Tag: ಜೆರುಸಲೆಮ್

  • ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬೈರೂತ್‌ ಮೇಲೆ ಇಸ್ರೇಲ್‌ ಮತ್ತೊಂದು ದಾಳಿ; ಮೂರೇ ಸೆಕೆಂಡುಗಳಲ್ಲಿ ದೈತ್ಯ ಕಟ್ಟಡಗಳು ಧ್ವಂಸ

    ಬೈರೂತ್‌: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಮತ್ತಷ್ಟು ದಟ್ಟವಾಗುತ್ತಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ನಿವಾಸದ ಮೇಲೆ ಹಮಾಸ್‌ ಡ್ರೋನ್‌ ದಾಳಿ ನಡೆಸಿದ ಬಳಿಕ ಇಸ್ರೇಲ್‌ ತನ್ನ ದಾಳಿಯ ತೀವ್ರತೆಯನ್ನು ಹೆಚ್ಚು ಮಾಡಿದೆ. ಮಂಗಳವಾರವೂ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಯಲ್ಲಿ (Israeli Airstrike) ಬೈರೂತ್‌ನ ಬೃಹತ್‌ ಕಟ್ಟಡಗಳು ಸೆಕೆಂಡುಗಳಲ್ಲಿ ನೆಲೆ ಕಚ್ಚಿವೆ.

    ಇಸ್ರೇಲಿ ಮಿಲಿಟರಿ ವಕ್ತಾರ ಅವಿಚಾಯ್‌ ಅಡ್ರೇ ಅವರು ಎಚ್ಚರಿಕೆ ನೀಡಿದ 40 ನಿಮಿಷಗಳ ಬಳಿಕ ದಾಳಿ ಸಂಭವಿಸಿದೆ. ದಾಳಿಗೆ ಒಳಗಾದ ಎರಡು ಬೃಹತ್‌ ಕಟ್ಟಡಗಳಲ್ಲಿ ಹಿಜ್ಬುಲ್ಲಾ ಸೌಲಭ್ಯಗಳನ್ನು ಅಡಗಿಸಿಡಲಾಗಿತ್ತು. ಅಲ್ಲದೇ ಲೆಬನಾನ್‌ನಿಂದ (Lebanon) ಸ್ಥಳಾಂತರಗೊಂಡಿದ್ದ ಕುಟುಂಬಗಳೂ ಆಶ್ರಯ ಪಡೆದಿದ್ದವು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಸಂಘರ್ಷಗಳಿಗೆ ಶಾಂತಿಯುತ ಪರಿಹಾರಕ್ಕೆ ನಾವಿದ್ದೇವೆ: ಯುದ್ಧ ಕುರಿತು ಪುಟಿನ್‌ ಜೊತೆ ಮೋದಿ ಮಾತು

    ಇಸ್ರೇಲ್‌ ವಾಯುದಾಳಿಯ 32 ಸೆಕೆಂಡುಗಳ ವೀಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಉದ್ಯಾನ ಪಕ್ಕದಲ್ಲೇ ನಿರ್ಮಾಣಗೊಂಡಿದ್ದ ದೈತ್ಯ ಕಟ್ಟಡ ಮಿಸೈಲ್‌ ಬೀಳುತ್ತಿದ್ದಂತೆ ಕೇವಲ 3 ಸೆಕೆಂಡುಗಳಲ್ಲೇ ಧ್ವಂಸವಾಗಿದೆ. ಸಮೀಪದಲ್ಲೇ ಇದ್ದ ಸ್ಥಳೀಯರು ದಾಳಿ ಕಂಡು ಕಕ್ಕಾಬಿಕ್ಕಿಯಾಗಿರುವುದು ವೀಡಿಯೋದಲ್ಲಿ ತೋರಿಸಿದೆ. ಸದ್ಯ ಸಾವು-ನೋವಿನ ಬಗ್ಗೆ ವರದಿಯಾಗಿಲ್ಲ.

    ಹಿಜ್ಬುಲ್ಲಾ ಟಾಪ್‌ ಲೀಡರ್‌ ಸುದ್ದಿಗೋಷ್ಠಿ ದಿಢೀರ್‌ ರದ್ದು:
    ಇನ್ನೂ ಇಸ್ರೇಲ್‌ ದಾಳಿ ಸಮಯದಲ್ಲಿ ಉದ್ದೇಶಿತ ಪ್ರದೇಶದಿಂದ ನೂರು ಮೀಟರ್‌ಗಳಷ್ಟು ದೂರದಲ್ಲಿ ನಿಗದಿಯಾಗಿದ್ದ ಸುದ್ದಿಗೋಷ್ಠಿಯನ್ನು ಹಿಜ್ಬುಲ್ಲಾದ ಟಾಪ್‌ ಲೀಡರ್‌ ದಿಢೀರ್‌ ರದ್ದುಗೊಳಿಸಿದ್ದಾರೆ. ಇದನ್ನೂ ಓದಿ: ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

    ಇನ್ನೂ ಜೆರುಸಲೆಮ್‌ನ ಮಾನವ ಹಕ್ಕುಗಳ ಗುಂಪಾದ ಅಮ್ನೆಸ್ಟಿ ಇಂಟರ್‌ನ್ಯಾಶನಲ್ ಅಲ್-ಕರ್ದ್ ಅಲ್-ಹಸನ್, ಇಸ್ರೇಲ್‌ ವಾಯುದಾಳಿಯನ್ನು ಖಂಡಿಸಿದೆ. ಹಿಜ್ಬುಲ್ಲಾದ ಸಂಯೋಜಿತ ಹಣಕಾಸು ಶಾಖೆಗಳನ್ನ ಇಸ್ರೇಲ್‌ ಗುರಿಯಾಗಿಸಿದೆ. ಇದು ಅಂತಾರಾಷ್ಟ್ರೀಯ ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಹೇಳಿದೆ.

    ಒಂದು ದಿನದ ಹಿಂದೆಯಷ್ಟೇ ಇಸ್ರೇಲ್‌ ನಡೆಸಿದ ಲೆಬನಾನ್‌ನ ಬೈರೂತ್‌ನಲ್ಲಿ ದಾಳಿ ನಡೆಸಿತ್ತು. ಲೆಬನಾನ್‌ ರಾಜಧಾನಿ ಬೈರೂತ್‌ನ ಅಲ್‌ ಸಹೇಲ್‌ ಆಸ್ಪತ್ರೆಯ ಕೆಳಗೆ ಹಿಜ್ಬುಲ್ಲಾ ಉಗ್ರರು ಸಂಗ್ರಹಿಸಿಟ್ಟಿದ್ದ 4,200 ಕೋಟಿ ರೂ. ಮೌಲ್ಯದ ನಗದು ಮತ್ತು ಚಿನ್ನದ ಸಂಗ್ರಹ ಪತ್ತೆ ಮಾಡಿತ್ತು ಇಸ್ರೇಲ್‌. ಇದನ್ನೂ ಓದಿ: ಶಾಂತಿ ಮಾತುಕತೆ ಯಶಸ್ವಿ – 5 ವರ್ಷದ ಬಳಿಕ ನಡೆಯಲಿದೆ ಮೋದಿ-ಜಿನ್‌ಪಿಂಗ್‌ ದ್ವಿಪಕ್ಷೀಯ ಸಭೆ

  • ಜೆರುಸಲೇಮ್ ಮಸೀದಿಯಲ್ಲಿ ಹಿಂಸಾಚಾರ – 150ಕ್ಕೂ ಹೆಚ್ಚು ಮಂದಿಗೆ ಗಾಯ

    ಜೆರುಸಲೇಮ್ ಮಸೀದಿಯಲ್ಲಿ ಹಿಂಸಾಚಾರ – 150ಕ್ಕೂ ಹೆಚ್ಚು ಮಂದಿಗೆ ಗಾಯ

    ಜೆರುಸಲೇಮ್: ಶುಕ್ರವಾರ ಜೆರುಸಲೇಮ್‌ನ ಅಲ್-ಅಕ್ಸಾ ಮಸೀದಿ ಆವರಣದಲ್ಲಿ ಪ್ಯಾಲಸ್ಟೈನ್ ಮಂದಿ ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದ್ದು, ಘಟನೆಯಲ್ಲಿ 150ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

    ಇಸ್ರೇಲ್ ಹಾಗೂ ಪ್ಯಾಲೆಸ್ಟಿನ್ ಸಂಘರ್ಷ ತಲೆಮಾರುಗಳಷ್ಟು ಹಳೆಯ ಇತಿಹಾಸ ಹೊಂದಿದೆ. ಶುಕ್ರವಾರ ನಡೆದ ಘಟನೆಯಿಂದಾಗಿ ಹಿಂಸಾಚಾರ ಇನ್ನೂ ಉಲ್ಬಣಗೊಳ್ಳುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತವಾಗಿದೆ. ಇದನ್ನೂ ಓದಿ: 6 ತಿಂಗಳ ಬಾಹ್ಯಾಕಾಶ ಯಾನ ಮುಗಿಸಿ ಬರಲಿದ್ದಾರೆ ಭಾರತೀಯ ಮೂಲದ ಗಗನಯಾತ್ರಿ

    ಶುಕ್ರವಾರ ನಡೆದ ಘರ್ಷಣೆಯಲ್ಲಿ ರಬ್ಬರ್ ಬುಲೆಟ್, ಸ್ಟನ್ ಗ್ರೆನೇಡ್, ಲಾಠಿ ಏಟಿನಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ಯಾಲಸ್ಟೈನ್‌ನವರು ಗಾಯಗೊಂಡಿದ್ದಾರೆ ಎಂದು ರೆಡ್ ಕ್ರೆಸೆಂಟ್ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದಿಂದ ಈಜಿಪ್ಟ್‌ಗೆ ರಫ್ತು ಆಗಲಿದೆ ಗೋಧಿ

    ಅಲ್-ಅಕ್ಸಾ ಮಸೀದಿ ಆವರಣ ಪೂರ್ವ ಜೆರುಸೆಲೇಮ್‌ನ ಓಲ್ಡ್ ಸಿಟಿ ಪ್ರದೇಶದಲ್ಲಿದೆ. ಇದನ್ನು ಇಸ್ರೇಲ್ 1967ರಲ್ಲಿ ಯುದ್ಧದಲ್ಲಿ ವಶಪಡಿಸಿಕೊಂಡಿದೆ.

    ಕಳೆದ 2 ವಾರಗಳ ಹಿಂದೆ ನಡೆದ ಇಸ್ರೇಲ್‌ನ ಅರಬ್ ಸ್ಟ್ರೀಟ್ ದಾಳಿಯ ಬಳಿಕ ದೇಶಾದ್ಯಂತ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿದೆ.