Tag: ಜಿಹಾದಿ

  • ಪ್ರವೀಣ್ ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ: ತೇಜಸ್ವಿ ಸೂರ್ಯ

    ಪ್ರವೀಣ್ ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ: ತೇಜಸ್ವಿ ಸೂರ್ಯ

    ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

    ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇಂದು ಪ್ರವೀಣ್ ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಪ್ರವೀಣ್ ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಪ್ರವೀಣ್‍ನನ್ನು ಕಳೆದುಕೊಂಡದ್ದು ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಎಲ್ಲರ ಗಮನ ಸೆಳೆದ ಗುಹೆಗಳ ಮಾದರಿ ಅಂಗನವಾಡಿ ವಿನ್ಯಾಸ 

    ಈ ರೀತಿಯ ಸಾವು ಮರುಕಳಿಸದಂತೆ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ. ಯುವ ಮೋರ್ಚಾ 15 ಲಕ್ಷ ರೂ. ನೀಡುತ್ತದೆ. ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ. ಪಕ್ಷ 25 ಲಕ್ಷ ರೂ. ನೀಡಿದೆ. ಸಮಸ್ತ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಸ್ಲಾಮೀ ಜಿಹಾದ್‍ನ್ನು ಮೂಲದಿಂದ ಉಚ್ಚಾಟನೆ ಮಾಡೋದಕ್ಕೆ ನಾವು ಬದ್ಧ ಎಂದು ಭರವಸೆ ಕೊಟ್ಟರು.

    ಪ್ರವೀಣ್ ಸಾವು ಆಗಬಾರದಿತ್ತು. ಪ್ರತಿ ಬಾರಿ ಕಾರ್ಯಕರ್ತರನ್ನು ಬೀಳ್ಕೊಟ್ಟಾಗಲೂ ಈ ಮಾತು ಹೇಳುತ್ತೇವೆ. ಈ ಬಾರಿ ಇಡೀ ರಾಜ್ಯ, ದೇಶ ಎಚ್ಚೆತ್ತಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಪ್ರವೀಣ್ ಅವರ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಮಗನೇ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಇದು ಅತ್ಯಂತ ಬೇಸರ ಸಂಗತಿಯಾಗಿದೆ ಎಂದರು. ಇದನ್ನೂ ಓದಿ:  ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್ ಅರೆಸ್ಟ್

    ಜಿಹಾದಿ ಮನಸ್ಥಿತಿ ಯಾವ ಮಟ್ಟದಲ್ಲಿದೆ ಅನ್ನೋದು ಗೊತ್ತಾಗುತ್ತೆ. ಬಿಜೆಪಿಯ ಕಾರ್ಯಕರ್ತರು ಧೃತಿಗೆಡಬೇಡಿ. ನಾರಾಯಣ ಗುರು, ಶಿವಾಜಿಯ ಕ್ಷಾತ್ರ ರಕ್ತ ನಮ್ಮಲ್ಲಿದೆ. ಬಿಜೆಪಿ ಕಾರ್ಯಕರ್ತರ ಸಿಟ್ಟು ಕಾಂಗ್ರೆಸ್, ಜೆಡಿಎಸ್‍ಗೆ ಲಾಭವಾಗುತ್ತೆ ಎಂದು ಕೆಕೇ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರ ರೋಷದಿಂದ ನಮಗೆ ನಷ್ಟವಾಗಲ್ಲ. ನಮ್ಮ ಕಾರ್ಯಕರ್ತರು ಸಿದ್ಧಾಂತ ಬಿಡೋದಿಲ್ಲ ನಮ್ಮ ನಿಷ್ಟೆ ಪ್ರಶ್ನಾತೀತವಾಗಿದೆ. ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಳ್ಳುತ್ತೆ. ಮೂಲಭೂತವಾದಿ ಸಿದ್ಧಾಂತದ ವಿರುದ್ಧ ಎಚ್ಚೆತ್ತು ಕೆಲಸ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಪ್ರವೀಣ್ ಕುಟುಂಬಕ್ಕೆ 50 ಲಕ್ಷ ಪರಿಹಾರ ವಿತರಣೆ

    Live Tv
    [brid partner=56869869 player=32851 video=960834 autoplay=true]

  • ಮದರಸಾಗಳಲ್ಲಿನ ಬೋಧನೆಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಕಳವಳ

    ಮದರಸಾಗಳಲ್ಲಿನ ಬೋಧನೆಯ ಬಗ್ಗೆ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಕಳವಳ

    – ಧರ್ಮದ ಹೆಸರಲ್ಲಿ ಸಮುದಾಯ ಭಯಪಡಿಸುವವರು ಜಿಹಾದಿಗಳಲ್ಲ
    – ಮನುಷ್ಯನನ್ನು ಕೊಲ್ಲುವ ಹಕ್ಕಿದೆ ಎಂದು ಮದರಸಾಗಳಲ್ಲಿನ ಪಠ್ಯಕ್ರಮಗಳ ಬೋಧನೆ

    ತಿರುವನಂತಪುರಂ: ಧರ್ಮದ ಹೆಸರಲ್ಲಿ ಸಮುದಾಯ ಭಯಪಡಿಸುವವರು ಜಿಹಾದಿಗಳಲ್ಲ, ಫಸಾದಿಗಳು( ಸಮಾಜಕ್ಕೆ ಉಪದ್ರವ ನೀಡುವವರು) ಎಂದು ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಹೇಳಿದ್ದಾರೆ.

    ಜನರು ಪ್ರಜಾಸತ್ತಾತ್ಮಕ ಸ್ವರೂಪದ ಆಡಳಿತವನ್ನು ಒಪ್ಪಿಕೊಂಡಿದ್ದಾರೆ. ಭಯೋತ್ಪಾದನೆ ಒಂದು ಸಮುದಾಯದ ಮೇಲೆ ಅಧಿಪತ್ಯ ಸಾಧಿಸುವವರಿಗೆ ಧರ್ಮದ ಹೆಸರಲ್ಲಿ ಜನರನ್ನು ಭಯಭೀತಗೊಳಿಸುತ್ತಿರುತ್ತಾರೆ. ಅವರು ಜಿಹಾದಿಗಳಲ್ಲ, ಫಸಾದಿಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ:   ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕೇರಳದ ಖ್ಯಾತ ಸಿನಿಮಾ ನಿರ್ದೇಶಕ ಅಲಿ ಅಕ್ಬರ್

    PAK

    ಮದರಸಾದಲ್ಲಿನ ಬೋಧನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಆರೀಫ್ ಮೊಹಮದ್ ಖಾನ್, ಇಂಥಹ ಪಠ್ಯಕ್ರಮವು ಯುವ ಮನಸ್ಸುಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಮದರಸಾಗಳಲ್ಲಿನ ಪಠ್ಯಕ್ರಮವು ವಿದ್ಯಾರ್ಥಿಗಳಿಗೆ ದೇವರನ್ನು ನಿರಾಕರಿಸುವಂತಿದ್ದರೆ, ಆತನನ್ನು ಕೊಲ್ಲು ಎಂದು ಕಲಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ಕಾನೂನನ್ನು ತಮ್ಮ ಕೈಗೆ ತೆಗೆದುಕೊಂಡು ದೇವರ ಮೇಲೆ ನಂಬಿಕೆ ಇಲ್ಲದ ಮನುಷ್ಯನನ್ನು ಕೊಲ್ಲುವ ಹಕ್ಕಿದೆ ಎಂದು ಮದರಸಾಗಳಲ್ಲಿನ ಪಠ್ಯಕ್ರಮಗಳು ಬೋಧನೆ ಮಾಡುತ್ತವೆ. ನಾನು ಇವುಗಳ ವಿರುದ್ಧ ಪ್ರಶ್ನೆಗಳನ್ನು ಎತ್ತಿದ್ದೇನೆ ಮತ್ತು ಪತ್ರಗಳನ್ನು ಬರೆದಿದ್ದೇನೆ. ಜೊತೆಗೆ ಅಫ್ಘಾನಿಸ್ತಾನದ ಪರಿಸ್ಥಿತಿಯ ಬಗ್ಗೆ ಪ್ರತಿಕ್ರಿಯೆ ನೀಡಿದ ಆರೀಫ್ ಖಾನ್, ತಾಲಿಬಾನ್ ಅಫ್ಘಾನಿಸ್ತಾನದ ಸ್ವಾತಂತ್ರ್ಯವನ್ನು ಕೊನೆಗೊಳಿಸಿದೆ ಮತ್ತು ಅಲ್ಲಿನ ಜನರಿಗೆ ಇದ್ದ ಸ್ವಾತಂತ್ರ್ಯವನ್ನು ಕಸಿದುಕೊಂಡಿದೆ ಎಂದು ತಿಳಿಸಿದ್ದಾರೆ.