Tag: ಜಿಮ್ ಟ್ರೈನರ್

  • 210 ಕೆಜಿ ಭಾರ ಎತ್ತುವಾಗ ಕುತ್ತಿಗೆಗೆ ಬಿದ್ದು ಫಿಟ್‌ನೆಸ್‌ ಟ್ರೈನರ್‌ ಸಾವು

    210 ಕೆಜಿ ಭಾರ ಎತ್ತುವಾಗ ಕುತ್ತಿಗೆಗೆ ಬಿದ್ದು ಫಿಟ್‌ನೆಸ್‌ ಟ್ರೈನರ್‌ ಸಾವು

    ಬಾಲಿ: 210 ಕೆಜಿ ಭಾರ ಎತ್ತಲು ಹೋಗಿ ಕುತ್ತಿಗೆಗೆ ಬಿದ್ದು ಫಿಟ್‌ನೆಸ್‌ ಟ್ರೈನರ್‌ವೊಬ್ಬ (Fitness Trainer) ದಾರುಣ ಸಾವಿಗೀಡಾಗಿರುವ ಘಟನೆ ಇಂಡೋನೇಷ್ಯಾದಲ್ಲಿ (Indonesia) ನಡೆದಿದೆ.

    33 ವಯಸ್ಸಿನ ಜಸ್ಟಿನ್ ವಿಕಿ ಸಾವನ್ನಪ್ಪಿದ ಫಿಟ್‌ನೆಸ್‌ ಟ್ರೈನರ್. ಈತ 210 ಕೆಜಿ ವೇಟ್‌ ಲಿಫ್ಟಿಂಗ್‌ ಮಾಡಲು ಮುಂದಾಗಿದ್ದಾರೆ. ಈ ವೇಳೆ ಭಾರ ಎತ್ತಲಾಗದೇ ಬಿಟ್ಟಿದ್ದಾರೆ. ಈ ವೇಳೆ ಭಾರವು ಅವರ ಕುತ್ತಿಗೆಗೆ ಬಿದ್ದಿದೆ. ಪರಿಣಾಮವಾಗಿ ಜಸ್ಟಿನ್‌ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಪ್ರಿಯಕರನಿಗಾಗಿ 6 ವರ್ಷದ ಮಗಳೊಂದಿಗೆ ಭಾರತಕ್ಕೆ ಹಾರಿಬಂದ 49ರ ಪೋಲೆಂಡ್‌ ಮಹಿಳೆ

    ಭಾರ ಬಿದ್ದ ಪರಿಣಾಮ ಅವರ ಕುತ್ತಿಗೆ ಮುರಿದು ಹೋಗಿದೆ. ಪರಿಣಾಮ ಹೃದಯ ಮತ್ತು ಶ್ವಾಸಕೋಶ ಸಂಪರ್ಕಿಸುವ ಪ್ರಮುಖ ನರಗಳಿಗೆ ಹಾನಿಯಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಒಳಗಾದ ಕೆಲವೇ ದಿನಗಳಲ್ಲಿ ಜಸ್ಟಿನ್‌ ಸಾವಿಗೀಡಾಗಿದ್ದಾನೆ.

    ಜಸ್ಟಿನ್‌ ದುರಂತ ಅಂತ್ಯಕ್ಕೆ ಬಂಧು-ಬಾಂಧವರು, ಸ್ನೇಹಿತರು ಸಂತಾಪ ಸೂಚಿಸಿದ್ದಾರೆ. ಜಸ್ಟಿನ್ ಫಿಟ್‌ನೆಸ್ ಪರಿಣಿತರಾಗಿದ್ದರು. ಇತರರಿಗೆ ಸ್ಫೂರ್ತಿ, ಪ್ರೇರಣೆ ಮತ್ತು ಅಚಲ ಬೆಂಬಲದ ದಾರಿದೀಪವಾಗಿದ್ದರು ಎಂದು ಆತನಿಂದ ತರಬೇತಿ ಪಡೆದ ಅನೇಕರು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾ ಸೇನೆ ಹಿಮ್ಮೆಟ್ಟಿಸಲು USನ ಕ್ಲಸ್ಟರ್ ಬಾಂಬ್‌ ಬಳಸಿ ಉಕ್ರೇನ್‌ ದಾಳಿ – ವೈಟ್‌ಹೌಸ್‌ ರಿಯಾಕ್ಷನ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುರ್ಚಿಯಲ್ಲಿ ಕುಳಿತಿದ್ದ ಜಿಮ್ ಟ್ರೈನರ್ ಕುಸಿದು ಬಿದ್ದು ಸಾವು

    ಕುರ್ಚಿಯಲ್ಲಿ ಕುಳಿತಿದ್ದ ಜಿಮ್ ಟ್ರೈನರ್ ಕುಸಿದು ಬಿದ್ದು ಸಾವು

    ಲಕ್ನೋ: ಜಿಮ್ ಟ್ರೈನರ್‌ಗೆ (Gym Trainer) ಕುರ್ಚಿಯ (Chair) ಮೇಲೆ ಕುಳಿತಿದ್ದಾಗ ಹೃದಯಾಘಾತವಾಗಿ (Heart Attack) ಕುಸಿದು ಬಿದ್ದು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‍ನಲ್ಲಿ ನಡೆದಿದೆ.

    ಆದಿಲ್ (33) ಮೃತ ವ್ಯಕ್ತಿ. ಈತ ಗಾಜಿಯಾಬಾದ್‍ನ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿ ಜಿಮ್ ಟ್ರೈನರ್ ಆಗಿ ಕೆಲಸ ಮಾಡುತ್ತಿದ್ದ. ಈ ಹಿನ್ನೆಲೆಯಲ್ಲಿ ಪ್ರತಿದಿನ ವ್ಯಾಯಾಮ ಹಾಗೂ ಜಿಮ್‍ನಲ್ಲಿ ಅನೇಕ ಕಸರತ್ತುಗಳನ್ನು ಮಾಡುತ್ತಿದ್ದ. ಆದರೆ ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ. ಆದರೂ ಆದಿಲ್ ಜಿಮ್‍ಗೆ ಹೋಗುವುದನ್ನು ನಿಲ್ಲಿಸಿರಲಿಲ್ಲ. ಇದನ್ನೂ ಓದಿ: ಹಲಾಲ್ ಮುಕ್ತ ದೀಪಾವಳಿ ಅಭಿಯಾನ – ಮೆಕ್ಡೊನಾಲ್ಡ್, ಕೆಎಫ್‌ಸಿ, ಪಿಜ್ಜಾ ಹಟ್‌ಗೆ ಬಾಯ್ಕಾಟ್

    crime

    ಇತ್ತೀಚೆಗಷ್ಟೇ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಮುಂದಾಗಿದ್ದ ಆತ, ಶಾಲಿಮಾರ್ ಗಾರ್ಡನ್‍ನಲ್ಲಿ ಕಚೇರಿ ತೆರೆದಿದ್ದ. ಕಚೇರಿಯಲ್ಲಿ ಕುಳಿತಿದ್ದಾಗಲೇ ಆದಿಲ್‍ಗೆ ಹೃದಯಾಘಾತವಾಗಿತ್ತು. ತಕ್ಷಣ ಆತನ ಸಹಾಯಕರು ಆದಿಲ್‍ನನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದರೂ, ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಈ ಘಟನೆ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದ್ದು, ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ:  ದಾಂಡಿಯಾ ನೃತ್ಯ ಮಾಡುವಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವ್ಯಕ್ತಿ ಸಾವು

    Live Tv
    [brid partner=56869869 player=32851 video=960834 autoplay=true]

  • ಜಿಮ್‍ನಲ್ಲೇ ಜಿಮ್ ಟ್ರೈನರ್ ಆತ್ಮಹತ್ಯೆ

    ಜಿಮ್‍ನಲ್ಲೇ ಜಿಮ್ ಟ್ರೈನರ್ ಆತ್ಮಹತ್ಯೆ

    – ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

    ಚಿಕ್ಕಮಗಳೂರು: 26 ವರ್ಷದ ಜಿಮ್ ಟ್ರೈನರ್ ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

    ಮೃತನನ್ನ ಜಯಪುರ ಸಮೀಪದ ದೂಬ್ಳ ಗ್ರಾಮದ ಸುನಿಲ್ ಎಂದು ಗುರುತಿಸಲಾಗಿದೆ. ಮೃತ ಸುನಿಲ್ ಜಯಪುರದಲ್ಲಿ ಜಿಮ್ ಇಟ್ಟುಕೊಂಡು, 30 ರಿಂದ 40 ಜನ ಯುವಕರಿಗೆ ಜಿಮ್ ಬಗ್ಗೆ ಟ್ರೈನಿಂಗ್ ಕೊಡುತ್ತಿದ್ದ. ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಹಿನ್ನೆಲೆಯಲ್ಲಿ ಜಿಮ್ ಕ್ಲೋಸ್ ಮಾಡಲಾಗಿತ್ತು. ಆದರೆ ಸುನೀಲ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಎಂದು ಹೇಳಲಾಗುತ್ತಿದೆ.

    ಅಷ್ಟೇ ಅಲ್ಲದೇ ಆರ್ಥಿಕ ಪರಿಸ್ಥಿತಿಯನ್ನ ಸುಧಾರಿಸಲು ಜಿಮ್ ಟ್ರೈನರ್ ಸುನಿಲ್ ಕಳೆದ ಮೂರು ತಿಂಗಳಿಂದ ಆಟೋ ಓಡಿಸುತ್ತಿದ್ದನು. ಆರ್ಥಿಕ ನಷ್ಟ ಹಾಗೂ ಕಷ್ಟದಿಂದ ಮಾನಸಿಕವಾಗಿ ಕುಗ್ಗಿದ್ದರಿಂದ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ.

    ಜಿಮ್ ಟ್ರೈನರ್ ಸುನಿಲ್ ಆರೋಗ್ಯವಾಗಿ ಕಟ್ಟುಮಸ್ತಾಗಿದ್ದ. ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದೇಹದಾಢ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಿದ್ದನು. ಕಳೆದ ವರ್ಷ ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿ ಮಿಸ್ಟರ್ ಕೊಪ್ಪ ಎಂಬ ಕೀರ್ತಿಗೂ ಪಾತ್ರನಾಗಿದ್ದನು. ಇದೀಗ 26ನೇ ವರ್ಷಕ್ಕೆ ಆತ್ಮಹತ್ಯೆಗೆ ಶರಣಾಗಿರೋದು ಸ್ಥಳೀಯರಲ್ಲಿ ಆಶ್ಚರ್ಯ ಮೂಡಿಸಿದೆ.

    ಘಟನೆ ಸ್ಥಳಕ್ಕೆ ಜಯಪುರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನನ್ನು ಕೊಲೆಗೈದಿದ್ದ ಆರೋಪಿಗಳು ಅಂದರ್

    ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನನ್ನು ಕೊಲೆಗೈದಿದ್ದ ಆರೋಪಿಗಳು ಅಂದರ್

    ಬೆಂಗಳೂರು: ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನನ್ನು ಬರ್ಬರ ಹತ್ಯೆಗೈದಿದ್ದ ಆರೋಪಿಗಳನ್ನು ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ.

    ಕಲ್ಕೆರೆಯ ಪವನ್, ಪ್ರವೀಣ್, ಮನೋಜ್, ಅಕ್ಷಯ್, ಯೋಗೇಶ್, ಗೋವಿಂದ್, ವೆಂಕಟೇಶ್, ರಾಜಶೇಖರ್ ಬಂಧಿತ ಆರೋಪಿಗಳು. ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ನಿವಾಸಿ ಕಿರಣ್ ಅಲಿಯಾಸ್ ಪುಟ್ಟ (27) ಕೊಲೆಯಾದ ಜಿಮ್ ಟ್ರೈನರ್. ಕಿರಣ್ ರಾಮಸಂದ್ರದಲ್ಲಿ ಜಿಮ್ ಟ್ರೈನರ್ ಆಗಿದ್ದ.

    ಯುವತಿಯ ವಿಚಾರದಲ್ಲಿ ಕಿರಿಕ್ ಉಂಟಾಗಿತ್ತು. ಇತ್ತ ಕಲ್ಕೆರೆಯ ಪವನ್, ಪ್ರವೀಣ್ ಹಾಗೂ ಅವರ ಸ್ನೇಹಿತರು ಕಿರಣ್ ಹತ್ಯೆಗೆ ಪ್ಲಾನ್ ನಡೆಸಿತ್ತು. ಇದೇ ಸಂದರ್ಭದಲ್ಲಿ ಯುವತಿಯು ಪವನ್ ಗುಂಪಿನ ಮೊರೆ ಹೋಗಿದ್ದಳು. ಹೀಗಾಗಿ ಜಗಳ ಬಗೆ ಹರಿಸಬೇಕು ನೀನು ಬಾ ಎಂದು ಆರೋಪಿಗಳು ಕಿರಣ್‍ನನ್ನು ಕರೆದಿದ್ದರು.

    ಕಿರಣ್ ಜೂನ್ 18ರಂದು ನ್ಯಾಯ ಪಂಚಾಯ್ತಿಗೆ ಹೋಗಿದ್ದಾಗ ಮಾತಿಗೆ ಮಾತು ಬೆಳೆದಿತ್ತು. ಇದರಿಂದ ಕೋಪಗೊಂಡ ಗುಂಪು ಕಿರಣ್ ಮೇಲೆ ಲಾಗು ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬನ್ನೇರುಘಟ್ಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದರು.

    ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ಮಾಡಿದಾಗ ಆರೋಪಿಗಳು ಸ್ಕೂಟರ್ ಹಾಗೂ ಆಟೋದಲ್ಲಿ ಬಂದು ಕೃತ್ಯ ಎಸಗಿರುವ ಮಾಹಿತಿ ಲಭಿಸಿತ್ತು. ಬಳಿಕ ಆರೋಪಿಗಳಿಗೆ ಬಲೆ ಬೀಸಿದ ಪೊಲೀಸರು ಇಂದು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಎರಡು ಆಟೋ ಹಾಗೂ ಸ್ಕೂಟರ್ ವಶಕ್ಕೆ ಪಡೆದುಕೊಂಡಿದ್ದಾರೆ.

  • ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನ ಬರ್ಬರ ಹತ್ಯೆ

    ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‌ನ ಬರ್ಬರ ಹತ್ಯೆ

    ಬೆಂಗಳೂರು: ನ್ಯಾಯ ಪಂಚಾಯ್ತಿಗೆ ಕರೆದು ಜಿಮ್ ಟ್ರೈನರ್‍ನನ್ನು ಬರ್ಬರ ಹತ್ಯೆಗೈದ ಘಟನೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಬಳಿಯ ರಾಮಸಂದ್ರದಲ್ಲಿ ನಡೆದಿದೆ.

    ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ನಿವಾಸಿ ಕಿರಣ್ ಅಲಿಯಾಸ್ ಪುಟ್ಟ (27) ಕೊಲೆಯಾದ ವ್ಯಕ್ತಿ ಜಿಮ್ ಟ್ರೈನರ್. ಕಿರಣ್ ರಾಮಸಂದ್ರದಲ್ಲಿ ಜಿಮ್ ಟ್ರೈನರ್ ಆಗಿದ್ದ.

    ಪ್ರೇಮಿಗಳಿಬ್ಬರ ವಿಚಾರದಲ್ಲಿ ಕಿರಿಕ್ ಉಂಟಾಗಿತ್ತು. ಇತ್ತ ಕಲ್ಕೆರೆ ಭಾಗದ ಯುವಕರ ಗುಂಪೊಂದು ಕಿರಣ್ ಹತ್ಯೆಗೆ ಪ್ಲಾನ್ ನಡೆಸಿತ್ತು. ಇದೇ ಸಂದರ್ಭದಲ್ಲಿ ಪ್ರೇಮಿಗಳು ಆ ಗುಂಪಿನವರ ಮೊರೆ ಹೋಗಿದ್ದರು. ಹೀಗಾಗಿ ಪ್ರೇಮಿಗಳ ಜಗಳ ಬಗೆ ಹರಿಸಬೇಕು ನೀನು ಬಾ ಎಂದು ದುಷ್ಕರ್ಮಿಗಳು ಕಿರಣ್‍ನನ್ನು ಕರೆದಿದ್ದರು.

    ಕಿರಣ್ ಇಂದು ನ್ಯಾಯ ಪಂಚಾಯ್ತಿಗೆ ಹೋಗಿದ್ದಾಗ ಮಾತಿಗೆ ಮಾತು ಬೆಳೆದೆ. ಇದರಿಂದ ಕೋಪಗೊಂಡ ಗುಂಪು ಕಿರಣ್ ಮೇಲೆ ಲಾಗು ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇತ್ತ ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಬನ್ನೇರುಘಟ್ಟ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಪ್ರೇಮಿಗಳನ್ನು ವಶಕ್ಕೆ ಪಡೆದು ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಫಿಲಂ ಡೈಲಾಗ್ ಹೇಳುತ್ತಲೇ ತಂದೆಯ ಮರ್ಮಾಂಗ ಕತ್ತರಿಸಿ, ಕೊಚ್ಚಿ ಕೊಲೆಗೈದ ಮಗ

    ಫಿಲಂ ಡೈಲಾಗ್ ಹೇಳುತ್ತಲೇ ತಂದೆಯ ಮರ್ಮಾಂಗ ಕತ್ತರಿಸಿ, ಕೊಚ್ಚಿ ಕೊಲೆಗೈದ ಮಗ

    ಮುಂಬೈ: ಜಿಮ್ ಟ್ರೈನರ್ ಒಬ್ಬ ಫಿಲಂ ಡೈಲಾಗ್ ಹೇಳುತ್ತಲೇ ತಂದೆಯನ್ನೇ ಬರ್ಬರವಾಗಿ ಕೊಲೆಗೈದ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.

    ನಾಗ್ಪುರದ ಹುಡ್ಕೇಶ್ವರ ಪ್ರದೇಶದ ನಿವಾಸಿ ವಿಜಯ್ (55) ಕೊಲೆಯಾದ ತಂದೆ. ವಿಕ್ರಾಂತ್ ಪಿಲ್ಲೆವಾರ್ (25) ಕೊಲೆಗೈದ ಆರೋಪಿ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ನಾಗ್ಪುರದ ಜನರನ್ನು ಬೆಚ್ಚಿಬೀಳಿಸಿದೆ.

    ಆರೋಪಿ ಕುಟುಂಬದ ಹೇಳಿಕೆ ಪ್ರಕಾರ, “ವಿಕ್ರಾಂತ್ ವಿನಾಕಾರಣ ಏಕಾಏಕಿ ಕೋಪಗೊಂಡು ತಂದೆ ವಿಜಯ್ ಕುತ್ತಿಯನ್ನು ಬಲವಾಗಿ ಕಚ್ಚಿದ್ದರಿಂದ ರಕ್ತಸ್ರಾವ ಆರಂಭವಾಯಿತು. ನಂತರ ತಂದೆಯನ್ನು ಮನೆಯ ಮೇಲೆ ಎಳೆದುಕೊಂಡು ಹೋಗಿ ಮರ್ಮಾಂಗವನ್ನು ಕತ್ತರಿಸಿ ವಿಕೃತಿ ಮೆರೆದಿದ್ದಾನೆ. ಅಷ್ಟಕ್ಕೆ ಬಿಡದೇ ಕೊಚ್ಚಿ ಕೊಚ್ಚಿ ಕೊಲೆಗೈದಿದ್ದಾನೆ” ಎಂದು ನಾಗ್ಪುರ ಪೊಲೀಸರು ತಿಳಿಸಿದ್ದಾರೆ.

    “ಜಿಮ್ ತರಬೇತುದಾರ ವಿಕ್ರಾಂತ್ ತಂದೆಯನ್ನು ಕೊಲೆ ಮಾಡುವಾಗ ಹಿಂದಿ ಸಿನಿಮಾದ ಟೈಲಾಗ್ ಹೇಳುತ್ತಲೇ ಇದ್ದ. ಆ ಸಮಯದಲ್ಲಿ ವಿಕ್ರಾಂತ್ ಕ್ರೌರ್ಯವು ಹೇಳಲು ಸಾಧ್ಯವಾಗದ ರೀತಿಯಲ್ಲಿತ್ತು. ಈ ವೇಳೆ ನಾವು ಮಧ್ಯಪ್ರವೇಶಿಸಲು ಪ್ರಯತ್ನಿಸಿದ್ದಕ್ಕೆ ನಮ್ಮನ್ನೇ ಬೆದರಿಸಿದ್ದ” ಎಂದು ಆರೋಪಿಯ ತಾಯಿ ಮತ್ತು ಸಹೋದರಿ ಪೊಲೀಸರಿಗೆ ದೂರಿದ್ದಾರೆ.

    ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಆತನನ್ನು ಬಂಧಿಸಲು ಹರಸಾಹಸಪಟ್ಟರು. ಆತನನ್ನು ಮನೆಯಿಂದ ಕೆಳಗಿಳಿಸಲು ಮತ್ತು ಬಂಧಿಸಲು ಐದು ಪೊಲೀಸರು ಸಾಕಷ್ಟು ಪ್ರಯತ್ನ ನಡೆಸಿ ಕೊನೆಗೆ ಬಂಧಿಸಿದ್ದಾರೆ ಎಂದು ಹುಡ್ಕೇಶ್ವರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ರಾಜ್‍ಕಮಲ್ ವಾಘಮರೆ ಹೇಳಿದ್ದಾರೆ.

  • ತೂಕ ಇಳಿಸಲು ನಿಷೇಧಿತ ಮಾತ್ರೆ ಸೇವನೆ – 22 ವರ್ಷದ ಡ್ಯಾನ್ಸರ್ ಸಾವು

    ತೂಕ ಇಳಿಸಲು ನಿಷೇಧಿತ ಮಾತ್ರೆ ಸೇವನೆ – 22 ವರ್ಷದ ಡ್ಯಾನ್ಸರ್ ಸಾವು

    – ಮಾತ್ರೆ ಸೇವಿಸಿದ ಕೆಲ ಕ್ಷಣದಲ್ಲೇ ವಾಂತಿ

    ಮುಂಬೈ: ತೂಕ ಇಳಿಸಲು ನಿಷೇಧಿತ ಮಾತ್ರೆ ಸೇವನೆ ಮಾಡಿ 22 ವರ್ಷದ ಡ್ಯಾನ್ಸರ್, ಜಿಮ್ ಟ್ರೈನರ್ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

    ಮೃತ ಡ್ಯಾನ್ಸರನ್ನು ಮೇಘನಾ ದೇವಗಡ್ಕರ್ (22) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಡ್ಯಾನ್ಸರ್ ಮತ್ತು ಜಿಮ್ ಟ್ರೈನರ್ ಆಗಿದ್ದ ಈಕೆ ತೂಕ ಇಳಿಸಲು ನಿಷೇಧಿತ ಡೈನಿಟ್ರೋಫೆನಾಲ್ ಎಂಬ ಮಾತ್ರೆ ಸೇವಿಸಿದ್ದಾರೆ. ಮಾತ್ರೆ ಸೇವಿಸಿದ ಕೆಲ ಗಂಟೆಯೊಳಗೆ ಸಾವನ್ನಪ್ಪಿದ್ದಾರೆ.

    ಮೇಘನಾ ಇಂದು ಬೆಳಗ್ಗೆ ಎಂದಿನಂತೆ ತಾನು ಹೊಸದಾಗಿ ಟ್ರೈನರ್ ಆಗಿ ಸೇರಿದ್ದ ಜಿಮ್‍ಗೆ ಬಂದು ವರ್ಕೌಟ್ ಆರಂಭಿಸುವ ಮೊದಲು ಈ ಮಾತ್ರೆಯನ್ನು ತೆಗೆದುಕೊಂಡಿದ್ದಾರೆ. ಅದನ್ನು ಸೇವಿಸಿದ ಕೆಲ ಕ್ಷಣದಲ್ಲಿ ಅವರು ವಾಂತಿ ಮಾಡಲು ಶುರು ಮಾಡಿದ್ದಾರೆ. ಇದಾದ ನಂತರ ಆಕೆಯನ್ನು ಜಿಮ್ ನಲ್ಲಿ ಇದ್ದ ಕೆಲವರು ಅಲ್ಲಿಯೇ ಸ್ಥಳೀಯ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದಾರೆ.

    ಮೇಘನಾಳನ್ನು ಪರೀಕ್ಷಿಸಿದ ವೈದ್ಯರು ನಂತರ ಲೈಫ್‍ಲೈನ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ್ದಾರೆ. ಆದರೆ ಅಲ್ಲಿನ ವೈದ್ಯರು ಇಲ್ಲಿ ಚಿಕಿತ್ಸೆ ನೀಡಲು ಆಗುವುದಿಲ್ಲ ಎಂದು ಸಿಯಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಸಿಯಾನ್ ಆಸ್ಪತ್ರೆ ವೈದ್ಯರು ಆಕೆಯನ್ನು ಐಸಿಯುನಲ್ಲಿ ಇಟ್ಟು ಚಿಕಿತ್ಸೆ ನೀಡಿದ್ದಾರೆ. ಆದರೆ ಸ್ವಲ್ಪ ಸಮಯದ ಕಾಲ ಐಸಿಯುವಿನಲ್ಲಿ ಇದ್ದ ಮೇಘನಾ ಅಲ್ಲೇ ಅಧಿಕ ರಕ್ತದೊತ್ತಡದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯರು, ನಿಷೇಧಿತ ಮಾತ್ರೆ ಸೇವಿಸಿದ ನಂತರ ಮೇಘನಾ ಹೈಪರ್ಥರ್ಮಿಯಾದಿಂದ ಬಳಲುತ್ತಿದ್ದರು ಎಂದು ಹೇಳಿದ್ದಾರೆ. ಈ ಮಾತ್ರೆ ಸೇವನೆಯಿಂದ ಅವರ ದೇಹದ ಉಷ್ಣತೆಯನ್ನು ಸಾಮಾನ್ಯಕ್ಕಿಂತ ಜಾಸ್ತಿ ಮಾಡಿದೆ. ಹೀಗಾಗಿ ಅವರ ದೇಹದಲ್ಲಿ ಹೃದಯ ಬಡಿತ ಮತ್ತು ರಕ್ತದೊತ್ತಡವನ್ನು ತೀವ್ರವಾಗಿ ಹೆಚ್ಚಾಗಿದ್ದು, ಮೇಘನಾ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

    ಸಾಯುವುದಕ್ಕೂ ಮುನ್ನ ಮೇಘನಾ ಆಸ್ಪತ್ರೆಗೆ ಬಂದ ಪೊಲೀಸರಿಗೆ ನಾನು ತೂಕ ಕಮ್ಮಿ ಮಾಡಿಕೊಳ್ಳಲು ಡೈನಿಟ್ರೋಫೆನಾಲ್ ಮಾತ್ರೆಯನ್ನು ಸೇವಿಸಿದ್ದೆ ಎಂದು ಮಾಹಿತಿ ನೀಡಿದ್ದಾಳೆ. ಸದ್ಯ ಈ ಬಗ್ಗೆ ನೌಪಾಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಿಷೇಧಿತ ಮಾತ್ರೆ ಮೇಘನಾ ಅವರಿಗೆ ಹೇಗೆ ದೊರಕಿದೆ ಎಂದು ಮುಂಬೈ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

  • ಜಿಮ್ ಟ್ರೈನರ್ ಕಿಡ್ನಾಪ್, ಹಲ್ಲೆ ಕೇಸ್ – ವಿಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ

    ಜಿಮ್ ಟ್ರೈನರ್ ಕಿಡ್ನಾಪ್, ಹಲ್ಲೆ ಕೇಸ್ – ವಿಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ

    ಬೆಂಗಳೂರು: ನಟ ದುನಿಯಾ ವಿಜಿ ಮೇಲೆ ದಾಖಲಾಗಿರುವ ಹಲ್ಲೆ ಪ್ರಕರಣದ ವಿಚಾರಣೆ ಡಿಸೆಂಬರ್ 12ಕ್ಕೆ ಮುಂದೂಡಿಕೆಯಾಗಿದೆ.

    ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದುನಿಯಾ ವಿಜಿ ಇಂದು 8 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಿಜಿಗೆ ಷರತ್ತುಬದ್ಧ ಜಾಮೀನು ದೊರೆತಿದ್ದು, ಜಾಮೀನಿನ ನಂತರದ ಮೊದಲ ವಿಚಾರಣೆ ಇಂದು ನಡೆದಿತ್ತು. ಹೀಗಾಗಿ ವಿಜಿ ಇಂದು ನ್ಯಾ.ಮಹೇಶ್ ಬಾಬು ಮುಂದೆ ಹಾಜರಾಗಿದ್ದರು.

    ಖುದ್ದು ಹಾಜರಿಗೆ ಸೂಚನೆ ಇಲ್ಲದಿದ್ದರೂ ಕೋರ್ಟ್ ಗೆ ಹಾಜರಾಗಿದ್ದು, ವಿಜಿ ಪರ ವಕೀಲರು ಚಾರ್ಜ್ ಶೀಟ್ ಹಾಕುವವರೆಗೂ ಕೋರ್ಟ್ ಗೆ ಖುದ್ದು ಹಾಜರಾತಿಗೆ ವಿನಾಯಿತಿ ಕೇಳಿದ್ದಾರೆ. ಆದ್ರೆ ನ್ಯಾ. ಮಹೇಶ್ ಬಾಬು ಅವರು ವಕೀಲರ ಮನವಿಯನ್ನು ತಿರಸ್ಕರಿಸಿದ್ದಾರೆ. ಅಲ್ಲದೇ ಡಿಸೆಂಬರ್ 12 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ, ಮುಂದಿನ ವಿಚಾರಣೆ ವೇಳೆ ಹಾಜರಾಗಲು ಸೂಚನೆ ನೀಡಿದ್ದಾರೆ.

    ಕಾನೂನಿನ ಮೇಲೆ ತಮಗಿರುವ ಗೌರವ ವ್ಯಕ್ತಪಡಿಸಲು ವಿಜಿ ಇಂದು ಕೋರ್ಟ್ ಮುಂದೆ ಹಾಜರಾಗಿದ್ದರು. ದುನಿಯಾ ವಿಜಿ ಜೊತೆ ಇತರೆ ಮೂವರು ಆರೋಪಿಗಳು ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಕೋರ್ಟ್ ನಿಂದ ಹೊರಬರುತ್ತಿದ್ದಂತೆಯೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ವಿಜಿ ನಿರಾಕರಿಸಿದರು.

    ಏನಿದು ಪ್ರಕರಣ?
    ಸೆಪ್ಟೆಂಬರ್ 22ರ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಕಾಂಪಿಟೇಷನ್ ನೋಡಲು ದುನಿಯಾ ವಿಜಿ ಮತ್ತು ತಂಡ ಬಂದಿತ್ತು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿದೆ. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿಗೌಡನ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿದ್ದರು. ದುನಿಯಾ ವಿಜಿ, ಮಣಿ ಮತ್ತು ಪ್ರಸಾದ್ ಸಹಚರರಿಂದ ಈ ಕೃತ್ಯ ನಡೆದಿದೆ ಆರೋಪ ಕೇಳಿ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂದು `ಜಂಗ್ಲಿ’ಯ ಜಾಮೀನು ಭವಿಷ್ಯ- ಇತ್ತ ಕೀರ್ತಿಗೆ ಭದ್ರತೆ ನೀಡುವಂತೆ ವಿಜಿ ಪತ್ರ

    ಇಂದು `ಜಂಗ್ಲಿ’ಯ ಜಾಮೀನು ಭವಿಷ್ಯ- ಇತ್ತ ಕೀರ್ತಿಗೆ ಭದ್ರತೆ ನೀಡುವಂತೆ ವಿಜಿ ಪತ್ರ

    ಬೆಂಗಳೂರು: ಕಳೆದೊಂದು ವಾರದಿಂದ ಪರಪ್ಪನ ಅಗ್ರಹಾರದಲ್ಲಿರುವ ದುನಿಯಾ ವಿಜಿ, ಜೈಲಿನಿಂದ ಹೊರ ಬರ್ತಾರೋ ಇಲ್ವೋ ಅನ್ನೋದು ಇಂದು ನಿರ್ಧಾರವಾಗಲಿದೆ. ಇಂದು 8ನೇ ಎಸಿಎಂಎಂ ಕೋರ್ಟ್ ಜಂಗ್ಲಿಯ ಜಾಮೀನು ಅರ್ಜಿ ತೀರ್ಪು ನೀಡಲಿದೆ. ಈ ನಡುವೆ ಎರಡನೇ ಪತ್ನಿಗೆ ಭದ್ರತೆ ನೀಡುವಂತೆ ವಿಜಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.

    ಜಿಮ್ ಟ್ರೈನರ್ ಮಾರುತಿ ಗೌಡನನ್ನು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ 8ನೇ ಎಸಿಎಂಎಂ ಕೋರ್ಟ್ ಇಂದಿಗೆ ತೀರ್ಪು ಮುಂದೂಡಿತ್ತು. ಇಂದು ಮಧ್ಯಾಹ್ನ 3 ಗಂಟೆಗೆ 8ನೇ ಎಸಿಎಂಎಂ ಕೋರ್ಟ್ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಲಿದೆ.

    ಇನ್ನು ಹಲ್ಲೆಗೊಳಗಾದ ಮಾರುತಿ ಗೌಡ ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಹಾಗಾಗಿ ದುನಿಯಾ ವಿಜಿ ಜಾಮೀನು ಸಿಗೋ ನಿರೀಕ್ಷೆಯಲ್ಲಿದ್ದಾರೆ. ಇತ್ತ ಸೆಲೆಬ್ರಿಟಿ ಎಂಬ ಕಾರಣಕ್ಕೆ ಈ ಪ್ರಕರಣವನ್ನು ದೊಡ್ಡದು ಮಾಡಿದ್ದಾರೆ. ಇವರೇನು ರೌಡಿ ಅಲ್ಲ ಆಕಸ್ಮಿಕವಾಗಿ ಆದ ಜಗಳ ಅಂತಾ ದುನಿಯಾ ವಿಜಿ ಪರ ವಕೀಲರು ವಾದಿಸಿದ್ದರು.

    ಇದೆಲ್ಲದರ ನಡುವೆ ದೊಡ್ಡೆಂಡ್ತಿ-ಚಿಕ್ಕೆಂಡ್ತಿ ಗಲಾಟೆಯಿಂದ ಜೈಲಲ್ಲೂ ಕಂಗಾಲಾಗಿರೋ ದುನಿಯಾ ವಿಜಯ್ ಇದೀಗ, ಕೀರ್ತಿಗೆ ಹೆಚ್ಚುಕಮ್ಮಿಯಾದ್ರೆ ನಾಗರತ್ನರವರೇ ನೇರ ಹೊಣೆ ಅಂತ ಸೆಂಟ್ರಲ್ ಜೈಲ್‍ನಿಂದಲೇ ಗಿರಿನಗರ ಪೊಲೀಸರಿಗೆ ವಿಜಯ್ ಪತ್ರ ಬರೆದಿದ್ದಾರೆ.

    ಪತ್ರದಲ್ಲೇನಿದೆ?:
    ಇಂದ
    ಬಿ.ಆರ್.ವಿಜಯ್ ಕುಮಾರ್ ಸನ್ ಆಫ್ ಸಿ.ರುದ್ರಪ್ಪ
    ಕೇಂದ್ರ ಕಾರಾಗೃಹ, ಬೆಂಗಳೂರು

    ಮಾನ್ಯರೇ,
    ವಿಷಯ: ನನ್ನ ಪತ್ನಿ ಕೀರ್ತಿ ಇವರಿಗೆ ಸೂಕ್ತ ಭದ್ರತೆ ಒದಗಿಸುವ ಕೋರಿ

    ನನ್ನ ಪತ್ನಿ ಕೀರ್ತಿ ಕಳೆದ ಸೋಮವಾರ ನನ್ನನ್ನು ಭೇಟಿ ಮಾಡಲು ಕೇಂದ್ರ ಕಾರಾಗೃಹಕ್ಕೆ ಬಂದಿದ್ದು, ದಿನಾಂಕ 23/09/18ರಂದು ನಾಗರತ್ನರವರು ನನ್ನ ಪತ್ನಿ ಕೀರ್ತಿಯವರ ಮೇಲೆ ಹಲ್ಲೆ ನಡೆಸಿದ್ದಾರಂತೆ. ಇದರಿಂದ ನನ್ನ ಪತ್ನಿ ಕೀರ್ತಿಯವರು ತೀವ್ರ ಭಯಭೀತರಾಗಿರುತ್ತಾರೆ. ಹಾಗೂ ನನ್ನನ್ನು ಭೇಟಿ ಮಾಡಲು ಬರುವ ಸಮಯದಲ್ಲಿ ಕಾರ್ ಡ್ರೈವರ್ ಮಹಮ್ಮದ್‍ರವರಿಗೆ ಕರೆ ಮಾಡಿ ನಿನ್ನನ್ನು ಅಂದರೆ ಕೀರ್ತಿಯವರನ್ನು ಸುಮ್ಮನೆ ಬಿಡುವುದಿಲ್ಲ. ನೀನು ಮತ್ತೆ ಮನೆಗೆ ಬಂದರೆ ನಿನಗೆ ಒಂದು ಗತಿ ಕಾಣಿಸುತ್ತೇನೆ ಎಂದು ಧಮ್ಕಿ ಹಾಕಿರುತ್ತಾರೆ ಹಾಗೂ ಕೊಲೆ ಬೆದರಿಕೆಯೊಡ್ಡಿರುತ್ತಾರೆ. ಸುಮ್ಮನೆ ನನ್ನ ಪತ್ನಿ ಮೇಲೆ ಆರೋಪ ಮಾಡಿ ಪ್ರಕರಣ ದಾಖಲು ಮಾಡುತ್ತಿದ್ದು, ದಯಮಾಡಿ ನನ್ನ ಹೆಂಡತಿ ಕೀರ್ತಿಗೆ ಸೂಕ್ತ ಭದ್ರತಾ ವ್ಯವಸ್ಥೆ ನೀಡಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಪ್ರಾರ್ಥಿಸುತ್ತಿದ್ದೇನೆ. ಹಾಗೂ ನನ್ನ ಪತ್ನಿ ಕೀರ್ತಿಯವರಿಗೆ ಪ್ರಾಣ ಬೆದರಿಕೆ ಇದ್ದು, ಸೂಕ್ತ ಭದ್ರತೆ ಒದಗಿಸಬೇಕೆಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತಿದ್ದೇನೆ. ನನ್ನ ಪತ್ನಿ ಕೀರ್ತಿಯವರು ಮಾನಸಿಕ ಕಿರುಕುಳದಿಂದ ನೊಂದಿದ್ದು, ಮತ್ತೆ ಈ ರೀತಿಯ ಘಟನೆ ಜರುಗಿದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿರುತ್ತಾರೆ. ನನ್ನ ಪತ್ನಿ ಕೀರ್ತಿಯವರಿಗೆ ಏನಾದರೂ ತೊಂದರೆಯಾದಲ್ಲಿ ನಾಗರತ್ನರವರೇ ನೇರ ಹೊಣೆಗಾರರಾಗಿರುತ್ತಾರೆ.

    ವಂದನೆಗಳೊಂದಿಗೆ

    ಇಂತಿ ತಮ್ಮ ವಿಶ್ವಾಸಿ
    ಬಿ.ಆರ್.ವಿಜಯ್ ಕುಮಾರ್

    ಒಟ್ಟಿನಲ್ಲಿ ಇಂದು ದುನಿಯಾ ವಿಜಿಗೆ ಜಾಮೀನು ಸಿಕ್ಕರೆ ಬಿಗ್ ರಿಲೀಫ್ ಸಿಕ್ಕಂತಾಗಲಿದ್ದು, ಇಲ್ಲದೆ ಹೋದ್ರೆ ಇನ್ನಷ್ಟು ದಿನ ಜೈಲೂಟ ಗ್ಯಾರಂಟಿಯಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!

    ದುನಿಯಾ ವಿಜಿಗೆ ಇನ್ನೂ 2 ದಿನ ಜೈಲು!

    ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ದುನಿಯಾ ವಿಜಯ್ ಅವರು ಇನ್ನೂ 2 ದಿನಗಳ ಕಾಲ ಜೈಲಿನಲ್ಲೇ ಇರಲಿದ್ದಾರೆ.

    ಜೈಲಿನಲ್ಲಿರುವ ವಿಜಯ್ ಅವರ ಜಾಮೀನು ಅರ್ಜಿಯನ್ನು ಈ ಹಿಂದೆ ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಜಾಮೀನಿಗಾಗಿ ವಿಜಿ ಸೆಷನ್ಸ್ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಅಕ್ಟೋಬರ್ 1ಕ್ಕೆ ಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.

    ವಿಜಿ ಪರ ವಕೀಲರ ವಾದವೇನು?:
    ಐಪಿಸಿ ಸೆಕ್ಷನ್ ಕಲಂ 326 ಹೊರತುಪಡಿಸಿ ಉಳಿದ ಪ್ರಕರಣಗಳು ಜಾಮೀನಿಗೆ ಅರ್ಹವಾದದ್ದಾಗಿದೆ. ಇಲ್ಲಿ ಉದ್ದೇಶಪೂರ್ವಕವಾಗಿ ಐಪಿಸಿ ಸೆಕ್ಷನ್ 326 ಸೆಕ್ಷನ್ ಸೇರಿಸಲಾಗಿದೆ. ಆದ್ರೆ ದೂರಿನಲ್ಲಾಗಲಿ, ಎಫ್‍ಐಆರ್ ನಲ್ಲಾಗಲಿ ಮಾರಕಾಸ್ತ್ರದ ಬಗ್ಗೆ ಪ್ರಸ್ತಾಪವಿಲ್ಲ. ಕೈನಿಂದ ಹಲ್ಲೆ ಎಂದು ಮಾತ್ರ ಆರೋಪಿಸಲಾಗಿತ್ತು. ಈ ಬಗ್ಗೆ ನೀಡಿದ ಮೊದಲ ಹೇಳಿಕೆಯಲ್ಲೂ ಇದರ ಪ್ರಸ್ತಾಪವಿಲ್ಲ. ನಾಲ್ಕು ಗಂಟೆಗಳ ಅವಧಿಯಲ್ಲಿ 2 ನೇ ಹೇಳಿಕೆ ಪಡೆದು ಸೆಕ್ಷನ್ 326 ದಾಖಲಿಸಿದ್ದಾರೆ. ಹಲ್ಲೆಗೊಳಗಾದ ಮಾರುತಿ ಗೌಡ ಆರೋಗ್ಯ ಸುಧಾರಿಸಿದೆ. ನಿನ್ನೆ ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ. ಇದೊಂದು ಸಾಮಾನ್ಯ ಪ್ರಕರಣವಾಗಿದೆ. ಹೀಗಾಗಿ ವಿಜಿಗೆ ಜಾಮೀನು ನೀಡಿ ಅಂತ ದುನಿಯಾ ವಿಜಿ ಪರ ವಕೀಲ ಆರ್. ಶ್ರೀನಿವಾಸ್ ವಾದ ಮಾಡಿದ್ದಾರೆ.


    ಸರ್ಕಾರಿ ವಕೀಲರ ವಾದವೇನು?:
    ದುನಿಯಾ ವಿಜಿ ಮನುಷ್ಯನೇ ಅಲ್ಲ. ಈತ ಸುಧಾರಿಸುವ ಲಕ್ಷಣಗಳು ಕಾಣಿಸುತ್ತಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ವಿಜಿಗೆ ಜಾಮೀನು ನೀಡಬೇಡಿ ಅಂತ ಸರ್ಕಾರಿ ಪರ ವಕೀಲರು ಪ್ರತಿವಾದ ಮಾಡಿದ್ದಾರೆ.

    ಹೀಗಾಗಿ ಎರಡೂ ತಂಡಗಳ ವಾದ-ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಅದೇಶವನ್ನು ಅಕ್ಟೋಬರ್ 1ಕ್ಕೆ ಕಾಯ್ದಿರಿಸಿದೆ. ಈ ಹಿನ್ನೆಲೆಯಲ್ಲಿ ದುನಿಯಾ ವಿಜಿ ಅವರು ಇನ್ನೂ 2 ದಿನಗಳ ಕಾಲ ಜೈಲಿನಲ್ಲಿರಲಿದ್ದಾರೆ.

    ಜಾಮೀನು ನೀಡದಂತೆ ಹೈಗ್ರೌಂಡ್ಸ್ ಪೊಲೀಸರು ಕೂಡ ಆಕ್ಷೇಪಣೆ ಸಲ್ಲಿಸಿದ್ದರು. ಈ ಆಕ್ಷೇಪಣೆಗಳೇನು?:
    * ಆರೋಪಿಗಳು ಗಾಂಜಾ ಸೇವಿಸಿದ್ದಾರೆ ಎಂಬ ಮಾಹಿತಿ ಇದೆ
    * ರಕ್ತ ಮಾದರಿ ಕೊಡಲಾಗ್ತಾ ಇದೆ, ಈಗಲೇ ಜಾಮೀನು ಮಂಜೂರು ಮಾಡಬೇಡಿ.
    * ಆರೋಪಿ ಪದೇ ಪದೇ ಇದೇ ರೀತಿಯ ಗಲಾಟೆ ಮಾಡ್ತಾನೆ
    * ಇದೇ ರೀತಿಯ ಗಲಾಟೆಯನ್ನು ಮಾಡಿ ಮೂರು ಬಾರಿ ಸ್ಟೇಷನ್ ಬೇಲ್ ಪಡೆದಿದ್ದಾರೆ
    * ಈ ಬಾರಿಯೂ ಜಾಮೀನು ಸಿಕ್ಕಿದ್ದರೆ ಕಾನೂನು ಮೇಲಿನ ಭಯ ಹೋಗುತ್ತೆ
    * ಪ್ರಭಾವಿ ವ್ಯಕ್ತಿ ಆಗಿರೋದ್ರಿಂದ ಸಾಕ್ಷಿ ನಾಶ ಮಾಡ್ತಾನೆ
    * ಪೊಲೀಸ್ ಠಾಣೆಯ ಮುಂದೆಯೇ ದೊಡ್ಡ ಗಲಾಟೆ ಮಾಡಿದ್ದಾನೆ.

    ಮಾರುತಿ ಗೌಡ ಡಿಸ್ಚಾರ್ಜ್:
    ದುನಿಯಾ ವಿಜಿಗೆ ಜಾಮೀನು ಸಿಗುವ ಸಾಧ್ಯತೆಗಳಿವೆ. ಯಾಕಂದ್ರೆ ಹಲ್ಲೆಗಳೊಳಗಾಗಿದ್ದ ಮಾರುತಿ ಗೌಡ ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಟ ದುನಿಯಾ ವಿಜಿ ಹಲ್ಲೆಯಿಂದ ವಿಕ್ರಮ್ ಆಸ್ಪತ್ರೆಯಲ್ಲಿ ಮಾರುತಿ ಗೌಡ ದಾಖಲಾಗಿದ್ದರು. ಆರು ದಿನಗಳ ಬಳಿಕ ನಿನ್ನೆ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. ಮಾರುತಿ ಗೌಡ ತುಟಿಗೆ ಗಾಯವಾಗಿ, ಕಣ್ಣು ಮತ್ತು ಮುಖ ಊತ ಬಂದಿತ್ತು. ಹೀಗಾಗಿ ಆರು ದಿನಗಳ ಕಾಲ ಚಿಕಿತ್ಸೆ ನೀಡಿ ತುಟಿಗೆ ಹದಿನೈದು ಹೊಲಿಗೆ ಹಾಕಲಾಗಿತ್ತು. ಸದ್ಯಕ್ಕೆ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.

    ಏನಿದು ಪ್ರಕರಣ?:
    ಕಳೆದ ಶನಿವಾರ ವಸಂತನಗರದ ಅಂಬೇಡ್ಕರ್ ಭವನದಲ್ಲಿ ಮಿಸ್ಟರ್ ಬೆಂಗಳೂರು ಬಾಡಿ ಬಿಲ್ಡಿಂಗ್ ಸ್ಪರ್ಧೆ ನಡೆಯುತಿತ್ತು. ಈ ಸ್ಪರ್ಧೆ ನೋಡಲು ದುನಿಯಾ ವಿಜಿ ತಮ್ಮ ತಂಡದೊಂದಿಗೆ ಬಂದಿದ್ದರು. ಈ ವೇಳೆ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮತ್ತು ದುನಿಯಾ ವಿಜಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆದರೆ ಗಲಾಟೆ ವಿಕೋಪಕ್ಕೆ ತಿರುಗಿ ದುನಿಯಾ ವಿಜಯ್ ಗ್ಯಾಂಗ್, ಮಾರುತಿ ಗೌಡರ ಮೇಲೆ ಹಲ್ಲೆ ನಡೆಸಿ ಕಾರಿನಲ್ಲಿ ಹಾಕಿಕೊಂಡು ಕಿಡ್ನಾಪ್ ಮಾಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=YjxBslBdbNU