Tag: ಜಿ.ಸಿ.ಚಂದ್ರಶೇಖರ್

  • ಸಚಿವ ರಾಜಣ್ಣ ಹೇಳಿಕೆ ಸರಿಯಿದೆ, ನನಗೆ ಕೊಂಬು ಇಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್

    ಸಚಿವ ರಾಜಣ್ಣ ಹೇಳಿಕೆ ಸರಿಯಿದೆ, ನನಗೆ ಕೊಂಬು ಇಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್

    ಬೆಂಗಳೂರು: ರಾಜಣ್ಣ ಅವರ ಹೇಳಿಕೆ ಸರಿ ಇದೆ. ನನಗೆ ಕೊಂಬು ಇಲ್ಲ. ನಾನು ಒಬ್ಬ ಕಾರ್ಯಕರ್ತ ಅಷ್ಟೇ ಎಂದು ಕೆಪಿಸಿಸಿ (KPCC) ಕಾರ್ಯಾಧ್ಯಕ್ಷ ಜಿ.ಸಿ ಚಂದ್ರಶೇಖರ್ (G C Chandrashekar) ಹೇಳಿದರು.

    ಬೆಂಗಳೂರಿನಲ್ಲಿ ಸಚಿವ ರಾಜಣ್ಣ (K N Rajanna) ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕಾರ್ಯಾಧ್ಯಕ್ಷನಾಗಿ ನಾನು ಇದನ್ನು ಬೆಳೆಸಿಕೊಂಡು ಹೋಗುವುದಿಲ್ಲ. ಆದರೆ ನಾನು ಏನು ಹೇಳಬೇಕೋ ಹೇಳಿದ್ದೇನೆ. ನಾನು ಯಾರದೋ ಹೆಸರು ಹೇಳಿಲ್ಲ. ರಾಜಣ್ಣ ಅವರು ಹಿರಿಯ ನಾಯಕರು ಅವರ ಹೇಳಿಕೆಯನ್ನು ಗೌರವಿಸುತ್ತೇನೆ ಎಂದರು. ಇದನ್ನೂ ಓದಿ : ನ್ಯಾಟ್ ಸ್ಕೀವರ್ ಸ್ಫೋಟಕ ಫಿಫ್ಟಿ – ಗುಜರಾತ್ ವಿರುದ್ಧ ಮುಂಬೈಗೆ 5 ವಿಕೆಟ್‌ಗಳ ಭರ್ಜರಿ ಜಯ

    ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಲ್ಲ. ಪಕ್ಷದಲ್ಲಿ ಶಿಸ್ತು ಇದೆಯಾ ಅಂದರೆ ಪಕ್ಷದಲ್ಲಿ ಇವೆಲ್ಲಾ ಸರ್ವೇಸಾಮಾನ್ಯ. ನಾವು ಮಿಲಿಟರಿಯಲ್ಲಿ ಇಲ್ಲ, ಮಿಲಿಟರಿ ಆಡಳಿತ ಇಲ್ಲ. ಅವರ ಮಾತನ್ನು ಗೌರವಿಸುತ್ತೇನೆ. 25 ವರ್ಷದ ಹಿಂದೆ ನನ್ನ 25ನೇ ವಯಸ್ಸಿನಲ್ಲಿ ಕಾರ್ಪೊರೇಷನ್‌ಗೆ ನಿಂತಿದ್ದೇನೆ. ಆ ನಂತರ ಸಾಕಷ್ಟು ಬೆಳವಣಿಗೆ ಆಗಿದೆ. ಅವರ ಹೇಳಿಕೆಯನ್ನು ನಾನು ಪಾಸಿಟಿವ್ ಆಗಿ ತೆಗೆದುಕೊಂಡಿದ್ದೇನೆ. ಹಿರಿಯರು 50 ವರ್ಷ ಸೇವೆ ಸಲ್ಲಿಸಿದ್ದಾರೆ. ಹಿರಿಯರು ಹೇಳಿದ್ದಾರೆ ಎಂದುಕೊಳ್ಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ : ಮುಂದಿನ 5-6 ತಿಂಗಳಲ್ಲಿ ಮಹಿಳೆರಿಗೆ ಕ್ಯಾನ್ಸರ್‌ ಲಸಿಕೆ ಲಭ್ಯ: ಕೇಂದ್ರ ಸಚಿವ ಜಾಧವ್‌

    ಕ್ರಿಯೆಗೆ ಪ್ರತಿಕ್ರಿಯೆ ಕೊಡೋದು ಪಕ್ಷದ ಮೇಲೆ ದುಷ್ಪರಿಣಾಮ ಬೀರುತ್ತದೆ. ಆ ಕಾರಣಕ್ಕೆ ಅವರ ಹಿರಿತನಕ್ಕೆ ನಾನು ಬೆಲೆ ಕೊಡುತ್ತೇನೆ. ಅವರು ಏನು ಹೇಳಿದರೂ ನನ್ನ ಒಳ್ಳೆಯದಕ್ಕೆ ಹೇಳಿದ್ದಾರೆ ಎಂದು ತಿಳಿದುಕೊಳ್ಳುತ್ತೇನೆ. ನಾನು ಯಾರನ್ನು ಉದ್ದೇಶಿಸಿ ಹೇಳಿಕೆ ನೀಡಿದ್ದಲ್ಲ. ರಾಜಣ್ಣ ಹೇಳಿಕೆಯನ್ನು ನಾನು ಮುಂದುವರಿಸಲು ಹೋಗಲ್ಲ ಎಂದು ತಿಳಿಸಿದರು. ಇದನ್ನೂ ಓದಿ : ಪಿಜಿ ಮೆಡಿಕಲ್: ಸ್ಟ್ರೇ ವೇಕೆನ್ಸಿ ಸುತ್ತಿಗೆ ಅರ್ಜಿ ಸಲ್ಲಿಸಲು ಫೆ.19ರವರೆಗೆ ಅವಕಾಶ: ಕೆಇಎ

    ಈ ಸ್ಥಾನಕ್ಕೆ ಘನತೆ ತರಬೇಕು ಅನ್ನುವ ಕಾರಣಕ್ಕೆ ಏನು ಮಾತನಾಡಲ್ಲ. ರಾಜಣ್ಣ ಅವರ ಹೇಳಿಕೆಯನ್ನು ನಾನು ಗೌರವಿಸುತ್ತೇನೆ. ದೊಡ್ಡವರು ಒಂದು ಮಾತು ಹೇಳ್ತಾರೆ ಅದನ್ನು ನೋಡಿಕೊಂಡು ಅನುಸರಿಸಿಕೊಂಡು ಹೋಗಬೇಕು. ನನ್ನಿಂದ ಪಕ್ಷಕ್ಕಾಗಲೀ, ನಾಯಕರಿಗಾಗಲೀ, ಪಕ್ಷದ ಕಾರ್ಯಕರ್ತರಿಗಾಗಲೀ ಚಂದ್ರಶೇಖರ್ ಈ ರೀತಿ ಮಾಡಬಾರದಿತ್ತು ಎನ್ನುವ ಭಾವನೆ ಬರಬಾರದು. ಪಕ್ಷದ ಶಿಸ್ತಿನ ಸಿಪಾಯಿಯಾಗಿ ನಾನು ಇದನ್ನು ಗೌರವಿಸುತ್ತೇನೆ ಎಂದು ನುಡಿದರು. ಇದನ್ನೂ ಓದಿ : ಡಿ.ಕೆ ಶಿವಕುಮಾರ್‌ಗೆ ನೋವಾಗುವಂತೆ ಮಾತನಾಡಬಾರದು: ಕುಣಿಗಲ್ ಶಾಸಕ ರಂಗನಾಥ್

    ನನ್ನನ್ನು ರಾಜ್ಯಸಭಾ ಸದಸ್ಯನನ್ನಾಗಿ ಮಾಡಿರೋದು ಕಾಂಗ್ರೆಸ್ ಪಕ್ಷ. ಯಾರಿಗೆಲ್ಲ ಟಿಕೆಟ್ ಕೊಟ್ಟಿರುವುದು, ಯಾರನ್ನೆಲ್ಲ ಮಂತ್ರಿ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದು ಸರಿ ಅಂದಮೇಲೆ ಅದೂ ಸರಿ ಅಲ್ಲವೇ. ನಮ್ಮನ್ನ ಎಲ್ಲಿ ಗುರುತಿಸಬೇಕು ಅಲ್ಲಿ ಗುರುತಿಸಿರುತ್ತಾರೆ. ಸರಿ ಇಲ್ಲ ಅಂತ ಅನಿಸಿದರೆ ನೀವು ಆ ರೀತಿ ಅಂದುಕೊಳ್ಳಬಹುದು. ನನ್ನ ಸಾಮರ್ಥ್ಯ ಏನು ಅಂತ ನಿಮಗೆ ಗೊತ್ತಿದೆ. ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೆ. ಏನು ನಿರ್ವಹಣೆ ಮಾಡಿದ್ದೇನೆ ಅದನ್ನು ನೀವು ಬರೆಯಬಹುದು. ಅವರ ಹೇಳಿಕೆಯಿಂದ ನನ್ನ ಮಾನದಂಡ ನಿರ್ಣಯ ಆಗಲ್ಲ ಎಂದರು.

  • ಪಕ್ಷದ ಶಿಸ್ತು ಮೀರಿ‌‌ ಮಾತನಾಡುತ್ತಿರುವ ಸಚಿವರು ಶಿಶುಪಾಲನಂತೆ, ಕಾಂಗ್ರೆಸ್ ಹೈಕಮಾಂಡ್ ಶ್ರೀಕೃಷ್ಣನಂತೆ: ಸಂಸದ ಜಿ.ಸಿ ಚಂದ್ರಶೇಖರ್

    ಪಕ್ಷದ ಶಿಸ್ತು ಮೀರಿ‌‌ ಮಾತನಾಡುತ್ತಿರುವ ಸಚಿವರು ಶಿಶುಪಾಲನಂತೆ, ಕಾಂಗ್ರೆಸ್ ಹೈಕಮಾಂಡ್ ಶ್ರೀಕೃಷ್ಣನಂತೆ: ಸಂಸದ ಜಿ.ಸಿ ಚಂದ್ರಶೇಖರ್

    ಬೆಂಗಳೂರು: ಪಕ್ಷದ ಶಿಸ್ತು ಮೀರಿ ಮಾತನಾಡುತ್ತಿರುವ ಸಚಿವರು ಶಿಶುಪಾಲರಿದ್ದಂತೆ ಹೈಕಮಾಂಡ್ ಶ್ರೀಕೃಷ್ಣ ಇದ್ದಂತೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಸಂಸದ ಜಿ.ಸಿ ಚಂದ್ರಶೇಖರ್ (GC Chandrashekhar) ಬಣ್ಣಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಸಚಿವರು ಕಳೆದ ಒಂದು ವರ್ಷದಿಂದ ಬದಲಾವಣೆ ಬಗ್ಗೆ ಸಿಎಂ ವಿಚಾರದ ಬಗ್ಗೆ ಹೇಳುತ್ತಿದ್ದಾರೆ. ಆದರೆ ಯಾವ ಬದಲಾವಣೆಯೂ ಆಗಿಲ್ಲ. ಎಲ್ಲಾ ಸಚಿವರು ಹಿರಿಯರಿದ್ದಾರೆ, ಇದು ಶ್ರೀಕೃಷ್ಣ ಶಿಶುಪಾಲನ‌ ಕಥೆಯಂತೆ. ಇಲ್ಲಿ ಹೈಕಮಾಂಡ್ ಶ್ರೀಕೃಷ್ಣ ಇದ್ದಂತೆ ಶಿಶುಪಾಲ ಯಾರು ಅಂತ ನಿಮಗೆ ಬಿಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – ಸವಾರರು ಗ್ರೇಟ್‌ ಎಸ್ಕೇಪ್‌

    ಇದಕ್ಕೆಲ್ಲ ಕಾಲವೇ ಉತ್ತರ ಕೊಡುತ್ತದೆ‌. ದೆಹಲಿಯಲ್ಲಿ ಹೈಕಮಾಂಡ್ ಮಾತನಾಡಿದೆ. ಅಲ್ಲಿ ಮಾತನಾಡಿದ ಮೇಲೆ ಇಲ್ಲಿ ಬಂದು ಮಾತನಾಡುವಂತದ್ದು ಏನಿದೆ..? ಯಾರೂ ಮಾತನಾಡಬಾರದು ಅಂತ ಕಾಂಗ್ರೆಸ್ ಅಧ್ಯಕ್ಷರು, ಕೆ.ಸಿ ವೇಣುಗೋಪಾಲ್ ಸಹ ಹೇಳಿದ್ದಾರೆ. ಅವರನ್ನ ಮಂತ್ರಿಮಾಡಿದ್ದು ಹೈಕಮಾಂಡ್, ಅವರನ್ನ ಶಾಸಕರನ್ನ ಮಾಡಿದ್ದು ಹೈಕಮಾಂಡ್, ಕಾಲ ಬಂದಾಗ ಹೈಕಮಾಂಡ್ ತೀರ್ಮಾನ ಮಾಡುತ್ತೆ. ನಾವು ಅಲ್ಲಿ-ಇಲ್ಲಿ ಮಾತನಾಡೋದು ಸರಿಯಲ್ಲ. ನಮಗೂ ಬಿಜೆಪಿಗೂ ಯಾವುದೇ ವ್ಯತ್ಯಾಸ ಇರಲ್ಲ ಎಂದು ಕಿವಿಮಾತು ಹೇಳಿದ್ದಾರೆ. ಇದನ್ನೂ ಓದಿ: ಸಿಬಿಐ ನಿರ್ದೇಶಕರಂತಹ ಕಾರ್ಯನಿರ್ವಾಹಕ ನೇಮಕಾತಿಗಳಲ್ಲಿ ಸಿಜೆಐ ಯಾಕೆ ಭಾಗಿಯಾಗಬೇಕು – ಉಪ ರಾಷ್ಟ್ರಪತಿ ಪ್ರಶ್ನೆ

    ಬಿಜೆಪಿಯಲ್ಲಿ ಏನೇನಾಗ್ತಿದೆ ಎಲ್ಲರಿಗೂ ಗೊತ್ತಿದೆ. ಆರೀತಿ ಇಲ್ಲಿ ಗೊಂದಲ ಮೂಡಿಸೋದು ಬೇಡ. ನಾಯಕರಾದವರು ಪಕ್ಷ ಸಂಘಟನೆ ಮಾಡಬೇಕು. ಪಕ್ಷಕ್ಕೆ ತೊಂದರೆಯಾಗುವಂತೆ ಮಾಡಬಾರದು. ಕಾರ್ಯಾಧ್ಯಕ್ಷನಾಗಿ ನಾನು ಇದನ್ನ ಹೇಳ್ತೇನೆ, ಯಾವುದೇ ಸಮಸ್ಯೆ ಉದ್ಭವವಾಗಲಿ. ಪಕ್ಷ ಇಲ್ಲವೇ ಸರ್ಕಾರದಲ್ಲಿ ಆಗಲಿ ತಕ್ಷಣವೇ ಅದಕ್ಕೆ ಪರಿಹಾರ ಸಿಗಲ್ಲ. ಕಾಲವೇ ಅದಕ್ಕೆ ಉತ್ತರಿಸಬೇಕು. ನಿನ್ನೆ ಏನೇನು ಮಾತನಾಡಿದ್ರು ಎಲ್ಲರಿಗೂ ಗೊತ್ತಿದೆ. ಹೈಕಮಾಂಡ್ ಹೇಳಿ ಕಳಿಸಿದೆ ಹೇಳಿದ ಮೇಲೂ ಈ ರೀತಿ ಮಾತನಾಡಿದರೆ ಹೇಗೆ? ಕಾರ್ಯಕರ್ತರಿಗೆ ಒಂದು ಫ್ಯೂಚರ್‌ ಇದೆ. ಅವರಿಗೂ ಆಸೆಗಳು ಇರುತ್ತವೆ. ಅವರ ಪ್ಯೂಚರ್ ಯಾಕೆ ಹಾಳು ಮಾಡಬೇಕು? ಅಂತ ಪ್ರಶ್ನೆ ಮಾಡಿದ್ದಾರೆ.

  • ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಿಂದ ಕನ್ನಡಿಗರಿಗೆ ದ್ರೋಹ: ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ ಆಕ್ರೋಶ

    ನವದೆಹಲಿ: ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಹ್ಲಾದ್ ಜೋಶಿ (Pralhad Joshi) ಕನ್ನಡಿಗರಿಗೆ ದ್ರೋಹ ಮಾಡುತ್ತಿದ್ದಾರೆ. ದೆಹಲಿಯಲ್ಲಿ ನರೇಂದ್ರ ಮೋದಿ, ಅಮಿತ್ ಶಾ ಅವರ ಓಲೈಸುವ ರಾಜಕೀಯ ಮಾಡುತ್ತಿದ್ದು, ರಾಜ್ಯಕ್ಕೆ ಅವರ ಕೊಡುಗೆ ಶೂನ್ಯ ಎಂದು ರಾಜ್ಯಸಭೆ ಸಂಸದ ಜಿ.ಸಿ ಚಂದ್ರಶೇಖರ್ (G.C.Chandrashekhar) ವಾಗ್ದಾಳಿ ನಡೆಸಿದ್ದಾರೆ.

    ದೆಹಲಿಯಲ್ಲಿ ರಾಜ್ಯಸಭೆ ಸಭಾಪತಿ ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆಡಳಿತ ಪಕ್ಷಕ್ಕಿಂತ ಕಲಾಪ ವಿರೋಧ ಪಕ್ಷಕ್ಕೆ ಮುಖ್ಯ. ಜನಪರ ಧ್ವನಿ ಎತ್ತಲು ಕಲಾಪ ನಮಗೆ ವೇದಿಕೆ. ಆದರೆ, ನಮಗೆ ಇಲ್ಲಿ ಅವಕಾಶ ಸಿಗುತ್ತಿಲ್ಲ. ಧನ್ಕರ್ ಅವರ ಅವಧಿಯಲ್ಲಿ ಹೆಚ್ಚು ಕಾಲ ಕಲಾಪ ಮುಂದೂಡಿಕೆಯಾಗಿದೆ. ಇದನ್ನೂ ಓದಿ: ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

    ವೆಂಕಯ್ಯನಾಯ್ಡು ಅವರು ಹೀಗೆ ತಾರತಮ್ಯ ಮಾಡಿರಲಿಲ್ಲ. ಅವರು ನ್ಯಾಯಾಧೀಶರ ರೀತಿ ವರ್ತಿಸಬೇಕು. ಆದರೆ, ಅವರು ಆಡಳಿತ ಪಕ್ಷಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರಿಗೆ ಮೈಕ್ ಆನ್ ಮಾಡಲ್ಲ, ಕ್ಯಾಮೆರಾದಲ್ಲಿ ತೋರಿಸಲ್ಲ. ಎಲ್ಲ ಸದಸ್ಯರಿಗೂ ತಮ್ಮದೇ ಆದ ಗೌರವ ಇರುತ್ತೆ. ಎಲ್ಲರಿಗೂ ಇಲ್ಲಿ ಗೌರವ ಕೊಡಬೇಕು. ನಮ್ಮದು ಬಹುಮತ ಇಲ್ಲ ಅಂತಾ ಅವಿಶ್ವಾಸ ಮಂಡನೆ ಮಾಡಬಾರದು ಅಂತಲ್ಲ. ಜನ ವಿರೋಧಿ ನೀತಿಗಳನ್ನು ಖಂಡಿಸಲು ನಾನು ನಮ್ಮ ಜವಾಬ್ದಾರಿ ನಿಭಾಯಿಸಬೇಕು. ಸಭಾಪತಿ ಅವರಿಗೆ ಎಚ್ಚರಿಕೆ ನೀಡಲು ನಾವು ಇದನ್ನು ಮಾಡಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ.

    ಕಲಾಪಗಳು ಮುಂದೂಡಿಕೆ ಬಗ್ಗೆ ನಮಗೂ ಬೇಸರ ಇದೆ. ಬಜೆಟ್ ತಯಾರಾಗುವ ಸಮಯ ಇದು. ಈ ಸಮಯದಲ್ಲಿ ಕರ್ನಾಟಕದ ಬಗ್ಗೆ ಗಮನ ಸೆಳೆಯಬೇಕು. ಆದರೆ, ರಾಜ್ಯದ ಕೇಂದ್ರ ಸಚಿವರು, ಬಿಜೆಪಿ ಸಂಸದರು ಮಾತನಾಡುತ್ತಿಲ್ಲ. ನೀರಾವರಿ ಯೋಜನೆ ಸೇರಿ ಪ್ರಮುಖ ಯೋಜನೆ ಬಗ್ಗೆ ಮಾತನಾಡುತ್ತಿಲ್ಲ. ಪಕ್ಷಪಾತ ಬಿಟ್ಟು ರಾಜ್ಯಕ್ಕೆ ಆಗುವ ಅನ್ಯಾಯ ಖಂಡಿಸಬೇಕಿದೆ. ನಮಗೆ ಮಾತನಾಡಲು ಬಿಡುತ್ತಿಲ್ಲ. ಆಡಳಿತದಲ್ಲಿರುವ ಬಿಜೆಪಿ ನಾಯಕರಾದರೂ ರಾಜ್ಯದ ಬಗ್ಗೆ ಮಾತನಾಡಬೇಕು ಅವರು ಮಾತನಾಡುತ್ತಿಲ್ಲ. ಇದನ್ನೂ ಓದಿ: ರಾಜ್ಯದಲ್ಲಿ 3 ಸಾವಿರ ಹೊಸ ಅಂಗನವಾಡಿ ಸ್ಥಾಪನೆಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ- ಲಕ್ಷ್ಮಿ ಹೆಬ್ಬಾಳ್ಕರ್

    ಪ್ರಹ್ಲಾದ್ ಜೋಶಿ ಹಿರಿಯ ಸಚಿವರಾಗಿದ್ದಾರೆ. ಆದರೆ ಅವರು ಮೋದಿ, ಅಮಿತ್ ಶಾ ಖುಷಿಪಡಿಸುವ ಕೆಲಸ ಮಾಡುತ್ತಿದ್ದಾರೆ. ಮಹದಾಯಿಯಿಂದ ಎಷ್ಟು ಜನಕ್ಕೆ ಅನುಕೂಲ, ಅದನ್ನು ಮಾಡುವ ಪ್ರಯತ್ನ ಮಾಡುತ್ತಿಲ್ಲ. ಕೇವಲ ಅಲ್ಲಿಂದ ಇಲ್ಲಿಗೆ ತಂದಿಡುವ ಕೆಲಸ ಮಾಡುತ್ತಿದ್ದಾರೆ. ಓಲೈಕೆ ರಾಜಕೀಯ ಮಾಡುತ್ತಿದ್ದಾರೆ. ಹಿರಿಯ ಸಚಿವರಾಗಿ ಪ್ರಹ್ಲಾದ್‌ ಜೋಶಿ ಕೊಡುಗೆ ಶೂನ್ಯ. ಅವರಿಂದ ಕನ್ನಡಿಗರಿಗೆ ದ್ರೋಹವಾಗುತ್ತಿದೆ ಎಂದು ಹೇಳಿದ್ದಾರೆ.

    ಒಂದು ದೇಶ, ಒಂದು ಚುನಾವಣೆ ಬಗ್ಗೆ ಮಾತನಾಡಿ, ಇದು ಸರಿಯಾದ ಚಿಂತನೆಯಲ್ಲ ಎಂದರು. ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಧಿಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಸಂವಿಧಾನ ರಾಜ್ಯಕ್ಕೆ ನೀಡಿದ ಸ್ವಾತಂತ್ರ್ಯ ಕಿತ್ತುಕೊಳ್ತಿದೆ. ರಾಜ್ಯಗಳನ್ನು ತನ್ನ ಗುಲಾಮಗಿರಿ ವ್ಯಾಪ್ತಿಗೆ ತರುವ ಪ್ರಯತ್ನ ಮಾಡುತ್ತಿದೆ. ದೇಶದಲ್ಲಿ ಇದನ್ನು ಮಾಡುವುದು ಸುಲಭ ಅಲ್ಲ. ಪ್ರತಿ ರಾಜ್ಯಕ್ಕೂ ತನ್ನದೇ ಆದ ವೈವಿಧ್ಯತೆ ಇದೆ. ಅದಕ್ಕೆ ತಕ್ಕಂತೆ ಚುನಾವಣೆ ಮಾಡಬೇಕು.

    ಮೊದಲು ಇದನ್ನು ಸಾರ್ವಜನಿಕ ಚರ್ಚೆಗೆ ಬಿಡಬೇಕು. ಜನರು, ವಿರೋಧ ಪಕ್ಷಗಳು ಒಮ್ಮತಕ್ಕೆ ಬರಬೇಕು. ಬಳಿಕ ಕಮಿಟಿ ಮಾಡಿ, ವರದಿ ಮಾಡಿ ಅಮೇಲೆ‌ ಮಂಡಿಸಬೇಕು. ಹಣಕಾಸು ಉಳಿಬಹುದು ಎನ್ನುವುದು ನಾನು ಒಪ್ಪುವೆ. ಆದರೆ ಇಂದು ಚುನಾವಣೆಗೆ ಎಷ್ಟು ವ್ಯಯವಾಗುತ್ತಿದೆ ಅದನ್ನು ನಿಲ್ಲಿಸಲು ಯಾಕೆ ಕ್ರಮ ತೆಗೆದುಕೊಳ್ಳಬಾರದು? ಅಭ್ಯರ್ಥಿ ಬದಲು ಸರ್ಕಾರ ಹಣ ವ್ಯಯ ಮಾಡಲಿ. ಪ್ರಧಾನಿಯೂ ಎಷ್ಟು ಖರ್ಚು ಮಾಡುತ್ತಾರೆ ಎಂದು ಎಲ್ಲ ಜನರಿಗೆ ಗೊತ್ತಿದೆ. ಈ ಚುನಾವಣಾ ವ್ಯವಸ್ಥೆಯಲ್ಲಿ ಹಣಕಾಸು ಬಳಕೆ ನಿರ್ಬಂಧಿಸಿ. ಆ ಮೇಲೆ ಮುಂದಿನ ಹಂತಕ್ಕೆ ಬರಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಲಮಟ್ಟಿ – ಯಾದಗಿರಿ ರೈಲು ಮಾರ್ಗ ಯೋಜನೆ ಅನುಮೋದನೆಗೆ ಮನವಿ

  • ಕಾಗೇರಿ ಕ್ಷೇತ್ರದಲ್ಲಿ ಮಕ್ಕಳಿಗಾಗಿ ಸೇತುವೆ ನಿರ್ಮಿಸಿದ ರಾಜ್ಯಸಭಾ ಸದಸ್ಯ ಚಂದ್ರಶೇಖರ್‌

    ಕಾಗೇರಿ ಕ್ಷೇತ್ರದಲ್ಲಿ ಮಕ್ಕಳಿಗಾಗಿ ಸೇತುವೆ ನಿರ್ಮಿಸಿದ ರಾಜ್ಯಸಭಾ ಸದಸ್ಯ ಚಂದ್ರಶೇಖರ್‌

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಪ್ರದೇಶಗಳು ಅರಣ್ಯಮಯವಾದ್ದರಿಂದ ಸಮಸ್ಯೆಗಳು ಹೆಚ್ಚು. ಇದನ್ನು ಬಗೆಹರಿಸಬೇಕಾದ ಜನಪ್ರತಿನಿಧಿಗಳು ಮಾತ್ರ ತಮಗೆ ಸಂಬಂಧವಿಲ್ಲ ಎಂಬಂತೆ ಮೂಗು ಮುರಿಯುತ್ತಾರೆ. ಅದರೆ ಬೆಂಗಳೂರಿನ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅವರು ಸೇತುವೆ ನಿರ್ಮಿಸಿ ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ.

    ವಿಧಾನಸಭೆ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಸಂಸದ ಅನಂತಕುಮಾರ್ ಹೆಗಡೆಯವರ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕವಂಚೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಸರಿಮನೆ ಗ್ರಾಮದಲ್ಲಿ ಸುಮಾರು 100 ಕ್ಕೂ ಹೆಚ್ಚು ಮನೆಗಳಿವೆ. ಈ ಊರಿನ ಮಕ್ಕಳು ಶಾಲೆಗೆ ಹೋಗಬೇಕು ಅಂದ್ರೆ ನಾಲ್ಕು ಕಿ.ಮೀ. ನಡೆದು ಹೋಗಬೇಕು. ಈ ಮಾರ್ಗದಲ್ಲಿ ಬಸರಿಮನೆ ಹೊಳೆ ಸಾಗುತ್ತದೆ. ಮಳೆಗಾಲದಲ್ಲಿ ಈ ಹೊಳೆ ತುಂಬಿ ಹರಿಯುವುದರಿಂದ ಅಡಿಕೆ ಹಾಗೂ ಮರದ ಹಲಗೆಯಲ್ಲಿ ನಿರ್ಮಿಸಿದ ಕಾಲು ಸಂಕವೇ ಶಾಲೆಗೆ ಹೋಗುವ ಮಕ್ಕಳಿಗೆ ಜೀವರಕ್ಷಕ.

    ಮಳೆಗಾಲದಲ್ಲಿ ಈ ಮಕ್ಕಳು ಜೀವ ಕೈಯಲ್ಲಿ ಹಿಡಿದು ಸಾಗಬೇಕು. ಹೀಗಾಗಿ ಇಲ್ಲಿನ ಶಾಸಕರು, ಸದ್ಯ ರಾಜ್ಯದ ಸ್ಪೀಕರ್ ಆಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹಾಗೂ ಸಂಸದ ಅನಂತಕುಮಾರ್ ಹೆಗಡೆಗೆ ಸೇತುವೆ ನಿರ್ಮಿಸುವಂತೆ ಮನವಿ ಮಾಡಿದ್ದರು.

    2019ರಲ್ಲಿ ಜಿಲ್ಲಾ ಪಂಚಾಯಿತಿ ಅನುದಾನ ಬಿಡುಗಡೆಯಾದರೂ ಸೇತುವೆ ಮಾತ್ರ ನಿರ್ಮಾಣವಾಗಲಿಲ್ಲ. ಈ ಬಗ್ಗೆ ಸ್ಪೀಕರ್ ಕಾಗೇರಿಗೆ ಹಲವು ಬಾರಿ ಮನವಿ ನೀಡಿದ್ದರು. ಆದರೆ ಕೆಲಸ ಮಾತ್ರ ಪ್ರಾರಂಭ ಆಗಲೇ ಇಲ್ಲ. ಹೀಗಾಗಿ ಅಂದಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ನಿವೇದಿತ್ ಆಳ್ವ ಅವರ ಗಮನಕ್ಕೆ ತಂದಿದ್ದರು.

    ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಕೆಲವು ಅಡೆತಡೆಗಳು ಬಂದಿದ್ದರಿಂದ ಸೇತುವೆ ನಿರ್ಮಿಸಲು ಸಾಧ್ಯವಾಗಲಿಲ್ಲ. ಹಾಗಂತ ಅವರು ಸುನ್ಮನೆ ಕೂರದೆ ತಮ್ಮ ಸ್ನೇಹಿತರಾಗಿದ್ದ ಬೆಂಗಳೂರಿನ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಗಮನಕ್ಕೆ ತಂದು ಸಹಾಯ ಬೇಡಿದ್ದರು. ಖುದ್ದು ಸ್ಥಳಕ್ಕೆ ಬಂದು ಸಮಸ್ಯೆ ಅರಿತ ಅವರು, ತಮ್ಮ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಹತ್ತು ಲಕ್ಷ ರೂ. ಹಣವನ್ನು ಮಂಜೂರು ಮಾಡಿ ಉ.ಕ. ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು.

    ನಿವೇದಿತ್ ಆಳ್ವ ಸಹ ಈ ಬಗ್ಗೆ ಮುತುವರ್ಜಿ ವಹಿಸಿ ಸೇತುವೆ ನಿರ್ಮಾಣ ಆಗುವ ವರೆಗೆ ಪ್ರತಿ ಬಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸುತಿದ್ದರು. ಇದರ ಪ್ರತಿಫಲವಾಗಿ ಇಂದು ಸೇತುವೆ ನಿರ್ಮಾಣವಾಗಿದ್ದು, ಜನ ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರತಿ ವರ್ಷ ಮಳೆಗಾಲದಲ್ಲಿ ಜೀವ ಕೈಯಲ್ಲಿ ಹಿಡಿದು ಭಯದಲ್ಲೇ ಸಾಗುತಿದ್ದ ಮಕ್ಕಳಿಗೆ ಈ ಬಾರಿಯಿಂದ ಮಳೆಗಾಲದ ಭಯ ದೂರವಾಗಿದೆ.