Tag: ಜಿಕೆವಿಕೆ

  • ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಸಾಧ್ಯ: ವಿಜ್ಞಾನ ಹಬ್ಬದಲ್ಲಿ ಮೋದಿ ಮಾತು

    ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಸಾಧ್ಯ: ವಿಜ್ಞಾನ ಹಬ್ಬದಲ್ಲಿ ಮೋದಿ ಮಾತು

    ಬೆಂಗಳೂರು: ದೇಶವನ್ನು ಒಗ್ಗೂಡಿಸಲು ತಂತ್ರಜ್ಞಾನದಿಂದ ಮಾತ್ರ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆದ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನವ ಭಾರತಕ್ಕೆ ತಂತ್ರಜ್ಞಾನ ಬೇಕಿದೆ. ಬೆಂಗಳೂರು ಮೊದಲು ಗಾರ್ಡನ್ ಸಿಟಿಯಾಗಿತ್ತು, ಇಂದು ಸ್ಟಾರ್ಟ್ ಅಪ್ ಕೇಂದ್ರವಾಗಿದೆ. ಜಗತ್ತು ಬೆಂಗಳೂರಿನತ್ತ ಮುಖ ಮಾಡುತ್ತಿದೆ. ಭಾರತವನ್ನು ಸಮಾಜದೊಂದಿಗೆ ಜೋಡಿಸುವ ಕೆಲಸವನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಮಾಡುವಲ್ಲಿ ಮೊದಲ ಸ್ಥಾನದಲ್ಲಿವೆ. ದೇಶದಲ್ಲಿ ಉತ್ಪಾದನೆಯಾಗುವ ಸ್ಮಾರ್ಟ್ ಫೋನ್‍ಗಳು ಜನರನ್ನು ತಂತ್ರಜ್ಞಾನದೊಂದಿಗೆ ಸಂಪರ್ಕಿಸುತ್ತಿವೆ. ಕಳೆದ ಐದು ವರ್ಷಗಳಲ್ಲಿ ಗ್ರಾಮೀಣ ಭಾಗಗಳು ಅಭಿವೃದ್ಧಿ ಹೊಂದುತ್ತಿವೆ. ಸ್ವಚ್ಛ ಭಾರತ್ ದಿಂದ ಇಂದಿನ ಆಯುಷ್ಮಾನ್ ಭಾರತ್ ಯೋಜನೆಗಳು ಜನರಿಗೆ ತಲುಪವಲ್ಲಿ ತಂತ್ರಜ್ಞಾನ ಪಾತ್ರವಿದೆ. ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಏಕಕಾಲದಲ್ಲಿ ರೈತರ ಖಾತೆಗೆ ನಗದು ಜಮಾವಣೆ ತಂತ್ರಜ್ಞಾನದಿಂದ ಆಗಿದೆ. ಅಭಿವೃದ್ಧಿ ವಿಜ್ಞಾನ ಮತ್ತು ತಂತ್ರಜ್ಞಾನದ ಮೇಲೆ ನಿಂತಿದೆ ಎಂದರು.

    ತಂತ್ರಜ್ಞಾನದಿಂದಾಗಿ ಸರ್ಕಾರದ ಯೋಜನೆಗಳು ವೇಗ ಪಡೆದುಕೊಂಡಿದೆ. ಸರ್ಕಾರ ಮತ್ತು ಫಲಾನುಭವಿಗಳ ನಡುವಿನ ಅಂತರ ತಂತ್ರಜ್ಞಾನದಿಂದ ಕಡಿಮೆ ಆಗಿದೆ. ಇಂದು ಇ-ಕಾಮರ್ಸ್ ನಿಂದಾಗಿ ವ್ಯವಹಾರಗಳು ಕ್ಷಣಾರ್ಧದಲ್ಲಿ ಬೆರಳ ತುದಿಯಲ್ಲಿ ನಿಂತಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೂ ತಂತ್ರಜ್ಞಾನ ಸೌಲಭ್ಯ ಸಿಗುವಂತಾಗಬೇಕಿದೆ. ಜಲ್ ಮಿಷನ್ ಅಭಿಯಾನ ಸಹ ತಂತ್ರಜ್ಞಾನದಿಂದ ಸಾಧ್ಯವಾಗಲಿದೆ. ಸುಧಾರಿತ ಮತ್ತು ಕಡಿಮೆ ಖರ್ಚಿನಲ್ಲಿ ಹೇಗೆ ಸಿಗಬೇಕು ಎಂಬುದರ ಬಗ್ಗೆ ನೀವು ಕೆಲಸ ಮಾಡಬೇಕಿದೆ. ಅದೇ ರೀತಿ ಸುಧಾರಿತ ಬೀಜ ಮತ್ತು ರಸಗೊಬ್ಬರ ಉತ್ಪಾದನೆ, ರೈತರಿಗೆ ಅನುಕೂಲವಾಗಿ ತಂತ್ರಜ್ಞಾನ ಮತ್ತು ಬಳಕೆಯಾದ ನೀರಿನ ಪುನರ್ ಬಳಕೆ ಕುರಿತ ಸುಧಾರಿತ ವ್ಯವಸ್ಥೆಗಳು ಮತ್ತು ಪರಿಕರಗಳು, ಮಣ್ಣಿನ ಫಲವತ್ತತೆ ಕಾಪಾಡುವ ಹೊಣೆಯೂ ನಿಮ್ಮ ಮೇಲಿದೆ ಎಮದು ತಿಳಿಸಿದರು.

    ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡೋದು, ಪ್ಲಾಸ್ಟಿಕ್ ಪರ್ಯಾಯ ವಸ್ತುಗಳ ಸಂಶೋಧನೆ ಸೇರಿದಂತೆ ಇನ್ನಿತರ ಅನ್ವೇಷನೆಗಳು ಇಂದು ನಡೆಯಬೇಕಿದೆ. ನಿಮ್ಮ ಸಂಶೋಧನೆಯಿಂದಾಗಿ ಗ್ರಾಮೀಣ ಭಾಗದ ಜನರು ಉದ್ಯೋಗ ಕಂಡುಕೊಳ್ಳುವಂತಾಗಬೇಕಿದೆ. ಪ್ಲಾಸ್ಟಿಕ್ ತ್ಯಾಜ್ಯದ ಪುನರ್ ಬಳಕೆಯ ಬಗ್ಗೆ ಚಿಂತಿಸಬೇಕಿದೆ. ಒಂದೇ ಬಾರಿ ಬಳಕೆಯಾಗುವ ಪ್ಲಾಸ್ಟಿಕ್ ನಿಂದ ಭಾರತ ಮುಕ್ತವಾಗಬೇಕಿದೆ. 2022ರ ವೇಳೆಗೆ ಕಚ್ಚಾತೈಲದ ಬಳಕೆ ಶೇ.10ರಷ್ಟು ಕಡಿಮೆಗೊಳಿಸುವ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಸ್ಟಾರ್ಟ್ ಅಪ್ ಆರಂಭವಾಗಬೇಕಿದೆ. ನಿಮ್ಮ ಸಮಾಜಮುಖಿ ಸಂಶೋಧನೆಗಳಿಂದಾಗಿ ಭಾರತ 5 ಟ್ರಿಲಿಯನ್ ಮಿಲಿಯನ್ ಅರ್ಥ ವ್ಯವಸ್ಥೆ ಆಗಲಿದೆ ಎಂದು ಅವರು ಹೇಳಿದರು.

  • ರೈತನಿಗೆ ಕಳಪೆ ಬಿತ್ತನೆ ಬೀಜ ನೀಡಿದ ಜಿಕೆವಿಕೆ – 3 ತಿಂಗಳಾದ್ರೂ ರಾಗಿ ತೆನೆ ಕಾಳು ಕಟ್ಟಲೇ ಇಲ್ಲ

    ರೈತನಿಗೆ ಕಳಪೆ ಬಿತ್ತನೆ ಬೀಜ ನೀಡಿದ ಜಿಕೆವಿಕೆ – 3 ತಿಂಗಳಾದ್ರೂ ರಾಗಿ ತೆನೆ ಕಾಳು ಕಟ್ಟಲೇ ಇಲ್ಲ

    – ಕೇಳಲು ಹೋದ ರೈತನಿಗೆ ನಿನ್ನ ಹಣೆ ಬರಹ ಅಂತ ಹಾರಿಕೆ ಉತ್ತರ

    ಚಿಕ್ಕಬಳ್ಳಾಪುರ: ಕಡಿಮೆ ಅವಧಿಯಲ್ಲೇ ಅತ್ಯಧಿಕ ಇಳುವರಿ ಅಂತ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಸಂಶೋಧಕರ ಸಲಹೆಯಂತೆ ಖರೀದಿಸಿದ ರಾಗಿ ಬಿತ್ತನೆ ಬೀಜಗಳಿಂದ ನಾಟಿ ಮಾಡಿದ ಪೈರಿನ ತೆನೆಯಲ್ಲಿ ರಾಗಿ ಕಾಳು ಕಟ್ಟದೆ ರೈತರೊಬ್ಬರು ಕಣ್ಣೀರುಡುತ್ತಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಕೊಯಿರಾ ಹೊಸೂರು ಗ್ರಾಮದ ರೈತ ಮುನಿ ಆಂಜಿನಪ್ಪ ಪ್ರತಷ್ಠಿತ ಕೃಷಿ ವಿಶ್ವವಿದ್ಯಾನಿಲಯದ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೆಎಂಆರ್ 31305 ಅನ್ನೋ ತಳಿಯ ರಾಗಿ ಬಿತ್ತನೆ ಬೀಜ ಖರೀದಿಸಿ ನಾಟಿ ಮಾಡಿದ್ದರು. ಆದ್ರೆ ಈ ರಾಗಿ ಪೈರು ಬೆಳೆದು 3 ತಿಂಗಳಾದ್ರೂ ರಾಗಿ ತೆನೆ ಕಾಳು ಕಟ್ಟಲೇ ಇಲ್ಲ. ಈ ಬಗ್ಗೆ ಕೇಳಿದ್ರೆ ಜಿಕೆವಿಕೆ ಯವರು “ನಿನ್ನ ಹಣೆಬರಹ, ನಾವು ಏನೂ ಮಾಡಲಾಗುವುದಿಲ್ಲ ಎನ್ನುವ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಅಂಜಿನಪ್ಪ ಹೇಳಿದ್ದಾರೆ.

    ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೆಜಿಗೆ 35 ರೂಪಾಯಿಯಂತೆ ಬರೋಬ್ಬರಿ 15 ಕಜಿ ರಾಗಿ ಖರೀದಿ ಮಾಡಿ ಎರಡು ಎಕರೆಯಲ್ಲಿ ರಾಗಿ ಬಿತ್ತನೆ ಮಾಡಿದ್ದಾರೆ. ಒಂದು ಕಡೆ ಬರಗಾಲ ಮತ್ತೊಂದೆಡೆ ವಿದ್ಯುತ್ ಗೆ ಬರ. ಈ ನಡುವೆ ಪಾತಾಳಕ್ಕೆ ಕುಸಿದಿರುವ ಅಂರ್ತಜಲದ ನಡುವೆ ಕೊಳವೆ ಬಾವಿಯ ನೀರು ಬಳಸಿ ಎರಡು ಎಕರೆಯಲ್ಲಿ ರಾಗಿ ಬೆಳೆಯಲಾಗಿದೆ. ಎರಡು ಎಕರೆ ರಾಗಿ ಬೆಳೆಯಲು ಬಿತ್ತನೆ ಬೀಜ, ಸಾವಯುವ ಗೊಬ್ಬರ, ಸೇರಿದಂತೆ ಅಂದಾಜು 50 ಸಾವಿರ ರೂ. ಹಣ ಖರ್ಚು ಮಾಡಿ 3 ತಿಂಗಳು ಕಾದಿದ್ದಾರೆ. ಆದ್ರೆ ರಾಗಿ ಪೈರು 3 ರಿಂದ ಮೂರೂವರೆ ಅಡಿ ಎತ್ತರಕ್ಕೆ ಸೊಂಪಾಗಿ ಬೆಳೆದಿದ್ರೂ ರಾಗಿ ತೆನೆಯಲ್ಲಿ ಮಾತ್ರ ರಾಗಿ ಕಾಳುಗಳೇ ಇಲ್ಲ.

    ಪ್ರತಿ ಎಕರೆಗೆ 35 ಕ್ವಿಂಟಾಲ್ ಇಳುವರಿ ಬರುತ್ತೆ ಅಂತ ಹೇಳಿದ ಜಿಕೆವಿಕೆ ಸಂಶೋಧಕರು ಈಗ ಕನಿಷ್ಠ ಬೆಳೆ ನೋಡಲು ಬರುತ್ತಿಲ್ಲ. ಸ್ಥಳೀಯ ಕೃಷಿ ಅಧಿಕಾರಿ ಕೂಡ ರಾಗಿ ತೆನೆ ಕಾಳು ಕಟ್ಟದಿರುವ ಬಗ್ಗೆ ಧೃಡೀಕರಣ ಮಾಡಿದ್ದಾರೆ. ಸಂಶೋಧನೆ ಮಾಡಿ ಹೊಚ್ಚ ಹೊಸ ಅತ್ಯುತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನ ಅಭಿವೃದ್ಧಿಪಡಿಸೋ ಜಿಕೆವಿಕೆ ನವರು ಕೊಟ್ಟ ಬಿತ್ತನೆ ಬೀಜಗಳೇ ಈ ಪರಿಯಾದ್ರೇ ಮತ್ಯಾರನ್ನ ನಂಬೋದು ಸ್ವಾಮಿ ಅಂತಿದ್ದಾರೆ ನೊಂದ ರೈತ.