Tag: ಜೈಕಾರ

  • ಆಗಿರೋದು ಕರ್ನಾಟಕದ ಮಂತ್ರಿ, ಹೇಳಿದ್ದು ಮಹಾರಾಷ್ಟ್ರಕ್ಕೆ ಜೈ

    ಆಗಿರೋದು ಕರ್ನಾಟಕದ ಮಂತ್ರಿ, ಹೇಳಿದ್ದು ಮಹಾರಾಷ್ಟ್ರಕ್ಕೆ ಜೈ

    – ಟೀಕೆಗೆ ಗುರಿಯಾದ ನಾರಾಯಣಗೌಡ
    – ಮಂಡ್ಯದ ನೂತನ ಬಿಜೆಪಿ ಸಚಿವನ ಮರಾಠ ಪ್ರೇಮ

    ಮಂಡ್ಯ: ಕರ್ನಾಟಕದ ಮಂತ್ರಿಯಾಗಿ ಮಹಾರಾಷ್ಟ್ರಕ್ಕೆ ಜೈಕಾರ ಕೂಗುವ ಮೂಲಕ ತೋಟಗಾರಿಕಾ ಸಚಿವ ಕೆ.ಎಸ್.ನಾರಾಯಣಗೌಡ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.

    ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಫೆಬ್ರವರಿ 20ರಂದು ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರು ಮಹಾರಾಷ್ಟ್ರಕ್ಕೆ ಜೈ ಎಂದು ಹೇಳಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಕಲಾತಂಡದ ಕುರಿತು ಮಾತನಾಡುವ ವೇಳೆ ಮಹಾರಾಷ್ಟ್ರಕ್ಕೆ ಜೈ ಎಂದಿದ್ದಾರೆ.

    ಈಗ ನಾನು ಏನೇ ಆಗಿದ್ದರೂ ಅದು ಮಹಾರಾಷ್ಟ್ರದಿಂದ. 25 ವರ್ಷಗಳ ಹಿಂದೆ ಮುಂಬೈಗೆ ಹೋಗಿ ಹೋಟೇಲ್ ಉದ್ಯಮಿಯಾಗಿ ಬಿಲ್ಡರ್ ಆಗಿ, ಆದಾದ ಮೇಲೆ ಇಲ್ಲಿಗೆ ಬಂದು ರಾಜಕಾರಣಿಯಾದೆ. ನನ್ನನ್ನು ಉದ್ಯಮಿಯನ್ನಾಗಿ ಮಾಡಿದ್ದೇ ಮಹಾರಾಷ್ಟ್ರ. ಜೈ ಮಹಾರಾಷ್ಟ್ರ ಮತ್ತು ಜೈ ಶಿವಾಜಿ ಮಹಾರಾಜ್ ಎಂದು ಹೇಳಲು ಬಯಸುತ್ತೇನೆ. ಇಂದು ನನ್ನ ದೇಹದಲ್ಲಿ ಶಕ್ತಿ, ತಾಕತ್ತು ಇದೆ ಎಂದರೆ ಅದು ಮಹಾರಾಷ್ಟ್ರದ್ದು. ಜೈ ಮಹಾರಾಷ್ಟ್ರ ಎಂದು ಹೇಳಿದ್ದಾರೆ.

    ಭಾಷಣವನ್ನು ಪೂರ್ತಿಯಾಗಿ ಹಿಂದಿಯಲ್ಲೇ ಮಾಡಿರುವ ನಾರಾಯಣಗೌಡ, ಮಹಾರಾಷ್ಟ್ರದ ಪರ ಜೈಕಾರವನ್ನೂ ಕೂಗುವ ಮೂಲಕ ಇದೀಗ ಟೀಕೆಗೆ ಒಳಗಾಗಿದ್ದಾರೆ. ಈ ವಿಡಿಯೋ ಇದೀಗ ಸಖತ್ ಸದ್ದು ಮಾಡುತ್ತಿದೆ.

  • ಬಿಜೆಪಿ ಶಾಸಕನ ಪತ್ನಿಯಿಂದ ಮಹಾರಾಷ್ಟ್ರಕ್ಕೆ ಜೈಕಾರ- ಕ್ಷಮೆಯಾಚನೆ

    ಬಿಜೆಪಿ ಶಾಸಕನ ಪತ್ನಿಯಿಂದ ಮಹಾರಾಷ್ಟ್ರಕ್ಕೆ ಜೈಕಾರ- ಕ್ಷಮೆಯಾಚನೆ

    ಕಲಬುರಗಿ: ಜಿಲ್ಲೆಯ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮೂಡ್ ಪತ್ನಿ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರಕ್ಕೆ ಜೈ ಎಂದು ಹೇಳಿ ಸುದ್ದಿಯಾಗಿದ್ದಾರೆ.

    ಶಾಸಕ ಬಸಬರಾಜ್ ಮತ್ತಿಮೂಡ್ ಪತ್ನಿ ಜಯಶ್ರೀ ಮಹಾರಾಷ್ಟ್ರಕ್ಕೆ ಜೈಕಾರ ಹಾಕಿದ್ದರು. ಕಲಬುರಗಿ ಗ್ರಾಮೀಣ ಮತಕ್ಷೇತ್ರ ವ್ಯಾಪ್ತಿಯ ಶಹಬಾದ್ ನಗರದಲ್ಲಿ ಬುಧವಾರ ಸಂಜೆ ಮರಾಠ ಯುವಕ ಮಂಡಳಿ ವತಿಯಿಂದ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಯೋಜಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಯಶ್ರೀ ಮತ್ತಿಮೂಡ ಪಾಲ್ಗೊಂಡಿದ್ದರು.

    ಈ ವೇಳೆ ಕಾರ್ಯಕ್ರಮ ಉದ್ದೇಶಿಸಿ ಮರಾಠಿ ಭಾಷೆಯಲ್ಲಿ ಭಾಷಣ ಮಾಡಿದ್ದು, ಭಾಷಣದ ಕೊನೆಯಲ್ಲಿ ಜೈ ಶಿವಾಜಿ ಅಂತ ಹೇಳಿದ್ದಾರೆ. ಅದಾದ ಬಳಿಕ ಜೈ ಕರ್ನಾಟಕ ಅನ್ನೋ ಬದಲು ಜೈ ಮಹಾರಾಷ್ಟ್ರ ಎಂದು ಹೇಳುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

    ಕ್ಷಮೆಯಾಚನೆ:
    ಜೈ ಮಹಾರಾಷ್ಟ್ರ ಎಂಬ ಹೇಳಿಕೆ ವೀಡಿಯೋ ವೈರಲ್ ಆಗುತ್ತಿದ್ದಂತೆ, ನಾನು ಉದ್ದೇಶಪೂರ್ವಕವಾಗಿ ಅಂದಿಲ್ಲ. ಕಾರ್ಯಕ್ರಮದಲ್ಲಿ ಮರಾಠಿಯಲ್ಲಿ ಮಾತನಾಡುತ್ತಿದ್ದೆ. ಕೊನೆಯಲ್ಲಿ ಜೈ ಕರ್ನಾಟಕ ಅನ್ನೋ ಬದಲು ಬಾಯಿ ತಪ್ಪಿ ಜೈ ಮಹಾರಾಷ್ಟ್ರ ಅಂತ ಹೇಳಿದ್ದೇನೆ. ಈ ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನಾನು ಎಲ್ಲಿ ಹೋದರೂ ಕನ್ನಡದಲ್ಲಿಯೇ ಮಾತನಾಡುತ್ತೇನೆ ಎಂದು  ಜಯಶ್ರೀ ಮತ್ತಿಮೂಡ ಹೇಳಿದ್ದಾರೆ.

  • ಸಿದ್ದರಾಮಯ್ಯ ಅವರು ಕರ್ನಾಟಕದ ಹುಲಿ: ರಮೇಶ್ ಕುಮಾರ್ ವರ್ಣನೆ

    ಸಿದ್ದರಾಮಯ್ಯ ಅವರು ಕರ್ನಾಟಕದ ಹುಲಿ: ರಮೇಶ್ ಕುಮಾರ್ ವರ್ಣನೆ

    ಕೋಲಾರ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ನಾನು ಮೊದಲೇ ಹೇಳಿದ್ದೆ, ಅವರು ಈಗಲೂ ನಮ್ಮ ಮುಖ್ಯಮಂತ್ರಿಯೇ. ಅವರು ನಿಧಾನವಾಗಿ ನಡೆಯುತ್ತಿದ್ದರೆ ಹುಲಿ(ಪುಲಿ) ನಡೆಯುತ್ತಿದ್ದಂತೆ ಕಾಣುತ್ತದೆ ಎಂದು ಸ್ಪೀಕರ್ ರಮೇಶ್ ಕುಮಾರ್ ಬಣ್ಣ ಬಣ್ಣವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನ ವರ್ಣಿಸಿದ್ದಾರೆ.

    ಹೌದು ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ನಡೆದ ಕನಕ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2012 ರಲ್ಲಿಯೇ ಸಿದ್ದರಾಮಯ್ಯ ಅವರು ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದೆ. ಆಗ ತುಂಬಾ ಜನ ನನ್ನ ವಿರುದ್ಧ ಮಾತನಾಡಿದ್ದರು. ಸಿದ್ದರಾಮಯ್ಯ ಅವರು ಈಗಲೂ ನಮ್ಮ ಮುಖ್ಯಮಂತ್ರಿ, ನಮ್ಮ ನಾಯಕರು ಎಂದು ತಮ್ಮ ಮಾತಿನುದ್ದಕ್ಕೂ ಸಿದ್ದರಾಮಯ್ಯ ಅವರನ್ನು ವರ್ಣಿಸಿದ್ದಾರೆ.

    ಇಷ್ಟು ಮಾತ್ರವಲ್ಲದೆ ಸಿದ್ದರಾಮಯ್ಯ ಅವರ ವರ್ತನೆ ಒರಟು, ಗುಣ ಮಾತ್ರ ಮೃದು. ಅವರು ನಿಧಾನವಾಗಿ ನಡೆದು ಬರುತ್ತಿದ್ದರೆ ಹುಲಿ ಇದ್ದಂತೆ. ಅವರು ಇನ್ನೂ ಮುಂದೆ ರಾಜ್ಯದ ಬಬ್ಬುಲಿ ಪುಲಿ(ಹುಲಿ) ಎಂದು ಹೇಳಿ, ಬಬ್ಬುಲಿ ಪುಲಿಕಿ ಜೈ ಎಂದು ತೆಲುಗಿನಲ್ಲಿ ಹೇಳಿ ತಮ್ಮ ಭಾಷಣ ಮುಗಿಸಿದ್ದಾರೆ.

    ಶ್ರೀಮಾನ್ ಸಿದ್ದರಾಮಯ್ಯನವರಿಗೆ ನಿಮ್ಮೆಲ್ಲರ ಪರವಾಗಿ ಒಂದೇ ಚಿಕ್ಕ ಪ್ರಾರ್ಥನೆ. ಸಾಯಿ ಬಾಬಾ ಬಳಿ ಪ್ರಾರ್ಥನೆ ಮಾಡುತ್ತೇನೆ. ಸದಾ ಕಾಲ ನಿಮ್ಮನ್ನ ಗೌರವಸ್ಥರ ರೀತಿ ದೇವರು ಇಟ್ಟಿರಲಿ. ಸದಾಕಾಲ ನಿಮ್ಮ ಮೂಲಕ ಜನರಿಗೆ ಒಳ್ಳೆಯದಾಗಲಿ. ಸದಾ ಕಾಲ ನಿಮ್ಮ ಆರೋಗ್ಯ ಚಿರಸ್ಥಾಯಿಯಾಗಿ ಇರಲಿ. ಗೌರವಸ್ಥರ ರೀತಿ ಜನರ ಮಧ್ಯೆ ನೀವು ಇರಬೇಕು. ಇನ್ನು ಮುಂದೆ ನಮ್ಮ ಕರ್ನಾಟಕದ ಬೊಬ್ಬುಲಿ ಪುಲಿ ಯಾರು ಸಿದ್ದರಾಮಯ್ಯ, ಬೊಬ್ಬುಲಿ ಪುಲಿಗೆ ಜೈ ಎಂದು ಜೈಕಾರ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv