Tag: ಜುನೈದ್

  • ಬೆಂಗಳೂರಿನ ಶಂಕಿತ ಉಗ್ರರಿಗೆ ಗನ್ ಸಪ್ಲೈ ಮಾಡುತ್ತಿದ್ದ ಜಾಡು ಪತ್ತೆ ಹಚ್ಚಿದ ಸಿಸಿಬಿ

    ಬೆಂಗಳೂರಿನ ಶಂಕಿತ ಉಗ್ರರಿಗೆ ಗನ್ ಸಪ್ಲೈ ಮಾಡುತ್ತಿದ್ದ ಜಾಡು ಪತ್ತೆ ಹಚ್ಚಿದ ಸಿಸಿಬಿ

    ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರರ (Suspected Militants) ಬಂಧನ ಪ್ರಕರಣಕ್ಕೆ ಸಂಬಂಧಿಸಿಂತೆ ಸಿಸಿಬಿ (CCB) ಅಧಿಕಾರಿಗಳು ಶಂಕಿತರಿಗೆ ಗನ್ ಸಪ್ಲೈ ಮಾಡಿದಾತನ ಜಾಡನ್ನು ಪತ್ತೆ ಮಾಡಿದ್ದಾರೆ.

    ಜೂನ್‌ನಲ್ಲಿ ತುಮಕೂರು ರಸ್ತೆಯ ಟಿ ಬೇಗೂರಿನಲ್ಲಿ ಗನ್ ಇದ್ದ ಬ್ಯಾಗ್ ಅನ್ನು ಶಂಕಿತ ಉಗ್ರ ರಬ್ಬಾನಿ ಪಡೆದಿದ್ದ. ಜೈಲಲ್ಲಿ ಪರಿಚಯವಾಗಿದ್ದ ಪೋಕ್ಸೋ ಕೇಸ್‌ನ ಆರೋಪಿ ಬ್ಯಾಗ್ ತರ್ತಾನೆ ಎಂದು ಜುನೈದ್ ಹೇಳಿದ್ದ. ಅದರಂತೆ ಆತ ಹೇಳಿದ ವ್ಯಕ್ತಿಯಿಂದ ರಬ್ಬಾನಿ ಗನ್ ಇದ್ದ ಬ್ಯಾಗ್ ಪಡೆದಿದ್ದ. ಈ ಬ್ಯಾಗ್ ಅನ್ನು ರಬ್ಬಾನಿ ತಬ್ರೇಜ್‌ಗೆ ನೀಡಿದ್ದ.

    ಇದೀಗ ಗನ್ ಇರುವ ಬ್ಯಾಗ್ ತಂದು ಕೊಟ್ಟಾತ ಕೂಡಾ ಆರ್‌ಟಿ ನಗರ ಹೆಬ್ಬಾಳ ಕಡೆಯವನು ಎನ್ನುವ ಶಂಕೆ ವ್ಯಕ್ತವಾಗಿದೆ. ಹೆಬ್ಬಾಳದ ಬಳಿ ಆಸ್ಪತ್ರೆಯೊಂದರಲ್ಲಿ ಗನ್ ತಂದುಕೊಟ್ಟವನ ಚಹರೆ ಪತ್ತೆಯಾಗಿದೆ. ಕಪ್ಪು ಬಣ್ಣದ ಕಾರಿನಲ್ಲಿ ಗನ್ ತಂದು ಕೊಟ್ಟಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: KRS ಡ್ಯಾಂ ಬರೋಬ್ಬರಿ 110 ಅಡಿ ಭರ್ತಿ – 48 ಗಂಟೆಯಲ್ಲಿ 5 ಟಿಎಂಸಿ ನೀರು ಒಳಹರಿವು

    ಇದೀಗ ಸಿಸಿಬಿ ಅಧಿಕಾರಿಗಳು ತುಮಕೂರು ರಸ್ತೆಯ ಸಿಸಿಟಿವಿ ಹಾಗೂ ಹೆಬ್ಬಾಳ ಸಿಸಿಟಿವಿಯ ದೃಶ್ಯಗಳನ್ನು ಹೋಲಿಕೆ ಮಾಡಿ ನೋಡುತ್ತಿದ್ದಾರೆ. ಗನ್ ತಂದುಕೊಟ್ಟಾತ ಕೈಗೆ ಸಿಕ್ಕರೆ ಅರ್ಧ ಕೇಸ್ ಪೂರ್ಣಗೊಳ್ಳೋ ಸಾಧ್ಯತೆಯಿದೆ. ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಸಿಕ್ಕಿ ಬೀಳುತ್ತಲೇ 5,000 ರೂ. ಲಂಚವನ್ನು ಜಗಿದು ನುಂಗಿದ ಕಂದಾಯ ಅಧಿಕಾರಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು – ವ್ಯಕ್ತಿ ಅರೆಸ್ಟ್

    ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು – ವ್ಯಕ್ತಿ ಅರೆಸ್ಟ್

    ಮುಂಬೈ: ಭಯೋತ್ಪಾದಕ ಸಂಘಟನೆ ಜೊತೆಗೆ ನಂಟು ಹೊಂದಿದ್ದ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಅಧಿಕಾರಿಗಳು ಬಂಧಿಸಿದ್ದು, ಆರೋಪಿಯನ್ನು ಇಂದು ಪುಣೆಯ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.

    ಬಂಧಿತ ಆರೋಪಿಯನ್ನು ಜುನೈದ್ ಎಂದು ಗುರುತಿಸಲಾಗಿದ್ದು, ಈತ ಬಹಳ ದಿನಗಳಿಂದ ಪುಣೆಯಲ್ಲಿ ನೆಲೆಸಿದ್ದನು. ಆರೋಪಿ ಲಷ್ಕರ್-ಎ-ತೈಬಾ (ಎಲ್‍ಇಟಿ) ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದನು ಮತ್ತು ಎಲ್‍ಇಟಿಗೆ ಭಯೋತ್ಪಾದಕರನ್ನು ಸೇರಿಸಿಕೊಳ್ಳುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದನು. ಇದನ್ನೂ ಓದಿ: ಮನಿ ಡಬಲ್‌ ಮಾಡುತ್ತೇವೆ ಎಂದು ನಂಬಿಸಿ ಮೋಸ ಮಾಡುತ್ತಿದ್ದ ಖದೀಮರ ಬಂಧನ

    ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಸಂಘಟನೆಯ ಐವರು ‘ಹೈಬ್ರಿಡ್’ ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಐವರು ಭಯೋತ್ಪಾದಕರಲ್ಲಿ ಮೂವರು ಕೆಲವು ದಿನಗಳ ಹಿಂದೆ ನಡೆದ ಬಾರಾಮುಲ್ಲಾ ಜಿಲ್ಲೆಯಲ್ಲಿನ ಸರಪಂಚ್ ಹತ್ಯೆಯಲ್ಲಿ ಶಾಮೀಲಾಗಿದ್ದಾರೆ. ಇವರಲ್ಲಿ ಇಬ್ಬರನ್ನು ಸೋಮವಾರ ಶ್ರೀನಗರದಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಪೊಲೀಸರು ಬಂಧಿಸಿದ್ದರೆ, ಉಳಿದ ಮೂವರನ್ನು ಬಾರಾಮುಲ್ಲಾದಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ