Tag: ಜಿಲೇಬಿ

  • ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್

    ಇನ್ಮುಂದೆ ಸಮೋಸ, ಜಿಲೇಬಿ ತಿನ್ನುವವರಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ವಾರ್ನಿಂಗ್

    – ಹೆಚ್ಚು ಕೊಬ್ಬು, ಹೆಚ್ಚು ಸಕ್ಕರೆ, ಎಣ್ಣೆ ಅಂಶವುಳ್ಳ ಪದಾರ್ಥಗಳ ಬಗ್ಗೆ ಜಾಗೃತಿ
    – ಫುಡ್ ಕೌಂಟರ್ ಪಕ್ಕದಲ್ಲೇ ವಾರ್ನಿಂಗ್ ಬೋರ್ಡ್, ದುಷ್ಪರಿಣಾಮಗಳ ಎಚ್ಚರಿಕೆ

    ನವದೆಹಲಿ: ಆರೋಗ್ಯಕ್ಕೆ ಹಾನಿಯುಂಟು ಮಾಡುವ ಆಹಾರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು (Union Health Ministry) ಇನ್ಮುಂದೆ ಸಮೋಸ (Samosa), ಜಿಲೇಬಿ (Jalebi) ಸೇರಿದಂತೆ ಇನ್ನಿತರೆ ತಿನಿಸುಗಳಿಗೂ ಸಿಗರೇಟ್ ಪ್ಯಾಕೆಟ್‌ನಲ್ಲಿರುವಂತೆ ಎಚ್ಚರಿಕೆ ನೀಡಲು ಮುಂದಾಗಿದೆ.

    ಕೇಂದ್ರ ಆರೋಗ್ಯ ಸಚಿವಾಲಯದ ಆದೇಶದ ಹಿನ್ನೆಲೆ ನಾಗ್ಪುರದ AIIMS (Nagpur AIIMS) ಸಂಸ್ಥೆಯ ತಜ್ಞರು ಭಾರತೀಯ ತಿಂಡಿಗಳ ಬಗ್ಗೆ ಅಧ್ಯಯನ ನಡೆಸಿದೆ. ಈ ವರದಿಯಲ್ಲಿ ಎಣ್ಣೆ ಮತ್ತು ಸಕ್ಕರೆ ಬಳಸಿ ತಯಾರಿಸುವ ತಿಂಡಿಗಳಲ್ಲಿ ಕೊಬ್ಬು ಮತ್ತು ಸಕ್ಕರೆಯ ಅಂಶ ಹೆಚ್ಚಾಗಿರುತ್ತದೆ. ಹೀಗಾಗಿ ಸಮೋಸ ಮತ್ತು ಜಿಲೇಬಿ ಪದೇ ಪದೇ ತಿನ್ನುವುದು ಆರೋಗ್ಯಕ್ಕೆ ಹಾನಿಕಾರಕ. ಇದು ಹಲವು ಕಾಯಿಲೆಗಳಿಗೆ ಕಾರಣವಾಗಬಹುದು ಎಂದು ತಿಳಿಸಿದೆ.ಇದನ್ನೂ ಓದಿ: ಇಹಲೋಕ ತ್ಯಜಿಸಿದ ʻಅಭಿನಯ ಸರಸ್ವತಿʼ – ಕನ್ನಡದ ಮೊದಲ ಮಹಿಳಾ ಸೂಪರ್ ಸ್ಟಾರ್‌ನ ಸಿನಿ ಪಯಣ ಹೇಗಿತ್ತು?

    ಈ ರೀತಿಯ ತಿನಿಸುಗಳನ್ನು ಅತೀ ಹೆಚ್ಚಾಗಿ ತಿನ್ನುವುದರಿಂದ ದೇಹದ ತೂಕ ಹೆಚ್ಚಾಗುತ್ತದೆ. ಈಗಾಗಲೇ ಭಾರತದ ನಗರಗಳ 100 ಜನರ ಪೈಕಿ 5 ಜನರ ತೂಕ ಅತಿಯಾಗಿ ಹೆಚ್ಚಾಳವಾಗಿದೆ. ಇದರಿಂದ ಸಕ್ಕರೆ ಕಾಯಿಲೆ ಮತ್ತು ಹೃದಯ ಸಂಬಂಧಿ ಕಾಯಿಲೆಯನ್ನು ಹೆಚ್ಚಿಸುತ್ತದೆ. ಅಂದರೆ ತಿನ್ನಲೇಬಾರದು ಅಂತಿಲ್ಲ, ಆದರೆ ಇತಿಮಿತಿಯಲ್ಲಿ ಸೇವನೆ ಮಾಡಬೇಕು ಎಂದು ವರದಿಯಲ್ಲಿ ಉಲ್ಲೇಖಿಸಿದೆ.

    ಇಂತಹ ತಿನಿಸುಗಳನ್ನು ಪ್ರತಿನಿತ್ಯ ಸೇವನೆ ಮಾಡೋದ್ರಿಂದ ಆರೋಗ್ಯದಲ್ಲಿ ಸಮಸ್ಯೆ ಕಂಡುಬರುತ್ತದೆ. ಹೀಗಾಗಿ ಜಂಕ್ ಫುಡ್ ಕಡಿಮೆ ಮಾಡಿಕೊಂಡರೆ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಸಲಹೆ ನೀಡಿದೆ. ಹೀಗಾಗಿ ಸದ್ಯ ನಾಗ್ಪುರದಲ್ಲಿ ಜಂಕ್ ಫುಡ್ ತಿನ್ನೋದು ಆರೋಗ್ಯಕ್ಕೆ ಹಾನಿಕಾರಕ ಎಂಬ ಬೋರ್ಡ್ ಹಾಕುವ ಅಭಿಯಾನ ಶುರು ಮಾಡಲಾಗಿದೆ. ಜನಪ್ರಿಯ ಆಹಾರ ಮಳಿಗೆಗಳ ಪಕ್ಕದಲ್ಲಿ ಎಚ್ಚರಿಕೆ ಪೋಸ್ಟರ್‌ಗಳನ್ನು ಹಾಕಲಾಗಿದ್ದು, ಸಕ್ಕರೆ, ಕೊಬ್ಬಿನ ಬಗ್ಗೆ ಸ್ಪಷ್ಟ ಮಾಹಿತಿ ಹಾಗೂ ಪದೇ ಪದೇ ಸೇವನೆಯಿಂದ ದೀರ್ಘಕಾಲೀನ ಆರೋಗ್ಯ ಅಪಾಯಗಳನ್ನು ವಿವರಿಸುವ ಸಂದೇಶಗಳ ಉಲ್ಲೇಖಿಸಲಾಗಿದೆ.

    ಈ ಕ್ರಮಕ್ಕೆ ಕಾರಣವೇನು?
    ಭಾರತದಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು, ಬೊಜ್ಜು, ಮಧುಮೇಹ, ಅಧಿಕ ರಕ್ತದೊತ್ತಡ ಮತ್ತು ಹೃದ್ರೋಗ ಸಮಸ್ಯೆ ತೀವ್ರವಾಗಿವೆ. ಹೀಗಾಗಿ ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿದ್ದು, ಕರಿದ ಮತ್ತು ಸಕ್ಕರೆಯುಕ್ತ ತಿಂಡಿಗಳ ಸೇವನೆಯಿಂದ ಈ ಕಾಯಿಲೆಗಳಿಗೆ ಪ್ರಮುಖ ಕಾರಣ ಎಂದು ತಿಳಿಸಿದೆ.

    ಇದು ನಿಷೇಧವಲ್ಲ, ಆದರೆ ಮಿತವಾಗಿ ಸೇವಿಸಲು ಸೂಚಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ. ಮುಂಬರುವ ದಿನಗಳಲ್ಲಿ ಬೇರೆ ಬೇರೆ ನಗರಗಳಲ್ಲಿ ಈ ರೀತಿಯ ಪೋಸ್ಟರ್ ಅಂಟಿಸಲು ಚಿಂತಿಸಿದ್ದು, ಸಿಗರೇಟ್ ಮೇಲೆ ಇರುವ ಹಾಗೆಯೇ ತಿನಿಸುಗಳ ಮೇಲೆಯೂ ದುಷ್ಪರಿಣಾಮಗಳ ಎಚ್ಚರಿಕೆ ನೀಡಲು ಮುಂದಾಗಿದೆ.ಇದನ್ನೂ ಓದಿ: ಪಾರಿಜಾತ ಪುಷ್ಪವೊಂದು ತನ್ನ ಪರಿಮಳದೊಂದಿಗೆ ಜೀವನ ನಡೆಸಿ ನಮ್ಮನ್ನಗಲಿ ಹೊರಟಿದೆ – ಕಲಾ ಸರಸ್ವತಿಗೆ ಕಿಚ್ಚನ ನಮನ

  • Haryana Election Results| ಜಿಲೇಬಿ ಟ್ರೆಂಡ್‌ ಆಗಿದ್ದು ಯಾಕೆ?

    Haryana Election Results| ಜಿಲೇಬಿ ಟ್ರೆಂಡ್‌ ಆಗಿದ್ದು ಯಾಕೆ?

    ನವದೆಹಲಿ: ಹರಿಯಾಣ ಚುನಾವಣಾ ಫಲಿತಾಂಶ (Haryana Election Results) ಹೊರಬೀಳುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಜಿಲೇಬಿ (Jalebi) ಫುಲ್‌ ಟ್ರೆಂಡಿಂಗ್‌ನಲ್ಲಿದೆ.

    ಜಿಲೇಬಿ ಫುಲ್‌ ಟ್ರೆಂಡಿಗ್‌ (Trending) ಆಗಲು ಕಾರಣವಿದೆ. ಹರಿಯಾಣ ಚುನಾವಣೆಯ ಪ್ರಚಾರ ಭಾಷಣದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul gandhi) ಜಿಲೇಬಿ ಪ್ರಸ್ತಾಪ ಮಾಡಿ ಮಾತನಾಡಿದ್ದರು.  ಇದನ್ನೂ ಓದಿ: ಒಮರ್‌ ಅಬ್ದುಲ್ಲಾ ಜಮ್ಮು ಕಾಶ್ಮೀರದ ಮುಂದಿನ ಸಿಎಂ

    ರಾಹುಲ್‌ ಹೇಳಿದ್ದೇನು?
    ಹರಿಯಾಣದ ಜಿಲೇಬಿ ತುಂಬಾ ರುಚಿಕರವಾಗಿದ್ದು, ಅದನ್ನು ವಿಶ್ವಾದ್ಯಂತ ರಫ್ತು ಮಾಡಬೇಕು. ಸ್ಥಳೀಯ ಅಂಗಡಿಗಳನ್ನು ಜಿಲೇಬಿ ಕಾರ್ಖಾನೆಗಳಾಗಿ ಬದಲಾಗಬೇಕು. ಈ ಜಿಲೇಬಿಗಳು ದೇಶ ಮತ್ತು ವಿದೇಶಕ್ಕೆ ಹೋದರೆ 10,000 ರಿಂದ 50,000 ಮಂದಿಗೆ ಉದ್ಯೋಗ ಸಿಗಲಿದೆ.

    ನಾನು ಹರಿಯಾಣದ ಜಿಲೇಬಿಯನ್ನು ತಿಂದಿದ್ದೇನೆ. ಇದು ತುಂಬಾ ರುಚಿಕರವಾಗಿದೆ. ಈ ಜಿಲೇಬಿಗಳನ್ನು ಜಪಾನ್ ಮತ್ತು ಅಮೆರಿಕದಂತಹ ವಿವಿಧ ದೇಶಗಳಿಗೆ ರಫ್ತು ಮಾಡಬೇಕು. ಆದರೆ ಮೋದಿ ಅವರು ಅದಾನಿ ಅಂಬಾನಿಗೆ ದೇಶದ ಸಂಪತ್ತು ಹಂಚಿದ್ದರಿಂದ  ಜಿಲೇಬಿ ಅಂಗಡಿ ತೆರೆಯಲು ನಿಮಗೆ ಸಾಲ ನೀಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದರು.

    ಈಗ ಟ್ರೆಂಡ್‌ ಯಾಕೆ?
    ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಗಳಿಸಲಿದೆ ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ ಕಾಂಗ್ರೆಸ್‌ ನಾಯಕರು ಜಿಲೇಬಿ ತಯಾರಿಸಲು ಆರ್ಡರ್‌ ನೀಡಿದ್ದರು. ಅಷ್ಟೇ ಅಲ್ಲದೇ ಫಲಿತಾಂಶ ಪ್ರಕಟವಾಗುವ ಮೊದಲೇ ಜಿಲೇಬಿಯನ್ನು ಕಾಂಗ್ರೆಸ್‌ ಕೆಲ ಕಡೆ ಹಂಚಿಕೊಂಡಿತ್ತು.

    ಬೆಳಗ್ಗೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮುನ್ನಡೆ ಗಳಿಸುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್‌ ಬೆಂಬಲಿಗರು ಜಿಲೇಬಿ ಫೋಟೋವನ್ನು ಹಾಕತೊಡಗಿದ್ದರು. ಆದರೆ ಫಲಿತಾಂಶ ಬದಲಾಗುತ್ತಿದ್ದಂತೆ ಬಿಜೆಪಿ ಬೆಂಬಲಿಗರು ಈಗ ಜಿಲೇಬಿ ಫೋಟೋವನ್ನು ಹಾಕಿ ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಕಾರಣ ಈಗ ಜಿಲೇಬಿ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಆಗಿದೆ.

  • ಸಿಹಿಯಾದ ಜಿಲೇಬಿ ಮಾಡಿ ನಾಲಿಗೆ ಚಪ್ಪರಿಸಿ ಸವಿಯಿರಿ

    ಸಿಹಿಯಾದ ಜಿಲೇಬಿ ಮಾಡಿ ನಾಲಿಗೆ ಚಪ್ಪರಿಸಿ ಸವಿಯಿರಿ

    ಸಿಹಿ ತಿಂಡಿಯನ್ನು ಹಲವರು ತುಂಬಾ ಇಷ್ಟ ಪಡುತ್ತಾರೆ. ಅಂತಹವರಿಗಾಗಿ ನಾವು ಇಂದು ಜಿಲೇಬಿ ಮಾಡುವುದನ್ನು ತಿಳಿಸಿಕೊಡುತ್ತೇವೆ. ಬಗೆಗೆಯ ಸಿಹಿ ತಿನಿಸು ಹಬ್ಬದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಾವು ಇಂದು ಈ ಸಿಹಿಯಾದ ಜಿಲೇಬಿ ಮಾಡಲು ಬೇಕಾಗಿರುವ ಪದಾರ್ಥಗಳ ಪಟ್ಟಿಗಳ ಜೊತೆಗೆ ಮಾಡುವ ಸರಳ ವಿಧಾನವನ್ನು ವಿವರಿಸಿದ್ದೇವೆ.

    ಬೇಕಾಗುವ ಪದಾರ್ಥಗಳು:
    * ಸಕ್ಕರೆ- 2 ಕಪ್
    * ಮೈದಾ ಹಿಟ್ಟು-2 ಕಪ್
    * ಮೊಸರು-1 ಕಪ್
    * ಬೇಕಿಂಗ್ ಸೋಡಾ- ಸ್ವಲ್ಪ
    * ಕೇಸರಿ ದಳ- ಸ್ವಲ್ಪ
    * ಹಾಲು- 1 ಕಪ್
    * ನಿಂಬೆ ರಸ- ಸ್ವಲ್ಪ
    * ಏಲಕ್ಕಿ ಪುಡಿ- ಸ್ವಲ್ಪ
    * ಅಡುಗೆ ಎಣ್ಣೆ-ಅಗತ್ಯಕ್ಕೆ ತಕ್ಕಷ್ಟು ಇದನ್ನೂ ಓದಿ: ಹಬ್ಬಕ್ಕೆ ಮಾಡಲು ಮರೆಯದಿರಿ ಸಿಹಿಯಾದ ಬಾಸುಂದಿ

    ಮಾಡುವ ವಿಧಾನ:

    * ಮೊದಲಿಗೆ ಹಾಲನ್ನು ಕಾಯಿಸಿ ಅದಕ್ಕೆ ಕೇಸರಿ ದಳವನ್ನು ಹಾಕಿ ನೆನೆಯಲು ಬಿಡಿ.
    * ನಂತರ ಒಂದು ಪಾತ್ರೆಗೆ ಸಕ್ಕರೆ ಹಾಗೂ ನೀರು ಹಾಕಿ ಅಂಟಿನ ಹದಕ್ಕೆ ಪಾಕವಾಗುವಂತೆ ಕಾಯಿಸಿ.

    * ನಂತರ ಈ ಸಕ್ಕರೆ ಪಾಕಕ್ಕೆ ಏಲಕ್ಕಿ ಪುಡಿ, ಹಾಗೂ ಹಾಲಿನಲ್ಲಿ ನೆನೆಸಿದ ಕೇಸರಿಯನ್ನು ಅರ್ಧ ಹಾಕಿ, ಮತ್ತರ್ಧ ತೆಗೆದಿಡಿ.
    * ಬಳಿಕ ಒಂದು ಪಾತ್ರೆಗೆ ಮೈದಾ ಹಿಟ್ಟು, ಮೊಸರು ಸ್ವಲ್ಪ ನೀರು ಹಾಕಿಕೊಂಡು ಇಡ್ಲಿ ಹಿಟ್ಟಿನಂತೆ ಮಾಡಿಕೊಳ್ಳಿ. ಇದನ್ನೂ ಓದಿ: ನಿಮ್ಮ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಹೆಚ್ಚಿಸಲು ಮಾಡಿ ಹುರಿಗಡಲೆ ಪೇಡಾ

    * ನಂತರ ಉಳಿದರ್ಧ ಕೇಸರಿ ಹಾಗೂ ಬೇಕಿಂಗ್ ಸೋಡಾ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
    * ಒಲೆಯ ಮೇಲೆ ಬಾಣಲೆಯಿಟ್ಟು ಅಡುಗೆ ಎಣ್ಣೆ ಕಾಯಿಸಿಕೊಳ್ಳಿ. ನಂತರ ಹಿಟ್ಟನ್ನು ಖಾಲಿ ಸಾಸ್ ಬಾಟಲಿಗೆ ಹಾಕಿ ಎಣ್ಣೆಗೆ ಸುರುಳಿಯಾಕಾರದಲ್ಲಿ ಬಿಡಿ.

     

    * ಎರಡೂ ಬದಿಯಲ್ಲಿ ಚಿನ್ನದ ಬಣ್ಣ ಬರುವವರೆಗೆ ಕರಿಯಿರಿ. ನಂತರ ತೆಗೆದು ಸಕ್ಕರೆ ಪಾಕಕ್ಕೆ ಹಾಕಿ ಎರಡೂ ಬದಿಯಲ್ಲೂ ಎರಡೆರಡು ನಿಮಿಷ ನೆನೆಸಿ ತೆಗೆದರೆ ರುಚಿಕರವಾದ ಜಿಲೇಬಿ ಸವಿಯಲು ಸಿದ್ಧವಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ತಿರುಪತಿ ತಿರುಮಲ ದೇವಸ್ಥಾನದ ಜಿಲೇಬಿ ಪ್ರಸಾದದ ಬೆಲೆ ಏರಿಕೆ

    ತಿರುಪತಿ ತಿರುಮಲ ದೇವಸ್ಥಾನದ ಜಿಲೇಬಿ ಪ್ರಸಾದದ ಬೆಲೆ ಏರಿಕೆ

    ಅಮರಾವತಿ: ತಿರುಪತಿ ತಿರುಮಲ ದೇವಸ್ಥಾನದಲ್ಲಿ ನೀಡಿತ್ತಿರುವ ಜಿಲೇಬಿ ಪ್ರಸಾದದ ಬೆಲೆಯನ್ನು 100 ರಿಂದ 500 ರೂ.ಗೆ ಏರಿಕೆ ಮಾಡಲಾಗಿದೆ. ದೇವಸ್ಥಾನದಲ್ಲಿ ಆರ್ಜಿತ ಸೇವೆ ಸಂದರ್ಭದಲ್ಲಿ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

    ಈ ಗುರುವಾರ ವಿಶೇಷ ಪ್ರಸಾದವನ್ನು ತೆರೆದ ಕೌಂಟರ್‌ಗಳಿಂದ ಭಕ್ತರಿಗೆ ವಿತರಿಸಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಪ್ರಸಾದವನ್ನು ತಯಾರಿಸುವ ಸ್ಥಳವನ್ನು ತಿರುಮಲ ದೇವಾಲಯದ ಒಳಗಿನ ಪಾಡಿ ಪೋಟುನಿಂದ ದೇವಾಲಯದ ಹೊರಗೆ ಹೊಸದಾಗಿ ನಿರ್ಮಿಸಲಾದ ಬೂಂದಿ ಕಿಚನ್‍ಗೆ ಬದಲಾಯಿಸಲಾಗುತ್ತದೆ ಎಂದು ದೇವಸ್ಥಾನ ಟ್ರಸ್ಟ್ ಹೇಳಿದೆ.

    ಟಿಟಿಡಿ ವಿಶ್ವದ ಅತ್ಯಂತ ಗೌರವಾನ್ವಿತ ಹಿಂದೂ ಧಾರ್ಮಿಕ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಸಬ್ಸಿಡಿ ದರದಲ್ಲಿ ಅಥವಾ ಕನಿಷ್ಠ ವೆಚ್ಚದ ಆಧಾರದ ಮೇಲೆ ಪ್ರಸಾದವನ್ನು ನೀಡಬೇಕು. ಆದರೆ ಇಲ್ಲಿ ಜಿಲೇಬಿಯನ್ನು ಮಾರಾಟ ಮಾಡುವ ಮೂಲಕ ಶೇ.239 ಲಾಭ ಗಳಿಸಲು ಪ್ರಯತ್ನಿಸುತ್ತಿದೆ. ಪ್ರಸಾದವು ಅದರ ತಯಾರಿಕೆಯ ವೆಚ್ಚಕ್ಕಿಂತ ಹೆಚ್ಚು, ಇದು ಅತ್ಯಂತ ಆಕ್ಷೇಪಾರ್ಹವಾಗಿದೆ ಎಂದು ಟಿಡಿಪಿ ಶಾಸಕ ತಿಳಿಸಿದ್ದಾರೆ. ಇದನ್ನೂ ಓದಿ:  ತಮಿಳುನಾಡು ನಗರ ಸ್ಥಳೀಯ ಸಂಸ್ಥೆ ಚುನಾವಣೆ- ವೆಲ್ಲೂರಿನಲ್ಲಿ ತೃತೀಯಲಿಂಗಿಗೆ ಗೆಲುವು

    ಮಧ್ಯವರ್ತಿಗಳು ಕಾಳ ದಂಧೆಯಲ್ಲಿ ಒಂದು ಸೆಟ್‍ಗೆ 2,000 ರೂ.ನಂತೆ ಮಾರುವುದನ್ನು ತಡೆಯಲು ಜೂನ್ 2021 ರಲ್ಲಿ, ಟಿಟಿಡಿ ಆಡಳಿತದ ಉನ್ನತಾಧಿಕಾರಿಗಳು ಟ್ರಸ್ಟ್ ಬೋರ್ಡ್‍ಗೆ ಪ್ರಸ್ತುತ 100 ಕ್ಕೆ ಮಾರಾಟವಾಗುತ್ತಿರುವ ಜಿಲೇಬಿ ಮತ್ತು ಥೆಂಥೋಲ ಸೆಟ್ ಅನ್ನು 2,000ಕ್ಕೆ ಮಾರುವಂತೆ ಪ್ರಸ್ತಾಪವಿರಿಸಿದ್ದರು. ಜಿಲೇಬಿ ಮತ್ತು ಥೆಂಥೋಲ ಸೆಟ್ ತಯಾರಿಸಲು ಟಿಟಿಡಿ ಮಾಡುವ ವೆಚ್ಚ 147.50 ಆಗಿದೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

    ಟ್ರಸ್ಟ್ ಬೋರ್ಡ್ ಈ ಸಂಬಂಧ ವಿವರವಾದ ಚರ್ಚೆಯನ್ನು ನಡೆಸಿದೆ. ಬೆಲೆಯನ್ನು 500 ರೂ.ಗೆ ಹೆಚ್ಚಿಸಲು ನಿರ್ಧರಿಸಿತು. ಬೆಲೆ ಏರಿಕೆಯಿಂದಾಗಿ ಟಿಟಿಡಿ ಶೇ.239 ರಷ್ಟು ಹೆಚ್ಚುವರಿ ಲಾಭವನ್ನು ಪಡೆಯುತ್ತದೆ. ಟಿಟಿಡಿ ಟ್ರಸ್ಟ್ ಬೋರ್ಡ್ ಕಾಳದಂಧೆ ನಿಲ್ಲಿಸುವ ಉದ್ದೇಶದಿಂದ ಐದು ಪಟ್ಟು ಹೆಚ್ಚಿಸಿದ್ದಾರೆ ಎಂದು ಆಂಧ್ರಪ್ರದೇಶದ ಸಾರ್ವಜನಿಕ ಖಾತೆಗಳ ಸಮಿತಿಯ ಅಧ್ಯಕ್ಷ ಪಯ್ಯವುಲ ಕೇಶವ್ ಹೇಳಿದ್ದಾರೆ.

    ಟಿಟಿಡಿ ಟ್ರಸ್ಟ್‍ನ ಮಾಜಿ ಸದಸ್ಯ ಜಿ.ಭಾನುಪ್ರಕಾಶ್ ರೆಡ್ಡಿ ಕೂಡ ಬೆಲೆ ಏರಿಕೆ ತಪ್ಪು ಎಂದಿದ್ದಾರೆ. ಭಕ್ತರಿಗೆ ಸಬ್ಸಿಡಿ ದರದಲ್ಲಿ ಪ್ರಸಾದವನ್ನು ಯಾವಾಗಲೂ ನೀಡಬೇಕು. ಆದರೆ ಇಲ್ಲಿ ಟಿಟಿಡಿ ಹೆಚ್ಚಿನ ಬೇಡಿಕೆ ಇದೆ ಎಂಬ ಕಾರಣಕ್ಕೆ ಭಕ್ತರನ್ನು ಸುಲಿಗೆ ಮಾಡುತ್ತಿದೆ. ಇದು ಆಕ್ಷೇಪಾರ್ಹವಾಗಿದೆ ಎಂದು ವಿರೋಧಿಸಿದ್ದಾರೆ.