Tag: ಜಿ.ಜಗದೀಶ್

  • ಉಡುಪಿಗೆ ಕೂರ್ಮ ರಾವ್ ನೂತನ ಡಿಸಿ- ಜಿ.ಜಗದೀಶ್ ಮುಖ್ಯಮಂತ್ರಿಗಳಿಗೆ ಜಂಟಿ ಕಾರ್ಯದರ್ಶಿ

    ಉಡುಪಿಗೆ ಕೂರ್ಮ ರಾವ್ ನೂತನ ಡಿಸಿ- ಜಿ.ಜಗದೀಶ್ ಮುಖ್ಯಮಂತ್ರಿಗಳಿಗೆ ಜಂಟಿ ಕಾರ್ಯದರ್ಶಿ

    – ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ

    ಉಡುಪಿ: ಜಿಲ್ಲಾಧಿಕಾರಿ ಜಿ.ಜಗದೀಶ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಕೂರ್ಮ ರಾವ್ ಎಂ. ಅವರನ್ನು ಉಡುಪಿಯ ನೂತನ ಡಿಸಿಯಾಗಿ ನೇಮಿಸಲಾಗಿದೆ.

    ಎರಡು ವರ್ಷಗಳ ಕಾಲ ಉಡುಪಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ ಜಗದೀಶ್ ಅವರನ್ನು ಬೆಂಗಳೂರಿಗೆ ವರ್ಗಾಯಿಸಲಾಗಿದೆ. ರಾಜ್ಯ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ಮುಖ್ಯಮತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ಬೆಂಗಳೂರಲ್ಲಿ ಸೇವೆ ಆರಂಭಿಸಲಿದ್ದಾರೆ. ಇದನ್ನೂ ಓದಿ: ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಕಳ್ಳತನ

    ಈಶಾನ್ಯ ಸಾರಿಗೆಯ ಎಂಡಿ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೂರ್ಮ ರಾವ್.ಎಂ ಅವರನ್ನು ತಕ್ಷಣದಿಂದ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ವರ್ಗ ಮಾಡಲಾಗಿದೆ. ಜಿ.ಜಗದೀಶ್ ಉಡುಪಿಯಲ್ಲಿ ಎರಡು ವರ್ಷಗಳಕಾಲ ಸೇವೆ ಮಾಡಿದ್ದರು.

  • ಉಡುಪಿ ಡಿಸಿ ಹೆಸರಿನಲ್ಲಿ ನಕಲಿ ಖಾತೆ- 7 ಸಾವಿರಕ್ಕೆ ರೂಪಾಯಿಗೆ ಬೇಡಿಕೆ

    ಉಡುಪಿ ಡಿಸಿ ಹೆಸರಿನಲ್ಲಿ ನಕಲಿ ಖಾತೆ- 7 ಸಾವಿರಕ್ಕೆ ರೂಪಾಯಿಗೆ ಬೇಡಿಕೆ

    ಉಡುಪಿ: ಜಿಲ್ಲೆಯ ಡಿಸಿ ಜಿ.ಜಗದೀಶ್ ಅವರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಖದೀಮರು ಏಳು ಸಾವಿರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವ ವಿಚಾರ ಬೆಳಕಿಗೆ ಬಂದಿದೆ.

    ಉಡುಪಿ ಡಿಸಿ ಜಿ ಜಗದೀಶ್ ಈ ಬಗ್ಗೆ ಫೇಸ್ಬುಕ್‍ನಲ್ಲಿ ಸ್ಪಷ್ಟನೆ ನೀಡಿದ್ದು, ನನ್ನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್ ಆಗಿದೆ ಎಂದು ಬರೆದುಕೊಡಿದ್ದಾರೆ. ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ನನ್ನ ಖಾತೆಯಿಂದ ಯಾರಾದರೂ ಹಣಕ್ಕೆ ಬೇಡಿಕೆ ಇಟ್ಟರೆ ಅದಕ್ಕೆ ಯಾರೂ ಸ್ಪಂದಿಸಬೇಡಿ ಎಂದು ವಿನಂತಿ ಮಾಡಿದ್ದಾರೆ. ಜಗದೀಶ್ ಮಲಾಲಗದ್ದೆ ಎಂಬ ಹೆಸರಿನಲ್ಲಿ ಖದೀಮರು 7000 ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿರುವ ಸ್ಕ್ರೀನ್ ಶಾಟ್ ಗಳನ್ನು ಡಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ.

    ನನ್ನ ಕುಟುಂಬಸ್ಥರಿಗೆ ಹಣಕಾಸಿನ ಅಗತ್ಯ ಇದೆ ನಾನು ಒಂದು ನಂಬರ್ ಕಳುಹಿಸುತ್ತೇನೆ ಅದಕ್ಕೆ ಆನ್‍ಲೈನ್ ಮೂಲಕ ಹಣ ರವಾನೆ ಮಾಡಿ ಎಂದು ಖದೀಮ ಮೆಸೇಜ್ ಮಾಡಿದ್ದಾನೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದೆರಡು ತಿಂಗಳ ಹಿಂದಿನಿಂದ ಜಿಲ್ಲೆಯ ಹಲವು ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್ ಮಾಡಿ ಇದೇ ರೀತಿ ಹಣಕ್ಕೆ ಬೇಡಿಕೆ ಇಡುವ ಪ್ರಕರಣಗಳು ನಡೆದಿತ್ತು. ಇದೀಗ ಡಿಸಿ ಅವರಿಗೂ ಅದೇ ರೀತಿ ಮಾಡಿರುವುದು ಬೆಳಕಿಗೆ ಬಂದಿದೆ.

  • 74ನೇ ಸ್ವಾತಂತ್ರ್ಯೋತ್ಸವ – ಕೊರೊನಾ ವಾರಿಯರ್ಸ್‌ಗೆ ಸನ್ಮಾನ

    74ನೇ ಸ್ವಾತಂತ್ರ್ಯೋತ್ಸವ – ಕೊರೊನಾ ವಾರಿಯರ್ಸ್‌ಗೆ ಸನ್ಮಾನ

    ಉಡುಪಿ: 74ನೇ ಸ್ವಾತಂತ್ರ್ಯೋತ್ಸವನ್ನು ಜಿಲ್ಲೆಯಲ್ಲಿ ಸರಳವಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಗೈರಾಗಿದ್ದರಿಂದ ಜಿಲ್ಲಾಧಿಕಾರಿ ಜಿ.ಜಗದೀಶ್ ಜಿಲ್ಲಾ ಕ್ರೀಡಾಂಗಣದಲ್ಲಿ ತಿರಂಗವನ್ನು ಹಾರಿಸಿದರು.

    ಕೊರೊನಾ ಇರುವುದರಿಂದ ಪೊಲೀಸ್ ಅಧಿಕಾರಿಗಳ, ಅಗ್ನಿಶಾಮಕ ದಳದ ಪಥಸಂಚಲನ ಮಾತ್ರ ಇತ್ತು. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಇರಲಿಲ್ಲ. ಸ್ವಾತಂತ್ರೋತ್ಸವದ ವೇದಿಕೆಯಲ್ಲಿ ಕೊರೊನಾ ವಾರಿಯರ್ಸ್‌ಗಳನ್ನು ಸನ್ಮಾನಿಸಲಾಯಿತು.

    ವೈದ್ಯರು, ನರ್ಸ್ , ಆಶಾ ಕಾರ್ಯಕರ್ತೆಯರನ್ನ ಉಡುಪಿ ಜಿಲ್ಲಾ ಆಡಳಿತದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಲ್ಲೆಯಲ್ಲಿ ಕೊರೊನಾ ತಡೆಹಿಡಿಯುವುದು ಇಂದಿಗೂ ಸವಾಲಾಗಿಯೇ ಇದೆ. ನಮ್ಮ ಜಿಲ್ಲೆಯ ಕೊರೊನಾ ವಾರಿಯರ್ಸ್‌ಗಳು ಹಗಲು ರಾತ್ರಿ ಎನ್ನದೆ ನಿರಂತರ ಕರ್ತವ್ಯ ನಿರ್ವಹಿಸಿದ್ದಾರೆ. ಹಲವಾರು ಬೇಡಿಕೆಗಳ ನಡುವೆಯೂ ಕೆಲಸ ಮಾಡಿದ್ದಾರೆ ಎಂದರು.

    ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಶಾಸಕ ಕೆ.ರಘುಪತಿ ಭಟ್, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ತಾ.ಪಂ. ಅಧ್ಯಕ್ಷೆ ಸಂಧ್ಯಾ ಕಾಮತ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಎಸ್‍ಪಿ ಎನ್.ವಿಷ್ಣುವರ್ಧನ್, ಕರಾವಳಿ ಕಾವಲು ಪೊಲೀಸ್ ಎಸ್‍ಪಿ ಚೇತನ್ ವೇದಿಕೆಯಲ್ಲಿದ್ದರು.

  • ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ

    ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ

    – ಟ್ರಾವೆಲ್ ಹಿಸ್ಟರಿ ವಿಚಾರಣೆ ಶುರು

    ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊರೊನಾ ಇರುವುದು ಸ್ಪಷ್ಟವಾಗಿದ್ದು, ಹಾಸನದಿಂದ ಬಂದ ವರದಿ ಕೂಡ ವ್ಯಕ್ತಿಯನ್ನು ಕೊರೊನಾ ಪಾಸಿಟಿವ್ ಎಂಬುದನ್ನು ದೃಢ ಮಾಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಜ್ಯದ ನೋಡೆಲ್ ಅಧಿಕಾರಿ ಜೊತೆ ನಾನು ಮಾತನಾಡಿದ್ದೇನೆ. ಡಾಕ್ಟರ್ ಅರುಂಧತಿ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ. ಆತ ಬಂದ ವಿಮಾನದ ಬಗ್ಗೆ ಕೂಡ ಪರಿಶೀಲನೆ ನಡೆಸಲಾಗುತ್ತಿದೆ ಎಂದರು. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿ ಏಳು ದಿನದಿಂದಲೂ ಕೂಡ ನಮ್ಮ ನಿಗಾದಲ್ಲೇ ಇದ್ದ ಎಂದರು.

    ಸೋಂಕಿತ ಕ್ವಾರಂಟೈನ್‍ನಲ್ಲಿ ಇರುವ ಸಂದರ್ಭ ಅನಾರೋಗ್ಯಕ್ಕೆ ಒಳಗಾಗಿದ್ದನು. ಈ ವ್ಯಕ್ತಿ ಕೆಎಂಸಿಯ ಸಿಬ್ಬಂದಿ ಎಂದು ತಿಳಿದುಬಂದಿದೆ. ದುಬೈನಿಂದ ಬಂದ ನಂತರ ಆತ ಕೆಲಸಕ್ಕೆ ಹೋಗಿಲ್ಲ. ಮಡದಿ ಮತ್ತು ಮಗುವಿನ ಜೊತೆ ಕೂಡ ಸಂಪರ್ಕದಲ್ಲಿ ಇರಲಿಲ್ಲ. ಮನೆಯಿಂದ ಜಿಲ್ಲಾಸ್ಪತ್ರೆಗೆ ಒಬ್ಬನೇ ಕಾರಿನಲ್ಲಿ ಬಂದಿದ್ದಾನೆ. ಸಂಪೂರ್ಣ ನಿಗಾದಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಲಕ್ಷಣಗಳಿದ್ದ ಕಾರಣ ವೈದ್ಯರು ಬೇರೆಯೇ ಕೊಠಡಿಯಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದರು ಎಂದು ತಿಳಿಸಿದರು.

    ಮೂಲತಃ ದಾವಣಗೆರೆಯವನಾಗಿರುವ ಈತ, ಮಣಿಪಾಲಕ್ಕೆ ಉದ್ಯೋಗದ ಕಾರಣ ಶಿಫ್ಟ್ ಆಗಿದ್ದ. ದುಬೈಗೆ ಪ್ರವಾಸಕ್ಕೆ ಎಂದು ತೆರಳಿದ್ದು, ಅಲ್ಲಿ ಕೊರೊನಾ ಸೋಂಕು ಅಂಟಿಕೊಂಡಿದೆ. ಭಾರತ ತಲುಪಿ ಏಳು ದಿನದ ನಂತರ ಕೊರೊನಾ ವೈರಸ್ ಜೀವ ಪಡೆದುಕೊಂಡಿದೆ ಎಂದು ತಜ್ಞ ವೈದ್ಯರು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದರು.