾಗಿ ಜಿಂಬಾಬ್ವೆ ವಿರುದ್ಧ ಟಿ20 ಸರಣಿಗೆ ಆಯ್ಕೆಯಾಗಿದ್ದ ಯಶಸ್ವಿ ಜೈಸ್ವಾಲ್‌ (Yashasvi Jaiswal), ಶಿವಂ ದುಬೆ ಹಾಗೂ ಸಂಜು ಸ್ಯಾಮ್ಸನ್‌ ಬಾರ್ಬಡೋಸ್‌ನಲ್ಲೇ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಟಿ20 ಆಯ್ಕೆ ಸಮಿತಿ ಮೊದಲ 2 ಪಂದ್ಯಗಳಿಗೆ ಸಾಯಿ ಸುದರ್ಶನ್‌, ಹರ್ಷಿತ್‌ ರಾಣಾ (Harshit Rana) ಹಾಗೂ ಜಿತೇಶ್‌ ಶರ್ಮಾ ಅವರನ್ನ ಆಯ್ಕೆ ಮಾಡಿದೆ.

    ಜೈಸ್ವಾಲ್‌, ಶಿವಂ ದುಬೆ, ಸಂಜು ಸ್ಯಾಮ್ಸನ್‌ (Sanju Samson) ಭಾರತ ಟಿ20 ವಿಶ್ವಕಪ್‌ ತಂಡದ ಭಾಗವಾಗಿದ್ದರು. ಆದ್ರೆ ಚಂಡಮಾರುತದಿಂದಾಗಿ ಇಡೀ ತಂಡ ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟಿದೆ. ಅವರು ಭಾರತಕ್ಕೆ ಬಂದ ನಂತರ ಜಿಂಬಾಬ್ವೆ ಸರಣಿಗೆ ಕಳುಹಿಸಲಾಗುತ್ತದೆ. ಹಾಗಾಗಿ 5 ಪಂದ್ಯಗಳ ಸರಣಿಯ ಮೊದಲ 2 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಿಗೆ ಸ್ಯಾಮ್ಸನ್‌, ದುಬೆ ಹಾಗೂ ಜೈಸ್ವಾಲ್‌ ಬದಲಿಗೆ ಸುದರ್ಶನ್‌, ರಾಣಾ ಹಾಗೂ ಜಿತೇಶ್‌ ಶರ್ಮಾ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಇದೇ ಜುಲೈ 6 ರಿಂದ ಜುಲೈ 14ರ ವರೆಗೆ ಜಿಂಬಾಬ್ವೆ ವಿರುದ್ಧ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಭಾರತೀಯ ಕಾಲಮಾನದ ಪ್ರಕಾರ 4 ಪಂದ್ಯಗಳು ಸಂಜೆ 4:30ಕ್ಕೆ ಹಾಗೂ ಒಂದು ಪಂದ್ಯ ರಾತ್ರಿ 9:30ಕ್ಕೆ ಆರಂಭವಾಗಲಿದೆ. 5 ಪಂದ್ಯಗಳು ಜಿಂಬಾಬ್ವೆಯ ಹರಾರೆ ಸ್ಫೋರ್ಟ್‌ಕ್ಲಬ್‌ ಮೈದಾನದಲ್ಲಿ ನಡೆಯಲಿದೆ. ಇದನ್ನೂ ಓದಿ: ಭೀಕರ ಚಂಡಮಾರುತ – ಬಾರ್ಬಡೋಸ್‌ನಲ್ಲೇ ಬೀಡುಬಿಟ್ಟ ಟೀಂ ಇಂಡಿಯಾ!

    ಕೆರೀಬಿಯನ್ ದ್ವೀಪಗಳಲ್ಲಿ ಜುಲೈ 1ರ ಬೆಳಗ್ಗಿನ ಜಾವದಿಂದಲೇ ಚಂಡಮಾರುತ ಬೀಸುತ್ತಿರುವುದರಿಂದ ವಿಮಾನಯಾನವೂ ಸೇರಿದಂತೆ ಎಲ್ಲ ನಾಗರಿಕ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಮುಖ್ಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೂ ಸದ್ಯಕ್ಕೆ ಸೇವೆ ಸ್ಥಗಿತಗೊಳಿಸಲಾಗಿದೆ .ಬಾರ್ಬಡೋಸ್ ಮತ್ತು ಸುತ್ತಮುತ್ತಲಿನ ದ್ವೀಪಗಳಲ್ಲಿ ಬಿರುಗಾಳಿಯ ತೀವ್ರತೆಯೂ ಹೆಚ್ಚಾಗಿದ್ದು, ಅಪಾಯಮಟ್ಟದಲ್ಲಿದೆ. ಹಾಗಾಗಿ ಟೀಂ ಇಂಡಿಯಾ ತವರಿಗೆ ಮರಳುವುದು ಇನ್ನೂ ಮೂರು ದಿನ ತಡವಾಗಲಿದೆ ಎಂದು ಬಿಸಿಸಿಐ ತಿಳಿಸಿದೆ.

    ಭಾರತ ತಂಡ:
    ಶುಭಮನ್‌ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಅಭಿಷೇಕ್ ಶರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್‌ ಕೀಪರ್‌), ಧ್ರುವ್ ಜುರೆಲ್ (ವಿಕೆಟ್‌ ಕೀಪರ್‌), ಶಿವಂ ದುಬೆ, ರಿಯಾನ್ ಪರಾಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಅವೇಶ್ ಖಾನ್, ಮುಖೇಶ್ ಕುಮಾರ್, ತುಷಾರ್ ದೇಶಪಾಂಡೆ. ಬದಲಾದ ಆಟಗಾರರು ಸಾಯಿ ಸುದರ್ಶನ್‌, ಹರ್ಷಿತ್‌ ರಾಣಾ ಹಾಗೂ ಜಿತೇಶ್‌ ಶರ್ಮಾ. ಇದನ್ನೂ ಓದಿ: ಐಸಿಸಿ ಕನಸಿನ ತಂಡ ಪ್ರಕಟ – ಕೊಹ್ಲಿಗಿಲ್ಲ ಸ್ಥಾನ, ಪಟ್ಟಿಯಲ್ಲಿದ್ದಾರೆ 6 ಟೀಂ ಇಂಡಿಯಾ ಆಟಗಾರರು

    ಜಿಂಬಾಬ್ವೆ ತಂಡ:
    ಸಿಕಂದರ್‌ ರಾಝಾ (ಸಿ), ಅಕ್ರಮ್ ಫರಾಜ್, ಬೆನೆಟ್ ಬ್ರಿಯಾನ್, ಕ್ಯಾಂಪ್ಬೆಲ್ ಜೊನಾಥನ್, ಚತಾರಾ, ಜೊಂಗ್ವೆ, ಇನೋಸೆಂಟ್, ಮದಂಡೆ ಕ್ಲೈವ್, ಮಾಧೆವೆರೆ, ತಡಿವಾನಾಶೆ, ವೆಲ್ಲಿಂಗ್ಟನ್, ಮಾವುತಾ ಬ್ರಾಂಡನ್, ಮುಜರಾಬಾನಿ, ಮೈಯರ್ಸ್ ಡಿಯೋನ್, ನಖ್ವಿ ಅಂತುಮ್, ನ್ಗರವ ಮತ್ತು ಶುಂಬಾ ಮಿಲ್ಟನ್. ಇದನ್ನೂ ಓದಿ: ವಿಶ್ವಕಪ್‌ ಗೆಲ್ಲಲು ಕಾರಣವಾಗಿದ್ದು 3 ಮಹತ್ವದ ನಿರ್ಧಾರ – ಟೀಂ ಇಂಡಿಯಾ ಸಿದ್ಧಗೊಂಡಿದ್ದು ಹೇಗೆ?

  • ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ

    ಭಾರತದ ವಿರುದ್ಧ T20I ಸಮರಕ್ಕಿಳಿದ ಜಿಂಬಾಬ್ವೆ – ಜುಲೈ 6 ರಿಂದ 5 ಪಂದ್ಯಗಳ ಸರಣಿ

    ಹರಾರೆ: 2024ರ ಟಿ20 ವಿಶ್ವಕಪ್‌ ಟೂರ್ನಿ ಮುಗಿಯುತ್ತಿದ್ದಂತೆ ಜಿಂಬಾಬ್ವೆ ಕ್ರಿಕೆಟ್‌ ತಂಡವು ಟೀಂ ಇಂಡಿಯಾ (Team India) ವಿರುದ್ಧ ಐದು ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಸರಣಿಯನ್ನಾಡಲಿದೆ ಎಂದು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ (Zimbabwe Cricket Board) ತಿಳಿಸಿದೆ.

    ಜಿಂಬಾಬ್ವೆ ಆತಿಥ್ಯದಲ್ಲಿ ಜುಲೈ 6, 7, 10, 13 ಮತ್ತು 14ರಂದು 5 ಪಂದ್ಯಗಳ ಸರಣಿ (T20I Series) ನಡೆಯಲಿದ್ದು, ಎಲ್ಲಾ ಪಂದ್ಯಗಳು ರಾಜಧಾನಿಯಲ್ಲಿರುವ ಹರಾರೆ ಸ್ಪೋರ್ಟ್ಸ್‌ಕ್ಲಬ್‌ ಮೈದಾನದಲ್ಲಿ ನಡೆಯಲಿದೆ. ಈ ಸರಣಿಯು ಬಿಸಿಸಿಐ ಮತ್ತು ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಬಲಪಡಿಸುತ್ತದೆ ಎಂಬುದಾಗಿ ಮಂಡಳಿ ಸದಸ್ಯರು ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿರುವ ಜಿಂಬಾಬ್ವೆ ಕ್ರಿಕೆಟ್‌ ಮಂಡಳಿ ಅಧ್ಯಕ್ಷ ತವೆಂಗ್ವಾ ಮುಕುಹ್ಲಾನಿ, ಟೀಂ ಇಂಡಿಯಾ ಜೊತೆಗೆ ಟಿ20 ಸರಣಿ ಆಯೋಜಿಸುತ್ತಿರುವುದು ನಿಜಕ್ಕೂ ರೋಮಾಂಚನಕಾರಿಯಾಗಿದೆ. ಇದರೊಂದಿಗೆ ನಮ್ಮ ಮಂಡಳಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲಿದೆ. ಅದಕ್ಕಾಗಿ ಬಿಸಿಸಿಐಗೆ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: U19 World Cup: ಮತ್ತೆ ವಿಶ್ವಕಪ್‌ನಲ್ಲಿ ಭಾರತಕ್ಕೆ ಆಸೀಸ್‌ ಎದುರಾಳಿ – ಫೆ.11ರಂದು ಫೈನಲ್‌

    ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಸಹ ಇದಕ್ಕೆ ಪ್ರತಿಕ್ರಿಯಿಸಿದ್ದು, ಬಿಸಿಸಿಐ ಜಾಗತಿಕ ಕ್ರಿಕೆಟ್‌ ಸಮುದಾಯಕ್ಕೆ ಕೊಡುಗೆ ನೀಡುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಹಂತದಲ್ಲಿ ಜಿಂಬಾಬ್ವೆ ಕ್ರಿಕೆಟ್‌ಗೆ ನಮ್ಮ ಬೆಂಬಲದ ಅಗತ್ಯವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ICC ಟೆಸ್ಟ್‌ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ – ಹೊಸ ಇತಿಹಾಸ ನಿರ್ಮಿಸಿದ ಬೂಮ್‌ ಬೂಮ್‌ ಬುಮ್ರಾ  

    ಟಿ20 ವಿಶ್ವಕಪ್‌ ಎಲ್ಲಿ-ಯಾವಾಗ?
    ಬಹುನಿರೀಕ್ಷಿತ 2024ರ ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಯ ವೇಳಾಪಟ್ಟಿ ಈಗಾಗಲೇ ಪ್ರಕಟಗೊಂಡಿದೆ. 2023ರ ಏಕದಿನ ವಿಶ್ವಕಪ್‌ ಟೂರ್ನಿ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಮುಖಾಮುಖಿಯಾಗಲಿವೆ.

    ವೆಸ್ಟ್ ಇಂಡೀಸ್ (West Indies) ಮತ್ತು ಅಮೆರಿಕದ (USA) ಆತಿಥ್ಯದಲ್ಲಿ ಈ ಬಾರಿ ಜೂನ್‌ 1 ರಿಂದ ಜೂನ್‌ 29ರ ವರೆಗೆ ನಡೆಯಲಿದೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಇದನ್ನೂ ಓದಿ: