Tag: ಜೆಡಿಎಸ್ ಕಾರ್ಯಕರ್ತ

  • ನಿಖಿಲ್‌ ಸೋಲಿನಿಂದ ಬೇಸರ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    ನಿಖಿಲ್‌ ಸೋಲಿನಿಂದ ಬೇಸರ – ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ!

    – ಕಾರ್ಯಕರ್ತರು, ಅಭಿಮಾನಿಗಳಿಗೆ ಧೈರ್ಯ ಹೇಳಿದ ನಿಖಿಲ್‌

    ರಾಮನಗರ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಸೋಲಿನಿಂದ ಕುಂದಿದ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    ಚನ್ನಪಟ್ಟಣದ (Channapatna) ಶ್ರೀರಾಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ನಿಖಿಲ್‌ ಅಭಿಮಾನಿ (Nikhil fan). ಕಳೆದ 15 ವರ್ಷಗಳಿಂದ ಜೆಡಿಎಸ್‌ ಕಾರ್ಯಕರ್ತನಾಗಿರುವ ಮಂಜುನಾಥ್‌, ನಿಖಿಲ್‌ ಅಪ್ಪಟ ಅಭಿಮಾನಿಯಾಗಿದ್ದರು, ಹೀಗಾಗಿ ನಿಖಿಲ್‌ ಸೋಲಿನಿಂದ ಬೇಸರಗೊಂಡು, ವಿಷ ಸೇವಿಸಿದ್ದರು. ಬಳಿಕ ಅವರನ್ನ ಮಂಡ್ಯದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದನ್ನೂ ಓದಿ: ನಿನ್ನ ನೋಡ್ಬೇಕು ಬಾ ಅಂತ ಕರೆಸಿ ಪ್ರಿಯತಮೆಯಿಂದ್ಲೇ ಪ್ರಿಯಕರನ ಕಿಡ್ನ್ಯಾಪ್‌, 5 ಲಕ್ಷ ಸುಲಿಗೆ!

    ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ ಮಂಜುನಾಥ್ ಮನೆಗೆ ಇಂದು ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ, ಆರೋಗ್ಯ ವಿಚಾರಿಸಲಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಒಂದೇ ದಿನ 64 ಕೋಟಿ ಮತ ಎಣಿಕೆ – ಮಸ್ಕ್‌ ರಿಯಾಕ್ಷನ್‌ ಏನು?

    ಕಾರ್ಯಕರ್ತರಿಗೆ ಧೈರ್ಯ ಹೇಳಿದ ನಿಖಿಲ್‌:
    ಈ ಕುರಿತು ಪ್ರತಿಕ್ರಿಯೆ ನೀಡಿರುವ ನಿಖಿಲ್‌, ಬೆಳಗ್ಗೆ 7 ಗಂಟೆ ಸುಮಾರಿಗೆ ಮಂಜುನಾಥ್ ವಿಚಾರ ಗೊತ್ತಾಯ್ತು. ಚುನಾವಣಾ ಏರುಪೇರು ಇದ್ದೇ ಇರುತ್ತೆ. ಆದರೆ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಇಂಥ ಸಂದಿಗ್ಧ ಪರಿಸ್ಥಿತಿಗೆ ನಿಮ್ಮ ಕುಟುಂಬವನ್ನ ದೂಡಬೇಡಿ. ಸೋಲು ಗೆಲುವು ಇದ್ದಿದ್ದೇ, ದಯವಿಟ್ಟು ಇಂತಹ ಕೆಲಸಗಳಿಗೆ ಮುಂದಾಗಬೇಡಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಉತ್ತರ ಪ್ರದೇಶ | ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ

  • ಅಪಘಾತದಲ್ಲಿ ಜೆಡಿಎಸ್ ಕಾರ್ಯಕರ್ತ, ಇಬ್ಬರು ಮಕ್ಕಳು ಸಾವು- ಹೆಚ್‍ಡಿಕೆ ಬೇಸರ

    ಅಪಘಾತದಲ್ಲಿ ಜೆಡಿಎಸ್ ಕಾರ್ಯಕರ್ತ, ಇಬ್ಬರು ಮಕ್ಕಳು ಸಾವು- ಹೆಚ್‍ಡಿಕೆ ಬೇಸರ

    ಮಂಡ್ಯ: ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿ ಜೆಡಿಎಸ್ ಕಾರ್ಯಕರ್ತ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿತ್ತು. ಇಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜಿಲ್ಲೆಯ ಹೊಣಕೆರೆ ಗ್ರಾಮಕ್ಕೆ ತೆರಳಿ ಅವರ ಅಂತಿಮ ದರ್ಶನವನ್ನ ಪಡೆದುಕೊಂಡು ಭಾವುಕರಾದರು.

    ಮಂಡ್ಯದ ನಾಗಮಂಗಲದ ಹೊಣಕೆರೆ ಗ್ರಾಮದ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಜೆಡಿಎಸ್ ಕಾರ್ಯಕರ್ತ ಆನಂದ್‍ಕುಮಾರ್ ನಿನ್ನೆ ತಮ್ಮ ಸೊಸೆ ಹಾಗೂ ಮೊಮ್ಮಕ್ಕಳ ಜೊತೆ ದ್ವಿಚಕ್ರ ವಾಹನದಲ್ಲಿ ಬರುವಾಗ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆನಂದ್‍ಕುಮಾರ್ ಸೇರಿದಂತೆ ಅವರ ಇಬ್ಬರು ಮೊಮ್ಮಕ್ಕಳು ಸಾವನ್ನಪ್ಪಿದ್ದರು. ಹೀಗಾಗಿ ಹೆಚ್.ಡಿ.ಕುಮಾರಸ್ವಾಮಿ ಹೊಣಕೆರೆ ಗ್ರಾಮಕಗಕೆ ತೆರಳಿ ಮೃತ ಆನಂದ್ ಮತ್ತು ಅವರ ಮೊಮ್ಮಕ್ಕಳ ಅಂತಿಮ ದರ್ಶನ ಪಡೆದುಕೊಂಡರು. ಇದನ್ನೂ ಓದಿ: ದಸರಾ ತಯಾರಿ- ಸೆ.8ರಂದು ಮೈಸೂರಿನಲ್ಲಿ ಜನಪ್ರತಿನಿಧಿಗಳ ಸಭೆ

    ಬಳಿಕ ಗ್ರಾಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆನಂದ್‍ಕುಮಾರ್ ಅವರನ್ನು ಕಳೆದುಕೊಂಡು ತುಂಬಾ ನೋವುಂಟಾಗಿದೆ. ಅಲ್ಲದೆ ಆ ಪುಟ್ಟ ಮಕ್ಕಳು ಸಾವನ್ನಪ್ಪಿರುವುದು ಕರುಳು ಹಿಂಡಿದಂತಿದೆ. ದೇವರು ಹುಟ್ಟಿಸಿ, ಇಷ್ಟು ಬೇಗ ಯಾಕೆ ಕರೆದುಕೊಳ್ಳುತ್ತಾನೆ ಎಂದು ನೋವಾಗುತ್ತದೆ ಎಂದು ಭಾವುಕರಾದರು.

  • ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ 6 ಬಾರಿ ಚಾಕು ಇರಿದ ಯುವಕರು

    ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ 6 ಬಾರಿ ಚಾಕು ಇರಿದ ಯುವಕರು

    ಹುಬ್ಬಳ್ಳಿ: ಹಾಡಹಗಲೇ ಜೆಡಿಎಸ್ ಕಾರ್ಯಕರ್ತನಿಗೆ ಸುಮಾರು ಆರು ಬಾರಿ ಚಾಕುವಿನಿಂದ ಇರಿದ ಘಟನೆ ಹುಬ್ಬಳ್ಳಿಯ ಲೋಕಪ್ಪನ ಹಕ್ಕಲ್‍ದಲ್ಲಿ ನಡೆದಿದೆ.

    ಹುಬ್ಬಳ್ಳಿಯ ಲೋಕಪ್ಪನ ಹಕ್ಕಲ್‍ದ ನಿವಾಸಿ ಸುಭಾಷ್ ಮಲ್ಲೇಶಪ್ಪ (25) ಚಾಕು ಇರಿತಕ್ಕೆ ಒಳಗಾದ ಜೆಡಿಎಸ್ ಕಾರ್ಯಕರ್ತ. ವಿದ್ಯಾನಗರದ ನಿವಾಸಿ ಪುರುಷೋತ್ತಮ್ ತೆನಿಗೊಂಡ (28) ಸೇರಿದಂತೆ ಮೂವರು ಈ ಕೃತ್ಯ ಎಸಗಿದ್ದಾರೆ. ಕಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಘಟನೆ ನಡೆದಿದೆ.

    ಸುಭಾಷ್ ಮಲ್ಲೇಶಪ್ಪ ಪುರುಷೋತ್ತಮ್‍ನಿಂದ ಸಾಲ ಪಡೆದು ಬೇರಯವರಿಗೆ ಕೊಡಿಸಿದ್ದ. ಆದರೆ ಸಾಲ ಪಡೆದಿದ್ದ ವ್ಯಕ್ತಿ ಹಣವನ್ನು ಮರುಪಾವತಿ ಮಾಡಿರಲಿಲ್ಲ. ಹೀಗಾಗಿ ಸಾಲಕ್ಕೆ ಜಾಮೀನು ನೀಡಿದ್ದ ಸುಭಾಷ್ ಹಾಗೂ ಸಾಲ ಕೊಟ್ಟಿದ್ದ ಪುರುಷೋತ್ತಮ್ ಜಗಳವಾಡಿದ್ದರು. ಆದರೆ ಇಂದು ಸಾಲದ ವಿಚಾರವಾಗಿ ಇಬ್ಬರಿಗೂ ಮಾತಿಗೆ ಮಾತು ಬೆಳೆದಿದ್ದು, ಪುರುಷೋತ್ತಮ್ ಹಾಗೂ ಆತನ ಜೊತೆಗಿದ್ದ ಇಬ್ಬರು ಸುಭಾಷ್‍ಗೆ ಚಾಕುವಿನಿಂದ ಇರಿದಿದ್ದಾರೆ.

    ಈ ಘಟನೆಯಲ್ಲಿ ಸುಭಾಷ್ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಸ್ಥಳೀಯರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಆಯುಕ್ತ ದಿಲೀಪ್ ಅವರು ಪರಿಶೀಲನೆ ನಡೆಸಿದರು. ಬಳಿಕ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಹಲ್ಲೆಗೆ ಒಳಗಾದ ಸುಭಾಷ್ ಹಾಗೂ ಕುಟುಂಬಸ್ಥರಿಂದ ಹೇಳಿಕೆ ಪಡೆದಿದ್ದಾರೆ.

    ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯು ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಯಾಗಿ ಪೊಲೀಸರು ಬಲೆ ಬೀಸಿದ್ದಾರೆ.

  • ಚುನಾವಣೆ ನಂತ್ರ ಮಂಡ್ಯದಲ್ಲಿ ನಿಖಿಲ್ – ಮೃತ ಕಾರ್ಯಕರ್ತನ ನೆನೆದು ಭಾವುಕ

    ಚುನಾವಣೆ ನಂತ್ರ ಮಂಡ್ಯದಲ್ಲಿ ನಿಖಿಲ್ – ಮೃತ ಕಾರ್ಯಕರ್ತನ ನೆನೆದು ಭಾವುಕ

    ಮಂಡ್ಯ: ಲೋಕಸಭಾ ಚುನಾವಣೆ ಬಳಿಕ ಮೊದಲ ಬಾರಿಗೆ ನಿಖಿಲ್ ಜಿಲ್ಲೆಗೆ ಭೇಟಿ ನೀಡಿದ್ದು, ಅನಾರೋಗ್ಯದಿಂದ ಸಾವನ್ನಪ್ಪಿದ ಜೆಡಿಎಸ್ ಕಾರ್ಯಕರ್ತನ ನಿವಾಸಕ್ಕೆ ಭೇಟಿ ಕೊಟ್ಟಿದ್ದಾರೆ.

    ಮಳವಳ್ಳಿಯ ಜೆಡಿಎಸ್ ಕಾರ್ಯಕರ್ತ ಸಂತೋಷ್ ಇತ್ತೀಚೆಗೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಮೃತ ಸಂತೋಷ್ ಮನೆಗೆ ಹೋಗಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಕುಟುಂಬಸ್ಥರೊಂದಿಗೆ ಮಾತನಾಡುತ್ತಾ ಸದಾ ಜೆಡಿಎಸ್ ಪಕ್ಷಕ್ಕಾಗಿ ದುಡಿದ ಮೃತ ಸಂತೋಷ್ ನೆನೆದು ನಿಖಿಲ್ ಭಾವುಕರಾದರು.

    ನಿಖಿಲ್ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕಾಲಿಗೆ ಬಿದ್ದು ನಮಸ್ಕರಿಸಲು ಮೃತ ಸಂತೋಷ ತಾಯಿ ಜಯಮ್ಮ ಮುಂದಾಗಿದ್ದರು. ಈ ವೇಳೆ ಕಾಲಿಗೆ ಬೀಳುತ್ತಿದ್ದನ್ನು ನಿಖಿಲ್ ತಡೆದು ಅವರಿಗೆ ಕೈ ಮುಗಿದು ನಮಸ್ಕರಿಸಿದ್ದಾರೆ.

    ಇದೇ ವೇಳೆ ಮಾತನಾಡಿದ ನಿಖಿಲ್, ಸಂತೋಷ್ ಜೆಡಿಎಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು. ಅವರ ಸ್ವಂತ ದುಡಿಮೆಯಲ್ಲಿ ಮಳವಳ್ಳಿ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಕಟ್ಟಲಿಕ್ಕೆ ಕೆಲಸ ಮಾಡಿದ್ದರು. ಸಂತೋಷ್ ಅಗಲಿಕೆ ಜೀರ್ಣಿಸಿಕೊಳ್ಳಲಿಕ್ಕೆ ಆಗುತ್ತಿಲ್ಲ. ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಪ್ರಚಾರದ ವೇಳೆ ಬೈಕ್ ಮೇಲೆ ಕರೆದುಕೊಂಡು ಹೋಗಿದ್ದರು ಎಂದು ಸಂತೋಷ್ ಅವರನ್ನು ನಿಖಿಲ್ ನೆನೆದರು.

    ಮಕ್ಕಳನ್ನ ಕಳೆದುಕೊಂಡ ನೋವು ತಂದೆತಾಯಿಗೆ ಮಾತ್ರ ಗೊತ್ತಿರುತ್ತದೆ. ನಾವು ಏನೇ ಸಾಂತ್ವನ ಹೇಳಿದರೂ ಸಾಲುವುದಿಲ್ಲ. ಸಂತೋಷ್ ತಾಯಿಯ ಕಣ್ಣೀರು ಕಂಡಾಗ ನನಗೆ ದುಃಖ ತಡೆಯಲು ಸಾಧ್ಯವಾಗಿಲ್ಲ. ನನ್ನ ಕುಟುಂಬ ಸದಸ್ಯರನ್ನ ಕಳೆದುಕೊಂಡಷ್ಟೇ ನನಗೆ ನೋವಾಗಿದೆ. ಸಂತೋಷ್ ಕುಟುಂಬಸ್ಥರ ಜೊತೆ ನಾನು ಸದಾ ಇರುತ್ತೇನೆ. ನನ್ನನ್ನು ಅವರ ಮನೆ ಮಗನಂತೆ ಭಾವಿಸಲಿ ಎಂದು ನಿಖಿಲ್ ಹೇಳಿದರು.

  • ವೈದ್ಯರ ಮುಷ್ಕರ ಎಫೆಕ್ಟ್- ಜೆಡಿಎಸ್ ಕಾರ್ಯಕರ್ತ ಸಾವು

    ವೈದ್ಯರ ಮುಷ್ಕರ ಎಫೆಕ್ಟ್- ಜೆಡಿಎಸ್ ಕಾರ್ಯಕರ್ತ ಸಾವು

    ಬಾಗಲಕೋಟೆ: ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದೆ ಓರ್ವ ಜೆಡಿಎಸ್ ಕಾರ್ಯಕರ್ತ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

    ಬಾದಾಮಿ ತಾಲೂಕು ಕೆರೂರು ಪಟ್ಟಣ ನಿವಾಸಿ ದಾವಲಸಾಬ್ ಕೊಣ್ಣೂರ (55) ಮೃತ ಜೆಡಿಎಸ್ ಕಾರ್ಯಕರ್ತ. ದಾವಲಸಾಬ್ ಜ್ವರ, ಅಸ್ತಮಾದಿಂದ ಬಳಲುತ್ತಿದ್ದರು. ಇಂದು ತೀವ್ರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಲ್ಲಿ ವೈದ್ಯರು ಇರಲಿಲ್ಲ. ಹೀಗಾಗಿ ಮತ್ತೊಂದು ಆಸ್ಪತ್ರೆಗೆ ಸಾಗಿಸಿದರೂ ಅದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ದಾವಲ್‍ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಜಿಲ್ಲಾಸ್ಪತ್ರೆ ತಲುಪುವ ಮಾರ್ಗದಲ್ಲೇ ಅವರು ಸಾವನ್ನಪ್ಪಿದ್ದಾರೆ.

    ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡಿದ್ದರೆ ದಾವಲಸಾಬ್ ಬದುಕುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದಿರುವೇ ಅವರ ಸಾವಿಗೆ ಕಾರಣ ಎಂದು ಸಂಬಂಧಿಕರ ಆರೋಪಿಸಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಮೃತ ರೋಗಿಯೊಬ್ಬರ ಸಂಬಂಧಿಕರು ಇತ್ತೀಚೆಗೆ ಇಬ್ಬರು ಕಿರಿಯ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರು. ಈ ಘಟನೆ ಪಶ್ಚಿಮ ಬಂಗಾಳದಲ್ಲಿ ವೈದ್ಯರ ದೊಡ್ಡ ಮಟ್ಟದ ಚಳುವಳಿಗೆ ಕಾರಣವಾಯಿತು. ಆದರೆ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮಮತಾ ಬ್ಯಾನರ್ಜಿ ವೈದ್ಯರಿಗೆ ಎಚ್ಚರಿಕೆ ನೀಡಿದ್ದರು.

    ಮಮತಾ ಬ್ಯಾನರ್ಜಿ ಅವರ ಹೇಳಿಕೆಯಿಂದ ಅಸಮಾಧಾನ ಹೊರಹಾಕಿದ ವೈದ್ಯರು, ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದರು. ಈ ಪ್ರತಿಭಟನೆಯನ್ನು ಬೆಂಬಲಿಸಿ ಕರ್ನಾಟಕದಲ್ಲಿಯೂ ಪ್ರತಿಭಟನೆ ನಡೆಸಲಾಗುತ್ತಿದೆ.

  • ಪ್ರಚಾರಕ್ಕೆ ಬಂದ್ರೆ ಒಂದು ತಲೆಗೆ 500 ರೂ. – ಶಿವರಾಮೇಗೌಡರ ಆಡಿಯೋ ವೈರಲ್

    ಪ್ರಚಾರಕ್ಕೆ ಬಂದ್ರೆ ಒಂದು ತಲೆಗೆ 500 ರೂ. – ಶಿವರಾಮೇಗೌಡರ ಆಡಿಯೋ ವೈರಲ್

    ಮಂಡ್ಯ: ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಹೌದು. ಪ್ರಚಾರಕ್ಕೆ ಬಂದ್ರೆ ತಲಾ 500 ರೂ. ಕೊಡುತ್ತೇನೆ ಎಂದು ಶಿವರಾಮೇಗೌಡರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದ ರಮೇಶ್ ಜೊತೆ ಮಾತನಾಡಿದ್ದಾರೆ. ಈ 43 ಸೆಕೆಂಡುಗಳ ಆಡಿಯೋ ವೈರಲ್ ಆಗುತ್ತಿದ್ದು, ಇದೀಗ ತೀವ್ರ ಅನುಮಾನಕ್ಕೆ ಕಾರಣವಾಗಿದೆ.

    ಆಡಿಯೋದಲ್ಲೇನಿದೆ?:
    ಶಿವರಾಮೇಗೌಡ: ಹೇಳಿ ರಮೇಶಣ್ಣ..
    ರಮೇಶ್: ಅಣ್ಣಾ ನಾವು ಯಾವಾಗ್ಲಿಂದ ಬರಬೇಕು ಅಣ್ಣಾ ಕ್ಯಾನ್ ವಾಸ್‍ಗೆ
    ಶಿವರಾಮೇಗೌಡ: ಯಾರು ಮಾತಾಡ್ತಿರೋದು
    ರಮೇಶ್: ಅಣ್ಣಾ ನಾನು ರಮೇಶ್
    ಶಿವರಾಮೇಗೌಡ: ನಮ್ ಡಾನು..
    ರಮೇಶ್: ಹೂಂ ಅಣ್ಣಾ..
    ಶಿವರಾಮೇಗೌಡ: ನಾಳೆಯಿಂದಲೇ..

    ರಮೇಶ್: ಅಣ್ಣಾ ಬೆಂಗಳೂರಿನಿಂದ ಎಲ್ಲರನ್ನೂ ಕರೆದುಕೊಂಡು ಬರಬೇಕಲ್ಲಾ ಹೆಂಗ್ ಮಾಡೋದು ವ್ಯವಸ್ಥೆ..?
    ಶಿವರಾಮೇಗೌಡ: ಎಲ್ಲರಿಗೂ 500 ರೂಪಾಯಿ ಕೊಡ್ತೇವೆ.. ತಲೆಗೆ 500 ರೂ. ಕೊಡ್ತೀನಿ ಕರೆದುಕೊಂಡು ಬಾ..
    ರಮೇಶ್: ಎಲ್ಲರನ್ನೂ ಕರೆದುಕೊಂಡು ಬರ್ಲಾ..?
    ಶಿವರಾಮೇಗೌಡ: ಹೂಂ.. ಎಲ್ಲಾ ಬರಬೇಕು..
    ರಮೇಶ್: ಅಣ್ಣಾ ಬರ್ತಾರಣ್ಣ.. ಗಂಗನಹಳ್ಳಿ, ಕೆಂಕನಹಳ್ಳಿಯಿಂದ ಸುಮಾರು ಜನ ಇದ್ದಾರೆ, ಎಲ್ಲರೂ ಬರ್ತಾರಣ್ಣ..
    ರಮೇಶ್: ಬಸ್ ವ್ಯವಸ್ಥೆ ನಾವೇ ಮಾಡ್ಕೋಬೇಕಣ್ಣಾ..?

    ಶಿವರಾಮೇಗೌಡ: ನೀವೇ ಮಾಡಿಕೊಂಡು ಬನ್ನಿ..ದುಡ್ಡು ಕೊಡ್ತೀನಿ..
    ರಮೇಶ್: ಸರಿ ಅಣ್ಣಾ.. ಬೆಳಗ್ಗೆ..
    ಶಿವರಾಮೇಗೌಡ: ಒಂದು ತಲೆಗೆ 500ರೂಪಾಯಿ, ಎಲ್ಲನೂ ಅಪ್ಪಾಜಿಗೌಡ್ರಿಗೆ ಜವಾಬ್ದಾರಿ ಕೊಟ್ಟಿದ್ದೀನಿ..
    ರಮೇಶ್: ಅಪ್ಪಾಜಿ ಗೌಡ್ರಿಗಾ ಅಣ್ಣಾ.. ಆಯ್ತಣ್ಣ.. ಸರಿ ಅಣ್ಣ..

  • ಪ್ರೀತಂಗೌಡ ನಿವಾಸದ ಮುಂದೆ ಕಲ್ಲುತೂರಾಟ ಕೇಸ್ – ರಾತ್ರಿ ಜೆಡಿಎಸ್ ಕಾರ್ಯಕರ್ತ ಅರೆಸ್ಟ್

    ಪ್ರೀತಂಗೌಡ ನಿವಾಸದ ಮುಂದೆ ಕಲ್ಲುತೂರಾಟ ಕೇಸ್ – ರಾತ್ರಿ ಜೆಡಿಎಸ್ ಕಾರ್ಯಕರ್ತ ಅರೆಸ್ಟ್

    ಹಾಸನ: ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸಕ್ಕೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಕಾರ್ಯಕರ್ತ ಚೇತನ್ ನನ್ನು ಬಂಧಿಸಲಾಗಿದೆ.

    ಪ್ರತಿಭಟನೆ ವೇಳೆ ಚೇತನ್ ಗೌಡ ಕಲ್ಲು ತೂರಿದ್ದು ವಿಡಿಯೋದಿಂದ ಬಹಿರಂಗವಾಗಿತ್ತು. ಚೇತನ್ ಜೆಡಿಎಸ್ ಕಾರ್ಯಕರ್ತನಾಗಿದ್ದು, ಲೋಕೋಪಯೋಗಿ ಸಚಿವ ರೇವಣ್ಣ, ಪ್ರಜ್ವಲ್ ಸೇರಿದಂತೆ ಹಲವು ನಾಯಕರೊಂದಿಗೆ ಫೋಟೋ ತೆಗೆಸಿಕೊಂಡಿಸಿದ್ದನು. ಸದ್ಯಕ್ಕೆ ಬಡಾವಣೆ ಠಾಣೆ ಪೊಲೀಸರು ಐಪಿಸಿ ಸೆಕ್ಷನ್ 307 ಅಡಿ ಪ್ರಕರಣ ದಾಖಲಿಸಿ ಚೇತನ್ ನನ್ನು ಜೈಲಿಗೆ ಕಳುಹಿಸಿದ್ದಾರೆ. ಇದನ್ನೂ ಓದಿ: ಹಾಸನ ಬಿಜೆಪಿ ಕಾರ್ಯಕರ್ತನ ಮೇಲೆ ಕಲ್ಲೆಸೆತ ಪ್ರಕರಣ – 8 ಮಂದಿ ವಿರುದ್ಧ ಎಫ್‍ಐಆರ್ ದಾಖಲು

    ಫೆಬ್ರವರಿ 13ರಂದು ಬಿಜೆಪಿ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯುತ್ತಿದ್ದ ಸಯಮದಲ್ಲಿ ಚೇತನ್ ಎರಡು ಕಲ್ಲೆತ್ತಿಕೊಂಡು ಬಂದು ಜನರ ನಡುವೆ ನಿಂತು ಶಾಸಕರ ಮನೆಯತ್ತ ಕಲ್ಲೆಸೆದಿದ್ದಾನೆ. ಬಳಿಕ ಕಲ್ಲೆಸೆದು ಸದ್ದಿಲ್ಲದೆ ಹಿಂದೆ ಓಡಿ ಹೋಗಿದ್ದನು. ಈ ಕುರಿತು ಬಡಾವಣೆ ಪೊಲೀಸ್ ಠಾಣೆಯಲ್ಲಿ ಎಂಟು ಜನರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈಗ ಶುಕ್ರವಾರ ರಾತ್ರಿ ಚೇತನ್ ನನ್ನು ಬಡಾವಣೆ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಇಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ- ಜೆಡಿಎಸ್ ವಿರುದ್ಧ ರಾಜ್ಯಪಾಲರಿಗೆ ಕಂಪ್ಲೆಂಟ್

    ಶಾಸಕ ಪ್ರೀತಂ ಗೌಡ ಮಾಜಿ ಪ್ರಧಾನಿ ದೇವೇಗೌಡ ವಿಕೆಟ್ ಹೋಗುತ್ತೆ ಎಂದು ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಅವರ ಮನೆಯ ಎದುರು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲೆಸೆಯಲಾಗಿತ್ತು. ಪರಿಣಾಮ ಬಿಜೆಪಿ ಕಾರ್ಯಕರ್ತ ರಾಹುಲ್ ಕಿಣಿ ಗಾಯಗೊಂಡು ಆಸ್ಪತ್ರೆ ಸೇರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಶಾಸಕರ ಮುಂದೆ ಕಣ್ಣೀರು ಹಾಕಿದ ಜೆಡಿಎಸ್ ಕಾರ್ಯಕರ್ತ!

    ಶಾಸಕರ ಮುಂದೆ ಕಣ್ಣೀರು ಹಾಕಿದ ಜೆಡಿಎಸ್ ಕಾರ್ಯಕರ್ತ!

    ಮಂಡ್ಯ: ಜೆಡಿಎಸ್ ಕಾರ್ಯಕರ್ತರೊಬ್ಬರು ಶಾಸಕರ ಮುಂದೆ ಕಣ್ಣೀರು ಹಾಕಿ ತಮ್ಮ ಆಕ್ರೋಶ ಹೊರಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ.

    ಕಾರ್ಯಕರ್ತ ನಿಂಗರಾಜು ಆಕ್ರೋಶ ಹೊರಹಾಕಿದ ಜೆಡಿಎಸ್ ಕಾರ್ಯಕರ್ತನಾಗಿದ್ದು, ಇವರು ಶಾಸಕ ಎಂ ಶ್ರೀನಿವಾಸ್ ಹಾಗೂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ವಿರುದ್ಧ ಕಿಡಿಕಾರಿದ್ದಾರೆ.

    ನನಗೆ ಟಿಕೆಟ್ ನೀಡಿದ್ರೆ ನಾನೇ ಗೆಲ್ತಿದ್ದೆ. ನನಗೆ ಅನ್ಯಾಯ ಮಾಡಿದ್ದೀರಿ. ನಾನು 20ವರ್ಷಗಳಿಂದ ಪಕ್ಷಕ್ಕೆ ದುಡಿದ್ದೀನಿ. ಇಂದು ನನ್ನ ಮನೆ ಹಾಳಾಗಿದೆ ಎಂದು ನೋವು ತೊಡಿಕೊಂಡಿಕೊಂಡಿದ್ದಾರೆ. ಈ ವೇಳೆ ಬೆಂಬಲಿಗರು ನೊಂದ ಕಾರ್ಯಕರ್ತನನ್ನು ಶಾಸಕರ ಕಚೇರಿಯಿಂದ ಹೊರ ಹಾಕಿದ್ದಾರೆ.

    ನಿಂಗರಾಜು ಅವರ ಮಂಡ್ಯ ನಗರಸಭೆಯ 12ನೇ ವಾರ್ಡ್ ನಿಂದ ಸ್ಪರ್ಧಿಸಿದ್ದು, ನಾಲ್ಕನೇ ಸ್ಥಾನ ಪಡೆದಿದ್ದಾರೆ.

    ಮಂಡ್ಯ ಹಿಂದುಳಿದ ನಗರವಾಗಿತ್ತು. ಇನ್ನು ಮುಂದೆ ಅಭಿವೃದ್ಧಿ ಪಥದತ್ತ ಸಾಗಲಿದೆ. ಸಿಎಂ ನಮ್ಮವರು, ಮಂಡ್ಯದಲ್ಲಿ ನಾನು ಶಾಸಕನಾಗಿದ್ದೇನೆ. ಈ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸ ಆಗಲಿದೆ. ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ಕಾರ್ಯ ವೈಖರಿ ಮೆಚ್ಚಿ ಜನ ಬೆಂಬಲಿಸಿದ್ದಾರೆ ಅಂತ ಶಾಸಕ ಎಂ ಶ್ರೀನಿವಾಸ್ ಸಂತಸ್ ವ್ಯಕ್ತಪಡಿಸಿ ಜಿಲ್ಲೆಯ ಜನರಿಗೆ ಧನ್ಯವಾದ ಸಲ್ಲಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv