Tag: ಜಿಲ್ಲಾಧಿಕಾರಿ ಆರ್.ಲತಾ

  • ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ

    ನಾಳೆ ಚಿಕ್ಕಬಳ್ಳಾಪುರದಲ್ಲಿ ಯುವ ಕೋವಿಡ್ ಲಸಿಕಾ ಮೇಳ

    ಚಿಕ್ಕಬಳ್ಳಾಪುರ : 15 ರಿಂದ 18 ವರ್ಷದ ಒಳಗಿನ ಜಿಲ್ಲೆಯ ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲು ಅವರು ಓದುತ್ತಿರುವ ಶಾಲಾ ಕಾಲೇಜುಗಳಲ್ಲಿಯೇ ನಾಳೆ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ನಿನ್ನೆ ಮತ್ತು ಇಂದು ಕೋವಿಡ್ ಲಸಿಕೆ ಪಡೆಯದೇ ಬಾಕಿ ಉಳಿದಿರುವ ವಿವಿಧ ಶಾಲಾ ಕಾಲೇಜುಗಳ 15 ವರ್ಷಕ್ಕೂ ಮೇಲ್ಪಟ್ಟ ಮಕ್ಕಳೆಲ್ಲರನ್ನು ಜನವರಿ 5 ರಂದೇ ಕೋವಿಡ್ ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

    ಜಿಲ್ಲಾಧಿಕಾರಿಗಳ ಕಾರ್ಯಾಲಯದ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಯುವ ಕೋವಿಡ್ ಲಸಿಕಾ ಮೇಳ ಆಯೋಜನೆಯ ಪೂರ್ವ ಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಅವರು ಯುವ ಜನತೆಯನ್ನು ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸಿ ಕೋವಿಡ್‍ನಿಂದ ಸಂಪೂರ್ಣ ರಕ್ಷಣೆಗೆ ತರಲು ಜಿಲ್ಲೆಯಲ್ಲಿ ಲಸಿಕಾ ಮೇಳವನ್ನು ಹಮ್ಮಿಕೊಳ್ಳುವಂತೆ ನಿರ್ದೇಶಿಸಿದ್ದಾರೆ. ಅದರಂತೆ ಜಿಲ್ಲೆಯಾದ್ಯಂತ ವಿವಿಧ ಶಾಲಾ ಕಾಲೇಜುಗಳಲ್ಲಿ 70ಕ್ಕೂ ಹೆಚ್ಚು ಸತ್ರ(Sessioಟಿs)ಗಳೊಂದಿಗೆ ಜನವರಿ 5ರಂದು ಕೋವಿಡ್ ಯುವ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಗೆ ಟಫ್‍ರೂಲ್ಸ್ ಅನ್ವಯ – ಬಿಜೆಪಿಯಿಂದ ಷಡ್ಯಂತ್ರ ಎಂದ ಕಾಂಗ್ರೆಸ್‌

    40 ಸಾವಿರಕ್ಕೂ ಹೆಚ್ಚಿನ ಗುರಿ
    ಜನವರಿ 3 ರಿಂದ 15 ರವರೆಗೂ 18 ವರ್ಷದ ಒಳಗಿನ ಲಸಿಕೆ ಪಡೆಯಲು ಅರ್ಹರಿರುವ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯವನ್ನು ಭರದಿಂದ ನಡೆಸಲಾಗುತ್ತಿದೆ. ಜಿಲ್ಲೆಯಾದ್ಯಂತ ಈ ವಯೋಮಾನದ 65,648 ಮಕ್ಕಳಿದ್ದು, ಈ ಪೈಕಿ ಜನವರಿ 3ರಂದು ಜಿಲ್ಲೆಯಾದ್ಯಂತ ಸುಮಾರು 7 ಸಾವಿರ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಇಂದು ಕೂಡ ಈ ಸಂಖ್ಯೆ ದ್ವಿಗುಣ ಆಗಲಿದೆ. ಇನ್ನುಳಿದ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನಾಳೆಯ ಯುವ ಲಸಿಕಾ ಮೇಳದಲ್ಲಿ ಲಸಿಕೆ ನೀಡುವ ಗುರಿ ಹೊಂದಲಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮನ್ವಯತೆಯೊಂದಿಗೆ ಯೋಜನೆ ರೂಪಿಸಿಕೊಂಡು ಆರೋಗ್ಯಾಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯಾದ್ಯಂತ ತಂಡಗಳನ್ನು ರಚಿಸಿಕೊಂಡು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ನಾಳೆಯೇ ಲಸಿಕಾಕರಣ ಮಾಡಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

    ಯಾರು ವಂಚಿತರಾಗಬಾರದು
    ಜನವರಿ 5 ರಂದು ಶಾಲಾಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳೆಲ್ಲರಿಗೂ ಲಸಿಕೆ ನೀಡಲಾಗುವುದು. ಇನ್ನುಳಿದಂತೆ ಗೈರು ಹಾಜರಾಗುವ ಹಾಗೂ ಶಾಲೆಯಿಂದ ಹೊರಗುಳಿದಿರುವ 15 ವರ್ಷಕ್ಕೂ ಮೇಲ್ಪಟ್ಟ ಮಕ್ಕಳಿಗೂ ಸಹ ಒಂದೆರಡು ದಿನಗಳಲ್ಲಿ ಲಸಿಕೆ ನೀಡಲು ಅಧಿಕಾರಿಗಳು ಅಗತ್ಯ ಕ್ರಮ ರೂಪಿಸಿ ಲಸಿಕೆ ಹಾಕಿಸಬೇಕು ಎಂದರು. ಜಿಲ್ಲೆಯಲ್ಲಿ 15 ವರ್ಷಕ್ಕೂ ಮೇಲ್ಪಟ್ಟ ಯಾವುದೇ ಮಕ್ಕಳು ಲಸಿಕಾಕರಣದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ತಾಲೂಕು ಆರೋಗ್ಯಾಧಿಕಾರಿಗಳು, ಶಾಲಾ ಕಾಲೇಜುಗಳ ಪ್ರಾಂಶುಪಾಲರು ಮತ್ತು ಮುಖ್ಯಸ್ಥರು, ಬಿಇಒಗಳು ಹೆಚ್ಚಿನ ನಿಗಾ ವಹಿಸಬೇಕು ಎಂದರು.

    ತ್ವರಿತವಾಗಿ ಎರಡೂ ಡೋಸ್ ಮುಗಿಸಿ
    ಹದಿನೈದು ವರ್ಷಕ್ಕೂ ಮೇಲ್ಪಟ್ಟ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಗೈರು ಹಾಜರಾಗದಂತೆ ವಿದ್ಯಾರ್ಥಿಗಳ ಪೋಷಕರು ನಿಗಾ ವಹಿಸಿ ಮಕ್ಕಳಲ್ಲಿ ಧೈರ್ಯ ತುಂಬಿ ಶಾಲೆಗಳಿಗೆ ಕಳಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಪೋಷಕರಲ್ಲಿ ಮನವಿ ಮಾಡಿದರು. ಮಕ್ಕಳಿಗೆ ಕೊರೊನಾ ಲಸಿಕೆಯನ್ನು ಪಡೆಯಲು ಅರಿವು ಮೂಡಿಸುವ ಜೊತೆಗೆ ಪೋಷಕರು ಮತ್ತು ಶಿಕ್ಷಕರು ಮಕ್ಕಳಿಗೆ ಪ್ರೇರೆಪಿಸಬೇಕಾಗಿದೆ ಎಂದು ಸಲಹೆ ನೀಡಿದರು. ಇದಲ್ಲದೆ 18 ವರ್ಷಕ್ಕೂ ಮೇಲ್ಪಟ್ಟ ಅರ್ಹರೆಲ್ಲರಿಗೆ 2ನೇ ಮತ್ತು ಮೊದಲನೇ ಡೋಸ್ ಲಸಿಕಾಕರಣವೂ ಎಂದಿನಂತೆ ಮುಂದುವರಿಯಲಿದೆ. ಒಟ್ಟಾರೆ 18 ವರ್ಷಕ್ಕೂ ಮೇಲ್ಪಟ್ಟ ಅರ್ಹರೆಲ್ಲರನ್ನು ತ್ವರಿತವಾಗಿ ಎರಡೂ ಡೋಸ್‍ಗಳ ಲಸಿಕಾಕರಣದ ವ್ಯಾಪ್ತಿಗೆ ಒಳಪಡಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ನಿಗಾವಹಿಸುವಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದರು.

    ಮೇಳವನ್ನು ಯಶಸ್ವಿಗೊಳಿಸಿ
    ಜಿಲ್ಲೆಯಲ್ಲಿ ಈವರೆಗೆ 18 ವರ್ಷಕ್ಕೂ ಮೇಲ್ಪಟ್ಟ ಜನರಿಗೆ ಲಸಿಕಾಕರಣ ಮಾಡಿದ ಮೆಗಾ ಲಸಿಕಾ ಮೇಳ, ಉತ್ಸವ ಹಾಗೂ ಅಭಿಯಾನಗಳಲ್ಲಿ ಜಿಲ್ಲೆಯ ಜನರು ಅತ್ಯುತ್ಸಾಹಿ ಸ್ಪಂದನಾಶೀಲರೂ ಎಂದು ಹೆಸರು ಪಡೆದು ಉತ್ತಮ ಸ್ಪಂದನೆ ನೀಡುವ ಮೂಲಕ ರಾಜ್ಯಮಟ್ಟದ ಪಟ್ಟಿಯಲ್ಲಿ ಹಲವು ಬಾರಿ ಪ್ರಥಮ ಸ್ಥಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಗಳಿಸಿತ್ತು. ಅದೇ ರೀತಿ 15 ವರ್ಷಕ್ಕೂ ಮೇಲ್ಪಟ್ಟ ಎಲ್ಲರೂ ಕೋವಿಡ್ ಲಸಿಕೆಯನ್ನು ಪಡೆಯುವ ಮೂಲಕ ಜನವರಿ 5ರ ಲಸಿಕಾ ಮೇಳವನ್ನು ಸಹ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಲ್ಲಿ ಕರೆ ನೀಡಿದರು.

  • ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ 32 ಪ್ರಕರಣ- ಆದ್ರೂ ಆತಂಕ ಪಡಬೇಡಿ ಎಂದ ಡಿಸಿ

    ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನ 32 ಪ್ರಕರಣ- ಆದ್ರೂ ಆತಂಕ ಪಡಬೇಡಿ ಎಂದ ಡಿಸಿ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಫೋಟವಾಗಿದ್ದು. ಒಂದೇ ದಿನ 32 ಮಂದಿಗೆ ಕೊರೊನಾ ಸೋಂಕು ಬಂದಿದೆ.

    ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ 13, ಗೌರಿಬಿದನೂರು ತಾಲೂಕಿನಲ್ಲಿ 14 ಮತ್ತು ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 04 ಸೇರಿದಂತೆ ಗುಡಿಬಂಡೆ ತಾಲೂಕಿನ ವ್ಯಾಪ್ತಿಯಲ್ಲಿ ಒಂದು ಪ್ರಕರಣ ವರದಿಯಾಗಿದೆ.

    ಈ ಬಗ್ಗೆ ಮಾತನಾಡಿರುವ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಪ್ರಕರಣ 300 ಆಗಿದೆ. ಅದರಲ್ಲಿ 200 ಮಂದಿ ಗುಣಮುಖರಾಗಿದ್ದು, 10 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಒಬ್ಬರಿಗೆ ಕೊರೊನಾ ದೃಢವಾದರೂ ಅಪಘಾತದಿಂದ ಮೃತರಾಗಿದ್ದಾರೆ. ಹೀಗಾಗಿ ಅದು ನಾನ್ ಕೋವಿಡ್ ಪ್ರಕರಣ ಆಗಿದೆ. ಸದ್ಯ 89 ಸಕ್ರಿಯ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

    ಇಂದು ಒಂದೇ ದಿನ 32 ಪ್ರಕರಣಗಳ ವರದಿಯಾಗಿದೆ. ಆದರೂ ಜನ ಆತಂಕಪಡುವ ಆಗತ್ಯವಿಲ್ಲ. ಗೌರಿಬಿದನೂರು ಹಾಗೂ ಚಿಂತಾಮಣಿಯ ಎರಡು ಕುಟುಂಬಗಳಲ್ಲಿ ಅತಿ ಹೆಚ್ಚಿನ ಸೋಂಕಿತರು ಕಂಡುಬಂದಿದ್ದಾರೆ. ಹೊಸ ಪ್ರಕರಣಗಳು ಹೆಚ್ಚಾಗಿ ಕಂಡು ಬಂದಿಲ್ಲ. ಹೀಗಾಗಿ ಜನ ಆತಂಕಪಡಬೇಡಿ. ಆದರೆ ಎಚ್ಚರಿಕೆ ವಹಿಸಿ. ಮಾಸ್ಕ್ ಕಡ್ಡಾಯವಾಗಿ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾಗೆ ಕಡಿವಾಣ ಹಾಕಲು ಸಹಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

  • ಚಿಕ್ಕಬಳ್ಳಾಪುರದಲ್ಲಿ 4 ವಾರ್ಡ್ ಹೊರತುಪಡಿಸಿ ಜಿಲ್ಲೆಯಾದ್ಯಂತ ಸಡಿಲಿಕೆ: ಜಿಲ್ಲಾಧಿಕಾರಿ ಆರ್.ಲತಾ

    ಚಿಕ್ಕಬಳ್ಳಾಪುರದಲ್ಲಿ 4 ವಾರ್ಡ್ ಹೊರತುಪಡಿಸಿ ಜಿಲ್ಲೆಯಾದ್ಯಂತ ಸಡಿಲಿಕೆ: ಜಿಲ್ಲಾಧಿಕಾರಿ ಆರ್.ಲತಾ

    – ಅಂಗಡಿ, ಮುಂಗಟ್ಟುಗಳಿಗೆ ಸಮಯ ನಿಗದಿ
    – ಗೌರಿಬಿದನೂರು ಕೊರೊನಾ ಮುಕ್ತ ನಗರ

    ಚಿಕ್ಕಬಳ್ಳಾಪುರ: ಜಿಲ್ಲೆ ಆರೆಂಜ್ ಝೋನ್ ವ್ಯಾಪ್ತಿಯಲ್ಲಿದ್ದು, ಚಿಕ್ಕಬಳ್ಳಾಪುರ ನಗರದ 17, 10, 12, 13 ನಾಲ್ಕು ವಾರ್ಡ್ ಹೊರತುಪಡಿಸಿ, ಜಿಲ್ಲೆಯಾದ್ಯಾಂತ ಸಡಿಲಿಕೆಗಳು ಅನ್ವಯವಾಗಲಿವೆ ಅಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಸ್ಪಷ್ಟಪಡಿಸಿದ್ದಾರೆ.

    ಚಿಕ್ಕಬಳ್ಳಾಪುರ ನಗರದ ಕೊರೊನಾ ಸೋಂಕಿತರ 17 ನೇ ವಾರ್ಡ್ ಹಾಗೂ ಅಕ್ಕ ಪಕ್ಕದ 3 ವಾರ್ಡುಗಳನ್ನ ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಕಂಟೈನ್‍ಮೆಂಟ್ ಝೋನ್ ಅಂತ ಗುರುತಿಸಲಾಗಿದೆ. ಈ 4 ವಾರ್ಡುಗಳಲ್ಲಿ ಸೀಲ್‍ಡೌನ್ ಮುಂದುವರಿಯಲಿದ್ದು, ನಗರದ ಉಳಿದ ವಾರ್ಡುಗಳಿಗೆ ಸಡಲಿಕೆಗಳನ್ನ ನೀಡಲಾಗಿದೆ. ಚಿಕ್ಕಬಳ್ಳಾಪುರ ನಗರದ ನಾಲ್ಕು ವಾರ್ಡುಗಳು ಹೊರತುಪಡಿಸಿ ಜಿಲ್ಲೆಯ ನಗರ ಪ್ರದೇಶಗಳಲ್ಲಿ ಎಲ್ಲಾ ರೀತಿಯ ಅಂಗಡಿ ಮುಂಗಟ್ಟುಗಳು ಆರಂಭಿಸಲು ಬೆಳಗ್ಗೆ 07 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಮಾತ್ರ ಅವಕಾಶವಿದೆ. ಆದರೆ ಗ್ರಾಮೀಣ ಭಾಗದಲ್ಲಿ ಬೆಳಗ್ಗೆ 07 ರಿಂದ ಸಂಜೆ 7 ರವರೆಗೆ ತೆರೆಯಲು ಅನುಮತಿಯಿದೆ.

    ರಾಜ್ಯಾದ್ಯಂತ ಇಂದು ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಮದ್ಯಪಾನಪ್ರಿಯರು ನಾ ಮುಂದು ತಾ ಮುಂದು ಅಂತ ಮದ್ಯ ಖರೀದಿಗೆ ಮುಗಿಬಿದ್ದಿದ್ದಾರೆ. ಅದೇ ಆಸೆಗಣ್ಣಿನಿಂದ ಇಂದು ಬೆಳಗ್ಗೆ ಮದ್ಯ ಖರೀದಿಸಿಲು ಮುಂದಾಗಿದ್ದ ಮದ್ಯಪ್ರಿಯರಿಗೆ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡದ ಹಿನ್ನೆಲೆಯಲ್ಲಿ ಶಾಕ್ ಕಾದಿತ್ತು. ಈ ಬಗ್ಗೆ ಸಭೆ ನಡೆಸಿ ಅಂತಿಮ ತೀರ್ಮಾನಕ್ಕೆ ಬಂದಿರೋ ಜಿಲ್ಲಾಡಳಿತ ಕೊನೆಗೆ ಚಿಕ್ಕಬಳ್ಳಾಪುರ ಹಾಗೂ ಗೌರಿಬಿದನೂರು ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ.

    ಚಿಕ್ಕಬಳ್ಳಾಪುರ ನಗರದಲ್ಲಿ ಮಾತ್ರ ಬೆಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಉಳಿದಂತೆ ಜಿಲ್ಲೆಯ ಇತರೆ ಭಾಗಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟಕ್ಕೆ ಅವಕಾಶವಿದ್ದು, ಯಾವುದೇ ನಿರ್ಬಂಧವಿಲ್ಲ. ಸದ್ಯ ಜಿಲ್ಲೆಯಲ್ಲೂ ಸಹ ಮದ್ಯ ಮಾರಾಟಕ್ಕೆ ಅನುಮತಿ ಸಿಕ್ಕಿರುವುದರಿಂದ ಮದ್ಯ ಪ್ರಿಯರು ಕಿಲೋಮೀಟರ್ ಗಟ್ಟಲೇ ಕ್ಯೂ ನಿಂತು ಮದ್ಯ ಖರೀದಿಸಿದ್ದಾರೆ. ಗೌರಿಬಿದನೂರು ತಾಲೂಕು ಕೋಟಾಲದಿನ್ನೆ ಹಾಗೂ ಬಾಗೇಪಲ್ಲಿ ನಗರದ ವೈನ್ ಶಾಪ್ ವೊಂದರ ಬಳಿ ಕಿಲೋಮೀಟರ್ ಗಟ್ಟಲೇ ಕ್ಯೂ ಇತ್ತು. ಇನ್ನೂ ಹಲವೆಡೆ ಸಹ ಸರದಿ ಸಾಲಿನಲ್ಲಿ ನಿಂತ ಮದ್ಯಪ್ರಿಯರು ಮದ್ಯ ಖರೀದಿಸಿದ್ದಾರೆ.

    ಕೆಲವೆಡೆ ಸಾಮಾಜಿಕ ಅಂತರ ನಿರ್ಲಕ್ಷ್ಯ ಮಾಡಿದ ಘಟನೆಗಳು ನಡೆದಿದ್ದು, ಮದ್ಯದಂಗಡಿಗಳ ಬಳಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲೆಯಲ್ಲಿ ಮೊಟ್ಟ ಮೊದಲ ಕೊರೊನಾ ಸೋಂಕು ಕಾಣಿಸಿಕೊಂಡಿದ್ದ ಹಾಗೂ ಹಾಟ್‍ಸ್ಪಾಟ್ ಆಗಿದ್ದ ಗೌರಿಬಿದನೂರು ನಗರವನ್ನ ಕೊರೊನಾ ಮುಕ್ತ ಅಂತ ಕಂಟೈನ್‍ಮೆಂಟ್ ಝೋನ್ ನಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಕೈಬಿಟ್ಟಿದೆ. ಇಷ್ಟು ದಿನ ಗೌರಿಬಿದನೂರು ನಗರದ ಹಿರೇಬಿದನೂರಿನ ವಾರ್ಡು ನಂಬರ್ 29 ಹಾಗೂ 30 ನ್ನ ಕಂಟೈನ್‍ಮೆಂಟ್ ಝೋನ್ ಆಗಿ ಗುರುತಿಸಲಾಗಿತ್ತು.

    ಸದ್ಯ ಗೌರಿಬಿದನೂರು ನಗರದಲ್ಲಿ ಕಳೆದ 21 ದಿನಗಳಲ್ಲಿ ಯಾವುದೇ ಹೊಸ ಕೊರೊನಾ ಪ್ರಕರಣ ಕಂಡು ಬರದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗೌರಿಬಿದನೂರು ನಗರವನ್ನ ಕಂಟೈನ್‍ಮೆಂಟ್ ಝೋನ್ ವ್ಯಾಪ್ತಿಯಿಂದ ಬಿಡುಗಡೆ ಮಾಡಿದ್ದೇವೆ ಅಂತ ಡಿಸಿ ಆರ್ ಲತಾ ತಿಳಿಸಿದರು. ಉಳಿದಂತೆ ಸರಳವಾಗಿ ನಡೆಸಲು ಮದುವೆ, ಹಾಗೂ ಶುಭ ಸಮಾರಂಭಗಳಿಗೆ ಅವಕಾಶವಿದ್ದು 50 ಮಂದಿ ಮಾತ್ರ ಪಾಲ್ಗೊಳ್ಳಬೇಕು ಹಾಗೂ ಕಟ್ಟುನಿಟ್ಟಿನ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಅಂತ ಡಿ ಸಿ ಸೂಚನೆ ನೀಡಿದ್ದಾರೆ. ಇದರ ಜೊತೆಗೆ ಸೆಲೂನ್ ಹಾಗೂ ಬ್ಯೂಟಿ ಪಾರ್ಲರ್ ಗಳಿಗೆ ಅನುಮತಿ ನೀಡಲಾಗಿದೆ.