Tag: ಜೆಪಿಸಿ ಕಮಿಟಿ

  • ವಕ್ಫ್ ವಿವಾದಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆ!

    ವಕ್ಫ್ ವಿವಾದಕ್ಕೆ ಬೇಸತ್ತು ಯುವ ರೈತ ಆತ್ಮಹತ್ಯೆ!

    – ಜೆಪಿಸಿ ಮುಂದೆ ನ್ಯಾಯಕ್ಕಾಗಿ ಮನವಿ

    ಹಾವೇರಿ: ವಕ್ಫ್ ಬೋರ್ಡ್ (Waqf Board) ಆಸ್ತಿ ಕಿರಿಕಿರಿಗೆ ಬೇಸತ್ತು ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆಯ ಹರನಗಿ ಗ್ರಾಮದಲ್ಲಿ ನಡೆದಿದೆ.

    ಹರನಗಿ ಗ್ರಾಮದ ನಿವಾಸಿ ರುದ್ರಪ್ಪ 2022ರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು (ನ.7) ಕೇಂದ್ರ ಸಂಸದೀಯ ಜಂಟಿ ಕಮಿಟಿಯ (Joint Parliamentary Committee) ಮುಂದೆ ಹಾವೇರಿ ರೈತರು ಪ್ರಸ್ತಾಪಿಸಿದ ಬಳಿಕ ಈ ವಿಚಾರ ಈಗ ಮುನ್ನೆಲೆಗೆ ಬಂದಿದೆ. ಇದನ್ನೂ ಓದಿ: ಜೆಪಿಸಿ ಸಮಿತಿಯಿಂದ ಭರವಸೆ – ಯತ್ನಾಳ್, ಕರಂದ್ಲಾಜೆ ಅಹೋರಾತ್ರಿ ಪ್ರತಿಭಟನೆ ಅಂತ್ಯ

    ರುದ್ರಪ್ಪ ಅವರ ತಂದೆ ಚೆನ್ನಪ್ಪ ಹಾನಗಲ್ ತಾಲ್ಲೂಕಿನ ಅಲ್ಲಾಪುರ ಗ್ರಾಮದಲ್ಲಿ 1964ರಲ್ಲಿ 4 ಎಕರೆ 36 ಗುಂಟೆ ಜಮೀನು ಖರೀದಿ ಮಾಡಿದ್ದರು. 2015 ರವರೆಗೆ ಚೆನ್ನಪ್ಪ ಮತ್ತು ಮಗ ರುದ್ರಪ್ಪ ಉಳುಮೆ ಮಾಡಿಕೊಂಡು ಬರುತ್ತಿದ್ದರು. ಆದರೆ 2015ರಲ್ಲಿ ಏಕಾಏಕಿ ಜಮೀನು ವಕ್ಫ್ ಬೋರ್ಡ್ಗೆ ಸೇರ್ಪಡೆಯಾಗಿದೆ.

    ಯಾವುದೇ ನೋಟಿಸ್ ನೀಡದೇ ರೈತರಿಂದ ಜಮೀನನ್ನು ವಕ್ಫ್ ಬೋರ್ಡ್ ವಶಪಡಿಸಿಕೊಂಡಿದೆ. ಈ ಬಗ್ಗೆ ಸಾಕಷ್ಟು ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಚೆನ್ನಪ್ಪ , ಮಗ ರುದ್ರಪ್ಪ ಕಂಗಾಲಾಗಿದ್ದರು. ಇರುವ ಜಮೀನು ಕಳೆದುಕೊಂಡು ಮಾನಸಿಕ ನೋವಿನಿಂದ ಚೆನ್ನಪ್ಪನ ಮಗ ರುದ್ರಪ್ಪ 2022ರ ಜನವರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

    ಜೆಪಿಸಿ ಸಮಿತಿಯ ಅಧ್ಯಕ್ಷ ಜಗದಾಂಬಿಕ ಪಾಲ್ (Jagdambika Pal) ಭೇಟಿ ನೀಡಿದ ಸಂದರ್ಭದಲ್ಲಿ ಮೃತ ರುದ್ರಪ್ಪನ ಕುಟುಂಬಸ್ಥರು ಹಾಗೂ ಸ್ನೇಹಿತರು ಎಲ್ಲ ವಿಚಾರವನ್ನು ವಿವರವಾಗಿ ತಿಳಿಸಿದ್ದಾರೆ.ಇದನ್ನೂ ಓದಿ: ಮಾಸ್ ಆಗಿ ಎಂಟ್ರಿ ಕೊಟ್ಟ ಕಮಲ್ ಹಾಸನ್- ‘ಥಗ್ ಲೈಫ್’ ಚಿತ್ರದ ಟೀಸರ್ ಔಟ್

  • ಜೆಪಿಸಿ ಸಮಿತಿಯಿಂದ ಭರವಸೆ – ಯತ್ನಾಳ್, ಕರಂದ್ಲಾಜೆ ಅಹೋರಾತ್ರಿ ಪ್ರತಿಭಟನೆ ಅಂತ್ಯ

    ಜೆಪಿಸಿ ಸಮಿತಿಯಿಂದ ಭರವಸೆ – ಯತ್ನಾಳ್, ಕರಂದ್ಲಾಜೆ ಅಹೋರಾತ್ರಿ ಪ್ರತಿಭಟನೆ ಅಂತ್ಯ

    ವಿಜಯಪುರ: ನಗರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ನೇತೃತ್ವದಲ್ಲಿ ನಡೆಯುತ್ತಿದ್ದ ಅಹೋರಾತ್ರಿ ಪ್ರತಿಭಟನೆ ನಾಲ್ಕು ದಿನಗಳ ಬಳಿಕ ಅಂತ್ಯಗೊಂಡಿದೆ.

    ವಕ್ಫ್ ವಿವಾದವನ್ನು ಖಂಡಿಸಿ ಯತ್ನಾಳ್, ಶೋಭಾ ಕರಂದ್ಲಾಜೆ (Shobha Karandlaje) ಅವರು ಬೆಂಬಲಿಗರ ಜೊತೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದರು. ಇಂದು ಕೇಂದ್ರದ ಜೆಪಿಸಿ ಕಮಿಟಿ ಜಿಲ್ಲೆಗೆ ಬಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟವನ್ನು ಅಂತ್ಯಗೊಳಿಸಲಾಯಿತು.ಇದನ್ನೂ ಓದಿ: ಸಂಸತ್‌ನಲ್ಲಿ ಯಾಸಿನ್‌ ಬಗ್ಗೆ ಚರ್ಚಿಸಿ: ರಾಹುಲ್‌ಗೆ ಪತ್ನಿ ಮುಶಾಲ್ ಹುಸೈನ್ ಪತ್ರ

    ವಿಜಯಪುರ (Vijayapura) ಜಿಲ್ಲೆಯಲ್ಲಿ ವಕ್ಫ್ ಅದಾಲತ್ ನಡೆಸಿದ್ದ ಸಚಿವ ಜಮೀರ್ ಅಹ್ಮದ್ ವಕ್ಫ್ ಆಸ್ತಿ ವಶಪಡಿಸಕೊಳ್ಳಲು ಡಿಸಿ ಅವರಿಗೆ ಮೌಖಿಕ ಆದೇಶ ನೀಡಿ ತೆರಳಿದ್ದರು. ಬಳಿಕ ರೈತರ ಪಹಣಿಯಲ್ಲಿ ರಾತ್ರೋರಾತ್ರಿ ವಕ್ಫ್ ಆಸ್ತಿ ಸೇರ್ಪಡೆಯಾಗಿತ್ತು. ಇದರಿಂದ ರೊಚ್ಚಿಗೆದ್ದ ರೈತರು ಅಹೋರಾತ್ರಿ ಹೋರಾಟವನ್ನು ಡಿಸಿ ಕಚೇರಿ ಮುಂಭಾಗ ಆರಂಭಿಸಿದ್ದರು.

    ಆದರೆ ಕಳೆದ ಒಂದು ತಿಂಗಳ ಹಿಂದೆ ರೈತರಿಗೆ ನೋಟಿಸ್ ನೀಡಿದ್ದ ಪಹಣಿಯನ್ನು ಮಾತ್ರ ರಾಜ್ಯ ಸರ್ಕಾರ ವಾಪಸ್ ಪಡೆದಿತ್ತು. ಇದರಿಂದ ರೈತ ಸಂಘಟನೆಗಳು ಪ್ರತಿಭಟನೆ ವಾಪಸ್ ಪಡೆದಿದ್ದರು. ಆದರೆ ಕಳೆದ ನಾಲ್ಕು ದಿನಗಳ ಹಿಂದೆ ಭಾರತ್ ಕಿಸಾನ್ ಸಂಘದ ನೇತೃತ್ವದಲ್ಲಿ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಜೀ ಸಾನಿಧ್ಯದಲ್ಲಿ ಹಲವಾರು ಮಠಾಧೀಶರು ಸೇರಿ ಬೃಹತ್ ರ‍್ಯಾಲಿ ಮಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಆಗ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ಪ್ರಾರಂಭಿಸಲಾಗಿತ್ತು.ಇದನ್ನೂ ಓದಿ: ಎಲೆಕ್ಷನ್ ವಿಕ್ಟರಿ ಫೋಟೋ ಸೆಷನ್‌ನಲ್ಲಿ ಕಾಣಿಸಿಕೊಂಡ ಮಸ್ಕ್ – ಟ್ರಂಪ್ ಪತ್ನಿ ಮೆಲಾನಿಯಾ ಮಿಸ್ಸಿಂಗ್

    ನಾಲ್ಕನೇ ದಿನ ಇಂದು (ನ.7) ವಿಜಯಪುರಕ್ಕೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷ ಜಗದಂಬಿಕಾ ಪಾಲ್, ಸಂಸದ ತೇಜಸ್ವಿ ಸೂರ್ಯ ತಂಡ ಭೇಟಿ ನೀಡಿ ರೈತರ, ಮಠಾಧೀಶರ, ಹೋರಾಟಗಾರ ಅಹವಾಲು ಕೇಳಿ ಮನವಿ ಸ್ವೀಕರಿಸಿದರು.

    ಜಗದಂಬಿಕಾ ಪಾಲ್ (Jagadambika Pal) ಮಾತನಾಡಿ, ವಿಜಯಪುರದ ವಕ್ಫ್ ಹೋರಾಟದಿಂದ ವಕ್ಫ್ನ ಸಮಸ್ಯೆಗಳು ಗಮನಕ್ಕೆ ಬಂದಿವೆ. ಇದನ್ನು ಜೆಪಿಸಿ ಸಭೆಯಲ್ಲಿ ಇಟ್ಟು, ಡಿಸಿ ಅವರನ್ನು ಅಲ್ಲಿಗೆ ಕರೆಸುತ್ತೇವೆ. ರೈತರ ಮನವಿಗಳನ್ನು ಸಮಿತಿ ಪರಿಗಣಿಸುತ್ತದೆ. ವಕ್ಫ್ ಕಾಯ್ದೆ ತಿದ್ದುಪಡಿಗೆ ತರುತ್ತೇವೆ ಎಂದು ಪ್ರತಿಭಟನೆಯನ್ನು ಕೈಬಿಡಲು ಮನವಿ ಮಾಡಿದರು.

    ಇದೆ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಕ್ಫ್ ಆಸ್ತಿಯನ್ನು ರಾಷ್ಟ್ರೀಕರಣ ಮಾಡಬೇಕು. ರಾಷ್ಟ್ರೀಯ ಸ್ವತ್ತು ಎಂದು ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

    ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ರೈತರ ಉತಾರಿಯ ಯಾವುದೇ ಕಲಂನಲ್ಲಿ ವಕ್ಫ್ ಎಂದು ನಮೂದಾಗಬಾರದು. ವಕ್ಫ್ ಅದಾಲತ್ ರದ್ದು ಮಾಡಿ, ಇದನ್ನು ಎಲ್ಲಿಯೂ ನಡೆಸಬಾರದು ಎಂದು ಆಗ್ರಹಿಸಿದರು. 1974ರ ಹಾಗೂ ನಂತರದ ಎಲ್ಲ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಬೇಕು ಎಂದು ಹೀಗೆ ಹಲವು ಬೇಡಿಕೆಗಳನ್ನು ಜಿಪಿಸಿ ಮುಂದೆ ಮನವಿ ಮಾಡಿದರು.ಇದನ್ನೂ ಓದಿ: ಕೋಲ್ಕತ್ತಾ ರೇಪ್‌ ಕೇಸ್‌ – ಬಂಗಾಳದಿಂದ ಬೇರೆ ರಾಜ್ಯಕ್ಕೆ ಕೇಸ್‌ ವರ್ಗಾಯಿಸಲು ಸುಪ್ರೀಂ ನಕಾರ

    ಒಟ್ಟಿನಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ವಕ್ಫ್ ದಂಗಲ್ ದೆಹಲಿಗೂ ತಲುಪಿದ್ದು, ಜೆಪಿಸಿ ಕಮಿಟಿ ಜಿಲ್ಲೆಗೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸಿದರು. ಈ ವಿಚಾರವಾಗಿ ವಕ್ಫ್ ಕಾಯ್ದೆಯಲ್ಲಿ ಅಮೂಲಾಗ್ರ ಬದಲಾವಣೆ ಜೆಪಿಸಿ ಕಮಿಟಿ ತರುತ್ತಾ ಎಂಬುವುದನ್ನು ಕಾದುನೋಡಬೇಕಿದೆ.