Tag: ಜಿ.ಎಂ.ಸಿದ್ದೇಶ್ವರ್

  • ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಇಡೀ ಜಿಲ್ಲೆಗೆ ಖುಷಿಯಾಗಿದೆ: ಜಿ.ಎಂ ಸಿದ್ದೇಶ್ವರ್

    ಪತ್ನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಇಡೀ ಜಿಲ್ಲೆಗೆ ಖುಷಿಯಾಗಿದೆ: ಜಿ.ಎಂ ಸಿದ್ದೇಶ್ವರ್

    ಬೆಂಗಳೂರು: ಆರೋಗ್ಯದ ಸಮಸ್ಯೆಯಿಂದ ನನಗೆ ಲೋಕಸಭಾ ಚುನಾವಣೆಗೆ (General Elections 2024) ಸ್ಪರ್ಧಿಸಲು ಆಗುತ್ತಿಲ್ಲ. ಇದೇ ಕಾರಣಕ್ಕೆ ನನ್ನ ಕುಟುಂಬದ ಸದಸ್ಯರಿಗೆ ಟಿಕೆಟ್ ಕೊಡಿ ಎಂದು ಕೇಳಿದ್ದೆ. ಅಂತಿಮವಾಗಿ ನನ್ನ ಪತ್ನಿಗೆ ವರಿಷ್ಠರು ಟಿಕೆಟ್ ಕೊಟ್ಟಿದ್ದಾರೆ ಎಂದು ದಾವಣಗೆರೆ (Davangere) ಸಂಸದ ಜಿ.ಎಂ ಸಿದ್ದೇಶ್ವರ್ (GM Siddeshwar) ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ನನ್ನ ಪತ್ನಿಯ ಟಿಕೆಟ್‍ನಿಂದ ಇಡೀ ಜಿಲ್ಲೆಗೆ ಖುಷಿಯಾಗಿದೆ. ಅಲ್ಲೋ ಇಲ್ಲೋ ಒಬ್ಬರು ಮಾತಾಡ್ತಿದ್ದಾರೆ. ಅವರು ಎಲ್ಲರನ್ನೂ ಒಟ್ಟುಗೂಡಿಸಿಕೊಂಡು ಚುನಾವಣೆ ಮಾಡುತ್ತೇನೆ ಎಂದಿದ್ದಾರೆ.

    ಜಿಲ್ಲೆಯಲ್ಲಿ ಡೀಸೆಲ್ ಸುರಿದು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಬರೀ ನಾಟಕ ಅಷ್ಟೇ. ಎಂ.ಪಿ ರೇಣುಕಾಚಾರ್ಯ ನನ್ನ ಮಿತ್ರ ನಾನು ಅವನ ಜೊತೆ ಮಾತಾನಾಡುತ್ತೇನೆ. ನನ್ನ ಪತ್ನಿಯ ಗೆಲುವಿಗೆ ಅವನು ಸಹಕಾರ ಕೊಡುತ್ತಾನೆ ಎಂದಿದ್ದಾರೆ.

  • ಜಿ.ಎಂ ಸಿದ್ದೇಶ್ವರ್ ವಿರುದ್ಧ ರೆಬಲ್ ಆದ ಮಾಜಿ ಸಚಿವ ರೇಣುಕಾಚಾರ್ಯ!

    ಜಿ.ಎಂ ಸಿದ್ದೇಶ್ವರ್ ವಿರುದ್ಧ ರೆಬಲ್ ಆದ ಮಾಜಿ ಸಚಿವ ರೇಣುಕಾಚಾರ್ಯ!

    ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿವೆ. ಸಂಸದ ಜಿ.ಎಂ ಸಿದ್ದೇಶ್ವರ್ ವಿರುದ್ಧ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ (MP Renukacharya) ರೆಬಲ್ ಆಗಿದ್ದಾರೆ.

    ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಯಡಿಯೂರಪ್ಪ (BS Yediyurappa) ಹಾಗೂ ಈಶ್ವರಪ್ಪ ಜೋಡೆತ್ತುಗಳು, ಬಿಜೆಪಿ ಕಟ್ಟಿ ಬೆಳೆಸಿದವರು. ದಾವಣಗೆರೆ ಲೋಕಸಭಾ ಬಿಜೆಪಿ (BJP) ಅಭ್ಯರ್ಥಿ ಗೆಲ್ಲಿಸಲು ಸೂಚಿಸಿದ್ದಾರೆ. ಅಭ್ಯರ್ಥಿಯ ಹೆಸರು ಇನ್ನೂ ಘೋಷಣೆ ಆಗಿಲ್ಲ. ಯಡಿಯೂರಪ್ಪ ಮನೆಯಲ್ಲಿ ಚರ್ಚೆ ಮಾಡಿ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯದಂತೆ ಸೂಕ್ತ ಪಾರದರ್ಶಕ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಅಂತಾ ಕೇಳಿದ್ದೇವೆ ಎಂದರು.

    ಈ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದು ಎಸ್ ಎ ರವೀಂದ್ರನಾಥ್. ಚಿತ್ರದುರ್ಗ ಜಿಲ್ಲೆಗೆ ದಾವಣಗೆರೆ ಸೇರಿದಾಗ ಅಖಂಡ ಜಿಲ್ಲೆಗೆ ಜಿಲ್ಲಾಧ್ಯಕ್ಷರಾಗಿ ಎಸ್.ಎ ರವೀಂದ್ರನಾಥ್ ಪಟ್ಟ ಕಟ್ಟಿ ಬೆಳೆಸಿದ್ದಾರೆ. ದಾವಣಗೆರೆ ಜಿಲ್ಲೆಗೆ ಕಾರ್ಯಕರ್ತರ ಮುಖಂಡರ ಅಭಿಪ್ರಾಯದಂತೆ ಟಿಕೆಟ್ ಘೋಷಣೆ ಮಾಡಬೇಕು. ಏಕಮುಖವಾಗಿ ಟಿಕೆಟ್ ಘೋಷಣೆ ಮಾಡಿದ್ರೆ ನಾವು ಒಪ್ಪಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಸೂಲಿಬೆಲೆ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಅಡ್ಡಿ – ವಿರೋಧದ ನಡ್ವೆ ಯಶಸ್ವಿಯಾದ ನಮೋ ಭಾರತ್‌

    ಮುಖಂಡರ ಮತದಾರರ ಅಭಿಪ್ರಾಯದಂತೆ ಘೋಷಣೆ ಮಾಡುತ್ತೇವೆ ಎಂದಿದ್ದಾರೆ. ನಾನು ಪ್ರಬಲ ಆಕಾಂಕ್ಷಿ, ಜಿಲ್ಲೆಯಲ್ಲಿ ಕೋವಿಡ್ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಿದ್ದೇವೆ, ನಾವು ಸಮರ್ಥರಿದ್ದೇವೆ. ಕಾರ್ಯಕರ್ತರ ಮುಖಂಡರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡಲಿ. ಜೊತೆಗೆ ಹೊಸಬರಿಗೆ ಟಕೆಟ್ ನೀಡುವಂತೆ ಇದೇ ವೇಳೆ ಎಂಪಿ ರೇಣುಕಾಚಾರ್ಯ ಒತ್ತಾಯ ಮಾಡಿದರು.

    ರೆಬಲ್ ಆಗಲು ಕಾರಣವೇನು..?: ಗುರುವಾರ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಮಾತನಾಡುತ್ತಾ, ಸಿದ್ದೇಶ್ವರ್ ಕೊಡುಗೆ ಅಪಾರ ಇದೆ ಎಂದಿದ್ದರು. ವೇದಿಕೆ ಮೇಲೆ ಬಿಎಸ್‍ವೈ ಹೊಗಳಿದ್ದರಿಂದ ಜಿಎಂ ಸಿದ್ದೇಶ್ವರ್ ಅವರಿಗೆ ಈ ಬಾರಿ ಟಿಕೆಟ್ ಕನ್ಫರ್ಮ್ ಅಂತಾ ಕಾರ್ಯಕರ್ತರು ಅಂದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಮದು ರೇಣುಕಾಚರ್ಯ ಟಾಂಗ್ ನೀಡಿದ್ದಾರೆ.

  • ಯಾರೋ ಇಬ್ಬರು ರಾಜೀನಾಮೆ ನೀಡ್ತಾರೆ ಅಂದಾಕ್ಷಣ ಪಕ್ಷವೇ ಮುಳುಗಿ ಹೋಗಲ್ಲ: ಸಂಸದ ಸಿದ್ದೇಶ್ವರ

    ಯಾರೋ ಇಬ್ಬರು ರಾಜೀನಾಮೆ ನೀಡ್ತಾರೆ ಅಂದಾಕ್ಷಣ ಪಕ್ಷವೇ ಮುಳುಗಿ ಹೋಗಲ್ಲ: ಸಂಸದ ಸಿದ್ದೇಶ್ವರ

    ದಾವಣಗೆರೆ: ಯಾರೋ ಇಬ್ಬರು ರಾಜೀನಾಮೆ ನೀಡ್ತಾರೆ ಅಂದ ಮಾತ್ರಕ್ಕೆ ಪಕ್ಷವೇ ಮುಳುಗಿ ಹೋಗಲ್ಲ. 11 ಕೋಟಿ ಕಾರ್ಯಕರ್ತರನ್ನು ಹೊಂದಿರುವ ಪಕ್ಷ ನಮ್ಮದು ಎಂದು ದಾವಣಗೆರೆಯ ಸಂಸದ ಜಿ.ಎಂ.ಸಿದ್ದೇಶ್ವರ ಉಡಾಫೆ ಉತ್ತರ ನೀಡಿದ್ದಾರೆ.

    ದಾವಣಗೆರೆಯಲ್ಲಿ ಪ್ರವೀಣ್ ನೆಟ್ಟಾರು ಹತ್ಯೆಯಿಂದ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಸರಣಿ ರಾಜೀನಾಮೆ ನೀಡಿದ ವಿಚಾರವಾಗಿ ಮಾತನಾಡಿದ ಅವರು, ರಾಜೀನಾಮೆ ಕೊಡುವ ಮುನ್ನ ಜಿಲ್ಲಾಧ್ಯಕ್ಷರು, ಶಾಸಕರೊಂದಿಗೆ ಮಾತನಾಡಬೇಕು. ಆದರೆ ಇದುವರೆಗೆ ಯಾರೊಬ್ಬರೂ ಪಕ್ಷಕ್ಕೆ ರಾಜೀನಾಮೆ ಕೊಟ್ಟಿಲ್ಲ. ಟಿವಿಯಲ್ಲಿ ಬರಬೇಕಂತಲೇ ರಾಜೀನಾಮೆ ಕೊಟ್ಟಿದ್ದೇವೆ ಎಂದು ಹೇಳಿರಬೇಕು. ಎಲ್ಲರನ್ನು ಮಾತನಾಡಿಸಿ ಸಮಾಧಾನ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಸಾಧನೆ ಶಿಖರವೇರಿದ ಸಂಕೇತ್ – ಪಾನ್‌ಬೀಡಾ ಮಾರುತ್ತಿದ್ದ ಹುಡುಗನ `ಬೆಳ್ಳಿ’ ಸಾಧನೆ

    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 32 ಹತ್ಯೆಗಳಾಗಿದ್ದವು. ನಮ್ಮ ಸರ್ಕಾರದಲ್ಲಿ ಇಬ್ಬರ ಹತ್ಯೆಯಾಗಿದೆ. ಮುಖ್ಯಮಂತ್ರಿಗಳು ಕಾನೂನುಬದ್ಧವಾಗಿ, ಸಂವಿಧಾನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತಾರೆ. ಯಾರೋ ಹೇಳಿದ್ದಾರೆಂದು ಎನ್ಕೌಂಟರ್ ಮಾಡಿದ್ರೆ ನೀವೇ ಗುಂಡಿಕ್ಕಿ ಕೊಂದದ್ದು ಎಂದು ಸುದ್ದಿ ಮಾಡಿ ಸರ್ಕಾರ ಬೀಳಿಸುತ್ತೀರಾ? ಹಾಗಾಗಿ ಕಾನೂನುಬದ್ಧವಾಗಿಯೇ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎಲ್ಲೆಲ್ಲೋ ರೇಪ್ ಕೇಸ್ ಆದ್ರೇ ನನ್ನನ್ನು ಯಾಕೆ ಕೇಳ್ತಿರಾ: ಜಿ.ಎಂ ಸಿದ್ದೇಶ್ವರ್ ಉಡಾಫೆ

    ಎಲ್ಲೆಲ್ಲೋ ರೇಪ್ ಕೇಸ್ ಆದ್ರೇ ನನ್ನನ್ನು ಯಾಕೆ ಕೇಳ್ತಿರಾ: ಜಿ.ಎಂ ಸಿದ್ದೇಶ್ವರ್ ಉಡಾಫೆ

    ದಾವಣಗೆರೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಈಗಾಗಲೇ ರಾಜ್ಯಾದಂತ್ಯ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಎಲ್ಲೆಲ್ಲೋ ರೇಪ್ ಕೇಸ್ ಆದರೆ ನನ್ನನ್ನು ಯಾಕೆ ಕೇಳುತ್ತೀರಾ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ಉಡಾಫೆ ಮಾತನಾಡಿದ್ದಾರೆ.

    ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು 74 ಗಂಟೆಯಾದರೂ ಪೊಲೀಸರು ಬಂಧಿಸದ ಹಿನ್ನಲೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದೇಶ್ವರ್ ನನಗೆ ಇದರ ಬಗ್ಗೆ ಗೊತ್ತೆ ಇಲ್ಲ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ:ಈ ಸರ್ಕಾರದಲ್ಲಿ ಹೆಣ್ಮಕ್ಕಳು ಮಾತ್ರವಲ್ಲ ಗಂಡು ಮಕ್ಕಳೂ ಸೇಫ್ ಅಲ್ಲ ಡಿಕೆಶಿ

    ದಾವಣಗೆರೆಯ ಬಿಎಲ್ ಕಚೇರಿಯಲ್ಲಿ ನಡೆದ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಗ್ಯಾಂಗ್ ರೇಪ್ ಬಗ್ಗೆ ಪ್ರಶ್ನಿಸಿದಾಗ ಎಲ್ಲೆಲ್ಲೋ ರೇಪ್ ಕೇಸ್ ನಡೆದರೆ, ನನ್ನನ್ನು ಯಾಕೆ ಕೇಳುತ್ತೀರಪ್ಪಾ. ಇನ್ನು ನಾನು ಏನೂ ನೋಡಿಲ್ಲ, ಮಾಡಿಲ್ಲ ನಮ್ಮ ಜಿಲ್ಲೆಯಲ್ಲಿ ಏನಾದರೂ ಆಗಿದ್ದರೆ ಕೇಳು ಅದಕ್ಕೆ ಖಂಡಿತವಾಗಿ ಉತ್ತರಿಸಿ ಅಧಿಕಾರಿಗಳಿಗೆ ಹೇಳಿ ಕ್ರಮ ತೆಗೆದುಕೊಳ್ಳುತ್ತೇನೆ. ಆದರೆ ಮೈಸೂರಿನಲ್ಲಾಗಿರುವುದು ನನಗೆ ಏನ್ ಗೊತ್ತು ಹೇಳು, ನಿಮಗೆ ಅದೇ ಕೆಲಸ, ನಮ್ಮದು ಟಿವಿ ನೋಡದೇ ಬದುಕು ಸಾಗಿಸುತ್ತೇನೆ. ಬೆಳಿಗ್ಗೆ ಎದ್ದು ಬದುಕು ನೋಡಿಕೊಂಡು, ಸಂಜೆ ಹೋಗಿ ಮಲಗಿಕೊಂಡರೆ ಸಾಕಾಗಿ ಹೋಗುತ್ತದೆ. ನನಗೆ ರೇಪು ಗೊತ್ತಿಲ್ಲ, ಏನೂ ಗೊತ್ತಿಲ್ಲ, ಮೈಸೂರು ಗ್ಯಾಂಗ್ ರೇಪ್ ವಿಚಾರ ಬಿಟ್ಟು ಬೇರೆ ವಿಚಾರ ಇದ್ದರೆ ಹೇಳಿ ಎಂದಿದ್ದಾರೆ. ಇದನ್ನೂ ಓದಿ:ಹೊರಗಡೆ ನಾಯಿಗಳಿದೆ ಎಂದು ಮಕ್ಕಳನ್ನು ಆಚೆ ಬಿಡದೇ ಇರಬೇಕೇ: ಎಚ್.ಕೆ.ಕುಮಾರಸ್ವಾಮಿ

  • ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಬರುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿ

    ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೊರೊನಾ ಬರುತ್ತೆ: ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿ

    – ಕೋವಿಡ್ 19ನಿಂದ ಭಯಪಡೋ ಅಗತ್ಯವಿಲ್ಲ
    – ಹೊರದೇಶದಿಂದ ಬಂದವರು ಪ್ಲೀಸ್ ಟೆಸ್ಟ್ ಮಾಡಿಸ್ಕೊಳ್ಳಿ
    – ಆಸ್ಪತ್ರೆಯಲ್ಲಿದ್ದ ಸಂದರ್ಭ ವಿವರಿಸಿದ ಅಶ್ವಿನಿ

    ದಾವಣಗೆರೆ: ಜಿಲ್ಲೆಯ ಸಂಸದ ಜಿ.ಎಂ ಸಿದ್ದೇಶ್ವರ್ ಪುತ್ರಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಇದೀಗ ಗುಣಮುಖರಾಗಿ ತಾನು ಗೆದ್ದ ಕಥೆಯನ್ನು ಬಿಚ್ಚಿಟ್ಟಿದ್ದಾರೆ.

    ಈ ಸಂಬಂಧ ವಿಡಿಯೋ ಮಾಡಿರುವ ಅಶ್ವಿನಿ, ಗಯಾನಾ ದೇಶದಿಂದ ಮಾರ್ಚ್ 20ರಂದು ಭಾರತಕ್ಕೆ ಬಂದಿದ್ದೇನೆ. ಗಯಾನದಲ್ಲಿ ಚುನಾವಣೆಯ ಪ್ರಯುಕ್ತ ಜನಾಂಗೀಯ ಹಿಂಸೆ ನಡೆಯುತ್ತಾ ಇರೋ ಕಾರಣದಿಂದ ಮಕ್ಕಳ ಜೊತೆ ಭಾರತಕ್ಕೆ ಬರಬೇಕಾದ ಅನಿವಾರ್ಯ ಸ್ಥಿತಿ ಬಂತು. ಇಲ್ಲಿ ಬಂದು ಹೋಂ ಕ್ವಾರಂಟೈನ್ ಆಗಿ ಇದ್ದೆವು. ಯಾರ ಜೊತೆಯೂ ಸಂಪರ್ಕದಲ್ಲಿ ಇರಲಿಲ್ಲ ಎಂದಿದ್ದಾರೆ.

    ಎರಡು ದಿನದ ಬಳಿಕ ತಂದೆ ಕೋವಿಡ್ 19 ಟೆಸ್ಟ್ ಮಾಡಿಸಿದ್ರು. ಈ ವೇಳೆ ವರದಿಯಲ್ಲಿ ನನ್ನದು ಪಾಸಿಟಿವ್, ಮಕ್ಕಳದ್ದು ನೆಗೆಟಿವ್ ಬಂತು. ಅದಾದ ಬಳಿಕ ದಾವಣಗೆರೆ ಜಿಲ್ಲಾಧಿಕಾರಿ ಮತ್ತು ಎಸ್‍ಪಿ ಜೊತೆ ತಂದೆ ಮಾತಾಡಿ ಪ್ರೋಟೋಕಾಲ್ ಪ್ರಕಾರ ಅಂಬುಲೆನ್ಸ್ ನಲ್ಲಿ ಕರೆದುಕೊಂಡು ಬಂದು ಎಸ್‍ಎಸ್ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಅಲ್ಲಿ ಐಸೋಲೇಷನ್ ವಾರ್ಡಿನಲ್ಲಿದ್ದೆ. ಅಲ್ಲಿ ನನ್ನನ್ನು ಪ್ರತಿಯೊಬ್ಬರೂ ತುಂಬಾನೆ ಚೆನ್ನಾಗಿ ನೋಡಿಕೊಂಡರು ಅಂತ ತಿಳಿಸಿದ್ದಾರೆ.

    ಕೋವಿಡ್ 19 ಬಂದ ತಕ್ಷಣ ಏನೋ ಒಂದು ದೊಡ್ಡ ರೋಗ ಬಂದಿದೆ ಎಂದು ಭಯಪಡುವ ಅವಶ್ಯಕತೆ ಇಲ್ಲ. ನನಗೆ ಯಾವುದೇ ರೀತಿಯ ಲಕ್ಷಣಗಳು ಇರಲಿಲ್ಲ. ಆದರೆ ಆಸ್ಪತ್ರೆಗೆ ದಾಖಲಾದ ಬಳಿಕ ಅವರು ಕೊಟ್ಟ ಔಷಧಿಗಳ ಕಾರಣವೋ ಗೊತ್ತಿಲ್ಲ. ಆದರೆ ಯಾವುದೇ ರೀತಿಯ ನೆಗಡಿ, ಜ್ವರ, ಕೆಮ್ಮು ಏನೂ ಇರಲಿಲ್ಲ. ಹೀಗಾಗಿ ಏನೂ ಲಕ್ಷಣಗಳಿಲ್ಲದೆ ಎಷ್ಟೋ ಜನ ಮನೆಯಲ್ಲಿ ಎಲ್ಲಾ ಕಡೆ ಓಡಾಡಿಕೊಂಡಿದ್ದು, ಬೇರೆಯವರಿಗೆ ಹಬ್ಬಿಸುತ್ತಿದ್ದೀರಾ ಎಂಬುದನ್ನು ನಾವು ಇಲ್ಲಿ ಗಮನದಲ್ಲಿಟ್ಟುಕೊಳ್ಳಬೇಕು. ಈ ಕಾಯಿಲೆ ಬೇಗ ಹರಡುತ್ತೆ. ಆದರೆ ನಿಮಗೇನೂ ತೊಂದರೆ ಮಾಡಲ್ಲ. ಹೀಗಾಗಿ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.

    ಆಸ್ಪತ್ರೆಯಲ್ಲಿ 14 ದಿನ ಒಬ್ಬರೇ ಇರುವುದರಿಂದ ಬಹಳಷ್ಟು ಬೇಜಾರಾಗುತ್ತೆ. ಈ ಸಂದರ್ಭದಲ್ಲಿ ನನಗೆ ಬೆನ್ನೆಲುಬಾಗಿ ನಿಂತಿದ್ದು ನನ್ನ ಕುಟುಂಬ. ಪ್ರತಿ ದಿನ ಫೋನ್ ಮಾಡಿ ನನ್ನ ವಿಚಾರಿಸಿಕೊಳ್ಳುತ್ತಿದ್ದರು. ಅಲ್ಲದೆ ಗೆಳೆಯರು ಕೂಡ ಫೋನ್ ಮಾಡಿ ನಗಿಸುತ್ತಿದ್ದರು. ಇಷ್ಟು ಮಾತ್ರವಲ್ಲದೆ ನಾನು ಯೋಗ, ಪ್ರಾಣಯಾಮ ಮಾಡುತ್ತಿದ್ದೆ. ಇದರಿಂದ ಬಹಳಷ್ಟು ಉಪಯೋಗವಾಗುತ್ತೆ. ಹೀಗಾಗಿ ಪ್ರತಿಯೊಬ್ಬರೂ ಮನೆಯಲ್ಲಿ ಪ್ರಾಣಯಾಮ ಮಾಡಿ ಎಂದು ಸಲಹೆಯಿತ್ತಿದ್ದಾರೆ.

    ಆಸ್ಪತ್ರೆಯಲ್ಲಿ ಸಮಯ ಕಳೆಯಲು ಪುಸ್ತಕ, ಮ್ಯೂಸಿಕ್ ಕೇಳೋದು ಹಾಗೆಯೇ ಮೊಬೈಲ್ ನಲ್ಲೇ ಸಿನಿಮಾಗಳನ್ನು ನೋಡಿಕೊಂಡು ಸಮಯ ಕಳೆಯಬೇಕಾಗುತ್ತೆ. ಈ 14 ದಿನ ನಮ್ಮ ಸಂಬಂಧಿಕರು ಬಂದು ಭೇಟಿಯಾಗಲು ಸಾಧ್ಯವಿಲ್ಲ. ದೇಶದ ಪ್ರಧಾನ ಮಂತ್ರಿ ಹಾಗೂ ರಾಜ್ಯದ ಮುಖ್ಯಮಂತ್ರಿಯವರು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿರುವ ರೋಗಗಳಿಗೆ ಕೂಡ ಮಾನಸಿಕ ತೊಂದರೆ ಇದ್ದರೆ ಅಂತವರಿಗೆ ನಿಮ್ಹಾನ್ಸ್ ನಿಂದ ವೈದ್ಯರು ಕಾಲ್ ಮಾಡಿ ಮಾತಾಡ್ತಾರೆ. ಅಲ್ಲದೆ ಕುಟುಂಬದ ಸದಸ್ಯರಿಗೂ ತೊಂದರೆ ಇದ್ದರೆ ಮಾತಾಡಿಸ್ತಾರೆ ಎಂದು ವಿವರಿಸಿದ್ದಾರೆ.

    ದೈಹಿಕ ಶಕ್ತಿ ಎಷ್ಟು ಮುಖ್ಯವೋ ಕೊರೊನಾ ವೈರಸ್ ಜೊತೆ ಹೋರಾಡಿ ಗೆಲ್ಲಲು ಮಾನಸಿಕ ಸ್ಥೈರ್ಯ ಕೂಡ ಅಷ್ಟೇ ಮುಖ್ಯವಾಗುತ್ತದೆ. ಹೀಗಾಗಿ ನಾವು ಯಾವತ್ತೂ ಶಾಂತರಾಗಿರಬೇಕು, ಗಾಬರಿಗೊಳಗಾಗಬಾರದು. ಒಟ್ಟಿನಲ್ಲಿ ಇದರಿಂದ ಏನೂ ತೊಂದರೆನೇ ಇಲ್ಲ. 14 ದಿನ ಯಾರನ್ನೂ ಬೇಟಿಯಾಗಲು ಸಾಧ್ಯವಿಲ್ಲ ಅನ್ನೋ ಬೇಜಾರು ಬಿಟ್ಟರೆ ಇನ್ನೇನೂ ಇರಲ್ಲ ಎಂದು ತಿಳಿಸಿದ್ದಾರೆ.

    ನಮ್ಮ ಸರ್ಕಾರ ಒಳ್ಳೊಳ್ಳೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿರುವುದರಿಂದ ಯಾರೇ ಹೊರದೇಶದಿಂದ ಬಂದವರು ದಯವಿಟ್ಟು ಟೆಸ್ಟ್ ಮಾಡಿಸಿಕೊಳ್ಳಿ. ಕೊರೊನಾ ಲಕ್ಷಣಗಳು ಇರಲೇಬೇಕು ಅಂತ ಏನಿಲ್ಲ. ಇಲ್ಲದಿದ್ದರೂ ಪಾಸಿಟಿವ್ ಬರುತ್ತೆ. ಮನೆಯಲ್ಲಿ ವಯಸ್ಸಾದವರಿದ್ದರೆ ದಯವಿಟ್ಟು ಅವರಿಂದ ದೂರ ಇರಿ. ನಿಮಗೆ ಏನು ಲಕ್ಷಣಗಳಿಲ್ಲದಿದ್ದರೂ ಇದರಿಂದ ಅವರಿಗೆ ಅಪಾಯವಿರುತ್ತೆ. ದಯವಿಟ್ಟು ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಒಂದು ವೇಳೆ ಕೊರೊನಾ ಪಾಸಿಟಿವ್ ಬಂದರೂ ಹೆದರುವ ಅವಶ್ಯಕತೆ ಇಲ್ಲ ಎಂದು ಹೇಳುತ್ತಾ ದಾವಣಗೆರೆ ಡಿಸಿ, ಪೊಲೀಸ್ ಸಿಬ್ಬಂದಿ, ವೈದ್ಯರು, ನರ್ಸ್ ಎಲ್ಲರಿಗೂ ಧನ್ಯವಾದ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

  • ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

    ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಕಣಕ್ಕೆ ಇಳಿದ ತಂದೆ!

    ದಾವಣಗೆರೆ: ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕ ಕಣಕ್ಕೆ ಧುಮುಕಲು ತಂದೆ ಸಿದ್ಧರಾಗಿದ್ದು, ಲೋಕಸಭಾ ಅಖಾಡಕ್ಕೆ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ ಫೈನಲ್ ಆಗಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ದಕ್ಷಿಣ ಕ್ಷೇತ್ರವನ್ನ ಪುತ್ರನಿಗೆ ಬಿಟ್ಟುಕೊಡಲು ಶಾಮನೂರು ಸಂಕಲ್ಪ ತೊಟ್ಟಿದ್ದಾರೆ ಎನ್ನಲಾಗುತ್ತಿದೆ. ಶಾಮನೂರು ಶಿವಶಂಕರಪ್ಪ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಈಗಾಗಲೇ ಮೂರು ಬಾರಿ ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸೋಲು ಕಂಡಿದ್ದಾರೆ. ಆದ್ರೆ ಈ ಬಾರಿ ಸ್ವತಃ ಶಾಮನೂರು ಅವರೇ ಕಣಕ್ಕೆ ಇಳಿದು ಜಿ.ಎಂ.ಸಿದ್ದೇಶ್ವರ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಈ ಹಿಂದೆ ಸೋತಿರುವ ಭಯದಿಂದ ಈ ಬಾರಿ ಲೋಕಸಮರಕ್ಕೆ ಎಸ್.ಎಸ್.ಮಲ್ಲಿಕಾರ್ಜುನ್ ಹಿಂದೇಟು ಹಾಕಿದ್ದಾರೆ.

    ಸದ್ಯ ಬೀಗರ ಜಿದ್ದಾಜಿದ್ದಿಗೆ ದಾವಣಗೆರೆ ಲೋಕಸಭಾ ಕ್ಷೇತ್ರ ಸಾಕ್ಷಿಯಾಗಲಿದೆ. ಯಾಕೆಂದರೆ ಶಾಮನೂರು ಹಾಗೂ ಸಿದ್ದೇಶ್ವರ್ ಇಬ್ಬರೂ ಸಂಬಂಧದಲ್ಲಿ ಮಾವ-ಅಳಿಯ ಆಗುತ್ತಾರೆ. ಆದ್ರೆ ಅಳಿಯನ ಹ್ಯಾಟ್ರಿಕ್ ಗೆಲುವಿಗೆ ಬ್ರೇಕ್ ಹಾಕ್ತಾರಾ ಮಾವ ಅನ್ನೋದನ್ನ ಕಾದು ನೋಡಬೇಕಾಗಿದೆ.

  • ಅವರು ಜಿಲ್ಲೆಗೆ ಶಕುನಿಯಾಗಿದ್ದಾರೆ- ಸಂಸದ ಜಿ.ಎಂ.ಸಿದ್ದೇಶ್ವರ್‍ಗೆ ಎಸ್‍ಎಸ್ ಮಲ್ಲಿಕಾರ್ಜುನ್ ಪರೋಕ್ಷ ಟಾಂಗ್

    ಅವರು ಜಿಲ್ಲೆಗೆ ಶಕುನಿಯಾಗಿದ್ದಾರೆ- ಸಂಸದ ಜಿ.ಎಂ.ಸಿದ್ದೇಶ್ವರ್‍ಗೆ ಎಸ್‍ಎಸ್ ಮಲ್ಲಿಕಾರ್ಜುನ್ ಪರೋಕ್ಷ ಟಾಂಗ್

    ದಾವಣಗೆರೆ: ಹೊರಗಿನಿಂದ ಬಂದವರು ದಾವಣಗೆರೆ ಜಿಲ್ಲೆ ಅಭಿವೃದ್ಧಿಗೆ ಅಡ್ಡಿಯಾಗಿದ್ದಾರೆ. ಮೊದಲು ಅವರನ್ನು ಜಿಲ್ಲೆಯಿಂದ ಹೊರ ಓಡಿಸಬೇಕು ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಅವರಿಗೆ ಸಚಿವ ಎಸ್‍ಎಸ್ ಮಲ್ಲಿಕಾರ್ಜುನ್ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

    ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಅಭಿವೃದ್ಧಿಯಾಗಬೇಕು ಅಂದ್ರೆ ಅರ್ಜುನನ ರೀತಿ ಕೆಲಸ ಮಾಡಬೇಕು. ಅವರು ಜಿಲ್ಲೆಗೆ ಶಕುನಿಯಾಗಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ದಾಖಲೆ ಸಹಿತ ಚರ್ಚೆಗೆ ನಾನು ಸಿದ್ಧ ಎಂದು ಸಂಸದ ಸಿದ್ದೇಶ್ವರ್ ಅವರನ್ನ ಚರ್ಚೆಗೆ ಬರುವಂತೆ ಆಹ್ವಾನಿಸಿದ್ರು.

    ಮುಂದಿನ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲಿದೆ. ನಾಲ್ಕುವರೆ ವರ್ಷದಲ್ಲಿ ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ 2,499 ಕೋಟಿ ರೂ. ಅನುದಾನ ತಂದಿದ್ದು, ಇದರಲ್ಲಿ 1036 ಕೋಟಿ ರೂ. ಕೆಲಸವಾಗಿದೆ. 1462 ಕೋಟಿ ರೂ. ಕೆಲಸ ಬಾಕಿ ಇದೆ. ದಾವಣಗೆರೆ ಸ್ಮಾರ್ಟ್ ಸಿಟಿಯಾಗಿ ಘೋಷಣೆಯಾಗಿ ಮೂರು ವರ್ಷವಾದರೂ ಕೇಂದ್ರದಿಂದ ಅನುದಾನ ಬಂದಿಲ್ಲ. ರಾಜ್ಯ ಸರ್ಕಾರ ಮಾತ್ರ ಅನುದಾನ ಬಿಡುಗಡೆ ಮಾಡಿದೆ ಅಷ್ಟೇ ಅಂದ್ರು.