Tag: ಜೆಜೆ ನಗರ

  • ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ

    ಜೈಲಿನಿಂದ ಬಿಡುಗಡೆಯಾದ ದಿನವೇ ಯುವಕನ ಭೀಕರ ಹತ್ಯೆ

    – ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆದು ಕೃತ್ಯ

    ಬೆಂಗಳೂರು: ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾದ ಯುವಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆನಗರ ಜನತಾ ಕಾಲೋನಿಯಲ್ಲಿ ನಡೆದಿದೆ.

    ವಿಜಯ್(26) ಕೊಲೆಯಾದ ಯುವಕ. ವಿಜಯ್ ಶನಿವಾರವಷ್ಟೇ ಜೈಲಿನಿಂದ ಬಿಡುಗಡೆಯಾಗಿ ಹೊರಬಂದಿದ್ದ. ಇದನ್ನೂ ಓದಿ: ಚಿಕ್ಕಬಳ್ಳಾಪುರ | ಟಿಪ್ಪರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

    ಜೈಲಿನಿಂದ ಹೊರಬಂದಿದ್ದ ವಿಜಯ್‌ನನ್ನು ಹಳೇ ದ್ವೇಷ ಹಿನ್ನೆಲೆ ಮಾತುಕತೆಗೆ ಕರೆಸಿ ದುಷ್ಕರ್ಮಿಗಳು ಶನಿವಾರ ರಾತ್ರಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕ್ಷಿಪಣಿ ದಾಳಿ, ಪ್ರತಿದಾಳಿ – ಇರಾನ್‌, ಇಸ್ರೇಲ್‌ನಲ್ಲಿ 80 ಮಂದಿ ಸಾವು

    ಜೆಜೆ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

  • ಕೈ ನಾಯಕ ಅಲ್ತಾಫ್‌ ಖಾನ್ ಮನೆ ಬಳಿ ಹೊಂಚು ಹಾಕಿದ್ದ ಮೂವರು ವಶಕ್ಕೆ

    ಕೈ ನಾಯಕ ಅಲ್ತಾಫ್‌ ಖಾನ್ ಮನೆ ಬಳಿ ಹೊಂಚು ಹಾಕಿದ್ದ ಮೂವರು ವಶಕ್ಕೆ

    ಬೆಂಗಳೂರು: ಕಾಂಗ್ರೆಸ್ ಮುಖಂಡ ಅಲ್ತಾಫ್‌ ಖಾನ್(Congress Leader Altaf Khan) ಮೇಲೆ ದಾಳಿ ನಡೆಸಲು ಬಂದಿದ್ದಾರೆ ಎನ್ನಲಾದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಶನಿವಾರ ರಾತ್ರಿ 10 ಗಂಟೆಯ ವೇಳೆ ಗೋರಿಪಾಳ್ಯದಲ್ಲಿರುವ ಅಲ್ತಾಫ್‌ ಖಾನ್ ಮನೆ ಬಳಿ ಒಂದು ರಿಕ್ಷಾ ಬಂದಿತ್ತು. ರಿಕ್ಷಾದಲ್ಲಿದ್ದ ವ್ಯಕ್ತಿಗಳು ಬಹಳ ಹೊತ್ತು ಅಲ್ತಾಫ್‌ಗೆ ಕಾದಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಕೆಂಪಣ್ಣ ಅರೆಸ್ಟ್

    ಅಲ್ತಾಫ್‌ ಅವರು ಮನೆಯಿಂದ ಹೊರ ಬಾರದ ಕಾರಣ ಬಚಾವ್ ಆದ ಎಂದು ಗುಂಪು ಮಾತನಾಡಿಕೊಂಡು ಹೋಗುತ್ತಿತ್ತು. ರಿಕ್ಷಾ ನಿಂತ ಕೂಡಲೇ ಅನುಮಾನದಿಂದ ನೋಡುತ್ತಿದ್ದ ಸ್ಥಳೀಯರು ಯುವಕರ ಮಾತುಗಳನ್ನು ಕೇಳಿ ಹಿಂಬಾಲಿಸಿದ್ದಾರೆ.

    ತಮ್ಮನ್ನು ಹಿಂಬಾಲಿಸುವುದನ್ನು ನೋಡಿ ಗುಂಪಿನಲ್ಲಿದ್ದ ಓರ್ವ ಪರಾರಿಯಾಗಿದ್ದು, ಮೂವರನ್ನು ಹಿಡಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ. ರಿಕ್ಷಾವನ್ನು ಜಾಲಾಡಿದಾಗ ಮಾರಕಾಸ್ತ್ರ ಪತ್ತೆಯಾಗಿದೆ. ಜೆ.ಜೆ.ನಗರ ಪೊಲೀಸರು(JJ Nagar Police) ಈಗ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾನು ಇದೇ ಏರಿಯಾದವನು ಏನ್ ಮಾಡ್ತಿಯಾ? – ಚಂದ್ರು ಕೊಲೆ ದಿನ ನಡೆದಿದ್ದು ಏನು?

    ನಾನು ಇದೇ ಏರಿಯಾದವನು ಏನ್ ಮಾಡ್ತಿಯಾ? – ಚಂದ್ರು ಕೊಲೆ ದಿನ ನಡೆದಿದ್ದು ಏನು?

    – ಬೈಕ್ ಡಿಕ್ಕಿಯಾಗಿದ್ದಕ್ಕೆ ಪ್ರಶ್ನೆ ಮಾಡಿದ್ದಕ್ಕೆ ಇರಿದ

    ಬೆಂಗಳೂರು: ಬೈಕ್ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ಚಂದ್ರವನ್ನು ಕೊಲೆ ಮಾಡಲಾಗಿದೆ ಎಂದು ಗೆಳೆಯ ಸೈಮನ್ ಹೇಳಿದ್ದಾರೆ.

    ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಮನ್ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಹಳೇ ಗುಡ್ಡದ ಹಳ್ಳಿಯಲ್ಲಿ ಪುಂಡರ ಪುಂಡಾಟ ಹೇಗಿತ್ತು? ಚಂದ್ರು ಕೊಲೆ ದಿನ ನಿಜವಾಗಿಯೂ ನಡೆದಿದ್ದೇನು ಎಂಬುದನ್ನು ಸೈಮನ್ ದೂರಿನಲ್ಲಿ ಸಂಪೂರ್ಣವಾಗಿ ವಿವರಿಸಿದ್ದಾರೆ. ಇದನ್ನೂ ಓದಿ: ಬೈಕ್‍ಗೆ ಡಿಕ್ಕಿ ಹೊಡೆದಿದ್ದಕ್ಕೆ ಚಂದ್ರು ಕೊಲೆ: ಕಮಲ್ ಪಂಥ್

    ದೂರಿನಲ್ಲಿ ಏನಿದೆ?
    ಏಪ್ರಿಲ್ 4 ಅಂದರೆ ಕಳೆದ ಸೋಮವಾರ ಸೈಮನ್ ರಾಜ್ ಆದ ನನ್ನ ಬರ್ತಡೇ ಇತ್ತು. ರಾತ್ರಿ 12 ಗಂಟೆ ಸಮಯದಲ್ಲಿ ಚಂದ್ರು ನನ್ನ ಬರ್ತಡೇಗೆ ಕೇಕ್ ಕಟ್ ಮಾಡಿಸಿದ್ದ. ನಂತರ ಚಂದ್ರು ನಂಗೆ ಚಿಕನ್ ರೋಲ್ ತಿನ್ನಬೇಕು ಅಂತಾ ಹೇಳಿದ್ದ.

    ಆ ವೇಳೆ ನನ್ನ ಹೋಂಡಾ ಅಕ್ಟೀವಾ ಬೈಕ್ ಕೆಎ 02-ಕೆಜೆ 4195 ರಲ್ಲಿ ಸಿಟಿ ಮಾರ್ಕೆಟ್, ಚಾಮರಾಜಪೇಟೆ ಎಲ್ಲ ಕಡೆ ಚಿಕನ್ ರೋಲ್‍ಗಾಗಿ ಹುಡುಕಾಟ ನಡೆಸಿದ್ದು, ಎಲ್ಲೂ ಕೂಡ ಚಿಕನ್ ರೋಲ್ ಸಿಕ್ಕಿರಲಿಲ್ಲ. ರಂಜಾನ್ ಇರುವ ಕಾರಣ ಗೋರಿಪಾಳ್ಯದಲ್ಲಿ ಚಿಕನ್ ರೋಲ್ ಸಿಗುತ್ತೆ ಅನ್ನೋ ಕಾರಣಕ್ಕೆ ನಸುಕಿನ ಜಾವ 2:15 ರ ಸಮಯದಲ್ಲಿ ಹಳೇ ಗುಡ್ಡದ ಹಳ್ಳಿಗೆ ಹೋಗಿದ್ವಿ.

    ಈ ವೇಳೆ ವೇಗವಾಗಿ ಬಂದ ಬೈಕ್‍ವೊಂದು ನಮ್ಮ ಬೈಕ್‍ಗೆ ಡಿಕ್ಕಿ ಹೊಡೆದಿತ್ತು. ನಾವು ಏರುಧ್ವನಿಯಲ್ಲಿ ಯಾಕೋ ಡಿಕ್ಕಿ ಹೊಡೆದೆ ಅಂತಾ ಕೇಳಿದ್ವಿ. ಇದಕ್ಕೆ ಶಾಹೀದ್ ಎಂಬಾತ, “ಯಾರೋ ನೀವು, ತೇರಿ ಮಾಕಿ ಸೂದ್, ನಾನು ಇದೇ ಏರಿಯಾದವನು ಏನ್ ಮಾಡ್ತಿಯಾ” ಎಂದು ಪ್ರಶ್ನಿಸಿದ. ಜೊತೆಗೆ ಇತರೆ ಹುಡುಗರನ್ನು ಸೇರಿಸಿಕೊಂಡು ಗಲಾಟೆ ಶುರುಮಾಡಿದರು. ಈ ವೇಳೆ ಶಾಹೀದ್ ತನ್ನ ಚಾಕುವಿನಿಂದ ಚಂದ್ರು ತೋಡೆಗೆ ಇರಿದ. ಇದನ್ನೂ ಓದಿ: ಚಂದ್ರು ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಟ್ಟ ಜಮೀರ್

    ಚಂದ್ರು ತೋಡೆಗೆ ಚಾಕು ಇರಿದ ಪರಿಣಾಮ ತೀವ್ರವಾಗಿ ರಕ್ತಸ್ತ್ರಾವ ಆಗಿದ್ದನ್ನು ನೋಡಿ ಶಾಹೀದ್ ಮತ್ತು ಸ್ನೇಹಿತರು ಅಲ್ಲಿಂದ ಓಡಿ ಹೋಗಿದ್ರು. ಈ ಗಲಾಟೆಯಿಂದ ತಪ್ಪಿಸಿಕೊಂಡು ನಾನು ಓಡಿ ಹೋದೆ. ಆಟೋದಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ನಾಲ್ಕು ಗಂಟೆ ಸಮಯದಲ್ಲಿ ಚಂದ್ರು ಸಾವನ್ನಪ್ಪಿದ್ದಾನೆ.

  • ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

    ಚಿಕನ್ ಖರೀದಿ ಮಾಡುವಾಗ ಗಲಾಟೆ – ಯುವಕ ಬರ್ಬರ ಹತ್ಯೆ

    ಬೆಂಗಳೂರು: ಚಿಕನ್ ಖರೀದಿ ಮಾಡಲು ಹೋದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ.

    ಚಂದ್ರು ಕೊಲೆಯಾದ ಯುವಕ. ಜೆಜೆ ನಗರದ ಹಳೇ ಗುಡ್ಡದಹಳ್ಳಿಯಲ್ಲಿ ಘಟನೆ ನಡೆದಿದ್ದು, ಯುವಕ ಚಂದ್ರುನನ್ನು ಸೋಮವಾರ ರಾತ್ರಿ ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಇದನ್ನೂ ಓದಿ: ಸತತ 15ನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

    ನಡೆದಿದ್ದೇನು?
    ಅಂಜಪ್ಪ ಗಾರ್ಡನ್‍ನಲ್ಲಿ ಚಂದ್ರ ಬರ್ತ್‍ಡೇ ಪಾರ್ಟಿಗೆಂದು ಹೋಗಿದ್ದನು. ಈ ವೇಳೆ ಜೆಜೆ ನಗರದಲ್ಲಿ ಚಿಕನ್ ತರಲು ಬಂದಿದ್ದಾನೆ. ಚಿಕನ್ ಖರೀದಿ ಮಾಡುವಾಗ ಗಲಾಟೆ ನಡೆದಿದೆ. ಗಲಾಟೆ ಅತಿರೇಕಕ್ಕೆ ಹೋಗಿದ್ದು, ಮೂವರು ದುಷ್ಕರ್ಮಿಗಳು ಚಂದ್ರನನ್ನು ಚಾಕುನಿಂದ ತೊಡೆಗೆ ಚುಚ್ಚಿ ಪರಾರಿಯಾಗಿದ್ದಾರೆ.‌

    ಚಂದ್ರನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಪ್ರಸ್ತುತ ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿನಿಂದ ಬಂದ ರಾಯಲ್ ಎನ್‍ಫೀಲ್ಡ್ ಆಂಧ್ರದಲ್ಲಿ ಸ್ಫೋಟ 

  • ಕೆಲಸಕ್ಕೆ ಹೋಗಲ್ಲ ಅಂತ ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ

    ಕೆಲಸಕ್ಕೆ ಹೋಗಲ್ಲ ಅಂತ ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ

    ಬೆಂಗಳೂರು: ಸ್ಕ್ರ್ಯಾಪ್ ಅಂಗಡಿಯ ಕೆಲಸಕ್ಕೆ ಬರಲಿಲ್ಲ ಎಂದು ತಂದೆ ನಿಂದಿಸಿದ್ದಕ್ಕೆ 23 ವರ್ಷದ ಯುವಕ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆಜೆ ನಗರದಲ್ಲಿ ನಡೆದಿದೆ.

    ಮೃತ ಯುವಕನನ್ನು ಸಾಹೀಲ್ ಎಂದು ಗುರುತಿಸಲಾಗಿದ್ದು, ಯುವಕನ ತಂದೆ ಅಬ್ಬಾಸ್ ತಮ್ಮ ಮಗ ಕೆಟ್ಟ ಹಾದಿಯನ್ನು ಹಿಡಿದಿದ್ದು, ಸರಿಯಾಗಿ ಕೆಲಸಕ್ಕೆ ಹಾಜರಾಗುತ್ತಿಲ್ಲ ಎಂದು ಬೇಸತ್ತಿದ್ದರು. ಆಟೋ ರಿಕ್ಷಾ ಚಾಲಕನಾಗಿದ್ದ ಅಬ್ಬಾಸ್, ಭಾನುವಾರ ಕೆಲಸಕ್ಕೆ ಹೋಗದೇ ಟಿ.ವಿ ನೋಡಿಕೊಂಡು ಕುಳಿತಿದ್ದ ಸಾಹೀಲ್‍ಗೆ ನಿಂದಿಸಿ ಕೆಲಸಕ್ಕೆ ತೆರಳಿದ್ದಾರೆ. ಆದರೆ ಇದರಿಂದ ಮನನೊಂದ ಸಾಹೀಲ್ ಅಡುಗೆ ಮನೆಗೆ ಹೋಗಿ ಚಾಕುವಿನಿಂದ ಹೊಟ್ಟೆಗೆ ಇರಿದುಕೊಂಡಿದ್ದಾನೆ. ಇದನ್ನೂ ಓದಿ: ಅಧಿಕಾರಕ್ಕಾಗಿ ಕಾಂಗ್ರೆಸ್‍ನಿಂದ ಮೇಕೆದಾಟು ಪಾದಯಾತ್ರೆ ನಾಟಕ: ಹಾಲಪ್ಪ ಆಚಾರ್

    ಮೊದಲಿಗೆ ಚಾಕು ಹಿಡಿದು ಕೇವಲ ಬೆದರಿಸುತ್ತಿದ್ದಾನೆ ಎಂದು ಆತನ ತಾಯಿ ರೇಷ್ಮಾ ಅಂದುಕೊಂಡಿದ್ದರು ಮತ್ತು ಹೊಟ್ಟೆಯಲ್ಲಿ ಆಗಿರುವ ಗಾಯ ಸಣ್ಣದು ಎಂದು ಭಾವಿಸಿದ್ದರು. ಆದರೆ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ಸಾಹೀಲ್‍ಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣ ಸಾಹೀಲ್ ಕರೆದೊಯ್ದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ಸಾಹೀಲ್ ಕೊನೆಯುಸಿರೆಳಿದಿದ್ದಾನೆ.

    ಈ ಪ್ರಕರಣ ಕುರಿತಂತೆ ರೇಷ್ಮಾ ಅವರು, ಸಾಹೀಲ್ ಅಡುಗೆ ಕೋಣೆಗೆ ಹೋಗಿ ತನ್ನ ತಂದೆಯ ಮೇಲೆ ಕೂಗಾಡುತ್ತಾ ಕೋಪದಿಂದ ಚಾಕು ತೆಗೆದುಕೊಂಡು ಇರಿದುಕೊಂಡಿದ್ದಾನೆ. ನಂತರ ಚೂರಿಯನ್ನು ನೆಲದ ಮೇಲೆ ಎಸೆದು ಹಾಲ್‍ನಲ್ಲಿದ್ದ ಸೋಫಾದ ಮೇಲೆ ಕುಳಿತುಕೊಂಡಿದ್ದ. ಆದರೆ ಸಾಹೀಲ್ ನೋವಿನಿಂದ ಅಳಲು ಆರಂಭಿಸಿದಾಗಲೇ ರೇಷ್ಮಾಗೆ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂಬ ಅರಿವಾಗಿದೆ. ಸದ್ಯ ಈ ಸಂಬಂಧ ಜೆಜೆ ನಗರ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಕೊರೊನಾ ಅಂಟಿಸಿ ಪಾದಯಾತ್ರೆ ನಿಲ್ಲಿಸಲು ಯತ್ನಿಸುತ್ತಿದ್ದೀರಾ, ನಿಮ್ಗೆ ಒಳ್ಳೆಯದಾಗಲ್ಲ: ಡಿಕೆಶಿ ಕಣ್ಣೀರು

  • ಐದನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

    ಐದನೇ ಮಹಡಿಯಿಂದ ಬಿದ್ದು ಮಹಿಳೆ ಸಾವು

    ಬೆಂಗಳೂರು: ಮಹಿಳೆಯೊಬ್ಬರು ಐದನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಜಗಜೀವನ್‌ ರಾಮ್‌ ನಗರದಲ್ಲಿ ನಡೆದಿದೆ.

    ಆರ್.ಆರ್ ನಗರದ ನಿವಾಸಿ ಯಶೋಧಾ (45) ಮೃತ ಮಹಿಳೆ. ಜೆಜೆ ನಗರದ ಸಂಬಂಧಿಕರ ಮನೆಗೆ ಹೋಗಿದ್ದಾಗ ಘಟನೆ ನಡೆದಿದೆ.   ರಕ್ತದೊತ್ತಡ ಹಾಗೂ ಮಧುಮೇಹ ಕಾಯಿಲೆಗಳಿಂದ ಬಳಲುತ್ತಿದ್ದ ಯಶೋಧಾ ಅವರು ಸಂಬಂಧಿಕರ ಮನೆ ಹೋಗಿದ್ದರು. ಇಂದು ಊಟ ಮಾಡಿ ಮನೆಯ 5ನೇ ಮಹಡಿಗೆ ಹೋಗಿದ್ದರು. ಈ ವೇಳೆ ತಲೆ ತಿರುಗಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಈ ಸಂಬಂಧ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಜೆಜೆ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಯಶೋಧಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

  • ಬೆಂಗ್ಳೂರಲ್ಲಿ ಪೊಲೀಸರ ಮೇಲೆಯೇ ರೌಡಿ ಹಲ್ಲೆ: ಲಾಂಗು-ಮಚ್ಚೇಟಿನಿಂದ ಪೇದೆಗೆ ಗಂಭೀರ ಗಾಯ

    ಬೆಂಗ್ಳೂರಲ್ಲಿ ಪೊಲೀಸರ ಮೇಲೆಯೇ ರೌಡಿ ಹಲ್ಲೆ: ಲಾಂಗು-ಮಚ್ಚೇಟಿನಿಂದ ಪೇದೆಗೆ ಗಂಭೀರ ಗಾಯ

    ಬೆಂಗಳೂರು: ಪೊಲೀಸ್ ಪೇದೆ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರೋ ಘಟನೆ ನಗರದ ಜೆಜೆ ನಗರದಲ್ಲಿ ನಡೆದಿದೆ.

    ಜೆಜೆ ನಗರ ಠಾಣೆಯ ರಾಜೇಂದ್ರ ಹಲ್ಲೆಗೊಳಗಾದ ಪೊಲೀಸ್ ಪೇದೆ. ರೌಡಿಶೀಟರ್ ಮಹಮ್ಮದ್ ಆಲೀಂ ಮತ್ತು ತಂಡದಿಂದ ಈ ಕೃತ್ಯ ನಡೆದಿದೆ. ಜೆಜೆ ನಗರದಲ್ಲಿ ದುಷ್ಕರ್ಮಿಗಳ ಗುಂಪು ಗಾಂಜಾ ಸೇವಿಸಿ ಪುಂಡಾಟ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದರು.

    ಕಂಟ್ರೋಲ್ ರೂಂ ಮಾಹಿತಿ ಅಧರಿಸಿ ಹೊಯ್ಸಳ ಬೀಟ್‍ನಲ್ಲಿದ್ದ ಪೇದೆ ರಾಜೇಂದ್ರ ಸ್ಥಳಕ್ಕೆ ಹೋಗಿದ್ರು. ಈ ವೇಳೆ ಪೇದೆ ರಾಜೇಂದ್ರ ಅವರ ಮೇಲೆ ದುಷ್ಕರ್ಮಿಗಳು ಮಚ್ಚು, ಲಾಂಗಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

    ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು, ಗಾಯಾಳು ಪೇದೆ ರಾಜೇಂದ್ರ ಅವರನ್ನು ವಿಕ್ಟೋರಿಯಾ ಅಸ್ಪತ್ರೆಗೆ ದಾಖಲು ಮಾಡಲಾಗಿದೆ.

    2016ರಲ್ಲಿ ಇದೇ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಮಹಮ್ಮದ್ ಅಲೀಂ ಮತ್ತು ತಂಡ ಪೇದೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದರು. ಆರೋಪಿಗಳು ಪುಂಡರ ಗ್ಯಾಂಗ್ ಕಟ್ಟಿಕೊಂಡು ಅಮಾಯಾಕರ ಮೇಲೆ ಹಲ್ಲೆ ಮಾಡಿ ವಸೂಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.