Tag: ಜೂನಿಯರ್ ಎನ್.ಟಿ.ಆರ್

  • ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಆರ್‌ಆರ್‌ಆರ್‌ ಸಕ್ಸಸ್ ಪಾರ್ಟಿ- ರಾಕಿ ಸಾವಂತ್ ಸೊಂಟದಲ್ಲಿ ಗನ್

    ಬಾಲಿವುಡ್ ಮಂದಿಗಾಗಿಯೇ ಆರ್.ಆರ್.ಆರ್ ಸಿನಿಮಾ ತಂಡ ಸಕ್ಸಸ್ ಪಾರ್ಟಿ ಆಯೋಜನೆ ಮಾಡಿತ್ತು. ಈ ಸಂದರ್ಭದಲ್ಲಿ ಆರ್.ಆರ್.ಆರ್ ಸಿನಿಮಾ ತಂಡ ಮತ್ತು ಬಾಲಿವುಡ್ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಭಾಗಿಯಾಗಿದ್ದರು. ಆಮೀರ್ ಖಾನ್, ಕರಣ್ ಜೋಹಾರ್, ಜಾವೇದ್ ಅಖ್ತರ್, ದಿ ಕಾಶ್ಮೀರ್ ಫೈಲ್ಸ್ ನಟ ದರ್ಶನ್ ಸಿಂಗ್, ತುಷಾರ್ ಕಪೂರ್ ಹೀಗೆ ಬಾಲಿವುಡ್ ದಿಗ್ಗಜರೇ ಈ ಪಾರ್ಟಿಗೆ ಬಂದಿದ್ದರು. ಯಾರೇ ದಿಗ್ಗಜರು ಬಂದಿದ್ದರೂ, ಅಲ್ಲಿ ಫಳಫಳ ಹೊಳೆದದ್ದು ಮಾತ್ರ ಮಾದಕ ನಟಿ ರಾಕಿ ಸಾವಂತ್. ಇದನ್ನೂ ಓದಿ : ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

    ಪಾರ್ಟಿಗೆ ಅವರು ಬಂದಿದ್ದ ಲುಕ್ಕೇ ವಿಭಿನ್ನವಾಗಿತ್ತು. ತುಂಬಾ ಬೋಲ್ಡ್ ಆಗಿ ಕಾಣುವಂತಹ ರೆಡ್ ಡ್ರೆಸ್ ನಲ್ಲಿ ರಾಕಿ ಆಗಮಿಸಿ, ಎಲ್ಲರ ಗಮನ ಸೆಳೆದರು. ಬರೀ ಕಾಸ್ಟ್ಯೂಮ್ ಮಾತ್ರವಲ್ಲ, ಗೋಲ್ಡನ್ ಕಲರ್ ನಿಂದ ಹೆಣೆಯಲ್ಪಟ್ಟ ಕೇಶ ವಿನ್ಯಾಸ ಮತ್ತು ಸೊಂಟದಲ್ಲಿ ಹಾಕಿಸಿಕೊಂಡಿದ್ದ ರಿವಲ್ವಾರ್ ಟ್ಯಾಟೋ ಕ್ಯಾಮೆರಾಗಳು ಕಣ್ಣಿಗೆ ಆಹಾರವಾಗಿದ್ದಂತೂ ಸುಳ್ಳಲ್ಲ. ಹಾಗಂತ ರಾಕಿ ಸುಮ್ಮನೆ ಕುಳಿತುಕೊಳ್ಳಲಿಲ್ಲ. ಅಲ್ಲಿಗೆ ಬಂದಿದ್ದ ಅಷ್ಟೂ ಸಿಲಿಬ್ರಿಟಿಗಳ ಜತೆ ಫೋಟೋ ತಗೆಸಿಕೊಂಡರು. ತಮಾಷೆ ಮಾಡಿಕೊಂಡು ಇಡೀ ಪಾರ್ಟಿಗೆ ಕಳೆ ತಂದಿದ್ದಾರೆ. ಇದನ್ನೂ ಓದಿ: RGV ನಿರ್ದೇಶನದ ಲೆಸ್ಬಿಯನ್ ಸಿನಿಮಾ ಬಿಡುಗಡೆ ಮುಂದೂಡಿಕೆ

    ರಾಕಿಯ ಉತ್ಸಾಹ ಕಂಡು ಎಲ್ಲರೂ ದಂಗಾಗಿದ್ದರು. ಅಲ್ಲದೇ, ತಾನು ಸೊಂಟದಲ್ಲಿ ಬರೆಯಿಸಿಕೊಂಡಿದ್ದ ಗನ್ ಟ್ಯಾಟೋವನ್ನು ಎಲ್ಲರಿಗೂ ತೋರಿಸುವುದೇ ಆ ಸಂದರ್ಭದಲ್ಲಿ ಅವರ ಕಾಯಕವಾಗಿತ್ತು. ಬಂದವರಿಗೆಲ್ಲ ಟ್ಯಾಟೋ ತೋರಿಸಿ, ಮನರಂಜನೆ ನೀಡುತ್ತಿದ್ದರು ರಾಕಿ ಸಾವಂತ್. ಇದನ್ನೂ ಓದಿ: ನನ್ನ ಹತ್ತಿರ ಡೇಂಜರ್ಸ್ ಹುಡುಗೀರು ಇದ್ದಾರೆ- ರಾಜಮೌಳಿಗೆ ರಾಮ್ ಗೋಪಾಲ್ ವರ್ಮಾ ಹೀಗಂದಿದ್ಯಾಕೆ..?

    ಈಗಾಗಲೇ ಆರ್.ಆರ್.ಆರ್ ಸಿನಿಮಾ ವಿಶ್ವದಾದ್ಯಂತ ಭಾರೀ ಗೆಲುವು ಕಂಡಿದೆ. ಇನ್ನೇನು ಸದ್ಯದಲ್ಲೇ 1000 ಕೋಟಿ ಕ್ಲಬ್ ಕೂಡ ಸೇರಲಿದೆ. ಹಿಂದಿಯಲ್ಲೂ ಭರ್ಜರಿ ಹಿಟ್ ಆಗಿದೆ. ಹಾಗಾಗಿ ಇಡೀ ತಂಡ ಬಾಲಿವುಡ್ ಮಂದಿಗೆ ಪಾರ್ಟಿ ಆಯೋಜನೆ ಮಾಡಿತ್ತು. ರಾಮ್ ಚರಣ್ ತೇಜ್, ರಾಜಮೌಳಿ, ಜೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರ ತಂಡವೇ ಅಲ್ಲಿತ್ತು.

  • ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ಆರ್.ಆರ್.ಆರ್ : ಬಾಕ್ಸ್ ಆಫೀಸ್ ಗಳಿಕೆ ಸುಳ್ಳು ಸುಳ್ಳು ಎಂದ ಬಾಲಿವುಡ್ ಖಾನ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಧೂಳ್ ಎಬ್ಬಿಸಿದೆ. ಈವರೆಗಿನ ಎಲ್ಲಾ ದಾಖಲೆಗಳನ್ನು ಅದು ಮುರಿದು ಮುನ್ನುಗ್ಗುತ್ತಿದೆ. ಹತ್ತಿರ ಹತ್ತಿರ ಸಾವಿರ ಕೋಟಿ ಸಮೀಪಕ್ಕೆ ಸಿನಿಮಾ ಬರುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ, ಬಾಲಿವುಡ್ ನ ಸ್ವಯಂ ವಿಮರ್ಶಕ ಕಮಲ್ ಆರ್ ಖಾನ್ ಹೇಳುವುದೇ ಬೇರೆ. ಇದನ್ನೂ ಓದಿ: ಲಹರಿ ಸಂಸ್ಥೆ ಹೊರ ತಂದ ರಿಕ್ಕಿ ಕೇಜ್‌ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮ ನಿರ್ದೇಶನ

    ಭಾರತೀಯ ಬಹುತೇಕ ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗಿದ್ದು, ಇತರ ದೇಶಗಳ ಭಾಷೆಗಳಿಗೂ ಅದು ಡಬ್ ಆಗಿ ಬಿಡುಗಡೆ ಆಗಿದೆ. ಮೊದಲ ಮೂರು ದಿನಗಳ ಗಳಿಕೆಯಲ್ಲೇ ಅದು ದಾಖಲೆ ನಿರ್ಮಿಸಿತ್ತು. ರಿಲೀಸ್ ಆದ ವಾರದೊಳಗೆ ಹಿಂದಿಯೊಂದರಲ್ಲೇ ಅದು ನೂರು ಕೋಟಿ ಕ್ಲಬ್ ಸೇರಿ ಆಗಿದೆ. ಆದರೆ, ಅದೆಲ್ಲ ಸುಳ್ಳು ಪ್ರಚಾರ ಎಂದು ಕಮಲ್ ಟ್ವೀಟ್ ಮಾಡಿದ್ದಾರೆ. ಓದಿ: ನನ್ನಮ್ಮ ಸೂಪರ್ ಸ್ಟಾರ್’ ಯಶಸ್ಸಿನ ಗರಿಯನ್ನ ಮುಡಿಗೇರಿಸಿಕೊಂಡ ಬಿಜ್ಲಿ ಪಟಾಕಿ ವಂಶಿಕಾ – ಯಶಸ್ವಿನಿ

    ಬಾಲಿವುಡ್ ನ ಸ್ವಯಂ ವಿಮರ್ಶಕ ಖ್ಯಾತಿಯ ಈ ಕಮಲ್ ಆರ್ ಖಾನ್ ಇಂತಹ ಅಚ್ಚರಿಯ ಹೇಳಿಕೆಯನ್ನು  ಕೊಡುವುದು ಇದೇ ಮೊದಲೇನೂ ಅಲ್ಲ. ಬಾಲಿವುಡ್ ನ ಬಹುತೇಕ ಸ್ಟಾರ್ ನಟ ನಟಿಯರನ್ನು ಕಾಲೆಳೆದು ಕಂಗೆಣ್ಣಿಗೆ ಗುರಿಯಾದವರು ಇವರು. ನಿರ್ದೇಶಕರನ್ನೂ, ನಿರ್ಮಾಪಕರನ್ನೂ ಬಿಡದೇ ತಮ್ಮದೇ ಆದ ರೀತಿಯಲ್ಲಿ ಕಟುವಾಗಿ ಟೀಕಿಸುತ್ತಲೇ ಇರುತ್ತಾರೆ ಕಮಲ್. ಇದೀಗ ಆರ್.ಆರ್.ಆರ್ ವಿಷಯದಲ್ಲೂ ಅದನ್ನೇ ಮಾಡಿದ್ದಾರೆ.

     

    ‘ನನ್ನ ಪ್ರಕಾರ ಆರ್.ಆರ್.ಆರ್ ಸಿನಿಮಾವನ್ನು ಜನರು ತಿರಸ್ಕರಿಸಿದ್ದಾರೆ. ಅಷ್ಟೊಂದು ಪ್ರಮಾಣದಲ್ಲಿ ಬಾಕ್ಸ್ ಆಫೀಸ್ ತುಂಬುವುದಕ್ಕೆ ಹೇಗೆ ಸಾಧ್ಯ? ನಿರ್ಮಾಪಕರು ಮತ್ತು ನಿರ್ದೇಶಕರು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೇ, ಈ ಸಿನಿಮಾ 680 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದೆ ಎಂದು ಹೇಳಲಾಗುತ್ತಿದೆ. ಅದು ಕೂಡ ಸುಳ್ಳು. ಜನರಿಗೆ ಬಜೆಟ್ ಅರ್ಥವಾಗಲ್ಲ. ಆ ಪ್ರಮಾಣದಲ್ಲಿ ಈ ಚಿತ್ರಕ್ಕೆ ಹಣ ಹೂಡಿಲ್ಲ ಎಂದು ಮುಂದಿನ ದಿನಗಳಲ್ಲಿ ಸಾಬೀತು ಮಾಡುವುದಾಗಿ’ ನಮ್ಮ ಟ್ವಿಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಕೆಜಿ ತೂಕದ ಕಾಸ್ಟ್ಯೂಮ್‌ ಹಾಕಿಕೊಂಡು ಶೂಟ್ ಮಾಡಿದ್ದು ಕಷ್ಟವಾಗಿತ್ತು ಎಂದ ಮುನ್ನಾಭಾಯಿ

    ಕಮಲ್ ಈ ರೀತಿ ಟ್ವಿಟ್ ಮಾಡುತ್ತಿದ್ದಂತೆಯೇ ರಾಜಮೌಳಿ, ರಾಮ್ ಚರಣ್ ತೇಜ, ಜೂನಿಯರ್ ಎನ್.ಟಿ.ಆರ್ ಮತ್ತು ಆಲಿಯಾ ಭಟ್ ಅಭಿಮಾನಿಗಳು ಒಟ್ಟಾಗಿ ಕಮಲ್ ಮೇಲೆ ಮುಗಿಬಿದ್ದಿದ್ದಾರೆ. ಕಮಲ್ ಕುರಿತಾಗಿ ನಿಂದಿಸಿದ್ದಾರೆ. ಕಮಲ್ ಯಾರು ಎನ್ನುವುದನ್ನೂ ಕೆಲವರು ಬಿಚ್ಚಿಟ್ಟಿದ್ದಾರೆ. ಈಗಾಗಲೇ ಸಾವಿರ ಕೋಟಿ ಕ್ಲಬ್ ಸೇರುವತ್ತ ದಾಪುಗಾಲು ಇಡುತ್ತಿರುವ ಆರ್.ಆರ್.ಆರ್ ತನ್ನದೇ ದಾಖಲೆ ಮುರಿದು ಮುನ್ನುಗ್ಗುತ್ತಿದೆ. ಅತೀ ಶೀಘ್ರದಲ್ಲೇ ಅದು ಮೈಲುಗಲ್ಲು ಸ್ಥಾಪಿಸಲಿದೆ ಎಂದಿದ್ದಾರೆ ಅಭಿಮಾನಿಗಳು.

  • ಆರ್.ಆರ್.ಆರ್ ನಿಖರ ಗಳಿಕೆ  ರೂ.611ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ಆರ್.ಆರ್.ಆರ್ ನಿಖರ ಗಳಿಕೆ ರೂ.611ಕೋಟಿ: ವಾರಾಂತ್ಯಕ್ಕೆ ಸಾವಿರ ಕೋಟಿ ನಿರೀಕ್ಷೆ

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಗಳಿಕೆಯ ಬಗ್ಗೆ ಹೆಚ್ಚಾಗಿ ಊಹಾಪೋಹಗಳಿಗೆ ಹರಿದಾಡಿದವು. ಒಂದೇ ದಿನಕ್ಕೆ 100 ಕೋಟಿ, ಮೂರೇ ದಿನಕ್ಕೆ 250 ಕೋಟಿ ಎಂಬ ಸುದ್ದಿಯೂ ಬಂತು. ಆದರೆ, ನಿಖರವಾಗಿ ಇಂತಿಷ್ಟೇ ಹಣ ಬಂದಿದೆ ಎಂದು ಅಧಿಕೃತವಾಗಿ ಚಿತ್ರತಂಡವು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಇದೀಗ ನಿರ್ಮಾಪಕರೇ ತಮ್ಮ ಚಿತ್ರದ ಗಳಿಕೆಯ ಬಗ್ಗೆ ಮಾತನಾಡಿದ್ದಾರೆ. ಇದನ್ನೂ ಓದಿ: ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಅಲ್ಲವೆಂದರೆ, ಚೆನ್ನಮ್ಮ, ರಾಯಣ್ಣನೂ ಅಲ್ಲ: ನಟ ಚೇತನ್

    ಬುಧವಾರ ನಿರ್ಮಾಪಕರು ನೀಡಿರುವ ಮಾಹಿತಿಯಂತೆ ಈವರೆಗೂ ಆರ್.ಆರ್.ಆರ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ವಿಶ್ವದಾದ್ಯಂತ ರೂ. 611 ಕೋಟಿಯಂತೆ. ಇದರಲ್ಲಿ ಭಾರತದಿಂದಲೇ 474 ಕೋಟಿ ಸಂಗ್ರಹವಾಗಿದೆ ಎಂದಿದ್ದಾರೆ. ಕೇವಲ ಹಿಂದಿ ಅವತರಣಿಕೆಯಿಂದಲೇ ಬರೋಬ್ಬರಿ 107 ಕೋಟಿ ಹಣ ಬಂದಿದೆಯಂತೆ. ಇದನ್ನೂ ಓದಿ: ತಂದೆ, ತಾತನ ಹೆಸರು ಬಳಸಿಕೊಳ್ಳದೆ ಜಿಪಂ ಸ್ಥಾನ ಗೆಲ್ಲಲಿ: ನಿಖಿಲ್‍ಗೆ ಸುಮಲತಾ ಸವಾಲು

    ಮಾರ್ಚ್ 25 ರಂದು ರಿಲೀಸ್ ಆಗಿರುವ ಈ ಸಿನಿಮಾ ಆರು ದಿನಕ್ಕೆ ಒಟ್ಟು 611 ಕೋಟಿ ರೂಪಾಯಿ ಗಳಿಸಿದ್ದು, ವಾರಾಂತ್ಯಕ್ಕೆ ಸಾವಿರ ಕೋಟಿ ರೂಪಾಯಿ ಮುಟ್ಟುವ ನಿರೀಕ್ಷೆಯಿದೆ ಎನ್ನಲಾಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಿಂದಲೂ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಹಾಗಾಗಿ ಹಣ ಮತ್ತಷ್ಟು ಹರಿದು ಬರಲಿದೆ ಎಂದಿದೆ ಡಿವಿವಿ ಎಂಟರ್ ಟೈನ್ ಮೆಂಟ್ ನಿರ್ಮಾಣ ಸಂಸ್ಥೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ರಿಯಲ್ ಸ್ಟೋರಿ : ಅಕ್ಕಿ ಡ್ರಮ್ ನಲ್ಲಿ ಕೊಲ್ಲಲ್ಪಟ್ಟ ನಿಜವಾದ ಕಾಶ್ಮೀರಿ ಪಂಡಿತ ಇವರು

    ರಾಜಮೌಳಿ ಅವರ ಹಿಂದಿನ ಎಲ್ಲ ಸಿನಿಮಾಗಳಿಗೂ ಹೋಲಿಸಿದರೆ, ಈ ಪ್ರಮಾಣದಲ್ಲಿ ಹಣ ಹರಿದು ಬಂದಿದ್ದು ಇದೇ ಮೊದಲ ಬಾರಿಗೆ. ಬಾಹುಬಲಿ ಚಿತ್ರಕ್ಕಿಂತಲೂ ಬಾಕ್ಸ್ ಆಫೀಸ್ ಕಲೆಕ್ಷನ್ ಆರ್.ಆರ್.ಆರ್ ನಲ್ಲಿ ಜೋರಾಗಿದೆಯಂತೆ. ತಮಿಳು, ಕನ್ನಡ, ತೆಲುಗು, ಹಿಂದಿ ಮಲಯಾಳಂ ಹೀಗೆ ಬಿಡುಗಡೆಯಾದ ಅಷ್ಟೂ ಭಾಷೆಗಳಲ್ಲೂ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಯಶ್ ನಟನೆಯ ಕೆಜಿಎಫ್ ಸಿನಿಮಾ ಮತ್ತು ತಮಿಳಿನ ವಿಜಯ್ ಅವರ ಚಿತ್ರಗಳು ತೆರೆ ಕಾಣುವತನಕ ಯಾವುದೇ ದೊಡ್ಡ ಸಿನಿಮಾಗಳು ರಿಲೀಸ್ ಆಗುತ್ತಿಲ್ಲ. ಹಾಗಾಗಿ ಚಿತ್ರದ ಓಟಕ್ಕೆ ಯಾವುದೇ ಅಡೆತಡೆ ಕಾಣುತ್ತಿಲ್ಲ. ಇದನ್ನೂ ಓದಿ:  ರಶ್ಮಿಕಾ ವೀಡಿಯೋ ನೋಡಿ ಸುಸ್ತಾದ ಅಭಿಮಾನಿಗಳು – ಕೊಡಗಿನ ಬೆಡಗಿಯ ಜಿಮ್ ಕಸರತ್ತು

    ಸ್ವಾತಂತ್ರ್ಯ ಪೂರ್ವದಲ್ಲಿ ಕ್ರಾಂತಿಕಾರಿಗಳಾದ ಕೋಮರಾಮ್ ಭೀಮ್ ಮತ್ತು ಸೀತಾರಾಮ ರಾಜು ಅವರನ್ನು ಹೋಲುವಂತಹ ಕಾಲ್ಪನಿಕ ಕಥೆಗಳನ್ನಾಧರಿಸಿ ಈ ಸಿನಿಮಾ ಮಾಡಿದ್ದಾರೆ ರಾಜಮೌಳಿ. ಹಾಗಾಗಿ ಈ ಸಿನಿಮಾ ಕಥೆಯಿಂದಲೂ ಮತ್ತು ಮೇಕಿಂಗ್ ನಿಂದಲೂ ಗಮನ ಸೆಳೆದಿದೆ.

  • ಹಿಂದಿಯಲ್ಲಿ 100 ಕೋಟಿ ಕ್ಲಬ್ ತಲುಪಿದ ಆರ್.ಆರ್.ಆರ್ : ಯಾವ ದಿನ ಎಷ್ಟು ಲೆಕ್ಕ?

    ಹಿಂದಿಯಲ್ಲಿ 100 ಕೋಟಿ ಕ್ಲಬ್ ತಲುಪಿದ ಆರ್.ಆರ್.ಆರ್ : ಯಾವ ದಿನ ಎಷ್ಟು ಲೆಕ್ಕ?

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ಹಲವು ಭಾಷೆಗಳಲ್ಲಿ ರಿಲೀಸ್ ಆಗಿದೆ. ವಿಶ್ವದಾದ್ಯಂತ ಮೂರೇ ದಿನಕ್ಕೆ 500 ಕೋಟಿ ರೂಪಾಯಿ ಬಾಚಿದ್ದ ಈ ಸಿನಿಮಾ, ಹಿಂದಿಯಲ್ಲಂತೂ ಸಖತ್ ಕಮಾಯಿ ಮಾಡಿದೆ.  ಕೇವಲ ನಾಲ್ಕೇ ದಿನಕ್ಕೆ ಹಿಂದಿಯಲ್ಲಿ ಅದು 100 ಕೋಟಿ ಕ್ಲಬ್ ಸೇರಿದೆ. ಅತೀ ಕಡಿಮೆ ಅವಧಿಯಲ್ಲಿ ನೂರು ಕೋಟಿ ಕ್ಲಬ್ ಸೇರಿದ ದಕ್ಷಿಣದ ಮೊದಲ ಸಿನಿಮಾ ಇದಾಗಿದೆ. ಇದನ್ನೂ ಓದಿ: ‘Lockup’ ಶೋಗೆ ಬರುವಂತೆ ವಿಲ್ ಸ್ಮಿತ್‍ಗೆ ಆಫರ್ ಕೊಟ್ಟ ಕ್ವಿನ್ ಕಂಗನಾ

    ಮೊದಲ ದಿನ 19 ಕೋಟಿ, ಎರಡನೇ ದಿನ 24 ಕೋಟಿ, ಮೂರನೇ ದಿನ 31.5 ಕೋಟಿ ಮತ್ತು ನಾಲ್ಕನೇ ದಿನಕ್ಕೆ 17 ಕೋಟಿ ರೂಪಾಯಿಗಳ ಕೆಲಕ್ಷನ್ ಆಗಿದ್ದು, ಮಂಗಳವಾರ ನೂರು ಕೋಟಿಗೂ ಅಧಿಕ ಹಣ ಆರ್.ಆರ್.ಆರ್ ನಿರ್ಮಾಪಕರ ಜೇಬಿಗೆ ಬೀಳಲಿದೆ. ಇದನ್ನೂ ಓದಿ: ಏಪ್ರಿಲ್ 2ಕ್ಕೆ ಕಿಚ್ಚನ ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್

    ಮೂರು ದಿನದ ವಿಶ್ವದ ಲೆಕ್ಕಾಚಾರ

    ವಿಶ್ವದಾದ್ಯಂತ ಈ ಸಿನಿಮಾ ರಿಲೀಸ್ ಆಗಿದ್ದು, ಕೇವಲ ಭಾರತದಲ್ಲಿ ಮಾತ್ರವಲ್ಲ, ವೀಕೆಂಡ್ ನಲ್ಲಿ ವಿದೇಶದಲ್ಲೂ ಸಖತ್ ಕಮಾಯಿ ಮಾಡಿದೆಯಂತೆ. ಇದೇ ವೇಗದಲ್ಲೇ ಒಂದು ವಾರ ಪ್ರದರ್ಶನ ಕಂಡರೆ, ಒಂದು ವಾರದಲ್ಲಿ ಸಾವಿರ ಕೋಟಿ ಹಣ ಗಳಿಸಿದ ಮೊದಲ ಚಿತ್ರ ಇದಾಗಲಿದೆ. ಇದನ್ನೂ ಓದಿ: ಮೂರು ದಿನಕ್ಕೆ 500 ಕೋಟಿ ಬಾಚಿದ ಆರ್.ಆರ್.ಆರ್: ಬಾಕ್ಸ್ ಆಫೀಸ್ ಚಿಂದಿಚಿತ್ರಾನ್ನ

    ಈ ಸಿನಿಮಾ ಮೊದಲ ದಿನ ಕರ್ನಾಟಕದಲ್ಲಿ 14.5 ಕೋಟಿ ಗಳಿಕೆ ಮಾಡಿದ್ದರೆ, ಆಂಧ್ರ ಪ್ರದೇಶದಲ್ಲಿ 75 ಕೋಟಿ ಗಳಿಸಿತ್ತು. ತಮಿಳು ನಾಡಿನಲ್ಲಿ 10 ಕೋಟಿ, ಕೇರಳದಲ್ಲಿ 4 ಕೋಟಿ, ಹಿಂದಿಯಲ್ಲಿ 14 ಕೋಟಿ, ಉತ್ತರ ಭಾರತದಲ್ಲಿ 25 ಕೋಟಿ, ಹೀಗೆ ಭಾರತದಲ್ಲೇ ಮೊದಲ ದಿನ ಆರ್.ಆರ್.ಆರ್ ಗಳಿಸಿದ ಒಟ್ಟು ಮೊತ್ತ 156 ಕೋಟಿ ಆಗಿತ್ತು. ವಿದೇಶದಲ್ಲೂ ಕೂಡ ಹಿಂದೆ ಬಿದ್ದಿರಲಿಲ್ಲ. ಯುಎಸ್ ನಲ್ಲೇ 42 ಕೋಟಿ ಕಲೆಕ್ಷನ್ ಮಾಡಿತ್ತು. ಬೇರೆ ಬೇರೆ ದೇಶಗಳಿಂದ 25 ಕೋಟಿ ಬಂದಿತ್ತು. ವಿಶ್ವದಾದ್ಯಂತ ಮೊದಲ ದಿನದ ಒಟ್ಟು ಕಲೆಕ್ಷನ್ 223 ಕೋಟಿ ಆಗಿತ್ತು.

  • RRR- ಥಿಯೇಟರ್ ಗೆ ‘ಗನ್’ ತಂದ ಅಭಿಮಾನಿ, ಆಗಿದ್ದೇನು?

    RRR- ಥಿಯೇಟರ್ ಗೆ ‘ಗನ್’ ತಂದ ಅಭಿಮಾನಿ, ಆಗಿದ್ದೇನು?

    ರಾಜಮೌಳಿ ನಿರ್ದೇಶನದ ‘ಆರ್.ಆರ್.ಆರ್’ ಸಿನಿಮಾ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಒಂದು ಕಡೆ ಬಾಕ್ಸ್ ಆಫೀಸ್ ಭರ್ತಿ ಆಗುತ್ತಿದ್ದರೆ, ಮತ್ತೊಂದು ಕಡೆ ಅಭಿಮಾನಿಗಳ ಅತಿರೇಕ ವರ್ತನೆಗಳು ನಡೆಯುತ್ತಿದೆ. ಹೀಗಾಗಿ ಸ್ವತಃ ಆರ್.ಆರ್.ಆರ್ ಚಿತ್ರತಂಡವೇ ತಲೆ ಕೆಡಿಸಿಕೊಂಡು ಕೂತಿದೆ. ಇದನ್ನು ಓದಿ : ಚಂದನವನ ವಿಮರ್ಶಕರ ಪ್ರಶಸ್ತಿ: ರಾಜ್ ಬಿ ಶೆಟ್ಟಿ ಅತ್ಯುತ್ತಮ ನಟ, ಗಾನವಿ ಲಕ್ಷ್ಮಣ್ ನಟಿ, ಉಳಿದ ಪ್ರಶಸ್ತಿ ವಿವರ

    ಸಿನಿಮಾದ ಫಸ್ಟ್ ಶೋಗೆ ಬಂದಿದ್ದ ಚಿತ್ತೂರು ಅಭಿಮಾನಿ ಖುಷಿಯಲ್ಲಿ ಸಂಭ್ರಮಿಸುತ್ತಲೇ ಹೃದಯಾಘಾತವಾಗಿ ತೀರಿಕೊಂಡ. ಆನಂತರ ಆಂಧ್ರದ ಇಬ್ಬರು ಅಭಿಮಾನಿಗಳು ಟಿಕೆಟ್ ಸಿಗಲಿಲ್ಲ ಎಂದು ಬೇಸರದಲ್ಲಿ ಬೈಕ್ ಓಡಿಸಿಕೊಂಡು ಹೋಗುವಾಗ ಅಪಘಾತವಾಗಿ ಜೀವ ಕಳೆದುಕೊಂಡರು. ಇಲ್ಲೊಬ್ಬ ಅಭಿಮಾನಿ ಗನ್ ಸಮೇತ ಚಿತ್ರ ನೋಡಲು ಬಂದು, ಆತಂಕ ಸೃಷ್ಟಿ ಮಾಡಿದ್ದಾನೆ. ಇದನ್ನೂ ಓದಿ : ಕಾಂಗ್ರೆಸ್ ಅವಧಿಯಲ್ಲಿ ನಡೆದ ಭಯೋತ್ಪಾದನೆ ತಿಳಿಯಲು ‘ದಿ ಕಾಶ್ಮೀರ್ ಫೈಲ್ಸ್’ ನೋಡಿ: ಅಮಿತ್ ಶಾ

    ಈ ಘಟನೆ ನಡೆದಿದ್ದು ಆಂಧ್ರ ಪ್ರದೇಶದ ಈಸ್ಟ್ ಗೋಧಾವರಿ ಜಿಲ್ಲೆಯ ಪೀಟಾಪುರಂ ಎಂಬಲ್ಲಿ. ಈ ಊರಿನ ಅನ್ನಪೂರ್ಣ ಚಿತ್ರಮಂದಿರದಲ್ಲಿ ಆರ್.ಆರ್.ಆರ್ ಪ್ರದರ್ಶನದ ವೇಳೆಗೆ ಬಾಲಾಜಿ ಹೆಸರಿನ ಅಭಿಮಾನಿಯೊಬ್ಬ ಗನ್ ತಂದು, ಕ್ಯಾಮೆರಾದ ಮುಂದೆಯೇ ಫೋಸ್ ಕೊಟ್ಟಿದ್ದ. ಥಿಯೇಟರ್ ಒಳಗೆ ಹೋಗಿ ಪರದೆಯ ಮುಂದೆಯೇ ಗನ್ ಹಿಡಿದುಕೊಂಡು ನಿಂತುಬಿಟ್ಟ. ಅದನ್ನು ಮಾಧ್ಯಮಗಳು ಕೂಡ ಪ್ರಸಾರ ಮಾಡಿದವು. ಕ್ಷಣಾರ್ಥದಲ್ಲಿಯೇ ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲೂ ವೈರಲ್ ಆಯಿತು. ಇದನ್ನೂ ಓದಿ: ಫ್ಯಾನ್ಸ್ ಜೊತೆ ‘ಜೇಮ್ಸ್’ ವೀಕ್ಷಿಸಿದ ಶಿವಣ್ಣ ದಂಪತಿ – ಏನ್ ಹೇಳಲಿ ನನ್ನ ತಮ್ಮನ ಆ್ಯಕ್ಟಿಂಗ್ ಬಗ್ಗೆ

    ಫೋಟೋಗಳು ಮತ್ತು ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಅನ್ನಪೂರ್ಣ ಥಿಯೇಟರ್ ಸರಹದ್ದಿನ ಪೀತಾಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಬಾಲಾಜಿಯನ್ನು ವಶಕ್ಕೆ ಪಡೆದಿದ್ದಾರೆ. ಅವನ ಜತೆಗಿದ್ದ ಗನ್ ಅನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈತನಿಗೆ ಗನ್ ಹೇಗೆ ಬಂದಿತು, ಅದರಲ್ಲಿದ್ದ ಗುಂಡುಗಳು ಎಷ್ಟು ಅಪಾಯಕಾರಿ, ಅವನು ಯಾಕೆ ಗನ್ ಅನ್ನು ಥಿಯೇಟರ್ ಗೆ ತಂದ ಹೀಗೆ ಎಲ್ಲಾ ಆಯಾಮಗಳಲ್ಲೂ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದಾರಂತೆ.

  • ಕೆಲವೇ ದಿನಗಳಲ್ಲಿ RRR ಸುತ್ತ ವಿವಾದ ಏಳಬಹುದು: ಖ್ಯಾತ ಜ್ಯೋತಿಷಿ ಭವಿಷ್ಯ

    ಕೆಲವೇ ದಿನಗಳಲ್ಲಿ RRR ಸುತ್ತ ವಿವಾದ ಏಳಬಹುದು: ಖ್ಯಾತ ಜ್ಯೋತಿಷಿ ಭವಿಷ್ಯ

    ಸೆಲೆಬ್ರಿಟಿ ಜ್ಯೋತಿಷಿ ಎಂದೇ ಖ್ಯಾತರಾಗಿರುವ ಪಂಡಿತ್ ಜಗನ್ನಾಥ್ ಗುರೂಜಿ ‘ಆರ್.ಆರ್.ಆರ್’ (RRR) ಸಿನಿಮಾದ ಬಗ್ಗೆ ಶಾಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಬಾಕ್ಸ್ ಆಫೀಸ್ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿರುವ ಇವರು, ಕೆಲವೇ ದಿನಗಳಲ್ಲಿ ಆರ್.ಆರ್.ಆರ್ ಸುತ್ತ ವಿವಾದ ಎದ್ದೇಳಬಹುದು ಎಂದು ಹೇಳುವ ಮೂಲಕ ಅಚ್ಚರಿಗೆ ದೂಡಿದ್ದಾರೆ.

    ಬಾಹುಬಲಿ ಸಿನಿಮಾ ರಿಲೀಸ್ ಆದಾಗ ಇದೇ ಜ್ಯೋತಿಷಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದರು. ಅವರು ಹೇಳಿದ್ದ ಬಹುತೇಕ ಮಾತುಗಳು ನಿಜವೂ ಆಗಿದ್ದವು ಎನ್ನಲಾಗುತ್ತಿದೆ. ಹಾಗಾಗಿ ಆರ್.ಆರ್.ಆರ್ ಸುತ್ತ ಯಾವ ವಿವಾದ ಎದ್ದೇಳಬಹುದು ಎಂದು ತಲೆಕೆಡಿಸಿಕೊಂಡು ಕೂತಿದ್ದಾರೆ ರಾಜಮೌಳಿ‌ (S. S. Rajamouli) ಅಭಿಮಾನಿಗಳು. ಇದನ್ನೂ ಓದಿ : ಅಭಿಮಾನಿಗಳ ಒತ್ತಡಕ್ಕೆ ಕೊನೆಗೂ ಮಣಿದ ‘ವಿಕ್ರಾಂತ್ ರೋಣ’ :ಏಪ್ರಿಲ್ ಮೊದಲ ವಾರದಲ್ಲಿ ಟೀಸರ್

    ಆರ್.ಆರ್.ಆರ್ ಬಾಕ್ಸ್ ಆಫೀಸ್ ಕಲೆಕ್ಷನ್ ಬಗ್ಗೆಯೂ ಮಾತನಾಡಿರುವ ಜಗನ್ನಾಥ್ ಗುರೂಜಿ, ಈವರೆಗೂ ಭಾರತೀಯ ಸಿನಿಮಾ ರಂಗದ ಯಾವ ಚಿತ್ರವೂ ಮಾಡದಷ್ಟು ದುಡ್ಡನ್ನು ಈ ಚಿತ್ರ ಮಾಡಲಿದೆ ಎಂದು ನುಡಿದಿದ್ದಾರೆ. ದಾಖಲೆಯ ರೀತಿಯಲ್ಲಿ ರಾಜಮೌಳಿ ಟೀಮ್ ಗೆ ಹಣ ಹರಿದು ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಇದನ್ನೂ ಓದಿ : ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಸಿನಿಮಾ ರಂಗದ ಅನೇಕರಿಗೆ ಈ ಗುರೂಜಿ ಭವಿಷ್ಯ ಹೇಳುತ್ತಾರೆ. ಅಲ್ಲದೇ, ಕೆಲ ಸಿನಿಮಾಗಳು ರಿಲೀಸ್ ಆದಾಗಲೂ ಇವರು ಮಾತನಾಡಿದ್ದಾರೆ. ಹಾಗಾಗಿ ಗುರೂಜಿ ಮಾತಿಗೆ ಮಹತ್ವ ಬಂದಿದೆ. ಯಾವ ರೀತಿಯಲ್ಲಿ ಈ ಸಿನಿಮಾ ಕಾಂಟ್ರವರ್ಸಿ ಆಗುತ್ತದೆ ಎಂಬ ಲೆಕ್ಕಾಚಾರ ಕೂಡ ತೆಲುಗು ಚಿತ್ರೋದ್ಯಮದಲ್ಲಿ ಶುರುವಾಗಿದೆ.

  • RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    RRR- ಸ್ಟಾರ್ ವಾರ್ ಬೆಂಕಿಗೆ ತಣ್ಣನೆಯ ನೀರು ಸುರಿದ ನಿರ್ದೇಶಕ ರಾಜಮೌಳಿ

    ಭಾರತೀಯ ಸಿನಿಮಾ ರಂಗದಲ್ಲೇ ಸ್ಟಾರ್ ವಾರ್ ಗೆ ತೆಲುಗು ಸಿನಿಮಾ ರಂಗ ಫೇಮಸ್. ಸಮಯ ಸಿಕ್ಕಾಗೆಲ್ಲ ಒಬ್ಬ ಕಲಾವಿದ ಮತ್ತೊಬ್ಬ ಕಲಾವಿದನಿಗೆ ಕಾಲೆಳೆಯುತ್ತಲೇ ಇರುತ್ತಾರೆ. ಸಿನಿಮಾಗಳಲ್ಲಿ ಡೈಲಾಗ್ ಮೂಲಕ ಟಾಂಗ್ ಕೊಡುವ ಸಂಪ್ರದಾಯ ಮೊದಲಿನಿಂದಲೂ ತೆಲುಗು ಚಿತ್ರೋದ್ಯಮದಲ್ಲಿದೆ. ಕೇವಲ ಕಲಾವಿದರು ಮಾತ್ರವಲ್ಲ ಅಭಿಮಾನಿಗಳು ಕೂಡ ಅದೇ ಸಂಪ್ರದಾಯವನ್ನೇ ಮುಂದುವರೆಸಿಕೊಂಡು ಬಂದಿದ್ದಾರೆ. ಇದನ್ನು ಸೂಕ್ಷ್ಮವಾಗಿ ಗಮನಿಸಿದ್ದ ನಿರ್ದೇಶಕ ರಾಜಮೌಳಿ, ಆ ಜೇನುಗೂಡಿಗೆ ಕೈ ಹಾಕಿ ಕಚ್ಚಿಸಿಕೊಳ್ಳದೇ ಭರಪೂರ್ ತುಪ್ಪವನ್ನೇ ಪಡೆದುಕೊಂಡಿದ್ದಾರೆ. ಇದನ್ನೂ ಓದಿ : RRR ಸಿನೆಮಾ ನೋಡಲು ಬಾಗಿಲು ಮುರಿದು ಚಿತ್ರಮಂದಿರಕ್ಕೆ ನುಗ್ಗಿದ ಪ್ರೇಕ್ಷಕರು

    ಜೂನಿಯರ್ ಎನ್.ಟಿ.ಆರ್ ಮತ್ತು ರಾಮಚರಣ್ ತೇಜ ಸಿನಿಮಾಗಳು ಯಾವತ್ತಿಗೂ ಪೈಪೋಟಿ ಮಾಡುತ್ತಿವೆ. ಇಬ್ಬರೂ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿರುವ ನಟರು. ಈ ಹಿಂದಿನ ಸಿನಿಮಾಗಳಲ್ಲಿ ಪಂಚಿಂಗ್ ಡೈಲಾಗ್ ಮೂಲಕ ಒಬ್ಬರನ್ನೊಬ್ಬರು ಟೀಕಿಸಿಕೊಂಡಿದ್ದಾರೆ. ಕಾಲೆಳೆದಿದ್ದಾರೆ. ಟಾಂಗ್ ಕೊಡುವಂತಹ ಡೈಲಾಗ್ ಹೊಡೆದಿದ್ದಾರೆ. ಇಂತಹ ಇಬ್ಬರು ಸ್ಟಾರ್ ನಟರನ್ನು ಒಟ್ಟಾಗಿಸಿ, ಸಂಭಾಳಿಸಿ ‘ಆರ್.ಆರ್.ಆರ್’ ಸಿನಿಮಾ ಮಾಡಿ ಗೆದ್ದಿದ್ದಾರೆ ರಾಜಮೌಳಿ. ಇದನ್ನೂ ಓದಿ: RRR ಬ್ಯಾನ್ ಮಾಡಿದ್ರೆ ಕೆಜಿಎಫ್‍ಗಿದೆ ಕಂಟಕ

    ಈ ಇಬ್ಬರೂ ಅಭಿಮಾನಿಗಳ ನಾಡಿಮಿಡಿತವನ್ನು ಸರಿಯಾಗಿ ಬಳಸಿಕೊಂಡು, ಹಾಗೆಯೇ ಸಿನಿಮಾದಲ್ಲೂ ದೃಶ್ಯಗಳನ್ನು ಹೆಣೆದಿದ್ದಾರೆ. ಆಯಾ ಪಾತ್ರಕ್ಕೆ ಏನೆಲ್ಲ ಬಿಲ್ಡ್ ಅಪ್ ಬೇಕಿತ್ತೋ ಅಷ್ಟನ್ನೂ ದಯಪಾಲಿಸಿದ್ದಾರೆ. ಯಾರ ಅಭಿಮಾನಿಗೂ ನೋವಾಗದಂತೆ ಚಿತ್ರಿಸಿದ್ದಾರೆ. ಹಾಗಾಗಿ ಇಬ್ಬರೂ ಕಲಾವಿದರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಇದನ್ನೂ ಓದಿ: ‘ಗಂಗೂಬಾಯಿ’ ಸಿನಿಮಾ ನೋಡಲು ಇಡೀ ಥಿಯೇಟರ್ ಬುಕ್ ಮಾಡಿದ ಪಾಕ್ ನಟ

    ಥಿಯೇಟರ್ ಒಳಗೆ ಹೀಗಿದ್ದರೆ ಚಿತ್ರಮಂದಿರದ ಹೊರಗೆ ಮತ್ತೊಂದು ರೀತಿಯ ವಾತಾವರಣ ಸೃಷ್ಟಿಯಾಗಿದೆ. ತಮ್ಮ ತಮ್ಮ ನೆಚ್ಚಿನ ನಟರ ಪೋಸ್ಟರ್ ಗೆ ಹಾಲು, ಹೂವು ಹಾಕುವುದು, ಪೂಜೆ ಸಲ್ಲಿಸುವುದು ಇದು ಇದ್ದೇ ಇದೆ. ಕೆಲವು ಕಡೆ ರಾಮ್ ಚರಣ್ ತೇಜ ಅವರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಪ್ರಾಮುಖ್ಯತೆ ಕೊಟ್ಟರೆ, ಮತ್ತೊಂದು ಕಡೆ ಜೂನಿಯರ್ ಎನ್.ಟಿ.ಆರ್ ಗೆ ಮಹತ್ವ ನೀಡಿದ್ದಾರೆ. ಆದರೆ, ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಒಟ್ಟಾಗಿಯೇ ಸಿನಿಮಾ ನೋಡುತ್ತಿದ್ದಾರೆ. ಇಂಥದ್ದೊಂದು ಮಹತ್ವದ ಬದಲಾವಣೆಗೆ ‘ಆರ್.ಆರ್.ಆರ್’ ಕಾರಣವಾಗಿದ್ದಂತೂ ಸುಳ್ಳಲ್ಲ.

    ಕೇವಲ ಸಿನಿಮಾ ಮಾಡಿ ಗೆಲ್ಲುವುದಲ್ಲ, ಸ್ಟಾರ್ ಗಳನ್ನು ನಿಭಾಯಿಸಿಕೊಂಡು ಅಭಿಮಾನಿಗಳನ್ನು ಸಮಾಧಾನಿಸುವುದು ಸಿನಿಮಾ ಗೆಲುವಿಗಿಂತ ದೊಡ್ಡದರು. ಅದರಲ್ಲಿ ರಾಜಮೌಳಿ ಭಾರೀ ಅಂತರದಿಂದ ಗೆದ್ದಿದ್ದಾರೆ.

  • ಜೂನಿಯರ್ NTR ಮನೆಗೆ ಹೊಸ ಅತಿಥಿ ಎಂಟ್ರಿ!

    ಜೂನಿಯರ್ NTR ಮನೆಗೆ ಹೊಸ ಅತಿಥಿ ಎಂಟ್ರಿ!

    ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಜೂನಿಯರ್ ನಂದಮೂರಿ ರಾಮ್ ರಾವ್ ದಂಪತಿಗೆ ಎರಡನೇ ಮಗುವಾಗಿದ್ದು, ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದೆ.

    ನಂದಮೂರಿ ಪತ್ನಿ ಲಕ್ಷ್ಮಿ ಪ್ರಣತಿ ಅವರು ಗುರುವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ದಂಪತಿಗೆ ಈಗಾಗಲೇ ಐದು ವರ್ಷದ ಅಭಯ್ ರಾಮ್ ಮಗನಿದ್ದಾನೆ. ತಮಗೆ ಮಗುವಾದ ಸಂತಸವನ್ನು ಎನ್.ಟಿ.ಆರ್ ಟ್ವಿಟ್ಟರ್ ಮೂಲಕ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೇ `ನನಗೆ ಗಂಡು ಮಗು ಜನಿಸಿದೆ. ನಮ್ಮ ಕುಟುಂಬ ಈಗ ದೊಡ್ಡದಾಗುತ್ತಿದೆ’ ಎಂದು ಬರೆದು ಕೊಂಡಿದ್ದಾರೆ.

    ಈಗಾಗಲೇ ನಂದಮೂರಿ ಅವರ ಎರಡನೇ ಮಗುವಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಒಂದು ಕಡೆ ಮಗುವಿನ ಫೊಟೋ ಮತ್ತೊಂದು ಕಡೆ ಎನ್.ಟಿ.ಆರ್ ಫೋಟೋ ಹಾಕಲಾಗಿದೆ. ಆದರೆ ಆ ಮಗು ಅವರದ್ದ ಇಲ್ಲವಾ ಎಂದು ಖಚಿತ ಮಾಹಿತಿ ತಿಳಿದು ಬಂದಿಲ್ಲ. ಆದರೆ ಮಗುವಿನ ಫೋಟೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.

    2011ರಲ್ಲಿ ಎನ್ ಟಿಆರ್ ಮತ್ತು ಲಕ್ಷ್ಮಿ ಪ್ರಣತಿ ಅವರ ಮದುವೆ ನೆರವೇರಿತ್ತು. ಈ ದಂಪತಿ ಎರಡನೇ ಸಲ ಹೆಣ್ಣು ಮಗುವಿನ ನಿರೀಕ್ಷೆಯಲ್ಲಿದ್ದು, ಆ ಮಗುವಿಗೆ ಎನ್.ಟಿ.ಆರ್ ತಮ್ಮ ಅಜ್ಜಿಯ ಹೆಸರು ಇಡಬೇಕೆಂದು ನಿರ್ಧರಿಸಿದ್ದರು ಈ ಹಿಂದೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು.

    ಎನ್.ಟಿ.ಆರ್ ಟ್ವಿಟ್ಟರ್ ನಲ್ಲಿ ತಂದೆಯಾದ ಬಗ್ಗೆ ಹೇಳಿದ ಕೂಡಲೇ ಅನೇಕ ನಟ-ನಟಿಯರು ಮತ್ತು ಸಿನಿಮಾರಂಗದವರು ಶುಭಾಶಯವನ್ನು ತಿಳಿಸಿದ್ದಾರೆ. ಎನ್ ಟಿಆರ್ ಅನೇಕ ತೆಲುಗು ಸಿನಿಮಾಗಳನ್ನು ಮಾಡಿ ಯಶಸ್ಸುಕಂಡಿದ್ದು, ಟಾಲಿವುಡ್ ನ ಬೇಡಿಕೆಯ ನಟರಾಗಿದ್ದಾರೆ. ಸದ್ಯಕ್ಕೆ ಎನ್.ಟಿ.ಆರ್ `ಅರವಿಂದ ಸಮೇಧಾ’ ಮತ್ತು ರಾಜಮೌಳಿ ನಿರ್ದೇಶನದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

  • ಜೂ.ಎನ್‍ಟಿಆರ್ ನಟನೆಯ `ಜೈ ಲವ ಕುಶ’ ಟ್ರೇಲರ್ ಔಟ್

    ಜೂ.ಎನ್‍ಟಿಆರ್ ನಟನೆಯ `ಜೈ ಲವ ಕುಶ’ ಟ್ರೇಲರ್ ಔಟ್

    ಹೈದರಾಬಾದ್: ಟಾಲಿವುಡ್‍ನ ಬಹು ನಿರೀಕ್ಷಿತ ಜೂನಿಯರ್ ಎನ್.ಟಿ.ಆರ್ ಅಭಿನಯದ `ಜೈ ಲವ ಕುಶ’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.

    ಜೈ ಲವ ಕುಶ ಸಿನಿಮಾ ಮೂವರು ಸಹೋದರರು ನಡುವಿನ ಕಥಾ ಹಂದರವನ್ನು ಒಳಗೊಂಡಿದೆ. ಈಗಾಗಲೇ ಟೀಸರ್ ಮುಖಾಂತರ ಒಂದೊಂದು ಪಾತ್ರದ ಪರಿಚಯ ಮಾಡಿದ್ದ ಚಿತ್ರತಂಡ ಈಗ ಟ್ರೇಲರ್ ಬಿಡುಗಡೆ ಮಾಡಿದೆ. ಸಿನಿಮಾದಲ್ಲಿ ಜ್ಯೂನಿಯರ್ ಎನ್.ಟಿ.ಆರ್ ತ್ರಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜೂ.ಎನ್‍ಟಿಆರ್ ಮೂರು ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳಲು ಸಾಕಷ್ಟು ಶ್ರಮಪಟ್ಟಿದ್ದಾರೆ.

    ಬ್ಯಾಂಕ್ ಕೆಲಸ ಮಾಡುವ ಲವ, ಕಳ್ಳನಾಗಿ ಕುಶ ಮತ್ತು ರಾವಣ್ ಪಾತ್ರದಾರಿಯಾಗಿ ಜೈ ಮೂರು ವಿಭಿನ್ನ ಲುಕ್‍ನಲ್ಲಿ ಜೂ.ಎನ್.ಟಿ.ಆರ್ ನಟಿಸಲಿದ್ದಾರೆ. ಬೇರೆ ಬೇರೆ ವೃತ್ತಿಯಲ್ಲಿರುವ ಈ ಸಹೋದರ ನಡುವೆ ಉಂಟಾಗುವ ಕಥೆಯನ್ನು ಸಿನಿಮಾದಲ್ಲಿ ಕಾಣಬಹುದಾಗಿದೆ. ಮೂರು ಪಾತ್ರಕ್ಕೆ ಡಿಫರೆಂಟ್ ಲುಕ್ ನಲ್ಲಿ ಕಾಣುವಲ್ಲಿ ಹಾಲಿವುಡ್ ಮೇಕಪ್‍ಮನ್ ವ್ಯಾನ್ಸ್ ಹಾರ್ಟ್‍ವೆಲ್ ಅವರ ಕೈ ಚಳಕ ಅಡಗಿದೆ.

    ‘ಜೈ ಲವ ಕುಶ’ ಚಿತ್ರವನ್ನು ಕೆ.ಎಸ್.ರವೀಂದ್ರ ನಿರ್ದೇಶಿಸಿದ್ದಾರೆ. ಎನ್.ಟಿ.ಆರ್ ಅವರೇ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರ ಸೆಪ್ಟೆಂಬರ್ 21ಕ್ಕೆ ಬಿಡುಗಡೆ ಆಗಲಿದೆ. ಈಗಾಗಲೇ ಟ್ರೇಲರ್ ಯೂಟ್ಯೂಬ್ ನಲ್ಲಿ 45 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದೆ.