ಅಮರಾವತಿ: ತಿರುಮಲದಲ್ಲಿರುವ (Tirumala) ವೆಂಕಟೇಶ್ವರ ದೇವರ ಸನ್ನಿಧಿಯಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಜುಲೈ ತಿಂಗಳಲ್ಲಿಯೇ 129.45 ಕೋಟಿ ರೂ. ಸಂಗ್ರಹವಾಗಿದೆ.ಇದನ್ನೂ ಓದಿ: ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ
2024ರ ಜುಲೈನಲ್ಲಿ 125.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿತ್ತು. ಆದರೆ ಈ ಬಾರಿ 129.45 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ಸಲಕ್ಕಿಂತ 4.09 ಕೋಟಿ ರೂ. ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (TTD) ಮೂಲಗಳು ತಿಳಿಸಿವೆ.
ಬೇಸಿಗೆ ರಜೆ ಮುಗಿದು ಶಾಲಾ-ಕಾಲೇಜುಗಳು ತೆರೆದಿದ್ದರೂ ಕೂಡ ಜುಲೈನಲ್ಲಿ ಭಕ್ತರ ಬರುವಿಕೆಯಲ್ಲಿ ಹೆಚ್ಚಳ ಕಂಡುಬಂದಿದೆ. ಈ ವರ್ಷ ಇಲ್ಲಿಯವರೆಗೆ 23.76 ಲಕ್ಷ ಭಕ್ತರು ತಿರುಪತಿಗೆ ಆಗಮಿಸಿ, ದರ್ಶನ ಪಡೆದುಕೊಂಡಿದ್ದಾರೆ. ಟಿಟಿಡಿ ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ವರ್ಷಕ್ಕಿಂತ ಈ ವರ್ಷ ಭಕ್ತರ ಸಂಖ್ಯೆಯಲ್ಲಿ ಶೇ.7.4ರಷ್ಟು ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಬಹುನಿರೀಕ್ಷಿತ ಯೆಲ್ಲೋ ಲೈನ್ ಮೆಟ್ರೋ ಇಂದಿನಿಂದ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಬೆಂಗಳೂರು: ಜುಲೈನಲ್ಲಿ ವಾಡಿಕೆಗಿಂತ ಹೆಚ್ಚಾಗಿ ಕರ್ನಾಟಕದಲ್ಲಿ (Karnataka Rain) ಮುಂಗಾರು ಮಳೆ (Monsoon Rain) ಸುರಿದಿದೆ.
ಜುಲೈನಲ್ಲಿ 263 ಮಿ.ಮೀ ಮಳೆಯಾಗುವುದು ವಾಡಿಕೆ. ಆದರೆ ಈ ಬಾರಿ ಜುಲೈ 1 ರಿಂದ 30ರ ವರೆಗೆ ರಾಜ್ಯದಲ್ಲಿ 390 ಮಿ.ಮೀ ನಷ್ಟು ಮಳೆ ಸುರಿದಿದೆ. ವಾಡಿಕೆಗಿಂತ 48% ಹೆಚ್ಚಾಗಿ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ. ಇದನ್ನೂ ಓದಿ: Wayanad Landslide : ರಕ್ಷಣಾ ಕಾರ್ಯಾಚರಣೆ ಯಾಕೆ ಕಷ್ಟವಾಗುತ್ತಿದೆ?
ಜೂನ್ನಲ್ಲಿ 199 ಮಿ.ಮೀ ಮಳೆಯಾಗಬೇಕಿತ್ತು. ಆದರೆ 194 ಮಿ.ಮೀ. ಮಳೆಯಾಗುವ ಮೂಲಕ 3% ಕಡಿಮೆ ಮಳೆ ಸುರಿದಿತ್ತು. ಇದನ್ನೂ ಓದಿ: Wayanad Landslides: ಸಿಎಂ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ
ತೆಲುಗಿನ ಖ್ಯಾತ ನಟ ರಾಮ್ ಚರಣ್ (Ram Charan) ಪತ್ನಿ ಉಪಾಸನಾ (Upasana) ಹೆರಿಗೆ ವಿಚಾರ ಹಲವು ದಿನಗಳಿಂದ ಚರ್ಚೆ ಆಗುತ್ತಲೇ ಇದೆ. ರಾಮ್ ಚರಣ್ ಕುಟುಂಬಕ್ಕೆ ಯಾವ ಮಗು ಬರಲಿದೆ ಎನ್ನುವ ಪ್ರಶ್ನೆಯನ್ನು ಕೂಡ ಅಭಿಮಾನಿಗಳು ಕೇಳಿದ್ದರು. ಇದೀಗ ಆ ಕುರಿತು ಸ್ವತಃ ಉಪಾಸನಾ ಅವರೇ ಉತ್ತರಿಸಿದ್ದಾರೆ. ಜುಲೈನಲ್ಲಿ (July) ಹೆರಿಗೆ (Delivery) ಆಗಲಿದೆ ಎಂದು ವೈದ್ಯರು ತಿಳಿಸಿರುವುದಾಗಿ ಅವರು ಹೇಳಿಕೊಂಡಿದ್ದಾರೆ.
ಈ ಹಿಂದೆ ರಾಮ್ ಚರಣ್ ತೇಜ ಅವರ ಮೊದಲ ಮಗುವಿನ ಜನನ (Childbirth) ಯಾವ ದೇಶದಲ್ಲಿ ಆಗಲಿದೆ ಎನ್ನುವ ಕುರಿತು ಚರ್ಚೆ ನಡೆದಿತ್ತು. ಅಮೆರಿಕಾದಲ್ಲೇ ಅವರು ಮೊದಲ ಮಗುವಿನ ಜನನಕ್ಕೆ ತಯಾರಿ ಮಾಡಿಕೊಂಡಿದ್ದಾರೆ ಎಂದು ಸುದ್ದಿ ಆಗಿತ್ತು. ರಾಮ್ ಚರಣ್ ಪತ್ನಿ ಉಪಾಸನಾ ಅವರ ಸಲಹೆ ಮೇರೆಗೆ ಇಂಥದ್ದೊಂದು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಹೇಳಲಾಗಿತ್ತು. ಇದೆಲ್ಲ ಊಹಾಪೋಹಗಳಿಗೂ ಉಪಾಸನಾ ಉತ್ತರಿಸಿದ್ದಾರೆ.
ರಾಮ್ ಚರಣ್ ಪತ್ನಿ ಉಪಾಸನಾ ಈ ಕುರಿತು ಮಾಹಿತಿಯನ್ನು ಹಂಚಿಕೊಂಡಿದ್ದು, ‘ಅಮೆರಿಕಾದಲ್ಲಿ ಹೆರಿಗೆಗೆ ತಯಾರಿ ಮಾಡಿಕೊಂಡಿದ್ದೇವೆ ಎನ್ನುವ ಸುದ್ದಿ ಸುಳ್ಳು. ಅದು ಯಾಕೆ ಈ ರೀತಿ ಹಬ್ಬಿತೋ ಗೊತ್ತಿಲ್ಲ. ನಮ್ಮ ಮಗುವಿನ ಜನನ ಭಾರತದಲ್ಲೇ ಆಗಲಿದೆ. ಸುಳ್ಳು ಸುದ್ದಿಗಳನ್ನು ನಂಬಬೇಡಿ’ ಎಂದಿದ್ದಾರೆ. ಭಾರತದಲ್ಲೇ ನಮ್ಮ ಮಗು ಜನಿಸಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ:ನಯನತಾರಾ ಬಗ್ಗೆ ಕನ್ನಡದ ‘ಗೂಳಿ’ ನಟಿ ಶಾಕಿಂಗ್ ಹೇಳಿಕೆ
ಹಾಲಿವುಡ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವುದಕ್ಕಾಗಿ ರಾಮ್ ಚರಣ್ ಅಮೆರಿಕಾಗೆ ಹೋಗಿದ್ದರು. ಅಲ್ಲಿ ವಾಹಿನಿಯೊಂದರ ಸಂದರ್ಶನದಲ್ಲಿ ಮೊದಲ ಮಗುವಿನ ಜನನದ ಕುರಿತು ಮಾತನಾಡಿದ್ದಾರೆ. ಪತ್ನಿಯ ಹೆರಿಗೆಗಾಗಿ ಸಿದ್ಧರಾಗಿ ಎಂದು ವೈದ್ಯರೊಬ್ಬರಿಗೆ ಹೇಳಿದ್ದರು. ಈ ಕಾರಣದಿಂದಾಗಿಯೇ ಗೊಂದಲ ಮೂಡಿತ್ತು. ಅಮೆರಿಕಾದಲ್ಲೇ ಉಪಾಸನ ಮಗುವಿಗೆ ಜನ್ಮ ನೀಡಲಿದ್ದಾರೆ ಎನ್ನಲಾಗಿತ್ತು.
ರಾಮ್ ಚರಣ್ ಮತ್ತು ಉಪಾಸನಾ ದಂಪತಿ ತಡವಾಗಿ ಮಗು ಮಾಡಿಕೊಳ್ಳಲು ನಿರ್ಧರಿಸಿದ್ದರು. ಹಲವು ವರ್ಷಗಳ ನಂತರ ಉಪಾಸನಾ ಮಡಿಲಿಗೆ ಮಗು ಬರುತ್ತಿದೆ. ಹಾಗಾಗಿ ಸಹಜವಾಗಿಯೇ ದೊಡ್ಡ ಆಸ್ಪತ್ರೆಯಲ್ಲೇ ಮಗುವಿನ ಜನನ ಆಗಲಿದೆ ಎಂದು ಊಹಿಸಲಾಗಿತ್ತು. ಅಮೆರಿಕಾ ವೈದ್ಯರ ಬಗ್ಗೆ ರಾಮ್ ಚರಣ್ ಮಾತನಾಡಿದ್ದರಿಂದ, ಅಮೆರಿಕಾದಲ್ಲಿ ಮಗುವಿನ ಜನನ ಆಗಲಿದೆ ಎಂದು ಅಂದಾಜಿಸಲಾಗಿತ್ತು. ಇದೆಲ್ಲದಕ್ಕೂ ಉಪಾಸನಾ ಪ್ರತಿಕ್ರಿಯಿಸಿದ್ದಾರೆ.
ಮಡಿಕೇರಿ: ಕೊರೊನಾದಿಂದಾಗಿ ಇನ್ನೂ ಶಾಲೆಗಳು ಆರಂಭವಾಗಿಲ್ಲ. ಜುಲೈನಿಂದಾದರೂ ಆರಂಭ ಮಾಡುವುದು ಒಳ್ಳೆಯದು ಎಂದು ಮೈಸೂರು ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಹೇಳಿದರು.
ಕೊಡಗಿನ ಜಂಬೂರಿನಲ್ಲಿ 2018ರ ಪ್ರವಾಹ ಸಂತ್ರಸ್ಥರಿಗೆ ನಿರ್ಮಾಣವಾಗಿರುವ ಮನೆಗಳ ಹಸ್ತಾಂತರ ಮಾಡುವ ಕಾರ್ಯಕ್ರಮದ ಸಂದರ್ಭ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಕೋವಿಡ್ ಟೆಸ್ಟ್ ಮಾಡಿ ಬಳಿಕ ಜುಲೈ ತಿಂಗಳಲ್ಲಿ ಶಾಲೆ ಪ್ರಾರಂಭಿಸುವಂತಾಗಬೇಕು. ಆನ್ ಲೈನ್ ಮೂಲಕ ಎಲ್ಲವನ್ನೂ ಕಲಿಸಲು ಸಾಧ್ಯವಿಲ್ಲ. ಶಾಲೆಯಲ್ಲಿ ಕಲಿಯುವ ರೀತಿಯೇ ಬೇರೆ. ಅಲ್ಲಿ ಕಲಿಯುವ ಶಿಸ್ತು ಎಲ್ಲವನ್ನೂ ಆನ್ಲೈನ್ ನಲ್ಲಿ ಸಾಧ್ಯವೇ ಇಲ್ಲ ಎಂದರು.
ಅಷ್ಟಕ್ಕೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ನಲ್ಲಿ ಕಲಿಯುವುದಕ್ಕೆ ಸ್ಮಾರ್ಟ್ ಫೋನ್ ಅಥವಾ ಲ್ಯಾಪ್ ಟಾಪ್ ಗಳು ಇರುವುದಿಲ್ಲ. ಇದರಿಂದ ಆ ಮಕ್ಕಳ ಕಲಿಕೆಗೆ ಸಮಸ್ಯೆ ಎದುರಾಗುತ್ತದೆ. ಈಗ ಎಲ್ಲಾ ಜಿಲ್ಲೆಗಳಲ್ಲೂ ಕೋವಿಡ್ ಟೆಸ್ಟ್ ಕೇಂದ್ರಗಳಿರುವುದರಿಂದ ಅಲ್ಲಿಯೇ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಮತ್ತು ಪೋಷಕರ ಕೋವಿಡ್ ಟೆಸ್ಟ್ ಮಾಡಿ ಜುಲೈನಲ್ಲಿ ಶಾಲೆ ಆರಂಭಿಸುವಂತೆ ಆಗಬೇಕು ಎಂದರು.
ಬೆಂಗಳೂರು: ಬಾಹ್ಯಾಕಾಶದ ವಿದ್ಯಮಾನ ಜನರಲ್ಲಿ ಆತಂಕವನ್ನ ಹೆಚ್ಚು ಮಾಡಿದೆ ಅನ್ನೋದರಲ್ಲಿ ಅನುಮಾನವೇ ಇಲ್ಲ. ಭೂಮಿ ಮೇಲೆ ನೆಡೆಯುತ್ತಿರೋ ಎಲ್ಲಾ ಅವಘಡಗಳಿಗೂ ನಭೋಮಂಡಲದಲ್ಲಿ ಜರುಗಲಿರೋ ಗ್ರಹಣ ಪ್ರಕ್ರಿಯೆಗೂ ಸಂಬಂಧ ಇದೆ ಅನ್ನೋದೇ ಭೀತಿಯನ್ನ ಹೆಚ್ಚು ಮಾಡಿದೆ. ಜುಲೈನಲ್ಲಿ ಒಂದು ಸೂರ್ಯ ಗ್ರಹಣ, ಮತ್ತೊಂದು ಚಂದ್ರಗ್ರಹಣ ಸಂಭವಿಸಲಿದೆ. 15 ದಿನಗಳ ಅಂತರದಲ್ಲಿ ಎರಡು ಗ್ರಹಣಗಳಿಗೆ ನಭೋಮಂಡಲ ಸಾಕ್ಷಿಯಾಗಲಿದೆ.
ಸೂರ್ಯ ಗ್ರಹಣ:
ಜುಲೈ 2ರಂದು ಸೂರ್ಯಗ್ರಹಣ ಸಂಭವಿಸಲಿದೆ. ತಿಂಗಳ ಪ್ರಾರಂಭದಲ್ಲೇ ಸಂಭವಿಸುವ ಈ ಸೂರ್ಯ ಗ್ರಹಣವು ಒಟ್ಟು 4 ನಿಮಿಷ 33 ಸೆಕೆಂಡ್ಗಳ ಕಾಲ ಸಂಭವಿಸಲಿದೆ. ಕೊನೆಯದಾಗಿ 2017ರ ಆಗಸ್ಟ್ ನಲ್ಲಿ 2 ನಿಮಿಷ 40 ಸೆಕೆಂಡ್ಗಳ ಕಾಲ ಖಗ್ರಾಸ ಸೂರ್ಯ ಗ್ರಹಣ ಆಗಿತ್ತು. ಈ ವರ್ಷದ ಏಕೈಕ ಪೂರ್ಣ ಸೂರ್ಯ ಗ್ರಹಣ ಇದಾಗಿದೆ.
ದಕ್ಷಿಣ ಪೆಸಿಫಿಕ್ ಸಾಗರ, ಚಿಲಿ ಮತ್ತು ಅರ್ಜೆಂಟಿನಾದಲ್ಲಿ ಸಂಪೂರ್ಣವಾಗಿ ಸೂರ್ಯಗ್ರಹಣವು ಗೋಚರವಾಗಲಿದೆ. ದಕ್ಷಿಣ ಅಮೆರಿಕ ಸೇರಿದಂತೆ ಇತರ ಭಾಗಗಳಲ್ಲಿ ಭಾಗಶಃ ಗ್ರಹಣವು ಗೋಚರವಾಗುವ ಸಾಧ್ಯತೆಯಿದೆ. ಪೂರ್ಣ ಸೂರ್ಯಗ್ರಹಣ ಭಾರತೀಯ ಕಾಲಮಾನ ರಾತ್ರಿ 10.25ಕ್ಕೆ ಸಂಭವಿಸಲಿದೆ. ಗ್ರಹಣದ ಮೊದಲ ಒಹಿನೋ ದ್ವೀಪದಲ್ಲಿ ಸ್ಥಳೀಯ ಕಾಲಮಾನ 10.24ಕ್ಕೆ ಆರಂಭವಾಗುತ್ತದೆ. ನಂತರ ಆಗ್ನೇಯದ ಕಡೆಗೆ ಸಾಗಲಿದೆ.
ದಕ್ಷಿಣ ಅಮೆರಿಕಾದ ಒಹಿನೋ ದ್ವೀಪದಲ್ಲಿ ಈ ಗ್ರಹಣ ಮೊದಲು ಗೋಚರವಾಗಲಿದೆ. ಖಗೋಳ ಶಾಸ್ತ್ರಜ್ಞರ ಪ್ರಕಾರ ಇಲ್ಲಿ ಸುಮಾರು 2 ನಿಮಿಷ 53 ಸೆಕೆಂಡ ಕಾಣಿಸಿಕೊಳ್ಳಲಿದೆ ಎಂದು ಅಂದಾಜಿಸಿದ್ದಾರೆ. ಆದಾದ ಬಳಿಕ ಗಲಪೊಗಾಸ್ ದ್ವೀಪದಲ್ಲಿ ಗ್ರಹಣ ಗೋಚರ ಕೊನೆಯಾಗಲಿದೆ. ಇಲ್ಲಿ ಸುಮಾರು 4 ನಿಮಿಷ 23 ಸೆಕೆಂಡ್ ಸಮಯದಷ್ಟು ಗ್ರಹಣ ಕಾಣಿಸಿಕೊಳ್ಳಲಿದೆ. ಈ ಮಧ್ಯೆ ಚಿಲಿ, ಅರ್ಜೆಂಟಿನಾದಂಥಾ ದೇಶಗಳಿಗೂ ಅಲ್ಪ ಸ್ವಲ್ಪ ದರ್ಶನ ಸೂರ್ಯಗ್ರಹಣ ನೀಡಲಿದೆ.
ಚಂದ್ರ ಗ್ರಹಣ:
ಜುಲೈ 17ರಂದು ಚಂದ್ರಗ್ರಹಣ ಸಂಭವಿಸಲಿದೆ. ಈ ಬಾರಿಯ ಚಂದ್ರಗ್ರಹಣ ಬಹುತೇಕ ಎಲ್ಲ ರಾಷ್ಟ್ರಗಳಲ್ಲಿಯೂ ಗೋಚರವಾಗಲಿದೆ. ಭಾರತದಲ್ಲಿಯೂ ಜುಲೈ 17 ಅಂದ್ರೆ 16ರ ಮಧ್ಯ ರಾತ್ರಿ ಸುಮಾರು 1.51 ನಿಮಿಷದ ಆಸುಪಾಸಿನಲ್ಲಿ ಗ್ರಹಣ ಗೋಚರಿಸಲಿದೆ.
ಏಷ್ಯಾ, ಯುರೋಪ್ ರಾಷ್ಟ್ರಗಳಲ್ಲಿ ಪೂರ್ಣ ಪ್ರಮಾಣದ ಚಂದ್ರಗ್ರಹಣ ಗೋಚರವಾಗಲಿದೆ. ಉಳಿದಂತೆ ಆಸ್ಟ್ರೇಲಿಯಾ, ಆಫ್ರಿಕಾ, ಉತ್ತರ/ಈಶಾನ್ಯ ಅಮೆರಿಕಾ, ಪೆಸಿಫಿಕ್, ಅಂಟ್ಲಾಟಿಕ್, ಭಾರತದ ಸಾಗರಗಳಲ್ಲಿಯೂ ಚಂದ್ರ ಗ್ರಹಣ ಕಾಣಬಹುದಾಗಿದೆ. ಬೆಂಗಳೂರಲ್ಲಿ ಜುಲೈ 16ರ ಮಧ್ಯರಾತ್ರಿ (ಜುಲೈ 17) 1.51ಕ್ಕೆ ಆರಂಭಗೊಂಡು ಬೆಳಗಿನ ಜಾವ 5 ಗಂಟೆ 47 ನಿಮಿಷಕ್ಕೆ ಕೊನೆಯಾಗಲಿದೆ. ಒಂದು ವೇಳೆ ಆಕಾಶವು ಮೋಡಗಳಿಂದ ಕೂಡಿದ್ರೆ ಚಂದ್ರಗ್ರಹಣ ದರ್ಶನ ಸಿಗಲಾರದು.