Tag: ಜಿಬಿಎ

  • ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್ ಸುರಿದ BSWML ಸಿಬ್ಬಂದಿ

    ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ – ಹಾಕಿದವ್ರ ಮನೆ ಮುಂದೆಯೇ ಕಸ ವಾಪಸ್ ಸುರಿದ BSWML ಸಿಬ್ಬಂದಿ

    ಬೆಂಗಳೂರು: ರಸ್ತೆಗೆ ತ್ಯಾಜ್ಯ ಎಸೆದವರಿಗೆ ತಕ್ಕ ಪಾಠ ಕಲಿಸಲು ಬಿಎಸ್‌ಡಬ್ಲ್ಯೂಎಂಎಲ್‌ (Bengaluru Solid Waste Management Limited) ಸಿಬ್ಬಂದಿ ಅವರು ಹಾಕಿದ ಕಸವನ್ನು ಅವರ ಮನೆ ಮುಂದೆಯೇ ಸುರಿದು 100 ರೂ. ದಂಡ ವಿಧಿಸಿದ್ದಾರೆ.

    ಬೆಂಗಳೂರಿನ (Bengaluru) ದತ್ತಾತ್ರೇಯ ಟೆಂಪಲ್ ರಸ್ತೆ, ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿ ನಿವಾಸಿಗಳು ಮನೆ ಮುಂದೆ ಆಟೋ ಬಂದರೂ ಕೂಡ ಕಸ ಹಾಕದೇ, ಕಸವನ್ನು ರಸ್ತೆಗೆ ಎಸೆಯುತ್ತಿದ್ದರು. ಇದನ್ನು ಗಮನಿಸಿದ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಅದೇ ಕಸವನ್ನು ಎತ್ತಿಕೊಂಡು ಹಾಕಿದವರ ಮನೆ ಮುಂದೆಯೇ ಸುರಿದು, 100 ರೂ. ದಂಡ ಹಾಕಿದ್ದಾರೆ.ಇದನ್ನೂ ಓದಿ: ನೇರಳೆ ಮಾರ್ಗ ಮಧ್ಯೆಯೇ ನಿಂತ ನಮ್ಮ ಮೆಟ್ರೋ ರೈಲು – ಒಂದು ಗಂಟೆ ಕಾಲ ಪರದಾಡಿದ ಪ್ರಯಾಣಿಕರು

    ಈ ಮೂಲಕ ನಿವಾಸಿಗಳಿಗೆ ಬಿಎಸ್‌ಡಬ್ಲ್ಯೂಎಂಎಲ್‌ ಸಿಬ್ಬಂದಿ ಪಾಠ ಕಲಿಸುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

  • ಗುಂಡಿ ಜಟಾಪಟಿ – ಡಿನ್ನರ್ ಮೀಟಿಂಗ್ ಬಳಿಕ ಡಿಕೆಶಿಯನ್ನ ಹಾಡಿಹೊಗಳಿದ ಉದ್ಯಮಿಗಳು

    ಗುಂಡಿ ಜಟಾಪಟಿ – ಡಿನ್ನರ್ ಮೀಟಿಂಗ್ ಬಳಿಕ ಡಿಕೆಶಿಯನ್ನ ಹಾಡಿಹೊಗಳಿದ ಉದ್ಯಮಿಗಳು

    ಬೆಂಗಳೂರು: ಬೆಂಗಳೂರಿನ ಗುಂಡಿ (Bengaluru Road Potholes) ಸಮಸ್ಯೆ, ಕಸದ ಸಮಸ್ಯೆ, ಮೂಲಭೂತ ಸಮಸ್ಯೆಗಳ ವಿರುದ್ಧ ಉದ್ಯಮಿಗಳು ಸಿಡಿದೆದಿದ್ದರು. ಸರ್ಕಾರದ ವಿರುದ್ಧ ಖಾರವಾಗಿ ಎಕ್ಸ್ ಖಾತೆಯಲ್ಲಿ ಟೀಕೆ ಮಾಡಿದ್ದರು. ಕೆಲದಿನ ಸರ್ಕಾರ ವರ್ಸಸ್ ಉದ್ಯಮಿಗಳ ನಡುವೆ ಟ್ವೀಟ್ ವಾರ್, ಟಾಕ್‌ವಾರ್ ನಡೆದಿತ್ತು. ಇದು ರಾಷ್ಟ್ರಮಟ್ಟದಲ್ಲೂ ಚರ್ಚೆ ಆಗಿತ್ತು. ಆದರೆ ಈಗ ಬೆಂಗಳೂರಿನ ಗುಂಡಿ ಸಮಸ್ಯೆ ಬಗ್ಗೆ ಟೀಕಿಸಿದ್ದ ಉದ್ಯಮಿಗಳ (Businessmen) ಜೊತೆಯೇ ಉಪಮುಖ್ಯಮಂತ್ರಿ ಡಿಕೆಶಿ (DK Shivakumar) ಡಿನ್ನರ್ ಮೀಟಿಂಗ್ ಮಾಡಿದ್ದಾರೆ.

    ಬಯೋಕಾನ್ ಮುಖ್ಯಸ್ಥೆ, ಉದ್ಯಮಿ ಕಿರಣ್ ಮಜುಂದಾರ್ ಶಾ  (Kiran Mazumdar Shaw) ನಿವಾಸದಲ್ಲಿ ಶನಿವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಕಿರಣ್ ಮಜುಂದರ್ ಶಾ, ಉದ್ಯಮಿ ಮೋಹನ್ ದಾಸ್ ಪೈ (Mohandas Pai) ಸೇರಿದಂತೆ ಹಲವು ಉದ್ಯಮಿಗಳು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಮುಖ್ಯ ಆಯುಕ್ತ ಮಹೇಶ್ವರ ರಾವ್ ಸಹ ಡಿನ್ನರ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಡಿನ್ನರ್ ಮೀಟಿಂಗ್ ವೇಳೆ ಗುಂಡಿಗಳ ದುರಸ್ತಿ, ಹೊರ ವರ್ತುಲ ರಸ್ತೆಯ ಅಭಿವೃದ್ಧಿ, ನಗರಾದ್ಯಂತ ಸ್ವಚ್ಛತಾ ಅಭಿಯಾನ, ಓಆರ್‌ಆರ್ ಉದ್ದಕ್ಕೂ ನಡೆಯುತ್ತಿರುವ ಮೆಟ್ರೋ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಡಿಸಿಎಂ ಡಿಕೆಶಿಗೆ ಉದ್ಯಮಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಭವಿಷ್ಯ ನುಡಿಯಲು ಅವರ‍್ಯಾರು, ಜ್ಯೋತಿಷಿನಾ? – ಡಿಕೆಶಿ ವಿರುದ್ಧ ನಿಖಿಲ್‌ ಆಕ್ರೋಶ

    ಉದ್ಯಮಿಗಳೊಂದಿನ ಡಿನ್ನರ್ ಮೀಟಿಂಗ್ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ, ಉದ್ಯಮಿಗಳ ಜೊತೆ ಡಿನ್ನರ್ ಮಿಟಿಂಗ್ ಮಾಡಿದ್ದೀನಿ. ಬೆಂಗಳೂರಿನ ಹಲವು ಸಮಸ್ಯೆಗಳಿಗೆ ಸಲಹೆ ನೀಡಿದ್ದಾರೆ. ಉದ್ಯಮಿಗಳ ಸಲಹೆಯನ್ನ ನಾವು ಸ್ವೀಕರಿಸುತ್ತೇವೆ. ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳುವಾಗ ದೂರದೃಷ್ಟಿ ಇರುತ್ತದೆ. ನಮಗೆ ಸಲಹೆ ಕೊಡಿ ಆದ್ರೆ ನಮ್ಮನ್ನು ಹರ್ಟ್ ಮಾಡುವಂತೆ ಮಾಡಬೇಡಿ ಅಂತಾ ಹೇಳಿದ್ದೇನೆ ಎಂದರು. ಇದನ್ನೂ ಓದಿ: Anekal | ಕಂದಕಕ್ಕೆ ಉರುಳಿದ ಕಂಟೈನರ್ ಲಾರಿ – ಇಬ್ಬರು ದುರ್ಮರಣ, ನಾಲ್ವರು ಗಂಭೀರ

    ಡಿಕೆಶಿ ನಡಿಗೆ ಕಾರ್ಯಕ್ರಮ ಮೆಚ್ಚಿ ಪೋಸ್ಟ್:
    ಇನ್ನು ಶನಿವಾರ ರಾತ್ರಿ ಡಿನ್ನರ್ ಮೀಟಿಂಗ್ ಮೂಲಕ ಉದ್ಯಮಿಗಳನ್ನು ಡಿಕೆ ಶಿವಕುಮಾರ್ ವಿಶ್ವಾಸಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮಗಳನ್ನ ಉದ್ಯಮಿಗಳು ಶ್ಲಾಘಿಸಿದ್ದಾರೆ. ಡಿಕೆಶಿ ನಾಗರಿಕರೊಂದಿಗೆ ನಡಿಗೆ ಕಾರ್ಯಕ್ರಮವನ್ನ ಉದ್ಯಮಿ ಮೋಹನ್ ದಾಸ್ ಪೈ ಹೊಗಳಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಗಳೂರಿಗಾಗಿ ಅದ್ಭುತ ಕಾರ್ಯಕ್ರಮ ಮಾಡುತ್ತಿದ್ದೀರಿ. ಈ ಕಾರ್ಯಕ್ರಮದ ಮೂಲಕ ಜನರನ್ನ ಭೇಟಿ ಮಾಡಿ ಸಮಸ್ಯೆ ಪರಿಹರಿಸುವ ದೊಡ್ಡ ಕೆಲಸ ಮಾಡುತ್ತಿದ್ದೀರಿ. ಮೂರು ತಿಂಗಳಲ್ಲಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಅನೇಕ ಉತ್ತಮ ನಿರ್ಧಾರ ಮಾಡಿದ್ದೀರಿ. ಜಿಬಿಎ ರಚಿಸಿ ಭಾರತದ ದೊಡ್ಡ ನಗರಕ್ಕೆ ಸುಧಾರಣೆ ಮಾಡುತ್ತಿದ್ದೀರಿ. ನೀವು ಎಲ್ಲ ಕಾರ್ಯಗಳನ್ನ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಡಿಕೆ ಬೆಂಗಳೂರು ನಡಿಗೆ ಕಾರ್ಯಕ್ರಮದ ಕುರಿತ ಪೋಸ್ಟ್ ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಹೊಗಳಿದ್ದಾರೆ. ಇದನ್ನೂ ಓದಿ: ರಿಲಯನ್ಸ್‌ AI ಕಂಪನಿಯಲ್ಲಿ 30% ಪಾಲನ್ನು ಪಡೆದ ಫೇಸ್‌ಬುಕ್‌

  • ಜೆಡಿಎಸ್‌ಗೆ ‘ಗ್ರೇಟರ್’ ಶಕ್ತಿ – ಹೆಚ್‌ಡಿಕೆ ನೇತೃತ್ವದಲ್ಲಿ 5 ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಮಿತಿ ರಚನೆ

    ಜೆಡಿಎಸ್‌ಗೆ ‘ಗ್ರೇಟರ್’ ಶಕ್ತಿ – ಹೆಚ್‌ಡಿಕೆ ನೇತೃತ್ವದಲ್ಲಿ 5 ನೂತನ ಪಾಲಿಕೆಗಳಿಗೆ ಉಸ್ತುವಾರಿ ಸಮಿತಿ ರಚನೆ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ವ್ಯಾಪ್ತಿಯಲ್ಲಿ ನೂತನವಾಗಿ ರಚಿಸಲಾಗಿರುವ ಐದು ನಗರ ಪಾಲಿಕೆಗಳ ಮುಂಬರುವ ಚುನಾವಣೆಗಳ ಸಿದ್ಧತೆಗಾಗಿ ಜೆಡಿಎಸ್ (JDS) ಪಕ್ಷವು ಉನ್ನತ ಮಟ್ಟದ ಉಸ್ತುವಾರಿ ಸಮಿತಿಯನ್ನು ರಚಿಸಿದೆ. ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಶನಿವಾರ ಅಧಿಕೃತ ನೇಮಕಾತಿ ಆದೇಶ ಹೊರಡಿಸಿದ್ದಾರೆ.

    ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಹಿರಿಯ ಮುಖಂಡರನ್ನು ಈ ಸಮಿತಿಗೆ ನೇಮಿಸಲಾಗಿದೆ. ಫೆಬ್ರವರಿ-ಮಾರ್ಚ್ 2026ರಲ್ಲಿ ಈ ನಗರ ಪಾಲಿಕೆಗಳಿಗೆ ಚುನಾವಣೆ ನಡೆಯುವ ಸಂಭವವಿರುವ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಒತ್ತು ನೀಡಲು ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.

    ಉಸ್ತುವಾರಿ ಸಮಿತಿಯ ಪ್ರಮುಖ ಸದಸ್ಯರು:
    * ಎ. ಮಂಜು, ಶಾಸಕರು, ಅರಕಲಗೂಡು ವಿಧಾನಸಭಾ ಕ್ಷೇತ್ರ
    * ಎಂ.ಟಿ. ಕೃಷ್ಣಪ್ಪ, ಶಾಸಕರು, ತುರುವೇಕೆರೆ ವಿಧಾನಸಭಾ ಕ್ಷೇತ್ರ
    * ಟಿ.ಎ. ಶರವಣ, ಶಾಸಕರು, ವಿಧಾನ ಪರಿಷತ್ತು, ಬೆಂಗಳೂರು
    * ಟಿ.ಎನ್. ಜವರಾಯಿಗೌಡ, ಶಾಸಕರು, ವಿಧಾನಪರಿಷತ್ತು, ಬೆಂಗಳೂರು
    * ನಿಖಿಲ್ ಕುಮಾರಸ್ವಾಮಿ, ರಾಜ್ಯಾಧ್ಯಕ್ಷರು, ಯುವಜನತಾದಳ
    * ಎಂ. ಕೃಷ್ಣಾರೆಡ್ಡಿ, ಮಾಜಿ ಉಪಸಭಾಧ್ಯಕ್ಷರು, ವಿಧಾನಸಭೆ
    * ಸುರೇಶ್‌ಗೌಡ, ಮಾಜಿ ಶಾಸಕರು, ನಾಗಮಂಗಲ ವಿಧಾನಸಭಾ ಕ್ಷೇತ್ರ
    * ಎ. ಮಂಜುನಾಥ್, ಮಾಜಿ ಶಾಸಕರು, ಮಾಗಡಿ ವಿಧಾನಸಭಾ ಕ್ಷೇತ್ರ
    * ಕೆ.ಎ. ತಿಪ್ಪೇಸ್ವಾಮಿ, ಮಾಜಿ ಶಾಸಕರು, ಬೆಂಗಳೂರು

    ಉಸ್ತುವಾರಿ ಸಮಿತಿಯ ಪ್ರಮುಖ ಐದು ಕಾರ್ಯಗಳು:
    ವಾರ್ಡ್ವಾರು ಉಸ್ತುವಾರಿ ಸಮಿತಿಗಳ ರಚನೆ:
    ಹೊಸದಾಗಿ ರಚಿತವಾಗಿರುವ ಐದು ನಗರ ಪಾಲಿಕೆಗಳಲ್ಲಿ (ಬೆಂಗಳೂರು ಕೇಂದ್ರ, ಪಶ್ಚಿಮ, ದಕ್ಷಿಣ, ಪೂರ್ವ ಮತ್ತು ಉತ್ತರ) ವಾರ್ಡ್ವಾರು ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಪಕ್ಷದ ಮುಖಂಡರು, ಮಾಜಿ ನಗರ ಪಾಲಿಕೆ ಸದಸ್ಯರು ಮತ್ತು ಹಿಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳನ್ನು ಒಳಗೊಂಡ ಉಸ್ತುವಾರಿ ಸಮಿತಿಗಳನ್ನು ರಚಿಸುವುದು.

    ಸದಸ್ಯತ್ವ ನೋಂದಣಿ ಅಭಿಯಾನ:
    ಪಾಲಿಕೆವಾರು ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ರೂಪಿಸಿ, ವಾರ್ಡ್ವಾರು ಮತ್ತು ವಿಧಾನಸಭಾ ಕ್ಷೇತ್ರವಾರು ಕಾರ್ಯಕರ್ತರು ಹಾಗೂ ಮುಖಂಡರ ಸಭೆಗಳನ್ನು ಆಯೋಜಿಸುವುದು.

    ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ:
    ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಆಕಾಂಕ್ಷಿಗಳ ಸಾಮರ್ಥ್ಯವನ್ನು ಆಧರಿಸಿ, ವಾರ್ಡ್ವಾರು ಪಕ್ಷದ ಸಂಭವನೀಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿ ಪಕ್ಷದ ರಾಜ್ಯ ಕಚೇರಿಗೆ ಸಲ್ಲಿಸುವುದು.

    ಎನ್.ಡಿ.ಎ. ಮೈತ್ರಿಕೂಟದೊಂದಿಗೆ ಸಮನ್ವಯ:
    ಮುಂಬರುವ ನಗರ ಪಾಲಿಕೆ ಚುನಾವಣೆಯಲ್ಲಿ ಎನ್.ಡಿ.ಎ. ಮೈತ್ರಿಕೂಟದ ಪಕ್ಷಗಳೊಂದಿಗೆ ಸಮನ್ವಯ ಮತ್ತು ಚುನಾವಣಾ ಹೊಂದಾಣಿಕೆ ಬಗ್ಗೆ ರೂಪುರೇಷೆಗಳನ್ನು ಸಿದ್ಧಪಡಿಸಿ, ರಾಜ್ಯ ಕಚೇರಿಗೆ ಸಲ್ಲಿಸುವುದು.

    ಕಾರ್ಯಗಳ ವಿಮರ್ಶೆ:
    ರಚಿಸಲಾದ ಉಪ-ಸಮಿತಿಗಳ ಕಾರ್ಯಗಳನ್ನು ಕಾಲಕಾಲಕ್ಕೆ ವಿಮರ್ಶಿಸುವುದು.

    ಅಕ್ಟೋಬರ್ 16ರಂದು ನಡೆದಿದ್ದ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಈ ಸಮಿತಿಯನ್ನು ರಚಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಂದಿಯಿಂದ ಅರ್ಜಿ

    ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಂದಿಯಿಂದ ಅರ್ಜಿ

    – ಮಂಗಳವಾರದಿಂದ ಬೆಂಗಳೂರು ಒನ್‌ನಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ

    ಬೆಂಗಳೂರು: ಬಿ ಖಾತಾದಿಂದ ಎ ಖಾತಾ (A Khata) ಪರಿವರ್ತನೆಗೆ ಈಗಾಗಲೇ ಅರ್ಜಿ ಆಹ್ವಾನ ಆಗಿದೆ. ಬೆಂಗಳೂರಿನ (Bengaluru) 500ಕ್ಕೂ ಹೆಚ್ಚು ಮಂದಿ ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಮಂಗಳವಾರದಿಂದ ಬೆಂಗಳೂರು ಒನ್‌ನಲ್ಲಿ (Bengaluru One) ಅರ್ಜಿ ಸಲ್ಲಿಕೆಗೆ ಅವಕಾಶ ಸಿಗಲಿದೆ. ಮತ್ತೊಂದು ಕಡೆ ಅರ್ಜಿ ಸಲ್ಲಿಕೆಯ ಡೆಮೋ ವೀಡಿಯೋವನ್ನ ಜಿಬಿಎ ಇಂದು ರಿಲೀಸ್ ಮಾಡಲಿದೆ.

    ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಜಾರಿ ಆದ ಬಳಿಕ ಸರ್ಕಾರ ಬೆಂಗಳೂರಿಗರಿಗೆ ನೀಡಿರೋ ದೊಡ್ಡ ಗಿಫ್ಟ್ ಅಂದರೆ ಅದು ಬಿ ಖಾತೆಗಳಿಗೆ ಎ ಖಾತಾ ಮಾನ್ಯತೆ ನೀಡಿರುವುದು. ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವೆಬ್‌ಸೈಟ್ ಬಿಡುಗಡೆ ಮಾಡಿ ಎ ಖಾತಾ ಪರಿವರ್ತನೆಗೆ ಅರ್ಜಿ ಆಹ್ವಾನಕ್ಕೆ ಅವಕಾಶ ಮಾಡಿ ಕೊಟ್ಟಿದ್ದಾರೆ. ಅರ್ಜಿ ಹಾಕೋದಕ್ಕೆ ಅವಕಾಶ ನೀಡಿ ಐದು ದಿನ ಆಗಿದ್ದು, 500 ಜನ ಅರ್ಜಿ ಸಲ್ಲಿಕೆ ಮಾಡಿದ್ದಾರೆ. 3 ಸಾವಿರ ಜನ ವೆಬ್‌ಸೈಟ್‌ಗೆ ವಿಸಿಟ್ ಮಾಡಿ ಮಾಹಿತಿ ಪಡೆದುಕೊಂಡಿರೋದು ಬಯಲಾಗಿದೆ. ಬೆಂಗಳೂರು ಜನ ಬಿ ಖಾತಾ ಪರಿವರ್ತನೆಯ ವೆಬ್‌ಸೈಟ್‌ಗೆ ವಿಸಿಟ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿ ಆಗುತ್ತಿದೆ. ಇದನ್ನೂ ಓದಿ: ಇನ್ಮುಂದೆ ನೆಟ್‌ ಇಲ್ಲದಿದ್ದರೂ ಹಣ ವರ್ಗಾವಣೆ ಮಾಡ್ಬೋದು – RBIನಿಂದ ಆಫ್‌ಲೈನ್‌ ಡಿಜಿ ರುಪಿ ಬಿಡುಗಡೆ

    ಅರ್ಜಿ ಸಲ್ಲಿಕೆಯನ್ನ ಬೆಂಗಳೂರು ಒನ್‌ಗಳಲ್ಲೂ ಕೂಡ ಅಪ್ಲೈ ಮಾಡಬಹುದಾಗಿದೆ. ನಾಳೆಯಿಂದ ಬೆಂಗಳೂರು ಒನ್‌ಗಳಲ್ಲಿ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಜನರೇ ತಮ್ಮ ಮೊಬೈಲ್‌ನಲ್ಲಿ ಹೇಗೆ ಅರ್ಜಿ ಸಲ್ಲಿಕೆ ಮಾಡಿಕೊಳ್ಳೋದು ಮತ್ತು ಅರ್ಜಿ ಸಲ್ಲಿಕೆ ಕ್ರಮ ಹೇಗೆ ಅಂತಾ ಒಂದು ಡೆಮೋ ವೀಡಿಯೋವನ್ನ ಬಿಡುಗಡೆ ಮಾಡುವುದಾಗಿ ಪಬ್ಲಿಕ್ ಟಿವಿಗೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನಿಮ್ಮ ಮಕ್ಕಳಿಗೆ ಲಾಠಿ, ಗನ್‌ ಟ್ರೈನಿಂಗ್‌ ಕೊಟ್ಟಿದ್ದೀರಾ ಎಂದ ‘ಕೈ’ ನಾಯಕರಿಗೆ ಟಾಂಗ್‌ – ತಂದೆ, ನಾನು, ಮಗ RSS ಎಂದ ಸುನಿಲ್‌ ಕುಮಾರ್‌

    ಎ ಖಾತಾ ಪಡೆಯಬೇಕು ಅಂದರೆ 5% ಮಾರ್ಗಸೂಚಿ ದರ ಕೂಡ ಕಟ್ಟಬೇಕಾಗಿದೆ. ಇದು ಮಧ್ಯಮ ವರ್ಗಕ್ಕೆ ಹೊರೆ ಆಗುತ್ತದೆ, ವಿನಾಯ್ತಿ ಮಾಡಿ ಅಂತಾ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮನವಿ ಮಾಡಿದ್ದಾರೆ. ಆದರೆ ಡಿಸಿಎಂ ಮಾರ್ಗಸೂಚಿ ದರ 5% ಕಡಿಮೆ ಬೆಲೆ. ಬೆಲೆ ಫಿಕ್ಸ್ ಮಾಡಲಾಗಿದೆ, ವಿನಾಯಿತಿ ಇಲ್ಲ. ಎ ಖಾತಾ ಆದರೆ ಬ್ಯಾಂಕ್‌ನಲ್ಲಿ ಸಾಲ ಸಿಗುತ್ತೆ ಮತ್ತು ಸೈಟ್ ಬೆಲೆ ಜಾಸ್ತಿ ಕೂಡ ಆಗುತ್ತೆ ಎಂದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ-ಅಫ್ಘಾನಿಸ್ತಾನದ ನಡುವೆ ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಒಪ್ಪಿಗೆ

  • ಬೆಂಗಳೂರಿನ 1200 ಚದರಡಿ ವ್ಯಾಪ್ತಿ ವಿಸ್ತೀರ್ಣದ ಕಟ್ಟಡಗಳಿಗೆ ಓಸಿ ವಿನಾಯಿತಿ: ಸರ್ಕಾರದಿಂದ ಆದೇಶ ಪ್ರಕಟ

    ಬೆಂಗಳೂರಿನ 1200 ಚದರಡಿ ವ್ಯಾಪ್ತಿ ವಿಸ್ತೀರ್ಣದ ಕಟ್ಟಡಗಳಿಗೆ ಓಸಿ ವಿನಾಯಿತಿ: ಸರ್ಕಾರದಿಂದ ಆದೇಶ ಪ್ರಕಟ

    ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ (GBA) ವ್ಯಾಪ್ತಿಯಲ್ಲಿ 1200 ಚದರಡಿ(30*40 ಸೈಟ್‌) ವ್ಯಾಪ್ತಿಯ ವಿಸ್ತೀರ್ಣದಲ್ಲಿ ನಿರ್ಮಾಣಗೊಂಡಿರುವ ಕಟ್ಟಡಗಳಿಗೆ ಸ್ವಾಧೀನಾನುಭವ ಪತ್ರ (Occupational Certificate) ಪಡೆಯುವುದರಿಂದ ವಿನಾಯಿತಿ ನೀಡಿ ರಾಜ್ಯ ಸರ್ಕಾರ (Karnataka Government) ಅಧಿಕೃತ ಆದೇಶ ಪ್ರಕಟಿಸಿದೆ.

    ಅ.9 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಈ ನಿರ್ಧಾರದ ಅನ್ವಯ ಜಿಬಿಎ ವ್ಯಾಪ್ತಿಯ ಐದು ಪಾಲಿಕೆಗಳ 1200 ಚದರ ಅಡಿ ಜಾಗದಲ್ಲಿ ನಿರ್ಮಾಣಗೊಂಡಿರುವ ನೆಲ+2 ಅಂತಸ್ತು ಅಥವಾ ಸ್ಟಿಲ್ಟ್‌(ಬೇಸ್‌ಮೆಂಟ್‌ ಪಾರ್ಕಿಂಗ್‌)+3 ಅಂತಸ್ತುಗಳವರೆಗಿನ ವಸತಿ ಕಟ್ಟಡಗಳಿಗೆ ಓಸಿ ಪಡೆಯುವುದರಿಂದ ವಿನಾಯಿತಿ ನೀಡಿ ಆದೇಶಿಸಿದೆ.  ಇದನ್ನೂ ಓದಿ:  ನೀವು ಬೆಂಗಳೂರಿಗೆ ಹೋದರೆ, ಕನ್ನಡ ಕಲಿಯಿರಿ: ಝೋಹೊ ಸಂಸ್ಥಾಪಕ ಶ್ರೀಧರ್ ವೆಂಬು

     

    ಸುಪ್ರೀಂ ಕೋರ್ಟ್‌ ಆದೇಶದ ಅನ್ವಯ ಎಸ್ಕಾಂಗಳು ವಿದ್ಯುತ್‌ ಸಂಪರ್ಕ ಪಡೆಯಲು ಓಸಿ ಕಡ್ಡಾಯ ಮಾಡಿದ್ದವು. ಆದರೆ ನಕ್ಷೆ ಮಂಜೂರಾತಿ ಇಲ್ಲದೆ ಓಸಿ ನೀಡಲು ಅವಕಾಶವಿರಲಿಲ್ಲ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3.30 ಲಕ್ಷ ಕಟ್ಟಡಗಳು ನಿರ್ಮಾಣ ಪೂರ್ಣಗೊಂಡರೂ ಓಸಿ ಇಲ್ಲದೆ ವಿದ್ಯುತ್‌ ಸಂಪರ್ಕ ನೀಡಿರಲಿಲ್ಲ. ಇದನ್ನೂ ಓದಿ:  ಟ್ರಂಪ್‌ಗೆ ಗೂಗಲ್‌ ಟಕ್ಕರ್‌| ವಿಶಾಖಪಟ್ಟಣದಲ್ಲಿ ಎಐ-ಹಬ್‌ಗಾಗಿ 1500 ಕೋಟಿ ಡಾಲರ್‌ ಹೂಡಿಕೆ, 1 ಲಕ್ಷ ಉದ್ಯೋಗ ಸೃಷ್ಟಿ

    ಈ ಹಿಂದೆಯೇ 1,200 ಚದರ ಅಡಿ ನಿವೇಶನಗಳಿಗೆ ರಾಜ್ಯ ಸರ್ಕಾರ ಓಸಿ ವಿನಾಯಿತಿ ನೀಡಿ ಆದೇಶ ಮಾಡಿತ್ತು. ಈಗ ಮತ್ತಷ್ಟು ಕಾನೂನು ಸಲಹೆ ಪಡೆದುಕೊಂಡು ಸಂಪೂರ್ಣ ಮಾಹಿತಿ ಆಧರಿಸಿ ಓಸಿ ವಿನಾಯಿತಿಗೆ ಸರ್ಕಾರ ಆದೇಶ ಮಾಡಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ 2,400 ಚದರ ಅಡಿ ನಿವೇಶನಗಳಿಗೆ ವಿನಾಯಿತಿ ಸಿಗುವ ಸಾಧ್ಯತೆಯಿದೆ ಎಂದು ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ.

  • ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    ಜಾತಿಗಣತಿಗೆ ನಡೆಸದ ಶಿಕ್ಷಕರ ವೇತನಕ್ಕೆ ಕತ್ತರಿ – ಬಗ್ಗದೇ ಇದ್ರೆ ಅಮಾನತು ಶಿಕ್ಷೆ

    – ಬೆಂಗಳೂರಿನಲ್ಲಿ ಗಣತಿಗೆ ಜನತೆ ನಿರಾಸಕ್ತಿ

    ಬೆಂಗಳೂರು: ಶಿಕ್ಷಕರ ಅಸಹಕಾರದಿಂದಾಗಿ ಸರ್ಕಾರದ ಮಹತ್ವಾಕಾಂಕ್ಷಿಯ ಜಾತಿ ಸಮೀಕ್ಷೆಗೆ (Caste Survey) ಭಾರೀ ಹಿನ್ನಡೆ ಆಗುತ್ತಿದೆ. ಸಮೀಕ್ಷೆಗೆ ಗೈರಾದ ಶಿಕ್ಷಕರ (Teacher) ವೇತನ ಕಡಿತಕ್ಕೆ ಸರ್ಕಾರ ಮುಂದಾಗಿದೆ.

    2,300 ಶಿಕ್ಷಕರು ಗಣತಿಗೆ ಗೈರಾಗಿದ್ದು, ಅವರ ವಿರುದ್ಧ ವೇತನ ಕಡಿತದ ಅಸ್ತ್ರ ಪ್ರಯೋಗ ಮಾಡಿದೆ. ಒಂದು ವೇಳೆ ಇದಕ್ಕೂ ಬಗ್ಗದಿದ್ದಲ್ಲಿ ಶಿಕ್ಷಕರನ್ನು ಅಮಾನತು ಮಾಡಲು  ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮುಂದಾಗಿದೆ. ಇದನ್ನೂ ಓದಿ:  ಫೋನ್‌ ಟ್ಯಾಪಿಂಗ್‌ ಕೇಸ್;‌ ಅಲೋಕ್‌ ಕುಮಾರ್‌ ವಿರುದ್ಧದ ತನಿಖಾ ಆದೇಶ ರದ್ದು – ಸರ್ಕಾರಕ್ಕೆ ಭಾರೀ ಹಿನ್ನಡೆ

     

    ಗಣತಿಗೆ ಬೆಂಗಳೂರಿನಲ್ಲಿ (Bengaluru) ಅಪಾರ್ಟ್‌ಮೆಂಟ್‌ ನಿವಾಸಿಗಳು ಇನ್ನೂ ಸ್ಪಂದಿಸಿಲ್ಲ. ಇದುವರೆಗೆ ಶೇ.29ರಷ್ಟು ಸರ್ವೆ ಆಗಿದ್ದು, ಇನ್ನೂ 39 ಲಕ್ಷ ಮನೆಗಳ ಸರ್ವೆ ಬಾಕಿ ಉಳಿದಿದೆ. ಹೀಗಾಗಿ ಬೆಂಗಳೂರಿನ ಶಾಸಕರು ಮತ್ತು ಸಂಸದರ ಸಹಕಾರ ಕೊರಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ನಿರ್ಧರಿಸಿದ್ದಾರೆ.

    ಈ ನಡುವೆ ಸಮೀಕ್ಷೆಗೆ ಹೋದವರಿಗೆ ನಾಯಿ ಕಾಟ ಜಾಸ್ತಿಯಾಗಿದೆ. ಬೆಂಗಳೂರಿನ ಪದ್ಮನಾಭನಗರದಲ್ಲಿ ಇಬ್ಬರು ಗಣತಿದಾರರಿಗೆ ನಾಯಿ ಕಚ್ಚಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಕೋಲಾರದಲ್ಲಿ ಸಮೀಕ್ಷೆಗೆ ತೆರಳಿದ್ದ ಬಿ.ಹೊಸಹಳ್ಳಿ ಶಾಲಾ ಶಿಕ್ಷಕಿ ಅಕ್ತರ್ ಬೇಗಂ ನಾಪತ್ತೆಯಾಗಿದ್ದಾರೆ. ಶಿಕ್ಷಕಿಗಾಗಿ ಕುಟುಂಬಸ್ಥರು ಹುಡುಕಾಡುತ್ತಿದ್ದಾರೆ.

  • GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

    GBA ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ, ಹೈಕೋರ್ಟ್‌ನಲ್ಲಿ ಪ್ರಶ್ನಿಸಿ: ಅರ್ಜಿದಾರರಿಗೆ ಸುಪ್ರೀಂ ನಿರ್ದೇಶನ

    ನವದೆಹಲಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ರಚನೆ ಕುರಿತು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್‌ನಲ್ಲಿ (High Court) ಸಲ್ಲಿಸುವಂತೆ ಸುಪ್ರೀಂ ಕೋರ್ಟ್ (Supreme Court) ಅರ್ಜಿದಾರರಿಗೆ ನಿರ್ದೇಶನ ನೀಡಿದೆ.

    ಜಿಬಿಎ ರಚನೆ ಕಾನೂನುಬಾಹಿರ ಎಂದು ಆರೋಪಿಸಿ ಹಿರಿಯ ರಂಗಕರ್ಮಿ ಪ್ರಕಾಶ ಬೆಳವಾಡಿ ಹಾಗೂ ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಜಾಯ್‌ಮಲ್ಯ ಬಾಗ್ಚಿ ಪೀಠವು, ಜಿಬಿಎ ರಚನೆ ಕುರಿತು ನೀವು ಎತ್ತಿರುವ ಪ್ರಶ್ನೆ ಸೂಕ್ತವಾಗಿದೆ. ಆದರೆ, ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸದೆ ನೇರವಾಗಿ ಸುಪ್ರೀಂ ಕೋರ್ಟ್‌ಗೆ ಬಂದಿದ್ದು ಏಕೆ ಎಂದು ಪ್ರಶ್ನಿಸಿತು.  ಇದನ್ನೂ ಓದಿ: ಸಿಎಂ, ಡಿಸಿಎಂ ಮನೆಗೆ ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಲರ್ಟ್‌ – ಪ್ರಕರಣ ಭೇದಿಸಲು SIT ರಚಿಸಿದ ಸರ್ಕಾರ

    ಆಗ ಅರ್ಜಿದಾರರ ಪರ ವಕೀಲರು, ಜಿಬಿಎ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿಯೊಂದು ಸಲ್ಲಿಕೆಯಾಗಿದೆ. ಹೀಗಾಗಿ, ಸುಪ್ರೀಂ ಕೋರ್ಟ್‌ಗೆ ಬಂದಿದ್ದೇವೆ ಎಂದರು. ಜಿಬಿಎ ರಚನೆ ಸಂವಿಧಾನ ವಿರೋಧಿ. ಜಿಬಿಎ ರಚನೆಯಿಂದ ಅಧಿಕಾರ ವಿಕೇಂದ್ರೀಕರಣ ಆಗುವುದಿಲ್ಲ. ಅಧಿಕಾರದ ಮರು ಕೇಂದ್ರೀಕರಣ ಆಗುತ್ತದೆ ಎಂದು ದೂರಿದ್ದಾರೆ. ಇದನ್ನೂ ಓದಿ: ವಿಜಯಪುರ | ಹಳೆ ವೈಷಮ್ಯಕ್ಕೆ ಡಬಲ್ ಮರ್ಡರ್ – ಪರಾರಿಯಾಗ್ತಿದ್ದ ಆರೋಪಿ ಕಾಲಿಗೆ ಗುಂಡು ಹಾರಿಸಿ ಅರೆಸ್ಟ್

    ವಿಚಾರಣೆ ಬಳಿಕ ಅರ್ಜಿಯನ್ನು ಹಿಂಪಡೆಯಲು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಸ್ವಾತಂತ್ರ‍್ಯ ನೀಡಿದ ಹಿನ್ನೆಲೆ ಅರ್ಜಿದಾರರು ತನ್ನ ಅರ್ಜಿಯನ್ನು ವಾಪಸ್ ಪಡೆದುಕೊಂಡರು. ಇದನ್ನೂ ಓದಿ: ಹಮಾಸ್‌ ಸೆರೆಯಲ್ಲಿದ್ದ ನೇಪಾಳ ವಿದ್ಯಾರ್ಥಿ ಸಾವು ದೃಢ – ಇಸ್ರೇಲ್‌ಗೆ ಮೃತದೇಹ ಹಸ್ತಾಂತರ

  • ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಜಿಬಿಎ ಸಭೆಗೆ ಗೈರಾದ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳು: ಸಿಎಂ

    ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು (BJP) ಬೆಂಗಳೂರಿನ ಅಭಿವೃದ್ಧಿಗೆ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಜಿಬಿಎ ಸಭೆಗೆ ಬಿಜೆಪಿಯವರು ಗೈರಾದ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ಇದರಿಂದ ತಿಳಿಯುತ್ತದೆ ಎಂದರು. ಇದನ್ನೂ ಓದಿ: ದಾವಣಗೆರೆಯಲ್ಲಿ ಏಕಾಏಕಿ 36 ಮನೆಗಳ ತೆರವು – ಬೀದಿಗೆ ಬಿದ್ದ ಕುಟುಂಬಗಳು

    ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು. ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಚಿಕ್ಕಬಳ್ಳಾಪುರ | ತಂದೆ ಸಾವಿನಿಂದ ಮನನೊಂದು ಮಗಳೂ ಆತ್ಮಹತ್ಯೆ!

  • ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

    ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ

    – ನ್ಯಾಯಾಲಯದ ತೀರ್ಪಿನ ನಂತರ ಕಸ ವಿಲೇವಾರಿಗಾಗಿ 33 ಪ್ಯಾಕೇಜ್‌ಗಳ ಪ್ರಕ್ರಿಯೆ ಆರಂಭ
    – ಪಾಲಿಕೆಗಳ ವತಿಯಿಂದಲೇ ಜಿಬಿಎಯು ಕಸ ವಿಲೇವಾರಿ, ಮೇಲ್ವಿಚಾರಣೆ

    ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar), ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಶನಿವಾರ ಗುಡ್‌ನ್ಯೂಸ್‌ ಕೊಡ್ತಾರಾ ಡಿಕೆಶಿ – ಎ-ಖಾತಾ ವಿತರಣೆ ಬಗ್ಗೆ ಸುಳಿವು ಕೊಟ್ಟ ಡಿಸಿಎಂ

    ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ, ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ ಎಂದು ತಿಳಿಸಿದರು. ಇದನ್ನೂ ಓದಿ: ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

    ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಪರಿಹಾರಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ ಎಂದು ಶಾಸಕ ಎ.ಸಿ.ಶ್ರೀನಿವಾಸ್ ಅವರು ಕೇಳಿದಾಗ, ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು. ಈ ವಿಚಾರ ನ್ಯಾಯಾಲಯದಲ್ಲಿದ್ದು, ಶೀಘ್ರವೇ ತೀರ್ಪು ಬರಲಿದ್ದು, ನಂತರ ಈ ಕಾರ್ಯ ಮಾಡಲಾಗುವುದು. ಕಸ ವಿಲೇವಾರಿ ಜವಾಬ್ದಾರಿ ಸ್ಥಳೀಯ ಪಾಲಿಕೆಗಳು ನಿಭಾಯಿಸಲಿವೆ. ಇದರ ಸಮನ್ವಯತೆಯನ್ನು ಜಿಬಿಎ ಪಾಲಿಸಲಿದೆ ಎಂದು ಹೇಳಿದರು.

    ಸಂಪೂರ್ಣ ಆನೇಕಲ್ ಜಿಬಿಎ ವ್ಯಾಪ್ತಿಗೆ ಸೇರಿಸುವುದು ಕಷ್ಟ
    ಆನೇಕಲ್ ಶಾಸಕರು ತಮ್ಮ ಪ್ರದೇಶವನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿಕೊಳ್ಳುವ ಬಗ್ಗೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಈಗ ಘೋಷಣೆ ಆಗಿರುವ ಜಿಬಿಎ ವ್ಯಾಪ್ತಿಯಲ್ಲಿ ಮೊದಲು ಚುನಾವಣೆ ಆಗಲಿದೆ. ನಂತರ ಎಲ್ಲೆಲ್ಲಿ ಅಭಿವೃದ್ಧಿ ಆಗಿದೆ ಆ ಜಾಗಗಳನ್ನು ಜಿಬಿಎ ವ್ಯಾಪ್ತಿಗೆ ಸೇರಿಸಲು ಸಮಿತಿ ರಚಿಸಿ ಯಾವ ಪ್ರದೇಶ ಸೇರಿಸಬೇಕು ಎಂದು ತೀರ್ಮಾನ ಮಾಡಲಾಗುವುದು. ಚುನಾವಣೆ ನಂತರ ಈ ಪ್ರಕ್ರಿಯೆಗೆ ಕೈ ಹಾಕಲಾಗುವುದು. ಈಗ ಜಿಬಿಎ ವ್ಯಾಪ್ತಿಗೆ ಸೇರಿಸಿದರೆ ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯರು ಪಾಲಿಕೆ ಸದಸ್ಯರಾಗುತ್ತಾರೆ. ಇನ್ನು ಅಲ್ಲಿನ ಜನರು ಕೂಡ ಬೆಂಗಳೂರಿನವರಂತೆ ತೆರಿಗೆ ಪಾವತಿ ಮಾಡಬೇಕಾಗುತ್ತದೆ. ಇಡೀ ಆನೇಕಲ್ ತಾಲೂಕನ್ನು ಜಿಬಿಎ ವ್ಯಾಪ್ತಿಗೆ ಸೇರಿಸಿದರೆ 110 ಹಳ್ಳಿಗಳಿಗೆ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಯಾವ ಪ್ರದೇಶ ನಗರದಂತೆ ಅಭಿವೃದ್ಧಿಯಾಗಿದೆಯೋ ಆ ಪ್ರದೇಶಗಳನ್ನು ಮಾತ್ರ ಜಿಬಿಎ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಮಾಹಿತಿ ನೀಡಿದರು.

    ಬೀದಿ ವ್ಯಾಪಾರಿಗಳಿಗೆ ಶೀಘ್ರವೇ ವಾಹನ ವ್ಯವಸ್ಥೆ
    ಪರಿಷತ್ ಸದಸ್ಯ ಗೋವಿಂದರಾಜು ಅವರು ಬೀದಿ ವ್ಯಾಪಾರಿಗಳಿಂದ ಸಂಚಾರ ದಟ್ಟಣೆ ಹೆಚ್ಚಾಗಿದೆ ಕೇಳಿದಾಗ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಸುದೀರ್ಘ ಚರ್ಚೆ ಮಾಡಿದ್ದು, ಬೀದಿ ವ್ಯಾಪಾರಿಗಳ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದೇವೆ. 30 ಸಾವಿರ ಬೀದಿ ವ್ಯಾಪಾರಿಗಳು ನೋಂದಣಿಯಾಗಿದ್ದು, ಅವರಿಗೆ ನಾಲ್ಕು ರೀತಿಯ ವಾಹನ ನೀಡಲು ಸಿದ್ಧತೆ ಮಾಡುತ್ತಿದ್ದೇವೆ. ಈ ವಾಹನಗಳಲ್ಲಿ ಅವರು ವ್ಯಾಪಾರ ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.

    ಅನಾಥ ವಾಹನಗಳನ್ನು ನಗರದ ಹೊರಗೆ ಸ್ಥಳಾಂತರಿಸಬೇಕು
    ಶಾಸಕ ರಿಜ್ವಾನ್ ಅರ್ಷದ್ ಅವರು ಬೆಂಗಳೂರಿನಲ್ಲಿ ಅನಾಥ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಇದರಿಂದ ಸಂಚಾರ ದಟ್ಟಣೆ ಹಾಗೂ ಕಸದ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ನಗರದ ಹೊರಗೆ 10 ಎಕ್ರೆ ಪ್ರದೇಶ ಗುರುತಿಸಿ, ಅಲ್ಲಿ ಈ ವಾಹನಗಳನ್ನು ಸ್ಥಳಾಂತರ ಮಾಡಬೇಕು ಎಂದು ವಿಚಾರ ಪ್ರಸ್ತಾಪಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಜಾಗಗಳನ್ನು ಗುರುತಿಸಿ ಅಲ್ಲಿ ಕಾಂಪೌಂಡ್ ಹಾಕಿ ವಾಹನಗಳನ್ನು ಸ್ಥಳಾಂತರಿಸಲಾಗುವುದು. ಆಗ ಆ ವಾಹನಗಳನ್ನು ಬೇರೆಯವರು ಕದಿಯಲು ಆಗುವುದಿಲ್ಲ ಎಂದರು.

  • ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

    ನಕ್ಷೆ ಮಂಜೂರಾತಿ, ಟಿಡಿಆರ್ ನೀಡುವ ಅಧಿಕಾರ ಇನ್ಮುಂದೆ GBA ವ್ಯಾಪ್ತಿಗೆ – ಸಿಎಂ ನೇತೃತ್ವದ ಸಭೆಯಲ್ಲಿ ನಿರ್ಣಯ

    – 5 ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
    – ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮಹತ್ವದ ನಿರ್ಣಯ

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ಬೆಂಗಳೂರಿನಲ್ಲಿ ಜಿಬಿಎ ಮೊದಲ ಸಭೆ ನಡೀತು. ಜಿಬಿಎ (GBA) ಅಡಿಯಲ್ಲಿರುವ 5 ನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡಲಾಯಿತು. ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆಯೂ ಚರ್ಚೆ ನಡೀತು.

    ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಶಾಸಕರು, ಜಿಬಿಎ ಪಾಲಿಕೆಗಳ ಆಯುಕ್ತರು, ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಯಿತು. ಇದನ್ನೂ ಓದಿ: ಟ್ರಾಫಿಕ್‌ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್‌ ಖರ್ಗೆ ವ್ಯಾಖ್ಯಾನ

    ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA)ಕ್ಕೆ ಇದ್ದ ಇದ್ದ ನಕ್ಷೆ ಮಂಜೂರಾತಿ ಹಾಗೂ TDR (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು) ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ತರಲು ನಿರ್ಧರಿಸಲಾಯಿತು. ಜಿಬಿಎ ವ್ಯಾಪ್ತಿಯ 5 ನಗರಪಾಲಿಕೆಗಳಿಗೆ ಬಜೆಟ್‌ ತೀರ್ಮಾನ ಮಾಡುವ ಜೊತೆಗೆ ಬಿಎಂಟಿಸಿ ಹಾಗೂ ಅಗ್ನಿಶಾಮಕ ದಳವನ್ನೂ ಸಹ ಬಿಜೆಪಿ ವ್ಯಾಪ್ತಿಗೆ ಸೇರಿಸಿ ನಿರ್ಣಯ ಕೈಗೊಳ್ಳಲಾಯಿತು. ಇದನ್ನೂ ಓದಿ: ಪೂರ್ವತಯಾರಿ ಇಲ್ಲದೇ ಆತುರಾತುರವಾಗಿ ಜಾತಿಗಣತಿ, GBA ಚುನಾವಣೆಗೆ ತಯಾರಿ ಎಲ್ಲಿ?: ಸರ್ಕಾರಕ್ಕೆ ವಿಜಯೇಂದ್ರ ಪ್ರಶ್ನೆ

    ಸಭೆಯ ಮಹತ್ವದ ನಿರ್ಣಯಗಳೇನು?
    – ಬಿಡಿಎಗೆ ಇದ್ದ ನಕ್ಷೆ ಮಂಜೂರಾತಿ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
    – ಟಿಡಿಆರ್ ನೀಡುವ ಅಧಿಕಾರ ಕೂಡ ಇನ್ಮುಂದೆ ಜಿಬಿಎ ವ್ಯಾಪ್ತಿಗೆ
    – ಐದು ಪಾಲಿಕೆಗಳ ಬಜೆಟ್ ತೀರ್ಮಾನ
    – ಬಿಎಂಟಿಸಿ, ಅಗ್ನಿ ಶಾಮಕ ದಳ, ಇನ್ಮುಂದೆ ಜಿಬಿಎ ವ್ಯಾಪ್ತಿಗೆ
    – ಕೇಂದ್ರ ಸಂಯೋಜನಾ ಸಮಿತಿ ರಚನೆಗೆ ತೀರ್ಮಾನ (ಇಲಾಖೆಗಳ ನಡುವಿನ ಸಮನ್ವಯತೆಗೆ)
    – ಜಿಬಿಎ ಮುಖ್ಯ ಆಯುಕ್ತರ ನೇತೃತ್ವದಲ್ಲಿ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಲು ತೀರ್ಮಾನ
    – ಐದು ಪಾಲಿಕೆಗಳಿಗೆ ಐದು ಕಚೇರಿ ಅಂತಿಮ
    – ಸೆಂಟ್ರಲ್ ಪಾಲಿಕೆ ಜಿಬಿಎ ಕೇಂದ್ರ ಕಚೇರಿಯಲ್ಲೇ ಕಚೇರಿ ಇರಲಿದೆ
    – ಹೊಸ ಪಾಲಿಕೆ ಕಚೇರಿ ಕಟ್ಟಡಗಳು ಒಂದೇ ರೀತಿ ಇರಬೇಕೆಂದು ತೀರ್ಮಾನಿಸಲಾಗಿದೆ
    – ಒಂದೇ ಮಾದರಿಯಲ್ಲಿ ಕಚೇರಿ ನಿರ್ಮಾಣ ಮಾಡಲು ತೀರ್ಮಾನ
    – ಹೊಸದಾಗಿ ಐದು ಪಾಲಿಕೆಗಳಿಗೆ ಕಚೇರಿ ನಿರ್ಮಾಣ

    ಬಿಜೆಎ ಸಭೆಗೆ ಬಿಜೆಪಿ ಶಾಸಕರ ಗೈರು
    ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಭೆಗೆ ಬಿಜೆಪಿ ಶಾಸಕರು ಗೈರಾದರು. ಜಿಬಿಎ ರಚನೆ ಬಗ್ಗೆ ನಮಗೆ ವಿರೋಧವಿದೆ ಹಾಗಾಗಿ ನಾವು ಸಭೆಗೆ ಹಾಜರಾಗುವುದಿಲ್ಲ ಎಂದು ವಿರೋಧಿಸಿದ್ರು. 75 ಜಿಬಿಎ ಸದಸ್ಯರ ಪೈಕಿ ಕೇವಲ 35 ಸದಸ್ಯರು ಮಾತ್ರ ಸಭೆಗೆ ಹಾಜರಾಗಿದ್ದರು. ಹೀಗಾಗಿ ಮೊದಲ ಸಭೆಯಲ್ಲಿ ಸಿಎಂಗೆ ಹಿನ್ನಡೆಯಾಯ್ತು. ಇದನ್ನೂ ಓದಿ: ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ- ಛಲವಾದಿ ಪ್ರಶ್ನೆ