Tag: ಜೆಡಿಎಸ್ ಸಭೆ

  • ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ – ಹೆಚ್.ಡಿ ರೇವಣ್ಣ ಸವಾಲ್

    ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ – ಹೆಚ್.ಡಿ ರೇವಣ್ಣ ಸವಾಲ್

    – ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ ಎಂದ ರೇವಣ್ಣ

    ಹಾಸನ: ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Revanna) ಕಿಡಿಕಾರಿದ್ದಾರೆ.

    ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ (JDS) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಹಾಸನದಲ್ಲಿ ಹೆಚ್.ಎಸ್ ಪ್ರಕಾಶನನ್ನು (H. S. Prakash) ನಾಲ್ಕು ಬಾರಿ ಗೆಲ್ಲಿಸಿದ್ದರು. 2013ರಲ್ಲಿ ಪ್ರಕಾಶ್‌ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ.ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದು ಇಂದಿರಾ ಕ್ಯಾಂಟೀನ್ ಬಂದ್ – ಅಕ್ರಮ ಚಟುವಟಿಕೆಗಳ ತಾಣವಾದ ಕ್ಯಾಂಟೀನ್

    2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.

    ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.ಇದನ್ನೂ ಓದಿ: ಬಿಜೆಪಿ ನಾಯಕನ ಅಜಾಗರೂಕತೆ ಕಾರು ಚಾಲನೆ – ಅಪಘಾತಕ್ಕೆ ಬೈಕ್‌ ಸವಾರ ಸಾವು

  • ಮೋದಿ ಬಂದರೆ ಎತ್ತಿ ದವಡೆಗೆ ಹೊಡೆಯಿರಿ: ಶಾಸಕ ಶಿವಲಿಂಗೇಗೌಡ

    ಮೋದಿ ಬಂದರೆ ಎತ್ತಿ ದವಡೆಗೆ ಹೊಡೆಯಿರಿ: ಶಾಸಕ ಶಿವಲಿಂಗೇಗೌಡ

    ಹಾಸನ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಎನಾಯ್ತು ಅಂತ ಪ್ರಶ್ನಿಸಿ, ಎಲ್ಲರು ಸೇರಿ ಎತ್ತಿದವಡೆಗೆ ಹೊಡೆಯಿರಿ ಎಂದು ಜಿಲ್ಲೆಯ ಅರಸೀಕೆರೆ ತಾಲೂಕಿನ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಭಾಷಣ ಮಾಡಿದ್ದಾರೆ.

    ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತ ಪ್ರಧಾನಿ ಮೋದಿ ವಿರುದ್ಧ ಶಿವಲಿಂಗೇಗೌಡ ಕಾರ್ಯಕರ್ತರನ್ನು ಎತ್ತಿಕಟ್ಟುವ ರೀತಿ ಭಾಷಣ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.

    ನಾನು ನೇರವಾಗಿ ಪ್ರಧಾನಿ ಅವರನ್ನೇ ಪ್ರಶ್ನಿಸುತ್ತಿದ್ದೇನೆ, ನೀವು ಆಡಳಿತಕ್ಕೆ ಬರುವ ಮುನ್ನ ದೇಶದ ರೈತಾಪಿ ವರ್ಗಕ್ಕೆ ಕೊಟ್ಟ ವಾಗ್ದಾನ ಏನು? ರಾಜಕಾರಣಿಗಳು ಸ್ವೀಸ್ ಬ್ಯಾಂಕ್‍ನಲ್ಲಿಟ್ಟಿರುವ ಕಪ್ಪು ಹಣವನ್ನು ತಂದು ರೈತರ ಅಕೌಂಟ್‍ಗೆ 10, 15 ಲಕ್ಷ ರೂ. ಹಾಕುತ್ತೇನೆ ಎಂದು ಭರವಸೆ ನೀಡಿದ್ದೀರಿ. ಆ ಭರವಸೆ ಏನಾಯ್ತು? ಈ ಬಗ್ಗೆ ಬಿಜೆಪಿಯವರನ್ನು ನೀವು ಕೇಳಬೇಕು. ಅವರನ್ನು ಪ್ರಶ್ನಿಸುವುದನ್ನು ನೀವು ಬೆಳೆಸಿಕೊಳ್ಳಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

    ಮೋದಿ ಅವರು ರಾಜ್ಯಕ್ಕೆ ಬಂದರೆ ನೀವೆಲ್ಲ ಕೇಳಬೇಕು ಕಪ್ಪು ಹಣ ಎಲ್ಲಿ? 15 ಲಕ್ಷ ಎಲ್ಲಿ ಎಂದು ಮೋದಿಗೆ ದವಡೆಗೆ ಹೊಡೆಯಿರಿ ಎಂದು ಕಾರ್ಯಕರ್ತರಿಗೆ ಪ್ರಚೋದನೆ ನೀಡಿದ್ದಾರೆ. ಕಪ್ಪು ಹಣ ಹೊರತರುತ್ತೇವೆ ಅಂತ ನೋಟ್ ಬ್ಯಾನ್ ಮಾಡಿದರು. ಅದರಿಂದ ಬಡವರಿಗೆ ಏನು ಲಾಭವಾಯ್ತು? ಚಾಲ್ತಿಯಲ್ಲಿದ್ದ ನೋಟ್‍ಗಳೆಲ್ಲ ಬ್ಯಾಂಕ್ ಸೇರಿದ್ದು ಬಿಟ್ಟರೆ, ಕಪ್ಪು ಹಣ ಹೊರ ಬರಲಿಲ್ಲ. ಬಡವರಿಗೆ, ರೈತರಿಗೆ ಹಣ ಸಿಗಲಿಲ್ಲ ಎಂದು ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದರು.

  • ಜೆಡಿಎಸ್ ಆಲದ ಮರವಲ್ಲ, ಗರಿಕೆ ಹುಲ್ಲು: ವೈ.ಎಸ್.ವಿ ದತ್ತಾ

    ಜೆಡಿಎಸ್ ಆಲದ ಮರವಲ್ಲ, ಗರಿಕೆ ಹುಲ್ಲು: ವೈ.ಎಸ್.ವಿ ದತ್ತಾ

    ಬೆಂಗಳೂರು: ಜೆಡಿಎಸ್ ಪಕ್ಷ ಆಲದ ಮರವಲ್ಲ, ಗರಿಕೆ ಹುಲ್ಲು. ಗರಿಕೆ ಹುಲ್ಲನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಿಲ್ಲ ಎಂದು ಜೆಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಹೇಳಿದ್ದಾರೆ.

    ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಜೆಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಸದ್ಯಸ್ಯರ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಮಾಜಿ ಶಾಸಕ ವೈ.ಎಸ್.ವಿ ದತ್ತಾ, ಜೆಡಿಎಸ್ ಪಕ್ಷ ಆಲದ ಮರವಲ್ಲ ಗರಿಕೆ ಹುಲ್ಲು. ನಮ್ಮ ಪಕ್ಷ ಗಟ್ಟಿಯಾಗಿದೆ. ಗರಿಕೆ ಹುಲ್ಲನ್ನು ಯಾರು ಬುಡದಿಂದ ಕೀಳಲು ಸಾಧ್ಯವಿಲ್ಲ, ಹಾಗೆಯೇ ಜೆಡಿಎಸ್ ಪಕ್ಷವನ್ನು ಉರಿಳಿಸಲು ಸಾಧ್ಯವಾಗಲ್ಲ ಎಂದರು. ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿದೆ. ಮುಂದಿನ ಲೋಕಸಭೆ ಚುನಾವಣೆಗೆ ಎಲ್ಲರೂ ಸಜ್ಜಾಗಬೇಕು. ಮುಂದಿನ ದಿನಗಳಲ್ಲಿ ಸ್ವ ಸಾಮಥ್ರ್ಯದಿಂದ ಪಕ್ಷ ಅಧಿಕಾರಕ್ಕೆ ಬರುವಂತೆ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ಹೇಳಿದರು.

    ಜನತಾದಳ ಪಕ್ಷಕ್ಕೆ 40 ವರ್ಷಗಳ ಇತಿಹಾಸ ಇದೆ ಅಂತ ಇನ್ನು ಮುಂದೆ ಕಾರ್ಯಕರ್ತರು ಹೇಳಿಕೊಳ್ಳಬೇಕು. ದೇಶಕ್ಕೆ ಪ್ರಧಾನಿ, ರಾಜ್ಯಕ್ಕೆ ಮುಖ್ಯಮಂತ್ರಿ ಕೊಟ್ಟ ಪಕ್ಷ ಅಂತ ಹೆಮ್ಮೆಯಿಂದ ಹೇಳಿಕೊಳ್ಳಬೇಕು. ನಮ್ಮ ಪಕ್ಷಕ್ಕೆ ಬೇರೆ ಪಕ್ಷಗಳಿಗಿಂತ ಹೆಚ್ಚು ವಿಶೇಷತೆಯಿದೆ. ಕಾಂಗ್ರೆಸೇತರ ಪಕ್ಷ ಸ್ಥಾಪನೆಗೆ ಹುಟ್ಟಿದ್ದು ಜೆಡಿಎಸ್. ಜೈಲಿನಲ್ಲಿ ಹುಟ್ಟಿದ ಪಕ್ಷ, ಕೃಷ್ಣನಂತೆ ಹುಟ್ಟಿದ ಪಕ್ಷ ಇದು ಎಂದ ಪಕ್ಷದ ಇತಿಹಾಸವನ್ನು ನೆನಪು ಮಾಡಿಕೊಂಡರು.

    ನಮಗೆ ಸಮ್ಮಿಶ್ರ ಸರ್ಕಾರದ ಅನುಭವ ಹೊಸತಲ್ಲ. ಧರ್ಮಸಿಂಗ್, ಯಡಿಯೂರಪ್ಪ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡಿದ ಅನುಭವ ಇದೆ. ಯಡಿಯೂರಪ್ಪ ಜೊತೆ ಮಾಡಿದ ಸಮ್ಮಿಶ್ರ ಸರ್ಕಾರ ಅತ್ಯಂತ ಕೆಟ್ಟ ಅನುಭವ ನೀಡಿದೆ. ಕೋಮುವಾದಿ, ಸಂವಿಧಾನ ವಿರೋಧಿ, ಸರ್ವಾಧಿಕಾರಿ ಹೊಂದಿದ ಸರ್ಕಾರವನ್ನ ಕೆಡವಲು ಈಗ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ರಾಷ್ಟ್ರೀಯ ತುರ್ತು, ರಾಷ್ಟ್ರೀಯ ಅನಿವಾರ್ಯದ ದೃಷ್ಟಿಯಿಂದ ಇಂದು ಜಾತ್ಯಾತೀತ ಪಕ್ಷಗಳು ಒಟ್ಟಾಗಿ ಸೇರಲು ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

    ಕೇವಲ 30-40 ಶಾಸಕರಿಗೆ ಇದು ಸೀಮಿತ ಆಗಬಾರದು. ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಕೊಡುತ್ತಾ ಪಕ್ಷ ಕಟ್ಟುವ ಕೆಲಸ ಮಾಡಬೇಕು. ಪಕ್ಷದ ಕಾರ್ಯಕರ್ತರಿಗೆ ಪಕ್ಷದ ವರಿಷ್ಠರು ಸ್ಥಾನಮಾನ ನೀಡಬೇಕು. ಈ ನಿಟ್ಟಿನಲ್ಲಿ ವರಿಷ್ಠರು ಚಿಂತನೆ ಮಾಡಿ ಅಧಿಕಾರ ಹಂಚಿಕೆ ಮಾಡಿದರೆ ಒಳ್ಳೆಯದು. ಕಾರ್ಯಕರ್ತರು ಗೊಂದಲಕ್ಕೆ ಈಡಾಗದೆ ಪಕ್ಷದ ಅಭಿವೃದ್ಧಿಗೆ ಕೆಲಸ ಮಾಡಬೇಕು. ಫ್ಲೆಕ್ಸ್ ಹುಚ್ಚಿನಿಂದ ಕಾರ್ಯಕರ್ತರು ಹೊರಗೆ ಬರಬೇಕು. ಹಿಂದಿನ ನಾಯಕರು ಹೋರಾಟದಿಂದ ಹುಟ್ಟುತ್ತಿದ್ದರು, ಈಗಿನ ನಾಯಕರು ಫ್ಲೆಕ್ಸ್ ನಲ್ಲಿ ಹುಟ್ಟುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನ ಕಾರ್ಯಕರ್ತರು ಬಿಟ್ಟು ಪಕ್ಷದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ವೈ.ಎಸ್.ವಿ ದತ್ತಾ ಕರೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv